Tag: ಕೊರೊನಾ ಪಾಸಿಟಿವ್

  • ಗಾಂಧಿನಗರದಲ್ಲಿ ಒಬ್ಬರಿಗೆ ಕೊರೊನಾ – 2 ದಿನದಲ್ಲಿ ಪಾಸಿಟಿವ್ ದರ ದುಪ್ಪಟ್ಟು ಏರಿಕೆ

    ಗಾಂಧಿನಗರದಲ್ಲಿ ಒಬ್ಬರಿಗೆ ಕೊರೊನಾ – 2 ದಿನದಲ್ಲಿ ಪಾಸಿಟಿವ್ ದರ ದುಪ್ಪಟ್ಟು ಏರಿಕೆ

    ಬೆಂಗಳೂರು: ದಿನೇ ದಿನೇ ಕೊರೊನಾ ಪಾಸಿಟಿವ್ (Covid Positive) ದರ ದುಪ್ಪಟ್ಟು ಏರಿಕೆಯಾಗುತ್ತಿದ್ದು, ಇದೀಗ ಗಾಂಧಿನಗರದ (Gandhi Nagar) ಒಬ್ಬರಲ್ಲಿ ಕೊರೊನಾ (Corona) ಕಾಣಿಸಿಕೊಂಡಿದೆ.

    ಗಾಂಧಿನಗರದ 46 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಕೋವಿಡ್ ಕಾಣಿಸಿಕೊಂಡಿದ್ದು, ಹೇಗೆ ಬಂತು ಎನ್ನುವುದನ್ನು ಪತ್ತೆ ಹಚ್ಚುತ್ತಿದ್ದಾರೆ. ಸದ್ಯ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಕಾರಿನ ಮೇಲೆ ಬಿತ್ತು ಬೃಹತ್‌ ಮರ, ನಾಲ್ವರು ಪಾರು

    ರಾಜ್ಯದಲ್ಲಿ ಇದೀಗ ಕೊರೊನಾ ಟೆಸ್ಟಿಂಗ್ ಆರಂಭಿಸಲಾಗಿದ್ದು, ದಿನಗಳೆದಂತೆ ಪಾಸಿಟಿವ್ ದರ ಜಾಸ್ತಿಯಾಗುತ್ತಲಿದೆ. ಸೋಮವಾರ 191 ಜನರಿಗೆ ಟೆಸ್ಟ್ ಮಾಡಲಾಗಿದ್ದು, 37 ಜನರಿಗೆ ಪಾಸಿಟಿವ್ ಆಗಿದೆ. ಜೊತೆಗೆ 171 ಜನರಿಗೆ RT-PCR ಟೆಸ್ಟ್ ಮಾಡಲಾಗಿದೆ.

    ಮೇ 25ರಂದು ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಪಾಸಿಟಿವ್ ದರ 8.65% ಇತ್ತು. ಮೇ 26ರಂದು ನಡೆಸಿದ ಟೆಸ್ಟ್‌ನಲ್ಲಿ ಪಾಸಿಟಿವ್ ದರ 19.37%ಗೆ ಏರಿಕೆ ಆಗಿದೆ. ಇನ್ನೂ ಈ ಕುರಿತು ಸೋಮವಾರ ಸರ್ಕಾರ ನಡೆಸಿದ ಸಭೆಯಲ್ಲಿ ಯಾವುದೇ ರೀತಿಯ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ ಎಂದಿದೆ. ಜೊತೆಗೆ ನಗರದ ಮಾಲ್‌ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಇಂದು ತೀರ್ಮಾನಿಸುವ ಸಾಧ್ಯತೆಯಿದೆ.

    ಮೇ 26ರ ಜಿಲ್ಲಾವಾರು ಮಾಹಿತಿ ಪ್ರಕಾರ, ಬೆಂಗಳೂರು 73, ಬೆಂಗಳೂರು ಗ್ರಾಮಾಂತರ 2, ಮೈಸೂರು 3, ವಿಜಯನಗರ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ ಒಂದೊಂದು ಕೋವಿಡ್‌ ಸಕ್ರಿಯ ಪ್ರಕರಣಗಳು ವರದಿಯಾಗಿದೆ.ಇದನ್ನೂ ಓದಿ: ಟಾಪ್‌-2ಗೆ ಫೈಟ್‌ | ಮಳೆಯಿಂದ ರದ್ದಾದ್ರೆ ಕ್ವಾಲಿಫೈಯರ್-1 ಆರ್‌ಸಿಬಿ ಎಂಟ್ರಿ!

  • ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್

    ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್

    ಚಿಕ್ಕಬಳ್ಳಾಪುರ: ನಗರದ ಖಾಸಗಿ ಆಸ್ಪತ್ರೆಯ ಮಾಲೀಕ ಹಾಗೂ ಬಿಜೆಪಿ ಮುಖಂಡರೊಬ್ಬರಿಗೆ ಕೊರೊನಾ ಪಾಸಿಟಿವ್ (Coron Positive) ಧೃಡವಾಗಿದೆ.

    ಇತ್ತೀಚೆಗಷ್ಟೇ ದೆಹಲಿ ಹಾಗೂ ತಮಿಳುನಾಡಿಗೆ ಹೋಗಿ ಬಂದಿದ್ದ 69 ವರ್ಷದ ಬಿಜೆಪಿ ಮುಖಂಡನಿಗೆ ಜ್ವರ ಕಾಣಿಸಿಕೊಂಡಿತ್ತು. ಸತತ 5 ದಿನಗಳ ನಿರಂತರ ಜ್ವರ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್‌ ಜಾಮ್‌ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ

    ಕೊರೊನಾ ಟೆಸ್ಟ್ ನ ವರದಿ ಇಂದು ಬಂದಿದ್ದು ಪಾಸಿಟಿವ್ ಎಂಬುದು ಧೃಡವಾಗಿದೆ. ಸದ್ಯ ಬಿಜೆಪಿ ಮುಖಂಡ ಹೋಂ ಕ್ವಾರಂಟೈನಲ್ಲಿದ್ದಾರೆ.

    ಹೊಸ ತಳಿ ಜೆಎನ್.1 ಆತಂಕ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲು ಸೂಚನೆ ನೀಡಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಸಲ್ಲಿ ಹಳೆಯ ಆಸ್ಪತ್ರೆಯನ್ನ ಕೋವಿಡ್ 19 ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗಿದೆ. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾಸ್ಪತ್ರೆ ಸಹಯೋಗದೊಂದಿಗೆ ಕೋವಿಡ್ ಆಸ್ಪತ್ರೆಗೆ ಮರುಚಾಲನೆ ನೀಡಲು ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಹಳೆಯ ಆಸ್ಪತ್ರೆಯಲ್ಲಿ 130 ಬೆಡ್ ಗಳನ್ನ ಸಿದ್ಧ ಮಾಡಿಕೊಳ್ಳಲಾಗುತ್ತಿದ್ದು, ಆಕ್ಸಿಜನ್ ವ್ಯವಸ್ಥೆ ಹಾಗೂ ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

  • ರಾಜ್ಯದಲ್ಲಿ ಇಂದು 22 ಮಂದಿಯಲ್ಲಿ ಕೊರೊನಾ ದೃಢ- ಇದುವರೆಗೆ ಮೂವರು ಸಾವು

    ರಾಜ್ಯದಲ್ಲಿ ಇಂದು 22 ಮಂದಿಯಲ್ಲಿ ಕೊರೊನಾ ದೃಢ- ಇದುವರೆಗೆ ಮೂವರು ಸಾವು

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ (Corona Virus) ಅಬ್ಬರ ಶುರುವಾಗಿದ್ದು, ಇಂದು 22 ಮಂದಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಓರ್ವ ವೃದ್ಧ ಕೋವಿಡ್ ಸೋಂಕಿನಿಂದ  ಸಾವಿಗೀಡಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ ಕಂಡಿದೆ.

    ರಾಜ್ಯದಲ್ಲಿ 808 ಮಂದಿಗೆ ಕೋವಿಡ್ ಟೆಸ್ಟ್ (Covid Test) ನಡೆಸಲಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿದೆ. 20 ಸೋಂಕಿತರು ಆಸ್ಪತ್ರೆಯಲ್ಲಿದ್ದಾರೆ. ಈ ಪೈಕಿ 7 ಮಂದಿ ಐಸಿಯುನಲ್ಲಿದ್ದಾರೆ. 72 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. ಐವರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ರೇಟ್ 2.47% ರಷ್ಟಿದೆ.

    ಕೋವಿಡ್ ಉಪತಳಿ ಜೆಎನ್.1 ವೈರಸ್ ಬಗ್ಗೆ ಅಲರ್ಟ್ ಆಗಿರುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳನ್ನು ಅಲರ್ಟ್ ಮಾಡಿದೆ. ಆದರೆ ಇದರ ಬಗ್ಗೆ ಆತಂಕಪಡಬೇಕಿಲ್ಲ ಎಂಬ ಮಾತನ್ನು ಕೂಡ ಸೇರಿಸಿದೆ. ಕೋವಿಡ್ ಹೆಚ್ಚಾಗ್ತಿರೋ ಹಿನ್ನೆಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವರ್ಚೂವಲ್ ಸಭೆ ನಡೆಸಿದ್ರು. ಈ ಸಂದರ್ಭದಲ್ಲಿ ಹಲವು ಸಲಹೆ ಸೂಚನೆಗಳನ್ನು ನೀಡಿದ್ರು. ಈ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡಿದ್ರು. ನಾವು ಎಲ್ಲಾ ರೀತಿಯಿಂದ ಸನ್ನದ್ದರಾಗಿದ್ದೇವೆ. ಅಗತ್ಯಬಿದ್ರೆ ನೆರವು ಕೇಳ್ತೇವೆ, ಸಹಕಾರ ಕೊಡಿ ಎಂದು ಕೇಂದ್ರ ಸಚಿವರನ್ನು ಕೋರಿದರು.

  • ಕಮಲ್ ಪುತ್ರಿ ಶ್ರುತಿ ಹಾಸನ್‍ಗೆ ಕೊರೊನಾ ಪಾಸಿಟಿವ್

    ಕಮಲ್ ಪುತ್ರಿ ಶ್ರುತಿ ಹಾಸನ್‍ಗೆ ಕೊರೊನಾ ಪಾಸಿಟಿವ್

    ಚೆನ್ನೈ: ಕಾಲಿವುಡ್ ನಟ ಕಮಲ್ ಹಾಸನ್ ಪುತ್ರಿ ನಟಿ ಶ್ರುತಿ ಹಾಸನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಶ್ರುತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

    ಶ್ರುತಿ ಹಾಸನ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಎಲ್ಲರಿಗೂ ನಮಸ್ಕಾರ. ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಮತ್ತು ಚೇತರಿಸಿಕೊಳ್ಳುತ್ತಿದ್ದೇನೆ. ಕಾಯಲು ಸಾಧ್ಯವಿಲ್ಲ ಶೀಘ್ರದಲ್ಲಿಯೇ ಕೆಲಸಕ್ಕೆ ಮರಳುತ್ತೇನೆ. ನಿಮ್ಮೆಲ್ಲರನ್ನು ಭೇಟಿಯಾಗುತ್ತೇನೆ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

     

    View this post on Instagram

     

    A post shared by Shruti Haasan (@shrutzhaasan)

    ಶ್ರುತಿ ಹಾಸನ್ ಕೊನೆಯದಾಗಿ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗೆಡೆಗೊಂಡಿದ್ದ ಬೆಸ್ಟ್ ಸೆಲ್ಲರ್ ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಮಿಥುನ್ ಚಕ್ರವರ್ತಿ, ಶ್ರುತಿ ಹಾಸನ್, ಅರ್ಜನ್ ಬಾಜ್ವಾ, ಗೌಹರ್ ಖಾನ್, ಸತ್ಯಜೀತ್ ದುಬೆ ಮತ್ತು ಸೋನಾಲಿ ಕುಲಕರ್ಣಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಶ್ರುತಿ ಹಾಸನ್ ಪ್ರಭಾಸ್ ಜೊತೆ ಸಲಾರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಲ್ಲದೇ ಈ ಸಿನಿಮಾದಲ್ಲಿ ಜಗಪತಿ ಬಾಪು ಕೂಡ ಅಭಿನಯಿಸಿದ್ದಾರೆ. ಮತ್ತೊಂದೆಡೆ ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರು ನಿರ್ದೇಶಿಸುತ್ತಿರುವ ಹೊಸ ಸಿನಿಮಾದಲ್ಲಿ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅವರೊಂದಿಗೆ ಶ್ರುತಿ ಹಾಸನ್ ಸ್ಕ್ರೀನ್ ಶೇರ್ ಮಾಡಲಿದ್ದಾರೆ.  ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

  • ಕೋವಿಡ್ ಸೋಂಕಿತ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆಯಲ್ಲಿ ಭಾಗಿ – ಜನರಲ್ಲಿ ಆತಂಕ

    ಕೋವಿಡ್ ಸೋಂಕಿತ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆಯಲ್ಲಿ ಭಾಗಿ – ಜನರಲ್ಲಿ ಆತಂಕ

    ನೆಲಮಂಗಲ: ಕೋವಿಡ್ ಪಾಸಿಟಿವ್ ಇರುವ ಆರೋಗ್ಯ ಸಿಬ್ಬಂದಿಯೊಬ್ಬ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದು, ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಬೆಂಗಳೂರು ಹೊರವಲಯದ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ನಸಿರ್ಂಗ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಹಮೂರ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಬಂದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು. ಸಮಸ್ಯೆ ಇಲ್ಲಾ ಅಂದರೆ ಮನೆಯಲ್ಲಿ ಹೋಮ್ ಐಸೋಲೇಶನ್ ಆಗಬೇಕು. ಅದನ್ನು ಬಿಟ್ಟು ಎನ್‍ಪಿಎಲ್ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ ಭಾಗವಹಿಸಿದ್ದಾನೆಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕೋವಿಡ್ ಸ್ವಯಂ ಪರೀಕ್ಷೆ ಕಿಟ್ ಖರೀದಿಸಲು ಆಧಾರ್ ಕಡ್ಡಾಯ – ಮುಂಬೈ ಮೇಯರ್

    ನರಸಿಂಹಮೂರ್ತಿ, ಕೊರೊನಾ ಪಾಸಿಟಿವ್ ವರದಿಯಿದ್ದರೂ ಉದ್ದಟತನ ಮೇರೆದಿದ್ದು, ಗ್ರೌಂಡ್‍ನಲ್ಲಿ ಬಿಂದಾಸ್ ಆಗಿ ಓಡಾಡಿದ್ದಾರೆ. 3 ದಿನದ ಹಿಂದೆ ನಡೆದ ಎನ್‍ಪಿಎಲ್ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕದೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನ ಸ್ವೀಕರಿಸಿದ್ದಾರೆ. ಈ ಸಿಬ್ಬಂದಿಯಿಂದ ಕ್ರಿಕೆಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಆತಂಕ ಶುರುವಾಗಿದೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ನಡುವೆಯೂ ಕೋಳಿ ವ್ಯಾಪಾರ ಜೋರು – ಕೋವಿಡ್ ನಿಯಮ ಉಲ್ಲಂಘನೆ

     

  • ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿಗೆ ಕೊರೊನಾ ಪಾಸಿಟಿವ್

    ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿಗೆ ಕೊರೊನಾ ಪಾಸಿಟಿವ್

    ರಾಮನಗರ: ಕಳೆದ ಎರಡು ದಿನದಿಂದ ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿ ಜವರೇಗೌಡಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

    ಶನಿವಾರ ಪಾದಯಾತ್ರೆ ನಡೆಸಬೇಡಿ ಎಂದು ಮನವಿ ಮಾಡಲು ಎಡಿಸಿ ಬಂದಿದ್ದರು. ನಿನ್ನೆ ಬೆಳಗ್ಗೆಯೂ ಕೊರೊನಾ ನಿಯಮ ಪಾಲಿಸಿ ಎಂದು ಹೇಳಿದ್ದರು. ಬಳಿಕ ಸಂಜೆ ಡಿಕೆಶಿ ಬಳಿ ಬಂದು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಕೂಡ ಹೇಳಿದ್ದರು. ಈ ವೇಳೆ ಎಡಿಸಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೈದಿದ್ದರು. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

    ಇತ್ತ ಪಾದಯಾತ್ರೆ ಬಳಿ ಹೋಗಿದ್ದ ಕಾರಣ ಎಡಿಸಿ ಇಂದು ಬೆಳಗ್ಗೆ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ ಅವರಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದ್ದು, ಸದ್ಯ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

  • ಘಾನಾದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು – ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ

    ಘಾನಾದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು – ತುರ್ತು ಸಭೆ ನಡೆಸಿದ ಮಂಗಳೂರು ಡಿಸಿ

    ಮಂಗಳೂರು: ಹೈರಿಸ್ಕ್ ದೇಶ ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್‌ ಸೆಂಚುರಿ – 101 ಮಂದಿಗೆ ಸೋಂಕು

    ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ. ಆ ಪ್ರಯಾಣಿಕನ ಹತ್ತಿರದ ಸೀಟಿನ ಒಟ್ಟು 27 ಪ್ರಯಾಣಿಕರಿಗೆ ಟೆಸ್ಟ್ ನಡೆಸಿ ಕ್ವಾರೆಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯವನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ಪಾಸಿಟಿವ್ ಬಂದ ಹಿನ್ನೆಲೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದು, ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಈ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿಗೊಳಿಸಲು ಸೂಚನೆ ನೀಡಿದ್ದಾರೆ.

  • ಮದುವೆಗೆ ಹೋಗಿ ಕೊರೊನಾ ತಂದುಕೊಳ್ಳಬೇಡಿ – ಉಡುಪಿ ಡಿಸಿ ವಿನಂತಿ

    ಮದುವೆಗೆ ಹೋಗಿ ಕೊರೊನಾ ತಂದುಕೊಳ್ಳಬೇಡಿ – ಉಡುಪಿ ಡಿಸಿ ವಿನಂತಿ

    ಉಡುಪಿ: ಜಿಲ್ಲೆಯಲ್ಲಿ ಕಳೆದ ಒಂದೆರಡು ತಿಂಗಳಿನಿಂದ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು, ವಿಮರ್ಶೆ ಮಾಡಿ ನೋಡಿದಾಗ ಮದುವೆ ಮನೆಗಳಲ್ಲೇ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಉಡುಪಿ ಡಿಸಿ ಜಿ ಜಗದೀಶ್ ಹೇಳಿದ್ದಾರೆ.

    ಈ ಕುರಿತಂತೆ ಮಾತನಾಡಿದ ಅವರು, ನಾನು ಜಿಲ್ಲೆಯ ಅನೇಕ ಸೋಂಕಿತರ ಮನೆಗಳಿಗೆ, ಐಸೊಲೇಟೇಡ್ ಆದವರನ್ನು ಸಂಪರ್ಕಿಸಿದ್ದೇನೆ. ಇಲ್ಲಿ ತಿಳಿದ ವಿಷಯವೆಂದರೆ ಮದುವೆ ಸಮಾರಂಭಗಳಿಗೆ, ಮೆಹಂದಿ ಮತ್ತಿತರ ಕಾರ್ಯಕ್ರಮಗಳಿಗೆ ಹೋದವರಿಗೆ ಸೋಂಕು ತಗುಲಿರುವುದು ಕಂಡು ಬಂದಿದೆ. ಗುಂಪಾಗಿ ಅಗತ್ಯ ವಸ್ತು ಖರೀದಿಸುವವರಿಗೂ ಸೋಂಕು ತಗುಲಿದೆ. ಆದ್ದರಿಂದ ಯಾವುದೇ ಸಮಾರಂಭಗಳಿಗೂ ಹೋಗಬೇಡಿ. ಗುಂಪು ಸೇರಬೇಡಿ ಎಂದು ಕೈಮುಗಿದು ಡಿಸಿರವರು ಮನವಿ ಮಾಡಿಕೊಂಡಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಜನರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ. ಇದೇ ರೀತಿ ಸಹಕಾರ ನೀಡಿದರೆ ಇನ್ನೊಂದು ಲಾಕ್‍ಡೌನ್‍ಗೆ ಹೋಗುವುದು ತಪ್ಪಲಿದೆ ಎಂದರು.

  • ಕೊರೊನಾ ಬಂತು ಅಂತ ವೃದ್ಧ ಅತ್ತೆಯನ್ನೇ ಹೊರ ಹಾಕಿದ ಅಳಿಯ..!

    ಕೊರೊನಾ ಬಂತು ಅಂತ ವೃದ್ಧ ಅತ್ತೆಯನ್ನೇ ಹೊರ ಹಾಕಿದ ಅಳಿಯ..!

    ಮಂಡ್ಯ: ಅತ್ತೆಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅಳಿಯ ಮನೆಗೆ ಸೇರಿಸಲು ಒಪ್ಪದೇ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಬೈದು ಕಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ಜರುಗಿದೆ.

    ಅರೆಚಾಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿದ್ದು, ವೈದ್ಯರು ಸಿದ್ದಮ್ಮರನ್ನು ಹೋಂ ಐಸೋಲೇಷನ್‍ನಲ್ಲಿ ಇರುವಂತೆ ಸೂಚಿಸಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿದ್ದಮ್ಮ ಅವರನ್ನು ಮನೆಗೆ ಬಿಡಲು ಬಂದಿದ್ದಾರೆ.

    ಈ ವೇಳೆ ಸಿದ್ದಮ್ಮಳ ಅಳಿಯ ಮುತ್ತೇಗೌಡ, ಆಕೆಗೆ ಕೊರೊನಾ ಪಾಸಿಟಿವ್ ಬಂದಿದೆ. ಆಕೆಯನ್ನು ಮನೆ ಸೇರಿಕೊಳ್ಳಲ್ಲ, ಆಕೆಯನ್ನು ಕರೆದುಕೊಂಡು ಹೋಗಿ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಬೈದಿದ್ದಾನೆ. ಮುತ್ತೇಗೌಡನನ್ನು ಸಿದ್ದಮ್ಮ ಮನೆ ಅಳಿಯನನ್ನಾಗಿ ಮಾಡಿಕೊಂಡಿದ್ದಾರೆ. ಹೀಗಿದ್ದರೂ ಅತ್ತೆಯ ಮನೆಗೆ ಅತ್ತೆಯನ್ನೇ ಬರಬೇಡಾ ಎಂದು ಅಳಿಯ ಹೇಳಿದ್ದಾನೆ.

    ಸದ್ಯ ಸಿದ್ದಮ್ಮ ಅವರನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

  • ರವಿ.ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್

    ರವಿ.ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್

    ಬೆಂಗಳೂರು: ಐಪಿಎಸ್ ಅಧಿಕಾರಿ ರವಿ.ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು ತಗುಲಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿರುವ ರವಿ ಡಿ. ಚನ್ನಣ್ಣವನರ್ ಅವರು ನಿನ್ನೆ ಕೊರೊನಾ ಪರೀಕ್ಷೆ ಮಡಿಸಿಕೊಂಡಿದ್ದರು. ವರದಿಯಲ್ಲಿ ಸೋಂಕು ಇರುವುದು ದೃಢವಾಗಿದೆ.

    ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಸ್‍ಪಿ ಸೇರಿದಂತೆ ಅವರ ಜೊತೆಯಲ್ಲಿದ್ದ ಸಿಬ್ಬಂದಿ ಐಸೋಲೇಷನ್‍ಗೆ ಒಳಗಾಗಿದ್ದಾರೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತಿವಹಿಸಿ ಎಂದು ರವಿ.ಡಿ ಚನ್ನಣ್ಣನವರ್ ಮನವಿ ಮಾಡಿದ್ದಾರೆ.