Tag: ಕೇರಳ

  • ಲೈಂಗಿಕ ಕಿರುಕುಳದ ಆರೋಪ – ಕಾಂಗ್ರೆಸ್‌ನ ಪಾಲಕ್ಕಾಡ್ ಶಾಸಕ ರಾಹುಲ್ ಅಮಾನತು

    ಲೈಂಗಿಕ ಕಿರುಕುಳದ ಆರೋಪ – ಕಾಂಗ್ರೆಸ್‌ನ ಪಾಲಕ್ಕಾಡ್ ಶಾಸಕ ರಾಹುಲ್ ಅಮಾನತು

    ತಿರುವನಂತಪುರಂ: ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಪಾಲಕ್ಕಾಡ್ (Palakkad) ಶಾಸಕ ರಾಹುಲ್ ಮಾಂಕೂಟತ್ತಿಲ್ (Rahul Mamkootathil) ಅವರನ್ನು ಕೇರಳ (Kerala) ಪ್ರದೇಶ ಕಾಂಗ್ರೆಸ್ ಸಮಿತಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.

    ಈ ಬಗ್ಗೆ ಮಾತನಾಡಿದ ಹಿರಿಯ ಕಾಂಗ್ರೆಸ್ (Congress) ನಾಯಕ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಮುರಳೀಧರನ್ (K Muraleedharan), ರಾಹುಲ್ ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವುದನ್ನು ದೃಢಪಡಿಸಿದ್ದಾರೆ. ರಾಹುಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸುವ ಯಾವುದೇ ಅಧಿಕೃತ ಪ್ರಕಟಣೆಯನ್ನು ಕೆಪಿಸಿಸಿ ಇನ್ನೂ ಬಿಡುಗಡೆ ಮಾಡಿಲ್ಲ. ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾದ ರಾಹುಲ್ ಅವರು, ಶಾಸಕ ಸ್ಥಾನದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುವುದನ್ನು ಅವರೇ ನಿರ್ಧರಿಸಬೇಕು ಎಂದು ಮುರಳೀಧರನ್ ಹೇಳಿದ್ದಾರೆ. ಇದನ್ನೂ ಓದಿ: ಗೃಹ ಶುದ್ಧಿ ಅಭಿಯಾನಕ್ಕೆ ಚಾಲನೆ – ಮಾನವ ಕಳ್ಳ ಸಾಗಣೆಯನ್ನು ಸರ್ಕಾರ, ಸಮಾಜ ಒಗ್ಗೂಡಿ ಎದುರಿಸಬೇಕು: ಗೆಹ್ಲೋಟ್

    ರಾಹುಲ್ ಅವರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವುದು ಅವರ ವಿರುದ್ಧ ಪಕ್ಷ ಕೈಗೊಂಡಿರುವ ಮೊದಲ ಕ್ರಮ, ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದು ಎರಡನೇ ಕ್ರಮ, ಮುಂದೆ ಇನ್ನೂ ಹೆಚ್ಚಿನ ಆರೋಪಗಳು ಕೇಳಿ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೇರಿದಂತೆ ಮೂರನೇ ಕ್ರಮವೂ ಪಕ್ಷ ತೆಗೆದುಕೊಳ್ಳಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ದೂಷಿಸಲು ಯಾರಿಗೂ ಅವಕಾಶವಿಲ್ಲ. ಏಕೆಂದರೆ, ಇಂತಹ ಪ್ರಕರಣಗಳಲ್ಲಿ ಯಾವುದೇ ಪಕ್ಷವೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ. ರಾಹುಲ್ ವಿರುದ್ಧದ ಆರೋಪಗಳ ಬಗ್ಗೆ ಪಕ್ಷವು ಆಂತರಿಕ ಪರಿಶೀಲನೆ ನಡೆಸಲಿದೆ. ರಾಹುಲ್ ಅವರಿಗೂ ಉತ್ತರ ನೀಡಲು ಅವಕಾಶ ನೀಡಲಿದೆ ಎಂದು ಮುರಳೀಧರನ್ ತಿಳಿಸಿದ್ದಾರೆ.

  • ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

    ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

    ಚೆನ್ನೈ: ಫುಟ್‌ಬಾಲ್ (Football) ತಾರೆ, ಅರ್ಜೆಂಟಿನಾದ (Argentina) ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ಕೇರಳಕ್ಕೆ (Kerala) ಭೇಟಿ ಕನ್ಫರ್ಮ್ ಆಗಿದ್ದು, ಇದೇ ನವೆಂಬರ್‌ನಲ್ಲಿ ಭೇಟಿ ನೀಡಲಿದ್ದಾರೆ ಎಂದು ಕೇರಳದ ಕ್ರೀಡಾ ಸಚಿವ ವಿ. ಅಬ್ದುರ್ ಹಿಮಾನ್ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಕೇರಳದಲ್ಲಿ ಆಯೋಜನೆಗೊಳ್ಳಲಿರುವ ಸೌಹಾರ್ದ ಪಂದ್ಯದಲ್ಲಿ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಆಡಲು ಸಜ್ಜಾಗಿದೆ. ಈ ಪಂದ್ಯಾವಳಿಗಾಗಿ ಫಿಫಾದ ಅಗ್ರ 50 ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಈ ಕುರಿತು ಈಗಾಗಲೇ ಆಸ್ಟ್ರೇಲಿಯಾ ತಂಡ ಉತ್ಸುಕತೆ ತೋರಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ವಾಟ್ಸಪ್‌ನಲ್ಲಿ ಬಂತು ಮದುವೆ ಕಾರ್ಡ್ – ಕ್ಲಿಕ್ ಮಾಡ್ತಿದ್ದಂಗೆ 2 ಲಕ್ಷ ರೂ. ಕಳೆದುಕೊಂಡ ಸರ್ಕಾರಿ ನೌಕರ

    ಅರ್ಜೆಂಟೀನಾ ಫುಟ್‌ಬಾಲ್ ಅಸೋಸಿಯೆಷನ್ (Argentine Football Association) ಕೂಡ ಈ ಕುರಿತು ಮಾಹಿತಿಯನ್ನು ದೃಢಪಡಿಸಿದೆ. ಅಕ್ಟೋಬರ್ 6ರಿಂದ 14ರವರೆಗೆ ಯುಎಸ್‌ನಲ್ಲಿ, ಬಳಿಕ ಅಂಗೋಲಾದ ಲುವಾಂಡಾದಲ್ಲಿ, ಆನಂತರ ನವೆಂಬರ್ 10ರಿಂದ 18ರವರೆಗೆ ಭಾರತದ ಕೇರಳದಲ್ಲಿ ಆಡಲಿದೆ ಎಂದು ತಿಳಿಸಿದೆ.

    ಸದ್ಯ ಭಾರತದಲ್ಲಿ ಆಡಲು ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ತಯಾರಾಗಿದ್ದು, ಕೇರಳ ಸರ್ಕಾರ ಮೆಸ್ಸಿ ಭೇಟಿಯನ್ನು ಖಚಿತಪಡಿಸಿದೆ. ಈ ಹಿಂದೆ 2011ರಲ್ಲಿ ಮೆಸ್ಸಿ ಒಳಗೊಂಡ ಅರ್ಜೆಂಟೀನಾ ತಂಡವು ವೆನೆಜುವೆಲಾ ವಿರುದ್ಧ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಆಡಿತ್ತು.ಇದನ್ನೂ ಓದಿ: ಬಾಘಿ-4 ಟ್ರೈಲರ್‌ಗೆ ಮುಹೂರ್ತ ಫಿಕ್ಸ್

  • ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ತಿರುವನಂತಪುರಂ: ಭಾರತೀಯ ಕಮ್ಯುನಿಸ್ಟ್ ಪಕ್ಷದ (CIP) ಹಿರಿಯ ನಾಯಕ ಹಾಗೂ ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ (Suravaram Sudhakar Reddy) ಅವರು ಶುಕ್ರವಾರ ತಡರಾತ್ರಿ ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು.

    ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸುರವರಂ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ (Private Hospital) ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ಮುಂಬೈ-ಜೋಧ್‌ಪುರ ವಿಮಾನ ರನ್‌ವೇಯಲ್ಲೇ ಸ್ಟಾಪ್ ಮಾಡಿದ ಪೈಲಟ್

    1942ರ ಮಾರ್ಚ್‌ 25ರಂದು ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಕೊಂಡ್ರಾವಪಲ್ಲಿ ಗ್ರಾಮದಲ್ಲಿ ಜನಿಸಿದ ಸುರವರಂ ಸುಧಾಕರ ರೆಡ್ಡಿ ಎಡಪಂಥೀಯ ಸಿದ್ಧಾಂತಗಳಿಂದ ಆಕರ್ಷಿತರಾಗಿದ್ದರು. ವಿದ್ಯಾರ್ಥಿ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. 15 ವರ್ಷ ವಯಸ್ಸಿನವರಾಗಿದ್ದಾಗಲೇ ಕರ್ನೂಲ್‌ನ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಆಂದೋಲನ ನಡೆಸಿ ಗಮನ ಸೆಳೆದಿದ್ದರು.

    ರೆಡ್ಡಿ ಅವರು 1998-1999 ಮತ್ತು 2004-2009ರ ಅವಧಿಯಲ್ಲಿ 2 ಬಾರಿ ನಲ್ಗೊಂಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿದ್ದರು. ಸಂಸತ್ತಿನಲ್ಲಿದ್ದ ಅವಧಿಯಲ್ಲಿ, ಕಾರ್ಮಿಕರ ಹಕ್ಕುಗಳು, ಸಾಮಾಜಿಕ ನ್ಯಾಯ, ರೈತರು ಹಾಗೂ ಮತ್ತು ಅಂಚಿನಲ್ಲಿರುವ ಸಮುದಾಯಗಳ ಕಲ್ಯಾಣಕ್ಕಾಗಿ ಹೋರಾಡಿದ್ದರು. ಅಷ್ಟೇ ಅಲ್ಲ ಸರ್ಕಾರದ ಭ್ರಷ್ಟಾಚಾರವನ್ನ ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

    2012 ರಿಂದ 2019ರ ವರೆಗೆ, ಅವರು ಭಾರತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಮೂರು ಅವಧಿಗೆ ಈ ಹುದ್ದೆಯನ್ನು ಅಲಂಕರಿಸಿದ್ದ ಸುರವರಂ ಅವರು ಜೀವನದುದ್ದಕ್ಕೂ ಸಾಮೂಹಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಸರಳ, ಸಜ್ಜನಿಕೆಯ ಜೀವನ ಶೈಲಿಯಿಂದಾಗಿ ಜನಮನ ಗೆದ್ದಿದ್ದರು. ಇದನ್ನೂ ಓದಿ: ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

  • 3 ವರ್ಷದಿಂದ ಅಶ್ಲೀಲ ಮೆಸೇಜ್‌ ಕಳಿಸ್ತಿದ್ದಾರೆ, ಹೋಟೆಲ್‌ಗೆ ಕರೀತಿದ್ದಾರೆ – ರಾಜಕಾರಣಿ ವಿರುದ್ಧ ನಟಿ ರಿನಿ ಜಾರ್ಜ್ ಆರೋಪ

    3 ವರ್ಷದಿಂದ ಅಶ್ಲೀಲ ಮೆಸೇಜ್‌ ಕಳಿಸ್ತಿದ್ದಾರೆ, ಹೋಟೆಲ್‌ಗೆ ಕರೀತಿದ್ದಾರೆ – ರಾಜಕಾರಣಿ ವಿರುದ್ಧ ನಟಿ ರಿನಿ ಜಾರ್ಜ್ ಆರೋಪ

    – ಕಾಂಗ್ರೆಸ್‌ ಶಾಸಕನ ಪಾತ್ರ ಇರೋದಾಗಿ ಬಿಜೆಪಿ ಆರೋಪ

    ತಿರುವನಂತಪುರಂ: ಕೇರಳದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು (Kerala Politician) ಮೂರು ವರ್ಷಗಳಿಂದ ತನಗೆ ಆಕ್ಷೇಪಾರ್ಹ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ತನ್ನನ್ನು ಫೈವ್‌ ಸ್ಟಾರ್‌ ಹೋಟೆಲ್‌ಗೆ ಕರೆಯುತ್ತಿದ್ದಾರೆ ಎಂದು ಮಲಯಾಳಂ ನಟಿ ರಿನಿ ಜಾರ್ಜ್ (Rini George) ಆರೋಪಿಸಿದ್ದಾರೆ.

    ರಾಜ್ಯದ ಪ್ರಮುಖ ರಾಜಕೀಯ ಪಕ್ಷದ ಕಾರ್ಯಕರ್ತೆಯೂ ಆಗಿರುವ ನಟಿ, ಅಶ್ಲೀಲ ಸಂದೇಶ (Objectionable Texts) ಕಳುಹಿಸಿದ ರಾಜಕಾರಣಿಯ ಹೆಸರನ್ನ ಬಹಿರಂಗಪಡಿಸಿಲ್ಲ. ಆದ್ರೆ ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ರಾಹುಲ್ ಮಂಕೂಟ್ಟಿಲ್ ಪಾತ್ರ ಇರುವುದಾಗಿ ಬಿಜೆಪಿ ಆರೋಪ ಮಾಡಿದೆ. ಇದನ್ನೂ ಓದಿ: ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ

    ನಟಿ ಹೇಳಿದ್ದೇನು?
    ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು ನನಗೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನ ಕಳುಹಿಸುತ್ತಿದ್ದಾರೆ. ಫೈವ್‌ ಸ್ಟಾರ್‌ ಹೋಟೆಲ್‌ಗೆ (five-star hotel) ಬರುವಂತೆ ಕರೆಯುತ್ತಿದ್ದಾರೆ. ಈ ಬಗ್ಗೆ ನಿಮ್ಮ ಪಕ್ಷದ ನಾಯಕರಿಗೆ ತಿಳಿಸುವುದಾಗಿ ಹೇಳಿದ್ರೆ, ಹೇಳುವಂತೆ ಸವಾಲ್‌ ಹಾಕಿದ್ದಾರೆ. ಈ ಬಗ್ಗೆ ಪಕ್ಷದ ನಾಯಕರಿಗೆ ದೂರು ನೀಡಿದ್ರೆ ನಿರ್ಲಕ್ಷ್ಯ ಮಾಡಿದ್ದಾರೆ. ದೂರು ನೀಡಿದ ಬಳಿಕವೂ ಅವರಿಗೆ ಪಕ್ಷದೊಳಗೆ ಪ್ರಮುಖ ಹುದ್ದೆಯನ್ನ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಇದು ನನ್ನೊಬ್ಬಳ ಸಮಸ್ಯೆಯಲ್ಲ, ಹಲವಾರು ರಾಜಕಾರಣಿಗಳ ಪತ್ನಿಯರು ಹಾಗೂ ಹೆಣ್ಣುಮಕ್ಕಳೂ ತಮ್ಮೊಂದಿಗೆ ಈ ರೀತಿಯ ಅನುಭವ ಎದುರಿಸಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮ ಕುಟುಂಬದಲ್ಲಿನ ಮಹಿಳೆಯರನ್ನೇ ರಕ್ಷಿಸಲು ಸಾಧ್ಯವಾಗದ ಈ ರಾಜಕಾರಣಿಗಳು ಯಾವ ಮಹಿಳೆಯನ್ನ ರಕ್ಷಿಸಲು ಸಾಧ್ಯ? ಅಂತಲೂ ರಿನಿ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್‌

    ಅಲ್ಲದೇ ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಅನೇಕ ಮಹಿಳೆಯರು ಈ ರೀತಿಯ ಸಮಸ್ಯೆಗಳನ್ನ ಎದುರಿಸ್ತಿರೋದನ್ನ ನೋಡಿದ್ದೇನೆ. ಆದ್ರೆ ಯಾಕೆ ಯಾರೊಬ್ಬರೂ ಅದರ ಬಗ್ಗೆ ಒಂದು ಮಾತೂ ಆಡ್ತಿಲ್ಲ ಅಂತ ಯೋಚನೆ ಬಂತು. ಅವರೆಲ್ಲರ ಪರವಾಗಿ ನಾನು ದನಿ ಎತ್ತಲು ನಿರ್ಧರಿಸಿದೆ. ಅದಕ್ಕಾಗಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

    ʻಕೈʼ ಶಾಸಕನ ವಿರುದ್ಧ ಬಿಜೆಪಿ ಆರೋಪ
    ರೀತಿ ತನಗೆ ಅಶ್ಲೀಲ ಸಂದೇಶ ಕಳಿಸಿದ ರಾಜಕಾರಣಿಯ ಹೆಸರು ಬಹಿರಂಹಪಡಿಸಿಲ್ಲ. ಆದ್ರೆ ಬಿಜೆಪಿಯು ಪಾಲಕ್ಕಾಡ್‌ನ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಆರೋಪ ಮಾಡಿದೆ. ಶಾಸಕನ ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜೀನಾಮೆಗೂ ಒತ್ತಾಯಿಸಿದೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ

    ರಾಹುಲ್ ಮಮ್‌ಕೂಟತಿಲ್ ಕೇರಳದ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

  • ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ

    ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ

    ಕೊಲಂಬೋ: ಕೇರಳದ ಶಬರಿಮಲೆ ಅಯ್ಯಪ್ಪ (Sabarimala) ದೇಗುಲಕ್ಕೆ ಶ್ರೀಲಂಕಾ (Sri Lanka) ಪ್ರಜೆಗಳು ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳಬಹುದು ಎಂದು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ.

    ಸೋಮವಾರ (ಆ.11) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಮಂಗಳವಾರ (ಆ.12) ಹೇಳಿಕೆ ಬಿಡುಗಡೆಗೊಳಿಸಿದೆ.ಇದನ್ನೂ ಓದಿ: Delhi | ಈಜು ತರಗತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್

    ಶ್ರೀಲಂಕಾದ ಭಕ್ತಾದಿಗಳು ಶಬರಿಮಲೆ ಅಯ್ಯಪ್ಪನನ್ನು ಪೂಜಿಸುತ್ತಾರೆ. ಅದಲ್ಲದೇ ಪ್ರತಿ ವರ್ಷ ಸುಮಾರು 15 ಸಾವಿರಕ್ಕೂ ಅಧಿಕ ಶೀಲಂಕಾ ಪ್ರಜೆಗಳು ಶಬರಿಮಲೆ ದೇಗುಲಕ್ಕೆ ಭೇಟಿ ನೀಡುತ್ತಾರೆ. ಹೀಗಾಗಿ ಶ್ರೀಲಂಕಾ ಸರ್ಕಾರ ಶಬರಿಮಲೆ ಯಾತ್ರೆಯನ್ನು ಸರ್ಕಾರದ ಮಾನ್ಯತೆ ಪಡೆದ ಯಾತ್ರೆ ಎಂದು ಪರಿಗಣಿಸಿದೆ.

    ಶಬರಿಮಲೆ ಅಯ್ಯಪ್ಪನ ದೇಗುಲದಲ್ಲಿ ವಾರ್ಷಿಕ ಮಂಡಲ ಪೂಜೆ ಉತ್ಸವವು ನವೆಂಬರ್‌ನಿAದ ಡಿಸೆಂಬರ್‌ವರೆಗೆ ನಡೆಯುತ್ತದೆ. ಬಳಿಕ ಜನವರಿಯಲ್ಲಿ ಮಕರವಿಳಕ್ಕು ಉತ್ಸವ ನಡೆಯುತ್ತದೆ. ಈ ಅವಧಿಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ.ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

     

  • ಟ್ರಾಫಿಕ್‌ನಲ್ಲಿ ಸಿಲುಕಿದ ಅಂಬುಲೆನ್ಸ್ – ರಸ್ತೆಯಲ್ಲಿ ಓಡಿ ಟ್ರಾಫಿಕ್ ಕ್ಲಿಯರ್ ಮಾಡಿದ ASI ಅಪರ್ಣಾ

    ಟ್ರಾಫಿಕ್‌ನಲ್ಲಿ ಸಿಲುಕಿದ ಅಂಬುಲೆನ್ಸ್ – ರಸ್ತೆಯಲ್ಲಿ ಓಡಿ ಟ್ರಾಫಿಕ್ ಕ್ಲಿಯರ್ ಮಾಡಿದ ASI ಅಪರ್ಣಾ

    ತಿರುವನಂತಪುರ: ವಾಹನಗಳ ಉದ್ದನೆಯ ಸಾಲು, ಭಾರೀ ಟ್ರಾಫಿಕ್ ಜಾಮ್… ಈ ಟ್ರಾಫಿಕ್ (Traffic) ಜಾಮ್ ಮಧ್ಯೆ ನಿರಂತರವಾಗಿ ಕೇಳುತ್ತಿದ್ದ ಅಂಬುಲೆನ್ಸ್ (Ambulence) ಸೈರನ್ ಸದ್ದು… ಇದರ ಮಧ್ಯೆ ಓಡೋಡಿ ಬರುತ್ತಿರುವ ಪೊಲೀಸ್ ಅಧಿಕಾರಿ. ಟ್ರಾಫಿಕ್ ಜಾಮ್‌ನಿಂದ ಅಂಬುಲೆನ್ಸ್‌ನಲ್ಲಿ ಒದ್ದಾಡುತ್ತಿದ್ದ ಜೀವ ಉಳಿಸಲು ಕೇರಳದ ತ್ರಿಶೂರ್ (Thrissur) ನಗರದಲ್ಲಿ ಎಎಸ್‌ಐ ಅಪರ್ಣಾ (ASI Aparna) ಲವ್ ಕುಮಾರ್ ರಸ್ತೆಯಲ್ಲಿ ಕಿ.ಮೀಗಟ್ಟಲೇ ಓಡಿ ಟ್ರಾಫಿಕ್ ಕ್ಲಿಯರ್ ಮಾಡಲು ಪ್ರಯತ್ನ ಪಟ್ಟಿದ್ದಾರೆ.

    ಈ ದೃಶ್ಯ ಈಗ ವೈರಲ್ ಆಗಿದ್ದು, ಮಹಿಳಾ ಅಧಿಕಾರಿಯ ಕಾರ್ಯಕ್ಕೆ ಎಲ್ಲರೂ ಸೆಲ್ಯೂಟ್ ಅನ್ನುತ್ತಿದ್ದಾರೆ. ವೈದ್ಯಕೀಯ ಕಾಲೇಜಿನಿಂದ ತ್ರಿಶೂರ್‌ನ ಜುಬಿಲಿ ಆಸ್ಪತ್ರೆಗೆ ರೋಗಿ ಶಿಫ್ಟ್ ಆಗಬೇಕಾಗಿತ್ತು. ಕೊನೆಗೆ ಇವರ ಸಮಯ ಪ್ರಜ್ಞೆಯಿಂದ ರೋಗಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಕ್ಕಿದೆ. ಇದನ್ನೂ ಓದಿ: ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಟ್ವಿಸ್ಟ್ – ಡೆಂಟಿಸ್ಟ್ ಅಳಿಯನಿಂದಲೇ ಅತ್ತೆಯ ಹತ್ಯೆ

    ಇನ್ನು ಈ ಪೊಲೀಸ್ ಅಧಿಕಾರಿ ಈ ಹಿಂದೆ ದುಡ್ಡಿನ ಕೊರತೆಯಿಂದ ಮಹಿಳೆಯ ಮೃತದೇಹ ನೀಡದ್ದಕ್ಕೆ ತನ್ನ ಬಂಗಾರದ ಬಳೆಯನ್ನು ನೀಡಿ ಗಿರವಿ ಇಡಲು ಹೇಳಿ ದುಡ್ಡಿನ ವ್ಯವಸ್ಥೆ ಮಾಡಿದ್ದರು. ಅಲ್ಲದೇ ಕ್ಯಾನ್ಸರ್ ರೋಗಿಗಳಿಗೆ ತಲೆಗೂದಲನ್ನು ಕೂಡ ದಾನ ಮಾಡಿ ಗಮನ ಸೆಳೆದಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

  • ಜೈಲಿಂದ ಬಂದ ಮರುದಿನವೇ ಮತ್ತೆ ಸಹೋದ್ಯೋಗಿ ಯುವತಿಗೆ ಕಿರುಕುಳ – ಕೇರಳ ಯುವಕ ಯುಕೆಯಿಂದ ಗಡೀಪಾರು ಸಾಧ್ಯತೆ

    ಜೈಲಿಂದ ಬಂದ ಮರುದಿನವೇ ಮತ್ತೆ ಸಹೋದ್ಯೋಗಿ ಯುವತಿಗೆ ಕಿರುಕುಳ – ಕೇರಳ ಯುವಕ ಯುಕೆಯಿಂದ ಗಡೀಪಾರು ಸಾಧ್ಯತೆ

    ಲಂಡನ್: ಇಲ್ಲಿನ ಮೃಗಾಲಯ ಒಂದರಲ್ಲಿ ತನ್ನ ಸಹೋದ್ಯೋಗಿ ಯುವತಿಗೆ ಪದೇ ಪದೇ ಕಿರುಕುಳ ನೀಡುತ್ತಿರುವ ಆರೋಪ ಎದುರಿಸುತ್ತಿರುವ ಕೇರಳದ (Kerala) ಯುವಕನೊಬ್ಬ ಇಂಗ್ಲೆಂಡ್‌ನಿಂದ (England) ಗಡೀಪಾರಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

    ಕೆರಳ ಮೂಲದ ಆಶಿಶ್ ಜೋಸ್ ಪಾಲ್  (Asish Jose Paul) ಎಂಬಾತ ಸಹೋದ್ಯೋಗಿ ಯುವತಿಗೆ ನಿರಂತರ ಮೆಸೇಜ್‌ ಮಾಡುವುದು, ಅನಗತ್ಯ ಗಿಫ್ಟ್‌ ನೀಡುವುದು, ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದೆ ವಿಚಾರಕ್ಕೆ ಆಶಿಶ್‌ ಹಲವು ಬಾರಿ ಬಂಧನಕ್ಕೊಳಗಾಗಿದ್ದ. ಅಲ್ಲದೇ 6 ತಿಂಗಳ ಶಿಕ್ಷೆಯನ್ನು ವಿಧಿಸಿ, ಒಂದು ವರ್ಷದವರೆಗೆ ಅಮಾನತುಗೊಳಿಸಲಾಗಿತ್ತು. ಬಳಿಕ ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ವೇಳೆ ಮತ್ತೆ ಅಪರಾಧ ಪುನರಾವರ್ತನೆ ಮಾಡಿದರೆ ಜೈಲಿಗೆ ಹಾಕುವ ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೂ  ಆತ ಜೈಲಿಂದ ಹೊರಬಂದ ಮರುದಿನವೇ ಯುವತಿಯನ್ನು ಸಂಪರ್ಕಿಸಲು ಯತ್ನಿಸಿದ್ದಾನೆ. ಇದನ್ನೂ ಓದಿ: ಅಪ್ಪಾ.. ನಾವು ಬದುಕುಳಿಯಲ್ಲ, ಇಲ್ಲಿ ನೀರು ತುಂಬಿದೆ: ಉತ್ತರಾಖಂಡ ಪ್ರವಾಹದಲ್ಲಿ ಮಗನ ಕೊನೆ ಮಾತು ನೆನೆದು ತಂದೆ ಕಣ್ಣೀರು

    ಜೋಸ್ ಪಾಲ್, ಯುವತಿಗೆ ಹೂವುಗಳು ಮತ್ತು ಚಾಕೊಲೇಟ್‌ಗಳನ್ನು ಕೊಟ್ಟು, ಪ್ರಪೋಸ್ ಮಾಡುವುದು ಮಾಡಿದ್ದಾನೆ. ಆಕೆ ಆತನ ನಂಬರ್‌ ಬ್ಲಾಕ್‌ ಮಾಡಿದಾಗ ಹಿಂಬಾಲಿಸಲು ಆರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನೂ ಆತನನ್ನು ಬಂಧಿಸಿ ಬಿಡುಗಡೆ ಮಾಡುವಾಗ, ಆಕೆಯನ್ನು ಭೇಟಿಯಾಗದಂತೆ ಸೂಚಿಸಲಾಗಿತ್ತು. ಅಲ್ಲದೇ ಲಂಡನ್ ಮೃಗಾಲಯದಿಂದ 50 ಮೀಟರ್ ಒಳಗೆ ಹೋಗದಂತೆ ಆದೇಶಿಸಲಾಗಿತ್ತು. ಆದರೂ ಆತ ತನ್ನ ಚಾಳಿಯನ್ನು ಮುಂದುವರಿಸಿದ್ದ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವತಿ, ಆಶಿಶ್‌ ನಡತೆ ನನ್ನನ್ನು ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಕುಗ್ಗುವಂತೆ ಮಾಡಿದೆ. ಈ ಘಟನೆ ನನ್ನ ಸ್ನೇಹಿತರು ಹಾಗೂ ಕುಟುಂಬ ನನ್ನ ಬಗ್ಗೆ ಯೋಚಿಸುವಂತೆ ಮಾಡಿದೆ. ನಾನು ಸುರಕ್ಷಿತವಾಗಿರಲು ಯಾರನ್ನಾದರೂ ಅವಲಂಭಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿಕೊಂಡಿದ್ದಾಳೆ.

    ಇದೆಲ್ಲದರ ನಡುವೆ ಜೋಸ್ ಪಾಲ್ ಪರ ವಕೀಲರು ನ್ಯಾಯಾಲಯದಲ್ಲಿ ಆತ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಯುವತಿಗೆ ಗಮನಾರ್ಹ ತೊಂದರೆ ಉಂಟಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಾದಿಸಿದ್ದರು. ನ್ಯಾಯಾಲಯ, ಅಶಿಶ್‌ ವೀಸಾ ಈ ವರ್ಷ ಸೆಪ್ಟೆಂಬರ್ 13ರಂದು ಮುಕ್ತಾಯಗೊಳ್ಳಲಿದೆ. ಹೊಸ ವೀಸಾ ನೀಡದ ಹೊರತು ಇಲ್ಲಿ ಉಳಿದುಕೊಳ್ಳಲು ಸಾಧ್ಯವಿಲ್ಲ. ಅದ್ದರಿಂದ ಗಡೀಪಾರಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

    ಜೋಸ್ ಪಾಲ್, ಆಂಗ್ಲಿಯಾ ರಸ್ಕಿನ್ ವಿಶ್ವವಿದ್ಯಾಲಯದಲ್ಲಿ (2022-2023) ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ವಿಷಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದ. ಇದರ ಜೊತೆ ಲಂಡನ್ ಮೃಗಾಲಯದ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಆತ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಕಳೆದ ವರ್ಷ ಜುಲೈ ಮತ್ತು ಡಿಸೆಂಬರ್ ಅವಧಿಯಲ್ಲಿ ಜೋಸ್ ಪಾಲ್ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಒಂದು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ 9 ಕೋಟಿ ಹಣ ಕಳೆದುಕೊಂಡ 80ರ ವೃದ್ಧ

  • ಉತ್ತರಾಖಂಡದಲ್ಲಿ ಮೇಘಸ್ಫೋಟ – ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ

    ಉತ್ತರಾಖಂಡದಲ್ಲಿ ಮೇಘಸ್ಫೋಟ – ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ

    ಡೆಹ್ರಾಡೂನ್: ಉತ್ತರಾಖಂಡದ ( Uttarakhand) ಉತ್ತರಕಾಶಿಯಲ್ಲಿ (Uttarkashi) ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಕೇರಳ (Kerala) ಮೂಲದ 28 ಪ್ರವಾಸಿಗರು (Tourists) ನಾಪತ್ತೆಯಾಗಿದ್ದಾರೆ ಎಂದು ನಾಪತ್ತೆಯಾದವರ ಕುಟುಂಬಸ್ಥರು ತಿಳಿಸಿದ್ದಾರೆ.

    ಭೀಕರ ಪ್ರವಾಹದಲ್ಲಿ ನಾಪತ್ತೆಯಾದ 28 ಜನರ ಪೈಕಿ 20 ಮಂದಿ ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದಲ್ಲಿ ನೆಲೆಸಿದ್ದರು. ಇನ್ನುಳಿದ 8 ಮಂದಿ ಕೇರಳದ ವಿವಿಧ ಜಿಲ್ಲೆಗಳ ನಿವಾಸಿಯಾಗಿದ್ದರು. ನಾಪತ್ತೆಯಾದವರಲ್ಲಿ ದಂಪತಿ ಕೂಡ ಇದ್ದರು. ಮೇಘಸ್ಫೋಟ ಸಂಭವಿಸುವ ಒಂದು ದಿನದ ಹಿಂದೆ ಅವರ ಮಗ ನಮಗೆ ಕೊನೆಯದಾಗಿ ಫೋನ್ ಮಾಡಿದ್ದರು. ಮರುದಿನ ಬೆಳಗ್ಗೆ 8:30ರ ಸುಮಾರಿಗೆ ಅವರು ಉತ್ತರಕಾಶಿಯಿಂದ ಗಂಗೋತ್ರಿಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದರು. ಆ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಬಳಿಕ ನಮಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ದಂಪತಿಯ ಸಂಬಂಧಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ

    10 ದಿನಗಳ ಉತ್ತರಾಖಂಡ ಪ್ರವಾಸವನ್ನು ಏರ್ಪಡಿಸಿದ ಹರಿದ್ವಾರ ಮೂಲದ ಟ್ರಾವೆಲ್ ಏಜೆನ್ಸಿ ಕೂಡ ಪ್ರವಾಸಿಗರ ಕುರಿತು ಯಾವುದೇ ಅಪ್ಡೇಟ್ ಕೊಟ್ಟಿಲ್ಲ. ಅವರ ಫೋನ್‌ಗಳಲ್ಲಿ ಈಗ ಬ್ಯಾಟರಿ ಖಾಲಿಯಾಗಿರಬಹುದು. ಪ್ರಸ್ತುತ ಆ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲ ಎಂದು ಸಂಬಂಧಿ ತಿಳಿಸಿದ್ದಾರೆ. ಇದನ್ನೂ ಓದಿ: ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ

    ಉತ್ತರಕಾಶಿಯ ಧರಾಲೀಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವನ್ನ ಭಾರತೀಯ ಸೇನೆ, ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಆರಂಭಿಸಿವೆ. ಭಾರೀ ಮಳೆಯ ನಡುವೆಯೂ 150 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 150ಕ್ಕೂ ಹೆಚ್ಚುಮಂದಿಯನ್ನು ಪ್ರವಾಹಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ. ಅಲ್ಲದೇ ಪ್ರವಾಹದಿಂದಾಗಿ ಈವರೆಗೆ ಐವರು ಸಾವನ್ನಪ್ಪಿರುವುದು ದೃಢವಾಗಿದೆ. ಐವರ ಮೃಹದೇಹಗಳನ್ನೂ ಹೊರತೆಗೆಯಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್

  • ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

    ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

    – ʻದಿ ಕೇರಳ ಸ್ಟೋರಿʼ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ; ಕೇರಳ ಸಿಎಂ ಖಂಡನೆ

    ತಿರುವನಂತಪುರ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇಡೀ ದೇಶಾದ್ಯಂತ ಭಾರೀ ವಿವಾದ ಹುಟ್ಟುಹಾಕಿದ್ದ ʻದಿ ಕೇರಳ ಸ್ಟೋರಿʼ (The Kerala Story) ಸಿನಿಮಾದ ಸುದಿತ್ತೋ ಸೇನ್ ಅವರಿಗೆ ʻಅತ್ಯುತ್ತಮ ನಿರ್ದೇಶಕ ಪ್ರಶಸ್ತಿʼ ಹಾಗೂ ʻBest Cinematographyʼ ಪ್ರಶಸ್ತಿ ನೀಡಿರುವುದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ಮಾತನಾಡಿರುವ ವಿಜಯನ್‌ (Pinarayi Vijayan), ಕೋಮುವಾದ ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಯತ್ನಿಸಿದ್ದ ಸಿನಿಮಾವನ್ನ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ, ರಾಷ್ಟ್ರೀಯ ಸಮಗ್ರತೆ ಮತ್ತು ಕೋಮು ಸಾಮರಸ್ಯಕ್ಕೆ ಹೆಸರಾದ ಭಾರತೀಯ ಸಿನಿಮಾ ರಂಗವನ್ನ ತೀರ್ಪುಗಾರರು ಅವಮಾನಿಸಿದ್ದಾರೆ ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: Operation Akhal | ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ

    ‘ದಿ ಕೇರಳ ಸ್ಟೋರಿ’ ಸಿನಿಮಾ 2023ರಲ್ಲಿ ತೆರೆಕಂಡಿತ್ತು. ರಾಜ್ಯದ ಸುಮಾರು 32,000 ಮಹಿಳೆಯರನ್ನು ಮತಾಂತರಗೊಳಿಸಿ, ಭಯೋತ್ಪಾದನಾ ಸಂಘಟನೆಗೆ ಸೇರಿಸಲಾಗಿದೆ ಎಂದು ಚಿತ್ರದ ಟೀಸರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಈ ಚಿತ್ರದ ಬೆನ್ನಲ್ಲೇ ಕೇರಳದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ದೇಶಾದ್ಯಂತ ವಿವಾದದ ಅಲೆ ಕೂಡ ಎದ್ದಿತ್ತು. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ – ಡೊನಾಲ್ಡ್‌ ಟ್ರಂಪ್‌

    ಯಾರ‍್ಯಾರಿಗೆ ಪ್ರಶಸ್ತಿ?
    ಅತ್ಯುತ್ತಮ ನಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸೆ
    ಅತ್ಯುತ್ತಮ ನಟಿ: ರಾಣಿ ಮುಖರ್ಜಿ
    ‌ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ: ಜವಾನ್
    ಅತ್ಯುತ್ತಮ ಹಿನ್ನೆಲೆ ಗಾಯಕ: ಬೇಬಿ
    ಅತ್ಯುತ್ತಮ ಪೋಷಕ ನಟಿ: ಉಲ್ಲೊಜೊಕ್ಕು (ಊರ್ವಶಿ), ವಶ್ (ಜಾನಕಿ)
    ಅತ್ಯುತ್ತಮ ಪೋಷಕ ನಟ: ಪೂಕಲಂ (ವಿಜಯರಾಘವನ್),
    ಪಾರ್ಕಿಂಗ್ (ಮುತ್ತುಪೆಟ್ಟೈ)

    ರಾಷ್ಟ್ರೀಯ ಪ್ರಶಸ್ತಿ ಪಡೆದ ಸಿನಿಮಾಗಳಿವು
    ಅನಿಮಲ್ (ಮರು-ರೆಕಾರ್ಡಿಂಗ್ ಮಿಕ್ಸರ್) – ಎಂಆರ್ ರಾಧಾಕೃಷ್ಣನ್
    ತೆಲುಗು ಚಿತ್ರ: ಭಗವಂತ ಕೇಸರಿ
    ಅತ್ಯುತ್ತಮ ತಮಿಳು ಚಿತ್ರ: ಪಾರ್ಕಿಂಗ್
    ಅತ್ಯುತ್ತಮ ಪಂಜಾಬಿ ಚಿತ್ರ: ಗಾಡ್ಡೇ ಗಾಡ್ಡೇ ಚಾ
    ಅತ್ಯುತ್ತಮ ಒಡಿಯಾ ಚಿತ್ರ: ಪುಷ್ಕರ
    ಅತ್ಯುತ್ತಮ ಮರಾಠಿ ಚಿತ್ರ: ಶ್ಯಾಮ್ಚಿ ಆಯಿ
    ಮಲಯಾಳಂ ಚಿತ್ರ: ಉಲ್ಲೋಜೋಕ್ಕು
    ಕನ್ನಡ ಚಿತ್ರ: ಕಂದೀಲು: ಭರವಸೆಯ ಕಿರಣ
    ಅತ್ಯುತ್ತಮ ಹಿಂದಿ ಚಿತ್ರ: ಕಥಲ್: ಎ ಜಾಕ್‌ಫ್ರೂಟ್ ಆಫ್ ಮಿಸ್ಟರಿ, ಗುಜರಾತಿ ಚಿತ್ರ: ವಾಶ್
    ಅತ್ಯುತ್ತಮ ಬಂಗಾಳಿ ಚಿತ್ರ: ಡೀಪ್ ಫ್ರಿಡ್ಜ್
    ಅತ್ಯುತ್ತಮ ಅಸ್ಸಾಮಿ ಚಿತ್ರ: ರಂಗತಪು 1982
    ಅತ್ಯುತ್ತಮ ಸಾಹಸ ನಿರ್ದೇಶನ: ಹನು-ಮಾನ್ (ತೆಲುಗು)
    ಅತ್ಯುತ್ತಮ ನೃತ್ಯ ಸಂಯೋಜನೆ: ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ
    ಅತ್ಯುತ್ತಮ ಸಾಹಿತ್ಯ: ಬಳಗಂ
    ಅತ್ಯುತ್ತಮ ಸಂಗೀತ ನಿರ್ದೇಶನ: ವಾತಿ (ತಮಿಳು)- ಹಾಡುಗಳು
    ಅತ್ಯುತ್ತಮ ಮೇಕಪ್, ಕಾಸ್ಟ್ಯೂಮ್ ಡಿಸೈನರ್: ಸ್ಯಾಮ್ ಬಹದ್ದೂರ್
    ಅತ್ಯುತ್ತಮ ನಿರ್ಮಾಣ ವಿನ್ಯಾಸಕಾರ: 2018- ಎವೆರಿವನ್‌ ಇಸ್‌ ಎ ಹೀರೋ (ಮಲಯಾಳಂ)
    ಅತ್ಯುತ್ತಮ ಸಂಕಲನ: ಪೂಕಲಂ (ಮಲಯಾಳಂ) ಅತ್ಯುತ್ತಮ ಧ್ವನಿ ವಿನ್ಯಾಸ: ಅನಿಮಲ್
    ಅತ್ಯುತ್ತಮ ಛಾಯಾಗ್ರಹಣ: ಕೇರಳ ಕಥೆ (ಹಿಂದಿ)

    ನಾನ್ ಫೀಚರ್ ಫಿಲ್ಮ್ ವಿಭಾಗ
    ನೇಕಲ್ – ಮಲಯಾಳಂ
    ದಿ ಸೀ ಆ್ಯಂಡ್‌ ಸೆವೆನ್‌ ವಿಲೇಜಸ್‌ – ಒಡಿಸ್ಸಿ
    ಸನ್‌ಫ್ಲವರ್‌ ವೇರ್ ದ ಫಸ್ಟ್ ಒನ್ಸ್ ಟು ನೊ – ಚಿದಾನಂದ ನಾಯ್ಕ್ (ಸ್ಕ್ರಿಪ್ಟ್ ರೈಟರ್)

  • ಮತಾಂತರ ಕೇಸ್;‌ ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು ನೀಡಲ್ಲ ಎಂದ ಕೋರ್ಟ್‌

    ಮತಾಂತರ ಕೇಸ್;‌ ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು ನೀಡಲ್ಲ ಎಂದ ಕೋರ್ಟ್‌

    – ಸನ್ಯಾಸಿನಿಯರ ಬಿಡುಗಡೆಗೆ ಪ್ರಿಯಾಂಕಾ ಗಾಂಧಿ ಸೇರಿ ಅನೇಕರಿಂದ ಒತ್ತಾಯ

    ರಾಯ್ಪುರ: ಮಾನವ ಕಳ್ಳಸಾಗಣೆ ಮತ್ತು ಬಲವಂತದ ಧಾರ್ಮಿಕ ಮತಾಂತರದ (Religious Conversion) ಆರೋಪದ ಮೇಲೆ ದುರ್ಗ್‌ನಲ್ಲಿ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಇಬ್ಬರು ಸನ್ಯಾಸಿನಿಯರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಛತ್ತೀಸ್‌ಗಢದ ನ್ಯಾಯಾಲಯ (Chhattisgarh Court) ನಿರಾಕರಿಸಿದೆ.

    ಮಾನವ ಕಳ್ಳಸಾಗಣೆ ಆರೋಪಗಳು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಾಯ್ದೆಯಡಿಯಲ್ಲಿ ಬರುವುದರಿಂದ ಅದು ನ್ಯಾಯವ್ಯಾಪ್ತಿಯ ಕೊರತೆಯನ್ನು ಗಮನಿಸಿದೆ. ಸನ್ಯಾಸಿನಿಯರು ಬಿಲಾಸ್‌ಪುರದ ಎನ್‌ಐಎ ನ್ಯಾಯಾಲಯವನ್ನು ಸಂಪರ್ಕಿಸಬೇಕು. ಸನ್ಯಾಸಿನಿಯರಾದ ಸಿಸ್ಟರ್ ಪ್ರೀತಾ ಮೇರಿ ಮತ್ತು ವಂದನಾ ಫ್ರಾನ್ಸಿಸ್ ನ್ಯಾಯಾಂಗ ಬಂಧನದಲ್ಲಿಯೇ ಇರುತ್ತಾರೆ ಎಂದು ದುರ್ಗ್‌ನ ಸೆಷನ್ಸ್ ನ್ಯಾಯಾಲಯವು ತಿಳಿಸಿದೆ. ಇದನ್ನೂ ಓದಿ: ಇನ್ನು ಮುಂದೆ ಅರಣ್ಯದಲ್ಲಿ ಮರ ಕಡಿದ್ರೂ ಗೊತ್ತಾಗುತ್ತೆ – ನಿಸಾರ್‌ ಉಡಾವಣೆ ಯಶಸ್ವಿ

    ಸ್ಥಳೀಯ ಬಜರಂಗದಳ ಸದಸ್ಯ ರವಿ ನಿಗಮ್ ನೀಡಿದ ದೂರಿನ ಮೇರೆಗೆ ಜು.25 ರಂದು ದುರ್ಗ್ ರೈಲು ನಿಲ್ದಾಣದಲ್ಲಿ ಸನ್ಯಾಸಿನಿಯರನ್ನು ಬಂಧಿಸಲಾಯಿತು. ಇದು, ಕೇರಳದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿತು. ದೆಹಲಿಯಲ್ಲೂ ಇದರ ಪರಿಣಾಮ ಕಂಡುಬಂದಿದೆ. ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ, ವಿರೋಧ ಪಕ್ಷ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ, ಕ್ರಿಶ್ಚಿಯನ್ ಸಮುದಾಯ ಮತ್ತು ಚರ್ಚ್ ನಾಯಕರು ಹಾಗೂ ರಾಜ್ಯ ಬಿಜೆಪಿ ಈ ಬಂಧನವನ್ನು ಖಂಡಿಸಿವೆ. ಸನ್ಯಾಸಿನಿಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿವೆ.

    ನಾರಾಯಣಪುರ ಜಿಲ್ಲೆಯಿಂದ ಆಗ್ರಾಕ್ಕೆ ಮೂವರು ಬುಡಕಟ್ಟು ಮಹಿಳೆಯರೊಂದಿಗೆ ಸನ್ಯಾಸಿಗಳು ಹೋಗುತ್ತಿದ್ದರು. ಅಲ್ಲಿ ಅವರಿಗೆ ಫಾತಿಮಾ ಆಸ್ಪತ್ರೆಯಲ್ಲಿ ತರಬೇತಿ ಮತ್ತು ಕೆಲಸ ನೀಡಲಾಗುವುದು ಎಂದು ಹೇಳಲಾಗಿತ್ತು. ಮಹಿಳೆಯರು ಮತ್ತು ಅವರ ಕುಟುಂಬಗಳು ಯಾವುದೇ ಬಲವಂತದ ಧಾರ್ಮಿಕ ಮತಾಂತರ ನಡೆದಿಲ್ಲ ಮತ್ತು ವಯಸ್ಕರಾಗಿ ತಮ್ಮ ಸ್ವಂತ ಇಚ್ಛೆಯಿಂದ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವುದಿಲ್ಲ ಎಂದು ನ್ಯಾಯಾಲಯ ಹೇಳಿರುವುದು, ರಾಜಕೀಯ ಚರ್ಚೆಯನ್ನು ತೀವ್ರಗೊಳಿಸಿದೆ. ಕೇರಳದ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಸನ್ಯಾಸಿನಿಯರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಛತ್ತೀಸ್‌ಗಢ ಸರ್ಕಾರವು ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.