Tag: ಕೇರಳ ಹೈಕೋರ್ಟ್

  • ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯವಾಗದ ಮಾತ್ರಕ್ಕೆ ಅತ್ಯಾಚಾರ ಆಗುವುದಿಲ್ಲ: ಹೈಕೋರ್ಟ್

    ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯವಾಗದ ಮಾತ್ರಕ್ಕೆ ಅತ್ಯಾಚಾರ ಆಗುವುದಿಲ್ಲ: ಹೈಕೋರ್ಟ್

    ತಿರುವನಂತಪುರಂ: ಪರಸ್ಪರ ಸಮ್ಮತಿಯೊಂದಿಗೆ ಹೊಂದಿರುವ ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯಗೊಂಡಿಲ್ಲ ಎಂಬ ಮಾತ್ರಕ್ಕೆ ಅದು ಅತ್ಯಾಚಾರವೆಂದು (ಐಪಿಸಿ ಸೆಕ್ಷನ್ 376 ಅಡಿಯಲ್ಲಿ) ಸಾಬೀತು ಮಾಡಲು ಆಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.

    court order law

    ಮೋಸದಿಂದ ಅಥವಾ ದಿಕ್ಕುತಪ್ಪಿಸಿ ಲೈಂಗಿಕ ಕ್ರಿಯೆ ನಡೆಸದ ಹೊರತು ಇಬ್ಬರು ವಯಸ್ಕರ ನಡುವಿನ ಲೈಂಗಿಕ ಸಂಬಂಧ ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರಕ್ಕೆ ಸಮನಾಗಿರುವುದಿಲ್ಲ. ಇಬ್ಬರ ಲೈಂಗಿಕ ಸಂಬಂಧಕ್ಕೆ ಮದುವೆಯ ಅಂಕಿತ ಬೀಳದಿದ್ದರೂ ಲೈಂಗಿಕ ಸಮ್ಮತಿಗೆ ಧಕ್ಕೆ ತರುವ ಯಾವುದೇ ಅಂಶ ಇರದಿದ್ದಾಗ ಅದು ಅತ್ಯಾಚಾರ ಆಗುವುದಿಲ್ಲ. ಇಬ್ಬರು ಶಾರೀರಿಕ ಸಂಬಂಧದಲ್ಲಿ ತೊಡಗಿದ್ದರೂ ನಂತರ ಮದುವೆಗೆ ಒಪ್ಪದಿದ್ದರೆ ಅಥವಾ ಸಂಬಂಧ ಮುಂದುವರಿಸುವುದು ವಿಫಲವಾದರೆ ಆ ಅಂಶಗಳು ಅತ್ಯಾಚಾರ ಆರೋಪ ನಿಗದಿಗೆ ಒಪ್ಪುವಂತಹದ್ದಾಗಿರುವುದಿಲ್ಲ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಪೀಠ ಹೇಳಿದೆ. ಇದನ್ನೂ ಓದಿ: ʻಸೀತಾ ರಾಮಂʼ ಚಿತ್ರದ ಲುಕ್‌ ಮೂಲಕ ಈದ್‌ ಹಬ್ಬಕ್ಕೆ ಫ್ಯಾನ್ಸ್‌ಗೆ ಶುಭಕೋರಿದ ರಶ್ಮಿಕಾ

    ಅತ್ಯಾಚಾರವಾಗಿದೆ ಎಂಬುದನ್ನು ಸಾಬೀತು ಮಾಡಬೇಕಾದರೆ ಮದುವೆಯಾಗುವ ಭರವಸೆಯನ್ನು ಉದ್ದೇಶಪೂರ್ವಕವಾಗಿ ಸುಳ್ಳಾಗಿಸಿರಬೇಕು ಮತ್ತು ಅಂತಹ (ಸುಳ್ಳು) ಭರವಸೆಗೆ ಮಹಿಳೆ ಒಪ್ಪಿಗೆ ಸೂಚಿಸಿರಬೇಕು ಎಂದು ಪೀಠ ಪ್ರತಿಪಾದಿಸಿದೆ.

    ಮದುವೆಯಾಗುವ ಭರವಸೆ ಪಾಲಿಸಲು ವಿಫಲರಾದ ಕಾರಣಕ್ಕಾಗಿ ಪುರುಷ ಮತ್ತು ಮಹಿಳೆಯ ನಡುವಿನ ದೈಹಿಕ ಸಂಬಂಧವನ್ನು ಅತ್ಯಾಚಾರವಾಗಿ ಪರಿವರ್ತಿಸಬೇಕಾದರೆ ಪುರುಷನ ಭರವಸೆ ಮೇಲೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಮಹಿಳೆ ನಿರ್ಧರಿಸಿರಬೇಕು. ಮದುವೆ ಕುರಿತ ಸುಳ್ಳು ಭರವಸೆಯನ್ನು ಸಾಬೀತುಪಡಿಸಲು ಭರವಸೆ ನೀಡಿದವನಿಗೆ ಲೈಂಗಿಕ ಕ್ರಿಯೆಯ ಸಂದರ್ಭದಲ್ಲಿ ತನ್ನ ಮಾತನ್ನು ಎತ್ತಿ ಹಿಡಿಯುವ ಉದ್ದೇಶ ಇರಬಾರದು. ಶಾರೀರಿಕ ಮಿಲನ ಮತ್ತು ಮದುವೆಯ ಭರವಸೆಯ ನಡುವೆ ನೇರ ಸಂಬಂಧ ಇರಬೇಕು ಆದೇಶಿಸಲಾಗಿದೆ. ಇದನ್ನೂ ಓದಿ: ಪೌರ ಕಾರ್ಮಿಕರು ರಜೆ ಹಾಕಿದ್ರೆ ಸಂಬಳವೇ ಕಟ್- ರೆಸ್ಟ್‌ಲೆಸ್ ವರ್ಕರ್ಸ್‍ಗೆ ಇದೆಂಥಾ ಅನ್ಯಾಯ..?

    ತನ್ನ ಸಹೋದ್ಯೋಗಿ ಹಾಗೂ ವಕೀಲೆಯೊಬ್ಬರು ನೀಡಿದ್ದ ಲೈಂಗಿಕ ದೌರ್ಜನ್ಯದ ದೂರಿನಡಿ ಬಂಧಿತರಾಗಿರುವ ಕೇಂದ್ರ ಸರ್ಕಾರದ ವಕೀಲ ಕೇರಳದ ನವನೀತ್ ಎನ್.ನಾಥ್ ಅವರ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಕೆಲ ಷರತ್ತುಗಳನ್ನು ವಿಧಿಸುವ ಮೂಲಕ ಜಾಮೀನು ನೀಡಿತು.

    ನವನೀತ್ ಅವರ ಪರವಾಗಿ ಹಿರಿಯ ವಕೀಲ ರಮೇಶ್ ಚಂದರ್ ಮತ್ತು ನ್ಯಾಯವಾದಿ ಸಿ.ಪಿ.ಉದಯಭಾನು, ದೂರುದಾರರ ಪರವಾಗಿ ವಕೀಲ ಜಾನ್ ಎಸ್.ರಾಲ್ಫ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎ.ನೌಷಾದ್ ವಾದ ಮಂಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಘೋರ, ಜಾಮೀನು ರಹಿತ ಅಪರಾಧ – ಹೈಕೋರ್ಟ್

    ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಘೋರ, ಜಾಮೀನು ರಹಿತ ಅಪರಾಧ – ಹೈಕೋರ್ಟ್

    ತಿರುವನಂತಪುರಂ: ದೈಹಿಕವಾಗಿ ಯಾವುದೇ ರೀತಿಯಿಂದ ಹಲ್ಲೆ ನಡೆಸದಿದ್ದರೂ ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅದು ಘೋರ ಹಾಗೂ ಜಾಮೀನು ರಹಿತ ಅಪರಾಧವಾಗುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ.

    ಹಲ್ಲೆ ನಡೆಸದೇ ಇದ್ದರೂ ಕೇರಳ ಆರೋಗ್ಯ ಸೇವಾ ಸಿಬ್ಬಂದಿ ಮತ್ತು ಆರೋಗ್ಯ ಸೇವಾ ಸಂಸ್ಥೆಗಳ (ಹಿಂಸಾಚಾರ ಮತ್ತು ಆಸ್ತಿ ಹಾನಿ ತಡೆ) ಕಾಯ್ದೆ ಅಡಿಯಲ್ಲಿ ಗಂಭೀರ ಜಾಮೀನು ರಹಿತ ಅಪರಾಧವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಸಾಂದರ್ಭಿಕ ಚಿತ್ರ

    ವೈದ್ಯೆಯೊಬ್ಬರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆರೋಪಿಯೊಬ್ಬ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಏಕ ಸದಸ್ಯ ಪೀಠವು ಈ ಆದೇಶ ನೀಡಿದ್ದು ಅರ್ಜಿದಾರರಿಗೆ ಜಾಮೀನು ನಿರಾಕರಿಸಿದೆ. ಆರೋಗ್ಯ ಸೇವೆ ಒದಗಿಸುವವರ ವಿರುದ್ಧದ ಎಲ್ಲಾ ರೀತಿಯ ಹಿಂಸಾಚಾರ ತಡೆಯುವುದು ಶಾಸನದ ಉದ್ದೇಶವಾಗಿದೆ ಎಂದು ಒತ್ತಿ ಹೇಳಿದೆ. ಇದನ್ನೂ ಓದಿ: ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? – ಉದಯಪುರ ಹತ್ಯೆಯ ಮಾಸ್ಟರ್‌ಮೈಂಡ್ ವೀಡಿಯೋ ವೈರಲ್

    ಸಾಂದರ್ಭಿಕ ಚಿತ್ರ

    ಕಾಯ್ದೆಯಲ್ಲಿರುವ ಹಿಂಸೆ ಪದಕ್ಕೆ ಸಾಕಷ್ಟು ವ್ಯಾಪಕತೆ ಇದೆ. ಕಾಯ್ದೆ ರೂಪಿಸಿರುವ ಶಾಸಕಾಂಗದ ಉದ್ದೇಶ ನಿಸ್ಸಂದೇಹವಾಗಿ ಆರೋಗ್ಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗೆ ಯಾವುದೇ ಬೆದರಿಕೆ ಅಥವಾ ಅಡ್ಡಿ ಉಂಟು ಮಾಡುವುದನ್ನು ತಡೆಯಬೇಕು ಎಂಬುದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

    ಆರೋಪಿ ವಿರುದ್ಧ IPC ಸೆಕ್ಷನ್ 341 (ಅಕ್ರಮ ಪ್ರತಿಬಂಧಕ್ಕಾಗಿ ದಂಡನೆ), ಸೆಕ್ಷನ್ 353 (ಸಾರ್ವಜನಿಕ ಸೇವಕರ ಕರ್ತವ್ಯವನ್ನು ತಡೆಯಲು ಹಲ್ಲೆ ಮಾಡುವುದು), ಸೆಕ್ಷನ್ 506 (ಕ್ರಿಮಿನಲ್ ಅಪರಾಧಕ್ಕಾಗಿ ದಂಡನೆ) ಹಾಗೂ ಸೆಕ್ಷನ್ 3 ಮತ್ತು 4(1) ಆರೋಗ್ಯ ಆರೈಕೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ಅರ್ಜಿದಾರರ ಪರ ವಕೀಲ ಆರ್.ಶ್ರೀಹರಿ ವಾದ ಮಂಡಿಸಿದರು. ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎ.ನೌಶಾದ್ ಪ್ರತಿವಾದಿಯಾಗಿದ್ದರು.

    Live Tv

  • ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋಗೆ ಪ್ರಶ್ನೆ ಯಾಕೆ? ಹೆಮ್ಮೆ ಪಡಿ – ಕೇರಳ ಹೈಕೋರ್ಟ್

    ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋಗೆ ಪ್ರಶ್ನೆ ಯಾಕೆ? ಹೆಮ್ಮೆ ಪಡಿ – ಕೇರಳ ಹೈಕೋರ್ಟ್

    ತಿರುವನಂತಪುರ: ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವ ಬಗ್ಗೆ ಪ್ರಶ್ನಿಸಿ ಕೇರಳದ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಂತೆ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋದ ಬಗ್ಗೆ ಯಾಕೆ ಪ್ರಶ್ನಿಸುತ್ತೀರಿ? ಈ ಬಗ್ಗೆ ನೀವು ಹೆಮ್ಮೆ ಪಡಬೇಕು ಎಂದು ಕೇರಳ ಹೈಕೋರ್ಟ್ ಚಾಟಿ ಬೀಸಿದೆ.

    ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಫೋಟೋ ಹಾಕಿರುವ ಬಗ್ಗೆ ಮಾಹಿತಿ ಹಕ್ಕು ಕಾರ್ಯಕರ್ತರು ಪ್ರಶ್ನೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಕೃಷ್ಣನ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಇರುವುದರಲ್ಲಿ ಏನು ಸಮಸ್ಯೆ ಇದೆ? ನೀವು ಮಾಜಿ ಪ್ರಧಾನಿ ಜವಾಹರ‌ಲಾಲ್ ನೆಹರು ಎಂಬ ಹೆಸರಿನ ಹಲವು ವಿಶ್ವವಿದ್ಯಾನಿಲಯಗಳನ್ನು ನೋಡಿದ್ದೀರಿ ಆ ಹೆಸರನ್ನು ಯಾಕೆ ಬದಲಾಯಿಸಲು ಹೇಳುತ್ತಿಲ್ಲ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್‍ನಿಂದ ಮೋದಿ ಫೋಟೋ ತೆಗೆಯಲು ಸೂಚನೆ

    ನೀವು ತಿಳಿಸಿರುವಂತೆ ಭಾರತವನ್ನು ಹೊರತು ಪಡಿಸಿ ಉಳಿದ ದೇಶಗಳಲ್ಲಿ ಅವರ ದೇಶದ ಪ್ರಧಾನಿ ಅಥವಾ ಅಧ್ಯಕ್ಷರ ಫೋಟೋ, ಲಸಿಕೆ ಪ್ರಮಾಣ ಪತ್ರದಲ್ಲಿ ಇಲ್ಲ. ಆದರೆ ಭಾರತದ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯ ಫೋಟೋ ಇದೆ. ಇದರಲ್ಲಿ ತಪ್ಪೇನಿಲ್ಲ. ಬೇರೆ ದೇಶದವರು ಅವರ ಪ್ರಧಾನಿಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿಲ್ಲ. ಆದರೆ ಭಾರತೀಯರು ಪ್ರಧಾನಿಗಳ ಬಗ್ಗೆ ಹೆಮ್ಮೆ ಪಡುತ್ತಾರೆ. ಈ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿರಬಹುದು ಆದರೆ ಅವರು ನಮ್ಮ ದೇಶದ ಪ್ರಧಾನಿ. ದೇಶದಲ್ಲಿರುವ 100 ಕೋಟಿ ಜನ ಈ ಬಗ್ಗೆ ಪ್ರಶ್ನೆ ಮಾಡಿಲ್ಲ. ನೀವು ಯಾಕೆ ಪ್ರಶ್ನಿಸಿದ್ದೀರಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು: ಮೋದಿ

    ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಪ್ರಧಾನಿ ಮೋದಿಯವರ ಹೇಳಿಕೆಯ ಜೊತೆ ಮೋದಿ ಭಾವಚಿತ್ರವನ್ನು ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಲು ಬಳಸಲಾಗಿದೆ ಎಂದು ಸಮರ್ಥಿಸಿಕೊಂಡರು. ದೀರ್ಘವಾದ ವಿಚಾರಣೆ ಮಾಡಲು ಮುಂದಾಗಿರುವ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

    ಈ ಹಿಂದೆ ಪಂಚ ರಾಜ್ಯಗಳಾದ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ಪ್ರಧಾನಿ ಮೋದಿಯವರ ಫೋಟೋವನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಕೇಂದ್ರಕ್ಕೆ ಸೂಚನೆ ನೀಡಿತ್ತು. ಇದನ್ನೂ ಓದಿ: ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?

  • ಚಿನ್ನ ಕಳ್ಳಸಾಗಣೆ ಪ್ರಕರಣ- 15 ತಿಂಗಳ ಬಳಿಕ ಸ್ವಪ್ನಾ ಸುರೇಶ್‌ಗೆ ಜಾಮೀನು, ಜೈಲಿನಿಂದ ರಿಲೀಸ್‌

    ಚಿನ್ನ ಕಳ್ಳಸಾಗಣೆ ಪ್ರಕರಣ- 15 ತಿಂಗಳ ಬಳಿಕ ಸ್ವಪ್ನಾ ಸುರೇಶ್‌ಗೆ ಜಾಮೀನು, ಜೈಲಿನಿಂದ ರಿಲೀಸ್‌

    ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸ್ವಪ್ನಾ ಸುರೇಶ್‌ ಅವರಿಗೆ 15 ತಿಂಗಳ ಬಳಿಕ ಜಾಮೀನು ಮಂಜೂರಾಗಿದ್ದು, ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

    ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ದಾಖಲಿಸಿದ್ದ ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಅವರಿಗೆ ನವೆಂಬರ್‌ 2 ರಂದು ಕೇರಳ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. 25 ಲಕ್ಷ ರೂ. ಬಾಂಡ್‌ ಹಾಗೂ ಶೂರಿಟಿಯೊಂದಿಗೆ ಜಾಮೀನು ನೀಡಿತ್ತು. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

    ಸ್ವಪ್ನಾ ಅವರೊಂದಿಗೆ ಇತರೆ 7 ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ನ.2ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದನ್ನೂ ಓದಿ: ಸಾರ್ವಜನಿಕರ ಆಸ್ತಿಗೆ ಹಾನಿಗೊಳಿಸಿದ್ರೆ ಪ್ರತಿಭಟನಾಕಾರರಿಂದಲೇ ವಸೂಲಿ- ಮಸೂದೆ ಜಾರಿಗೆ ಮಧ್ಯಪ್ರದೇಶ ಚಿಂತನೆ

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ವಿನೋದ್‌ ಚಂದ್ರನ್‌ ಮತ್ತು ಜಯಚಂದ್ರನ್‌ ಅವರಿದ್ದ ಪೀಠವು, ಆರೋಪಿಗಳು ಭಯೋತ್ಪಾದನೆ ಕೃತ್ಯಗಳಲ್ಲಿ ತೊಡಗಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿತ್ತು.

  • ಅಶ್ಲೀಲ ಫೋಟೋಗಳನ್ನ ಇಟ್ಟುಕೊಳ್ಳೋದು ಅಪರಾಧವಲ್ಲ: ಕೇರಳ ಹೈಕೋರ್ಟ್

    ಅಶ್ಲೀಲ ಫೋಟೋಗಳನ್ನ ಇಟ್ಟುಕೊಳ್ಳೋದು ಅಪರಾಧವಲ್ಲ: ಕೇರಳ ಹೈಕೋರ್ಟ್

    ತಿರುವನಂತಪುರಂ: ಅಶ್ಲೀಲ ಫೋಟೋಗಳನ್ನು ಇಟ್ಟುಕೊಳ್ಳುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ.

    ಮಹಿಳೆಯರ ಅಸಭ್ಯ ಪ್ರದರ್ಶನ ತಡೆ ಕಾಯಿದೆ ಅಡಿ ಮಹಿಳೆಯ ಅಶ್ಲೀಲ ಫೋಟೋಗಳನ್ನು ಹೊಂದಿದ ಮಾತ್ರಕ್ಕೆ ಅದು ಶಿಕ್ಷಾರ್ಹ ಅಪರಾಧವಾಗುವುದಿಲ್ಲ. ಆದರೆ ಮಹಿಳೆಯ ಅಶ್ಲೀಲ ಫೋಟೋಗಳನ್ನು ಪ್ರಕಟಿಸುವುದು ಮತ್ತು ವಿತರಿಸುವುದು ಕಾನೂನನಿನಡಿ ಶಿಕ್ಷಾರ್ಹವಾಗಿರುತ್ತದೆ ಎಂದು ಹೈಕೋರ್ಟ್ ಹೇಳಿದೆ.

    ಈ ಮೂಲಕ 2008ರಲ್ಲಿ ಓರ್ವ ಪುರುಷ ಮತ್ತು ಮಹಿಳೆಯ ವಿರುದ್ಧದ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.

    ಏನಿದು ಪ್ರಕರಣ?:
    ಕೊಲ್ಲಂ ಪೊಲೀಸರು ಬಸ್ ನಿಲ್ದಾಣದಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಶಂಕಿತ ಓರ್ವ ಮಹಿಳೆ ಹಾಗೂ ಪುರುಷನನ್ನು ವಿಚಾರಣೆ ನಡೆಸಿ, ಬ್ಯಾಗ್‍ನಲ್ಲಿದ್ದ ಕ್ಯಾಮೆರಾವನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಪುರುಷನ ಕ್ಯಾಮೆರಾದಲ್ಲಿ ಮಹಿಳೆಯ ಅಶ್ಲೀಲ ಫೋಟೋಗಳಿದ್ದವು. ಹೀಗಾಗಿ ಇಬ್ಬರನ್ನೂ ಬಂಧಿಸಿ, ಕ್ಯಾಮೆರಾವನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದರು.

    ಈ ಕುರಿತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಕ್ಯಾಮೆರಾದಲ್ಲಿರುವ ಫೋಟೋಗಳನ್ನು ಪ್ರಕಟಿಸಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ದಾಖಲೆಗಳಿಲ್ಲ. ಅಶ್ಲೀಲ ಫೋಟೋಗಳನ್ನು ಇಟ್ಟುಕೊಳ್ಳುವುದು ಅಪರಾಧವಲ್ಲ. ಹೀಗಾಗಿ ಆರೋಪಿಗಳ ವಿರುದ್ಧ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

  • ಅಯ್ಯಪ್ಪನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರೆಹನಾ ಫಾತಿಮಾಗೆ ಬಿಗ್ ರಿಲಿಫ್

    ಅಯ್ಯಪ್ಪನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರೆಹನಾ ಫಾತಿಮಾಗೆ ಬಿಗ್ ರಿಲಿಫ್

    ತಿರುವನಂತಪುರಂ: ಶಬರಿಮಲೆ ಪ್ರವೇಶ ಮಾಡಿ ಅಯ್ಯಪ್ಪ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾಗೆ ಬಿಗ್ ರಿಲಿಫ್ ಸಿಕ್ಕಿದೆ.

    ಪೊಲೀಸರು ರೆಹನಾ ಫಾತಿಮಾಳನ್ನು ಕೇರಳ ಹೈಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುನಿಲ್ ಥಾಮಸ್ ಅವರು, ಫಾತಿಮಾಳಿಗೆ ಷರತ್ತು ಬದ್ಧ ಜಾಮಿನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

    50 ಸಾವಿರ ರೂ. ಬಾಂಡ್ ಮತ್ತು ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಪಂಪಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಕ್ಕೆ ತೆರಳಬಾರದು, ವಿವಾದಾತ್ಮಕ ಹೇಳಿಕೆ ನೀಡದಂತೆ ಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಏನಿದು ಪ್ರಕರಣ?
    ರೆಹನಾ ಫಾತಿಮಾಳ ಕೆಲವೊಂದು ಫೇಸ್‍ಬುಕ್ ಪೋಸ್ಟ್‍ಗಳು ಧಾರ್ಮಿಕ ಮನೋಭಾವನೆಗೆ ಧಕ್ಕೆಯುಂಟು ಮಾಡುವಂತಿದೆ ಎಂದು ಆರೋಪಿಸಿ ರಾಧಾಕೃಷ್ಣ ಮೆನನ್ ಎಂಬವರು ಪತ್ತನಂತಿಟ್ಟ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಫಾತಿಮಾ ಮೇಲೆ ಐಪಿಸಿ ಸೆಕ್ಷನ್ 295ಎ (ಧಾರ್ಮಿಕ ಮನೋಭಾವಕ್ಕೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗಿದ್ದರಿಂದ ಬಂಧನ ಭೀತಿಯಲ್ಲಿದ್ದ ರೆಹನಾ ಕೇರಳ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಳು. ಆದರೆ ರೆಹನಾರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿತ್ತು.

    ರೆಹನಾ ಫಾತಿಮಾ ಯಾರು?:
    ಸಾಮಾಜಿಕ ಕಾರ್ಯಕತೆ ರೆಹನಾ ಫಾತಿಮಾ ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರಿಂದ ಅಕ್ಟೋಬರ್ ನಲ್ಲಿ ಅಯ್ಯಪ್ಪನ ದೇಗುಲದ ಪ್ರವೇಶಕ್ಕೆ ಮುಂದಾಗಿದ್ದಳು. ಫಾತಿಮಾ ಜೊತೆಗೆ ಆಂಧ್ರ ಪ್ರದೇಶದ ಪತ್ರಕರ್ತೆ ಕವಿತಾ ಜಕ್ಕಾಲ್ ಕೂಡ ಇದ್ದರು. ಈ ಇಬ್ಬರು ಮಹಿಳೆಯರಿಗೆ 180 ಪೊಲೀಸರ ಬಿಗಿ ಭದ್ರತೆ ನೀಡಲಾಗಿತ್ತು. ಆದರೆ ಮಹಿಳೆಯ ಪ್ರವೇಶಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ದೇಗುಲ ಪ್ರವೇಶ ಮಾಡಲು ಸಾಧ್ಯವಾಗದೇ ಮರಳಿದ್ದರು. ಬಳಿಕ ರೆಹನಾ ಫಾತಿಮಾ ಅಯ್ಯಪ್ಪ ಹಾಗೂ ಭಕ್ತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ಬಂಧನಕ್ಕೆ ಒಳಗಾಗಿದ್ದಳು. ಬಂಧನವಾದ ಹಿನ್ನೆಲೆಯಲ್ಲಿ ಬಿಎಸ್‍ಎನ್‍ಎಲ್ ಫಾತಿಮಾಳನ್ನು ಕೆಲಸದಿಂದ ಅಮಾನತು ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನಾನು ಯಾವ ಟೈಂನಲ್ಲಾದ್ರೂ ಕೊಲೆಯಾಗ್ಬಹುದು- ಸಹಾಯಕ್ಕೆ ಕೇರಳ ಲವ್ ಜಿಹಾದ್ ಸಂತ್ರಸ್ತೆಯಿಂದ ಮನವಿ

    ನಾನು ಯಾವ ಟೈಂನಲ್ಲಾದ್ರೂ ಕೊಲೆಯಾಗ್ಬಹುದು- ಸಹಾಯಕ್ಕೆ ಕೇರಳ ಲವ್ ಜಿಹಾದ್ ಸಂತ್ರಸ್ತೆಯಿಂದ ಮನವಿ

    ತಿರುವನಂತಪುರ: ಭಾರೀ ವಿವಾದಕ್ಕೀಡಾಗಿ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ಲವ್ ಜಿಹಾದ್ ಪ್ರಕರಣದ ಪ್ರಮುಖ ಕೇಂದ್ರ ಬಿಂದುವಾಗಿದ್ದ ಯುವತಿ ಇದೀಗ ಮತ್ತೊಂದು ಹೊಸ ವಿಡಿಯೋ ಮೂಲಕ ಮನವಿ ಮಾಡಿದ್ದಾಳೆ.

    ಯುವತಿ ಅಖಿಲಾ ಅಶೋಕನ್ ಅಥವಾ ಹಾದಿಯಾ ಆಗಸ್ಟ್ 17ರಂದು ಈ ರೀತಿ ಮನವಿ ಮಾಡಿಕೊಂಡಾಗ ಹೋರಾಟಗಾರ ರಾಹುಲ್ ಈಶ್ವರ್ ವಿಡಿಯೋ ಮಾಡಿದ್ದು, ಗುರುವಾರ ಬಹಿರಂಗವಾಗಿದೆ.

    ವಿಡಿಯೋದಲ್ಲೇನಿದೆ?: `ನಾನು ನಾಳೆ ಅಥವಾ ನಾಳಿದ್ದು ಹೀಗೆ ಯಾವುದೇ ಸಮಯದಲ್ಲಿ ಇಲ್ಲಿ ಕೊಲೆಯಾಗಬಹುದು ಅನ್ನೋ ನಂಬಿಕೆ ನನ್ನಲ್ಲಿದೆ. ನನಗೆ ಗೊತ್ತು ತಂದೆಗೆ ನನ್ನ ಮೇಲೆ ವಿಪರೀತ ಸಿಟ್ಟಿದೆ. ನಾನು ನಡೆದುಕೊಂಡು ಹೋಗುವಾಗ ಅವರು ಹೊಡೆಯುತ್ತಾರೆ. ಹಾಗೆಯೇ ಒದೆಯುತ್ತಾರೆ. ಇದರಿಂದ ತಲೆ ಅಥವಾ ನನ್ನ ದೇಹದ ಯಾವುದೇ ಭಾಗಕ್ಕಾಗಾದ್ರೂ ಗಂಭೀರ ಗಾಯಗಳಾಗಿ ಸಾಯುತ್ತೇನೆ. ಹೀಗಾಗಿ ನನ್ನನ್ನು ಇಲ್ಲಿಂದ ಹೊರಗಡೆ ಕರೆದುಕೊಂಡು ಹೋಗಿ ಅಂತ ವಿಡಿಯೋದಲ್ಲಿ ಆಕೆ ಮನವಿ ಮಾಡಿದ್ದಾಳೆ.

    24 ವರ್ಷದ ಹೋಮಿಯೋಪತಿ ವೈದ್ಯೆ ಅಖಿಲ ಇಸ್ಲಾಂಗೆ ಮತಾಂತರಗೊಂಡು ಹೆಸರನ್ನು ಹಾದಿಯಾ ಎಂದು ಬದಲಾಯಿಸಿಕೊಂಡು ಮುಸ್ಲಿಂ ಯುವಕ ಶಫಿನ್ ಜಹಾನ್ ಎಂಬಾತನ ಜತೆ 2016ರಲ್ಲಿ ವಿವಾಹವಾಗಿದ್ದಳು. ಕೇರಳದ ಮಲಪ್ಪುರಂ ಜಿಲ್ಲೆಯಿಂದ ಹಾದಿಯಾಳನ್ನು ಅಪಹರಿಸಿ, ಆಕೆಯ ಗೆಳೆಯರು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಅಂತ ಹಾದಿಯಾ ತಂದೆ ಆರೋಪಿಸಿದ್ದರು.

    ಈ ಕುರಿತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಇದೊಂದು ಲವ್ ಜಿಹಾದ್ ಎಂದು ಬಣ್ಣಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕೇರಳ ಪೊಲೀಸರಿಗೆ ಆದೇಶ ನೀಡಿತ್ತು. ಅಲ್ಲದೇ ಯುವಕ ಶಫಿನ್ ಜಾಹನ್ ಗೆ ಉಗ್ರರೊಂದಿಗೆ ಸಂಪರ್ಕವಿರುವುದನ್ನು ಕೋರ್ಟ್ ಒಪ್ಪಿಕೊಂಡಿತ್ತು. ಕೇರಳದ ಹಿಂದೂ ಯುವತಿಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ಯುವಕನ ಜತೆ ವಿವಾಹವಾದ ಪ್ರಕರಣದ ಬಗ್ಗೆ ಎನ್‍ಐಎ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಪ್ರಕರಣದ ವಿಚಾರವನ್ನು ಈ ವರ್ಷದ ಆರಂಭದಲ್ಲಿ ಕೈಗೆತ್ತಿಕೊಂಡ ಹೈ ಕೋರ್ಟ್ ವಯಸ್ಕರ ಒಪ್ಪಿಗೆ ಇಲ್ಲದೇ ಈ ಮದುವೆ ನಡೆಯಲು ಹೇಗೆ ಸಾಧ್ಯ ಅಂತ ಪ್ರಶ್ನಿಸಿತ್ತು.

    ಯುವತಿ ಹಾದಿಯಾ ಈ ಮೊದಲು ಒಂದು ವಿಡಿಯೋ ಬಿಡುಗಡೆ ಮಾಡಿದ್ದು ಅದರಲ್ಲಿ `ಮತಾಂತರಗೊಂಡ ಪ್ರಕರಣ ಬೆಳಕಿಗೆ ಬಳದ ಬಳಿಕ ನನ್ನ ಮನೆಯವರು ನನ್ನ ಕೂಡಿ ಹಾಕಿದ್ದು. ಎಲ್ಲೂ ಹೊರ ಹೊಗುವಂತಿಲ್ಲ. ಅಲ್ಲದೇ ನನ್ನ ಮನೆಯ ಹೊರಗಡೆ ಪೋಲೀಸ್ ಅಧಿಕಾರಿಗಳು ಕೂಡ ಕಾವಲು ಕಾಯುತ್ತಿದ್ದಾರೆ. ಇಲ್ಲಿ ಹೇಗೆ ಜೀವನ ಮಾಡಲು ಸಾಧ್ಯ? ಇದು ನನ್ನ ಜೀವನಾನಾ? ಅಂತ ತನ್ನ ಅಲವತ್ತುಕೊಂಡಿದ್ದಳು.

  • ವಿದೇಶಿ ತಂಡದಲ್ಲಿ ಆಡ್ತೀನಿ ಅಂತಿದ್ದಾರೆ ಶ್ರೀಶಾಂತ್, ಆಗಲ್ಲ ಅಂತಿದೆ ಬಿಸಿಸಿಐ!

    ವಿದೇಶಿ ತಂಡದಲ್ಲಿ ಆಡ್ತೀನಿ ಅಂತಿದ್ದಾರೆ ಶ್ರೀಶಾಂತ್, ಆಗಲ್ಲ ಅಂತಿದೆ ಬಿಸಿಸಿಐ!

    ದುಬೈ: ಟೀಂ ಇಂಡಿಯಾ ಕ್ರಿಕೆಟಿಗ ಶ್ರೀಶಾಂತ್ ಬೇರೆ ರಾಷ್ಟ್ರದ ಪರ ಕ್ರಿಕೆಟ್ ಆಡಲು ಆಸಕ್ತಿ ತೋರಿದ್ದಾರೆ. ಬಿಸಿಸಿಐ ನನಗೆ ಟೀಂ ಇಂಡಿಯಾ ಪರವಾಗಿ ಅವಕಾಶ ನೀಡದಿದ್ದರೆ ನಾನು ಬೇರೆ ರಾಷ್ಟ್ರದ ಪರ ಕ್ರಿಕೆಟ್ ಆಡುತ್ತೇನೆ ಎಂದು ಶ್ರೀಶಾಂತ್ ದುಬೈನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

    ಆದರೆ ಶ್ರೀಶಾಂತ್ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಸಿಸಿಐ, ಅಜೀವ ನಿಷೇಧಕ್ಕೊಳಗಾಗಿರುವುದರಿಂದ ಶ್ರೀಶಾಂತ್ ಬೇರೆ ಯಾವುದೇ ಕ್ರಿಕೆಟ್ ಅಸೋಸಿಯೇಷನ್ ಪರ ಆಡುವುದು ಸಾಧ್ಯವಿಲ್ಲ ಎಂದು ಹೇಳಿದೆ. ಮೊನ್ನೆಯಷ್ಟೇ ಕೇರಳ ಹೈಕೋರ್ಟ್ ಶ್ರೀಶಾಂತ್ ಮೇಲಿನ ಬಿಸಿಸಿಐ ಅಜೀವ ನಿಷೇಧ ತೆರವಿಗೆ ತಡೆಯಾಜ್ಞೆ ನೀಡಿತ್ತು.

    ನನ್ನ ಮೇಲೆ ಬಿಸಿಸಿಐ ಮಾತ್ರ ನಿಷೇಧ ಹೇರಿದೆಯೇ ವಿನಃ ಐಸಿಸಿ ನಿಷೇಧ ಹೇರಿಲ್ಲ. ಭಾರತದಲ್ಲಿ ಅವಕಾಶ ಸಿಗದಿದ್ದರೆ ನಾನು ಬೇರೆ ದೇಶದ ಪರ ಆಡಬಹುದು. ಸದ್ಯ ನನಗೆ 34 ವರ್ಷ ವಯಸ್ಸಾಗಿದ್ದು ಇನ್ನೂ 6 ವರ್ಷ ಕ್ರಿಕೆಟ್ ಆಡಬಹುದು ಎಂದು ಹೇಳಿದ್ದಾರೆ. ಓರ್ವ ಕ್ರಿಕೆಟ್ ಪ್ರೇಮಿಯಾಗಿ ನಾನು ಕ್ರಿಕೆಟ್ ಆಡುವುದನ್ನು ಇಷ್ಟಪಡುತ್ತೇನೆ. ಬಿಸಿಸಿಐ ಎನ್ನುವುದು ಖಾಸಗಿ ಸಂಸ್ಥೆ. ಇದನ್ನು ನಾವು ಮಾತ್ರ ಟೀಂ ಇಂಡಿಯಾ ಎಂದು ಕರೆಯುತ್ತೇವೆ. ಆದರೆ ವಾಸ್ತವದಲ್ಲಿ ಅದೊಂದು ಖಾಸಗಿ ಸಂಸ್ಥೆ ಎಂದು ಹೇಳಿದ್ದಾರೆ.

    ಕೇರಳ ಪರ ರಣಜಿ ಆಡುವುದು ಬೇರೆಯೇ ವಿಚಾರ. ನನಗೆ ಕೇರಳ ಪರ ರಣಜಿ ಹಾಗೂ ಇರಾನಿ ಟ್ರೋಫಿ ಆಡಬೇಕು ಎಂಬ ಆಸೆಯಿತ್ತು. ಆದರೆ ಇದರ ಬಗ್ಗೆ ಬಿಸಿಸಿಐ ನಿರ್ಧರಿಸಬೇಕು ಎಂದು ಹೇಳಿದರು. ಮೊನ್ನೆ ಬಂದ ಕೇರಳ ಹೈಕೋರ್ಟ್ ತೀರ್ಪಿನಿಂದಾಗಿ ಶ್ರೀಶಾಂತ್ ಗೆ ಈಗ ಕೇರಳ ತಂಡದಲ್ಲಿ ಆಡುವುದು ಸಾಧ್ಯವಿಲ್ಲ. ಜೊತೆಗೆ ಬಿಸಿಸಿಐ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಅಡಿ ಬರುವ ಯಾವುದೇ ಜಾಗದಲ್ಲೂ ಪ್ರಾಕ್ಟೀಸ್ ಕೂಡಾ ನಡೆಸುವಂತಿಲ್ಲ.