Tag: ಕೊರೊನಾ ಕೋವಿಡ್-19

  • ಕೋವಿಡ್ ಸರ್ಟಿಫಿಕೇಟ್ ಇಲ್ಲದವರಿಗೆ ಮಾಲ್‌ಗೆ ನೋ ಎಂಟ್ರಿ

    ಕೋವಿಡ್ ಸರ್ಟಿಫಿಕೇಟ್ ಇಲ್ಲದವರಿಗೆ ಮಾಲ್‌ಗೆ ನೋ ಎಂಟ್ರಿ

    ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಮಾಲ್‌ಗೆ ಎಂಟ್ರಿ ಕೊಡುವವರಿಗೆ ಎರಡು ಡೋಸ್ ಸರ್ಟಿಫಿಕೇಟ್ ಕಡ್ಡಾಯ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಲ್‌ಗಳಲ್ಲಿ ಈಗಾಗಲೇ ಪರಿಶೀಲನೆ ಪ್ರಾರಂಭವಾಗಿದೆ.

    ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಮಾಲ್‌ಗಳಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಎರಡು ಡೋಸ್ ಲಸಿಕೆ ಪಡೆದವರಿಗಷ್ಟೇ ಮಾಲ್‌ನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ವೀಕೆಂಡ್‌ನಲ್ಲಿ ಮಾಲ್‌ಗೆ ಬರುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಮಾಲ್‌ಗಳ ಮುಂಭಾಗ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.

    2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್‌ಗೆ ಪ್ರವೇಶ ಎಂದು ಮಾಲ್ ಮುಂದೆ ಸಿಬ್ಬಂದಿ ನೋಟಿಸ್ ಬೋರ್ಡ್ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಯೊಬ್ಬರ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಟಿಫಿಕೇಟ್ ಇಲ್ಲದವರನ್ನು ಸಿಬ್ಬಂದಿ ವಾಪಾಸ್ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ಮನುಷ್ಯರಿಂದ ಪ್ರಾಣಿಗಳಿಗೆ ಹರಡುತ್ತದೆ – ಸಂಶೋಧನಾ ವರದಿ

    ಬೇರೆ ಯಾರದ್ದೋ ಲಸಿಕೆಯ ರಿಪೋರ್ಟ್ ತೋರಿಸಿ ಬರುವುದರಿಂದ ಸರ್ಕಾರ ನೀಡಿದ ಯಾವುದಾದರೊಂದು ಗುರುತಿನ ಚೀಟಿಯೂ ಕಡ್ಡಾಯಗೊಳಿಸಿದೆ. ಇದರಿಂದಾಗಿ ಐಡಿ ಕಾರ್ಡ್ ನಲ್ಲಿರುವ ಹೆಸರಿನ ಜೊತೆಗೆ ವ್ಯಾಕ್ಸಿನೇಷನ್ ರಿಪೋರ್ಟ್ ನಲ್ಲಿರುವ ಹೆಸರು ಎರಡನ್ನು ಪರಿಶೀಲಿಸುತ್ತಿದ್ದಾರೆ. ಸರ್ಟಿಫಿಕೇಟ್ ಇಲ್ಲದೇ ಇರುವವರು ಹೊರಗಡೆ ನಿಂತಿದ್ದಾರೆ.

  • ವ್ಯಾಕ್ಸಿನೇಷನ್ ಬಿಗ್ ಫ್ರಾಡ್: ಡಿಕೆಶಿ

    ವ್ಯಾಕ್ಸಿನೇಷನ್ ಬಿಗ್ ಫ್ರಾಡ್: ಡಿಕೆಶಿ

    ಬೆಂಗಳೂರು: ಅನ್‍ಲಾಕ್ ವಿಚಾರದಲ್ಲಿ ಸರ್ಕಾರ ಏನು ತೀರ್ಮಾನ ಕೈಗೊಳ್ಳುತ್ತೋ ಕೈ ಗೊಳ್ಳಲಿ ಏನೇ ಆದರು ಜನರಿಗೆ ಅನುಕೂಲವಾಗುವಂತೆ ಮಾಡಲಿ. ಲಸಿಕೆ ನೀಡಿಕೆ ಒಂದು ದೊಡ್ಡ ಬೋಗಸ್ ಎಲ್ಲಾ ದಾಖಲೆಗಳು ಇವೆ ಅದಕ್ಕೆ ಪ್ರತ್ಯೇಕ ಸುದ್ದಿಗೋಷ್ಠಿ ನಡೆಸುತ್ತೇನೆ. ಏನು ಮಂತ್ರಿ ಹೇಳ್ತಿದ್ದಾರೆ ಅದೆಲ್ಲ ಬರೀ ಸುಳ್ಳು. ನನ್ನ ಬಳಿ ಮಾಹಿತಿ ಇದೆ ಅದರ ಬಗ್ಗೆ ಸಧ್ಯದಲ್ಲೇ ಸುದ್ದಿಗೋಷ್ಠಿ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.


    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಪಕ್ಷ ಬಿಟ್ಟವರನ್ನು ಪಕ್ಷಕ್ಕೆ ವಾಪಸ್ ಕರೆತರುವ ವಿಚಾರವಾಗಿ ನಾನು ಪಕ್ಷ ಬಿಟ್ಟುಹೋದ ಆ 17 ಜನಕ್ಕೆ ಅಂತ ಹೇಳಿಲ್ಲ. ಯಾರೆಲ್ಲಾ ನಮ್ಮ ಪಕ್ಷಕ್ಕೆ ಬರಬೇಕು ಅಂತಿದ್ದಾರೆ ಅವರಿಗೆ ಹೇಳಿದ್ದೇನೆ. ಯಾರಿಗೆ ನಮ್ಮ ಲೀಡರ್ ಶಿಪ್, ನಮ್ಮ ಸಿದ್ಧಾಂತದ ಮತ್ತು ಪಕ್ಷದ ಬಗ್ಗೆ ಒಪ್ಪಿಗೆ ಇದೆಯೋ ಅವರೆಲ್ಲ ಅರ್ಜಿ ಹಾಕಬಹುದು. ಮೊದಲು ಅರ್ಜಿ ಹಾಕಲಿ ಬಳಿಕ ನೋಡೋಣ. ಬ್ಲಾಕ್ ಕಾರ್ಯರ್ತರು ಜಿಲ್ಲಾ ಕಾರ್ಯಕರ್ತರು ಅವರ ಅಭಿಪ್ರಾಯ ಕೇಳ್ತೀವಿ. ಯಾರಬೇಕಾದ್ರು ಅರ್ಜಿ ಹಾಕ್ಲಿ. ಯಾರು ಅರ್ಜಿ ಹಾಕಿದ್ದಾರೆ ಅನ್ನೋದನ್ನು ಈಗ ತಿಳಿಸುವ ಅವಶ್ಯಕತೆ ಇಲ್ಲ. ಯಾರು ಬೇಕಾದರೂ ಅರ್ಜಿ ಹಾಕಬಹುದು ಎಂದಿದ್ದಾರೆ. ಇದನ್ನೂ ಓದಿ : 15 ವರ್ಷದ ದಾಂಪತ್ಯ ಅಂತ್ಯ – ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್

    ಯಾರಿಗೆ ನಮ್ಮ ಪಕ್ಷದ ಮೇಲೆ ನಂಬಿಕೆ ಇದೆಯೋ ಅವರಲ್ಲರೂ ಬರಬಹುದು ಎಂದಿದ್ದೇನೆ. ನಮ್ಮ ಪಕ್ಷದಿಂದ ಬಿಟ್ಟು ಹೋದ 17 ಜನರು ನನ್ನ ಸಂಪರ್ಕ ಮಾಡಿಲ್ಲ. ಬೇರೆಯವರು ಸಂಪರ್ಕ ಮಾಡಿದ್ದಾರೆ. ಆ 17 ಜನ ಅರ್ಜಿ ಹಾಕಬಹುದಾ ಅನ್ನೋ ಪ್ರಶ್ನೆಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು ನಾನು ಕೇವಲ 17 ಜನರ ಬಗ್ಗೆ ಮಾತ್ರ ಹೇಳುತ್ತಿಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಡಿಕೆ ಶಿವಕುಮಾರ್ ಎದೆಯಲ್ಲಿ ಇದ್ದಾರೆ ಅಂತ ತೋರಿಸಿದೋವರು ಇದ್ದಾರೆ. ಎಂಟಿಬಿ ನಾಗರಾಜ್ ಗೆ ಟಿಕೆಟ್ ಕೊಡಿಸಿದ್ದು ನಾನೇ. ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸೋದಕ್ಕೆ ನಾನು ಒಬ್ಬ ಕಾರಣ ನನ್ನಿಂದ ಗೆದ್ದರು ಅಂತ ಹೇಳೋದಿಲ್ಲ ಅದ್ರೆ ಟಿಕೆಟ್ ಕೊಡಿಸಿದ್ದು ನಾನೇ. ಅಮೇಲೆ ಅವರು ಗೆದ್ದರು ಆಗ ನನ್ನ ಎದೆಯಲ್ಲಿ ಕಾಂಗ್ರೆಸ್ ಪಕ್ಷದ ಇದೆ ಅಂತಿದ್ದರು. ಆಮೇಲೆ ಪಾರ್ಟಿ ಬಿಟ್ಟು ಹೋದರು ಏನ್ ಮಾಡೋಕೆ ಆಗುತ್ತೆ ಎಂದು ಕಿಡಿಕಾರಿದ್ದಾರೆ.

    ಸಿಡಿ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದಗೌಡ ತಡೆಯಾಜ್ಞೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಈಗ ಆ ವಿಚಾರ ಬೇಡ. ಮೊದಲು ನೀವು ತನಿಖೆ ಮಾಡಿ, ಯಾವ ಸಿಡಿ ಏನ್ ವಿಚಾರ ಅಂತ ನೀವು ಹೇಳಿ. ನನಗೆ ಕೇಂದ್ರ ಸಚಿವರ ಮೇಲೆ ಗೌರವ ಇದೆ. ಅವರು ಯಾಕೆ ತಡೆಯಾಜ್ಞೆ ತಂದಿದ್ದಾರೆ ಅಂತ ನನಗೆ ಗೊತ್ತಿಲ್ಲ. ನಮ್ಮ ರಾಜ್ಯದ ಕೇಂದ್ರ ಮಂತ್ರಿ ಅವರು ನಮ್ಮ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಲಿ ಇಷ್ಟು ಮಾತ್ರ ನಾನು ಬಯಸುತ್ತೇನೆ ಎಂದು ತಿಳಿಸಿದರು.

  • ಸರ್ಕಾರದ ರೂಲ್ಸ್ ಬ್ರೇಕ್ – ಬಿಎಂಟಿಸಿಯಲ್ಲಿ ಶೇ.100 ಪ್ರಯಾಣಿಕರ ಪ್ರಯಾಣ

    ಸರ್ಕಾರದ ರೂಲ್ಸ್ ಬ್ರೇಕ್ – ಬಿಎಂಟಿಸಿಯಲ್ಲಿ ಶೇ.100 ಪ್ರಯಾಣಿಕರ ಪ್ರಯಾಣ

    ಬೆಂಗಳೂರು: ಕೊರೊನಾ ಅನ್‍ಲಾಕ್ 2 ನಲ್ಲಿ ರಾಜ್ಯ ಸರ್ಕಾರ ಬಿಎಂಟಿಸಿ ಮತ್ತು ಕೆ.ಎಸ್.ಆರ್.ಟಿಸಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ವೀಕೆಂಡ್ ಕರ್ಫ್ಯೂ ಬಳಿಕ ಬಿಎಂಟಿಸಿ ಬಸ್ ಗಳ ಸಂಖ್ಯೆಯನ್ನು ಹೆಚ್ಚು ಮಾಡಿದೆ. ಈ ಮಧ್ಯೆ ಬಿಎಂಟಿಸಿ ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಶೇ.100 ಪ್ರಯಾಣಿಕರನ್ನು ಬಸ್‍ನಲ್ಲಿ ತುಂಬಿಕೊಂಡು ಸಾಗುತ್ತಿದೆ.

    ಶುಕ್ರವಾರ ಸಂಜೆಯಿಂದ ವೀಕೆಂಡ್ ಕರ್ಫ್ಯೂ ಶುರುವಾದ ಬಳಿಕ ಬಿಎಂಟಿಸಿ ಬಸ್‍ಗಳ ಸಂಖ್ಯೆಯನ್ನು ಶೇ.30 ರಷ್ಟು ಕಡಿಮೆ ಮಾಡಿ 1000 – 1200 ಬಸ್ ಗಳನ್ನು ರಸ್ತೆಗೆ ಇಳಿಸಿತ್ತು. ಇಂದು ವೀಕೆಂಡ್ ಕರ್ಫ್ಯೂ ಕೊನೆಗೊಂಡಿದ್ದು, 3500 ರಿಂದ 4000 ಬಿಎಂಟಿಸಿ ಬಸ್‍ಗಳನ್ನು ರಸ್ತೆಗೆ ಇಳಿಸಿದೆ. ಸರ್ಕಾರ ಶೇ. 50 ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದುಕೊಂಡು ಹೋಗಲು ಆದೇಶ ನೀಡಿದೆ. ಆದರೆ ಸರ್ಕಾರ ಹೇಳಿದ್ದ ರೂಲ್ಸ್ ನ್ನು ಸಂಪೂರ್ಣವಾಗಿ ಬಿಎಂಟಿಸಿ ಬಸ್ ಸಿಬ್ಬಂದಿ ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದಿದೆ. ಇದನ್ನೂ ಓದಿ: ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಿಎಂಟಿಸಿ ಸೇವೆಗಳ ಕಾರ್ಯಾಚರಣೆ ಕಡಿತ 

    ಶೇ.50 ರಷ್ಟು ಮಾತ್ರ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಂತೆ ಸರ್ಕಾರ ಆದೇಶ ಮಾಡಿದೆ. ಆದರೆ ಬಿಎಂಟಿಸಿಯಲ್ಲಿ ಶೇ.100 ರಷ್ಟು ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ಸರ್ಕಾರದ ಆದೇಶ ಒಂದೇ ವಾರಕ್ಕೆ ಹಳ್ಳ ಹಿಡಿದಿದೆ. ಕೊರೊನಾ ಇನ್ನೂ ಮುಗಿದಿಲ್ಲ, ಎರಡನೇ ಅಲೆ ಅಬ್ಬರ ಕಡಿಮೆಯಾಗಿದೆ. ಜೊತೆಗೆ ಮೂರನೇ ಅಲೆಯ ಆತಂಕದೊಂದಿಗೆ ಡೆಲ್ಟಾ ಪ್ಲಸ್ ವೈರಾಣುವಿನ ಭಯ ಕೂಡ ಶುರುವಾಗಿದೆ. ಇತಂಹ ಸಮಯದಲ್ಲಿ ಬಿಎಂಟಿಸಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಮತ್ತೆ ಕೊರೊನಾ ಕೇಸ್ ಹೆಚ್ಚಾಗಲು ಕಾರಣವಾಗುವ ಸಾಧ್ಯತೆಯಿದೆ.