Tag: ಕೊತ್ತೂರು ಮಂಜುನಾಥ್

  • ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು – ಶಾಸಕ ಕೊತ್ತೂರು ಮಂಜುನಾಥ್

    ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು – ಶಾಸಕ ಕೊತ್ತೂರು ಮಂಜುನಾಥ್

    ಕೋಲಾರ: ಧರ್ಮ (Religion) ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು, ಆ ಧರ್ಮ, ಈ ಧರ್ಮ ಅಂತ ಹೇಳುವವರನ್ನ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ವಿರುದ್ಧ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ (Kotturu Manjunath) ವಾಗ್ದಾಳಿ ನಡೆಸಿದ್ದಾರೆ.

    ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು. ಉದಯನಿಧಿ (Udhayanidhi Stalin) ಅವರಿಗೆ ದುಡ್ಡು ಜಾಸ್ತಿಯಾಗಿ ಮೆಂಟಲ್ ಆಗಿದ್ದಾರೆ. ಅವನಿಗೆ ಎರಡೂ ಮೂರು ಹುಚ್ಚು ನಾಯಿ ಕಚ್ಚಿದೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಗ್ಗತ್ತಲ ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ – ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು

    ನಾವು ಇರೋದು ಭಾರತ ದೇಶದಲ್ಲಿ ಯಾರು ಯಾವ ಧರ್ಮವನ್ನ ಯಾರು ಬೇಕಾದ್ರು ಪಾಲನೆ ಮಾಡಲಿ, ನಿನ್ನ ಧರ್ಮವನ್ನ ನೀನು ಪಾಲನೆ ಮಾಡು. ನನ್ನ ಧರ್ಮವನ್ನ ಪಾಲನೆ ಮಾಡಬೇಡ ಎನ್ನುವುದಕ್ಕೆ ಯಾರಿಗೂ ಹಕ್ಕಿಲ್ಲ ನನ್ನ ಧರ್ಮವನ್ನ ಇಲ್ಲ ಎಂದು ಹೇಳುವುದಕ್ಕೆ ನೀನ್ಯಾರು? ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್

    ಇದೇ ವೇಳೆ ತಮಿಳು ನಟ ರಜಿನಿಕಾಂತ್‌ ಅವರನ್ನ ಉದಾಹರಣೆ ನೀಡಿ ನಾನೇನಾದ್ರು ಮೋರಿಯಲ್ಲಿ ಬಿದ್ದು ಎದ್ದರೇ ಅದು ಬೇರೆ ಅರ್ಥ ಬರುತ್ತೆ. ಇವನಿಗೆ ನಾಯಿ ಕಚ್ಚಿದೆ ಅಂತಾರೆ. ಅದೇ ಕೆಲಸ ಸೂಪರ್ ಸ್ಟಾರ್ ರಜನಿಕಾಂತ್ ಮಾಡಿದ್ರೆ ಸೂಪರ್ ಅಂತಾರೆ. ಹಾಗೆಯೇ ಧರ್ಮದ ವಿಚಾರವಾಗಿ ಮೋರಿಯಲ್ಲಿ ಬಿದ್ದಂತ್ತಾಗಿದೆ ಎಂದು ತಮಿಳುನಾಡು ಸಚಿವರ ವಿರುದ್ಧ ಹರಿಹಾಯ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವಷ್ಟು ಶಕ್ತಿ ಯಾರಿಗೂ ಇಲ್ಲ: ಕೊತ್ತೂರು ಮಂಜುನಾಥ್

    ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವಷ್ಟು ಶಕ್ತಿ ಯಾರಿಗೂ ಇಲ್ಲ: ಕೊತ್ತೂರು ಮಂಜುನಾಥ್

    ಕೋಲಾರ: ಕಾಂಗ್ರೆಸ್ (Congress) ಸರ್ಕಾರವನ್ನು ಬೀಳಿಸುವಷ್ಟು ಶಕ್ತಿ ಯಾರಿಗೂ ಇಲ್ಲ. ನಾವು 136 ಜನ ಶಾಸಕರು ಇದ್ದೇವೆ. ಸರ್ಕಾರವನ್ನು ಬೀಳಿಸಲು ಯಾರ ಕೈಯಲ್ಲೂ ಆಗುವುದಿಲ್ಲ ಎಂದು ಶಾಸಕ ಕೊತ್ತೂರು ಮಂಜುನಾಥ್ (Kottur Manjunath)  ಹೇಳಿದ್ದಾರೆ.

    ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಇರುವವರೆಗೂ ಯಾರಿಗೂ ಕದಲಿಸಲು ಆಗುವುದಿಲ್ಲ. ಅವಿರಿಬ್ಬರು ನಮಗೆ ಅಂತರಗಂಗೆ ಬೆಟ್ಟ ಇದ್ದಂತೆ. ಆ ಬೆಟ್ಟವನ್ನು ಕದಲಿಸಲು ಸಾಧ್ಯವಿಲ್ಲ. ಮಾತನಾಡಿಕೊಳ್ಳುವವರು ಮಾತನಾಡಿಕೊಳ್ಳಲಿ. ಸರ್ಕಾರ ಸುಭಿಕ್ಷವಾಗಿದೆ, ಚೆನ್ನಾಗಿದೆ, ಖುಷಿಯಾಗಿದೆ ಎಂದರು. ಇದನ್ನೂ ಓದಿ: ಸಿಂಗಾಪುರದಲ್ಲಿ ತಂತ್ರಗಾರಿಕೆ – ಕಾಂಗ್ರೆಸ್ ಸರ್ಕಾರಕ್ಕೆ ಆಪರೇಷನ್ ಭೀತಿ?

    ಬಿಕೆ ಹರಿಪ್ರಸಾದ್ (BK Hariprasad) ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಳೆ, ಗಾಳಿ ಹೇಳಿ ಬರುವುದಿಲ್ಲ. ಬಿಕೆ ಹರಿಪ್ರಸಾದ್ ಮಾತು ಈ ಮಾತಿಗೆ ಸಮ ಎಂದು ಲೇವಡಿ ಮಾಡಿದರು. ಇನ್ನು ರಮೇಶ್ ಕುಮಾರ್ (Ramesh Kumar) ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ವಿಚಾರದ ಕುರಿತು ಮಾತನಾಡಿದ ಅವರು, ರಮೇಶ್ ಕುಮಾರ್ ಅವರು ಕೋಲಾರದ ಹುಲಿ. ನಮ್ಮ ಜಿಲ್ಲೆಯ ಶಾಸಕರು ಯಾರೂ ಈ ರೀತಿ ಕೇಳಿಲ್ಲ. ಅವರಿಗೆ ಅಂತಹ ದರಿದ್ರ ಏನೂ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ವೇಲು ನಾಯ್ಕರ್ ಡಿಕೆಶಿ ಬಗ್ಗೆಯೂ ಹೇಳಿದ್ದ – ಹನಿಟ್ರ್ಯಾಪ್‌ ಆರೋಪಕ್ಕೆ ಮುನಿರತ್ನ ತಿರುಗೇಟು

    ಅಧಿಕಾರಕ್ಕಾಗಿ ಕೈಚಾಚುವ ಪರಿಸ್ಥಿತಿ ಇಲ್ಲ. ಅವರ ಮನೆ ಬಾಗಿಲಿಗೆ ಬಂದಿದ್ದನ್ನ ಬೇಡ ಎಂದು ಹೇಳುವ ವ್ಯಕ್ತಿ ಅವರು. ವಿಸಿಲ್ ಹೊಡೆಯುವ ಟೈಮಲ್ಲಿ ಅವರಿಗೆ ಬೇಕಾದ ಪೋಸ್ಟ್ ಸಿಗುತ್ತೆ. ಅವರು ನ್ಯಾಯ, ನೀತಿ, ಧರ್ಮ ಎಂದು ಪಾಲನೆ ಮಾಡುವವರು. ಜನರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳುತ್ತಾರೆ. ಅವರಿಗೆ ಶಕ್ತಿಯಾಗಿ ನಾವು ಇರುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಉಚಿತವಾಗಿ ಕೊತ್ತಂಬರಿ ಸೊಪ್ಪು ವಿತರಿಸಿದ ಸಿದ್ದರಾಮಯ್ಯ ಅಭಿಮಾನಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಕೊತ್ತೂರು ಮಂಜುನಾಥ್, ಎಂ.ಸಿ. ಸುಧಾಕರ್

    ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಕೊತ್ತೂರು ಮಂಜುನಾಥ್, ಎಂ.ಸಿ. ಸುಧಾಕರ್

    ನವದೆಹಲಿ: ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

    ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಕೋಲಾರ – ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರ ನಿಯೋಗ ಭೇಟಿಯಾಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ವೇಳೆ ಕೊತ್ತೂರು ಮಂಜುನಾಥ್ ಮತ್ತು ಡಾ.ಎಂ.ಸಿ. ಸುಧಾಕರ್ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ – ಬೆಂಗ್ಳೂರು, ಮೈಸೂರು, ದ.ಕ ಜಿಲ್ಲೆಗಳಲ್ಲಿ ಭಾರೀ ಏರಿಕೆ

    ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ದೆಹಲಿಗೆ ತೆರಳಿರುವ ನಿಯೋಗದ ಜೊತೆಗೆ ಇತ್ತೀಚೆಗೆ ಜೆಡಿಎಸ್ ತೊರೆದ ಶಾಸಕ ಶ್ರೀನಿವಾಸಗೌಡ ಇದ್ದರು.

    ಈ ಮೂಲಕ ಅವಳಿ ಜಿಲ್ಲೆಗೆ ಸಂಬಂಧಿಸಿದಂತೆ ಕಾಂಗ್ರೆಸ್‍ನ ರಣತಂತ್ರ ದೆಹಲಿಯಲ್ಲಿ ನಡಿತಿದ್ಯಾ ಅನ್ನೋ ಅನುಮಾನಗಳು ಮೂಡಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಆಯ್ಕೆ ಕೂಡ ಚರ್ಚೆ ನಡೆದಿದೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ


    ಕೋಲಾರ – ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರ ನಿಯೋಗ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ವಿರೋಧಿ ಬಣದ ಗುಂಪಾಗಿ ಗುರುತಿಸಿ ಕೊಂಡಿರುವುದ ವಿಶೇಷ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮುನಿಯಪ್ಪ ಸೋಲಿಗೆ ಈ ಗುಂಪು ಕಾರಣ ಎಂಬ ಮಾತು ಕೇಳಿಬಂದಿತ್ತು. ಆ ಬಳಿಕ ಈ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಮುನಿಯಪ್ಪ ವಿರೋಧ ವ್ಯಕ್ತಪಡಿಸಿದ್ದರು.

    Live Tv

  • ಮುಳಬಾಗಿಲು ಗಂಗಮ್ಮ ದೇವಾಲಯ ಮುಂಭಾಗವೇ ಕೈ ನಗರಸಭೆ ಸದಸ್ಯನ ಬರ್ಬರ ಕೊಲೆ

    ಮುಳಬಾಗಿಲು ಗಂಗಮ್ಮ ದೇವಾಲಯ ಮುಂಭಾಗವೇ ಕೈ ನಗರಸಭೆ ಸದಸ್ಯನ ಬರ್ಬರ ಕೊಲೆ

    ಕೋಲಾರ: ಹಾಸನ ಬಳಿಕ ನಗರದಲ್ಲಿಂದು ನಗರಸಭೆ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮ್ಮ ದೇವಾಲಯದ ಮುಂಭಾಗವೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಕೊಲೆ ಮಾಡಿದ್ದಾರೆ. ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಅವರನ್ನು ಸಂಚು ಹಾಕಿ ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಮನೆ ಎದುರು ಮಾರಾಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

    ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲಗೈ ಬಂಟ ಮತ್ತು ಆಪ್ತನಾಗಿದ್ದ ಇವರನ್ನು ಮುಂಜಾನೆ ನಾಲ್ಕು ಜನರ ತಂಡ ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಮುಳಬಾಗಿಲು ಡಿವೈಎಸ್‍ಪಿ ಗೌರಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇನ್ನೂ ತನ್ನ ಬಲಗೈ ಬಂಟನ ಕೊಲೆ ವಿಚಾರ ತಿಳಿದ ಕೊತ್ತೂರು ಮಂಜುನಾಥ್ ಅವರು ಜಾಲಪ್ಪ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

  • ಮುಳುಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ!

    ಮುಳುಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ!

    ಕೋಲಾರ: ಮುಳುಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಮಂಜುನಾಥ್ (ಕೊತ್ತೂರು ಮಂಜುನಾಥ್) ಅವರ ನಾಮಪತ್ರ ತಿರಸ್ಕೃತಗೊಂಡಿದೆ.

    ನಕಲಿ ಜಾತಿ ಪ್ರಮಾಣ ಪತ್ರ ನಿಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಂಜುನಾಥ್ ಅವರ ನಾಮಪತ್ರವನ್ನು ಅಸಿಂಧುಗೊಳಿಸಿದೆ. ಕೋಲಾರ ಸಂಸದ ಮುನಿಯಪ್ಪ ಪುತ್ರಿ ನಂದಿನಿ ಕೂಡ ಮುಳುಬಾಗಿಲು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಮಂಜುನಾಥ್ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೆ ನಂದಿನಿ ನಾಮಪತ್ರವನ್ನು ವಾಪಸ್ ಪಡೆದ ಕಾರಣ ಈಗ ಮುಳುಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲದಂತಾಗಿದೆ.

    ಮುಳಬಾಗಿಲು ಕ್ಷೇತ್ರದ ಶಾಸಕ ಜಿ.ಮಂಜುನಾಥ್ ಜಾತಿ ಪ್ರಮಾಣಪತ್ರ ನಕಲೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಜಾತಿ ಪ್ರಮಾಣಪತ್ರವನ್ನು ಅಸಿಂಧು ಎಂದು ಬುಧವಾರ ತೀರ್ಪು ನೀಡಿತ್ತು.

    ನಂದಿನಿಯವರು ನಾಮಪತ್ರವನ್ನು ವಾಪಸ್ ಪಡೆದಿದ್ದು ಯಾಕೆ ಎನ್ನುವ ಕಾರಣ ತಿಳಿದು ಬಂದಿಲ್ಲ.

    ಏನಿದು ಪ್ರಕರಣ?
    ಮುಳಬಾಗಿಲು ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿನ ಬುಡ್ಗ ಜಂಗಮ ಜಾತಿಗೆ ಸೇರಿದ್ದೇನೆ ಎಂದು 2013ರ ಚುನಾವಣೆ ಸಂದರ್ಭದಲ್ಲಿ ಮಂಜುನಾಥ್ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಬುಡ್ಗ ಜಂಗಮ ಅಂತಾ ಜಾತಿಯೇ ಇಲ್ಲ ಮಂಜುನಾಥ್ ಅವರಿಗೆ ಹೇಗೆ ಜಾತಿ ಪ್ರಮಾಣ ಪತ್ರ ನೀಡಲು ಸಾಧ್ಯ ಎಂದು ಮುಳುಬಾಗಿಲಿನ ಜೆಡಿಎಸ್ ಮುಖಂಡ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿ ಆಂಜಿನಪ್ಪ ಮತ್ತು ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ 2013ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.