Tag: ಕೊಡಗು

  • PUBLiC TV Impact – ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

    PUBLiC TV Impact – ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

    ಮಡಿಕೇರಿ: ನಗರದ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ (Raja Seat Glass Bridge) ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇತ್ತೀಚೆಗೆ ರಾಜಾಸೀಟ್‌ನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಗಾಜಿನ ಸೇತುವೆ ಮತ್ತು ಫುಡ್ ಕೋರ್ಟ್ ನಿರ್ಮಾಣ ಯೋಜನೆಗೆ ತೋಟಗಾರಿಕೆ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದಕ್ಕೆ ಜಿಲ್ಲೆಯ ಜನರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಸರ್ಕಾರ ಆ ಯೋಜನೆಯನ್ನು ಹಿಂಪಡೆದಿದೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಡಿಕೇರಿ ಶಾಸಕ ಮಂಥರ್ ಗೌಡ, ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ರಾಜ್ಯ ಸರ್ಕಾರ ಹಿಂಪಡೆದಿದೆ. ಗ್ಲಾಸ್ ಬ್ರಿಡ್ಜ್‌ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ರದ್ದು ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮುಸುಕುದಾರಿಯ ಮಂಪರು ಪರೀಕ್ಷೆ ಮಾಡಿ : ಕೈ ಶಾಸಕ ಸವದಿ ಒತ್ತಾಯ

    ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಯೋಜನೆಯ ಅಪಾಯಗಳ ಬಗ್ಗೆ ಪಬ್ಲಿಕ್ ಟಿವಿ ಕೆಲ ದಿನಗಳ ಹಿಂದೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಕೊಡಗು (Kodagu) ಜಿಲ್ಲಾಡಳಿತದಿಂದ ಯೋಜನೆ ರದ್ದು ಮಾಡಲಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ ಕರೆಯುವ ಮೊದಲು ಅಲ್ಲಿಗೆ ಭೂ ವಿಜ್ಞಾನಿಗಳನ್ನ, ಪರಿಸರ ಇಲಾಖೆ ತಜ್ಞರನ್ನ ಕರೆಸಿ ವಿವಿಧ ಪರೀಕ್ಷೆಗಳನ್ನು ಮಾಡಬೇಕಿತ್ತು. ಗ್ಲಾಸ್ ಬ್ರಿಡ್ಜ್ ನಿರ್ಮಾಣ ಮಾಡಲು ಈ ಜಾಗ ಸುರಕ್ಷಿತವಾಗಿದೆಯಾ ಎಂದು ಚೆಕ್ ಮಾಡಬೇಕಿತ್ತು. ಆದರೆ ಯಾವುದನ್ನೂ ಮಾಡದೆ ತೋಟಗಾರಿಕಾ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಮಾಜಿ ಸಚಿವ ಎಂಸಿ ನಾಣಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಯೋಜನೆಯನ್ನು ಕೈಬಿಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: Bengaluru | ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ ಮಾಜಿ ಬಾಯ್‌ಫ್ರೆಂಡ್

  • ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

    – ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಎಂದ ಕೆಪಿಸಿಸಿ ವಕ್ತಾರ

    ಮಡಿಕೇರಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತಗಳ್ಳತನ (Vote Rigging) ನಡೆದಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ (M Lakshman) ಆರೋಪಿಸಿದ್ದಾರೆ.

    ಮಡಿಕೇರಿಯಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನಲ್ಲಿ (Bengaluru) ರಾಹುಲ್‌ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು (Mysuru Kodagu) ಕ್ಷೇತ್ರದಲ್ಲೂ ಮತಗಳ್ಳತನ ಆಗಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳು ಬಹುತೇಕ ಕಳವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆಂದು ತಿಳಿಸಿದ್ದೇನೆ. ಇದನ್ನೂ ಓದಿ: ಪ್ರತಾಪ್‌ ಸಿಂಹ ಮೊಬೈಲ್‌ SITಗೆ ಕೊಟ್ರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್‌

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 23 ಲಕ್ಷ ಮತದಾರರಿದ್ದು, 8 ವಿಧಾನಸಭಾ ಕ್ಷೇತ್ರಗಳಲ್ಲಿ 2,202 ಮತಗಟ್ಟೆಗಳಿವೆ. ಬೂತ್‌ ವಾರು ವಿಶ್ಲೇಷಣೆ ಮಾಡಿ ಪಟ್ಟಿ ಮಾಡಲಾಗಿದ್ದು, 292 ಮತಗಟ್ಟೆಗಳಲ್ಲಿ ಇವಿಎಂ ರಿಗ್ಗಿಂಗ್ ನಡೆದಿರುವ ಬಗ್ಗೆ ದಾಖಲೆ ಸಂಗ್ರಹಿಸಲಾಗಿದೆ. ಮೈಸೂರಿನ ಚಾಮರಾಜ, ಕೃಷ್ಣರಾಜ, ಮಡಿಕೇರಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 1,45,616 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್‌ 27,522 ಹಾಗೂ ಬಿಜೆಪಿಗೆ 1,18,094 ಮತ ಬಂದಿವೆ. 2018, 2023ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆ ಶೇ 40ಕ್ಕಿಂತ ಹೆಚ್ಚು ಮತಗಳು ಬಂದಿದ್ದವು. ಆದರೆ, 2024ರ ಚುನಾವಣೆಯಲ್ಲಿ ಶೇ 10ಕ್ಕಿಂತಲೂ ಕಡಿಮೆ ಮತಗಳು ಮಾತ್ರ ಬಂದಿರುವುದು ಮತಗಳವು ಆಗಿರೋದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

    ಗ್ರಾಮವೊಂದರ ಬೂತ್‌ ನಲ್ಲಿ 750 ಮತ ಚಲಾವಣೆಯಾಗಿದ್ದು, 15 ಮನೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ. ಕನಿಷ್ಠ 50 ಮತಗಳಾದರೂ ಬರಬೇಕಿತ್ತು. ಆದ್ರೆ ಬಂದಿದ್ದು 7 ಮತ ಮಾತ್ರ. ನರಸಿಂಹರಾಜ ಕ್ಷೇತ್ರದ ಶಾಂತಿನಗರದಲ್ಲಿ ಒಂದೇ ಸಮುದಾಯ ಮಾತ್ರವೇ ಇದೆ. 700 ಮತಗಳಲ್ಲಿ 500 ಕಾಂಗ್ರೆಸ್‌ಗೆ ಮತ್ತು ಬಿಜೆಪಿಗೆ 200 ಮತ ಸಿಕ್ಕಿವೆ. ಇಲ್ಲಿ ಬಿಜೆಪಿಗೆ ಒಂದೇ ಒಂದೂ ವೋಟು ಸಿಗುವ ಅವಕಾಶ ಇಲ್ಲ. ಜೊತೆಗೆ 700 ಮತದಾರರಿದ್ದರೂ 750 ಮತಗಳು ಚಲಾವಣೆಯಾಗಿವೆ. ಈವೆಲ್ಲವೂ ಮತ ಕಳವು ಆಗಿರುವುದಕ್ಕೆ ಸ್ಪಷ್ಟ ನಿದರ್ಶನ ಎಂದು ಅರೋಪಿಸಿದ್ರು. ಇದನ್ನೂ ಓದಿ: ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಧರ್ಮಸ್ಥಳ ಕೇಸ್‌; ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ
    ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಲಕ್ಞ್ಮಣ್‌, ದೂರುದಾರ ಕೋರ್ಟ್‌ನಲ್ಲಿ ನೇರವಾಗಿ ಹೇಳಿಕೆ ನೀಡಿದ್ದಾರೆ. ಅದರ ಆಧಾರದ ಮೇಲೆ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿದೆ. ತನಿಖೆಯೇ ಮಾಡಬಾರದು ಅಂದ್ರೆ ಹೇಗೆ? ಇಲ್ಲಿ ಧರ್ಮಸ್ಥಳ ದೇವಸ್ಥಾನದ ಬಗ್ಗೆಯಾಗಲಿ, ವೀರೇಂದ್ರ ಹೆಗ್ಗಡೆಯವರ ಬಗ್ಗೆಯಾಗಲಿ ತನಿಖೆ ಮಾಡುತ್ತಿಲ್ಲ. ದೂರುದಾರ 164 ಅಡಿಯಲ್ಲಿ ಹೇಳಿಕೆ ನೀಡಿದ್ದರಿಂದ ಎಸ್‌ಐಟಿ ತನಿಖೆ ನಡೆಯುತ್ತಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಕೊಡುವ ಕೆಲಸವನ್ನು ಸರ್ಕಾರ ಮಾಡೇ ಮಾಡುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

  • Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

    Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

    ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (orange alert) ಘೋಷಣೆ ಮಾಡಲಾಗಿದೆ.

    ಹವಾಮಾನ ಇಲಾಖೆಯು ಕೊಡಗು (Kodagu), ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: Rain Alert | ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ – ಇಂದು ಶಾಲಾ, ಕಾಲೇಜುಗಳಿಗೆ ರಜೆ

    ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ಕೊಡಗಿನಲ್ಲಿಂದು ಶಾಲಾ, ಕಾಲೇಜುಗಳಿಗೆ ರಜೆ
    ಕೊಡಗಿನಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾಜಿರಂಗ ಹುಲ್ಲುಗಾವಲು ಪಕ್ಷಿ ಗಣತಿ –  ಮೋದಿ ಉಲ್ಲೇಖಿಸಿದ ಸಮೀಕ್ಷೆಯ ವಿಶೇಷತೆ ಏನು?

    ವಿಜಯಪುರದಲ್ಲೂ ಭಾರೀ ಮಳೆ:
    ಅತ್ತ ವಿಜಯಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು, ಸಿಡಿಲು ಸಮೇತ ಭಾರಿ ಮಳೆ ಆಗುತ್ತಿದೆ. ಮಳೆಗೆ ನಗರ ಜೀವನ ಅಸ್ಥವ್ಯಸ್ಥವಾಗಿದೆ. ನಗರದ ಬಡಿ ಕಮಾನ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಮಳೆ ನೀರಿಗೆ ರಸ್ತೆಗಳು ಮುಚ್ಚಿ ಹೋಗಿವೆ. ಬೈಕ್ ಸವಾರರು, ಆಟೋ ಸೇರಿದಂತೆ ವಾಹನ ಸವಾರರು ಓಡಾಡಲು ಹರಸಾಹಸ ಪಡುತ್ತಿದ್ದಾರೆ.

  • Rain Alert | ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ – ಇಂದು ಶಾಲಾ, ಕಾಲೇಜುಗಳಿಗೆ ರಜೆ

    Rain Alert | ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ – ಇಂದು ಶಾಲಾ, ಕಾಲೇಜುಗಳಿಗೆ ರಜೆ

    ಕೊಡಗು: ಕೊಡಗಿನಲ್ಲಿ (Kodagu) ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ (Heavy Rain) ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ.

    ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ವಿಜಯಪುರದಲ್ಲೂ ಭಾರೀ ಮಳೆ:
    ಅತ್ತ ವಿಜಯಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುಡುಗು, ಸಿಡಿಲು ಸಮೇತ ಭಾರಿ ಮಳೆ ಆಗುತ್ತಿದೆ. ಮಳೆಗೆ ನಗರ ಜೀವನ ಅಸ್ಥವ್ಯಸ್ಥವಾಗಿದೆ. ನಗರದ ಬಡಿ ಕಮಾನ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಮಳೆ ನೀರಿಗೆ ರಸ್ತೆಗಳು ಮುಚ್ಚಿ ಹೋಗಿವೆ. ಬೈಕ್ ಸವಾರರು, ಆಟೋ ಸೇರಿದಂತೆ ವಾಹನ ಸವಾರರು ಓಡಾಡಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

  • ಕಾಳಸಂತೆ ಸೇರುತ್ತಿದೆ ಅನ್ನಭಾಗ್ಯ ಅಕ್ಕಿ – ಪಾಲಿಶ್‌ ನೀಡಿ ಹೆಚ್ಚಿನ ಬೆಲೆಗೆ ಮಾರಾಟ?

    ಕಾಳಸಂತೆ ಸೇರುತ್ತಿದೆ ಅನ್ನಭಾಗ್ಯ ಅಕ್ಕಿ – ಪಾಲಿಶ್‌ ನೀಡಿ ಹೆಚ್ಚಿನ ಬೆಲೆಗೆ ಮಾರಾಟ?

    – ಕೊಡಗಿನಲ್ಲಿ 8 ಕ್ವಿಂಟಲ್ ರೇಷನ್ ಅಕ್ಕಿ ಜಪ್ತಿ

    ಮಡಿಕೇರಿ: ಅನ್ನಭಾಗ್ಯ ಯೋಜನೆ (Annabhagya Scheme) ಅಡಿಯಲ್ಲಿ ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಕಾಳಸಂತೆಗೆ ಕೊಂಡೊಯುತ್ತಿದ್ದ ಕಿಡಿಗೇಡಿಗಳನ್ನ ಕೊಡಗು ಕಂದಾಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಪೋನ್ನಂಪೇಟೆ ತಾಲ್ಲೂಕಿನ ಗೋಣಿಕೋಪ್ಪ ಗ್ರಾಮದಲ್ಲಿ ಸುಮಾರು 8 ಕ್ವಿಂಟಲ್ ರೇಷನ್ ಅಕ್ಕಿಯನ್ನ (Rice) ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಹೌದು. ರಾಜ್ಯ ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿ ಕಾಳಸಂತೆಗೆ ಸೇರುತ್ತಿದೆ. ಬಡವರಿಗೆ ಹಣದ ಆಮಿಷವೊಡ್ಡಿ ಕಡಿಮೆ ಬೆಲೆಗೆ ಅನ್ನಭಾಗ್ಯ ಅಕ್ಕಿ ಖರೀದಿಸುತ್ತಿರುವ ಇಡಿಗೇಡಿಗಳು ಬಳಿಕ ಪಾಲಿಶ್‌ ಕೊಟ್ಟು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬರುತ್ತಿದೆ. ಅದರಂತೆ ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ.

    ಕಳೆದ 4-5 ದಿನಗಳ ಹಿಂದೆ ಕೊಡಗಿನ ಕುಶಾಲನಗರದಲ್ಲಿ ಕ್ವಿಟಲ್ ಗಂಟಲ್ಲೇ ಅಕ್ಕಿಯನ್ನ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು (Food Department Officers) ದಾಳಿ ನಡೆಸಿದ್ದರು. ಅಕ್ಕಿಯನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪ್ರಕರಣ ಕೂಡ ದಾಖಲಿಸಿದ್ರು. ಈ ಬೆನ್ನಲ್ಲೇ ಇಂದು ಪೋನ್ನಂಪೇಟೆ ತಾಲ್ಲೂಕಿನ ಗೋಣಿಕೋಪ್ಪ ಗ್ರಾಮದಲ್ಲಿ ಕಾಳಸಂತೆಗೆ ಕೊಂಡೊಯ್ಯುತ್ತಿದ್ದ ಸುಮಾರು 8 ಕ್ವಿಂಟಲ್ ರೇಷನ್ ಅಕ್ಕಿಯನ್ನ ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಗ್ರಾಮದ ವಿಠಲ ಎಂಬುವವರು ಗೋಣಿಕೋಪ್ಪದಿಂದ ಮೈಸೂರು ಕಡೆಗೆ ವಾಹನದಲ್ಲಿ ಸಾಗಟ ಮಾಡುವ ಸಂದರ್ಭದಲ್ಲಿ ರೆವಿನ್ಯೂ ಇಲಾಖೆಯ ಅಧಿಕಾರಿಗಳು ವಾಹನ ತಡೆದು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಾಹನದಲ್ಲಿ ಸುಮಾರು 8 ಕ್ವಿಂಟಲ್ ಪಡಿತರ ಅಕ್ಕಿ ಇರುವುದು ಕಂಡು ಬಂದಿದೆ.

    ಈ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ಪೋನ್ನಂಪೇಟೆ ಪೊಲೀಸರಿಗೆ ದೂರು ನೀಡಿ ವಾಹನ ಹಾಗೂ ವಿಠಲ ಅವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ಮಳೆ ಮಧ್ಯೆ ಕೊಡಗು ಜನರಿಗೆ ಆಗಸ್ಟ್ ಟೆನ್ಷನ್; ಮಡಿಕೇರಿ-ಮಂಗಳೂರು ಹೈವೇ ತಡೆಗೋಡೆಯಲ್ಲಿ ದೊಡ್ಡ ಬಿರುಕು

    ಮಳೆ ಮಧ್ಯೆ ಕೊಡಗು ಜನರಿಗೆ ಆಗಸ್ಟ್ ಟೆನ್ಷನ್; ಮಡಿಕೇರಿ-ಮಂಗಳೂರು ಹೈವೇ ತಡೆಗೋಡೆಯಲ್ಲಿ ದೊಡ್ಡ ಬಿರುಕು

    – 2018ರಲ್ಲಿ ಭೂಕುಸಿತ ಉಂಟಾಗಿದ್ದ ಸ್ಥಳದಲ್ಲೇ ತಡೆಗೋಡೆ ಬಿರುಕು

    ಕೊಡಗು: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಗಾಳಿ ಮಳೆಯ ಆರ್ಭಟ ಜೋರಾಗಿದ್ದು ನಾನಾ ಅವಾಂತರ ಮುಂದುವರೆಯುತ್ತಿದೆ. ಈ ನಡುವೆ 2018ರಲ್ಲಿ ಭೂಕುಸಿತ ಉಂಟಾಗಿದ್ದ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ (Madikeri Mangaluru Highway) ಬಳಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ಅಂತರ್ಜಲದ ಮಟ್ಟ ಹೆಚ್ಚಾಗಿ ತಡೆಗೋಡೆಗಳಲ್ಲಿ ಬಿರುಕು ಉಂಟಾಗುತ್ತಿದ್ದು ಹೆದ್ದಾರಿ ತಡೆಗೋಡೆ ಕುಸಿಯುವ (Barrier collapse) ಭೀತಿ ಎದುರಾಗಿದೆ. ಆತಂಕದಲ್ಲಿದ್ದ 6 ಕುಟುಂಬಗಳನ್ನ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

    ಹೌದು. ಕೊಡಗು (Kodagu) ಜಿಲ್ಲೆಯಲ್ಲಿ ಈಗಾಗಲೇ ಮಳೆಯ ಅರ್ಭಟ ಹೆಚ್ಚಾಗಿ ನಾನಾ ರೀತಿಯ ಅವಾಂತರಗಳು ಮುಂದುವರೆಯುತ್ತಿವೆ. ಈ ನಡುವೆ ಅಗಸ್ಟ್ ತಿಂಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು, ಗುಡ್ಡಗಾಡು ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಈ ನಡ್ವೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ-275ರಲ್ಲಿ ತಡೆಗೋಡೆಯಲ್ಲಿ ಬಿರುಕು ಮೂಡಿದೆ. ಇದನ್ನೂ ಓದಿ: Malegaon Case | ಮೋಹನ್ ಭಾಗವತ್ ಬಂಧನಕ್ಕೆ ಆದೇಶಿಸಿದ್ದ ತನಿಖಾಧಿಕಾರಿ – ನಿವೃತ್ತ ಇನ್ಸ್‌ಪೆಕ್ಟರ್‌ ಸ್ಫೋಟಕ ಹೇಳಿಕೆ

    ಮಡಿಕೇರಿ ಸಮೀಪದ ಕರ್ಣಗೇರಿ ಪ್ರದೇಶದಲ್ಲಿ 2018ರಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿತ್ತು. ಇದರಿಂದಾಗಿ ಮಡಿಕೇರಿ-ಮಂಗಳೂರು ರಸ್ತೆ ಸಂಪರ್ಕ ಕಡಿತಗೊಂಡು ಸುತ್ತಿಬಳಸಿಕೊಂಡು ಮಡಿಕೇರಿ, ಮೈಸೂರಿನತ್ತ ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಭೂಕುಸಿತ ಉಂಟಾಗಿದ್ದ ಪ್ರದೇಶದಲ್ಲಿ ತಡೆಗೋಡೆಯನ್ನ ನಿರ್ಮಾಣ ಮಾಡಿತ್ತು. ಆದರೀಗ ಮಳೆಯ ಅರ್ಭಟ ಹೆಚ್ಚಾಗುತ್ತಿರುವುದರಿಂದ ತಡೆಗೋಡೆ ಬದಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ಭಾರೀ ಪ್ರಮಾಣದ ಬಿರುಕು ಮೂಡುತ್ತಿದೆ. ಇದನ್ನೂ ಓದಿ: Dharmasthala Case | ಮೂಳೆಗಳಿಂದ ರೇಪ್ & ಮರ್ಡರ್ ಅಂತ ಹೇಳೋಕಾಗಲ್ಲ: FSL ತಜ್ಞ ಪ್ರೊ. ಅರುಣ್‌

    ತಡೆಗೋಡೆ ದೊಡ್ಡ ಬಿರುಕು ಮೂಡಿರುವುದರಿಂದ ಇದರ ಕೆಳಭಾಗದಲ್ಲಿ ವಾಸಿಸುತ್ತಿರುವ ಸುಮಾರು 6 ಕುಟುಂಬಗಳನ್ನು ಜಿಲ್ಲಾಡಳಿತ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಿದೆ. ಈ ಬಗ್ಗೆ ʻಪಬ್ಲಿಕ್ ಟಿವಿʼಯೊಂದಿಗೆ ಮಾತನಾಡಿದ ನಿರಾಶ್ರಿತರು 2018ರಲ್ಲೂ ಬಾರಿ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಬರಲು ಸಂಕಷ್ಟದ ಪರಿಸ್ಥಿತಿ ಎದುರಾಗಿತ್ತು. ಈಗ ತಡೆಗೋಡೆಯಲ್ಲಿ ಬಿರುಕು ಹೆಚ್ಚಾಗುತ್ತಿದ್ದು ಮನೆಗಳಲ್ಲಿ ವಾಸ ಮಾಡಲು ಭಯದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಎಲ್ಲಾ ಕುಟುಂಬಸ್ಥರು ಕಾಳಜಿ ಕೇಂದ್ರಗಳಿಗೆ ತೆರಳಲು ಮುಂದಾಗಿದ್ದೇವೆ ಎಂದು ತಿಳಿಸಿದ್ರು.

    ತಡೆಗೋಡೆ ಬಿರುಕು ಬಿಟ್ಟಿರುವ ಸ್ಥಳಕ್ಕೆ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, 2018ರಲ್ಲಿ ಭೂಕುಸಿತ ಉಂಟಾಗಿರುವ ಸ್ಥಳದಲ್ಲೇ ತಡೆಗೋಡೆ ಬಿರುಕು ಮೂಡಿದೆ. ಹೀಗಾಗಿ ಕೆಳಭಾಗದಲ್ಲಿ ವಾಸ ಮಾಡುವ ಜನರನ್ನು ಸ್ಥಳಾಂತರ ಮಾಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವ ಸಮಸ್ಯೆ ಇಲ್ಲ, ಆದರೆ ಭೂಗರ್ಭದ ತಜ್ಞರ ಬಳಿ ಮತ್ತಷ್ಟು ಮಾಹಿತಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ರು.

  • ಕೊಡಗಿನಲ್ಲಿ ಮಳೆ ಆರ್ಭಟ ಜೋರು – 10 ಕುಟುಂಬಗಳು ಕಾಳಜಿ ಕೇಂದ್ರಕ್ಕೆ ಶಿಫ್ಟ್‌

    ಕೊಡಗಿನಲ್ಲಿ ಮಳೆ ಆರ್ಭಟ ಜೋರು – 10 ಕುಟುಂಬಗಳು ಕಾಳಜಿ ಕೇಂದ್ರಕ್ಕೆ ಶಿಫ್ಟ್‌

    ಮಡಿಕೇರಿ: ಸೋಮವಾರಪೇಟೆ (Somavarapete) ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿರುದಾಲೆ ಗ್ರಾಮದಲ್ಲಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಳೆ ಅಂಚಿನಲ್ಲಿ ವಾಸ ಮಾಡುತ್ತಿರುವ ಸುಮಾರು 10 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ (Care center) ಸ್ಥಳಾಂತರಿಸಲಾಗಿದೆ.

    ಹೌದು. ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಕಿರುದಾಲೆ ಗ್ರಾಮದಲ್ಲಿ ನದಿನೀರಿನ‌ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಆತಂಕದಲ್ಲೇ ದಿನ ದೂಡುತ್ತಿದ್ದ ಸುಮಾರು 10 ಕುಟುಂಬಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.

    2018 ರಿಂದಲೇ ತಾವು ವಾಸ ಮಾಡುವ ಮನೆಗಳಲ್ಲಿ ಬಿರುಕು ಮೂಡಿವೆ. ಈಗ ಗಾಳಿ ಮಳೆ ಹೆಚ್ಚಾಗಿರುವುದರಿಂದ ಯಾವ ಸಮಯದಲ್ಲಿ ಅನ್ನೋ ಆತಂಕದಲ್ಲಿ ಕಾಳಜಿ ಕೇಂದ್ರಗಳಿಗೆ ತೆರಳುತ್ತಿದ್ದಾರೆ.

    ಈ‌ ನಡುವೆ ಪಬ್ಲಿಕ್ ಟಿವಿಯೊಂದಿಗೆ ಮಾತಾನಾಡಿದ ನಿರಾಶ್ರಿತರು, ಕಳೆದ 4 ದಿನಗಳಿಂದ ಹೊಳೆಯ ನೀರು ಅಪಾಯ ಮಟ್ಟ. ಮೀರಿ ಹರಿಯುತ್ತಿದೆ. ಅಲ್ಲದೇ ಮನೆಗಳು ಸಂಪೂರ್ಣ ಹಾನಿಯಾಗಿವೆ, ಗೋಡೆಗಳಲ್ಲಿ ಬಿರುಕು ಮೂಡಿದೆ. ಯಾವ ಕ್ಷಣದಲ್ಲಾದರೂ ಮನೆಗಳು ಬೀಳುವಂತಿವೆ. ಹೀಗಾಗಿ ಸ್ವಯಂಪ್ರೇರಿತವಾಗಿ ಕಾಳಜಿ ಕೇಂದ್ರಗಳಿಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

    ಸೋಮವಾರಪೇಟೆ ತಹಶಿಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ತೊಂದರೆಯಲ್ಲಿ ಇರುವಂತಹ ಕುಟುಂಬಸ್ಥರನ್ನ ಕಾಳಜಿ ಕೇಂದ್ರಗಳಿಗೆ ಶಿಫ್ಟ್‌ ಮಾಡಲಾಗಿದೆ. ಮಳೆಗಾಲ ಕಳೆಯುವವರೆಗೂ ಕಾಳಜಿ ಕೇಂದ್ರಗಳಲ್ಲಿ ಇವರೆಲ್ಲರೂ ಇರಬಹುದು ಎಂದಿದ್ದಾರೆ.

  • ರಸ್ತೆ ಇಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನ ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಜನ

    ರಸ್ತೆ ಇಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನ ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಜನ

    – ವೃದ್ಧೆಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ʻಪಬ್ಲಿಕ್‌ ಟಿವಿʼ ತಂಡ

    ಮಡಿಕೇರಿ: ರಸ್ತೆ ಸಂಪರ್ಕವೇ ಇಲ್ಲದೇ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 76 ವರ್ಷದ ವೃದ್ಧೆಯನ್ನ ಕಂಬಳಿಯಿಂದ ಆಸ್ಪತ್ರೆಗೆ (Hospital) ಹೊತ್ತೊಯ್ದ ಮನಕಲುಕುವ ದೃಶ್ಯ ಕೊಡಗು (Kodagu) ಜಿಲ್ಲೆಯಲ್ಲಿ ಕಂಡುಬಂದಿದೆ.

    ಹೌದು. ಕೊಡಗಿನಲ್ಲಿ ವರುಣನ ಆರ್ಭಟ (Heavy Rain) ಹೆಚ್ಚಾಗಿದ್ದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಬೀಸುವ ಬಿರುಗಾಳಿಗೆ ಗ್ರಾಮೀಣ ಭಾಗದಲ್ಲಿ ಹತ್ತಾರು ಬೃಹತ್‌ ಮರಗಳು ದರಾಶಾಹಿಯಾಗಿವೆ. ಈ ನಡುವೆ ಮನಕಲುಕುವ ಪ್ರಸಂಗವೊಂದು ಕಂಡುಬಂದಿದೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಗೋ ಅರ್ಹತೆ ಇತ್ತು: ಆರ್.ವಿ.ದೇಶಪಾಂಡೆ

    ಸೋಮವಾರಪೇಟೆ ತಾಲ್ಲೂಕಿನ ಕಿರುದಾಲೆ ಗ್ರಾಮದಲ್ಲಿ ಇರುವಂತಹ ವಯೋವೃದ್ಧೆಯೋಬ್ಬರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೆರಳಲು ಆಗದೇ ತಮ್ಮ ಮನೆಯಲ್ಲೇ ನರಳಾಡುತ್ತಿದ್ದರು. ಈ ವೇಳೆ ಕಿರುದಾಲೆ ಗ್ರಾಮದಲ್ಲಿ ಗ್ರೌಂಡ್ ರಿಪೋರ್ಟ್ ಮಾಡುತ್ತಿದ್ದ ʻಪಬ್ಲಿಕ್ ಟಿವಿʼ ತಂಡ ವೃದ್ಧೆಯ ನರಳಾಟವನ್ನು ಗಮನಿಸಿದೆ. ರಸ್ತೆ ಸಂಪರ್ಕವಿಲ್ಲದ ಕಾರಣ ಗ್ರಾಮಸ್ಥರ ಜೊತೆಗೂಡಿ ಕಂಬಳಿ ಸಹಾಯದಿಂದ ಕಾಫಿತೋಟದ ಮೂಲಕ ವೃದ್ಧೆಯನ್ನ ಆಸ್ಪತ್ರೆಗೆ ಸಾಗಿಸಲಾಯಿತು. ಕಾಫಿ ತೋಟದ ದುರ್ಘಮ ಹಾದಿಯಲ್ಲಿ ಸುಮಾರು ಅರ್ಧ ಕಿಮೀ ಸಾಗಿ ಮಡಿಕೇರಿ ಆಸ್ಪತ್ರೆಗೆ ಸಾಗಿಸಲಾಯಿತು. ಇದನ್ನೂ ಓದಿ: ಚಳ್ಳಕೆರೆ | ಕಾರು, ಬೈಕ್ ನಡುವೆ ಭೀಕರ ಅಪಘಾತ – ಹಬ್ಬದ ದಿನವೇ ಅಣ್ಣ, ತಂಗಿ ದಾರುಣ ಸಾವು

    ಈ‌ ಸಂದರ್ಭ ʻಪಬ್ಲಿಕ್ ಟಿವಿʼಯೊಂದಿಗೆ ಮಾತಾನಾಡಿದ ಗ್ರಾಮಸ್ಥರು, 2018ರಂತೆಯೇ ಈ ಭಾಗದಳೆ ಮಳೆ ಗಾಳಿ ಹೆಚ್ಚಾಗಿದೆ. ಶಾಲಾ‌ ಮಕ್ಕಳು, ವಯೋವೃದ್ಧರನ್ನ ಹೊರಗೆ ಕರೆದುಕೊಂಡು ಹೋಗಲು ಆಗುತ್ತಿಲ್ಲ. ಭಾರಿ ಗಾಳಿ ಬಿಸುತ್ತಿರುವುದರಿಂದ ಯಾವ ಸಮಯದಲ್ಲಿ ಮರಗಳು ಬೀಳುತ್ತವೆ ಎಂದು ಗೊತ್ತಾಗುತ್ತಿಲ್ಲ. ಹೀಗಾಗಿ ಅನಾರೋಗ್ಯದಿಂದ ನರಳಾಡುತ್ತಿದ್ದ ವೃದ್ಧೆಯನ್ನ ತೋಟದ ಬದಿಯಿಂದ ಆಸ್ಪತ್ರೆಗೆ ಸಾಗಿಸುತ್ತಿದ್ದೇವೆ. ಇದಕ್ಕೆ ಪಬ್ಲಿಕ್‌ ಟಿವಿ ತಂಡ ಕೈಜೋಡಿಸಿದೆ, ಧನ್ಯವಾದಗಳು ಅಂತ ಭಾವುಕರಾದ್ರು.

  • ಕೊಡಗಿನಲ್ಲಿ ನಿರಂತರ ಮಳೆ – ಭೂಕುಸಿತ ಆತಂಕದ ನಡುವೆಯೇ ಜನರ ಜೀವನ

    ಕೊಡಗಿನಲ್ಲಿ ನಿರಂತರ ಮಳೆ – ಭೂಕುಸಿತ ಆತಂಕದ ನಡುವೆಯೇ ಜನರ ಜೀವನ

    – 2018ರ ಪ್ರವಾಹ, ಭೂಕುಸಿತದ ಆತಂಕ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಯಿತ್ತೆಂದರೆ ಎಲ್ಲಿ, ಯಾವಾಗ, ಯಾವ ಬೆಟ್ಟ ಕುಸಿಯುತ್ತೋ ಅನ್ನೋ ಆತಂಕ ಶುರುವಾಗುತ್ತೆ. ಎಲ್ಲೇ ಭೂಕುಸಿತ ಸಂಭವಿಸಿದ್ರೂ ಇಲ್ಲಿನ ಜನಕ್ಕೆ 2018ರ ಪ್ರವಾಹವೇ ಕಣ್ಣಮುಂದೆ ಬಂದು ಹೋಗುತ್ತೆ. ಇದೀಗ ನಿರಂತರ ಮಳೆಯಿಂದ (Heavy Rain) ಮತ್ತೆ ಜನರಲ್ಲಿ ಗುಡ್ಡ ಕುಸಿತದ ಆತಂಕ ಶುರುವಾಗಿದೆ.

    Kodagu

    ಹೌದು. ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಇರುವ ಮಲೆತಿರಿಕೆ ಅಯ್ಯಪ್ಪ ಬೆಟ್ಟದಲ್ಲಿ 2019ರಲ್ಲಿಯೇ ಹಲವೆಡೆ ದೊಡ್ಡ ದೊಡ್ಡ ಬಿರುಕುಗಳು ಮೂಡಿದ್ದವು. ಜೊತೆಗೆ ಹಲವೆಡೆ ಚಿಕ್ಕಪುಟ್ಟ ಭೂಕುಸಿತಗಳು (Landslides) ಅಂಭವಿಸಿವೆ. ವಿಪರ್ಯಾಸವೆಂದರೆ ಈ ಬೆಟ್ಟದಲ್ಲಿ ನೂರಾರು ಕುಟುಂಬಗಳು 35 ರಿಂದ 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು ಬದುಕು ಕಟ್ಟಿಕೊಂಡಿವೆ. ಇದನ್ನೂ ಓದಿ: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌

    ಕಳೆದ 4-5 ವರ್ಷಗಳ ಹಿಂದೆಯೇ ಬೆಟ್ಟದಲ್ಲಿ ಸಾಕಷ್ಟು ಬಿರುಕುಗಳು ಮೂಡಿದ್ದರಿಂದ ಅಲ್ಲಿನ ಎಲ್ಲಾ ನಿವಾಸಿಗಳನ್ನು ಮಳೆಗಾಲದಲ್ಲಿ ಸ್ಥಳಾಂತರ ಮಾಡಿ ನಿರಾಶ್ರಿತರ ಶಿಬಿರಗಳಿಗೆ ಕಳುಹಿಸಲಾಗಿತ್ತು. ಈ ಕುಟುಂಬಗಳ ಒತ್ತಾಯದ ಮೇರೆಗೆ ವಿರಾಜಪೇಟೆ ಪಕ್ಕದಲ್ಲೇ ಇರುವ ಅಂಬಟ್ಟಿ ಎಂಬಲ್ಲಿ ನಿವೇಶನ ಹಂಚಲು ಅಂದಿನ ಬಿಜೆಪಿ ಸರ್ಕಾರ ನಿರ್ಧರಿಸಿತ್ತು. ಹಾಗೇ ಹೇಳಿ 4-5 ವರ್ಷಗಳೇ ಕಳೆದರೂ ಇಂದಿಗೂ ಆ ಕೆಲಸ ಆಗಿಲ್ಲ. ಇದನ್ನೂ ಓದಿ: ಮುಂಗಾರು ಅಬ್ಬರ – ಕಾವೇರಿ ನದಿಯಲ್ಲಿ ಪಿಂಡ ಪ್ರದಾನ ನಿಷೇಧ

    ಹೀಗಾಗಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಇಲ್ಲಿನ ಬೆಟ್ಟದ ನಿವಾಸಿಗಳು ಆತಂಕಗೊಂಡಿದ್ದಾರೆ. ಈ ಬಾರಿ ಕಾಳಜಿ ಕೇಂದ್ರಕ್ಕೆ ಹೋಗಲ್ಲ, ಏನೇ ಆದ್ರೂ ಇಲ್ಲೇ ಇರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಮಳೆಯಬ್ಬರ – ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

  • ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

    ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು (Rain Effect) ಮುಂದುವರಿಯುತ್ತಿದೆ.

    ಈ‌ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿಂದು ಬೆಳಗ್ಗೆ 5:30ರ ಸುಮಾರಿಗೆ ಮಳೆ ಗಾಳಿಗೆ ಮನೆ ಕುಸಿದು ಬಿದ್ದು ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಇದನ್ನೂ ಓದಿ: ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

    ಮಹಿಳೆ ಮೃತಪಟ್ಟಿದ್ದು, ಆಕೆಯ ಮಕ್ಕಳು ಹಾಗೂ ಸಹೋದರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾನಗಲ್‌ ಗ್ರಾಮದ ಗಣಪತಿ ದೇವಸ್ಥಾನದ ಸಮೀಪದಲ್ಲಿರುವ ಸುಷ್ಮಾ (37) ಮೃತ ಮಹಿಳೆ ಆಗಿದ್ದಾರೆ. ಇವರ ಮೂವರು ಮಕ್ಕಳು ಹಾಗೂ ಸಹೋದರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದನ್ನೂ ಓದಿ: ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

    ಮಳೆಯಲ್ಲೇ ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವ
    ಇನ್ನೂ ಸೇನಾನಾಡು ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವವನ್ನ (Kargil Vijay Diwas) ಸಂಭ್ರಮದಿಂದ ಆಚರಿಸಲಾಯಿತು. ಮಳೆಯನ್ನು ಲೆಕ್ಕಿಸದೇ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ನಿಂದ ಮಡಿಕೇರಿ ನಗರದ ಯುದ್ಧ ಸ್ಮಾರಕ ಬಳಿ ಪುಷ್ಪ ನಮನ ಸಲ್ಲಿಸುವ ಮೂಲಕ ಯೋಧರಿಗೆ ಗೌರವ ಸಲ್ಲಿಲಾಯಿತು. ಇದನ್ನೂ ಓದಿ: ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

    ನೂರಾರೂ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಅಗಲಿದ ವೀರ ಸೇನಾನಿಗಳನ್ನ ಸ್ಮರಿಸಿದರು. ಅಲ್ಲದೇ ಅಂದಿನ ದಿನದಲ್ಲಿ ಸೈನಿಕರು ಹಾಗೂ ಅವರ ಕುಟುಂಬಸ್ಥರು ಯಾವ ರೀತಿಯ ನೋವು ಅನುಭವಿಸುತ್ತಿದ್ದರು, ಇಂದಿನ ದಿನಗಳಲ್ಲಿ ಸೈನಿಕರ ಕುಟುಂಬಗಳನ್ನ ಸರ್ಕಾರಿ ಅಧಿಕಾರಿಗಳು ಹೇಗೆ ನೋಡ್ತಿದ್ದಾರೆ ಅಂತ ಕೆಲ ಸೈನಿಕರು ನೋವು ಹಂಚಿಕೊಂಡರು. ಈ ಸಂದರ್ಭದಲ್ಲಿ ಹಿಂದೂ ಪರ ಕಾರ್ಯಕರ್ತರು ಸಿಹಿ ಹಂಚಿ ಕಾರ್ಗಿಲ್‌ ವಿಜಯೋತ್ಸವವನ್ನು ಸಂಭ್ರಮಿಸಿದರು.