Tag: ಕೈಗಾರಿಕೆ

  • ರಾಜ್ಯದಲ್ಲಿ ಉದ್ಯಮ ವಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ಸರ್ಕಾರದ ಗಮನಕ್ಕೆ ತರಲು ಮುಂದಾದ FKCCI

    ರಾಜ್ಯದಲ್ಲಿ ಉದ್ಯಮ ವಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ಸರ್ಕಾರದ ಗಮನಕ್ಕೆ ತರಲು ಮುಂದಾದ FKCCI

    – ಸೂಕ್ಷ್ಮ-ಸಣ್ಣ ಕೈಗಾರಿಕಾ ವಲಯಕ್ಕೆ ಪ್ರತ್ಯೇಕ ನೀತಿ ರೂಪಿಸುವಂತೆ ಮನವಿ ಸಲ್ಲಿಸಲು ನಿರ್ಧಾರ
    – 10 ಲಕ್ಷ ಉದ್ಯಮಿಗಳನ್ನು ರೂಪಿಸುವ ಗುರಿ

    ಮಡಿಕೇರಿ: ಉದ್ಯಮ ವಲಯವನ್ನು (Industry sector) ಕಾಡುತ್ತಿರುವ ಸಮಸ್ಯೆಗಳನ್ನ ರಾಜ್ಯ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇದರಲ್ಲಿ ಮೂಲಸೌಕರ್ಯಗಳ ಕೊರತೆಯೂ ಸೇರಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (FKCCI)ಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು.

    ತಮ್ಮ ‘ವಿಷನ್ ಸ್ಟೇಟ್‌ಮೆಂಟ್ 2025–26’ನ್ನು ಇಲ್ಲಿನ ಕ್ಲಬ್ ಮಹೀಂದ್ರ ಹೋಟೆಲ್‌ನಲ್ಲಿ ಶನಿವಾರ ಬಿಡುಗಡೆ ಮಾಡಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಎಫ್‌ಕೆಸಿಸಿಐ ಸಂಸ್ಥೆಯು ಉದ್ಯಮಿಗಳು ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತದೆ. ಇತ್ತೀಚೆಗೆ ರಸ್ತೆಗುಂಡಿ ಸಮಸ್ಯೆಗಳನ್ನ ಪ್ರಸ್ತಾಪಿಸಿದಾಗ ಮುಖ್ಯಮಂತ್ರಿ ಅವರು ಉನ್ನತಮಟ್ಟದ ಸಭೆ ನಡೆಸಿದರು. ಹೀಗೆ, ಅನೇಕ ಸಮಸ್ಯೆಗಳನ್ನ ಗಮನಕ್ಕೆ ತರಲಾಗುತ್ತಿದೆ ಎಂದರು.

    ನಾನು ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೊಡಗು, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡ ವಲಯಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ಉದ್ಯಮಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

    10 ಲಕ್ಷ ಉದ್ಯಮಿಗಳನ್ನ ರೂಪಿಸುವ ಗುರಿ
    ರಾಜ್ಯದಲ್ಲಿ 10 ಲಕ್ಷ ಉದ್ಯಮಿಗಳನ್ನು ರೂಪಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ಕೊಡಲು ವಿದ್ಯಾರ್ಥಿಗಳಿಂದ ‘ಬಿಸಿನೆಸ್‌ ಪ್ಲ್ಯಾನ್‌’ ಅನ್ನು ಆಹ್ವಾನಿಸಿ, ಅದರಲ್ಲಿ ಉತ್ತಮ ಯೋಜನೆಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮವನ್ನೂ ಮುಂಬರುವ ದಿನಗಳಲ್ಲಿ ಜಾರಿಗೆ ತರಲಾಗುವುದು. ಇದರಿಂದ ಉದ್ಯಮ ವಲಯಕ್ಕೆ ಯುವ ಸಮುದಾಯ ಸೆಳೆಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

    ನ.19ರಂದು ಮಹಿಳಾ ಉದ್ಯಮಿಗಳ ದಿನಾಚರಣೆ
    ನ.19ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸರ್‌ಎಂವಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ ಏರ್ಪಡಿಸಲಾಗಿದೆ. ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ, ಸಂವಾದಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

    ರಾಜ್ಯದಲ್ಲಿರುವ ಉದ್ಯಮಿಗಳ ಪೈಕಿ ಶೇ.90ರಷ್ಟು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ವಲಯದವರೇ ಇದ್ದಾರೆ. ಇವರಿಗಾಗಿಯೇ ಪ್ರತ್ಯೇಕ ನೀತಿಯನ್ನು ರೂಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಟಿ.ಸಾಯಿರಾಮ್ ಪ್ರಸಾದ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯ ಗಿರೀಶ್ ಗಣಪತಿ ಭಾಗವಹಿಸಿದ್ದರು.

  • ಸರ್ಕಾರವೇ ಎಲ್ಲವನ್ನೂ ಮಾಡುವುದು ಕಷ್ಟವಾಗಬಹುದು: ಶರಣಪ್ರಕಾಶ್ ಪಾಟೀಲ್‌

    ಸರ್ಕಾರವೇ ಎಲ್ಲವನ್ನೂ ಮಾಡುವುದು ಕಷ್ಟವಾಗಬಹುದು: ಶರಣಪ್ರಕಾಶ್ ಪಾಟೀಲ್‌

    – ಯಶಸ್ವಿ ಕೈಗಾರಿಕೆ ಸಂಸ್ಥೆಗಳ ಮಾದರಿಯನ್ನು ಸರ್ಕಾರ ಕೂಡ ಅಳವಡಿಸಿಕೊಳ್ಳಬಹುದು
    – ಪಿಇಎಸ್‌ ವಿವಿಯಲ್ಲಿ ನಡೆದ ಕಾರ್ಯಕ್ರಮ

    ಬೆಂಗಳೂರು: ಸರ್ಕಾರವೇ ಎಲ್ಲವನ್ನೂ ಮಾಡುವುದು ಕಷ್ಟವಾಗಬಹುದು. ಯಶಸ್ವಿ ಕೈಗಾರಿಕಾ ಮಾದರಿಗಳಿಂದ ನಾವು ಕೂಡ ಕಲಿಯಬಹುದು.ಕೈಗಾರಿಕೆ ಸಂಸ್ಥೆಗಳು ನೀಡುವ ತರಬೇತಿಯನ್ನು ಶಿಕ್ಷಣಕ್ಕೆ ಮತ್ತು ಉದ್ಯೋಗಾವಕಾಶಗಳೊಂದಿಗೆ ಹೇಗೆ ಮಿಳಿತಗೊಳಿಸಬಹುದು ಎಂಬುದನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಆರ್. ಪಾಟೀಲ್‌ (Sharanprakash R Patil) ತಿಳಿಸಿದರು.

    ಪಿಇಎಸ್ ವಿಶ್ವವಿದ್ಯಾಲಯದಲ್ಲಿ (PES University) ಬಜಾಜ್ ಎಂಜಿನಿಯರಿಂಗ್ ಕೌಶಲ್ಯ ತರಬೇತಿ (ಬೆಸ್ಟ್) ಕೇಂದ್ರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಷಣ ಮಾಡಿದ ಸಚಿವರು, ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲು ಹಾಗೂ ಯುವಕರನ್ನು ಸಬಲೀಕರಣಗೊಳಿಸಲು ಸಹಯೋಗದ ಪ್ರಯತ್ನಗಳಗೆ ಆದ್ಯತೆ ನೀಡಲಾಗುವುದು ಎಂದರು.

    ಈ ಯೋಜನೆಯು ವಿಶೇಷವಾಗಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಗವಾಗುತ್ತದೆ. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಯುವಕರನ್ನು ಉನ್ನತೀಕರಿಸುವ ಮಾದರಿಯಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಉಡುಪಿ | ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ಮೀನುಗಾರ ಸಾವು

     

    ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಗುರಿಗಳನ್ನು ಸಾಧಿಸಲು ಬಲವಾದ ಸರ್ಕಾರಿ-ಶೈಕ್ಷಣಿಕ-ಉದ್ಯಮ ಪಾಲುದಾರಿಕೆಯನ್ನು ನಾವು ಇನ್ನಷ್ಟು ಅನ್ವೇಷಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು.

    ಬಜಾಜ್ ಆಟೋ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ನಡುವಿನ ಈ ಸಹಯೋಗವು ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ಶೈಕ್ಷಣಿಕ ಕ್ಷೇತ್ರದ ಬಲವು ಉದ್ಯಮದ ನಿಖರತೆಗೆ ಪೂರಕವಾಗಿದೆ. ವಿಶೇಷವಾಗಿ ಕರ್ನಾಟಕದ ಸೌಲಭ್ಯ ವಂಚಿತ ಪ್ರದೇಶಗಳ ಯುವಕರನ್ನು ಸಬಲೀಕರಣಗೊಳಿಸುವುದು ಪ್ರೋತ್ಸಾಹದಾಯಕ ಕ್ರಮವಾಗಬಾರದು. ಅದು ನಮ್ಮ ಭವಿಷ್ಯದ ಕಾರ್ಯತಂತ್ರದ ಭಾಗವಾಗಿರಬೇಕು ಎಂದು ಡಾ. ಪಾಟೀಲ್‌ ಹೇಳಿದರು.  ಇದನ್ನೂ ಓದಿ: ತಪ್ಪಿದ ಭಾರಿ ಅನಾಹುತ: ಆಯತಪ್ಪಿ ಬಿದ್ದ ನಟಿ

    320 ವಿದ್ಯಾರ್ಥಿಗಳಿಗೆ ತರಬೇತಿ
    ಬಜಾಜ್ ಆಟೋ ಲಿಮಿಟೆಡ್‌ನ ಸಿಎಸ್‌ಆರ್ ಉಪಕ್ರಮವಾದ ಪಿಇಎಸ್ ವಿಶ್ವವಿದ್ಯಾಲಯದ ಬೆಸ್ಟ್ ಕೇಂದ್ರವು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೆಕಾಟ್ರಾನಿಕ್ಸ್, ಮೋಷನ್ ಕಂಟ್ರೋಲ್, ರೊಬೊಟಿಕ್ಸ್, ಇಂಡಸ್ಟ್ರಿ 4.0 ಮತ್ತು ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್‌ನಂತಹ ಸಮಕಾಲೀನ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ನೀಡುತ್ತದೆ. ಮೊದಲ ವರ್ಷದಲ್ಲಿ, ಈ ಕಾರ್ಯಕ್ರಮವು 320 ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು, ಅವರೆಲ್ಲರೂ ಉತ್ತಮ ಸಂಬಳದೊಂದಿಗೆ ಉದ್ಯೋಗ ಪಡೆದುಕೊಂಡಿದ್ದಾರೆ. ಮುಂಬರುವ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ.

    ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ. ಜವಾಹರ್, ಉಪಕುಲಪತಿ ಡಾ. ಜೆ. ಸೂರ್ಯ ಪ್ರಸಾದ್ ಮತ್ತು ಬಜಾಜ್ ಆಟೋ ಲಿಮಿಟೆಡ್‌ನ ಸಿಎಸ್‌ಆರ್ ಉಪಾಧ್ಯಕ್ಷ ಸುಧಾಕರ್ ಗುಡಿಪತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • LAM ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ ಪಾಟೀಲ್‌ ಚರ್ಚೆ

    LAM ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ ಪಾಟೀಲ್‌ ಚರ್ಚೆ

    – ಸಚಿವ ಪ್ರಿಯಾಂಕ್ ಖರ್ಗೆ ಸಾಥ್

    ಸ್ಯಾನ್ ಫ್ರಾನ್ಸಿಸ್ಕೊ: ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ (MB Patil) ಅವರು ಗುರುವಾರ ಇಲ್ಲಿ LAM ರೀಸರ್ಚ್ (Lam Research), ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.

    ಇವತ್ತಿನ ಸಭೆಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೂಡ ಸಾಥ್ ನೀಡಿದರು. ಈ ಮೂರೂ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ವಿಸ್ತೃತ ಚರ್ಚೆ ನಡೆಸಿದ್ದಲ್ಲದೇ ರಾಜ್ಯದಲ್ಲಿ ಬಂಡವಾಳ ಹೂಡಲು ಇರುವ ಪೂರಕ ವಾತಾವರಣದ ಬಗ್ಗೆ ವಿವರಿಸಿದರು. ಇದನ್ನೂ ಓದಿ: ಹೊಸ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಲ್ಲ ಅಂತಿದ್ದಾರೆ ಸಿಎಂ-ಉದ್ಯೋಗ ಸೃಷ್ಟಿಯ ಚಿಂತನೆಯಿದೆ ಅಂತಿದ್ದಾರೆ ಡಿಸಿಎಂ

    ಸೆಮಿಕಂಡಕ್ಟರ್ ಉತ್ಪನ್ನಗಳು ಮತ್ತು ಸೇವೆಗಳಿಗೆ ಹೆಸರಾಗಿರುವ ಎಲ್ಎಎಂ ರೀಸರ್ಚ್ ಕಂಪನಿಯು ಈ ಕ್ಷೇತ್ರದಲ್ಲಿ 23 ವರ್ಷಗಳ ಅನುಭವ ಹೊಂದಿದ್ದು, ಬೆಂಗಳೂರಿನಲ್ಲೇ ನೆಲೆ ಹೊಂದಿದೆ. ಮುಂದಿನ ತಲೆಮಾರುಗಳಿಗೆ ಅಗತ್ಯವಾದ ಪರಿಣಿತ ಇಂಜಿನಿಯರುಗಳನ್ನು ಸಜ್ಜುಗೊಳಿಸಲು ಉತ್ಸುಕವಾಗಿರುವ ಕಂಪನಿಯು ಕರ್ನಾಟಕ ಸರ್ಕಾರದೊಂದಿಗೆ ಸಹಭಾಗಿತ್ವ ಬಯಸಿದೆ ಎಂದು ಎಂಬಿಪಿ ಹೇಳಿದ್ದಾರೆ.

    ಇದಲ್ಲದೇ ಬೆಂಗಳೂರಿನಲ್ಲಿರುವ ಸೆಮಿಕಂಡಕ್ಟರ್ ಆರ್ & ಡಿ ಪಾರ್ಕ್ ನಲ್ಲಿ ನೂತನ ಪ್ರಯೋಗಾಲಯಗಳಲ್ಲಿ ರಚನಾತ್ಮಕ ಹೂಡಿಕೆ ಮಾಡುವ ಸಾಧ್ಯತೆಗಳನ್ನು ಪರಿಶೀಲಿಸಲು ಎಲ್ಎಎಂ ರೀಸರ್ಚ್ ಕಂಪನಿಯು ಮುಕ್ತವಾಗಿದೆ. ಇದನ್ನು ಸರ್ಕಾರದ ಪರವಾಗಿ ಸ್ವಾಗತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ 

    ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಹೆಸರಾಗಿರುವ ಲಿಯೋ (ಲೋ ಅರ್ತ್ ಆರ್ಬಿಟ್) ಲ್ಯಾಬ್, ಭಾರತದಲ್ಲಿ ರೆಡಾರ್‌ಗಳನ್ನ ಸ್ಥಾಪಿಸಲು ಮುಂದಾಗುವ ಖಾಸಗಿ ಕ್ಷೇತ್ರದವರಿಗೆ ಸರ್ಕಾರವು ನೀಡುವ ಅನುಮೋದನೆಗಳ ಕುರಿತು ಅಧ್ಯಯನ ನಡೆಸುವ ಬಗ್ಗೆ ಚರ್ಚಿಸಿದೆ. ಜೊತೆಗೆ ರಾಜ್ಯದ ಬಾಹ್ಯಾಕಾಶ ಕಾರ್ಯಪರಿಸರದಲ್ಲಿ ಅದು ನೆಲೆಯೂರಲು ಆಸಕ್ತಿ ತಾಳಿದೆ. ಇದಕ್ಕಾಗಿ ನಮ್ಮಲ್ಲಿ `ಸ್ಪೇಸ್ ಟೆಕ್ ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪನೆಗೆ ಕೈ ಜೋಡಿಸಲು ಅದು ಒಲವು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

    ಬಿಗ್ ಡೇಟಾ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಟೆಕಾಂಡ್ ಕಂಪನಿಯ ಪ್ರತಿನಿಧಿಗಳು, ಬೆಂಗಳೂರಿನಲ್ಲಿ ತಮ್ಮ ಆರ್ & ಡಿ ಕೇಂದ್ರ ತೆರೆಯುವ ಬಗ್ಗೆ ಚರ್ಚಿಸಿದ್ದಾರೆ. ಇದು ಸಾಧ್ಯವಾದರೆ ರಾಜ್ಯದಲ್ಲಿ ಅಸೆಂಬ್ಲಿಂಗ್ ಮತ್ತು ಹಾರ್ಡ್‌ವೇರ್‌ ಉತ್ಪಾದನೆ ಆರಂಭಿಸಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಬಿಗ್ ಡೇಟಾದಿಂದ ನಮ್ಮ 2 ಮತ್ತು 3ನೇ ಹಂತದ ನಗರಗಳಿಗೂ ಪ್ರಯೋಜನ ಸಿಗಲಿದೆ. ಇ-ಆಡಳಿತದಲ್ಲಿ ಕೂಡ ಅದು ಸರ್ಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.

    ಮಾತುಕತೆಗಳಲ್ಲಿ ಎಲ್ಎಎಂ ರೀಸರ್ಚ್ ಕಂಪನಿಯ ಉಪಾಧ್ಯಕ್ಷ ರಂಗೇಶ್ ರಾಘವನ್, ಕಾರ್ತಿಕ್ ರಾಮಮೋಹನ್, ಪ್ಯಾಟ್ ಲಾರ್ಡ್, ಲಿಯೋ ಲ್ಯಾಬ್ಸ್ ಕಂಪನಿಯ ಸಂಸ್ಥಾಪಕ ಡ್ಯಾನ್ ಸೀಪರ್ಲಿ, ರಚಿತ್ ಭಾಟಿಯಾ ಮತ್ತು ಟೇಕಾಂಡ್ ಕಂಪನಿಯ ಸಿಇಒ ಸಾಹಿಲ್ ಚಾವ್ಲಾ ಮತ್ತು ಸಹ ಸಂಸ್ಥಾಪಕ ರಮೇಶ್ ಸಿಂಗ್ ಭಾಗವಹಿಸಿದ್ದರು. ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಏಕ್‌ರೂಪ್‌ ಕೌರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯುತ್ ದರ ಹೀಗೆ ಏರಿಕೆಯಾದರೆ ಕೈಗಾರಿಕೆ ಬಂದ್ ಮಾಡಿ ಪ್ರತಿಭಟಿಸುತ್ತೇವೆ- ಸರ್ಕಾರಕ್ಕೆ ಕಾಸಿಯಾ ಎಚ್ಚರಿಕೆ

    ವಿದ್ಯುತ್ ದರ ಹೀಗೆ ಏರಿಕೆಯಾದರೆ ಕೈಗಾರಿಕೆ ಬಂದ್ ಮಾಡಿ ಪ್ರತಿಭಟಿಸುತ್ತೇವೆ- ಸರ್ಕಾರಕ್ಕೆ ಕಾಸಿಯಾ ಎಚ್ಚರಿಕೆ

    – ದರ ಏರಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ
    – ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ದುಬಾರಿ

    ಬೆಂಗಳೂರು: ಅವೈಜ್ಞಾನಿಕವಾಗಿ ವಿದ್ಯುತ್‌ ದರವನ್ನು (Electricity Tariff) ಏರಿಕೆ ಮಾಡಲಾಗಿದೆ. ವಿದ್ಯುತ್ ದರ ಹೀಗೆ ಏರಿಕೆ ಮಾಡಿದರೆ ಕೈಗಾರಿಕೆ (Industry) ಬಂದ್ ಮಾಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (KASSIA) ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

    ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ  ಜೊತೆ ಮಾತನಾಡಿದ ಕಾಸಿಯಾ ಅಧ್ಯಕ್ಷ ನರಸಿಂಹ ಮೂರ್ತಿ, ರಾಜ್ಯದಲ್ಲಿ 5.62 ಲಕ್ಷ ಸಣ್ಣ ಕೈಗಾರಿಕೆಗಳು ಇದೆ. ಸರ್ಕಾರದ ವಿವಿಧ ಇಲಾಖೆಗಳಿಂದ ಎಸ್ಕಾಂಗಳಿಗೆ 11 ಸಾವಿರ ಕೋಟಿ ರೂ. ಬಾಕಿ ದುಡ್ಡು ಕೊಡುವುದು ಬಾಕಿಯಿದೆ. ಮೊದಲು ಸರ್ಕಾರ ಇದನ್ನು ಪಾವತಿ ಮಾಡಲಿ ಎಂದು ಹೇಳಿದರು.

    ಈಗ ಅನ್ ಶೆಡ್ಯೂಲ್ಡ್ ಲೋಡ್ ಶೆಡ್ಡಿಂಗ್ (Load Shedding) ಮಾಡುತ್ತಿದ್ದಾರೆ. ಕೆಲವೊಮ್ಮೆ ಕೈಗಾರಿಕೆಗಳಿಗೆ ಒಂದು ಗಂಟೆಯಷ್ಟು ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಗ್ಯಾರಂಟಿ ಘೋಷಣೆಯ ಬಗ್ಗೆ ನಮ್ಮ ಅಕ್ಷೇಪ ಇಲ್ಲ. ಆದರೆ ನಮಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

    ಈ ಹಿಂದೆ 1 ಲಕ್ಷ ರೂ. ಬಿಲ್‌ ಬರುತ್ತಿದ್ದರೆ ಈಗ 1.30 ಲಕ್ಷ ರೂ., 1.40 ಲಕ್ಷ ರೂ. ಬರುತ್ತಿದೆ. ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ನಿಗದಿತ ಜಾರ್ಜ್ 23% ಹೆಚ್ಚಳ ಇದೆ. ದರ ಏರಿಕೆಯನ್ನು ಪ್ರಶ್ನಿಸಿ ನಾವು ಹೈಕೋರ್ಟ್ ಮೊರೆ ಹೋಗಲು ಸಮಿತಿ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

    ಇಂಧನ ಸಚಿವ ಕೆಜೆ ಜಾರ್ಜ್ ಅವರನ್ನು ಭೇಟಿ ಮಾಡಿ ನಾವು ಸಮಸ್ಯೆ ಹೇಳಿದ್ದೇವೆ. ಜಾರ್ಜ್‌ ಕಾಸಿಯಾಗೆ ಬಂದು ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇಲ್ಲದೇ ಇದ್ದರೆ ಈ ಏರಿಕೆಯಿಂದ ನಮಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

  • KGF ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್‌ ನಿರಾಣಿ

    KGF ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್‌ ನಿರಾಣಿ

    ಬೆಳಗಾವಿ: ಕೆಜಿಎಫ್‌ನ (KGF) ಬಿಇಎಂಎಲ್ (BEML) ಸಂಸ್ಥೆ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ (Industrial Township) ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿಧಾನಪರಿಷತ್ತಿಗೆ ತಿಳಿಸಿದರು.

    ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್  (KGF) ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು BEML ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ ಸಂಸ್ಥೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971.33 ಎಕರೆ ಜಮೀನನ್ನು ಕರ್ನಾಟಕ ಭೂ ಮಂಜುರಾತಿ ಅನ್ವಯ ಎಲ್ಲಾ ಋಣ ಭಾರದಿಂದ ಮುಕ್ತಗೊಳಿಸಿ ಕಂದಾಯ ಇಲಾಖೆಗೆ ವಶಪಡಿಸಿಕೊಳ್ಳಲು ಕೋಲಾರ (Kolara) ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ನಿರಾಣಿ ಹೇಳಿದರು.

    ಕೆಜಿಎಫ್‍ನಲ್ಲಿನ (KGF) 13 ಸಾವಿರ ಎಕರೆ ಜಮೀನನ್ನು ಚಿನ್ನದ ಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವ ಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು. ಆರಂಭದಲ್ಲಿ 3,500 ಎಕರೆಯನ್ನು ಮರಳಿಕೊಡುತ್ತೇವೆ ಎಂದು ಕೇಂದ್ರ ತಿಳಿಸಿತ್ತು. ಅದಕ್ಕೆ ಪೂರಕವಾಗಿ ಸ್ಪಷ್ಟವಾದ ಚಕ್ಕುಬಂದಿ ತಿಳಿಸಲು ಸೂಚಿಸಲಾಗಿತ್ತು. ರಾಜ್ಯ ಸರ್ಕಾರ ಸರ್ವೇ ನಡೆಸಿದಾಗ ಬಹಳಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡುಬಂದಿತು ಎಂದು ಸಚಿವ ನಿರಾಣಿ ಹೇಳಿದರು.

    ಕೆಲವರು ಅಲ್ಲಿ ಮನೆಗಳನ್ನು ನಿರ್ಮಿಸಿರೋದನ್ನ ಜಿಲ್ಲಾಧಿಕಾರಿ ಗುರುತಿಸಿದ್ದಾರೆ. ಸರ್ವೇ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದಾಗ ಅಲ್ಲಿನ ಸಮಿತಿ ಚರ್ಚೆ ನಡೆಸಿ, ಕೇವಲ 3,500 ಎಕರೆಯನ್ನಷ್ಟೇ ಅಲ್ಲ ಪೂರ್ತಿ ಭೂಮಿಯನ್ನು ವಾಪಾಸ್ ನೀಡುತ್ತೇವೆ. ಸಾಲದ ಹೊಣೆಗಾರಿಕೆಯೊಂದಿಗೆ ಭೂಮಿಯನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ನಿರಾಣಿ ಹೇಳಿದರು. ಇದನ್ನೂ ಓದಿ: ನನಗೆ ನಿದ್ದೆಯಿಲ್ಲ, ಆರೋಗ್ಯದಲ್ಲಿ ಸಮಸ್ಯೆ ಇದೆ: ಹೆಚ್‌ಡಿಕೆ

    ಭೂಮಿಯ ಮೌಲ್ಯಕ್ಕಿಂತ ಸಾಲವೇ ಹೆಚ್ಚಿದೆ. ಅದಕ್ಕಾಗಿ ಒಮ್ಮೆಲೇ ಎಲ್ಲಾಭೂಮಿ ಬೇಡ. ಮೊದಲ ಹಂತದಲ್ಲಿ 3,500 ಎಕರೆ ಮಾತ್ರ ನೀಡಿ. ನಂತರ 2ನೇ ಹಂತದಲ್ಲಿ ಉಳಿದ ಭೂಮಿ ಪಡೆದುಕೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ಈ ಸಂವಹನದ ನಂತರ ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ ಎಂದು ನಿರಾಣಿ ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

    ಬೆಮೆಲ್‍ನಲ್ಲಿ ಹೆಚ್ಚುವರಿಯಾಗಿ 967 ಎರಕೆ ಭೂಮಿ ಕಂದಾಯ ಇಲಾಖೆ ಅಧೀನದಲ್ಲಿದೆ. ಅದನ್ನು ವಾಪಾಸ್ ಪಡೆದು ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಂದಾಯ ಇಲಾಖೆಯಿಂದ ಈವರೆಗೂ ಭೂಮಿ ಹಸ್ತಾಂತರವಾಗಿಲ್ಲ. ಭೂಮಿ ನಮ್ಮ ಇಲಾಖೆಗೆ ಬರುತ್ತಿದ್ದಂತೆ ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ನಿರಾಣಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • 2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ

    2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ

    ಬೆಂಗಳೂರು: ಬಂಡವಾಳ ಹೂಡಿಕೆಗೆ ಕಲ್ಲಿದ್ದಲು (Coal)  ಕ್ಷೇತ್ರದಲ್ಲಿ ಉತ್ತಮ ಅವಕಾಶ ಕಲ್ಪಿಸಲಾಗಿದ್ದು, 2025ರ ಸಾಲಿನಲ್ಲಿ 1 ಬಿಲಿಯನ್‌ ಟನ್‌ (ಶತಕೋಟಿ) ನಷ್ಟು ಕಲ್ಲಿದ್ದಲು ಉತ್ಪಾದಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಬುಧವಾರ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಡೊಮೆಸ್ಟಿಕ್ ಕೋಲ್ ಪ್ರೊಡಕ್ಷನ್ (Domestic Coal Production) 900 ದಶಲಕ್ಷ ಟನ್ ತಲುಪಿದೆ. 2025ರ ಸಾಲಿನಲ್ಲಿ ಕೋಲ್ ಇಂಡಿಯಾ (Coal India) 1 ಬಿಲಿಯನ್‌ ಟನ್‌ ನಷ್ಟು ಕಲ್ಲಿದ್ದಲು ಉತ್ಪಾದಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಶ್ಲೀಲ ದೃಶ್ಯ ನೋಡಿ ಪ್ರಚೋದನೆ – ಅಪ್ರಾಪ್ತನಿಂದ ಬಾಲಕಿಯ ಮೇಲೆ ರೇಪ್‌, ಕೊಲೆ

    ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶಗಳಿವೆ. ಅದಕ್ಕಾಗಿ ಉದ್ಯಮಸ್ನೇಹಿ ವಾತಾವರಣ ಕಲ್ಪಿಸಲಾಗಿದೆ. ಕಲ್ಲಿದ್ದಲು ಕ್ಷೇತ್ರದಿಂದ ದೇಶದ ಜಿಡಿಪಿಗೆ (GDP) ಶೇ 2.5 ರಷ್ಟು ಕೊಡುಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿರ್ದೇಶನ ನೀಡಿದ್ದಾರೆ. ಈ ಗುರಿ ಮುಟ್ಟುವತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಗುರುವಾರ (ನವೆಂಬರ್‌ 3) 124 ಕಲ್ಲಿದ್ದಲು ಗಣಿ ಹರಾಜು ಪ್ರಕ್ರಿಯೆ ನಡೆಯಲಿದೆ. ಯಾರು ಬೇಕಾದರು ಪಾಲ್ಗೊಳ್ಳಬಹುದು. ಗಣಿಗಾರಿಕೆಗೆ (Mining) ಬೇಕಾದ 21 ಕ್ಲಿಯರೆನ್ಸ್ ಗಳನ್ನ ಸುಲಲಿತವಾಗಿ ವರ್ಗಾಯಿಸುವ ನಿಯಮಗಳನ್ನೂ ಜಾರಿಗೆ ತರಲಾಗಿದೆ. ಇದರ ಪರಿಣಾಮವಾಗಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಯಾಗುತ್ತಿದೆ. ಉತ್ಪಾದನೆ ಕೂಡ ಹೆಚ್ಚಿದೆ ಹೆಚ್ಚಾಗಿದೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಹೆಣ ಬೀಳಬೇಕು?: ಸುಂದರೇಶ್

    ಪ್ರಧಾನಿ ಮೋದಿ ಅವರ 5 ಲಕ್ಷಕೋಟಿ ಡಾಲರ್ ಆರ್ಥಿಕತೆಯ ಗುರಿ ತಲುಪುವಲ್ಲಿ ಕರ್ನಾಟಕ ಕೂಡ ಹೆಚ್ಚಿನ ಕೊಡುಗೆ ನೀಡಲಿದೆ ಎಂದು ಭಾವಿಸಿದ್ದಾರೆ. ಪ್ರಗತಿ ಹೊಂದಿರುವ ರಾಜ್ಯ ಕರ್ನಾಟಕದಲ್ಲೂ ಹೆಚ್ಚಿನ ಹೂಡಿಕೆಗೆ ಹೂಡಿಕೆದಾರರು ಮುಂದೆ ಬರಬೇಕು ಎಂದು ಹೇಳಿದ್ದಾರೆ

    Live Tv
    [brid partner=56869869 player=32851 video=960834 autoplay=true]

  • ಕೈಗಾರಿಕಾ ಸ್ಥಾಪನೆಗಾಗಿ ಹೆಚ್ಚುವರಿ 50 ಸಾವಿರ ಎಕರೆ ಜಮೀನು ಭೂ ಸ್ವಾಧೀನ – ನಿರಾಣಿ

    ಕೈಗಾರಿಕಾ ಸ್ಥಾಪನೆಗಾಗಿ ಹೆಚ್ಚುವರಿ 50 ಸಾವಿರ ಎಕರೆ ಜಮೀನು ಭೂ ಸ್ವಾಧೀನ – ನಿರಾಣಿ

    ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳ (Industry) ಸ್ಥಾಪನೆಗಾಗಿ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ (Land Acquisition) ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murgesh Nirani) ಹೇಳಿದರು.

    ವಿಧಾನ ಪರಿಷತ್ತಿನ (Legislative Council) ಪ್ರಶ್ನೋತ್ತರದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (KKRDB) ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. ಒಂದು ವೇಳೆ ಉದ್ಯಮ ಸ್ಥಾಪನೆಯಾಗದೇ ಇದ್ದರೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಉರ್ಫಿಗೆ ತಂದ ಸಿಮ್ ಕಾರ್ಡ್ ಸಂಕಷ್ಟ: ಸಿಮ್ ಕಾರ್ಡ್ ಕಾಸ್ಟ್ಯೂಮ್ ಕಂಡು ಮನೆಗೆ ಬಂದ ಪೊಲೀಸ್

    ಕೈಗಾರಿಕೆ ಇಲಾಖೆಯಿಂದ 188 ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗಿದೆ. ಅದಕ್ಕಾಗಿ 1.60 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 52,008 ಎಕರೆಯನ್ನು ಅಭಿವೃದ್ಧಿಪಡಿಸಲಾಗಿದೆ. ಉಳಿದ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಿರಾಣಿ ಹೇಳಿದರು.

    ಯೋಜನೆಯ ಅಂದಾಜು ಗಾತ್ರ ಆಧರಿಸಿ ಉದ್ಯಮ ಆರಂಭಿಸಲು ಕಾಲಮಿತಿ ನಿಗದಿ ಪಡಿಸಲಾಗುತ್ತದೆ. ಉಕ್ಕು ಉದ್ಯಮಗಳಿಗೆ 5 ವರ್ಷಗಳವರೆಗೂ ಸಮಯ ಬೇಕಾಗುತ್ತದೆ. ಒಟ್ಟಾರೆ ಉದ್ಯಮ ಆರಂಭಕ್ಕೆ ಗರಿಷ್ಠ 10 ವರ್ಷಗಳ ಕಾಲಾವಕಾಶ ನೀಡಲಾಗುತ್ತದೆ. ಅದರ ಒಳಗೆ ಉದ್ಯಮ ಆರಂಭವಾಗದಿದ್ದರೆ ನೋಟಿಸ್ ನೀಡಿ ಭೂಮಿ ಹಿಂಪಡೆಯುವ ಪ್ರಕ್ರಿಯೆ ನಡೆಸಲಾಗುವುದು. ಈವರೆಗೂ 117 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಇನ್ನೂ ಮುಂದೆ ಕೆವಿಯಟ್ ಹಾಕಿ ಭೂಮಿ ಹಿಂಪಡೆಯಲು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ನಿರಾಣಿ ಉತ್ತರಿಸಿದರು.

    ನವೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ವಿದೇಶ ಬಂಡವಾಳ ಹೂಡಿಕೆಯಲ್ಲಿ ನಮ್ಮ ರಾಜ್ಯ ಸತತ ನಾಲ್ಕನೇ ತ್ರೈಮಾಸಿಕದಲ್ಲೂ ಮೊದಲ ಸ್ಥಾನದಲ್ಲಿದೆ. ದೇಶದ ಹೂಡಿಕೆಯಲ್ಲಿ ಶೇ.38ರಷ್ಟು ಪಾಲನ್ನು ನಾವು ಹೊಂದಿದ್ದೇವೆ ಎಂದು ನಿರಾಣಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ರಾಯಚೂರು, ಕಾರವಾರ, ಶಿವಮೊಗ್ಗ, ವಿಜಯಪುರದ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರವೇ ಆರಂಭ: ಬೊಮ್ಮಾಯಿ

    ರಾಯಚೂರು, ಕಾರವಾರ, ಶಿವಮೊಗ್ಗ, ವಿಜಯಪುರದ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರವೇ ಆರಂಭ: ಬೊಮ್ಮಾಯಿ

    ಹುಬ್ಬಳ್ಳಿ: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ದೃಷ್ಟಿಯಿಂದ ನಿರ್ಮಾಣ ಮಾಡುತ್ತಿರುವ ರಾಯಚೂರು, ಕಾರವಾರ, ಶಿವಮೊಗ್ಗ, ವಿಜಯಪುರದ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರವಾಗಿ ಆರಂಭಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

    ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯಮಟ್ಟದ ಜಿಲ್ಲಾ ಮತ್ತು ಕೈಗಾರಿಕಾ ಸಂಸ್ಥೆಗಳ ಮಹಾಸಮ್ಮೇಳನವನ್ನು ಉದ್ದೇಶಿಸಿ ಭಾಷಣ ಮಾಡಿದ ಸಿಎಂ, ಕರ್ನಾಟಕ ಅತ್ಯಂತ ಪ್ರಗತಿಪರವಾಗಿರುವ ರಾಜ್ಯವಾಗಿದೆ. ಇದಕ್ಕೆ ನಮ್ಮ ಪೂರ್ವಜರು ಮತ್ತು ಮೈಸೂರು ಸಂಸ್ಥಾನದ ಮಹಾರಾಜರಿಗೆ ಧನ್ಯವಾದಗಳು. ವಿಶ್ವದ 500 ಫಾರ್ಚೂನ್ ಕಂಪನಿಗಳಲ್ಲಿ 400 ಕಂಪನಿಗಳು ಬೆಂಗಳೂರಿನಿಂದ ರನ್ ಆಗುತ್ತಿವೆ. ಇದು ಹೆಮ್ಮೆಯ ವಿಷಯ ಎಂದು ನುಡಿದರು. ಇದನ್ನೂ ಓದಿ: ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಚಿತ್ರದುರ್ಗದಲ್ಲಿ ದೊಡ್ಡ ದೊಡ್ಡ ಕಂಪನಿಗಳು ಆರಂಭವಾಗಬೇಕು. ಹೀಗಾಗಿ ಉತ್ತೇಜನ ನೀಡುವ ದೃಷ್ಟಿಯಿಂದ ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆ, ಧಾರವಾಡದಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಆರಂಭ ಮಾಡುತ್ತೇವೆ. ಜೊತೆಗೆ 6 ವಿಶೇಷ ಟೌನ್ ಶಿಪ್ ಆರಂಭ ಮಾಡಲಾಗುವುದು. ರಾಜ್ಯದಲ್ಲಿ ನೂತನ ಆರ್‌ಎನ್‌ಡಿ ಮತ್ತು ಎಂಪ್ಲಾಯ್‌ಮೆಂಟ್ ಪಾಲಿಸಿ ತರಲಾಗುತ್ತಿದೆ. ಆಸ್ತಿ ತೆರಿಗೆ ವಿಚಾರವಾಗಿ ನೂತನ ನೀತಿ ತರಲಾಗುತ್ತದೆ ಎಂದರು. ಇದನ್ನೂ ಓದಿ: 40% ಕಮಿಷನ್ ರಾಜ್ಯ ಸರ್ಕಾರದ ಬಹುದೊಡ್ಡ ಸಾಧನೆ – ಬಿಜೆಪಿ ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರ ಟೀಕೆ

    ಇದೀಗ ದುಡ್ಡೇ ದೊಡ್ಡಪ್ಪ ಎನ್ನುವ ಕಾಲ ಬದಲಾಗಿದೆ. ದುಡಿಮೆಯೇ ದೊಡ್ಡಪ್ಪ ಎನ್ನುವ ಕಾಲ ಬಂದಿದೆ. ರಾಜ್ಯ ಶ್ರೀಮಂತವಾಗುವ ಬದಲು ರಾಜ್ಯದ ಜನತೆ ಶ್ರೀಮಂತವಾಗಬೇಕು. ಕರ್ನಾಟಕ ಬೆಳೆಯಬೇಕು ಎಂದರೆ ಮೊದಲು ಉದ್ಯಮದಾರರು ಬೆಳೆಯಬೇಕು. ಆಹಾರ ಧಾನ್ಯಗಳ ಮೇಲೆ ಜಿಎಸ್‌ಟಿ ವಿಚಾರವಾಗಿ ಚೇಂಬರ್ ಆಫ್ ಕಾಮರ್ಸ್ ಸಭೆ ಕರೆದಿದ್ದೇನೆ. ಈ ಸಮ್ಮೇಳನದಲ್ಲಿ ಕೈಗೊಳ್ಳುವ ನಿರ್ಧಾರಕ್ಕೆ ನಾನು ಅನುಮೋದನೆ ನೀಡುತ್ತೇನೆ ಎಂದು ಸಿಎಂ ಭರವಸೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಮುರುಗೇಶ್ ನಿರಾಣಿ

    ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಮುರುಗೇಶ್ ನಿರಾಣಿ

    ಬೆಂಗಳೂರು: ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.

    ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ನಿಗದಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ರೂ. ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

    ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಬಣ್ಣಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿಕ್ಟೋರಿಯಾ ಆಸ್ಪತ್ರೆಯ ಸಿ ಬ್ಲಾಕ್ ಮುಂಭಾಗ ವಿದ್ಯುತ್ ಭಾಗ್ಯ

    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

    ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್

    ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ರೂ. ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.

    ನವೆಂಬರ್‌ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

  • ಧರ್ಮ ದಂಗಲ್‌ನಿಂದ ರಾಜ್ಯಕ್ಕೆ ಹೊಡೆತ ಇಲ್ಲ: ಬೊಮ್ಮಾಯಿ

    ಧರ್ಮ ದಂಗಲ್‌ನಿಂದ ರಾಜ್ಯಕ್ಕೆ ಹೊಡೆತ ಇಲ್ಲ: ಬೊಮ್ಮಾಯಿ

    ಉಡುಪಿ: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್‌ನಿಂದ ಕೈಗಾರಿಕೆಗಳಿಗೆ, ಹೊಸ ಉದ್ದಿಮೆಗಳಿಗೆ ಹಾಗೂ ಐಟಿ ಸೆಕ್ಟರ್‌ಗಳಿಗೆ ಹೊಡೆತ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಣಿಪಾಲದಲ್ಲಿ ಮಾತನಾಡಿ, ಪ್ರಸಕ್ತ ವಿದ್ಯಮಾನಗಳಿಂದ ಯಾವುದೇ ತೊಂದರೆ ಆಗಲ್ಲ ಎಂದಿದ್ದಾರೆ.

    ರಾಜ್ಯದಲ್ಲಿ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ಆಗುವುದಿಲ್ಲ. ಕೈಗಾರಿಕೆಗೆ ಸಮಸ್ಯೆಯಾಗುತ್ತದೆ ಎಂಬುದು ಸುಳ್ಳು. ರಾಜ್ಯದ ಪ್ರಸಕ್ತ ಬೆಳವಣಿಗೆಗಳಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ ನಿಧನ

    ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅತಿ ಹೆಚ್ಚು ಎಫ್‌ಡಿಐ ಹೂಡಿಕೆ ನಮ್ಮ ರಾಜ್ಯಕ್ಕೆ ಬರುತ್ತಿದೆ. ಈ ಕ್ವಾರ್ಟರ್‌ನಲ್ಲಿ ದೇಶದ ಶೇ.43 ರಷ್ಟು ಹೂಡಿಕೆ ನಮ್ಮ ರಾಜ್ಯಕ್ಕೆ ಬಂದಿದೆ. ಪ್ರಪಂಚದ ಮೂಲೆಮೂಲೆಗಳಿಂದ ಹೂಡಿಕೆದಾರರು ಬರುತ್ತಿದ್ದಾರೆ. ಕೈಗಾರಿಕೆಗಳು ನಮ್ಮ ರಾಜ್ಯ ತೊರೆಯುವ ಪ್ರಶ್ನೆಯೇ ಇಲ್ಲ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಯಥೇಚ್ಛವಾಗಿದೆ. ಮೂಲಸೌಕರ್ಯದ ಗುಣಮಟ್ಟ ಬಹಳ ಚೆನ್ನಾಗಿದೆ. ದೇಶದ ಟಾಪ್ ಸಂಶೋಧನಾ ಮತ್ತು ಅಭಿವೃದ್ಧಿ(ಆರ್‌ಆಂಡ್‌ಡಿ) ಕೇಂದ್ರಗಳು ನಮ್ಮಲ್ಲಿದೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ನಾನು ಮಾತನಾಡಲ್ಲ, ನನ್ನ ಆಕ್ಷನ್ ಮಾತನಾಡುತ್ತದೆ: ವಿಪಕ್ಷಗಳಿಗೆ ಬೊಮ್ಮಾಯಿ ತಿರುಗೇಟು

    ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳು ಉದ್ಯಮಿಗಳಿಗೆ ಆಫರ್ ನೀಡುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಅಂಗಡಿಗಳಲ್ಲಿ ವ್ಯಾಪಾರ ಇಲ್ಲದಾಗ ಆಫರ್ ಕೊಡುವುದಿಲ್ಲವೇ? ಆ ರಾಜ್ಯಗಳಿಗೆ ಯಾವುದೇ ಬೇಡಿಕೆ ಇಲ್ಲ. ಆಫರ್ ಕೊಟ್ಟು ಕರೆಯುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಉದ್ದಿಮೆಗಳನ್ನು, ಕೈಗಾರಿಕೆಗಳನ್ನು ಆರಂಭ ಮಾಡಲು ಹಲವಾರು ಕಂಪನಿಗಳು ಉತ್ಸುಕರಾಗಿದೆ ಎಂದರು.