`ಕೊತ್ತಲವಾಡಿ’ ಚಿತ್ರದ (Kothalavadi Cinema) ಅಭಿನಯಕ್ಕೆ ತಮಗೆ ಸಂಭಾವನೆ ಬಂದಿಲ್ಲ ಎಂದು ಸಹನಟ ಮಹೇಶ್ ಗುರು ಹಾಗೂ ಸಹನಟಿ ಸ್ವರ್ಣ (Swarna) ಸೋಶಿಯಲ್ ಮೀಡಿಯಾದಲ್ಲಿ ನಿರ್ದೇಶಕ ಶ್ರೀರಾಜ್ ಹಾಗೂ ನಿರ್ಮಾಣ ಸಂಸ್ಥೆ ವಿರುದ್ಧ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ನಿರ್ದೇಶಕ ಶ್ರೀರಾಜ್, ಕಲಾವಿದ ಮಹೇಶ್ ವಿರುದ್ಧ ದೂರು ನೀಡಿದ್ದರು. ಇದೀಗ ಸಹನಟಿ ಸ್ವರ್ಣ ವಿರುದ್ಧವೂ ದೂರು ನೀಡಿದ್ದಾರೆ.
ಕೊತ್ತಲವಾಡಿ ಸಹನಟಿ ಸ್ವರ್ಣ ತಮ್ಮ ಯೂಟ್ಯೂಬ್ ಚಾನಲ್ನಲ್ಲಿ ವೀಡಿಯೋ ಮೂಲಕ ನಿರ್ದೇಶಕರ ವಿರುದ್ಧ ಮಾತನಾಡಿದ್ದರು. ಸಿನಿಮಾದಲ್ಲಿ ಕಷ್ಟ ಪಟ್ಟು ನಟಿಸಿದ್ದೇನೆ. ಸಂಭಾವನೆಯ ಬಗ್ಗೆ ಮಾತನಾಡಿರುವಷ್ಟು ಅವರು ಹಣ ಕೊಟ್ಟಿಲ್ಲ ಎಂದು ಆರೋಪಿಸಿದ್ದರು. ಹೀಗಾಗಿ ನಿರ್ದೇಶಕ ಶ್ರೀರಾಜ್, ನಟಿ ಸ್ವರ್ಣ ವಿರುದ್ಧ ದೂರು ದಾಖಲಿಸಿದ್ದಾರೆ.

ವೈಯಕ್ತಿಕ ತೇಜೋವಧೆ ಹಾಗೂ ಯಶ್ ತಾಯಿ ಪುಷ್ಪ ಅರುಣ್ಕುಮಾರ್ ಸಿನಿಮಾ ನಿರ್ಮಾಣ ಸಂಸ್ಥೆಗೆ ಮಾನಹಾನಿ ಮಾಡಿರುವುದನ್ನ ಖಂಡಿಸಿ ದೂರು ನೀಡಿದ್ದು, ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊತ್ತಲವಾಡಿ ನಿರ್ಮಾಪಕರಿಗೆ ಅನ್ಯಾಯವಾಗಿದೆ, ಗೊತ್ತಾಗ್ಲಿ ಅಂದೇ ಇಷ್ಟೆಲ್ಲಾ ಮಾಡಿದ್ದು: ನಟಿ ಸ್ವರ್ಣ
ದೂರಿನಲ್ಲಿ ಕಲಾವಿದರಿಗೆ ಈಗಾಗಲೇ ಹಣ ನೀಡಿರುವ ಮಾಹಿತಿ ಉಲ್ಲೇಖಿಸಿದ್ದು, ಸಂಬಂಧಿತ ದಾಖಲೆಗಳನ್ನ ಬಹಿರಂಗ ಪಡಿಸಿರುವುದಾಗಿಯೂ ಹೇಳಿದ್ದಾರೆ. ಆದ್ರೆ ಯಾವುದೂ ಅಗ್ರಿಮೆಂಟ್ ಪ್ರಕಾರ ನಡೆದಿಲ್ಲವಾದ ಕಾರಣ ಈ ಕಾನೂನು ಹೋರಾಟ ಯಾವಾಗ ತಾರ್ಕಿಕ ಅಂತ್ಯ ಕಾಣುತ್ತದೆ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಉಪೇಂದ್ರ ಸಿನಿಮಾಗೆ ಓಂ ಪ್ರಕಾಶ್ ರಾವ್ ನಿರ್ದೇಶನ
ನಿರ್ದೇಶಕರ ವಿರುದ್ಧ ಸ್ವರ್ಣ ಆರೋಪ ಏನು?
ವಿಡಿಯೋದಲ್ಲಿ ನಿರ್ದೇಶಕ ಶ್ರೀರಾಜ್ ಬಗ್ಗೆ ಮಾತನಾಡಿರುವ ಸ್ವರ್ಣ, ಸಿನಿಮಾದಲ್ಲಿ ಕಷ್ಟ ಪಟ್ಟು ನಟಿಸಿದ್ದೇನೆ. ಸಂಭಾವನೆಯ ಬಗ್ಗೆ ಮಾತನಾಡಿರುವಷ್ಟು ಅವರು ಹಣ ಕೊಟ್ಟಿಲ್ಲ. ಹಣವನ್ನೇ ಕೊಟ್ಟಿಲ್ಲ ಎಂದಿಲ್ಲ, 35 ಸಾವಿರ ರೂ. ಮಾತ್ರವೇ ಪೇಮೆಂಟ್ ಬಂದಿದೆ. ಅದೂ ಗೋಳಾಡಿದ ಮೇಲೆ ಬಂದಿರುವ ಹಣ. 48 ಸಾವಿರ ರೂ.ಗೆ ನಟಿಸಲು ಒಪ್ಪಿಕೊಂಡಿದ್ದೆ, ಬಾಕಿ ಇರುವ ಹಣ ಬಂದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಲ್ಟಿಪ್ಲೆಕ್ಸ್ಗಳಲ್ಲಿ ಏಕರೂಪ ದರ ನಿಗದಿ ವಿಚಾರ – ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಯಶ್ ತಾಯಿ ನಿರ್ಮಾಪಕಿ ಎಂಬ ಕಾರಣಕ್ಕೆ ಕಲಾವಿದರು ದುರಾಸೆಗೆ ಬಿದ್ದಿದ್ದಾರೆ ಎಂದು ಶ್ರೀರಾಜ್ ಹೇಳುತ್ತಾರೆ. ನಾನು ದುರಾಸೆಗೆ ಬಿದ್ದಿದ್ರೆ ಲಕ್ಷಲಕ್ಷ ಕೇಳಬಹುದಿತ್ತು. ನಾನು ಸಿಂಗಲ್ ಪೇರೆಂಟ್ ಮಗಳು. ಮೊದಲು ಮಾತನಾಡಿದ್ದಷ್ಟು ಹಣವನ್ನಾದರೂ ಕಳುಹಿಸಿಕೊಡಿ ಎಂದಿದ್ದೇನೆ ಅಷ್ಟೇ. ಈಗ ತಾಯಿ ಮಾತನಾಡಿರುವ ವೈರಲ್ ಆಗಿರುವ ಆಡಿಯೋ ಹಳೆಯದ್ದು ಎಂದು ಸ್ವರ್ಣ ಹೇಳಿದರು.
ಯಶ್ ತಾಯಿ ಬಗ್ಗೆ ಹೇಳಿದ್ದೇನು?
ಮುಖ್ಯವಾಗಿ ಯಶ್ ತಾಯಿ, ನಿರ್ಮಾಪಕಿ ಪುಷ್ಪ ಕುರಿತು ಮಾತನಾಡಿರುವ ಸ್ವರ್ಣ, ನಮ್ಮ ಚಿತ್ರದ ಪ್ರೊಡ್ಯೂಸರ್ಗೆ ಅನ್ಯಾಯವಾಗಿದೆ. ಅದು ಗೊತ್ತಾಗಲಿದ ಎಂದೇ ಇಷ್ಟೆಲ್ಲಾ ಮಾಡುತ್ತಿದ್ದೇನೆ. ನಮ್ಮ ಕೆಲವು ಒಂದಷ್ಟು ಕಲಾವಿದರಿಗೆ ದುಡ್ಡು ಬಂದಿಲ್ಲ. ಹೇಳೋಕೆ ಭಯ ಆಗಿ ಸುಮ್ಮನೇ ಇದ್ದಾರೆ. ನಾನು ಹೋರಾಡುತ್ತೇನೆ. ಗೊತ್ತಾಗ್ಲಿ ಎಂದೇ ಧ್ವನಿ ಎತ್ತಿದ್ದೇನೆ. ನಿರ್ದೇಶಕರ ಪತ್ನಿಗೂ ಕರೆ ಮಾಡಿದ್ದೆ ನಿರ್ದೇಶಕರೂ ಕರೆ ಮಾಡುತ್ತಿದ್ದೆ ಅವರು ನನಗೆ ಅನ್ಯಾಯ ಮಾಡಿದ್ದಾರೆ. ಅವರ ಬಳಿ ಯಾವುದೇ ಸಾಕ್ಷಿ ಇಲ್ಲ. ನಮಗೆ ಕಣ್ಣೀರು ಹಾಕಿಸಿದ್ದಾರೆ ಕರ್ಮ ಎನ್ನುವುದು ಬಿಡುವುದಿಲ್ಲ. ಅವರ ಹತ್ತಿರ ದುಡ್ಡು ಇರಬಹುದು. ಆದರೆ ಕರ್ಮ ಅವರನ್ನು ಬಿಡುವುದಿಲ್ಲ ಎಂದು ಸ್ವರ್ಣ ಸಿಟ್ಟು ಹೊರಹಾಕಿದ್ದಾರೆ.


ಪುಷ್ಪ ಅರುಣ್ ಕುಮಾರ್ (Pushpa Arun Kumar) ನಿರ್ಮಿಸಿದ ಮೊದಲ ಸಿನಿಮಾ ‘ಕೊತ್ತಲವಾಡಿ’ ಟೀಸರ್ ಅನ್ನು ರ್ಯಾಂಬೋ ನಟ ಶರಣ್ ಬಿಡುಗಡೆ ಮಾಡಿದ್ದಾರೆ. ಈ ವೇದಿಕೆಯಲ್ಲಿ ಪುಷ್ಪ ಅವರು ಸಿಹಿ ಸುದ್ದಿ ನೀಡಿದ್ದಾರೆ. ನಾವು ಶರಣ್ ಅವರ ಅಭಿಮಾನಿ. ನಮ್ಮ ಸಂಸ್ಥೆಯಿಂದ 2ನೇ ಸಿನಿಮಾವನ್ನು ಶರಣ್ ಜೊತೆ ಮಾಡುತ್ತೇವೆ. ಮೊದಲ ಚಿತ್ರವನ್ನೇ ಅವರ ಜೊತೆ ಮಾಡಬೇಕಿತ್ತು. ಆದರೆ ನನಗೆ ಧೈರ್ಯ ಇರಲಿಲ್ಲ. ಈಗ ಒಂದು ಸಿನಿಮಾವನ್ನು ಬೇರೆಯವರ ಜೊತೆ ಮಾಡಿದ್ದೇನೆ. 2ನೇ ಸಿನಿಮಾವನ್ನು ಶರಣ್ (Sharan) ಜೊತೆ ಮಾಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ:
ಈಗಾಗಲೇ ಶರಣ್ ಅವರೊಂದಿಗೆ ಸಿನಿಮಾ ಮಾಡುವ ಬಗ್ಗೆ ಮಾತುಕತೆ ಆಗಿದೆ. ಶರಣ್ ಕೂಡ ಸ್ಕ್ರಿಪ್ಟ್ ಕೇಳಿ ಓಕೆ ಎಂದಿದ್ದಾರೆ. ಪುಷ್ಪ ಅವರು ನಿರ್ಮಿಸಿರುತ್ತಿರುವ ಚೊಚ್ಚಲ ಚಿತ್ರ ‘ಕೊತ್ತಲವಾಡಿ’ ರಿಲೀಸ್ ಬಳಿಕ 2ನೇ ಚಿತ್ರ ಸೆಟ್ಟೇರಲಿದೆ. ಇದನ್ನೂ ಓದಿ:
‘ಕೊತ್ತಲವಾಡಿ’ ಚಿತ್ರದ ಟೀಸರ್ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್ ರಗಡ್ ಹಾಗೂ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕ್ವಾಲಿಟಿ ಚೆನ್ನಾಗಿದೆ. ‘ಕೊತ್ತಲವಾಡಿ’ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್ ಹೇಳೋದಿಕ್ಕೆ ಹೊರಟಿದ್ದಾರೆ.
ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ‘ಕೊತ್ತಲವಾಡಿ’ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.
