Tag: ಕೈಗಾರಿಕೆ

  • ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

    ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

    ನವದೆಹಲಿ/ಶ್ರೀನಗರ: ಇದೇ ಮೊದಲಬಾರಿಗೆ ಭಾರತ ಹಾಗೂ ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ದ ಭಾರತದಲ್ಲಿ ವ್ಯಾಪಾರಕ್ಕಾಗಿ ಹೂಡಿಕೆ ಮಾಡಲು ನಿರ್ಧರಿಸಿದ್ದು, 36 ಸದಸ್ಯರ ನಿಯೋಗವು ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿ ವ್ಯಾಪಾರ ನಡೆಸಲು ಅನ್ವೇಷಣೆ ನಡೆಸಿದೆ. ಅಲ್ಲದೆ, ಸುಮಾರು 70 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ.

    ವಿದೇಶಿ ಹೂಡಿಕೆದಾರರಿಂದ ಮುಂದಿನ 6 ತಿಂಗಳಲ್ಲಿ ಸುಮಾರು 70 ಸಾವಿರ ಕೋಟಿ ಹೂಡಿಕೆ ಬರುವ ನಿರೀಕ್ಷೆಯಿದ್ದು, ಈಗಲೇ 27 ಸಾವಿರ ಕೋಟಿ ಹೂಡಿಕೆಗೆ ಸರ್ಕಾರ ಅನುಮತಿ ನೀಡಿದೆ. ಇನ್ನು 6 ತಿಂಗಳೊಳಗೆ 70 ಕೋಟಿ ದಾಟಲಿದೆ ಎಂದು ಜಮ್ಮು-ಕಾಶ್ಮೀರದ ಸರ್ಕಾರ ತಿಳಿಸಿದೆ.

    4 ದಿನ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸೌದಿ ಅರೇಬಿಯಾ, ಹಾಂಕಾಂಗ್ ಸೇರಿದಂತೆ ಮಧ್ಯಪ್ರಾಚ್ಯದ ಪ್ರತಿನಿಧಿಗಳು ಜಮ್ಮು ಕಾಶ್ಮೀರದಲ್ಲಿ ಹೆಚ್ಚಾಗಿ ಆರೋಗ್ಯ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಕಾಶ್ಮೀರವು ಸುರಕ್ಷಿತ ಸ್ಥಳವಾಗಿರುವುದರಿಂದ ಇಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಈ ಹೂಡಿಕೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಲಕ್ಷಾಂತರ ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ ಮುಂಬರುವ ವಿದೇಶಿ ಉದ್ಯಮಿಗಳಿಗೆ ಮಾರುಕಟ್ಟೆ ಮುಕ್ತ ಅವಕಾಶವನ್ನು ಕಲ್ಪಿಸಿಕೊಡುತ್ತದೆ. ಅಲ್ಲದೆ, ಈ ಹೂಡಿಕೆಯಿಂದಾಗಿ ಯುಎಇ ಮತ್ತು ಭಾರತದ ನಡುವಿನ ಸಂಬಂಧವು ಬಲಗೊಳ್ಳುತ್ತದೆ ಎಂದು ಹೇಳಿದೆ.

    ಈ ಹೂಡಿಕೆಯಿಂದ 6 ರಿಂದ 7 ಲಕ್ಷ ಜನರಿಗೆ ಉದ್ಯೋಗಾವಕಾಶ ಸಿಗಲಿದ್ದು, ಶೇ.75 ಉದ್ಯೋಗ ಸ್ಥಳೀಯರಿಗೇ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೂ ಉದ್ಯೋಗಾವಕಾಶ ವಿಸ್ತರಿಸಲಾಗುತ್ತದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಪ್ರಧಾನ ಕಾರ್ಯದರ್ಶಿ ರಂಜನ್ ಪ್ರಕಾಶ್ ಠಾಕೂರ್ ತಿಳಿಸಿದ್ದಾರೆ. ಇದನ್ನೂ ಓದಿ: ಬಪ್ಪನಾಡಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ – ಸಾಮರಸ್ಯ ಎತ್ತಿಹಿಡಿದ ಕ್ಷೇತ್ರದ ಆಡಳಿತ ಮಂಡಳಿ

    ಅಲ್ಲದೆ, ಯುಎಇ ಸಂಸ್ಥಾನವು ಲೋಹಗಳು, ಖನಿಜಗಳು, ಪೆಟ್ರೋ ಕೆಮಿಕಲ್‍ಗಳು ಮತ್ತು ಪೆಟ್ರೋಲಿಯಂ ಸೇರಿದಂತೆ ಸುಮಾರು 90 ಪ್ರತಿಶತ ಸರಕುಗಳ ಮೇಲೆ ಸುಂಕ ಕಡಿತಗೊಳಿಸುವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಫೆಬ್ರವರಿಯಲ್ಲೇ ಭಾರತದೊಂದಿಗೆ ಸಹಿ ಹಾಕಿವೆ. ಇದನ್ನೂ ಓದಿ: ಕತ್ತಿಗೆ ಮಚ್ಚು ಹಿಡಿದು ಮನೆಯ ಸದಸ್ಯರ ಕೂಡಿ ಹಾಕಿ ಫಿಲ್ಮಿ ಸ್ಟೈಲ್‌ ದರೋಡೆ

  • ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೆ ಕಡ್ಡಾಯವಾಗಿ ನೀಡಬೇಕು: ಮುರುಗೇಶ್ ನಿರಾಣಿ

    ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೆ ಕಡ್ಡಾಯವಾಗಿ ನೀಡಬೇಕು: ಮುರುಗೇಶ್ ನಿರಾಣಿ

    ಬೆಂಗಳೂರು: ರಾಜ್ಯದಲ್ಲಿ ಸ್ಥಾಪನೆ ಆಗುವ ಯಾವುದೇ ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೇ ನೀಡಬೇಕು. ಇಲ್ಲದೆ ಹೋದರೆ ಅಂತ ಕೈಗಾರಿಕೆಗಳ ಮೇಲೆ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ ನೀಡಿದರು.

    ವಿಧಾನಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಮಂಜೇಗೌಡ ವಿಷಯ ಪ್ರಸ್ತಾಪ ಮಾಡಿದರು. ಸರ್ಕಾರ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಕೈಗಾರಿಕೆ ಸ್ಥಾಪನೆ ಮಾಡಬೇಕು. ಈ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಈಗಿರುವ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಎರಡು ಜಿಲ್ಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇವೆ. ಹೀಗಾಗಿ ಕೈಗಾರಿಕೆಗಳನ್ನು ಹೆಚ್ಚು ಸ್ಥಾಪನೆ ಮಾಡಬೇಕು ಎಂದು ಒತ್ತಾಯ ಮಾಡಿದರು.

    ಇದಕ್ಕೆ ಉತ್ತರ ನೀಡಿದ ಸಚಿವ ಮುರುಗೇಶ್ ನಿರಾಣಿ, ಈಗಾಗಲೇ ಒನ್ ಡಿಸ್ಟ್ರಿಕ್ಟ್ ಒನ್ ಇಂಡಸ್ಟ್ರಿ ಅನ್ನೋ ಯೋಜನೆ ಇಲಾಖೆಯಲ್ಲಿ ಜಾರಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಒಂದು ಇಂಡಸ್ಟ್ರಿ ಆದರೂ ಇರಬೇಕು ಎನ್ನುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಕೈಗಾರಿಕೆ ಸ್ಥಾಪನೆಗೂ ಇಲಾಖೆ ಕ್ರಮವಹಿಸುತ್ತಿದೆ. ಟಯರ್ 2 ಸಿಟಿಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಮುಂದೆ ಬಂದರೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತದೆ. ಯಾರಾದ್ರು ಕೈಗಾರಿಕೆ ಪ್ರಾರಂಭಕ್ಕೆ ಮುಂದೆ ಬಂದರೆ ಅನುಮತಿ ನೀಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

    ಸರೋಜಿನಿ ಮಹಿಷಿ ವರದಿ ಅನ್ವಯ, ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೆ ಕೊಡಬೇಕು. ಯಾವುದೇ ಕೈಗಾರಿಕೆಗಳು, ಕಾರ್ಖಾನೆಗಳು ಕನ್ನಡಿಗರಿಗೆ ಉದ್ಯೋಗ ನೀಡದೇ ಹೋಗಿರುವ ಮಾಹಿತಿ ಕೊಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

  • ಹುಬ್ಬಳ್ಳಿ- ಧಾರವಾಡ ಜನತೆಗೆ ಸಿಹಿ ಸುದ್ದಿ

    ಹುಬ್ಬಳ್ಳಿ- ಧಾರವಾಡ ಜನತೆಗೆ ಸಿಹಿ ಸುದ್ದಿ

    ಹುಬ್ಬಳ್ಳಿ: ಬೆಂಗಳೂರು ಮುಂಬೈ ಕೈಗಾರಿಕಾ ಕಾರಿಡಾರ್ (ಬಿಎಂಐಸಿ) ಅಡಿಯಲ್ಲಿ ಧಾರವಾಡ ಕೈಗಾರಿಕಾ ಪ್ರದೇಶಗಳ ಸೇರ್ಪಡೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ಈ ಭಾಗದ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಬಂಡವಾಳ ಹೂಡಿಕೆಗೆ ಮತ್ತಷ್ಟು ಸಹಕಾರಿಯಾಗಲಿದೆ. ಹೀಗಾಗಿ ಈ ಭಾಗದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳನ್ನು ಕೂಡಾ ಇದು ಆಕರ್ಷಿಸಲಿದೆ.

    ಮಹಾರಾಷ್ಟ್ರದ ಸತಾರಾ ನಗರ ಹಾಗೂ ಧಾರವಾಡವನ್ನು ಈ ಯೋಜನೆಗೆ ಸೇರಿಸಲು ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಹೀಗಾಗಿ ನಾಲ್ಕು ಹಂತಗಳಲ್ಲಿ ಈ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.

    6 ಸಾವಿರ ಎಕರೆ ವಿಸ್ತೀರ್ಣವುಳ್ಳ ಧಾರವಾಡ ಕೈಗಾರಿಕಾ ಪ್ರದೇಶವು ರಾಷ್ಟ್ರೀಯ ಹೆದ್ದಾರಿ 48 ಮತ್ತು 67ರ ಜೊತೆ ಉತ್ತಮ ಸಂಪರ್ಕ ಹೊಂದಿದೆ. ಧಾರವಾಡ ರೈಲು ನಿಲ್ದಾಣ ಈ ಪ್ರದೇಶದಿಂದ 25 ಕಿ.ಮೀ. ಅಂತರದಲ್ಲಿದೆ. ಉದ್ದೇಶಿತ ಬೆಳಗಾವಿ- ಧಾರವಾಡ ರೈಲು ಮಾರ್ಗಕ್ಕೂ ಈ ಪ್ರದೇಶ ಹತ್ತಿರದಲ್ಲಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ 30 ಕಿಮೀ ಅಂತರದಲ್ಲಿದ್ದು, ಕಾರವಾರ ಬಂದರು 170 ಹಾಗೂ ಗೋವಾ ಬಂದರು- 180 ಕಿ.ಮೀ. ಅಂತರದಲ್ಲಿವೆ. ಇದರಿಂದ ಬಂಡವಾಳ ಹೂಡಿಕೆಗೆ ಇದು ಅತ್ಯಂತ ಪ್ರಶಸ್ತ ಸ್ಥಳ ಎನಿಸಿದೆ. ಇದನ್ನೂ ಓದಿ: ಹುಬ್ಬಳ್ಳಿ ಸಾರಿಗೆಯ ಶೇ.50 ಮಂದಿ ಪಡೆಯಬೇಕಿದೆ 2ನೇ ಡೋಸ್

    ಈ ಎಲ್ಲ ಸಂಪರ್ಕ ವ್ಯವಸ್ಥೆ, ಮೂಲ ಸೌಲಭ್ಯ ಹೊಂದಿರುವ ಹಿನ್ನೆಲೆಯಲ್ಲಿ ಧಾರವಾಡ ಕೈಗಾರಿಕಾ ಪ್ರದೇಶವನ್ನು ಇದರಡಿಯಲ್ಲಿ ಸೇರ್ಪಡೆ ಮಾಡಲು ಅನುಮೋದನೆ ನೀಡಲಾಗಿದೆ. ಇದರಿಂದ ಈ ಕೈಗಾರಿಕಾ ಪ್ರದೇಶ ಇನ್ನಷ್ಟು ಅಭಿವೃದ್ಧಿಯಾಗಲಿದ್ದು, ಇಲ್ಲಿರುವ ಕೈಗಾರಿಕಾ ಘಟಕಗಳಿಗೂ ಅನುಕೂಲವಾಗಲಿದೆ. ಬಂಡವಾಳ ಹೂಡಿಕೆ ಹೆಚ್ಚಲಿದೆ ಎಂದು ಅಂದಾಜಿಸಲಾಗಿದೆ. ಈ ಪ್ರದೇಶದಲ್ಲಿ ಉದ್ಯೋಗದ ಅವಕಾಶ ಹೆಚ್ಚಲಿದ್ದು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ.

  • ಆರ್ ಆ್ಯಂಡ್ ಡಿ ಹೊಸ ನೀತಿ ರೂಪಿಸಲು ಕಾರ್ಯಪಡೆ ರಚನೆ: ಬಸವರಾಜ ಬೊಮ್ಮಾಯಿ

    ಆರ್ ಆ್ಯಂಡ್ ಡಿ ಹೊಸ ನೀತಿ ರೂಪಿಸಲು ಕಾರ್ಯಪಡೆ ರಚನೆ: ಬಸವರಾಜ ಬೊಮ್ಮಾಯಿ

    ಹುಬ್ಬಳ್ಳಿ: ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅವುಗಳಿಗೆ ಹೆಚ್ಚು ಮಹತ್ವ ನೀಡಿ ಕೈಗಾರಿಕೆ, ಕೃಷಿ, ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಹೊಸ ಆರ್ ಆ್ಯಂಡ್ ಡಿ ನೀತಿ ರಚನೆಗೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ.ಅಶೋಕ್ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿದೆ. ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಕೆಎಲ್‍ಇ ಟೆಕ್‍ಪಾರ್ಕಿನ ಅಭಿವೃದ್ಧಿಗೆ ಅಗತ್ಯವಾಗಿರುವ ಇನ್ನೂ 2 ಕೋಟಿ ರೂ.ಗಳನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಕ್ರೂಢೀಕರಿಸಿ ನೀಡಲಾಗುವುದು. ಸ್ಟಾರ್ಟ್ ಅಪ್‍ಗಳ ಉತ್ತೇಜನಕ್ಕಾಗಿ ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿಗಳನ್ನು ಪ್ರಾರಂಭಿಸಲಾಗುವುದು ಎಂದು ನುಡಿದರು.

    ಕೆಎಲ್‍ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75ನೇ ವರ್ಷಾಚರಣೆ ಹಾಗೂ ಕೆಎಲ್‍ಇ ಟೆಕ್ ಪಾರ್ಕ್ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು. ಯುವಕರಲ್ಲಿ ವಿದ್ಯೆ, ವ್ಯಕ್ತಿತ್ವ ನಿರ್ಮಾಣ ಮಾಡುವುದು ಸಂಸ್ಥೆ, ಸರ್ಕಾರಗಳ ಜವಾಬ್ದಾರಿ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸಂಸ್ಥೆಗೆ, ಸಮಾಜಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಿ ಕೊಡುಗೆಗಳನ್ನು ಮರಳಿ ನೀಡಬೇಕು. ಕೆಎಲ್‍ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ವಿವಿಧ ಬಹು ಅಧ್ಯಯನ ಶಿಸ್ತುಗಳಲ್ಲಿ ಮಾದರಿಯಾಗಿ ರೂಪುಗೊಂಡಿದೆ. ಇಂದು ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಸಂಪೂರ್ಣ ಸ್ವರೂಪವೇ ಬದಲಾಗಿದ್ದು, ಮತ್ತೊಮ್ಮೆ ವಿದ್ಯಾರ್ಥಿಯಾಗಿ ಪ್ರವೇಶಪಡೆಯಲು ಮನಸ್ಸಾಗುತ್ತಿದೆ ಎಂದು ತಮಗೆ ವಿದ್ಯೆ ನೀಡಿದ ಸರಸ್ವತಿ ದೇಗುಲದ ಬಗ್ಗೆ ಮನದುಂಬಿ ಮಾತನಾಡಿದರು. ಇದನ್ನೂ ಓದಿ: ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

    ತಮಗೆ ವಿದ್ಯೆ ಕಲಿಸಿದ ಪ್ರಾಧ್ಯಾಪಕರು, ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು, ಪುಸ್ತಕ ಪಡೆಯದ ಗ್ರಂಥಾಲಯಗಳು, ಹಾಸ್ಟೇಲ್, ಕ್ಯಾಂಪಸ್, ಕ್ಯಾಂಟೀನ್ ಎಲ್ಲವನ್ನು ವಿನೋದವಾಗಿ ನೆನಪಿಸಿಕೊಂಡರು. ಮುಖ್ಯಮಂತ್ರಿಯಾಗಿ ಕೈಗೊಳ್ಳುವ ಎಲ್ಲಾ ಜನಪರ ಕಾರ್ಯಗಳಲ್ಲಿ ಬಿವಿಬಿ ಕಾಲೇಜು ಕಲಿಸಿದ ಪಾಠಗಳ ಪಾತ್ರ ಇರುತ್ತದೆ. ಆಡಳಿತದಲ್ಲಿ ತಾಂತ್ರಿಕತೆ, ವೈಜ್ಞಾನಿಕತೆ ತರಲು ಉತ್ಸುಕನಾಗಿದ್ದೇನೆ. ಪ್ರತಿ ಹಂತದಲ್ಲಿಯೂ ನನ್ನ ಜ್ಞಾನವನ್ನು ಪ್ರಸ್ತುತ ಸಂಶೋಧನೆಗಳೊಂದಿಗೆ ತಾಳೆ ಮಾಡಿ ಪರೀಕ್ಷಿಸಿಕೊಳ್ಳುತ್ತಿರುತ್ತೇನೆ. ಸಾರ್ವಜನಿಕ ಉಪಯೋಗ, ಸಂಕೇತಗಳ ರವಾನೆಗೆ ವೈರ್‍ಲೆಸ್ ತಂತ್ರಜ್ಞಾನ, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಸಾಫ್ಟ್ ವೇರ್ ಕ್ಷೇತ್ರಗಳ ಅತ್ಯಾಧುನಿಕ ವಿದ್ಯೆ, ಸಂಶೋಧನೆಗಳಲ್ಲಿ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ಮಹತ್ವದ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

    ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿವಿ ಕುಲಪತಿಗಳಾಗಿದ್ದ ಡಾ.ಡಿ.ಎಂ.ನಂಜುಂಡಪ್ಪ ಅವರ ಕಾಠಿಣ್ಯ, ಶಿಸ್ತು, ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು. ಉತ್ತಮ ಭೂತಕಾಲವಷ್ಟೇ ಅಲ್ಲ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಅಷ್ಟೇ ಮುಖ್ಯ. ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ. ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ. ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ. ಎಲ್ಲಾ ದೇಶಗಳು ಈ ನೀತಿ ಪಾಲಿಸಬೇಕು. ಕರ್ತವ್ಯವನ್ನು ನೈತಿಕತೆಯ ಕಾಯಕದ ರೀತಿಯಲ್ಲಿ ನಿರ್ವಹಿಸಬೇಕು. ದೇಶದ ಬಡತನ, ಆರೋಗ್ಯ, ಶಿಕ್ಷಣ, ಆರ್ಥಿಕ ಸವಾಲುಗಳನ್ನು ಅರಿಯಲು ನಾವು ಸದಾ ಕಾಲ ಜನರ ನಡುವೆ ಇರಬೇಕು. ಅದೇ ಜನರ, ಜನಪರ ರಾಜಕೀಯವಾಗಿದೆ. ಪ್ರಧಾನಮಂತ್ರಿಗಳು ಸಕ್ಕರೆ ಕಾರ್ಖಾನೆಗಳಲ್ಲಿ ಇಥೆನಾಲ್ ಉತ್ಪಾದನೆಗೆ ಶೇ.20 ರಷ್ಟು ಅವಕಾಶ ನೀಡಿದ್ದಾರೆ. ಮುರುಗೇಶ್ ನಿರಾಣಿ ಅವರ ಇದರ ಸದುಪಯೋಗ ಪಡೆದವರಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 10 ವರ್ಷ ಕಾಲ ರೈತರು ಪ್ರತಿಭಟನೆಗೆ ಸಿದ್ದರಿದ್ದಾರೆ – ರಾಕೇಶ್ ಟಿಕಾಯತ್

    ಇದೇ ವೇಳೆ ಬೃಹತ್, ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಮಾತನಾಡಿ, ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿಯವರೊಂದಿಗೆ ಹಂಚಿಕೊಳ್ಳುತ್ತಿರುವುದು ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ. ಕೆಎಲ್‍ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಲು, ವಿಶೇಷವಾಗಿ ಮಹಿಳೆಯರು ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗಿದೆ. 3-4 ದಶಕಗಳ ಹಿಂದೆ ಕೇವಲ ಸುಮಾರು 500 ರಿಂದ 600 ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸುಮಾರು 6 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಮತ್ತೊಬ್ಬರಿಗೆ ಕೆಲಸ ನೀಡುವ ಉದ್ಯಮಪತಿಗಳಾಗಬೇಕು. ಸರ್ಕಾರ ಅನೇಕ ಪ್ರೋತ್ಸಾಹಕ ಯೋಜನೆಗಳ ಪ್ರಯೋಜನ ಪಡೆಯಬೇಕು. ಅಕ್ಟೋಬರ್ 15 ರಿಂದ ತಮ್ಮ ನಿರಾಣಿ ಸಮೂಹ ಸಂಸ್ಥೆಗಳ ಉದ್ಯಮ ಘಟಕಗಳು ಪುನರಾರಂಭ ಮಾಡಲಿವೆ. ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ಸ್ಫೂರ್ತಿ ಪಡೆಯಲಿ ಎಂದರು. ಇದನ್ನೂ ಓದಿ: ಹೆತ್ತ ಮಗಳನ್ನೇ ಕೊಂದ ತಂದೆ, ತಾಯಿ, ದೊಡ್ಡಪ್ಪ – ಮರ್ಯಾದಾ ಹತ್ಯಾ ಪ್ರಕರಣ ಬಯಲು

    ಇದೇ ಸಂದರ್ಭದಲ್ಲಿ ಕೆಎಸ್ ಸಂಸ್ಥೆ ಹಾಗೂ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಾಗಿರುವ ಬಸವರಾಜ ಬೊಮ್ಮಾಯಿ ಹಾಗೂ ಮುರುಗೇಶ್ ನಿರಾಣಿ ಅವರನ್ನು ಸನ್ಮಾನಿಸಲಾಯಿತು. ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

  • ಆಭರಣ ವಲಯದಲ್ಲಿ ಬಂಡವಾಳ ಹೂಡುವವರಿಗೆ ರಿಯಾಯ್ತಿ ಘೋಷಿಸಿದ ನಿರಾಣಿ

    ಆಭರಣ ವಲಯದಲ್ಲಿ ಬಂಡವಾಳ ಹೂಡುವವರಿಗೆ ರಿಯಾಯ್ತಿ ಘೋಷಿಸಿದ ನಿರಾಣಿ

    -ಉದ್ಯಮಿಗಳಿಗೆ ಸರ್ಕಾರದಿಂದ ಅಗತ್ಯ ನೆರವು
    -ಕಲಬುರಗಿ ಮತ್ತು ಕನಕಪುರದಲ್ಲಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ

    ಬೆಂಗಳೂರು: ರಾಜ್ಯದಲ್ಲಿ ಆಭರಣ ವಲಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ತೆರಿಗೆ ವಿನಾಯ್ತಿಯನ್ನು ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.

    ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಿರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಭರಣ ವಲಯದಲ್ಲಿ ಯಾರೇ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದರೆ ನಮ್ಮ ಸರ್ಕಾರ ಸಂಪೂರ್ಣವಾಗಿ ಸಹಕಾರ ಕೊಡಲಿದೆ. ಅಗತ್ಯವಾದ ನೆರವು ಜೊತೆಗೆ ರಿಯಾಯ್ತಿಯನ್ನು ನೀಡಲಾಗುವುದು ಎಂದು ಘೋಷಿಸಿದರು. ರಫ್ತು ಗುರಿ ಸಾಧಿಸುವಲ್ಲಿ ರತ್ನಗಳು ಮತ್ತು ಆಭರಣ ವಲಯವು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಬಂಡವಾಳ ಹೂಡಲು ಬರುವ ಉದ್ಯಮಿಗಳಿಗೆ ನಾವು ಮುಕ್ತ ಸ್ವಾಗತಕೋರಿ ಕೆಂಪು ರತ್ನಗಂಬಳಿ ಹಾಕುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇಲಿ ವಿಷದಿಂದ ಹಲ್ಲುಜ್ಜಿ ಪ್ರಾಣ ಬಿಟ್ಟ 18ರ ಯವತಿ

    ಬೆಂಗಳೂರಿನಲ್ಲಿ ಮೊದಲ ಬಾರಿಗೆ ಇಂಡಿಯಾ ಇಂಟರ್‍ ನ್ಯಾಷನಲ್ ಜ್ಯುವೆಲ್ಲರಿ ಶೋ(ಐಐಜೆಎಸ್) ಪ್ರೀಮಿಯರ್ 2021 ಆಯೋಜಿಸಿದ್ದಕ್ಕಾಗಿ ಸಂಘಟಕರಿಗೆ ಧನ್ಯವಾದ ಸಲ್ಲಿಸಿದ ನಿರಾಣಿ, ರಫ್ತು ಗುರಿ ಸಾಧಿಸುವಲ್ಲಿ ಜೆಮ್ಸ್ ಮತ್ತು ಆಭರಣ ವಲಯವು ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರುನಲ್ಲಿ ಆಯೋಜಿಸಿದ್ದಕ್ಕಾಗಿ ನಾನು ಸಂಘಟಕರಿಗೆ ಧನ್ಯವಾದ ಅರ್ಪಿಸುತ್ತೇನೆ. ಮುಂಬೈನ ಹೊರಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದೇ ಮೊದಲು. ಕರ್ನಾಟಕಕ್ಕೆ ಈ ಅದ್ಭುತ ಅವಕಾಶ ಒದಗಿಸಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದು 37 ನೇ ಐಐಜೆಎಸ್ ಕಾರ್ಯಕ್ರಮವಾಗಿದ್ದು, ಈ ಹಿಂದೆ 36 ಕಾರ್ಯಕ್ರಮಗಳು ಮುಂಬೈನಲ್ಲಿ ನಡೆದಿವೆ. ಮುಂದಿನ ವರ್ಷವೂ ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಸಚಿವರು ಸಂಘಟಕರನ್ನು ಆಹ್ವಾನಿಸಿದರು.

    ಪ್ರಸಕ್ತ ಹಣಕಾಸು ವರ್ಷದಲ್ಲಿ 400 ಬಿಲಿಯನ್ ಡಾಲರ್ ಸರಕು ರಫ್ತು ಮಾಡುವ ಗುರಿಯನ್ನು ಸಾಧಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಕರ್ನಾಟಕ ಬದ್ಧವಾಗಿದೆ ಮತ್ತು ಈ ಪ್ರಯತ್ನದಲ್ಲಿ ರತ್ನಗಳು ಮತ್ತು ಆಭರಣ ವಲಯವು ನಿರ್ಣಾಯಕ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ನಾನು ನಂಬುತ್ತೇನೆ. ವಸ್ತುಪ್ರದರ್ಶನದಲ್ಲಿ 2,500 ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಸ್ಥಾಪಿಸಲಾಗಿದೆ, 1300 ಪ್ರದರ್ಶಕರು ಮತ್ತು 10,000 ಕಂಪನಿಗಳು ಭಾಗವಹಿಸಲು ನೋಂದಾಯಿಸಿವೆ. 20,000 ಕ್ಕೂ ಹೆಚ್ಚು ಜನರು ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಸಚಿವರು ಹಲವಾರು ಮಳಿಗೆಗಳಿಗೆ ಭೇಟಿ ನೀಡಿ, ವ್ಯಾಪಾರ ಮುಖಂಡರು ಮತ್ತು ವೃತ್ತಿಪರರೊಂದಿಗೆ ಸಂವಾದ ನಡೆಸಿದರು. ಉದ್ಯಮಿಗಳಾಗುವಂತೆ ಪ್ರೋತ್ಸಾಹಿಸಿ ಉದ್ಯೋಗ ಹುಡುಕುವವರ ಬದಲಿಗೆ ಉದ್ಯೋಗ ಒದಗಿಸುವವರ ಕಡೆಗೆ ಗಮನಹರಿಸುವಂತೆ ಮಾಡುವುದು ನಮ್ಮ ಗುರಿಯಾಗಿದೆ ಎಂದರು. ಇದನ್ನೂ ಓದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಸಂಪೂರ್ಣ ನಿಷೇಧ

    ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ವಾಣಿಜ್ಯ ಮತ್ತು ಕೈಗಾರಿಕಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ ರಮಣ ರೆಡ್ಡಿ, ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಸಿ.ಐ ಎಲ್ ಸುರೇಶ್ ಕುಮಾರ್,ಜಿಜೆಇಪಿಸಿ ಅಧ್ಯಕ್ಷ ಕಾಲಿನ್ ಶಾ ಉಪಸ್ಥಿತರಿದ್ದರು.

  • ನವೆಂಬರಿನಲ್ಲಿ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ: ನಿರಾಣಿ

    ನವೆಂಬರಿನಲ್ಲಿ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ: ನಿರಾಣಿ

    ಬೆಂಗಳೂರು: ನವೆಂಬರಿನಲ್ಲಿ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರಿನಲ್ಲಿ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶವನ್ನು ನಡೆಸಲು ನಿರ್ಧಾರಿಸಲಾಗಿದೆ. ಮುಖ್ಯಮಂತ್ರಿಗಳ ಚರ್ಚಿಸಿ ಒಂದು ವಾರದಲ್ಲಿ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್ ಜೊತೆ ಹೊಂದಾಣಿಕೆ ಸಾಹಸಕ್ಕೆ ಕೈಹಾಕಿ, ನಿಮ್ಮ ಕುರ್ಚಿಗೆ ಕುತ್ತು ತಂದ್ಕೋಬೇಡಿ- ಸಿಎಂಗೆ ರೇವಣ್ಣ ಸಲಹೆ

    ನಾಲ್ಕು ಕಂದಾಯ ವಿಭಾಗವಾರು ಕೈಗಾರಿಕಾ ಅದಾಲತ್ ನಡೆಸಲಾಗುವುದು. ಕರ್ನಾಟಕ ಉದ್ಯೋಗ ಮಿತ್ರ ದೇಶದ ಅಗ್ರಮಾನ್ಯವಾಗಿ ಹೂಡಿಕೆ ಪ್ರಚಾರ ಏಜೆನ್ಸಿಯಾಗಿ ಹೊರ ಹೊಮ್ಮಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 62,085 ಕೋಟಿ ರೂ. ಎಫ್‍ಡಿಐ ಇಡಲು ಆಕರ್ಷಿಸಲಾಗಿದೆ. ಶೀಘ್ರವೇ ದುಬೈನಲ್ಲಿ ಕೈಗಾರಿಕ ಮೇಳ ನಡೆಯಲಿದ್ದು, ರಾಜ್ಯದ ಕೈಗಾರಿಕಾ ಇಲಾಖೆಯ ಸ್ಟಾಲ್‍ಗಳನ್ನು ಎಂಟು ದಿನಗಳ ಕಾಲ ಹಾಕಲಾಗುವುದು. ದುಬೈ ಮೇಳದ ನಂತರ ಬೇರೆ ಬೇರೆ ದೇಶಗಳಲ್ಲಿ ರೋಡ್ ಶೋ ನಡೆಸಲಾಗುವುದು ಎಂದರು.

    ಈ ಹಿಂದೆ ಕೈಗಾರಿಕೆಗಾಗಿ ನೀಡಲಾಗಿದ್ದ ಜಮೀನು ಬಳಕೆ ಮಾಡದಿರುವುದು ಕಂಡು ಬಂದಿದೆ. ಅದನ್ನು ಗುರುತಿಸಿ ಆ ಜಮೀನನ್ನ ವಾಪಸ್ ಪಡೆಯಲು ಚಿಂತನೆ ನಡೆಸಿದ್ದೇವೆ. ಜಮೀನಿಗಾಗಿ ಹಣ ಕೊಟ್ಟಿರುವವರಿಗೆ ಅವಕಾಶ ನೀಡುತ್ತೇವೆ. ಯಾರು ಹಣ ಕೊಟ್ಟಿಲ್ಲ ಅವರಿಗೆ ನೋಟಿಸ್ ನೀಡುವ ಕೆಲಸ ಪ್ರಾರಂಭ ಮಾಡುತ್ತೇವೆ. ಕೈಗಾರಿಕಾ ಸಚಿವರ ಹಂತದಲ್ಲಿ ತೀರ್ಮಾನವಾಗುವ ಕೆಲಸ ನಾವು ಮಾಡ್ತೀವಿ. ಚೀಫ್ ಸೆಕ್ರೆಟರಿ ಹಂತದಲ್ಲಿರೋದನ್ನ ಅವರ ಕಡೆಯಿಂದ ಮಾಡಿಸುತ್ತೇವೆ. ಯಾರಿಗೂ ಕಿರುಕುಳ ನೀಡುವ ಕೆಲಸ ಆಗಬಾರದು. ಎಲ್ಲವನ್ನೂ ನೋಡಿಕೊಂಡು 30 ದಿನಗಳ ಅವಕಾಶ ನೀಡಿ ನಂತರ ಕ್ರಮ ಈ ಬಗ್ಗೆ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸಿ – ಗಡ್ಕರಿ ಬಳಿ ಸಿಎಂ ಮನವಿ

    ಪಾಂಡವಪುರ ಸಕ್ಕರೆ ಕಾರ್ಖಾನೆಯಲ್ಲಿ ವೇತನ ಪಾವತಿ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ನಿರಾಣಿ, ವೇತನ ಕೊಟ್ಟಿಲ್ಲ ಎಂಬುದು ಸುಳ್ಳು. ಅಲ್ಲಿ ಯಾವುದೇ ಸಮಸ್ಯೆಯಿಲ್ಲ. ಪ್ರತಿಭಟನೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನನಗೂ ಕಾರ್ಖಾನೆಗೂ ಯಾವುದೇ ಸಂಬಂಧವಿಲ್ಲ ನಾನು ಅದರಲ್ಲಿ ಯಾವ ಭಾಗವೂ ಅಲ್ಲ. ನಾನು 2008ರಲ್ಲೇ ನಿರಾಣಿ ಗ್ರೂಪ್‍ಗೆ ರಿಸೈನ್ ಮಾಡಿದ್ದೇನೆ. ಅಲ್ಲಿ ನಾನು ಡೈರೆಕ್ಟರ್ ಕೂಡಾ ಅಲ್ಲ ಅಲ್ಲಿಗೂ ನನಗೂ ಯಾವುದೇ ಸಂಬಂಧವಿಲ್ಲ. ಪಾಂಡವಪುರ ಕಾರ್ಖಾನೆ ಕುರಿತು ಸಂಬಂಧಿಸಿದವರು ಉತ್ತರ ಕೊಡ್ತಾರೆ ಎಂದು ಹೇಳಿದರು.

    ಜಾತಿ ಜನಗಣತಿ ವರದಿ ಬಿಡುಗಡೆ ವಿಚಾರಕ್ಕೆ ಅಪಸ್ವರ ವಿಚಾರಕ್ಕೆ ಉತ್ತರಿಸಿದ ನಿರಾಣಿ, ವೀರಶೈವ ಲಿಂಗಾಯತ ಸಮಾಜಕ್ಕೆ ನಾಯಕರಾಗಿ ಶಾಮನೂರು ಶಿವಶಂಕರಪ್ಪ ಇದ್ದಾರೆ. ಅವರು ಮತ್ತು ಹಿರಿಯರು ಸೇರಿ ಈ ವಿಚಾರವಾಗಿ ನಿರ್ಧಾರ ಮಾಡ್ತಾರೆ ಎಂದರು.

  • ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ: ಪುಟ್ಟರಾಜು

    ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ: ಪುಟ್ಟರಾಜು

    ಮೈಸೂರು: ನನ್ನ 37 ವರ್ಷದ ರಾಜಕೀಯ ಜೀವನದ ಎದುರಾಳಿಗಳು ಈಗ ನಮ್ಮ ಮುಂದೆ ಇಲ್ಲ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ನನಗೆ ಬುದ್ದಿ ಹೇಳಿ ಸರಿ ದಾರಿ ತೋರಿದವರೂ ಇದ್ದಾರೆ, ಖ್ಯಾತೆ ತೆಗೆದು ಕಣ್ಮರೆಯಾದವರೂ ಇದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಶಾಸಕ ಸಿ.ಎಸ್ ಪುಟ್ಟರಾಜು ಆಕ್ರೋಶ ಹೊರಹಾಕಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುಟ್ಟರಾಜು ಅವರು, 1983ರಲ್ಲೇ ನಾನು ಸಕ್ರಿಯವಾಗಿ ರಾಜಕೀಯಕ್ಕೆ ಬಂದವನು. ಗಣಿಗಾರಿಕೆ ವಿಚಾರದಲ್ಲಿ ಯಾರೇ ಅಕ್ರಮ ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಿ. ಆದರೆ ಸಕ್ರಮ ಇರುವ ಕ್ರಷರ್ ಗಳನ್ನು ಅಭಿವೃದ್ಧಿ ದೃಷ್ಟಿಯಿಂದ ಆರಂಭಿಸಬೇಕು. ಈ ಬಗ್ಗೆ ದಿಶಾ ಮೀಟಿಂಗ್ ನಲ್ಲಿ ಚರ್ಚೆ ಮಾಡಿದ್ದೇವೆ. ಅಕ್ರಮ ಗಣಿಗಾರಿಕೆ ಎಂದು ಎರಡು ತಿಂಗಳಿಂದ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ದಿಶಾ ಸಭೆಯಲ್ಲಿ ಜಿಲ್ಲೆ ಅಭಿವೃದ್ಧಿಗೆ ಒತ್ತು ನೀಡುವಂತೆ ತೀರ್ಮಾನ ಮಾಡಲಾಗಿದೆ. ಕಾನೂನು ಚೌಕಟ್ಟಿನಲ್ಲೇ ಎಲ್ಲರೂ ಒಟ್ಟಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

    ನನಗೆ ಎಸ್.ಎಂ ಕೃಷ್ಣ ರಂತಹ ಮುಖ್ಯಮಂತ್ರಿ ಇಷ್ಟ. ಎಸ್.ಎಂ ಕೃಷ್ಣ ಅವರು ರಾಜ್ಯದ ಸಿಎಂ ಆಗಿದ್ದಾಗ ಕೈಗಾರಿಕೆ ಬೆಳವಣಿಗೆಗೆ ಉತ್ತೇಜನ ನೀಡಿದ್ದರು. ಕೃಷ್ಣ ಅವರ ಮುಂದಾಲೋಚನೆ ಕೆಲಸಗಳನ್ನು ಫಾಲೋ ಮಾಡಬೇಕು. ಆದರೂ ನಾನು ಎಲ್ಲ ಮುಖ್ಯಮಂತ್ರಿಗಳಿಗಿಂತ ಎಸ್.ಎಂ ಕೃಷ್ಣ ಅವರನ್ನು ಬಹಳ ಇಷ್ಟ ಪಡುತ್ತೇನೆ. ಅವರ ಕಾರ್ಯವೈಖರಿ ನನಗೆ ವೈಯಕ್ತಿಕವಾಗಿ ಇಷ್ಟ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ

  • ಕೈಗಾರಿಕೆಯಲ್ಲಿ ರಾಸಾಯನಿಕ ಮಿಶ್ರಣದ ವೇಳೆ ಸ್ಫೋಟ ಪ್ರಕರಣ- ಕಾರ್ಮಿಕ ಸಾವು

    ಕೈಗಾರಿಕೆಯಲ್ಲಿ ರಾಸಾಯನಿಕ ಮಿಶ್ರಣದ ವೇಳೆ ಸ್ಫೋಟ ಪ್ರಕರಣ- ಕಾರ್ಮಿಕ ಸಾವು

    ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಕುರಗೋಡು ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ರಾಸಾಯನಿಕ ಮಿಶ್ರಣದ ವೇಳೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐದು ಮಂದಿಗೆ ಸುಟ್ಟಗಾಯಗಳಾಗಿದ್ದು, ಮೂವರು ಗಂಭೀರ ಸ್ಥಿತಿಯಲ್ಲಿದ್ದು, ಮೂವರಲ್ಲಿ ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ರಾಮಚಂದ್ರಾಪುರದ ವೆಂಕಟೇಶ್ ಮೃತ ಕಾರ್ಮಿಕ ಅಂತ ತಿಳಿದುಬಂದಿದೆ. ಆಗಸ್ಟ್ 5 ರಂದು ತಾಲೂಕಿನ ಚಿಕ್ಕಕುರುಗೋಡು ಕೈಗಾರಿಕಾ ಪ್ರದೇಶದಲ್ಲಿನ ಪ್ರಿಕಾಟ್ ಲಿಮಿಟೆಡ್ ಎಂಬ ಕೈಗಾರಿಕೆಯಲ್ಲಿ ಸೋಡಿಯಂ ಹೈಡ್ರಾಕ್ಸೆಡ್ ರಾಸಾಯನಿಕ ಮಿಶ್ರಣ ಅಂದ್ರೆ ಕಾಸ್ಟಿಕ್ ಸೋಡಾವನ್ನು ನೀರಿನಲ್ಲಿ ಬೆರೆಸುವಾಗ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಹಠಾತ್ ಬಿಸಿಯಾದ ನೀರು ಮತ್ತು ರಾಸಾಯನಿಕ ಮಿಶ್ರಣವು ಸ್ಫೋಟಗೊಂಡಿದ್ದರಿಂದ ಐವರು ಕಾರ್ಮಿಕರು ಗಾಯಗೊಂಡಿದ್ದರು. ಇದನ್ನೂ ಓದಿ: ಆರೋಗ್ಯ ಇಲಾಖೆಯ ಒಂದೇ ಕಾರ್​​​ನಲ್ಲಿ 10 ಮಂದಿ ಪ್ರಯಾಣ

    ಕಡಗಟ್ಟೂರಿನ ಹರೀಶ್ (32) ರಾಮಚಂದ್ರಾಪುರದ ವೆಂಕಟೇಶ್(42), ಚಿಕ್ಕಕುರುಗೋಡಿನ ರವಿಕುಮಾರ್ (39), ಹಿಂದೂಪುರದ ಆನಂದ ಕುಮಾರ್ (32) ನೆಲ್ಲೋರು 29 ವರ್ಷದ ಗೊರವಯ್ಯ ಗಾಯಗೊಂಡಿದ್ದರು. ಇವರಲ್ಲಿ ರಾಮಚಂದ್ರಾಪುರದ ವೆಂಕಟೇಶ್, ಚಿಕ್ಕಕುರುಗೋಡಿನ ರವಿಕುಮಾರ್ (39) ನೆಲ್ಲೊರು 29 ವರ್ಷದ ಗೊರವಯ್ಯ ರವರ ಸ್ಥಿತಿ ಗಂಭೀರವಾಗಿದ್ದು, ಅಂದು ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ವೆಂಕಟೇಶ್ ಮೃತಪಟ್ಟಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಕೆಆರ್‌ಎಸ್‌ ಬೃಂದಾವನ ಮಾದರಿಯ ಎಕೋ ಥೀಮ್ ಪಾರ್ಕ್

  • ವಿಶೇಷ ಹೂಡಿಕೆ ವಲಯ ಚರ್ಚೆಗೆ ಗುಜರಾತ್ ಭೇಟಿ: ಜಗದೀಶ್ ಶೆಟ್ಟರ್

    ವಿಶೇಷ ಹೂಡಿಕೆ ವಲಯ ಚರ್ಚೆಗೆ ಗುಜರಾತ್ ಭೇಟಿ: ಜಗದೀಶ್ ಶೆಟ್ಟರ್

    ಗಾಂಧಿನಗರ: ಗುಜರಾತ್ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ವಿಶೇಷ ಹೂಡಿಕೆ ವಲಯ (ಎಸ್‍ಐಆರ್) ದ ಕುರಿತು ಗುಜರಾತ್ ಸರ್ಕಾರದೊಂದಿಗೆ ಚರ್ಚೆ ನಡೆಸಲು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾಗಿರುವ ಧೋಲೇರಾ (SIR) ದೇಶದ ಮೊದಲ ವ್ಯವಸ್ಥಿತವಾಗಿ ಯೋಜನೆ ಮಾಡಿ ನಿರ್ಮಿಸಲಾಗುತ್ತಿರುವ ವಿಶೇಷ ಹೂಡಿಕೆ ವಲಯ. ದೇಶದ ಮೊದಲ ಸ್ಮಾರ್ಟ್ ಸಿಟಿ ಎನ್ನುವ ಹೆಗ್ಗಳಿಕೆಯೂ ಇದರದ್ದಾಗಿದೆ. ಈ ವಿಶೇಷ ಹೂಡಿಕೆ ವಲಯ (ಎಸ್‍ಐಆರ್) ದಿಂದ ಗುಜರಾತ್ ನಲ್ಲಿ ಹೆಚ್ಚಿನ ಹೂಡಿಕೆ ಯಾಗುತ್ತಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ನೀತಿಯಲ್ಲಿ ಈಗಾಗಲೇ ಘೋಷಣೆ ಮಾಡಿರುವಂತಹ ವಿಶೇಷ ಹೂಡಿಕೆ ವಲಯ ರಚನೆಗೆ ಮಾಹಿತಿಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಈ ಸಂಬಂಧ ಗುಜರಾತ್ ರಾಜ್ಯ ಹೊರತಂದಿರುವ ನೀತಿ ನಿಯಮಗಳಲ್ಲಿ ಮಾಡಲಾದಂತಹ ಬದಲಾವಣೆಯ ಬಗ್ಗೆ ಗುಜರಾತ್ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದೇವೆ ಎಂದರು.

    ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹಿರಿಯ ಮತ್ತು ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧಿಕಾರಿಗಳ ತಂಡದ ಜೊತೆ ದೋಲೇರಾ, ಗಿಫ್ಟ್ ಸಿಟಿ ಸೇರಿದಂತೆ ಹಲವಾರು ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಗಮನಿಸಿದ್ದೇವೆ. ಅಲ್ಲದೆ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಭೇಟಿಯಾದ ಸಂಧರ್ಭದಲ್ಲಿ ಗುಜರಾತ್ ರಾಜ್ಯದಲ್ಲಿ ಕೈಗಾರಿಕಾಭಿವೃದ್ದಿಗೆ ಭೂ ಪ್ರದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಇದರೊಂದಿಗೆ ನಮ್ಮ ರಾಜ್ಯದಲ್ಲಿ ಹೊರತಂದಿರುವ ನೀತಿಗಳ ಬಗ್ಗೆಯೂ ತಿಳಿಸಿಕೊಡಲಾಯಿತು. ಮುಂಬರುವ ಫೆಬ್ರವರಿಯಲ್ಲಿ ರಾಜ್ಯದಲ್ಲಿ ವಿಶ್ವ ಹೂಡಿಕೆದಾರರ ಸಭೆ ದಿನಾಂಕ ಘೋಷಣೆಯ ಬಗ್ಗೆಯೂ ಚರ್ಚಿಸಲಾಯಿತು ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಉಮಾಪತಿಗೆ ಬ್ಲ್ಯಾಕ್‍ಮೇಲ್, ದರ್ಶನ್ ಹೊಡೆದಿದ್ದು ನಿಜ: ಸಂದೇಶ್ ಆಡಿಯೋ ಬಾಂಬ್

    ಸಚಿವರ ನೇತೃತ್ವದ ತಂಡದಲ್ಲಿ ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ, ಇನ್‍ವೆಸ್ಟ್ ಕರ್ನಾಟಕ ಫೋರಂನ ಸಿಓಓ ಬಿ.ಕೆ ಶಿವಕುಮಾರ್, ಕೆಐಎಡಿಬಿ ಸಿಡಿಓ ಬಿ.ಕೆ ಪವಿತ್ರ, ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಸುನಿಲ್, ಕೈಗಾರಿಕಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸಪ್ಪ, ಮಧು ರೆಡ್ಡಿ ಉಪಸ್ಥಿತರಿದ್ದರು.

    ಸಭೆಯಲ್ಲಿ ಗುಜರಾತ್ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಾಜೀವ್ ಕುಮಾರ್ ಗುಪ್ತಾ, ಗುಜರಾತ್ ಮುಖ್ಯಮಂತ್ರಿ ಅವರ ಚೀಫ್ ಪ್ರಿನ್ಸಿಪಲ್ ಸೆಕ್ರೆಟರಿ ಕೈಲಾಶ್‍ನಾಥನ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಅಶ್ವಿನಿ ಕುಮಾರ್, ಕೈಗಾರಿಕಾಭಿವೃದ್ದಿ ಆಯುಕ್ತ ರಾಹುಲ್ ಗುಪ್ತಾ ಪಾಲ್ಗೊಂಡಿದ್ದರು.

  • ಚೀನಾಗೆ ಸ್ಯಾಮ್‍ಸಂಗ್ ಶಾಕ್ – ನೋಯ್ಡಾಕ್ಕೆ  ಡಿಸ್‍ಪ್ಲೇ ಘಟಕ ಸ್ಥಳಾಂತರ

    ಚೀನಾಗೆ ಸ್ಯಾಮ್‍ಸಂಗ್ ಶಾಕ್ – ನೋಯ್ಡಾಕ್ಕೆ ಡಿಸ್‍ಪ್ಲೇ ಘಟಕ ಸ್ಥಳಾಂತರ

    ಲಕ್ನೋ: ಜಗತ್ತಿನ ಪ್ರಮುಖ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಸಂಸ್ಥೆ ಸ್ಯಾಮ್‍ಸಂಗ್ ಚೀನಾದಲ್ಲಿದ್ದ ತನ್ನ ಡಿಸ್‍ಪ್ಲೇ ತಯಾರಿಕಾ ಘಟಕವನ್ನು ಉತ್ತರ ಪ್ರದೇಶದ ನೋಯ್ಡಾಗೆ ಸ್ಥಳಾಂತರಿಸಿದೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದ ಸಿಇಒ ಕೆನ್ ಕಾಂಗ್ ನೇತೃತ್ವದ ನಿಯೋಗ ನೋಯ್ಡಾದಲ್ಲಿ ಘಟಕದ ನಿರ್ಮಾಣ ಕಾಮಗಾರಿ ಕೆಲಸ ಈಗಾಗಲೇ ಮುಕ್ತಾಯವಾಗಿದೆ ಎಂದು ಸ್ಯಾಮ್‍ಸಂಗ್ ತನ್ನ  ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

    ಉತ್ತಮ ಕೈಗಾರಿಕಾ ವಾತಾವರಣ ಮತ್ತು ಹೂಡಿಕೆದಾರ ಸ್ನೇಹಿ ನೀತಿಗಳಿಂದಾಗಿ ಚೀನಾದಲ್ಲಿದ್ದ ಡಿಸ್‍ಪ್ಲೇ ಘಟಕವನ್ನು ನೋಯ್ಡಾಗೆ ಸ್ಥಳಾಂತರಿಸಿದ್ದೇವೆ ಎಂದು ಕಂಪನಿ ಹೇಳಿದೆ. ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದ ಯಶಸ್ಸಿಗೆ ಸ್ಯಾಮ್‍ಸಂಗ್‍ನ ನೋಯ್ಡಾ ಕಾರ್ಖಾನೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಸಿಎಂ ಯೋಗಿ ಅದಿತ್ಯನಾಥ್ ಹೇಳಿದ್ದು, ಇದರಿಂದಾಗಿ ರಾಜ್ಯದ ಯುವಕರಿಗೆ ರಾಜ್ಯದಲ್ಲಿ ಉದ್ಯೋಗ ಪಡೆಯಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ.

    ಕಳೆದ ವರ್ಷ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಮುಂದಿನ 5 ವರ್ಷದಲ್ಲಿ 11 ಲಕ್ಷ ಕೋಟಿ ಹಣವನ್ನು ಭಾರತ ಮತ್ತು ವಿದೇಶದ ಕಂಪನಿಗಳು ದೇಶದಲ್ಲಿ ಹೂಡಿಕೆ ಮಾಡಲಿವೆ ಎಂದು ತಿಳಿಸಿದ್ದರು.

    ಭಾರತವನ್ನು ಮೊಬೈಲ್ ಉತ್ಪಾದನಾ ಹಬ್ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್‍ಐ)ಯೋಜನೆಯನ್ನು ಆರಂಭಿಸಿದೆ. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ 1.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್  ಹಾಗೂ ಬಿಡಿಭಾಗಗಳನ್ನು ಉತ್ಪಾದಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪಿಎಲ್‍ಐ ಯೋಜನೆ ಅಡಿ ಲಾಭ ಪಡೆದುಕೊಳ್ಳಲು ದೇಶದ ಮತ್ತು ವಿಶ್ವದ ಹಲವು ಕಂಪನಿಗಳು ಆಯ್ಕೆಯಾಗಿವೆ. ಇದನ್ನೂ ಓದಿ: ವಿಶ್ವದ ಅತಿದೊಡ್ಡ ಮೊಬೈಲ್ ಉತ್ಪಾದನಾ ಘಟಕ ನೋಯ್ಡಾದಲ್ಲಿ ಲೋಕಾರ್ಪಣೆ – ವಿಶೇಷತೆ ಏನು? ಎಷ್ಟು ಮಂದಿಗೆ ಉದ್ಯೋಗ ಸಿಗುತ್ತೆ?

    ಪ್ರಪಂಚದಲ್ಲಿಯೇ ಅತಿದೊಡ್ಡ ಎಲೆಕ್ಟ್ರಾನಿಕ್ ಉಪಕರಣ ಉತ್ಪಾದಕ ಘಟಕವಾಗಿದ್ದು, ನೋಯ್ಡಾದ ಸುಮಾರು 35 ಎಕರೆ ಪ್ರದೇಶದಲ್ಲಿ ತಯಾರಿಕಾ ಘಟಕ ನಿರ್ಮಾಣವಾಗಿದೆ. ಈ ಘಟಕದಲ್ಲಿ ಉತ್ಪನ್ನಗಳಾದ, ಸ್ಮಾರ್ಟ್ ಫೋನ್, ಏರ್ ಕಂಡೀಷನರ್, ರೆಫ್ರಿಜರೇಟರ್, ಫ್ಲ್ಯಾಟ್ ಪ್ಯಾನೆಲ್ ಟಿವಿ, ವಾಷಿಂಗ್ ಮಷಿನ್ ಹಾಗೂ ಅನೇಕ ಉತ್ಪನ್ನಗಳು ತಯಾರಾಗಲಿದೆ.

    ಪ್ರತಿ ತಿಂಗಳಿಗೆ ಸುಮಾರು 1.2 ಕೋಟಿ ಮೊಬೈಲ್ ಫೋನ್ ಗಳನ್ನು ತಯಾರಿಸುವ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ. ಪ್ರಸ್ತುತವಾಗಿ ಸ್ಯಾಮ್‍ಸಂಗ್ ಕಂಪನಿಯು ಭಾರತದಲ್ಲಿ 67 ಲಕ್ಷ ಸ್ಮಾರ್ಟ್ ಫೋನ್‍ಗಳನ್ನು ತಯಾರಿಸುತ್ತಿದೆ.