Tag: ಕೊಡಗಿನ ಯೋಧ

  • ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಮಡಿಕೇರಿ: 1965ರಲ್ಲಿ ಭಾರತ-ಪಾಕ್ (Indo – Pak war 1965) ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ತೆರೆಯಮೇಲೆ ಬರಲು ಸಜ್ಜಾಗಿದೆ. ನೈಜ ಘಟನೆಯನ್ನಾಧರಿಸಿದ ʻಸ್ಕೈ ಫೋರ್ಸ್ʼ (Sky Force) ಬಾಲಿವುಡ್ ಸಿನಿಮಾ ಇದೇ ಜ.24 ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೈನಿಕರ ತವರು ಜಿಲ್ಲೆ ಕೊಡಗಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

    ಕೊಡಗು ಯೋಧರ (Kodagu Soldier) ಪರಂಪರೆಯ ನಾಡು. ಪ್ರತೀ ಕುಟುಂಬದಲ್ಲಿ ಒಬ್ಬನಾದ್ರೂ ಯೋಧನಾಗಿ ದೇಶ ಸೇವೆ ಮಾಡಬೇಕು ಅನ್ನೋದು ಇಲ್ಲಿನ ಜನರ ಮನೋಭಾವ. ಈ ಪುಣ್ಯ ಭೂಮಿಯಲ್ಲಿ ಹುಟ್ಟಿ ದೇಶಕ್ಕಾಗಿ ಪ್ರಾಣಕೋಡುವ ಯೋಧರು ಕೊಡಗು ಜಿಲ್ಲೆಯಲ್ಲಿ ಇಂದಿಗೂ ಇದ್ದಾರೆ. ಈ ನಡುವೆ 1965ರಲ್ಲಿ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡರ್‌ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಸಿನಿಮಾ ರೂಪದಲ್ಲಿ ತೆರೆಮೇಲೆ ಬರುತ್ತಿದೆ. ದೇಶಾದ್ಯಂತ ಚಿತ್ರ ಜ.24ರಂದು ರಿಲೀಸ್‌ ಆಗಲಿದೆ.

    ಈ ಚಿತ್ರದಲ್ಲಿ ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿ ನಡೆಸಿತು. ಇದು ಭಾರತೀಯ ವಾಯುಪಡೆಯ ಮೊದಲ ಮತ್ತು ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ದೇಶಪ್ರೇಮದ ಜೊತೆಗೆ ಸಾಹಸ ದೃಶ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಭಾರತೀಯ ವಾಯುಪಡೆಯ ಧೈರ್ಯದ ಪ್ರತೀಕ ಎಂಬಂತೆ ಚಿತ್ರಿಸಲಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರು ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೂ ಜೀವದಮೇಲಿನ ಹಂಗು ತೊರೆದು, ಶತ್ರು ರಾಷ್ಟ್ರ ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಹೊಡೆದುರುಳಿಸಿ ಹುತಾತ್ಮರಾದರು.

    ಈ ಘಟನೆಯು ಹಲವು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನ ಬಿಬಿಸಿ ಸಂದರ್ಶನ ಮಾಡಿದಾಗ ಬೆಳಕಿಗೆ ಬಂದಿತು. ಶೌರ್ಯ ಮೆರೆದು ಹುತಾತ್ಮರಾದ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯ ನೈಜ ಘಟನೆಯ ಚಿತ್ರವಾಗಿರುವುದರಿಂದ ಜಿಲ್ಲೆಯ ಜನರು ಹರ್ಷ ವ್ಯಕ್ತ ಪಡಿಸುತ್ತಿದ್ದಾರೆ.

    ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕ ʻ1965ರ ಯುದ್ಧ ಹಾಗೂ ಮಹಾವೀರʼ ಆಧರಿಸಿ ʻಸ್ಕೈ ಫೋರ್ಸ್‌ʼ ಚಿತ್ರ ನಿರ್ಮಿಸಲಾಗಿದೆ. ಮ್ಯಾಡಾಕ್ ಫಿಲ್ಕ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನ‌ರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಂದೀಪ್‌ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್‌ ಕೌರ್ ಮತ್ತು ಶರದ್ ಕೇಳ್ಳ‌ರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಕನ್ನಡದ ಸೂಪರ್ ಹಿಟ್‌ ಚಿತ್ರ ʻಮುತ್ತಿನಹಾರʼ ನೋಡಿ ರಾಜ್ಯದ ನಾನಾ ಭಾಗದ ನೂರಾರು ಯುವಕರು ಸೈನ್ಯಕ್ಕೆ ಸೇರಲು ಮುಂದಾಗಿದ್ರು.

  • ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್‌ ಅಂತ್ಯಕ್ರಿಯೆ

    ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್‌ ಅಂತ್ಯಕ್ರಿಯೆ

    ಮಡಿಕೇರಿ: ‌ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಹುತಾತ್ಮರಾದ ಕೊಡಗಿನ ಯೋಧ (Kodagu Soldiers) ದಿವಿನ್‌ ಅವರ ಅಂತ್ಯಕ್ರಿಯೆ ಬುಧವಾರ ಹುಟ್ಟೂರಿನಲ್ಲಿ ನೆರವೇರಿತು.

    ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಸಾಂಪ್ರದಾಯಿಕ ವಿಧಿ ವಿಧಾನ ನೆರವೇರಿಸಿದ ನಂತರ ಮಾಲಂಬಿಯ ಜಮೀನಿನಲ್ಲಿ ಚಿತೆಗೆ ಅಗ್ನಿಸ್ಪರ್ಶ ಮಾಡುವುದರೊಂದಿಗೆ ದಿವಿನ್ ಪಂಚಭೂತಗಳಲ್ಲಿ ಲೀನವಾದರು. ಇದನ್ನೂ ಓದಿ:  ಅಶ್ವಮೇಧ ಕುದುರೆಯ ಓಟಕ್ಕೆ ಪ್ರಶಸ್ತಿಗಳ ಸುರಿಮಳೆ – KSRTCಗೆ 9 ಬಹುಮಾನ

    ಇದಕ್ಕೂ ಮೊದಲು ಮೇಜರ್ ನಿಖಿಲ್ ಹಾಗೂ ಸುಬೇದಾರ್ ಮಹೇಶ್ ಜಾಧವ್ ಅವರ ನೇತೃತ್ವದಲ್ಲಿ ಆಗಮಿಸಿದ್ದ ಭಾರತೀಯ ಸೇನಾ ತಂಡ ಹಾಗೂ ಪೊಲೀಸರು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿದರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೇನಾ ವಾಹನದ ಮೂಲಕ ಕುಶಾಲನಗರಕ್ಕೆ ತರಲಾಗಿತ್ತು. ಬುಧವಾರ ಬೆಳಗ್ಗೆ 8 ರಿಂದ 11 ಗಂಟೆ ವರೆಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿತ್ತು. ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಾಚರಣೆ – ಒಂದೇ ದಿನದಲ್ಲಿ ಬಿಎಂಟಿಸಿಗೆ ಬಂತು 5.48 ಕೋಟಿ ರೂ.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶಿಲ್ದಾರ್ ಕಿರಣ್ ಗೌರಯ್ಯ, ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ವಿ.ಪಿ ಶಶಿಧರ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ ಬೇಬಿಮ್ಯಾಥ್ಯು, ಕುಶಾಲನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಮುಖ್ಯ ಶಿಕ್ಷಕರು ಸೇರಿದಂತೆ ಹಲವರು ದಿವಿನ್ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚವಿರಿಸಿ ಅಂತಿಮ ನಮನ ಸಲ್ಲಿಸಿದರು.

    ಬಳಿಕ ದಿವಿನ್ ಪಾರ್ಥಿವ ಶರೀರವನ್ನು ಕೂಡಿಗೆ, ಹೆಬ್ಬಾಲೆ ಮಾರ್ಗವಾಗಿ ಹುಟ್ಟೂರಾದ ಆಲೂರು ಸಿದ್ದಾಪುರಕ್ಕೆ ತರಲಾಯಿತು. ಅಲ್ಲಿ ದಿವಿನ್‌ ಓದಿದ್ದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶಾಸಕ ಡಾ.ಮಂತರ್ ಗೌಡ ಅವರು ಸಾರ್ವಜನಿಕರ ದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಸಿದ್ದರು.

    ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ ಬೋಪಯ್ಯ, ಮಾಜಿ ಸಚಿವ ಎಂ.ಪಿ ಅಪ್ಪಚ್ಚು ರಂಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರೊಬೆಷನರಿ ಎಸ್‌.ಪಿ ಬೆನಕ ಪ್ರಸಾದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ತಹಶೀಲ್ದಾರ್ ಶ್ರೀಧರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಸದಸ್ಯ ಸೂದನ ಈರಪ್ಪ, ಚಂದ್ರಾವತಿ ಬಡ್ಡಡ್ಕ, ಪ್ರಮುಖರಾದ ಎಚ್.ಎಸ್ ಚಂದ್ರಮೌಳಿ ಇತರರು ಅಂತಿಮ ನಮನ ಸಲ್ಲಿಸಿದರು.

    ಇನ್ನೂ ಸಾಂಪ್ರದಾಯಿಕ ವಿಧಿ-ವಿಧಾನಗಳನ್ನು ಹುತಾತ್ಮ ಯೋಧ ದಿವಿನ್ ಕುಟುಂಬದ ಸಂಬಂಧಿ ಚಿರಾಗ್ ನೆರವೇರಿಸಿದರು. ದಿವಿನ್‌ ತಾಯಿ ಜಲಜಾಕ್ಷಿ ಅಂತಿಮ ದರ್ಶನ ಪಡೆದ ಬಳಿಕ ಚಿತೆಗೆ ಅಗ್ನಿಸ್ಪರ್ಶ ನೀಡಲಾಯಿತು.