Tag: ಕೇರಳ

  • 3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ

    3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ

    ತಿರುವನಂತಪುರಂ: 3 ವಾರಗಳ ಹಿಂದೆ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯು 42 ವರ್ಷದ ವ್ಯಕ್ತಿಯ ಜೊತೆ ಕೇರಳದ (Kerala) ಪೈವಳಿಕೆಯಲ್ಲಿ (Paivalike) ಶವವಾಗಿ ಪತ್ತೆಯಾಗಿದ್ದಾಳೆ.

    ಭಾನುವಾರ ಕೇರಳದ ಪೈವಳಿಕೆ ಗ್ರಾಮದಲ್ಲಿ 42 ವರ್ಷದ ವ್ಯಕ್ತಿಯ ಜೊತೆಗೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 11 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ ಅರೆಸ್ಟ್‌

    ಪೈವಳಿಕೆ ಗ್ರಾಮದ ಬಾಲಕಿ ಫೆ. 11ರಂದು ನಾಪತ್ತೆಯಾಗಿದ್ದಳು. ಆಕೆಯ ಪತ್ತೆಗೆ ತನಿಖೆ ನಡೆಸಲಾಗುತ್ತಿತ್ತು. ಆಕೆಯ ಪೋಷಕರು, ಅದೇ ಸಮಯದಲ್ಲಿ ನಾಪತ್ತೆಯಾಗಿದ್ದ ನೆರೆಮನೆಯ ಪ್ರದೀಪ್ ಎಂದು ಗುರುತಿಸಲಾದ ವ್ಯಕ್ತಿಯ ವಿರುದ್ಧ ಆರೋಪಗಳನ್ನು ಹೊರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯ, ಶಿವಶ್ರೀ ರಿಸೆಪ್ಷನ್ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ನವದಂಪತಿಗೆ ಶುಭಹಾರೈಕೆ

    ನಾಪತ್ತೆ ಆದಾಗಿನಿಂದ ಇಬ್ಬರ ಮೊಬೈಲ್ ಫೋನ್‌ಗಳು ಸ್ವಿಚ್‌ಆಫ್ ಆಗಿದ್ದವು. ಭಾನುವಾರ 52 ಮಂದಿಯಿದ್ದ ಪೊಲೀಸ್ ತಂಡಗಳು ವ್ಯಾಪಕವಾಗಿ ಹುಡುಕಾಟ ನಡೆಸಿದವು. ನೆರೆಮನೆಯ ಪ್ರದೀಪ್ ಹಾಗೂ ಬಾಲಕಿಯ ಮೃತದೇಹವು ಆಕೆಯ ಮನೆಯ ಸಮೀಪವಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಹಾಸನ| ಪಾಳು ಬಿದ್ದಿದ್ದ ಕಟ್ಟಡ ಕುಸಿತ – ಬೀದಿಬದಿ ವ್ಯಾಪಾರ ಮಾಡ್ತಿದ್ದ ನಾಲ್ವರು ದುರ್ಮರಣ

    ಕುಂಬ್ಳೆ ಪೊಲೀಸ್ ಠಾಣೆಯಲ್ಲಿ ಇಬ್ಬರ ನಾಪತ್ತೆ ಪ್ರಕರಣ ದಾಖಲಾಗಿತ್ತು.

  • ರಕ್ತ ಚರಿತ್ರೆ – ಸೈಕೋ ಹಂತಕರ ಲೋಕದಲ್ಲಿ…..!

    ರಕ್ತ ಚರಿತ್ರೆ – ಸೈಕೋ ಹಂತಕರ ಲೋಕದಲ್ಲಿ…..!

    ಕೆಲ ದಿನಗಳ ಹಿಂದೆಯಷ್ಟೇ ತಮಿಳಿನಲ್ಲಿ ಇರೈವನ್‌ ಎಂಬ ಸಿನಿಮಾ ತೆರೆ ಕಂಡಿತ್ತು. ಜಯಂ ರವಿ ನಾಯಕನಾಗಿ, ರಾಹುಲ್‌ ಬೋಸ್‌ ಖಳನಾಯಕನಾಗಿ ನಟಿಸಿರುವ ಈ ಚಿತ್ರ ಯುವತಿಯರಿಗೆ ಮೈನಡುಗಿಸುವಂತಿತ್ತು. ಈ ಸಿನಿಮಾದಲ್ಲಿ ಮದುವೆಯಾಗದ ಯುವತಿಯರನ್ನ ಕಿಡ್ನ್ಯಾಪ್‌ ಮಾಡಿ ಕ್ರೂರವಾಗಿ ಕೊಲ್ಲುವ ವ್ಯಕ್ತಿ, ಅವರ ಚೀರಾಟ.. ಕೂಗಾಟ… ನರಳಾಟ ಕಂಡು-ಕೇಳಿ ಆನಂದಿಸುತ್ತಾನೆ. ಅಬ್ಬಬ್ಬಾ… ತೆರೆಯ ಮೇಲೆ ಕಾಣುವ ಈ ಸಿನಿಮಾ ನೋಡಿದ್ರೆನೇ ಮೈ ನಡುಗುತ್ತೆ ಅಂದ್ಮೇಲೆ ನಿಜ ಜೀವದಲ್ಲಿ ನಡೆದ್ರೆ ಹೇಗಿರುತ್ತೆ? ಒಂದು ಕ್ಷಣ ಊಹೆಗೂ ನಿಲುಕದು. ಇತ್ತೀಚಿಗೆ ಅಂತಹದ್ದೇ ಒಂದು ಹತ್ಯೆ ಕೇರಳದಲ್ಲಿ ನಡೆಯಿತು.. ಆದ್ರೆ ಇಲ್ಲಿ ಸೈಕೋ ಹಂತಕ ಕೊಂದಿದ್ದು ಯುವತಿಯರನ್ನಲ್ಲ.. ತನ್ನ ಕುಟುಂಬದ ಐವರನ್ನ.. ಈ ರೋಚಕ ಕಥೆ ಬಗ್ಗೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ರಕ್ತ ಸಿಕ್ತ ಕಥೆ ಶುರುವಾಗಿದ್ದೇ ಇಲ್ಲಿಂದ…
    ಫೆ.24ರಂದು ಸಂಜೆ ಸರಿಯಾಗಿ 6:15 ಆಗಿತ್ತು, ಕತ್ತಲು ಆವರಿಸಲು ಇನ್ನೊಂದು ಅರ್ಧಗಂಟೆಯಷ್ಟೇ ಬಾಕಿಯಿತ್ತು. ಅಷ್ಟರಲ್ಲಿ ಯುವಕನೊಬ್ಬ ತಿರುವನಂತಪುರಂನಲ್ಲಿರುವ ವೆಂಜರಮುಡು ಪೊಲೀಸ್ ಠಾಣೆಗೆ ಬಂದವನೇ ಸರ್..‌ ನಾನು 6 ಕೊಲೆ ಮಾಡಿದ್ದೇನೆ ಅಂತ ಹೇಳಿದ. ಅವನ ಹೆಸರು ಆಫಾನ್‌ ಒಂದು ಕ್ಷಣ ಚಕಿತರಾದ ಪೊಲೀಸರು ಮುಂದೇನು ಅಂತ ಯೋಚಿಸುವ ಮೊದಲೇ ಈ 6 ಕೊಲೆಗಳನ್ನು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯೊಳಗೆ ಮಾಡಿದ್ದೇನೆ, ನನ್ನ ಮನೆ ಪೊಲೀಸ್‌ ಠಾಣೆಗೆ ಹತ್ತಿರದಲ್ಲೇ ಇದೆ, ಅಲ್ಲಿ ಮೂರು ಮೃತದೇಹಗಳು ಬಿದ್ದಿವೆ ಅಂದುಬಿಟ್ಟ. ಕೂಡಲೇ ಅವನನ್ನ ಸ್ಟೇಷನ್‌ನಲ್ಲಿ ಕೂರಿಸಿ ತಮ್ಮ ಪೊಲೀಸರ ತಂಡದೊಂದಿಗೆ ಅವು ಹೇಳಿದ ವಿಳಾಸಕ್ಕೆ ದೌಡು ಕಿತ್ತರು. ಕೊನೆಗೆ ಒಂದೊಂದೇ ಶವಗಳನ್ನು ಪತ್ತೆ ಮಾಡಿದರು. ಅವನು ತನ್ನ ಅಮನನ್ನೂ ಸತ್ತಿದಾಳೆಂದು ತಿಳಿದು 6 ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಆದ್ರೆ ಪೊಲೀಸರಿಗೆ ಅಲ್ಲಿ ಸಿಕ್ಕಿದ್ದು, 5 ಶವಗಳು, ಏಕೆಂದರೆ ಸತ್ತಿದ್ದಾಳೆ ಅನ್ನೋ ತನ್ನ ತಾಯಿ ಬದುಕಿಯೇ ಇದ್ದಳು. ಪೊಲೀಸರು ಕಾರಣ ಕೇಳಿದಾಗ ಅನು ಹೇಳಿದ್ದೇ ವಿಚಿತ್ರವಾಗಿತ್ತು… ಕೊರೊನಾಗಿಂತ ಮುಂಚೆ ಎಲ್ಲವೂ ಚೆನ್ನಾಗಿಯೇ ಇತ್ತು. ಆ ನಂತರ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಸಾಲವೂ ಹೆಚ್ಚಾಗಿತ್ತು, ನನ್ನ ಹುಡುಗಿಗೆ ಸ್ವಂತ ಶಕ್ತಿಯಿಂದ ಬದುಕಲು ಆಗುತ್ತಿರಲಿಲ್ಲ. ಅದಕ್ಕಾಗಿ ಕೊಂದುಬಿಟ್ಟೆನೆಂದು ಹೇಳಿದ. ಅವನೆಂತಹ ಸೈಕೋ ಅಂದ್ರೆ ತನ್ನ ಕುಟುಂಬದವರನ್ನೂ ಕೊಂದು ತಾನೂ ವಿಷ ಸೇವಿಸಿ ಬಂದಿದ್ದ.

    ಸುತ್ತಿಗೆ ಹೊಡೆತಕ್ಕೆ ಬಿತ್ತು ಒಂದೊಂದೇ ಹೆಣ…
    ಸಾಮಾನ್ಯವಾಗಿ ಸೈಕೋ ಹಂತಕರು ಯಾವ ಸಂದರ್ಭದಲ್ಲಿ ಹೇಗಿರುತ್ತಾರೆ ಅನ್ನೋದು ಊಹಿಸೋಕು ಸಾಧ್ಯ ಇರಲ್ಲ. ಕೆಲವೊಮ್ಮೆ ಸಭ್ಯಸ್ಥರಂತೆ ಇನ್ನೂ ಕೆಲವೊಮ್ಮೆ ಕ್ರೂರಿಗಳಾಗಿಯೂ ಬದಲಾಗುತ್ತಿರುತ್ತಾರೆ. ಅದೇ ರೀತಿ ನೆರೆಹೊರೆಯವರಿಗೆ ಸಭ್ಯಸ್ಥನಂತೆ ಕಾಣುತ್ತಿದ್ದ ಆಫಾನ್, ಆ ದಿನ ಬೆಳಗ್ಗೆ 10.30 ರಿಂದ 12.30ರ ಸುಮಾರು ವೆಂಜರಮೂಡುವಿನ ಪಾಂಗೊಡೆ ಮನೆಯಲ್ಲಿ ಹಾಲ್‌ನಲ್ಲಿ ಕುಳಿತಿದ್ದ ತನ್ನ ʻಸಲ್ಮಾ ಬೀಬಿ’ (74) ಎನ್ನುವ ಅಜ್ಜಿಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ್ದಾನೆ. ನಂತರ ಮಧ್ಯಾಹ್ನ 1.30 ರಿಂದ 4 ಗಂಟೆ ಸುಮಾರು ಪಾಂಗೊಡೆಯಿಂದ 17 ಕಿ.ಮೀ ದೂರದಲ್ಲಿರುವ ಎಸ್.ಎನ್ ಪುರ ಎಂಬಲ್ಲಿಗೆ ತೆರಳಿ ತನ್ನ ಚಿಕ್ಕಪ್ಪ ‘ಲತೀಫ್’ (60) ಮತ್ತು ಚಿಕ್ಕಮ್ಮ ‘ಶಾಹೀದಾ’ (56) ಎನ್ನುವರನ್ನು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದ. ಅಷ್ಟಕ್ಕೆ ಸುಮ್ಮನಾಗದ ಆಫಾನ್ ಶಾಲೆಗೆ ಹೋಗಿದ್ದ ತನ್ನ 14 ವರ್ಷದ ತಮ್ಮ ʻಅಹ್ಸಾನ್‌ʼನ್ನು ಬೈಕ್‌ನಲ್ಲಿ ಕರೆದುಕೊಂಡು ಎಸ್.ಎನ್ ಪುರದಿಂದ 5 ಕಿ.ಮೀ ದೂರ ಇರುವ ಪೆರುಮಾಳ್ ಎಂಬಲ್ಲಿ ತನ್ನ ತಾಯಿ ರೇಷ್ಮಾ (50) ಹಾಗೂ ಗೆಳತಿ ಫರ್ಸಾನಾ (22) ಇದ್ದ ಮನೆಗೆ ಹೋಗಿದ್ದ, ಅದಕ್ಕೂ ಮುನ್ನ ತಮ್ಮನಿಗೆ ಅವನಿಷ್ಠದ ಊಟ ಕೊಡಿಸಿದ್ದ. ಆಗ ಸಂಜೆ 4 ಗಂಟೆ ಸಮಯ. ಮೂವರನ್ನು ಪ್ರತ್ಯೇಕವಾಗಿ ಮಾತನಾಡಿಸುವ ನೆಪದಲ್ಲಿ ಹೋಗಿ, ತನ್ನ ಬಳಿಯಿದ್ದ ಸುತ್ತಿಗೆಯಿಂದ ಹಣೆಗೆ, ತಲೆಗೆ ರಪ್ಪ ರಪ್ಪನೆ ಹಲವು ಬಾರಿ ಜೋರಾಗಿ ಹೊಡೆದಿದ್ದಾನೆ. ಒಂದೇ ಏಟಿಗೆ ತಮ್ಮ ಆಫ್ರಾನ್ ಮತ್ತು ಗೆಳತಿ ಫರ್ಸಾನಾ ಮೃತಪಟ್ಟಿದ್ದಾರೆ. ಆ ವೇಳೆ ಹಂತಕ ಅಲ್ಲಿಂದ ಕಾಲ್ಕಿತ್ತಿದ್ದ, ತನ್ನ ತಾಯಿ ಕೂಡ ಸತ್ತಳೆಂದು ಭಾವಿಸಿದ್ದ. ಆದರೆ, ಆತನ ತಾಯಿಯ ಪ್ರಾಣ ಹೋಗಿರಲಿಲ್ಲ. ಕಡೆಗೆ ತನ್ನ ಮನಸ್ಸಿನ ಕ್ರೌರ್ಯವನ್ನು ತಣಿಸಿಕೊಂಡ ಆಫಾನ್ ಅದೇ ದಿನ ರಾತ್ರಿ 8 ಗಂಟೆ ಸುಮಾರು ವೆಂಜರಮೂಡು ಪೊಲೀಸ್‌ ಠಾಣೆಗೆ ಹಾಜರಾಗಿದ್ದ. ಕೂಡಲೇ ಪೊಲೀಸರು ಕ್ರೈಮ್ ಸೀನ್ ಪರಿಶೀಲನೆ ನಡೆಸಿದಾಗ ಆಫಾನ್‌ ಕೃತ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ. ಇದಕ್ಕೂ ಮುನ್ನ ಆತ ಬೇರೆ ಬೇರೆ ವಿಧಾನಗಳನ್ನು ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದ.

    ಹಂತಕ ʻಆಫಾನ್ ಕೊಲೆಗಳನ್ನು ಮಾಡುವ ಮುನ್ನ ಡ್ರಗ್ಸ್ ತೆಗೆದುಕೊಂಡಿದ್ದು ನಂತರವೇ ದೃಢಪಟ್ಟಿತ್ತು. ಆದರೆ, ಯಾವ ಡ್ರಗ್ಸ್ ತೆಗೆದುಕೊಂಡಿದ್ದ ಎಂಬುದು ಇನ್ನೂ ಖಚಿತವಾಗಿಲ್ಲ. ಪೊಲೀಸರಿಗೆ ಶರಣಾದಾಗಲೂ ಅವನ ಮುಖದಲ್ಲಿ ಪಶ್ಚಾತ್ತಾಪದ ಮನೋಭಾವ ಕಂಡಿರಲಿಲ್ಲ. ತನ್ನವರನ್ನೇ ಅತ್ಯಂತ ಭೀಕರವಾಗಿ ಕೊಲೆ ಮಾಡಿದ್ದಾನೆ. ಕೊಲೆಗಳ ಉದ್ದೇಶ ಏನು? ಅಂತ ಕೇಳಿದ್ರೆ ಆತನ ಬಳಿಯಿರುವ ಉತ್ತರ ಆರ್ಥಿಕ ಸಮಸ್ಯೆ. ಆದ್ರೆ ಅಚ್ಚರಿ ಏನು ಗೊತ್ತಾ? ಸ್ಥಳೀಯರನ್ನ ಕೇಳಿದ್ರೆ, ಆತ ತುಂಬಾ ಒಳ್ಳೆಯ ಹುಡುಗನಂತೆ ಕಾಣುತ್ತಿದ್ದ. ಯಾರ ಮನಸ್ಸಿಗೂ ನೋವುಂಟು ಮಾಡಿರಲಿಲ್ಲ. ಏಕೆ ಹೀಗೆ ಮಾಡಿದ? ಎಂಬುದು ಗೊತ್ತಾಗುತ್ತಿಲ್ಲ ಅಂತ ಹೇಳ್ತಾರೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.

    ಕ್ರಿಮಿನಲ್‌ ಮೈಂಡ್‌ ಹಿಂದಿನ ಕಥೆ ಏನು?
    ವಿಜ್ಞಾನ ಲೋಕವೆಂಬುದು ಕುತೂಹಲ, ಬಗೆದಷ್ಟೂ ಆಳ. ಇಲ್ಲಿ ಎಲ್ಲದಕ್ಕೂ ಉತ್ತರ ಸಿಗುವುದಿಲ್ಲ. ಕೆಲವೊಂದು ಅನುಭವಕ್ಕೆ ಬಂದಾಗಷ್ಟೇ ನಂಬಬೇಕಾಗುತ್ತದೆ, ಇಲ್ಲದಿದ್ದರೆ ಅನುಭವಕ್ಕಾಗಿ ಕಾಯಬೇಕಾಗುತ್ತೆ. ಆದಾಗ್ಯೂ ಕೆಲ ಮನೋವಿಜ್ಞಾನಿಗಳು ಮನುಷ್ಯನಲ್ಲಿ ಮಾನಸಿಕ ವಿಕೃತಿಗಳನ್ನು ಕಂಡಾಗ ಅವುಗಳನ್ನು ʻಕ್ರಿಮಿನಲ್‌ ಮೈಂಡ್‌ʼ ಅನ್ನೋ ಪದಗಳಲ್ಲಿ ಗುರುತಿಸಿ ಅಭಿಪ್ರಾಯಗಳನ್ನು ಪ್ರಕಟಿಸಿದ್ದಾರೆ. ʻಕ್ರಿಮಿನಲ್‌ ಮೈಂಡ್‌ʼ ಎಂಬ ಪದವನ್ನು ಮೊದಲಬಾರಿಗೆ 1928ರಲ್ಲಿ ಪರಿಚಯಿಸಲಾಯಿತು. ʻಜರ್ನಲ್‌ ಆಫ್‌ ಅಬ್ನಾರ್ಮಲ್‌ ಅಂಡ್‌ ಸೋಶಿಯಲ್‌ ಸೈಕಾಲಜಿʼ ಎಂಬ ಜರ್ನಲ್‌ನಲ್ಲಿ ಲೇಖನವೂ ಪ್ರಕಟವಾಯಿತು. ʻಕ್ರಿಮಿನಲ್‌ ಮೈಂಡ್‌ʼ ವ್ಯಕ್ತಿಗಳು ಕೇವಲ ಒಬ್ಬಿಬ್ಬರಿಗೆ ಮಾತ್ರವಲ್ಲ ಇಡೀ ಮಾನವ ಕುಲಕ್ಕೆ ಅಪಾಯಕಾರಿ ಎಂದು ಹೇಳಿದ್ದರು. ʻಕ್ರಿಮಿನಲ್‌ ಮೈಂಡ್‌ʼ ಎಂಬ ಪದವು ಸುಮಾರು ನೂರು ವರ್ಷಗಳ ಹಿಂದೆಯೇ ಅಸ್ತಿತ್ವಕ್ಕೆ ಬಂದಿದ್ದರೂ, ಇಂತಹ ಕೇಸ್‌ಗಳು ವಿಜ್ಞಾನ ಲೋಕಕ್ಕೆ ಹಾಗೂ ವಿಜ್ಞಾನಿಗಳಿಗೆ ಸವಾಲಿನದ್ದಾಗಿಯೇ ಇದೆ. ಕೆಲ ವಿಜ್ಞಾನಿಗಳು ಇಂತಹ ಮಾನಸಿಕ ಸ್ಥಿತಿಯುಳ್ಳ ವ್ಯಕ್ತಿಗಳನ್ನು ಮುಂಚಿತವಾಗಿಯೇ ಗುರುತಿಸಬಹುದಾ ಅನ್ನೋ ಪ್ರಯತ್ನಕ್ಕೂ ಮುಂದಾಗಿದ್ದಾರೆ. ಅದಕ್ಕಾಗಿ ಮೆದುಳಿನ ಸ್ಕ್ಯಾನರ್‌ಗಳ ಮೊರೆ ಹೋಗಿದ್ದಾರೆ.

    ತಜ್ಞರ ಪ್ರಕಾರ, ಕೆಲವೇ ಕೆಲವು ಲಕ್ಷಣಗಳನ್ನು ನೋಡಿ ಭವಿಷ್ಯದಲ್ಲಿ ಯಾರೂ ಭಯಾನಕ ಕೊಲೆಗಾರನಾಗಬಹುದು ಅಂತ ನಿರ್ಧರಿಸಲು ಸಾಧ್ಯವಿಲ್ಲ. ಏಕೆಂದರೆ ಅನೇಕ ಸನ್ನಿವೇಶಗಳಲ್ಲಿ ಒಬ್ಬ ವ್ಯಕ್ತಿ ಪ್ರಚೋದನೆಯಿಂದಾಗಿ ತಪ್ಪು ಮಾಡಿರುತ್ತಾನೆ. ಆ ತಪ್ಪನ್ನು ಮುಚ್ಚಿಹಾಕಲು ಮತ್ತೆ ಮತ್ತೆ ತಪ್ಪು ಮಾಡುತ್ತಲೇ ಇರುತ್ತಾನೆ. ಇದನ್ನು ʻಕೋಲ್ಡ್‌ ಬ್ಲಡ್‌ʼ ಎಂದೂ ಸಹ ಕರೆಯುತ್ತಾರೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ.

    ಗಂಟೆಗಳ ಕಾಲ ಬಾಲಕಿ ಶವದ ಮೇಲೆ ಅತ್ಯಾಚಾರ ಎಸಗಿದ್ದ
    ಈ ಹಿಂದೆಯೂ ದೇಶದ ಅನೇಕ ಕಡೆ ಸೈಕೋ ಹಂತಕರು ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಗುಜರಾತ್ ಪೊಲೀಸರು ಹಿಂದೊಮ್ಮೆ ಸೈಕೋ ಕಿಲ್ಲರ್ ಒಬ್ಬನನ್ನ ಬಂಧಿಸಿದ್ದರು. ಆತನ ಹೆಸರು ರಾಹುಲ್ ಸಿಂಗ್ ಜಾಟ್ (29) ಹರಿಯಾಣದ ರೋಹ್ಟಕ್ ನಿವಾಸಿ. ಕ್ರೌರ್ಯದ ಎಲ್ಲಾ ಮಿತಿಗಳನ್ನು ದಾಟಿದ ಆ ಹಂತಕ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡದೇ ಕೊಲ್ಲುತ್ತಿದ್ದ. ಬಾಲಕಿಯೊಬ್ಬಳನ್ನ ಕೊಲೆ ಮಾಡಿ ನಂತರ ಆಕೆಯ ಶವದ ಮೇಲೆ ಗಂಟೆಗಳ ಕಾಲ ಅತ್ಯಾಚಾರವೆಸಗಿದ್ದ. ಪೊಲೀಸರಿಗೆ ಸಿಕ್ಕಿಬಿದ್ದಾಗ.. ಹೌದು.. ನಾನು ಐದು ರಾಜ್ಯಗಳಲ್ಲಿ ಕೊಲೆಗಳನ್ನ ಮಾಡಿದ್ದೇನೆ ಎಂದು ರಾಜಾರೋಷವಾಗಿ ಒಪ್ಪಿಕೊಂಡಿದ್ದ. ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣದಲ್ಲಿ ರೈಲಿನಲ್ಲಿ ಕೊಲೆ ಮಾಡಿದ್ದೇನೆ, ರೈಲಿನಲ್ಲೇ ಅತ್ಯಾಚಾರ ಎಸಗಿದ್ದೇನೆ ಎಂದು ಹಂತಕ ಪೊಲೀಸರಿಗೆ ತಿಳಿಸಿದ್ದ. ಕೊನೆಗೂ ಹರಸಾಹಸ ಪಟ್ಟು ಬಂಧಿಸಿದ ಪೊಲೀಸರು ಜೈಲಿಗಟ್ಟಿದರು.

    ಇಷ್ಟೇ ಅಲ್ಲ ಸುಮಾರು 27 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಹಿಳೆಯರ ಪಾಲಿನ ಆತಂಕವಾದಿ ಸೈಕೋ ಜೈ ಶಂಕರ್, ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಯುವತಿಯನ್ನ ತುಂಡರಿಸಿದ್ದ ರಂಜನ್‌ರಾಯ್‌ ಕೇಸ್‌, ದೆಹಲಿಯ ಶ್ರದ್ಧಾ ವಾಕರ್‌ ಹತ್ಯೆ, ಛತ್ತೀಸ್‍ಗಢದ ರಾಯ್‍ಪುರ್‌ನಲ್ಲಿ ಮಹಿಳಾ ಅಧಿಕಾರಿಯನ್ನು ಕೊಂದು ಆಕೆಯ ಶವದ ಮೇಲೂ ಅತ್ಯಾಚಾರ ಮಾಡಿದ್ದ ಪ್ರಕರಣಗಳು ಸೈಕೋ ಹಂತಕರ ಮನಸ್ಥಿತಿಗೆ ಉದಾಹರಣೆಯಾಗಿದೆ.

    ಒಟ್ಟಿನಲ್ಲಿ ಮನುಷ್ಯ ಹುಟ್ಟಿನಿಂದಲೇ ಸೈಕೋ ಹಂತನಕಾಗುವುದಿಲ್ಲ ಅನ್ನೋದು ತಜ್ಞರ ಅಭಿಪ್ರಾಯ. ಯಾವುದೋ ಒಂದು ವಿಷಯ ಆತನ ಮೇಲೆ ಗಾಢವಾಗಿ ಪರಿಣಾಮ ಬೀರಿದಾಗ ತನ್ನ ಉದ್ದೇಶ ಈಡೇರಿಕೆಗಾಗಿ ತಪ್ಪನ್ನೇ ತನ್ನ ಪಾಲಿಗೆ ಸರಿ ಅಂದುಕೊಳ್ಳುತ್ತಾನೆ.. ಆಗ ಇಂತಹ ಅನಾಹುತಗಳಾಗುತ್ತವೆ ಎಂದು ಮನೋವೈದ್ಯರು ಹೇಳಿದ್ದಾರೆ.

  • ಅನೈತಿಕ ಸಂಬಂಧ ಶಂಕೆ – ಪತ್ನಿ, ಸ್ನೇಹಿತನನ್ನು ಕಡಿದು ಹಾಕಿದ ಪತಿ

    ಅನೈತಿಕ ಸಂಬಂಧ ಶಂಕೆ – ಪತ್ನಿ, ಸ್ನೇಹಿತನನ್ನು ಕಡಿದು ಹಾಕಿದ ಪತಿ

    ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಪತ್ನಿ (Wife) ಮತ್ತು ಆಕೆಯ ಸ್ನೇಹಿತನ ನಡುವೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದಿಂದ ಇಬ್ಬರನ್ನೂ ಹತ್ಯೆಗೈದ ಘಟನೆ ಕೇರಳದ (Kerala) ಪತ್ತನಂತಿಟ್ಟ ಜಿಲ್ಲೆಯ ಕಲಂಜೂರು ಗ್ರಾಮದಲ್ಲಿ ನಡೆದಿದೆ.

    ಹತ್ಯೆಗೀಡಾದವರನ್ನು ವೈಷ್ಣವಿ ಮತ್ತು ವಿಷ್ಣು ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಬೈಜು ಎಂದು ಗುರುತಿಸಲಾಗಿದೆ. ಪತ್ನಿ ಹಾಗೂ ಆಕೆಯ ಸ್ನೇಹಿತನ ನಡುವೆ ಮೊಬೈಲ್‌ನಲ್ಲಿ ನಡೆದ ಚಾಟಿಂಗ್‌ನ್ನು ನೋಡಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

    ಭಾನುವಾರ ರಾತ್ರಿ ಬೈಜು ಮತ್ತು ವೈಷ್ಣವಿ ನಡುವೆ ಜಗಳ ನಡೆದಿದ್ದು, ಆಕೆಯ ಮೇಲೆ ಹಲ್ಲೆ ಮಾಡಲು ಆರೋಪಿ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ವಿಷ್ಣುವಿನ ಮನೆಗೆ ಓಡಿಹೋಗಿದ್ದಳು. ಬಳಿಕ ಅವಳನ್ನು ಬೆನ್ನಟ್ಟಿ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಳು. ನಂತರ ಬೈಜು, ವಿಷ್ಣುವಿನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆತ ಸಾವನ್ನಪ್ಪಿದ್ದ.

    ಸ್ಥಳೀಯ ಕೂಡಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಜುನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಅಕ್ರಮವಾಗಿ ಇಸ್ರೇಲ್‌ ಪ್ರವೇಶಿಸಲು ಯತ್ನಿಸಿದ್ದ ಕೇರಳದ ವ್ಯಕ್ತಿ ಗುಂಡಿಗೆ ಬಲಿ

    ಅಕ್ರಮವಾಗಿ ಇಸ್ರೇಲ್‌ ಪ್ರವೇಶಿಸಲು ಯತ್ನಿಸಿದ್ದ ಕೇರಳದ ವ್ಯಕ್ತಿ ಗುಂಡಿಗೆ ಬಲಿ

    ತಿರುನಂತಪುರಂ: ಜೋರ್ಡಾನ್‌ ಮೂಲಕ ಅಕ್ರಮವಾಗಿ ಇಸ್ರೇಲ್‌ (Israel) ಪ್ರವೇಶಿಸಲು ಯತ್ನಿಸಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬ ಜೋರ್ಡಾನ್‌ ಸೈನಿಕರ (Jordanian soldiers) ಗುಂಡಿಗೆ ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಥಾಮಸ್ ಗೇಬ್ರಿಯಲ್ ಪೆರೆರಾ (47) ಜೋರ್ಡಾನ್‌ ಸೈನಿಕರ ಗುಂಡಿಗೆ ಬಲಿಯಾದ ವ್ಯಕ್ತಿ. ಗಡಿ ದಾಟಿ ಇಸ್ರೇಲ್‌ಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿರುವಾಗ ಹತ್ಯೆಯಾಗಿದ್ದಾನೆ ಎಂದು ವರದಿಗಳು ತಿಳಿಸಿವೆ.

    ಕೇರಳದ (Kerala) ಥಂಬಾ ನಿವಾಸಿಯಾದ ಪೆರೆರಾ ಸಂದರ್ಶಕ ವೀಸಾದಲ್ಲಿ ಜೋರ್ಡಾನ್‌ಗೆ ತೆರಳಿದ್ದ. ಅಲ್ಲಿಂದಲೇ ಗಡಿ ದಾಟಿ ಇಸ್ರೇಲ್‌ ಪ್ರವೇಶಿಸಲು ಯತ್ನಿಸಿದಾಗ ಗುಂಡಿಗೆ ಬಲಿಯಾಗಿದ್ದಾನೆ. ಸದ್ಯ ಈ ಮಾಹಿತಿಯನ್ನು ಮೃತರ ಕುಟುಂಬಸ್ಥರಿಗೆ ತಿಳಿಸಿರುವ ಭಾರತೀಯ ರಾಯಭಾರ ಕಚೇರಿ ಜೋರ್ಡಾನ್‌ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿದೆ. ಸದ್ಯದಲ್ಲೇ ಮೃತದೇಹವನ್ನು ಪರಿಶೀಲಿಸಲು ತೆರಳಲಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

    ಪೆರೆರಾ ಜೊತೆಗೆ ಆತನ ಸ್ನೇಹಿತ (ಮೇನಮ್‌ಕುಲಂ ನಿವಾಸಿ) ಕೂಡ ಇಸ್ರೇಲ್‌ ಗಡಿ ದಾಟಲು ಪ್ರಯತ್ನಿಸಿದ್ದ. ಈ ವೇಳೆ ಭದ್ರತಾ ಪಡೆಗಳು ಎಚ್ಚರಿಕೆ ನೀಡಿದವು. ಆದ್ರೆ ಅವರು ಭದ್ರತಾ ಸಿಬ್ಬಂದಿಯ ಮೇಲೆಯೇ ಗುಂಡು ಹಾರಿಸಲು ಮುಂದಾದರು. ಆದ್ದರಿಂದ ಅನಿವಾರ್ಯವಾಗಿ ಗುಂಡುಹಾರಿಸಬೇಕಾಯಿತು ಜೋರ್ಡಾನ್‌ ಸೇನೆ ತಿಳಿಸಿರುವುದಾಗಿ ಭಾರತೀಯ ರಾಯಭಾರ ಕಚೇರಿ ಹೇಳಿದೆ.

    ಈ ನಡುವೆ ಪೆರೆರಾ ಮೃತದೇಹವನ್ನ ಮನೆಗೆ ತರಲು ಸಹಾಯ ಮಾಡುವಂತೆ ಕುಟುಂಬವು ರಾಯಭಾರ ಕಚೇರಿ ಅಧಿಕಾರಿಗಳಿಗೆ ಮನವಿ ಮಾಡಿದೆ.

  • ಉಡುಪಿಯಲ್ಲಿ ದುಬೈ ಕಾರುಗಳ ಕರ್ಕಶ ಶಬ್ದ – ಮಣಿಪಾಲ ಪೊಲೀಸರಿಂದ ದಂಡ

    ಉಡುಪಿಯಲ್ಲಿ ದುಬೈ ಕಾರುಗಳ ಕರ್ಕಶ ಶಬ್ದ – ಮಣಿಪಾಲ ಪೊಲೀಸರಿಂದ ದಂಡ

    ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿಯ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ (Manipal) ಪೊಲೀಸರು, 1,500 ರೂ. ದಂಡ ವಿಧಿಸಿದ್ದಾರೆ.

    ದುಬೈನಲ್ಲಿ (Dubai) ವಾಸವಿರುವ ಕೇರಳ ಮೂಲದ ಸುಲೈಮನ್ ಮೊಹಮ್ಮದ್ (29), ಮೊಹಮ್ಮದ್ ಶರೀಫ್ (27) ಮತ್ತು ಅಬ್ದುಲ್ ನಜೀರ್ (25) ಎಂಬ ಯುವಕರು ಮಣಿಪಾಲದಲ್ಲಿರುವ ಸ್ನೇಹಿತರ ಆಹ್ವಾನದ ಮೇರೆಗೆ ಡಾಡ್ಜ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ಜಿಲ್ಲಾಧಿಕಾರಿ ರಸ್ತೆಯಲ್ಲಿ ನಿಯಮ ಮೀರಿ ಓಡಾಟ ನಡೆಸಿದ್ದ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ ಶಾಸಕರು ಸಂಪರ್ಕದಲ್ಲಿದ್ದರೆ ಕರ್ಕೊಂಡು ಹೋಗಲಿ ನೋಡೋಣ – ಜಮೀರ್‌ಗೆ ಅಶ್ವಥ್‌ ನಾರಾಯಣ್ ಸವಾಲು

    ಆರು ತಿಂಗಳು ಭಾರತದಲ್ಲಿ ತಿರುಗಾಡಲು ಕಾರುಗಳನ್ನು, ಸಮುದ್ರದ ಮುಖಾಂತರ ಹಡಗಿನಲ್ಲಿ ಆಮದು ಮಾಡಿಕೊಂಡಿದ್ದರು. ದುಬೈ ದೇಶಕ್ಕೆ 30 ಲಕ್ಷ ರೂ. ಹಾಗೂ ಭಾರತಕ್ಕೆ 1 ಕೋಟಿ ರೂ. ಹಣ ಕಟ್ಟಿರುವುದಾಗಿ ಪೊಲೀಸರ ಬಳಿ ಯುವಕರು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೇಯಾ ಘೋಷಾಲ್ ಎಕ್ಸ್‌ ಅಕೌಂಟ್ ಹ್ಯಾಕ್: ಲಿಂಕ್‌ ಕ್ಲಿಕ್‌ ಮಾಡದಂತೆ ಫ್ಯಾನ್ಸ್‌ಗೆ ಗಾಯಕಿ ಎಚ್ಚರಿಕೆ

    ಕಾರುಗಳ ದಾಖಲೆಗಳನ್ನ ಆರ್‌ಟಿಓಗೆ ಕಳುಹಿಸಿದ ಪೊಲೀಸರು, ದುಬೈ ನೋಂದಣಿ ಕಾರು ಓಡಾಟಕ್ಕೆ ಅನುಮತಿ ಇದೆಯೇ ಎಂದು ಪರಿಶೀಲನೆ ನಡೆಸಿದರು. ಕಾರು ಚಲಾಯಿಸುವ ಅನುಮತಿ ಇರುವ ಹಿನ್ನೆಲೆ ಆರ್‌ಟಿಓ ಅನುಮತಿ ಮೇರೆಗೆ ಕರ್ಕಶ ಶಬ್ದ ಮಾಡಿದ 3 ಕಾರುಗಳ ಮೇಲೆ 1,500 ರೂ. ಫೈನ್ ಹಾಕಿ ಕಳುಹಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಕುಸಿತ – ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು

  • ಕೇರಳ | ವಿದ್ಯಾರ್ಥಿಗಳ ನಡುವೆ ಮಾರಾಮಾರಿ – 10ನೇ ತರಗತಿ ಬಾಲಕ ಸಾವು

    ಕೇರಳ | ವಿದ್ಯಾರ್ಥಿಗಳ ನಡುವೆ ಮಾರಾಮಾರಿ – 10ನೇ ತರಗತಿ ಬಾಲಕ ಸಾವು

    ತಿರುವನಂತಪುರಂ: ಕೇರಳದ (Kerala) ಕೋಝಿಕ್ಕೋಡ್ ಜಿಲ್ಲೆಯ ಖಾಸಗಿ ಟ್ಯೂಷನ್ ಸೆಂಟರ್ ಬಳಿ ನಡೆದ ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯಲ್ಲಿ ಗಾಯಗೊಂಡಿದ್ದ 10ನೇ ತರಗತಿ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

    ಮೃತ ವಿದ್ಯಾರ್ಥಿಯನ್ನು ಮಹಮ್ಮದ್ ಶಹಬಾಸ್ (16) ಎಂದು ಗುರುತಿಸಲಾಗಿದೆ. ಫೆ.23 ರಂದು ಟ್ಯೂಷನ್ ಸೆಂಟರ್‌ನಲ್ಲಿ ನಡೆದ ಬೀಳ್ಕೊಡುಗೆ ಪಾರ್ಟಿಯ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಮಹಮ್ಮದ್‌ ತಲೆಗೆ ತೀವ್ರ ಪೆಟ್ಟಾಗಿತ್ತು. ಆತನಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಾ.1ರ ಮುಂಜಾನೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧ ಕೊಲೆ ಆರೋಪ ಹೊರಿಸಿ, ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿಯವರು, ವಿದ್ಯಾರ್ಥಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಇಲಾಖಾ ತನಿಖೆ ಆರಂಭಿಸುವಂತೆ ಶಿಕ್ಷಣ ನಿರ್ದೇಶಕರಿಗೆ ಆದೇಶಿಸಿದ್ದಾರೆ.

    ಫೆ.23ರಂದು ಮಹಮ್ಮದ್ ಶಹಬಾಸ್ ಸೇರಿದಂತೆ ಸುಮಾರು 15 ವಿದ್ಯಾರ್ಥಿಗಳ ಗುಂಪು ಹಾಗೂ ಇನ್ನೊಂದು ಗುಂಪಿನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗಲಾಟೆ ನಡೆದಿತ್ತು. ಆರಂಭದಲ್ಲಿ, ಶಹಬಾಸ್ ಗಂಭೀರ ಗಾಯಗೊಂಡಂತೆ ಕಾಣಲಿಲ್ಲ. ಆತನನ್ನು ತಾಮರಶ್ಶೇರಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಮನೆಗೆ ಹಿಂದಿರುಗಿದ ನಂತರ, ಅವನ ಸ್ಥಿತಿ ಹದಗೆಟ್ಟು ಕೋಮಾಕ್ಕೆ ಜಾರಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

  • ಕೇರಳ| ಲವ್ವರ್, ಕುಟುಂಬದ ಐವರನ್ನು ಹತ್ಯೆ ಮಾಡಿದ ವ್ಯಕ್ತಿ – ತಾಯಿ ಸ್ಥಿತಿ ಗಂಭೀರ

    ಕೇರಳ| ಲವ್ವರ್, ಕುಟುಂಬದ ಐವರನ್ನು ಹತ್ಯೆ ಮಾಡಿದ ವ್ಯಕ್ತಿ – ತಾಯಿ ಸ್ಥಿತಿ ಗಂಭೀರ

    – ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

    ತಿರುವನಂತಪುರಂ: ಕೇರಳದಲ್ಲಿ (Kerala) ಯುವಕನೊಬ್ಬ ಪ್ರೇಯಸಿ (Lover) ಹಾಗೂ ತನ್ನ ಕುಟುಂಬದ ಐವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

    23 ವರ್ಷದ ಯುವಕ ತನ್ನ 13 ವರ್ಷದ ಸಹೋದರ, 80 ವರ್ಷದ ಅಜ್ಜಿ ಮತ್ತು ಪ್ರೇಯಸಿ ಸೇರಿ 6 ಜನರನ್ನು ಕೊಂದು ಪೊಲೀಸರಿಗೆ ಶರಣಾಗಿರುವ ಘಟನೆ ತಿರುವನಂತಪುರಂನ (Thiruvananthapuram) ವೆಂಜರಮೂಡುವಿನಲ್ಲಿ ನಡೆದಿದೆ. ಇದನ್ನೂ ಓದಿ: Maha Kumbh Mela: ಮಹಾಶಿವರಾತ್ರಿಯಂದು ಕಡೆಯ ಅಮೃತಸ್ನಾನಕ್ಕೆ ಜಿಲ್ಲಾಡಳಿತ ಸಜ್ಜು

    ಆರೋಪಿ ಅಫಾನ್ ವಿಷ ಸೇವಿಸಿ ಬಂದು ಠಾಣೆಯಲ್ಲಿ ತಪ್ಪೊಪ್ಪಿಕೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧದ ಮುಡಾ ಹಗರಣ – ಆಗಿನ ಮೈಸೂರು ಡಿಸಿ, ಹಾಲಿ ಸಂಸದ ಕುಮಾರ್ ನಾಯಕ್ ಲೋಪ

    ಅಫಾನ್ ತನ್ನ ಮನೆಯವರನ್ನು ಕೊಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಹಲ್ಲೆಗೊಳಗಾದ ಐವರು ಸಾವನ್ನಪ್ಪಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಅಫಾನ್ ತಾಯಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ವೈದ್ಯ ಸಾವು

    ವೆಂಜರಮೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಂಗಳೂರಿಗರಿಗೆ ತ್ಯಾಜ್ಯ, ಮೆಡಿಕಲ್ ವೇಸ್ಟ್ ಡಂಪಿಂಗ್‌ – ಕಂಟಕವಾಯ್ತಾ ನೆರೆಯ ಕೇರಳ..?

    ಮಂಗಳೂರಿಗರಿಗೆ ತ್ಯಾಜ್ಯ, ಮೆಡಿಕಲ್ ವೇಸ್ಟ್ ಡಂಪಿಂಗ್‌ – ಕಂಟಕವಾಯ್ತಾ ನೆರೆಯ ಕೇರಳ..?

    – ಕೃತ್ಯಕ್ಕೆ ಮಂಗಳೂರು ಪಾಲಿಕೆ ಅಧಿಕಾರಿಗಳಿಂದಲೇ ಸಾಥ್

    ಮಂಗಳೂರು: ಕೇರಳದ ಕೊಳಚೆ ತ್ಯಾಜ್ಯ ಮಂಗಳೂರಿಗೆ (Mangaluru) ತಂದು ಸುರಿಯಲಾಗುತ್ತಿದ್ದ ವಿಚಾರ ಭಾರೀ ಸುದ್ದಿ ಮಾಡಿತ್ತು. ಆದ್ರೆ ಕೊಳಚೆ ತ್ಯಾಜ್ಯ ಮಾತ್ರ ಸುರಿಯುತ್ತಿರಲಿಲ್ಲ. ಬದಲಾಗಿ, ಬಯೋ ಮೆಡಿಕಲ್ ವೇಸ್ಟ್ (Medical Waste) ಸುರಿಯುತ್ತಿದ್ದರು ಎನ್ನುವ ಆತಂಕಕಾರಿ ಮಾಹಿತಿ ಬಯಲಾಗಿದೆ. ಹೀಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಪಾಲಿಕೆಯ ಸಭೆ ನಡೆಸಿ, ತಡೆಗಟ್ಟಲು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

    ಇತ್ತೀಚೆಗೆ ಕೇರಳದಿಂದ (Kerala) ಕೊಳಚೆ ತ್ಯಾಜ್ಯ ತಂದು ಮಂಗಳೂರಿನ ನದಿ, ಚರಂಡಿಗಳಿಗೆ ಸುರಿಯುತ್ತಿದ್ದ ವಿಚಾರ ಭಾರೀ ಸದ್ದು ಮಾಡಿತ್ತು. ಆದ್ರೀಗ ಕೊಳೆಚೆ ತ್ಯಾಜ್ಯ ಮಾತ್ರವಲ್ಲ, ಬಯೋ ಮೆಡಿಕಲ್ ವೇಸ್ಟ್ ಕೂಡ ಸುರಿಯುತ್ತಿದ್ದರು ಎನ್ನುವ ಆತಂಕಕಾರಿ ಮಾಹಿತಿ ಬಯಲಾಗಿದೆ. ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಮೂವರು ಪಾದಚಾರಿಗಳ ಮೇಲೆ ಹರಿದ ಕಾರು – ಓರ್ವ ಸಾವು

    ಹೌದು. ಅಕ್ರಮವಾಗಿ ಬಯೋ ಮೆಡಿಕಲ್ ವೇಸ್ಟ್ ಕೂಡ ತಂದು ಮಂಗಳೂರಿನ ಸಿಕ್ಕ ಸಿಕ್ಕ ಹಳ್ಳಕ್ಕೆ ಬೀಸಾಕಿ ಹೋಗುತ್ತಿದ್ದರು. ಇದರಿಂದ ಜಲಚರಗಳಿಗೆ ಹಾಗೂ ಜೀವ ರಾಶಿಗಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಮಂಗಳೂರು ನಗರ ಪಾಲಿಕೆ ಸೇರಿದ ಎರಡು ಟ್ಯಾಂಕರ್‌ಗಳು ಕೃತ್ಯದಲ್ಲಿ ಭಾಗಿಯಾಗಿತ್ತು. ಪಾಲಿಕೆ ಅಧಿಕಾರಿಗಳು ಕೃತ್ಯದಲ್ಲಿ ಕೈಜೋಡಿಸಿದ್ರು ಅಂತ ಅಧಿಕಾರಿಗಳ ವಿರುದ್ಧ ಕೇಸ್ ಹಾಕಲಾಗಿದೆ.

    ಈ ಬೆನ್ನಲ್ಲೇ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಹಾ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಬೆಳಗಾವಿಯ 7 ಮಂದಿ ದುರ್ಮರಣ

    https://youtu.be/9aRZwimkiN0?si=1pIJY_bEtIdzMSF8

    ಕೇರಳದಿಂದ ಈ ರೀತಿಯಲ್ಲಿ ಬಯೋ ಮೆಡಿಕಲ್ ವೇಸ್ಟ್ ಸುರಿಯುವ ವಿಚಾರ ಭಾರೀ ಆತಂಕಕಾರಿ.. ಇದರಿಂದ ರೋಗ ರುಜಿನ ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಪಾಲಿಕೆ ಈ ವಿಚಾರ ಗಂಭೀರವಾಗಿ ತೆಗೆದುಕೊಂಡು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಇದನ್ನೂ ಓದಿ: ವ್ಯಕ್ತಿಯೊಬ್ಬನಿಂದ ಕಿರುಕುಳ ಆರೋಪ – ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಆತ್ಮಹತ್ಯೆ

  • ಕೇರಳದಲ್ಲಿ ಅಬಕಾರಿ ಅಧಿಕಾರಿ, ಕುಟುಂಬ ಶವವಾಗಿ ಪತ್ತೆ

    ಕೇರಳದಲ್ಲಿ ಅಬಕಾರಿ ಅಧಿಕಾರಿ, ಕುಟುಂಬ ಶವವಾಗಿ ಪತ್ತೆ

    ತಿರುವನಂತಪುರಂ: ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ (Kerala) ನಡೆದಿದೆ.

    ಮನೀಶ್ ವಿಜಯ್ ಮೃತ ಅಧಿಕಾರಿ. ಮೂಲತಃ ಜಾರ್ಖಂಡ್ (Jharkhand) ಮೂಲದ ಮನೀಶ್ ವಿಜಯ್ ಕುಟುಂಬ ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ಕಕ್ಕನಾಡ್ ಕಸ್ಟಮ್ಸ್ ಕ್ವಾಟ್ರಸ್‌ನಲ್ಲಿ ವಾಸಿಸುತ್ತಿದ್ದರು. ಮನೀಶ್ ವೈಯಕ್ತಿಕ ಕಾರಣಕ್ಕೆ ನಾಲ್ಕು ದಿನಗಳ ರಜೆ ತೆಗೆದುಕೊಂಡಿದ್ದರು. ನಾಲ್ಕು ದಿನ ಕಳೆದ ಬಳಿಕವೂ ಕೆಲಸಕ್ಕೆ ಬಾರದ ಕಾರಣ ಮನೀಶ್ ಅವರ ಸಹೋದ್ಯಗಿಗಳು ಅವರ ಮನೆಗೆ ತೆರಳಿದ ಸಂದರ್ಭ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಸಹೋದ್ಯೋಗಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದು ಆತ್ಮಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ನೇಹಿತನಿಂದಲೇ ಗೆಳತಿ ಮೇಲೆ ಅತ್ಯಾಚಾರ

    ಮನೀಶ್ ಮತ್ತು ಅವರ ಸಹೋದರಿ ಶಾಲಿನಿ ಪ್ರತ್ಯೇಕ ಕೊಠಡಿಗಳಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ತಾಯಿ ಶಕುಂತಲಾ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ತಾಯಿಯನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಹೂವುಗಳಿಂದ ಮುಚ್ಚಲಾಗಿತ್ತು. ಈ ಹಿನ್ನೆಲೆ ತಾಯಿಯನ್ನು ಕೊಂದು ಮಕ್ಕಳಿಬ್ಬರು ನೇಣಿಗೆ ಶರಣಾಗಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ. ಇದನ್ನೂ ಓದಿ: ಬಸ್‌, ಮೆಟ್ರೋ ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ! – ತೆಂಗಿನ ಎಣ್ಣೆ ದರ ದಿಢೀರ್‌ ಏರಿಕೆಯಾಗಿದ್ದು ಯಾಕೆ?

    ಕೊಚ್ಚಿ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ ಮಾತನಾಡಿ, ಮೃತದೇಹಗಳು ಕೊಳೆಯಲು ಪ್ರಾರಂಭಿಸಿವೆ. ವಿಧಿವಿಜ್ಞಾನ ಪರೀಕ್ಷೆಯ ನಂತರವೇ ಅವರು ಯಾವಾಗ ಸತ್ತರು ಎಂದು ಹೇಳಲು ಸಾಧ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: PUBLiC TV Impact; ಸರ್ಕಾರದ ಉಚಿತ ಪುಸ್ತಕಗಳು ಬೀದಿಪಾಲು – ಶಾಲಾ ಮುಖ್ಯೋಪಾಧ್ಯಾಯ ಅಮಾನತು

    ತನಿಖೆ ವೇಳೆ ಕೋಣೆಯಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ಅವರ ಸಹೋದರಿ ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ಸಾವಿನ ಬಗ್ಗೆ ಸಹೋದರಿಗೆ ತಿಳಿಸಬೇಕು ಎಂದು ಬರೆಯಲಾಗಿದೆ. ಸದ್ಯ ಮನೀಶ್ ಅವರ ಸಹೋದರಿ ವಿದೇಶದಿಂದ ಬಂದ ನಂತರ ಶವಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಘಟನೆ ಸಂಬಂಧ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು

    ಮನೀಶ್ ಈ ಹಿಂದೆ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಪ್ರಿವೆಂಟಿವ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಒಂದೂವರೆ ವರ್ಷಗಳ ಹಿಂದೆ ಕೊಚ್ಚಿಗೆ ವರ್ಗಾವಣೆಗೊಂಡರು. ಅವರ ತಾಯಿ ಮತ್ತು ಸಹೋದರಿ ಕೆಲವು ತಿಂಗಳುಗಳಿಂದ ಅವರೊಂದಿಗೆ ನೆಲೆಸಿದ್ದರು. ಪೊಲೀಸರ ಪ್ರಕಾರ, ಶಾಲಿನಿ ಜಾರ್ಖಂಡ್‌ನಲ್ಲಿ ಕಾನೂನು ಪ್ರಕರಣವೊಂದನ್ನು ಎದುರಿಸುತ್ತಿದ್ದರು. ಇದಕ್ಕಾಗಿ ಮನೀಶ್ ಕೆಲಸದಿಂದ ರಜೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಬೌಂಡರಿ ಚಚ್ಚಿ ಆರ್‌ಸಿಬಿ ಗೆಲುವು ಕಸಿದ 16ರ ಹುಡುಗಿ – ಯಾರು ಈ ಕಮಲಿನಿ? ಮುಂಬೈ 1.6 ಕೋಟಿ ನೀಡಿದ್ದು ಯಾಕೆ?

    ಶಾಲಿನಿ 2006ರ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (ಜೆಪಿಎಸ್‌ಸಿ) ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಈ ಹಿನ್ನೆಲೆ ಅವರನ್ನು ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಿಸಲಾಯಿತು ಎಂದು ವರದಿಗಳು ತಿಳಿಸಿವೆ. ನಂತರ ಅವರ ರ‍್ಯಾಂಕ್ ಅನ್ನು ಪ್ರಶ್ನಿಸಿ ರದ್ದುಗೊಳಿಸಲಾಯಿತು. ಇದರಿಂದ ಶಾಲಿನಿ ಅವರನ್ನು ಕೆಲಸದಿಂದ ವಜಾಗೊಳಿಸಲಾಯಿತು. 2024ರಲ್ಲಿ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸುವ ಸಲುವಾಗಿ ವಿಚಾರಣಾ ಪ್ರಕ್ರಿಯೆಗಳು ನಡೆಯುತ್ತಿದ್ದವು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಂಡ್ಯ| ಸರ್ಕಾರಿ ನೌಕರಿ ಕೊಡಿಸುತ್ತೇನೆಂದು ಕೋಟಿ ಕೋಟಿ ವಂಚನೆ

  • Ranji Trophy | 74 ವರ್ಷಗಳ ಬಳಿಕ ಮೈಲುಗಲ್ಲು – ಹೆಲ್ಮೆಟ್‌ನಿಂದ ರಣಜಿ ಫೈನಲ್‌ ತಲುಪಿದ ಕೇರಳ!

    Ranji Trophy | 74 ವರ್ಷಗಳ ಬಳಿಕ ಮೈಲುಗಲ್ಲು – ಹೆಲ್ಮೆಟ್‌ನಿಂದ ರಣಜಿ ಫೈನಲ್‌ ತಲುಪಿದ ಕೇರಳ!

    – 2 ರನ್‌ ಹಿನ್ನಡೆಯಿಂದ ಗುಜರಾತ್‌ಗೆ ನಿರಾಸೆ – ಸೆಮಿಸ್‌ ಪಂದ್ಯ ಡ್ರಾನಲ್ಲಿ ಅಂತ್ಯ

    ಅಹಮದಾಬಾದ್: ರಣಜಿ ಟ್ರೋಫಿ (Ranji Trophy) ಸೆಮಿ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 2 ರನ್‌ಗಳ ಮುನ್ನಡೆ ಸಾಧಿಸಿದ ಕೇರಳ ತಂಡ (Kerala Team) 74 ವರ್ಷಗಳ ನಂತರ ಫೈನಲ್‌ ತಲುಪಿದ ಸಾಧನೆ ಮಾಡಿದೆ. ಕೊನೇ ಕ್ಷಣದಲ್ಲಿ ಹೆಲ್ಮೆಟ್‌ ಸಹಾಯದಿಂದ ಸಿಕ್ಕ ಕ್ಯಾಚ್‌ ಕೇರಳ ತಂಡವನ್ನು ಫೈನಲ್‌ ತಲುಪುವಂತೆ ಮಾಡಿದೆ. ಆದ್ರೆ 2 ರನ್‌ಗಳ ಹಿನ್ನಡೆಯಿಂದಾಗಿ ಗುಜರಾತ್‌ ತಂಡದ (Gujarat team) ಫೈನಲ್‌ ಕನಸು ಭಗ್ನವಾಗಿದೆ.

    ಇನ್ನಿಂಗ್ಸ್‌ ಕೊನೆಯಲ್ಲಿ ಏನಾಯ್ತು?
    ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಸೆಮಿ ಫೈನಲ್‌ ಪಂದ್ಯ ನಡೆಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಕೇರಳ ತಂಡ 187 ಓವರ್‌ಗಳಲ್ಲಿ 457 ರನ್ ಗಳಿಸಿತ್ತು. 174.3 ಓವರ್‌ಗಳಲ್ಲಿ 455 ರನ್‌ ಗಳಿಸಿದ್ದ ಗುಜರಾತ್‌ 9 ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ ಇನ್ನಿಂಗ್ಸ್‌ ಮುನ್ನಡೆ ಕಾಯ್ದುಕೊಳ್ಳಲು ಕೇವಲ 2 ರನ್‌ ಬೇಕಿತ್ತು. ಇತ್ತ ಆದಿತ್ಯ ಸರ್ವತೇ ಬೌಲಿಂಗ್‌ನಲ್ಲಿದ್ದರೆ, ಬ್ಯಾಟರ್‌ ಅರ್ಜಾನ್ ನಾಗ್ವಾಸ್ವಾಲ್ಲಾ ಕ್ರೀಸ್‌ನಲ್ಲಿದ್ದರು. 175ನೇ ಓವರ್‌ನ 4ನೇ ಎಸೆತವನ್ನು ಬೌಂಡರಿ ಬಾರಿಸಲು ಅರ್ಜಾನ್‌ ಯತ್ನಿಸಿದರು. ಈ ವೇಳೆ ಮುಂಭಾಗದಲ್ಲಿದ್ದ ಶಾರ್ಟ್‌ ಲೆಗ್‌ ಫೀಲ್ಡರ್‌ನ ಹೆಲ್ಮೆಟ್‌ಗೆ ಬಡಿದ ಚಂಡು ನೇರವಾಗಿ ಸ್ಲಿಪ್‌ ಫೀಲ್ಡರ್‌ ಕೈ ಸೇರಿತು. ಅಂತಿಮವಾಗಿ ಗುಜರಾತ್‌ 174.4 ಓವರ್‌ಗಳಲ್ಲಿ ಆಲೌಟ್‌ ಆಗಿ ಫೈನಲ್‌ನಿಂದ ಹೊರಗುಳಿಯಿತು.

    ಸೆಮಿಸ್‌ನ 5ನೇ ದಿನವಾದ ಇಂದು ಉಭಯ ತಂಡಗಳಿಗೆ 2ನೇ ಇನ್ನಿಂಗ್ಸ್ ಬಾಕಿಯಿತ್ತು. ತನ್ನ ಸರದಿಯ 2ನೇ ಇನ್ನಿಂಗ್ಸ್‌ ಆರಂಭಿಸಿದ ಕೇರಳ ದಿನದ ಅಂತ್ಯಕ್ಕೆ 46 ಓವರ್‌ಗಳಲ್ಲಿ 4 ವಿಕೆಟ್‌ಗೆ 114 ರನ್‌ ಗಳಿಸಿತ್ತು. ಗುಜರಾತ್‌ಗೆ ಬ್ಯಾಟಿಂಗ್‌ ಮಾಡಲು ಅವಕಾಶ ಸಿಗದೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಹಾಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ 2 ರನ್‌ಗಳ ಮುನ್ನಡೆ ಸಾಧಿಸಿದ ಕೇರಳ ತಂಡ ರಣಜಿ ಫೈನಲ್‌ ಪ್ರವೇಶಿಸಿತು.

    ಸೆಮಿಸ್‌ ಫಲಿತಾಂಶ ನಿರ್ಧಾರವಾಗಿದ್ದು ಹೇಗೆ?
    ಸಹಜವಾಗಿ ರೌಂಡ್ ರಾಬಿನ್ (ಲೀಗ್ ಸುತ್ತಿನ ಪಂದ್ಯ) ಪಂದ್ಯಗಳು 4 ದಿನ ನಡೆಯುತ್ತದೆ. ನಾಕೌಟ್ ಪಂದ್ಯಗಳು ಮಾತ್ರ ಟೆಸ್ಟ್ ಕ್ರಿಕೆಟ್‌ನಂತೆ 5 ದಿನ ಇರಲಿದೆ. ನಾಕೌಟ್ ಪಂದ್ಯದಲ್ಲಿ ಫಲಿತಾಂಶ ಹೊರಬೀಳದಿದ್ದರೆ, ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ ತಂಡವನ್ನು ವಿಜಯಿ ಎಂದು ಘೋಷಣೆ ಮಾಡಲಾಗುತ್ತದೆ. ಹಾಗೆಯೇ ಮೊದಲ ಇನ್ನಿಂಗ್ಸ್‌ನಲ್ಲಿ 2 ರನ್ ಮುನ್ನಡೆ ಸಾಧಿಸಿದ ಕೇರಳ ತಂಡ ಫೈನಲ್ ತಲುಪಲಿದೆ.