Tag: ಕೇವಿನ್ ಪೀಟರ್ಸನ್

  • ‘ಈ ಮಗುವಿಗೆ ಸಲಹೆಗಳೇ ಬೇಡ’- ಪುಟ್ಟ ಪೋರನ ಬ್ಯಾಟಿಂಗ್‍ಗೆ ಪೀಟರ್ಸನ್ ಫಿದಾ

    ‘ಈ ಮಗುವಿಗೆ ಸಲಹೆಗಳೇ ಬೇಡ’- ಪುಟ್ಟ ಪೋರನ ಬ್ಯಾಟಿಂಗ್‍ಗೆ ಪೀಟರ್ಸನ್ ಫಿದಾ

    ಲಂಡನ್: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಅನೇಕ ಕ್ರೀಡಾಕೂಟ, ಟೂರ್ನಿಗಳು ರದ್ದುಗೊಂಡಿವೆ ಅಥವಾ ಮುಂದೂಡಲ್ಪಟ್ಟಿವೆ. ಹೀಗಾಗಿ ಆಟಗಾರರು, ಕ್ರೀಡಾಪಟುಗಳು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಇಂತಹ ಸಮಯದಲ್ಲಿ ಕೆಲವರು ಯುವ ಪ್ರತಿಭೆಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಆಟದ ತಂತ್ರ, ನಿಯಮಗಳನ್ನು ಹೇಳಿಕೊಡುತ್ತಿದ್ದಾರೆ.

    ಅಂಥೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಆಕ್ರಮನಕಾರಿ ಬ್ಯಾಟ್ಸ್‌ಮನ್ ಕೂಡ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಯುವ ಕ್ರಿಕೆಟರ್ ಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಜೊತೆಗೆ ಒಂದಿಷ್ಟು ಬ್ಯಾಟಿಂಗ್ ತಂತ್ರಗಳನ್ನು ತಿಳಿಸಿಕೊಡುತ್ತಿದ್ದಾರೆ. ಆದರೆ ಪೀಟರ್ಸನ್ ”ಈ ಮಗುವಿಗೆ ಯಾವುದೇ ಸಲಹೆಗಳೇ ಬೇಡ” ಎಂದು ಟ್ವಿಟ್ಟರ್‌ನಲ್ಲಿ ಒಂದು ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದಾರೆ.

    https://twitter.com/KP24/status/1253643460357369856

    ಶಾಹಿದ್ ಎಂಬ ಪುಟ್ಟ ಪೋರ, ತಾನು ಬ್ಯಾಟಿಂಗ್ ಮಾಡುತ್ತಿರುವ 1 ನಿಮಿಷ 17 ಸೆಂಕೆಡ್ ಇರುವ ವಿಡಿಯೋವನ್ನು ಟ್ವಿಟ್ ಮಾಡಿದ್ದಾನೆ. ಇದನ್ನು ನೋಡಿದ ಕೇವಿನ್ ಪೀಟರ್ಸನ್ ಫುಲ್ ಫಿದಾ ಆಗಿದ್ದಾರೆ. ”ನನ್ನ ಯೂಟ್ಯೂಬ್ ಚಾನೆಲ್‍ನಲ್ಲಿ ಈ ಹುಡುಗನ ಜೊತೆಗೆ 45 ನಿಮಿಷ ಲೈವ್‍ನಲ್ಲಿದ್ದೆ. ಈ ಮಗುವಿಗೆ ಯಾವುದೇ ರೀತಿಯ ಸಲಹೆಗಳ ಅಗತ್ಯವೇ ಇಲ್ಲ ಎನ್ನುವುದು ನನ್ನ ಅಭಿಪ್ರಾಯ. ಅವನು ಎಲ್ಲ ಕೌಶಲ್ಯಗಳನ್ನು ಹೊಂದಿದ್ದಾನೆ” ಎಂದು ತಿಳಿಸಿದ್ದಾರೆ.

    ಪಶ್ಚಿಮ ಬಂಳಾದ ಈ ಪುಟ್ಟ ಪೋರ ಮೂರು ವರ್ಷದವನಾಗಿದ್ದು, ಭಾರತ ಸೇರಿದಂತೆ ವಿದೇಶಿ ಕ್ರಿಕೆಟರ್‌ಗಳ ಮನ ಗೆದ್ದಿದ್ದಾನೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಾಲಕ ಶಾಹಿದ್‍ಗೆ ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಬೌಲಿಂಗ್ ಮಾಡಿದ್ದರು. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಾಲಕನ ಬ್ಯಾಟಿಂಗ್‍ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ವಾ ಅವರು ಬಾಲಕ ಶಾಹಿದ್‍ನನ್ನು ಕೋಲ್ಕತ್ತಾದಲ್ಲಿ ಭೇಟಿಯಾಗಿ, ಆತನನ್ನು ಎತ್ತಿ ಮುದ್ದಾಡಿದ್ದರು.

    https://twitter.com/Shahid68577153/status/1237440118224379904

    ಶಾಹಿದ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾಡಬೇಕು. ಆ ದಿನಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ಬಾಲಕನ ತಂದೆ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಶಾಹಿದ್ ಕೂಡ ಅಷ್ಟೇ ಶ್ರದ್ಧೆಯಿಂದ ಅಭ್ಯಾಸದಲ್ಲಿ ತೊಡಗಿದ್ದಾನೆ.

  • ನಿಮ್ಮ ನಾಯಕತ್ವವು ಕೂಡ ತುಂಬಾ ಸ್ಫೋಟಕವಾಗಿದೆ ಮೋದಿಜೀ- ಪೀಟರ್ಸನ್

    ನಿಮ್ಮ ನಾಯಕತ್ವವು ಕೂಡ ತುಂಬಾ ಸ್ಫೋಟಕವಾಗಿದೆ ಮೋದಿಜೀ- ಪೀಟರ್ಸನ್

    ನವದೆಹಲಿ: ವಿಶ್ವದ ಎಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ಇಂಗ್ಲೆಂಡ್ ಮಾಜಿ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಕೇವಿನ್ ಪೀಟರ್ಸನ್ ಹಿಂದಿಯಲ್ಲಿ ಟ್ವೀಟ್ ಮಾಡಿ ಕರೆಕೊಟ್ಟಿದ್ದು, ಇದಕ್ಕೆ ಪ್ರಧಾನಿ ಮೋದಿ ಅವರು ಫಿದಾ ಆಗಿದ್ದಾರೆ.

    ಕೊರೊನಾ ವೈರಸ್ ಮಹಾಮಾರಿ ವಿಶ್ವದಾದ್ಯಂತ ತನ್ನ ಅರ್ಭಟವನ್ನು ಶುರು ಮಾಡಿದೆ. ಕೊರೊನಾ ಪರಿಣಾಮದಿಂದ ಜಗತ್ತಿನ ಬಹುತೇಕ ಚುಟುವಟಿಕೆಗಳು ಸ್ತಬ್ಧವಾಗಿವೆ. ಕ್ರಿಕೆಟ್ ಕೂಡ 60 ವರ್ಷದ ನಂತರ ತನ್ನ ಎಲ್ಲ ಚುಟುವಟಿಕೆಯನ್ನು ನಿಲ್ಲಿಸಿದೆ. ಇದರ ಮಧ್ಯೆ ಕ್ರಿಕೆಟಿಗರು ಮನೆಯಲ್ಲೇ ತಮ್ಮನ್ನು ತಾವೇ ಪ್ರತ್ಯೇಕವಾಗಿದ್ದು ಕೊರೊನಾ ವಿರುದ್ಧ ಹೋರಾಡಲು ಸಿದ್ಧವಾಗಿ ಎಂದು ಸಂದೇಶ ರವಾನಿಸುತ್ತಿದ್ದಾರೆ.

    https://twitter.com/KP24/status/1240903502345486336

    ಈ ವಿಚಾರವಾಗಿ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೇವಿನ್ ಪೀಟರ್ಸನ್ ಹಿಂದಿಯಲ್ಲಿ ಒಂದು ಟ್ವೀಟ್ ಮಾಡಿದ್ದು, ಭಾರೀ ವೈರಲ್ ಆಗಿದೆ. ನಮಸ್ಕಾರ ಭಾರತ, ನಾವು ಕೊರೊನಾ ವೈರಸ್ ಅನ್ನು ಹೋಗಾಲಾಡಿಸಲು ಒಂದಾಗಬೇಕಿದೆ. ನಾವು ನಮ್ಮ ನಮ್ಮ ಸರ್ಕಾರ ನೀಡುವ ಆದೇಶದಂತೆ ಸ್ವಲ್ಪ ದಿನಗಳ ಕಾಲ ಮನೆಯಲ್ಲೇ ಇರಬೇಕು. ನಾವೂ ಜಾಗರೂಕತೆಯಿಂದ ಇರಬೇಕಾದ ಸಮಯವಿದು ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

    ಕೇವಿನ್ ಪೀಟರ್ಸನ್ ಅವರು ಬೇರೆ ದೇಶದವರು ಅದರೂ ನಮ್ಮ ದೇಶದ ಮೇಲಿನ ಕಾಳಜಿಯಿಂದ ಹಿಂದಿಯಲ್ಲಿ ಟ್ವೀಟ್ ಮಾಡಿದ್ದನ್ನು ನೋಡಿ ಖುಷಿಯಾದ ಮೋದಿ ಅವರು, ಪೀಟರ್ಸನ್ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ. ಹಲವು ಬಿಕ್ಕಟ್ಟುಗಳ ಸಮಯದಲ್ಲಿ ತಮ್ಮ ತಂಡವನ್ನು ನೋಡಿದ ಸ್ಫೋಟಕ ಬ್ಯಾಟ್ಸ್ ಮ್ಯಾನ್ ನಮಗಾಗಿ ಏನನ್ನೋ ಹೇಳುತ್ತಿದ್ದಾರೆ ಕೇಳಿ ಎಂದು ಬರೆದು, ನಾವೂ ಕೂಡ ಕೊರೊನಾ ವೈರಸ್ ವಿರುದ್ಧ ಹೋರಾಡಲು ಒಗ್ಗೂಡುತ್ತೇವೆ ಎಂದು ಹೇಳಿದ್ದಾರೆ.

    https://twitter.com/KP24/status/1240989666733707266

    ಮೋದಿ ಅವರು ಟ್ವೀಟ್‍ಗೆ ಮತ್ತೆ ರೀಟ್ವೀಟ್ ಮಾಡಿರುವ ಕೇವಿನ್ ಪೀಟರ್ಸನ್ ಅವರು, ಧನ್ಯವಾದಗಳು ಮೋದಿ ಜೀ, ನಿಮ್ಮ ನಾಯಕತ್ವ ಕೂಡ ಬಹಳ ಸ್ಫೋಟಕವಾಗಿದೆ ಎಂದು ಬರೆದುಕೊಂಡಿದ್ದಾರೆ. ಕೊರೊನಾ ವಿರುದ್ಧ ಹೋರಾಡುವಂತೆ ಮತ್ತು ಸರ್ಕಾರದ ಸೂಚನೆಯಂತೆ ನಡೆಯುವಂತೆ ಎಲ್ಲಾ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ಕರೆಕೊಡುತ್ತಿದ್ದಾರೆ.

    ಶನಿವಾರ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಕೂಡ ವಿಡಿಯೋ ಮಾಡಿ ಸಂದೇಶ ನೀಡಿದ್ದರು. ಈಗ ನಾವೆಲ್ಲ ಬಹಳ ಕಠಿಣ ಪರಿಸ್ಥಿತಿಯಲ್ಲಿ ಇದ್ದೇವೆ. ನಾವೆಲ್ಲ ಸೇರಿ ಕೊರೊನಾ ವೈರಸ್ ಅನ್ನು ತಡೆಹಿಡಿಯಬೇಕಿದೆ. ನಾವು ನಮ್ಮ ಸುರಕ್ಷತೆಗಾಗಿ ಮನೆಯಲ್ಲೇ ಇದ್ದೇವೆ. ಹಾಗೇ ನೀವು ಕೂಡ ನಿಮ್ಮ ಸುರಕ್ಷತೆಗೆ ಮನೆಯಲ್ಲೇ ಇರಿ. ನಾವೆಲ್ಲರೂ ಸೇರಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಬೇಕು. ನಾವಾಗಿಯೇ ಐಸೋಲೇಷನ್‍ನಲ್ಲಿ ಇರೋಣ ಎಂದು ವಿರುಷ್ಕಾ ಜೋಡಿ ಮನವಿ ಮಾಡಿಕೊಂಡಿದ್ದರು.

    ಕೊರೊನಾ ವೈರಸ್ ವಿರುದ್ಧ ಹೋರಾಡಲು ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ನಿಯಮಗಳನ್ನು ಮಾಡುತ್ತಿದೆ. ಈ ವಿಚಾರವಾಗಿ ಶುಕ್ರವಾರ ಮಾತನಾಡಿದ್ದ ಮೋದಿ ಅವರು ಮಾರ್ಚ್ 22 ರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಯಾರೂ ಹೊರಗಡೆ ಬರಬೇಡಿ. ಜನರೇ ಜನರಿಗಾಗಿ ಮಾಡುವ ಕರ್ಫ್ಯೂ ಇದಾಗಿದ್ದು, ನಾವು ಆರೋಗ್ಯವಾಗಿದ್ದರೆ ದೇಶ ಆರೋಗ್ಯದಲ್ಲಿರುತ್ತದೆ ಎಂದು ಮನವಿ ಮಾಡಿದ್ದಾರೆ.