Tag: ಕೊಡಗು ರಕ್ಷಣಾ ವೇದಿಕೆ

  • ಅಶ್ಲೀಲ ಸಂದೇಶ ಕಳುಹಿಸಿ ವಿವಾಹಿತೆಗೆ ಕಿರುಕುಳ- ಆರೋಪಿಗೆ ನಡುರಸ್ತೆಯಲ್ಲಿ ಬಿತ್ತು ಗೂಸಾ

    ಅಶ್ಲೀಲ ಸಂದೇಶ ಕಳುಹಿಸಿ ವಿವಾಹಿತೆಗೆ ಕಿರುಕುಳ- ಆರೋಪಿಗೆ ನಡುರಸ್ತೆಯಲ್ಲಿ ಬಿತ್ತು ಗೂಸಾ

    ಮಡಿಕೇರಿ: ಪದೇ ಪದೇ ಮೊಬೈಲ್‍ಗೆ ಅಶ್ಲೀಲ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಗುರುವಾರ ಸಂಜೆ ಮಡಿಕೇರಿ ಹೆದ್ದಾರಿಯಲ್ಲಿ ನಡೆದಿದೆ.

    ನಗರದ ವಿವಾಹಿತ ಮಹಿಳೆಗೆ ಯುವಕ ತನ್ನ ಮೊಬೈಲ್‍ನಿಂದ ಸಂದೇಶ ಕಳುಹಿಸುತ್ತಿದ್ದ. ಮಡಿಕೇರಿ ನಗರದಲ್ಲಿ ಮೊಬೈಲ್ ಅಂಗಡಿ ಹಾಗೂ ಕರೆನ್ಸಿ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಮುದಾಸಿರ್ ಮಹಿಳೆಗೆ ಕಿರುಕುಳ ನೀಡುತ್ತಿದ್ದವ ಎಂದು ಗುರುತಿಸಲಾಗಿದೆ.

    ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಹೆಣ್ಣು ಮಕ್ಕಳ ಮೊಬೈಲ್ ನಂಬರ್ ಗಳನ್ನು ಪಡೆದುಕೊಳ್ಳುತ್ತಿದ್ದ ಆರೋಪಿ, ಅವರಿಗೆ ಖಾಲಿ ಪೋಲಿ ಸಂದೇಶಗಳನ್ನು ಕಳುಹಿಸುತ್ತಿದ್ದ. ಆ ಮೂಲಕ ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

    ಆರೋಪಿ ಕಳೆದ ಎರಡು ದಿನಗಳಿಂದ ರಾತ್ರಿ-ಹಗಲು ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಮಹಿಳೆ ದೂರಿದ್ದಾರೆ. ಈತನನ್ನು ಖೆಡ್ಡಾಕ್ಕೆ ಬೀಳಿಸಲು ಪ್ಲಾನ್ ಮಾಡಿದ್ದ ಮಹಿಳೆ, ಸಾಮಾಜಿಕ ಕಾಳಜಿ ಉಳ್ಳ ಕೊಡಗು ರಕ್ಷಣಾ ವೇದಿಕೆ ಗೆ ದೂರು ನೀಡಿದ್ದರು.

    ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆಯವರು ಆತನಿಗೆ ಕರೆ ಮಾಡಿ ಬರುವಂತೆ ತಿಳಿಸಲು ಮಹಿಳೆಗೆ ಹೇಳಿದ್ದರು. ರಕ್ಷಣಾ ವೇದಿಕೆ ಸಲಹೆಯಂತೆ ಮಹಿಳೆ ಆರೋಪಿಯನ್ನು ಹಳೆ ಆರ್‌ಟಿಓ ಕಚೇರಿ ಬಳಿ ಬಾ ಮಾತನಾಡೋಣ ಎಂದು ಸಂದೇಶ ಕಳುಹಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆರೋಪಿಯನ್ನು ಹಿಡಿದುಕೊಂಡ ರಕ್ಷಣಾ ವೇದಿಕೆಯರು ಹಾಗೂ ಯುವತಿ ಹಿಗ್ಗಾ ಮುಗ್ಗಾ ಥಳಿಸಿ ಕೊನೆಗೆ ಮಡಿಕೇರಿ ನಗರದ ಪೋಲಿಸರಿಗೆ ಒಪ್ಪಿಸಿದ್ದಾರೆ.

  • ಕೊಡಗಿನ ಅರಸರ ಬಗ್ಗೆ ಅವಹೇಳನಕಾರಿ ಪೋಸ್ಟ್- ದೂರು ದಾಖಲು

    ಕೊಡಗಿನ ಅರಸರ ಬಗ್ಗೆ ಅವಹೇಳನಕಾರಿ ಪೋಸ್ಟ್- ದೂರು ದಾಖಲು

    ಮಡಿಕೇರಿ: ಕೊಡಗನ್ನು 300 ವರ್ಷಗಳ ಕಾಲ ಆಳ್ವಿಕೆ ಮಾಡಿದ ಹಾಲೇರಿ ರಾಜವಂಶಸ್ಥರಿಗೆ ಅಪಮಾನ ಮಾಡಲಾಗಿದೆ ಎಂದು ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ಪವನ್ ಪೆಮ್ಮಯ್ಯ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಎಲ್ಲಿಂದಲೋ ಬೂದಿ ಬಳಿದುಕೊಂಡು ಬಂದವರಿಗೆ ಪಟ್ಟಕಟ್ಟಿ ಈಗ ಕೊಡಗಿನ ಜನರು ಪಡಬಾರದ ಕಷ್ಟ ಪಡುತ್ತಿದ್ದೇವೆ ಎಂದು ಪವನ್ ಪೆಮ್ಮಯ್ಯ ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.

    ಸಂಸದ ಪ್ರತಾಪ್ ಸಿಂಹ ಅವರು ಕೊಡಗು ಪ್ರವಾಸೋದ್ಯಮದ ಮೇಲೆ ನಿಂತಿದೆ ಎಂದು ಹೇಳಿದ್ದರು. ಇದನ್ನು ಟೀಕಿಸಿಸುವ ಭರದಲ್ಲಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿರುವ ಪವನ್ ಪೆಮ್ಮಯ್ಯ, ಕೊಡಗಿನ ರಾಜವಂಶವನ್ನು ಹೀಯಾಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವೀರಶೈವ ಮಹಾಸಭಾ, ವೀರಶೈವ ಯುವ ವೇದಿಕೆ ಮತ್ತು ಅಖಿಲ ಭಾರತ ವೀರಶೈವ ಆರ್ಯ ಸಮಾಜ ಸೇರಿದಂತೆ ಹಲವು ಸಂಘಟನೆಗಳಿಂದ ದೂರು ನೀಡಲಾಗಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ, ಸೋಮವಾರಪೇಟೆ ಮತ್ತು ಕೊಡ್ಲಿಪೇಟೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಆದರೆ ಪವನ್ ಪೆಮ್ಮಯ್ಯ ಯಾವ ಸುಮುದಾಯದವರಿಗೂ ನೋವು ಉಂಟು ಮಾಡುವ ಉದ್ದೇಶ ಇರಲಿಲ್ಲ. ಪೋಸ್ಟ್ ನಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆ ಯೋಚಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.