Tag: ಕೇರಳ

  • ಕೇರಳ| ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ – ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ

    ಕೇರಳ| ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ – ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ

    ತಿರುವನಂತಪುರಂ: ಕೇರಳ ಪಾಲಕ್ಕಾಡ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್‌ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಲಾರಿ ಹರಿದಿದೆ.

    14 ವರ್ಷ ವಯಸ್ಸಿನ ಇರ್ಫಾನಾ, ಮಿತಾ, ರಿಯಾ ಮತ್ತು ಆಯೇಶಾ ಅಪಘಾತಕ್ಕೆ ಬಲಿಯಾಗಿದ್ದಾರೆ. ಇವರು ಶಾಲೆಯ ಹೊರಗೆ ಬಸ್‌ಗಾಗಿ ಕಾಯುತ್ತಿದ್ದರು.

    ಮಳೆಯ ರಭಸಕ್ಕೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ 8 ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳೂ ಸಾವನ್ನಪ್ಪಿದ್ದಾರೆ.

  • Kerala| ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರು ಗಂಭೀರ

    Kerala| ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರು ಗಂಭೀರ

    ತಿರುವನಂತಪುರಂ: ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ (Kerala) ಅಲಪುಝಾ (Alappuzha) ಜಿಲ್ಲೆಯಲ್ಲಿ ನಡೆದಿದೆ.

    ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕರ್ಲಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಶಿಯಾ-ಸುನ್ನಿಗಳ ನಡುವೆ ಮತ್ತೆ ರಕ್ತಪಾತ – ದಿನ ದಿನಕ್ಕೂ ಏರುತ್ತಿದೆ ಸಾವಿನ ಸಂಖ್ಯೆ!

    ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯ ಒಳಗೆ ಭಾರೀ ಮಳೆಯ ಎಚ್ಚರಿಕೆ

  • ಸದಾ ಫೋನ್‌ನಲ್ಲೇ ಮುಳುಗಿರುತ್ತಿದ್ದಳು, ಸ್ವರ್ಗದಲ್ಲಿ ಒಂದಾಗೋಣ ಅಂತ ಮುಗಿಸಿಬಿಟ್ಟೆ – ಸತ್ಯ ಬಾಯ್ಬಿಟ್ಟ ಆರೋಪಿ

    ಸದಾ ಫೋನ್‌ನಲ್ಲೇ ಮುಳುಗಿರುತ್ತಿದ್ದಳು, ಸ್ವರ್ಗದಲ್ಲಿ ಒಂದಾಗೋಣ ಅಂತ ಮುಗಿಸಿಬಿಟ್ಟೆ – ಸತ್ಯ ಬಾಯ್ಬಿಟ್ಟ ಆರೋಪಿ

    ಬೆಂಗಳೂರು: ಇಂದಿರಾನಗರದ (Indiranagar) ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಪ್ರೇಯಸಿ ಕೊಲೆ ಪ್ರಕರಣದಲ್ಲಿ ರಹಸ್ಯಗಳು ಬಗೆದಷ್ಟೂ ಬಯಲಾಗುತ್ತಿವೆ. ವಿಚಾರಣೆ ವೇಳೆ ಕೊಲೆ ಆರೋಪಿ ಆರವ್‌ ಹನೋಯ್‌ ಹಲವು ವಿಚಾರಗಳನ್ನ ಬಾಯ್ಬಿಟ್ಟಿದ್ದಾನೆ. ಅತಿಯಾಗಿ ಫೋನ್‌ನಲ್ಲಿ ಮುಳುಗಿದ್ದೇ ಕಾರಣ ಎಂದು ಆರೋಪಿ ಒಪ್ಪಿಕೊಂಡಿದ್ದಾನಂತೆ.

    ಕೊಲೆಗೂ ಮುನ್ನ ಆರವ್‌ ಹನೋಯ್‌, ಅಸ್ಸಾಂ ಯುವತಿ ಮಾಯ ಗೊಗಾಯ್‌ಳನ್ನ ಭೇಟಿಯಾಗೋಣ ಅಂತ ಹೊಟೇಲ್‌ಗೆ ಕರೆದಿದ್ದ. ಇಬ್ಬರು ಭೇಟಿಯಾಗಿ 3-4 ದಿನಗಳಾಗಿವೆ ಬಾ ಅಂತಾ ಕರೆದಿದ್ದ. ಕೊನೆಗೆ ತಾನೇ ಹೋಟೆಲ್‌ಗೆ ಕೆರೆದುಕೊಂಡು ಬಂದಿದ್ದ. ಪದೇ ಪದೇ ಫೋನ್‌ ಕರೆಗಳಲ್ಲಿ ಮುಳುಗಿರುತ್ತಿದ್ದ ಮಾಯಾ, ಹೊಟೇಲ್‌ಗೆ ಬಂದ್ರೂ ಅದರಲ್ಲೇ ಮುಳುಗಿದ್ದಳು. ಇದರಿಂದ ಅವಳಿಗೆ ಫೋನ್‌ ಮೇಲೆ ಇರೋ ಆಸಕ್ತಿ ನನ್ನ ಮೇಲಿಲ್ಲ ಅಂದುಕೊಂಡಿದ್ದನಂತೆ. ಇದೇ ವಿಚಾರಕ್ಕೆ ಮಾಯಾಳನ್ನ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ನಿರ್ಧರಿಸಿದ್ದ. ಸ್ವರ್ಗದಲ್ಲಿ ಇಬ್ಬರು ಒಂದಾಗೋಣ ಅಂತಾ ನಿಶ್ಚಯಿಸಿ ಕೊಲೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಈ ಬೆನ್ನಲ್ಲೇ ಪೊಲೀಸರು ಆರೋಪಿ ಪೂರ್ವಪರ ವಿಚಾರಿಸಿದ್ದಾರೆ. ಚಿಕ್ಕಂದಿನಲ್ಲೇ ತಂದೆ-ತಾಯಿ ಕಳೆದುಕೊಂಡಿದ್ದ ಆರವ್‌ ಕೇರಳದ ಕಣ್ಣೂರಿನಲ್ಲಿರುವ ಅಜ್ಜಿ ಮನೆಯಲ್ಲಿ ಬೆಳೆದಿದ್ದ. ಕಳೆದ ಮೇ ತಿಂಗಳಲ್ಲಿ ಬೆಂಗಳೂರಿಗೆ ಬಂದಿದ್ದ. ಇದನ್ನೂ ಓದಿ: ಇಂದಿರಾನಗರ ಕೊಲೆ ಕೇಸ್ – ಪ್ರೇಯಸಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಮನಸ್ಸು ಮಾಡಿದ್ದ ಆರೋಪಿ

    ಬಂದ ಹೊಸದರಲ್ಲಿ ಮಾಯಾ ಪರಿಚಯವಾಗಿದ್ದಳು. ಡೇಟಿಂಗ್‌ ಆಪ್‌ನಲ್ಲಿ ಮಾಯಾ ಪರಿಚಯವಾಗಿದ್ದಳು, ಬಳಿಕ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಆರಂಭದಲ್ಲಿ ತನ್ನನ್ನು ಹೆಚ್ಚು ಅಚ್ಚಿಕೊಂಡಿದ್ದ ಮಾಯಾ ಬಳಿಕ ಫೋನ್‌ನಲ್ಲಿ ಬ್ಯುಸಿಯಾಗಿರುತ್ತಿದ್ದಳು. ಇದರಿಂದ ರೋಸಿಹೋದ ಆರವ್‌ ಆಕೆಯನ್ನು ಕೊಲೆ ಮಾಡಲು ಸ್ಕೆಚ್‌ ಆಗಿದ್ದಾನೆ. ಇದನ್ನೂ ಓದಿ: ಕೂಲ್‌ ಡ್ರಿಂಕ್ಸ್‌ ಕುಡಿಯುತ್ತ ಕುಳಿತಿದ್ದ ರೌಡಿಶೀಟರ್‌ ಮೇಲೆ ಏಕಾಏಕಿ ದಾಳಿ – ಮಾರಕಾಸ್ತ್ರಗಳಿಂದ ಕೊಚ್ಚಿ ಕಗ್ಗೊಲೆ

  • ಕೇರಳದಲ್ಲೂ ಭಾರೀ ಮಳೆ; ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

    ಕೇರಳದಲ್ಲೂ ಭಾರೀ ಮಳೆ; ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

    ತಿರುವನಂತಪುರಂ: ಫೆಂಗಲ್ ಚಂಡಮಾರುತದ (Fengal Cyclone) ಪರಿಣಾಮ ಕೇರಳದಲ್ಲೂ (Kerala) ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ (Sabarimala) ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.

    ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

    ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ರಾಯಚೂರು | ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರ ಇದೆ. ಭಾನುವಾರದಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದೆ. ಅಲ್ಲದೇ ಭೂಕುಸಿತ ಉಂಟಾಗುವ ಸಾಧ್ಯತೆಯಿಂದ ಅರಣ್ಯ ಮಾರ್ಗದಲ್ಲಿ ಕಾಲ್ನಡಿಗೆ ನಿಷೇಧಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರವಾಹ ಉಂಟಾಗುವ ಪ್ರದೇಶದಲ್ಲಿ ನೆಲೆಸಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

  • ಇಂದಿರಾನಗರ ಕೊಲೆ ಕೇಸ್ – ಪ್ರೇಯಸಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಮನಸ್ಸು ಮಾಡಿದ್ದ ಆರೋಪಿ

    ಇಂದಿರಾನಗರ ಕೊಲೆ ಕೇಸ್ – ಪ್ರೇಯಸಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಮನಸ್ಸು ಮಾಡಿದ್ದ ಆರೋಪಿ

    – ಅನುಮಾನಕ್ಕೆ ಪ್ರಿಯತಮೆಯನ್ನು ಕೊಂದ

    ಬೆಂಗಳೂರು: ಇಂದಿರಾನಗರದ (Indiranagar) ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಪ್ರೇಯಸಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಿಯತಮೆಯನ್ನು ಭೀಕರವಾಗಿ ಕೊಂದು ತಲೆಮರಿಸಿಕೊಂಡಿದ್ದ ಪ್ರಿಯಕರನನ್ನು ಇಂದಿರಾನಗರ ಪೊಲೀಸರು ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿ ಕೊಲೆ ಮಾಡಿದ ಬಳಿಕ ರಾಯಚೂರು, ಉತ್ತರ ಪ್ರದೇಶ ಸೇರಿದಂತೆ ಹಲವಡೆ ಸುತ್ತಾಡಿ ಮತ್ತೆ ಬೆಂಗಳೂರಿಗೆ ಬಂದಿದ್ದಾನೆ. ಈ ವೇಳೆ ಪೊಲೀಸರ ಖೆಡ್ಡಾಕ್ಕೆ ಆರವ್ ಬಿದ್ದಿದ್ದಾನೆ. ವಿಚಾರಣೆ ವೇಳೆ ಮಾಯಾ ಕೊಲೆ ರಹಸ್ಯವನ್ನು ಹಂತಕ ರೀವಿಲ್ ಮಾಡಿದ್ದಾನೆ. ಪ್ರೇಯಸಿ ಮರ್ಡರ್ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಲು ಮನಸ್ಸು ಮಾಡಿದ್ದ ಬಗ್ಗೆ ಖಾಕಿ ಮುಂದೆ ಬಾಯ್ಬಿಟ್ಟಿದ್ದಾನೆ.

    ಹಂತಕ ಆರವ್ ಅನಯ್ ವಿಚಾರಣೆ ವೇಳೆ ಕೊಲೆ ಸತ್ಯ ಬಯಲಾಗಿದೆ. ಕೊಲೆಯಾದ ಮಾಯಾ ಗೋಗೋಯ್ ಜಯನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದರು. ಹಂತಕ ಆರವ್ ಜೀವನ ಭೀಮಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬಿಬಿಎ ಪದವೀಧರನಾಗಿದ್ದ ಆರವ್ ಅನೋಯ್‌ಗೆ ಡೇಟಿಂಗ್ ಆಪ್‌ನಲ್ಲಿ ಮಾಯಾ ಪರಿಚಯವಾಗುತ್ತದೆ. ಬಳಿಕ ಅದು ಪ್ರೀತಿಗೆ ತಿರುಗಿತ್ತು. ಮಾಯಾಳನ್ನು ಪ್ರಾಣಕ್ಕಿಂತ ಹೆಚ್ಚು ಆರವ್ ಪ್ರೀತಿ ಮಾಡುತ್ತಿದ್ದ. ಆದರೆ ಇತ್ತೀಚೆಗೆ ಆರವ್‌ಗೆ ಪ್ರಿಯತಮೆ ಮಾಯಾ ಮೇಲೆ ಅನುಮಾನ ಶುರುವಾಗಿತ್ತು. ಮಾಯಾ ಹೆಚ್ಚು ಫೋನ್‌ನಲ್ಲಿ ಮಾತನಾಡುತ್ತಿದ್ದಳಂತೆ. ಹೀಗಾಗಿ ಬೇರೊಂದು ಸಂಬಂಧ ಮಾಯಾಗೆ ಇದೆ ಎಂಬ ಅನುಮಾನ ಆರೋಪಿಯ ನಿದ್ದೆಗೆಡಿಸಿತ್ತು. ಇದೇ ಕಾರಣಕ್ಕೆ ಮಾಯಾಳನ್ನು ಕೊಲೆ ಮಾಡಲು ನಿರ್ಧರಿಸಿ ಸರ್ವಿಸ್ ಅಪಾರ್ಟ್‌ಮೆಂಟ್‌ಗೆ ಕರೆತಂದು ಹತ್ಯೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಳಗಾವಿ | ಯುವಕನ ಎದೆಗೆ ಚಾಕು ಇರಿದು ಬರ್ಬರ ಹತ್ಯೆ – ಐವರ ಮೇಲೆ ಶಂಕೆ

    ಇನ್ನು ಹಂತಕ ಆರವ್ ಅನೋಯ್ ಬದುಕೇ ಒಂದು ಟ್ರಾಜಿಡಿ ಸ್ಟೋರಿ. ಆರವ್‌ಗೆ 5 ತಿಂಗಳಿದ್ದಾಗ ತಂದೆ ಮೃತಪಟ್ಟಿದ್ದರು. ತಂದೆ ಸಾವಿನ ಬಳಿಕ ತಾಯಿ ಎರಡನೇ ವಿವಾಹವಾಗಿದ್ದರು. ಹೀಗಾಗಿ ಚಿಕ್ಕಂದಿನಿಂದಲೇ ಅಜ್ಜನ ಮನೆಯಲ್ಲಿ ಆರವ್ ಬೆಳೆದಿದ್ದ. ಇತ್ತೀಚೆಗೆ ತಾಯಿ ಎರಡನೇ ಪತಿಗೂ ಡಿವೋರ್ಸ್ ನೀಡಿ ಮೂರನೇ ವಿವಾಹವಾಗಿದ್ದರಂತೆ. ಮೂರನೇ ಗಂಡನ ಜೊತೆ ಇರುವ ತಾಯಿಗೆ 5 ತಿಂಗಳ ಮಗು ಇತ್ತು. ಈ ಎಲ್ಲಾ ಬೆಳವಣಿಗೆಯಿಂದ ಆರವ್ ಡಿಸ್ಟರ್ಬ್ ಆಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಹಂತಕನನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ಸಾಧ್ಯತೆ ಇದೆ. ಇದನ್ನೂ ಓದಿ: 93 ವರ್ಷದ ಅಜ್ಜಿಗೆ ಪರೋಲ್ – ಜೈಲಲ್ಲಿ ಅಜ್ಜಿಯ ಪರಿಸ್ಥಿತಿ ಕಂಡು ಮರುಗಿದ್ದ ಉಪಲೋಕಾಯುಕ್ತ

  • ಒಂದೇ ಎನ್‌ಕೌಂಟರ್‌ಗೆ ಕಾಫಿನಾಡ ಕಾಡು ಬಿಟ್ರಾ ನಕ್ಸಲರು? – ಎರಡೇ ತಿಂಗಳಿಗೆ ಕೇರಳಕ್ಕೆ ಎಸ್ಕೇಪ್?

    ಒಂದೇ ಎನ್‌ಕೌಂಟರ್‌ಗೆ ಕಾಫಿನಾಡ ಕಾಡು ಬಿಟ್ರಾ ನಕ್ಸಲರು? – ಎರಡೇ ತಿಂಗಳಿಗೆ ಕೇರಳಕ್ಕೆ ಎಸ್ಕೇಪ್?

    ಚಿಕ್ಕಮಗಳೂರು: ಕೇರಳದಲ್ಲಿ (Kerala) ಉಳಿಯೋದು ಕಷ್ಟ ಎಂದು ಕಾಫಿನಾಡಿಗೆ ಬಂದಿದ್ದ ಕೆಂಪು ಉಗ್ರರು ಒಂದೇ ಒಂದು ಎನ್‌ಕೌಂಟರ್‌ಗೆ ಮತ್ತೆ ಕೇರಳ ಸೇರಿಕೊಂಡಿರುವ ಅನುಮಾನ ಮೂಡಿದೆ.

    ಕಾಫಿನಾಡು-ಕೃಷ್ಣನಗರಿಯಲ್ಲಿ ನಕ್ಸಲರ ಹೆಜ್ಜೆಗುರುತು ಸಿಕ್ಕ 15-20 ದಿನದಲ್ಲೇ ನಕ್ಸಲ್ ನಾಯಕ ವಿಕ್ರಂಗೌಡ (Vikram Gowda) ಎಎನ್‌ಎಫ್ (ANF) ಗುಂಡಿಗೆ ಕಾಡಲ್ಲೇ ಹತನಾದ. ಕಾಫಿನಾಡ ಕಾಡಲ್ಲಿ ಕಣ್ಮರೆಯಾದ ಮುಂಡಗಾರು ಲತಾ ಆ್ಯಂಡ್ ಟೀಂ ಪತ್ತೆಯೇ ಇಲ್ಲ. ಇತ್ತ ಕಾಡಲ್ಲಿ ಓಡಿಹೋದ ವಿಕ್ರಂಗೌಡನ ಜೊತೆಗಿದ್ದ ಸಹಚರರ ಸುಳಿವೂ ಇಲ್ಲ. ಹಾಗಾದರೇ ನಕ್ಸಲರು ಜೀವಭಯದಲ್ಲಿ ಮತ್ತೆ ಕೇರಳ ಸೇರಿಕೊಂಡರಾ ಎಂಬ ಅನುಮಾನ ಬಲವಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಪಾಕ್ ಪ್ರಜೆಗಳ ಬಂಧನ ಕೇಸ್‌ – 1,350ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

    ಕಾಫಿನಾಡಲ್ಲಿ ಕಳೆದೊಂದು ದಶಕದಿಂದ ನಕ್ಸಲರ ಹೆಜ್ಜೆ ಗುರುತುಗಳೇ ಇರಲಿಲ್ಲ. ದಶಕಗಳ ಬಳಿಕ ಕೆಂಪು ಉಗ್ರರು ಕಾಫಿನಾಡು ಕಾಡಲ್ಲಿ ಓಡಾಡಿದ್ದರು. ಎರಡೇ ತಿಂಗಳಿಗೆ ಮತ್ತೆ ಇಲ್ಲದಂತಾಗಿರೋದು ನಿಜಕ್ಕೂ ಆಶ್ಚರ್ಯ. ಆದರೆ ದಶಕದಿಂದ ನಕ್ಸಲರು ಇಲ್ಲದ ಕಾರಣ ಕಾರ್ಕಳದ ಎಎನ್‌ಎಫ್ ಕ್ಯಾಂಪನ್ನು ಮಡಿಕೇರಿಗೆ ವರ್ಗಾಯಿಸೋ ಮಾತುಗಳು ಕೇಳಿ ಬಂದಿದ್ದವು. ಆದರೆ ಹಿಟ್‌ಲಿಸ್ಟ್ ನಕ್ಸಲರು ಸಿಗದ ಕಾರಣ ಆ ಪ್ರಸ್ತಾವನೆ ಹಾಗೇ ಉಳಿದಿತ್ತು. ಒಂದೂವರೆ ತಿಂಗಳ ಹಿಂದೆ ಕೇರಳದಿಂದ ಬಂದ ನಕ್ಸಲರು 2 ತಂಡ ಮಾಡಿಕೊಂಡು ಉಡುಪಿ-ಚಿಕ್ಕಮಗಳೂರು ಸೇರಿದ್ದರು. ಮುಂಡಗಾರು ಲತಾ ಕಾಡಲ್ಲಿ ಕಾಣೆಯಾದ ಬೆನ್ನಲ್ಲೇ ವಿಕ್ರಂಗೌಡ ಉಡುಪಿಯಲ್ಲಿ ಎನ್‌ಕೌಂಟರ್ ಆದ. ಅದಾದ ಬಳಿಕ ಎಎನ್‌ಎಫ್ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾಡಲ್ಲಿ ಕೂಂಬಿಂಗ್ ಚುರುಕುಗೊಳಿಸಿದರು. ಆದರೆ ಮುಂಡಗಾರು ಲತಾ ಟೀಂ ಹಾಗೂ ಕಾಡಲ್ಲಿ ಓಡಿಹೋದ ವಿಕ್ರಂಗೌಡನ ಸಹಚರರ ಸುದ್ದಿಯೇ ಇಲ್ಲದಂತಾಗಿರೋದು ಜೀವ ಭಯದಿಂದ ನಕ್ಸಲರು ಮತ್ತೆ ಕೇರಳ ಕಾಡು ಸೇರಿಕೊಂಡಿರಬಹುದಾ ಎಂಬ ಪ್ರಶ್ನೆ ಮೂಡಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರ | ಬಸ್ ಪಲ್ಟಿ – 12 ಮಂದಿ ಸಾವು, 30 ಜನರಿಗೆ ಗಾಯ

    ಈ ರೀತಿಯ ಜಿಜ್ಞಾಸೆಯೊಂದು ನಕ್ಸಲರನ್ನು ಕಾಡತೊಡಗಿದೆ. ಏಕೆಂದರೆ 10 ವರ್ಷಗಳ ಬಳಿಕ ಕರ್ನಾಟಕಕ್ಕೆ ಬಂದ ಎರಡೇ ತಿಂಗಳಿಗೆ ಅತ್ತ ಉಡುಪಿ-ಇತ್ತ ಚಿಕ್ಕಮಗಳೂರಲ್ಲಿ ಪೊಲೀಸರು ನಕ್ಸಲರ ಬೆನ್ನು ಬಿದ್ದಿದ್ದಾರೆ. ಅಂದರೆ ಅಲ್ಲಿಗೆ ಮಲೆನಾಡಿಗರೇ ಬೆಂಬಲ ಇಲ್ಲ ಎಂದೇ ಅರ್ಥ. ಹಾಗಾಗಿಯೇ ಅವರು ಬಂದ ಒಂದೂವರೆ ತಿಂಗಳಿಗೆ ಒಂದು ಎನ್‌ಕೌಂಟರ್ ಆಗಿದೆ. ವಿಕ್ರಂಗೌಡ ಎನ್‌ಕೌಂಟರ್ ಆದ ಬೆನ್ನಲ್ಲಿ ಮತ್ತೆ ನಕ್ಸಲರ ವದಂತಿಗಳೇ ಇಲ್ಲದಂತಾಗಿದೆ. ಹಾಗಾಗಿ ಎನ್‌ಕೌಂಟರ್ ಬಳಿಕ ನೋ ಸರೆಂಡರ್ ಎಂದು ಎಎನ್‌ಎಫ್ ಕೂಂಬಿಂಗ್ ಕಂಡು ನಕ್ಸಲರು ಜೀವ ಭಯದಲ್ಲಿ ಮತ್ತೆ ಕೇರಳದತ್ತ ಹೆಜ್ಜೆ ಹಾಕಿರಬಹುದು ಎಂಬ ಅನುಮಾನ ಬಲವಾಗಿವೆ. ಇದನ್ನೂ ಓದಿ: ಪಕ್ಕದ ಮನೆಗೆ ಕನ್ನ ಹಾಕಿ ಪೊಲೀಸರ ಅತಿಥಿಯಾದ ಬೆಂಗ್ಳೂರು ನೆಂಟ!

    ಒಟ್ಟಾರೆ, 2002ರಿಂದ 2013-14ರವರೆಗೆ ನಿರಂತರವಾಗಿದ್ದ ನಕ್ಸಲ್ ಚಟುವಟಿಕೆ 2014ರ ಬಳಿಕ ಸಂಪೂರ್ಣ ನಿಂತೇ ಹೋಗಿತ್ತು. ನಕ್ಸಲರೆಲ್ಲಾ ಕೇರಳ ಸೇರಿಕೊಂಡಿದ್ದರು. ಆದರೆ 2024ರಲ್ಲಿ ಕರ್ನಾಟಕಕ್ಕೆ ಬಂದ ಒಂದೂವರೆ-ಎರಡು ತಿಂಗಳಲ್ಲೇ ಒಂದು ಎನ್‌ಕೌಂಟರ್ ನಕ್ಸಲರ ನಿದ್ದೆಗೆಡಿಸಿ, ಜೀವಭಯ ತರಿಸಿದಂತೆ ಕಾಣುತ್ತಿದೆ. ಹಾಗಾಗಿ ಮತ್ತೆ ಕೇರಳದತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನಾನು ಸಚಿವ ಸ್ಥಾನದ ಆಕಾಂಕ್ಷಿ : ಶಾಸಕ ರಾಜು ಕಾಗೆ

  • ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

    ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

    ತಿರುವನಂತಪುರ: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ITI) ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆ (Menstrual Leave) ನೀಡುವ ಮಹತ್ವದ ನಿರ್ಧಾರವನ್ನು ಕೇರಳ (Kerala) ಸರ್ಕಾರ ಗುರುವಾರ ಪ್ರಕಟಿಸಿದೆ.

    ರಾಜ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಈ ನಿರ್ಧಾರವನ್ನು ಪ್ರಕಟಿಸಿದರು. ದೈಹಿಕ ಶ್ರಮ ಬೇಡುವ ಅನೇಕ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ಇಂದಿನ ಯುಗದಲ್ಲಿ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಈ ಅಂಶಗಳನ್ನು ಪರಿಗಣಿಸಿ ಐಟಿಐ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಋತುಚಕ್ರದ ರಜೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜನವರಿಯಲ್ಲಿ ಸಂಪುಟಕ್ಕೆ ಸರ್ಜರಿ – ಕೆಪಿಸಿಸಿ ಪಟ್ಟ ಬಿಡಲು ಡಿಕೆಶಿ ಷರತ್ತು?

    ಕೇರಳದ 100ಕ್ಕೂ ಹೆಚ್ಚು ಐಟಿಐ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರಯೋಜನ ಪಡೆಯುವ ವಿದ್ಯಾರ್ಥಿಗಳ ನಿಖರ ಸಂಖ್ಯೆಯನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿನ್ಮಯ್ ಕೃಷ್ಣ ದಾಸ್‌ರನ್ನು ಅನ್ಯಾಯವಾಗಿ ಬಂಧಿಸಲಾಗಿದೆ – ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ

    ಇನ್ನು ಶನಿವಾರ ಎಲ್ಲಾ ಐಟಿಐ ಕಾಲೇಜುಗಳಿಗೆ ರಜೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆ ತರಬೇತಿ ಸಮಯವನ್ನು ಸರಿದೂಗಿಸಲು, ಐಟಿಐ ಶಿಫ್ಟ್ಗಳನ್ನು ಮರುಹೊಂದಿಸಲಾಗುತ್ತದೆ. ಮೊದಲ ಪಾಳಿಯು ಬೆಳಿಗ್ಗೆ 7:30ರಿಂದ ಮಧ್ಯಾಹ್ನ 3 ರವರೆಗೆ ಮತ್ತು ಎರಡನೇ ಶಿಫ್ಟ್ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಇರುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

  • ಬ್ರಹ್ಮಾವರ ಲಾಕಪ್ ಡೆತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

    ಬ್ರಹ್ಮಾವರ ಲಾಕಪ್ ಡೆತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

    ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ (Brahmavar Police Station) ನಡೆದ ಲಾಕಪ್ ಡೆತ್ (Lockup Death) ಪ್ರಕರಣ ಕೇರಳ ಸಿಎಂ ಅಂಗಳಕ್ಕೆ ತಲುಪಿದೆ. ಬಿಜು ಮೋನು ಸಾವಿನ ಬಗ್ಗೆ ಸಂಶಯ ಇದೆ ಎಂದು ಮೃತ ಕುಟುಂಬ ಗಂಭೀರ ಆರೋಪ ಮಾಡಿದೆ. ಬೆಂಗಳೂರಿನ ಸಿಐಡಿ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದು ಸಮಗ್ರ ತನಿಖೆ ನಡೆಸಿ ನ್ಯಾಯ ಕೊಡಿ ಎಂದು ಮನವಿ ಮಾಡಿದೆ.

    ನವೆಂಬರ್ 9 ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದಲ್ಲಿ ಕೇರಳ ಮೂಲದ ಬಿಜು ಮೋನು ಮೃತಪಟ್ಟಿದ್ದ. ಮದ್ಯಪಾನ ಮಾಡಿ ಮಹಿಳೆಗೆ ಕಿರುಕುಳ ಕೊಟ್ಟ ಆರೋಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದು ಸಾವು ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿ ಬರುವ ಮೊದಲೇ ಕುಟುಂಬ ಗಂಭೀರ ಆರೋಪ ಮಾಡಿದೆ. ಆರೋಪಿ ಮೈ ಮೇಲೆ ಪೊಲೀಸ್ ಏಟಿನ ಗಂಭೀರ ಗಾಯಗಳ ಗುರುತು ಇತ್ತು. ಲಾಠಿ ಮತ್ತು ಶೂಗಳಿಂದ ಹಲ್ಲೆ ಮಾಡಲಾಗಿತ್ತು ಎಂಬ ಅರ್ಥದಲ್ಲಿ ಕುಟುಂಬ ದೂರಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಚೆನ್ನೈ ಜಲಾವೃತ

     

    ಮೊಣಕಾಲಿನ ಕೆಳಗೆ ಲಾಠಿ ಏಟಿನ ರೀತಿಯ ಗಾಯದ ಗುರುತು ಇದೆ. ಲಾಕಪ್ ಡೆತ್ ಪ್ರಕರಣವನ್ನು ಅಸಹಜ ಸಾವು ಎಂದು ಪೊಲೀಸರು ಬಿಂಬಿಸಲು ಪ್ರಯತ್ನ ಪಟ್ಟಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸರ ವಿರುದ್ಧ ಬಿಜು ಮೋನು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು ಮಾತ್ರವಲ್ಲ, ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ (Pinarayi Vijayan) ಈ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೃತ ಬಿಜು ಮೋನು ಸಹೋದರ ಬಿನು ಯೋಹನ್ನಾನ್ ಈ ಕುರಿತು ಮಾತನಾಡಿದ್ದು, ನಾವು ಮೃತದೇಹ ನೋಡದಂತೆ ಪೊಲೀಸರು ಶವಗಾರದಲ್ಲಿ ಲೈಟ್ ಆಫ್ ಮಾಡಿದ್ದರು. ಮೊಬೈಲ್ ಬೆಳಕಿನಲ್ಲಿ ನೋಡಿದಾಗ ಮೊಣಕಾಲಿನ ಕೆಳಗೆ ಬಹಳಷ್ಟು ಗಾಯದ ಗುರುತುಗಳಿತ್ತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಮೇರೆಗೆ ಮೃತದೇಹ ಪರಿಶೀಲಿಸಲಾಗಿತ್ತು. ದೇಹದಲ್ಲಿ ಸಾಕಷ್ಟು ಗಾಯದ ಗುರುತುಗಳು ಕಂಡು ಬಂದಿದ್ದವು. ನನ್ನ ಸಹೋದರನನ್ನು ಪೊಲೀಸರು ಕಾನೂನು ಪ್ರಕಾರವಾಗಿ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ. ಮಹಿಳೆಯೋರ್ವಳ ದೂರಿನ ಹಿನ್ನೆಲೆಯಲ್ಲಿ ನನ್ನ ಸಹೋದರನನ್ನು ಬಂಧಿಸಲಾಗಿದೆ ಎಂದಿದ್ದರು. ದೂರು ಕೊಟ್ಟ ಮಹಿಳೆ ಯಾರು? ಅವರು ಕೊಟ್ಟ ದೂರಿನ ಕಾಪಿ ಬಗ್ಗೆ ಮಾಹಿತಿ ನೀಡಿಲ್ಲ. ಇವೆಲ್ಲವನ್ನೂ ನಾವು ಕೇರಳ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದೇವೆ. ಬ್ರಹ್ಮಾವರ ಪೊಲೀಸರ ಮೇಲೆ ತುಂಬಾ ಅನುಮಾನವಿದೆ. ಸಿಐಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದೇವೆ. ನಮಗೆ ತುಂಬಾ ಮಂದಿ ಕರೆ ಮಾಡಿ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು. ಈ ಬಗ್ಗೆಯೂ ನಾವು ಸಿಐಡಿಗೆ ಮಾಹಿತಿ ನೀಡಿದ್ದೇವೆ. ನಮಗೆ ನ್ಯಾಯ ಬೇಕು, ಪೊಲೀಸರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

    ಮರಣೋತ್ತರ ಪರೀಕ್ಷೆ ವರದಿ ಇನ್ನು ಪೊಲೀಸರ ಕೈ ಸೇರಿಲ್ಲ. ಪ್ಯಾಥಾಲಜಿ ರಿಪೋರ್ಟ್ಗಾಗಿ ಕಾಯುತ್ತಿದ್ದಾರೆ. ವೈದ್ಯಕೀಯ ವರದಿ ಬಂದ ಮೇಲಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿಕೆಶಿ

  • ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

    ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

    ತಿರುವನಂತಪುರಂ: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಕೇರಳ (Kerala) ವಯನಾಡ್ (wayanad) ಲೋಕಸಭಾ ಕ್ಷೇತ್ರದಲ್ಲಿ (Loksabha Constituency) 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

    ರಾಹುಲ್ ಗಾಂಧಿ (Rahul Gandhi) ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು 4,10,931 ಅಧಿಕ ಮತಗಳ ಅಂತರದಿಂದ ಚೊಚ್ಚಲ ಗೆಲುವು ಸಾಧಿಸಿದ್ದಾರೆ.ಇದನ್ನೂ ಓದಿ: 11 ಮುಸ್ಲಿಂ ಸ್ಪರ್ಧಿಗಳನ್ನು ಹಿಂದಿಕ್ಕಿ ಏಕೈಕ ಹಿಂದೂ ಅಭ್ಯರ್ಥಿ ಮುನ್ನಡೆ

    ಪ್ರಿಯಾಂಕಾ ಗಾಂಧಿ ಅವರು ಒಟ್ಟು 6,22,338 ಮತಗಳನ್ನು ಪಡೆದುಕೊಂಡಿದ್ದು, ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 2,11,407 ಲಕ್ಷ ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ನವ್ಯಾ ಹರಿದಾಸ್ ಸುಮಾರು 1,09,939 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

    2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.

    ವಿಶೇಷವೆಂದರೆ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ 3.64 ಲಕ್ಷ ಮತಗಳ ಅಂತರದಿಂದ ಒಟ್ಟು 6.47 ಲಕ್ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಇದೀಗ ಪ್ರಿಯಾಂಕಾ ಗಾಂಧಿ 4.10 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

    ಕಳೆದ ಒಂದು ತಿಂಗಳಿಂದ ಪ್ರಿಯಾಂಕಾ ಪರ ಪ್ರಚಾರ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು 5 ಲಕ್ಷಕ್ಕೂ ಹೆಚ್ಚು ಅಂತರದಿಂದ ಪ್ರಿಯಾಂಕಾ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು.ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ: ಬೊಮ್ಮಾಯಿ

  • ವಯನಾಡಿನಲ್ಲಿ ಪ್ರಿಯಾಂಕಾಗೆ 68,000 ಮತಗಳ ಭರ್ಜರಿ ಮುನ್ನಡೆ

    ವಯನಾಡಿನಲ್ಲಿ ಪ್ರಿಯಾಂಕಾಗೆ 68,000 ಮತಗಳ ಭರ್ಜರಿ ಮುನ್ನಡೆ

    ತಿರುವನಂತಪುರಂ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಕೇರಳ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ (Congress Workers) ಸಂಭ್ರಮ ಮುಗಿಲು ಮುಟ್ಟಿದೆ.

    ರಾಹುಲ್‌ ಗಾಂಧಿ (Rahul Gandhi) ಅವರ ರಾಜೀನಾಮೆಯಿಂದ ತೆರವಾದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ (Wayanad Lok Sabha Constituency) ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು, ಚೊಚ್ಚಲ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಇದನ್ನೂ ಓದಿ: ಗಯಾನಾ ಅಧ್ಯಕ್ಷಗೆ ಚನ್ನಪಟ್ಟಣ ಗೊಂಬೆ ಗಿಫ್ಟ್ ನೀಡಿದ ಮೋದಿ

    ಈವರೆಗೆ ನಡೆದ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ 68,000 ಮತಗಳನ್ನು ಗಳಿಸಿದ್ದಾರೆ. ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 20,000 ಮತಗಳು ಹಾಗೂ ಬಿಜೆಪಿಯ ನವ್ಯಾ ಹರಿದಾಸ್ 11,235 ಮತಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್‌ ಉಪಚುನಾವಣಾ ಕಣದಲ್ಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭ

    2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ಎದುರು ಸೋತಿದ್ದ ರಾಹುಲ್‌ ಗಾಂಧಿ, ವಯನಾಡ್‌ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ವಯನಾಡ್‌ ಮತ್ತು ರಾಯ್‌ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್‌ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ, ವಯನಾಡ್‌ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.

    ಕಳೆದ ಒಂದು ತಿಂಗಳಿಂದ ಪ್ರಿಯಾಂಕಾ ಪರ ಪ್ರಚಾರ ನಡೆಸಿದ್ದ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು 5 ಲಕ್ಷಕ್ಕೂ ಹೆಚ್ಚು ಅಂತರದಿಂದ ಪ್ರಿಯಾಂಕಾ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ಮತ ಎಣಿಕೆ: ಎನ್‌ಡಿಎಗೆ ಆರಂಭಿಕ ಮುನ್ನಡೆ