Tag: ಕೊರೊನಾ ರಿಪೋರ್ಟ್

  • ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

    ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

    ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಿದ್ಧತೆಗಳು ಬಿರುಸು ಪಡೆದು ಕೊಂಡಿವೆ. ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮದ ಮೊದಲ ಹಂತದ ರೂಪು ರೇಷೆಗಳು ಸಿದ್ಧವಾಗಿವೆ. ಈ ಮಧ್ಯೆ ಕಾರ್ಯದಲ್ಲಿ ಪಾಲ್ಗೊಳ್ಳುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

    ಹೌದು. ಮೈಸೂರು ಅರಮನೆ ಮುಂಭಾಗ ಜೂನ್ 21 ರಂದು ಪ್ರಧಾನ ಮಂತ್ರಿಗಳು ಯೋಗ ಮಾಡಲಿದ್ದಾರೆ. ಪ್ರಧಾನಿಗಳ ಜೊತೆ 15 ಸಾವಿರ ಜನ ಯೋಗ ಮಾಡಲಿದ್ದು ಇದಕ್ಕಾಗಿ ಸಿದ್ಧತೆಗಳು ನಡೆದಿವೆ. ಅಂದು ಬೆಳಗ್ಗೆ 6.30 ಕ್ಕೆ ಯೋಗ ಆರಂಭವಾಗಲಿದೆ. ಒಟ್ಟು ಮುಕ್ಕಾಲು ಗಂಟೆ 21 ಯೋಗದ ಆಸನಗಳನ್ನು ಮಾಡಲಾಗುತ್ತದೆ.

    ಪ್ರಧಾನಿಗಳು ಯೋಗ ಆರಂಭಿಸುವ ಒಂದು ಗಂಟೆ ಮುನ್ನ ಅಂದರೆ ಬೆಳಗ್ಗೆ 5.30 ರ ಒಳಗೆ ನೋಂದಣಿ ಮಾಡಿ ಕೊಂಡಿರುವ ಯೋಗಪಟುಗಳು ಅರಮನೆ ಒಳಗೆ ಬರಬೇಕು. ಸರಿಯಾಗಿ 5.30 ಕ್ಕೆ ಅರಮನೆಯ ಎಲ್ಲಾ ದ್ವಾರಗಳು ಬಂದ್ ಆಗುತ್ತವೆ. ನೋಂದಣಿಯಾದ ಪ್ರತಿಯೊಬ್ಬ ಯೋಗಪಟುವಿಗೂ ಯೋಗ ಮ್ಯಾಟ್, ಶೂ ಇಡುವ ಬಾಕ್ಸ್, ಮೊಬೈಲ್ ಇಟ್ಟುಕೊಳ್ಳಲು ಪ್ರತ್ಯೇಕ ಕವರ್ ಅನ್ನು ಕೇಂದ್ರದ ಆಯುಷ್ ಇಲಾಖೆಯೆ ನೀಡಲಿದೆ. ಅಲ್ಲದೆ ಅರಮನೆ ಆವರಣದಲ್ಲಿ ಯೋಗ ಮಾಡಲು ನೋಂದಣಿ ಮಾಡುವವರು ಕೊರೊನಾ ಎರಡನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು. ಯೋಗ ದಿನಕ್ಕೂ 72 ಗಂಟೆ ಮುಂಚಿನ ಕರೋನಾ ನೆಗಟಿವ್ ರೀಪೋರ್ಟ್ ಕಡ್ಡಾಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ವಿಶ್ವವೇ ಮುಸ್ಲಿಮರಿಗೆ ಕ್ಷಮೆ ಕೇಳ್ಬೇಕು – 500 ವೆಬ್‌ಸೈಟ್ಸ್ ಹ್ಯಾಕ್, ಪ್ರವಾದಿ ಅವಹೇಳನಕ್ಕಿದೆಯಾ ಲಿಂಕ್?

    ಒಟ್ಟು 15 ಸಾವಿರ ಜನರಲ್ಲಿ 12 ಸಾವಿರ ಸ್ಥಳೀಯರು, 1 ಸಾವಿರ ವಿವಿಧ ರಾಜ್ಯಗಳ ಪ್ರತಿನಿಧಿಗಳು, ಒಂದು ಸಾವಿರ ಆಯುಷ್ ಇಲಾಖೆ ಹಾಗೂ ಕೇಂದ್ರದ ವಿವಿಧ ಇಲಾಖೆ ಅಧಿಕಾರಿಗಳು, ಒಂದು ಸಾವಿರ ಕೇಂದ್ರ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. 12 ಸಾವಿರ ಸ್ಥಳೀಯರ ಆಯ್ಕೆ ಪ್ರಕ್ರಿಯೆ ಕೂಡ ಮುಗಿದಿದೆ. ಇದರಲ್ಲಿ ಪೌರಕಾರ್ಮಿಕರು, ಆಟೋ ಚಾಲಕರು, ತೃತೀಯ ಲಿಂಗಿಗಳು, ಯೋಗ ಒಕ್ಕೂಟಗಳಲ್ಲಿನ ಯೋಗ ಪಟುಗಳು, ರಾಜ್ಯ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿ, ಹೋಟೆಲ್ ಸಿಬ್ಬಂದಿ, ಪೊಲೀಸ್ ಇಲಾಖೆ ಹೀಗೆ ಎಲ್ಲಾ ಕಾರ್ಮಿಕ ವರ್ಗ, ಎಲ್ಲಾ ಸ್ಥರದ ಜನರನ್ನು ಸೇರಿಸಿ ಕೊಳ್ಳಲಾಗಿದೆ. ಅವರ ಕೋವಿಡ್ ಲಸಿಕಾ ವರದಿಗಳನ್ನು ಪಡೆಯಲಾಗಿದೆ. ಅವರ ಪಾಸ್ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ.

    ಅರಮನೆ ಒಳಗೆ ಒಟ್ಟು 17 ಬ್ಲಾಕ್ ಮಾಡಲಾಗುತ್ತದೆ. ಪ್ರತಿ ಬ್ಲಾಕ್ ನಲ್ಲೂ 100 ಜನ ಯೋಗ ಮಾಡಲಿದ್ದಾರೆ. ಪಾಸ್ ಗಳಲ್ಲೆ ಯಾವ ಬ್ಲಾಕ್ ಗೆ ಹೋಗಬೇಕು ಎಂಬ ಸೂಚನೆ ಇರಲಿದೆ. ಒಟ್ಟು 120 ಮೊಬೈಲ್ ಶೌಚಾಲಯದ ವ್ಯವಸ್ಥೆ ಆಗಲಿದೆ. ಇಡೀ ಕಾರ್ಯಕ್ರಮದ ನಿರ್ವಹಣೆಯನ್ನು ಕೇಂದ್ರದ ಆಯುಷ್ ಇಲಾಖೆಯೆ ಮಾಡಲಿದೆ. ಆಹ್ವಾನ ಪತ್ರಿಕೆ ಮತ್ತು ವೇದಿಕೆ ನಿರ್ಮಾಣದ ಜವಾಬ್ದಾರಿ ಮಾತ್ರ ರಾಜ್ಯ ಸರಕಾರ ನಿರ್ವಹಿಸಲಿದೆ. ಇದನ್ನೂ ಓದಿ: ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌

    ಕೇಂದ್ರ ಸರಕಾರ ಕ್ವಾಲಿಟಿ ಮುಖ್ಯ ಹೊರತು ಕ್ವಾಂಟಿಟಿ ಮುಖ್ಯವಲ್ಲ ಎಂದು ಸ್ಪಷ್ಟವಾಗಿ ಜಿಲ್ಲಾಡಳಿತಕ್ಕೆ ಸಂದೇಶ ರವಾನಿಸಿದೆ. ಹೀಗಾಗಿ ಬೇಕಾಬಿಟ್ಟಿ ಜನರನ್ನು ಸೇರಿಸದೆ ಯೋಗವನ್ನು ಕ್ರಮ ಬದ್ದವಾಗಿ ಮಾಡುವವರನ್ನೆ ಗುರುತಿಸಿ ಯೋಗ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.

  • ರಾಜ್ಯದಲ್ಲಿಂದು 1,653 ಕೊರೊನಾ ಕೇಸ್- 31 ಸಾವು, 2,572 ಡಿಸ್ಚಾರ್ಜ್

    ರಾಜ್ಯದಲ್ಲಿಂದು 1,653 ಕೊರೊನಾ ಕೇಸ್- 31 ಸಾವು, 2,572 ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿಂದು 1,653 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 31 ಮಂದಿ ಸಾವನ್ನಪ್ಪಿದ್ದಾರೆ. 2,572 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಸದ್ಯ ರಾಜ್ಯದಲ್ಲಿ 24,695 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.17 ಮತ್ತು ಮರಣ ಪ್ರಮಾಣ ಶೇ.1.87ರಷ್ಟಿದೆ. ರಾಜ್ಯದಲ್ಲಿ ಇದುವರೆಗೆ 28,89,994 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು 36,293 ಜನರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 1,40,343 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರಿನಲ್ಲಿಂದು 418 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 3 ಜನರು ಸಾವನ್ನಪ್ಪಿದ್ದಾರೆ. 8,748 ಸಕ್ರಿಯ ಪ್ರಕರಣಗಳಿದ್ದು, 1,162 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವರೆಗೆ ಬೆಂಗಳೂರಿನಲ್ಲಿ ಒಟ್ಟು 12,23,644 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಬೀದರ್ ಹಾಗೂ ಯಾದಗಿರಿಯಲ್ಲಿ ಇಂದು ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.

    ಯಾವ ಜಿಲ್ಲೆಯಲ್ಲಿ ಎಷ್ಟು?:
    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 3, ಬಳ್ಳಾರಿ 6, ಬೆಳಗಾವಿ 60, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 418, ಬೀದರ್ 0, ಚಾಮರಾಜನಗರ 29, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 64, ಚಿತ್ರದುರ್ಗ 21, ದಕ್ಷಿಣ ಕನ್ನಡ 229, ದಾವಣಗೆರೆ 27, ಧಾರವಾಡ 14, ಗದಗ 3, ಹಾಸನ 97, ಹಾವೇರಿ 2, ಕಲಬುರಗಿ 3, ಕೊಡಗು 107, ಕೋಲಾರ 21, ಕೊಪ್ಪಳ 2, ಮಂಡ್ಯ 36, ಮೈಸೂರು 134, ರಾಯಚೂರು 2, ರಾಮನಗರ 3, ಶಿವಮೊಗ್ಗ 87, ತುಮಕೂರು 104, ಉಡುಪಿ 82, ಉತ್ತರ ಕನ್ನಡ 34, ವಿಜಯಪುರ 9, ಯಾದಗಿರಿಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿಲ್ಲ.

  • ರಾಜ್ಯದಲ್ಲಿಂದು 1,464 ಕೊರೊನಾ ಕೇಸ್- 29 ಸಾವು, 2,706 ಡಿಸ್ಚಾರ್ಜ್

    ರಾಜ್ಯದಲ್ಲಿಂದು 1,464 ಕೊರೊನಾ ಕೇಸ್- 29 ಸಾವು, 2,706 ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿಂದು 1,464 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 29 ಮಂದಿ ಸಾವನ್ನಪ್ಪಿದ್ದಾರೆ. 2,706 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಸದ್ಯ ರಾಜ್ಯದಲ್ಲಿ 26,256 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.29 ಮತ್ತು ಮರಣ ಪ್ರಮಾಣ ಶೇ.1.98ರಷ್ಟಿದೆ. ರಾಜ್ಯದಲ್ಲಿ ಇದುವರೆಗೆ 28,86,702 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು 36,226 ಜನರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 1,13,456 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರಿನಲ್ಲಿಂದು 352 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 5 ಜನರು ಸಾವನ್ನಪ್ಪಿದ್ದಾರೆ. 10,046 ಸಕ್ರಿಯ ಪ್ರಕರಣಗಳಿದ್ದು, 1,110 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವರೆಗೆ ಬೆಂಗಳೂರಿನಲ್ಲಿ ಒಟ್ಟು 12,22,807 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕೊಪ್ಪಳದಲ್ಲಿ ಇಂದು ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.

    ಯಾವ ಜಿಲ್ಲೆಯಲ್ಲಿ ಎಷ್ಟು?:
    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 35, ಬೆಂಗಳೂರು ನಗರ 352, ಬೀದರ್ 2, ಚಾಮರಾಜನಗರ 16, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 81, ಚಿತ್ರದುರ್ಗ 11, ದಕ್ಷಿಣ ಕನ್ನಡ 200, ದಾವಣಗೆರೆ 13, ಧಾರವಾಡ 14, ಗದಗ 1, ಹಾಸನ 108, ಹಾವೇರಿ 3, ಕಲಬುರಗಿ 8, ಕೊಡಗು 56, ಕೋಲಾರ 36, ಕೊಪ್ಪಳ 0, ಮಂಡ್ಯ 37, ಮೈಸೂರು 117, ರಾಯಚೂರು 3, ರಾಮನಗರ 4, ಶಿವಮೊಗ್ಗ 63, ತುಮಕೂರು 86, ಉಡುಪಿ 68, ಉತ್ತರ ಕನ್ನಡ 53, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ.

  • ಪಾಸಿಟಿವಿಟಿ ರೇಟ್ ಶೇ.1.09ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,708 ಕೊರೊನಾ ಕೇಸ್

    ಪಾಸಿಟಿವಿಟಿ ರೇಟ್ ಶೇ.1.09ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,708 ಕೊರೊನಾ ಕೇಸ್

    – 36 ಸಾವು, 2,463 ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿಂದು 1,708 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 36 ಮಂದಿ ಸಾವನ್ನಪ್ಪಿದ್ದಾರೆ. 2,463 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಸದ್ಯ ರಾಜ್ಯದಲ್ಲಿ 29,291 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.09 ಮತ್ತು ಮರಣ ಪ್ರಮಾಣ ಶೇ.2.10ರಷ್ಟಿದೆ. ರಾಜ್ಯದಲ್ಲಿ ಇದುವರೆಗೆ 28,83,947 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು 36,157 ಜನರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 1,56,564 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರಿನಲ್ಲಿಂದು 386 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. 11,751 ಸಕ್ರಿಯ ಪ್ರಕರಣಗಳಿದ್ದು, 793 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವರೆಗೆ ಬೆಂಗಳೂರಿನಲ್ಲಿ ಒಟ್ಟು 12,22,189 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಯಾದಗಿರಿಯಲ್ಲಿ ಇಂದು ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.

    ಯಾವ ಜಿಲ್ಲೆಯಲ್ಲಿ ಎಷ್ಟು?:
    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 4, ಬಳ್ಳಾರಿ 1, ಬೆಳಗಾವಿ 55, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು ನಗರ 386, ಬೀದರ್ 8, ಚಾಮರಾಜನಗರ 23, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 105, ಚಿತ್ರದುರ್ಗ 15, ದಕ್ಷಿಣ ಕನ್ನಡ 241, ದಾವಣಗೆರೆ 23, ಧಾರವಾಡ 21, ಗದಗ 1, ಹಾಸನ 171, ಹಾವೇರಿ 8, ಕಲಬುರಗಿ 3, ಕೊಡಗು 45, ಕೋಲಾರ 33, ಕೊಪ್ಪಳ 2, ಮಂಡ್ಯ 53, ಮೈಸೂರು 210, ರಾಯಚೂರು 4, ರಾಮನಗರ 3, ಶಿವಮೊಗ್ಗ 82, ತುಮಕೂರು 64, ಉಡುಪಿ 105, ಉತ್ತರ ಕನ್ನಡ 44, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.

  • ರಾಜ್ಯದಲ್ಲಿಂದು 1,869 ಕೊರೊನಾ ಕೇಸ್- 42 ಸಾವು, 3,144 ಡಿಸ್ಚಾರ್ಜ್

    ರಾಜ್ಯದಲ್ಲಿಂದು 1,869 ಕೊರೊನಾ ಕೇಸ್- 42 ಸಾವು, 3,144 ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿಂದು 1,869 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 42 ಮಂದಿ ಸಾವನ್ನಪ್ಪಿದ್ದಾರೆ. 3,144 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಸದ್ಯ ರಾಜ್ಯದಲ್ಲಿ 30,082 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.30 ಮತ್ತು ಮರಣ ಪ್ರಮಾಣ ಶೇ.2.24ರಷ್ಟಿದೆ. ರಾಜ್ಯದಲ್ಲಿ ಇದುವರೆಗೆ 28,82,239 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು 36,121 ಜನರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 1,42,856 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರಿನಲ್ಲಿಂದು 432 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 6 ಜನರು ಸಾವನ್ನಪ್ಪಿದ್ದಾರೆ. 615 ಸಕ್ರಿಯ ಪ್ರಕರಣಗಳಿದ್ದು, 635 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವರೆಗೆ ಬೆಂಗಳೂರಿನಲ್ಲಿ ಒಟ್ಟು 12,21,803 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಗದಗನಲ್ಲಿ ಇಂದು ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.

    ಯಾವ ಜಿಲ್ಲೆಯಲ್ಲಿ ಎಷ್ಟು?:
    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 4, ಬಳ್ಳಾರಿ 11, ಬೆಳಗಾವಿ 97, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 432, ಬೀದರ್ 1, ಚಾಮರಾಜನಗರ 15, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 101, ಚಿತ್ರದುರ್ಗ 15, ದಕ್ಷಿಣ ಕನ್ನಡ 218, ದಾವಣಗೆರೆ 21, ಧಾರವಾಡ 24, ಗದಗ 0, ಹಾಸನ 173, ಹಾವೇರಿ 14, ಕಲಬುರಗಿ 6, ಕೊಡಗು 51, ಕೋಲಾರ 46, ಕೊಪ್ಪಳ 1, ಮಂಡ್ಯ 37, ಮೈಸೂರು 207, ರಾಯಚೂರು 3, ರಾಮನಗರ 11, ಶಿವಮೊಗ್ಗ 83, ತುಮಕೂರು 92, ಉಡುಪಿ 94, ಉತ್ತರ ಕನ್ನಡ 49, ವಿಜಯಪುರ ಮತ್ತು ಯಾದಗಿರಿಯಲ್ಲಿ ತಲಾ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಗುಣಮುಖರ ಸಂಖ್ಯೆ ಹೆಚ್ಚಳ – 52,253 ಡಿಸ್ಚಾರ್ಜ್, 22,823 ಪಾಸಿಟಿವ್

    ಗುಣಮುಖರ ಸಂಖ್ಯೆ ಹೆಚ್ಚಳ – 52,253 ಡಿಸ್ಚಾರ್ಜ್, 22,823 ಪಾಸಿಟಿವ್

    ಬೆಂಗಳೂರು: ರಾಜ್ಯದಲ್ಲಿಂದು 22,823 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 52,253 ಜನರು ಗುಣಮುಖರಾಗಿದ್ದಾರೆ. ಇಂದು ಕೊರೊನಾಗೆ 401 ಸೋಂಕಿತರು ಪ್ರಾಣ ಕಳೆದುಕೊಂಡಿದ್ದು, ಇದುವರೆಗೂ ಮಹಾಮಾರಿಗೆ ರಾಜ್ಯದಲ್ಲಿ 27,806 ಜನ ಸಾವನ್ನಪ್ಪಿದ್ದಾರೆ.

    ಸದ್ಯ 3,72,373 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.16.42 ಮತ್ತು ಮರಣ ಪ್ರಮಾಣ ಶೇ.1.75ರಷ್ಟಿದೆ. ಇಂದು 1,38,983 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಟ್ಟು 1,90,825 ಮಂದಿಗೆ ಲಸಿಕೆ ನೀಡಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿ 5,736 ಹೊಸ ಪ್ರಕರಣಗಳು ವರದಿಯಾಗಿದ್ದು, ಸದ್ಯ 2,80,697 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿಂದು 192 ಸೋಂಕಿತರು ಸಾವನ್ನಪ್ಪಿದ್ದು, 31,237 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?
    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು 5,736, ಬೆಳಗಾವಿ 1,147, ಬೆಂಗಳೂರು ನಗರ 5,949, ಹಾಸನ 1,505, ಮೈಸೂರು 2,240, ತುಮಕೂರಿನಲ್ಲಿ 1,219ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಎಲ್ಲರಿಗೂ ಹಬ್ಬಿಸಿ ಬಂದ್ಮೇಲೆ ಕೊರೊನಾ ರಿಪೋರ್ಟ್ ಕೊಡ್ತಾರೆ: ಶಿವಲಿಂಗೇಗೌಡ

    ಎಲ್ಲರಿಗೂ ಹಬ್ಬಿಸಿ ಬಂದ್ಮೇಲೆ ಕೊರೊನಾ ರಿಪೋರ್ಟ್ ಕೊಡ್ತಾರೆ: ಶಿವಲಿಂಗೇಗೌಡ

    – ರ‍್ಯಾಪಿಡ್‌  ಟೆಸ್ಟಿನಲ್ಲಿ ಪಾಸಿಟಿವ್, ಆರ್‌ಟಿಪಿಸಿಆರ್ ಟೆಸ್ಟಿನಲ್ಲಿ ನೆಗೆಟಿವ್
    – 300 ರೂ. ಕಿಟ್‍ನ, 2500 ರೂ.ಗೆ ಮಾರುತ್ತಾರೆ

    ಬೆಂಗಳೂರು: ಎಲ್ಲರಿಗೂ ಹಬ್ಬಿಸಿ ಬಂದ ಮೇಲೆ ಕೊರೊನಾ ರಿಪೋರ್ಟ್ ಕೊಡುತ್ತಾರೆ ಎಂದು ಶಾಸಕ ಶಿವಲಿಂಗೇಗೌಡ ವಿಧಾನಸಭೆಯಲ್ಲಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

    ಇಂದು ಸದನದಲ್ಲಿ ಗುಡುಗಿದ ಶಿವಲಿಂಗೇಗೌಡರು, ಖಾಸಗಿ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆಗೆ ಮೂರೂವರೆ ಲಕ್ಷ ವಸೂಲಿ ಮಾಡುತ್ತಾರೆ. ಸಚಿವರು ಆಸ್ಪತ್ರೆಗಳನ್ನು ಹೊಗಳಿಕೊಂಡಿದ್ದೇ ಹೊಗಳಿಕೊಂಡಿದ್ದು, ಏನ್ ಕಡಿದು ಕಟ್ಟೆ ಹಾಕಿದ್ರು ಅಂತ ಹೊಗಳಿದ್ದೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

    300 ರೂ.ಗೆ ಕಿಟ್ ಸಿಗುತ್ತೆ, ಅದನ್ನು 2500 ರೂ.ಗೆ ಮಾರುತ್ತಾರೆ. ಯಾವ್ಯಾವ ಕಂಪನಿಯಿಂದ ನೀವು ಮೆಡಿಕಲ್ ಕಿಟ್ ಪಡೆದಿದ್ದೀರಾ? ಅದನ್ನು ಎಲ್ಲೆಲ್ಲಿಂದ ತಂದು ಕೊಡುತ್ತಾರೆ ನಿಮಗೆ ಗೊತ್ತಾ? ಆಕ್ಸಿಜನ್ ಹಾಕಿದರೆ ಮಧ್ಯಾಹ್ನಕ್ಕೆ ಮುಗಿಯುತ್ತೆ. ರಾತ್ರಿಹೊತ್ತಿಗೆ ಪೇಶೆಂಟ್ ಹೋಗಿಬಿಡುತ್ತಾನೆ. ಇದರಲ್ಲಿ ಏನೇನಾಗಿದೆ ದೇವರೇ ನೋಡಿಕೊಳ್ಳುತ್ತಾನೆ. ಅಂತವರಿಗೆ ದೊಡ್ಡ ರೋಗ ಬರುತ್ತೆ ಎಂದು ಶಿವಲಿಂಗೇಗೌಡ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

    ರ‍್ಯಾಪಿಡ್  ಟೆಸ್ಟ್ ನಲ್ಲಿ ಪಾಸಿಟಿವ್ ಬಂದರೆ ಆರ್.ಟಿ.ಪಿ.ಸಿ.ಆರ್ ನಲ್ಲಿ ನೆಗೆಟಿವ್ ಬರುತ್ತೆ. ರಿಪೋರ್ಟ್ ಬರೋದು ಮೂರ್ನಾಲ್ಕು ದಿನ ಆಗುತ್ತೆ. ಅಲ್ಲಿ ತನಕ ಟೆಸ್ಟ್ ಮಾಡಿಸಿದವನು ಎಲ್ಲ ಕಡೆ ಸುತ್ತಾಡಿಕೊಂಡು ಎಲ್ಲರಿಗೂ ಸೋಂಕು ಅಂಟಿಸಿ ಹೋಗುತ್ತಾನೆ. ಇದೇನಾ ವ್ಯವಸ್ಥೆ ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದರು.