Tag: ಕೊರೊನಾ ರೋಗಿಗಳು

  • ಸತ್ತವರು, ಸೋಂಕಿತರು, ಸಂಬಂಧಿಕರು ಒಂದೇ ಕಡೆ – ಆಸ್ಪತ್ರೆ ವಿರುದ್ಧ ಸ್ಥಳೀಯರು ಆಕ್ರೋಶ

    ಸತ್ತವರು, ಸೋಂಕಿತರು, ಸಂಬಂಧಿಕರು ಒಂದೇ ಕಡೆ – ಆಸ್ಪತ್ರೆ ವಿರುದ್ಧ ಸ್ಥಳೀಯರು ಆಕ್ರೋಶ

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಮೃತದೇಹ, ಸೋಂಕಿತರು, ಸೋಂಕಿತರ ಸಂಬಂಧಿಕರನ್ನು ಒಂದೇ ಕಡೆ ಇರಿಸಲಾಗಿದೆ ಎಂದು ಅಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿನ ಪರಿಸ್ಥಿತಿ ಹೀಗಿದ್ದರೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗದೇ ಇನ್ನೇನು ಕಡಿಮೆಯಾಗುತ್ತಾ ಎಂದು ಜಿಲ್ಲಾಸ್ಪತ್ರೆ ವಿರುದ್ಧ ಜನರು ಅಸಮಾಧಾನ ಹೊರಹಾಕಿದ್ದಾರೆ.

    ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಮೃತದೇಹ, ಸೋಂಕಿತರು, ಸೋಂಕಿತರ ಸಂಬಂಧಿಕರು ಎಲ್ಲರೂ ಒಂದೇ ಜಾಗದಲ್ಲಿ ಅಕ್ಕಪಕ್ಕದ ಬೆಡ್‍ನಲ್ಲಿ ಇರಿಸಲಾಗಿದೆ. ಸೋಂಕಿತರನ್ನ ಸಂಬಂಧಿಗಳೇ ಉಪಚರಿಸುತ್ತಿದ್ದಾರೆ. ಸಾಮಾಜಿಕ ಅಂತರ, ಪಿಪಿಇ ಕಿಟ್ ಧರಿಸದೇ ಸೋಂಕಿತರಿಗೆ ಊಟ-ತಿಂಡಿ ಮಾಡಿಸುವ ಸಂಬಂಧಿಕರು ಸಂಜೆ ಮನೆಗೆ ಬಂದು ಮಾಮೂಲಿಯಂತೆ ಇದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಸಾರ್ವಜನಿಕರು ಆಸ್ಪತ್ರೆ ವ್ಯವಸ್ಥೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನು ಓದಿ: ಮುದ್ದು ಕಂದಮ್ಮನ ಮುಖ ನೋಡುವ ಮುನ್ನವೇ ಕೊರೊನಾಗೆ ಬಲಿಯಾದ ಪವರ್ ಮ್ಯಾನ್

    ಜಿಲ್ಲಾಸ್ಪತ್ರೆಯ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳು, ರೋಗಿಗಳ ಜೊತೆ ಸಂಬಂಧಿಕರು, ಮೃತದೇಹಗಳು ಅಲ್ಲೆ ಇವೆ. ಸೋಂಕಿತರ ಊಟ-ತಿಂಡಿಯೂ ಅಲ್ಲೆ ನಡೆಯುತ್ತಿದೆ. ಹೀಗೆ ಒಂದೇ ಜಾಗದಲ್ಲಿ ಎಲ್ಲರೂ ಹೀಗಿದ್ದರೆ ಕೊರೊನಾ ಹೆಚ್ಚಾಗದೆ ಕಡಿಮೆ ಹೇಗಾಗುತ್ತೆ ಎನ್ನುವ ಪ್ರಶ್ನೆ ಮೂಡಿದೆ ಎಂದು ಆಸ್ಪತ್ರೆಗೆ ಭೇಟಿ ನೀಡುತ್ತಿರುವ ಕೊರೊನಾ ಸೋಂಕಿತರ ಸಂಬಂಧಿಕರು ಕಿಡಿಕಾರಿದ್ದಾರೆ.

    ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಜಿಲ್ಲೆಯ ಪಾಸಿಟಿವಿಟಿ ರೇಟ್ ಕೂಡ 21ರಷ್ಟಿದೆ. ಹಳ್ಳಿಗಳಲ್ಲಿ ಕೊರೊನಾ ಅಬ್ಬರ ಜೋರಿದೆ. ಹಳ್ಳಿಗರು ಪರೀಕ್ಷೆಗೆ ಬರುತ್ತಿಲ್ಲ. ಮನೆಮದ್ದಿಗೆ ಆದ್ಯತೆ ನೀಡಿ ಸೋಂಕು ಹೆಚ್ಚಿಸುತ್ತಿದ್ದಾರೆ. ಇನ್ನೂ ಆಸ್ಪತ್ರೆಯಲ್ಲಿ ಈ ರೀತಿ ಪರಿಸ್ಥಿತಿ ಕಂಡ ಜಿಲ್ಲೆಯ ಜನ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

  • ಮಹಾರಾಷ್ಟ್ರದಲ್ಲಿ ಮತ್ತೊಂದು ಅಗ್ನಿ ದುರಂತ – ಐಸಿಯುನಲ್ಲಿದ್ದ 12 ಕೊರೊನಾ ರೋಗಿಗಳ ಸಾವು

    ಮಹಾರಾಷ್ಟ್ರದಲ್ಲಿ ಮತ್ತೊಂದು ಅಗ್ನಿ ದುರಂತ – ಐಸಿಯುನಲ್ಲಿದ್ದ 12 ಕೊರೊನಾ ರೋಗಿಗಳ ಸಾವು

    ಮುಂಬೈ: ನಾಸಿಕ್ ಆಸ್ಪತ್ರೆಯ ದುರಂತ ಮಾಸುವ ಮುನ್ನವೇ ಮುಂಬೈನ ವಿಜಯ್ ವಲ್ಲಭ್ ಆಸ್ಪತ್ರೆಯ ಅಗ್ನಿ ಅವಘಡದಲ್ಲಿ 12 ರೋಗಿಗಳು ಸಾವನ್ನಪ್ಪಿದ್ದಾರೆ.

    ಮಹಾರಾಷ್ಟ್ರದ ವಿರಾರ್ ನಲಿಯ ವಿಜಯ್ ವಲ್ಲಭ್ ಆಸ್ಪತ್ರೆಯ ಐಸಿಯು ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬೆಡ್ ಮೇಲಿದ್ದ ರೋಗಿಗಳು ಹೊರ ಬರಲಾರದೇ ವಾರ್ಡ್ ನಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಐಸಿಯುನಲ್ಲಿ ಒಟ್ಟು 17 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

    ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳಗಿನ ಜಾವ ಮೂರು ಗಂಟೆಗೆ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಆಸ್ಪತ್ರೆಯ ಸಿಬ್ಬಂದಿ ಹೇಳಿದ್ದಾರೆ. ಮೃತ 12 ಜನರೆಲ್ಲರೂ ಕೊರೊನಾ ಸೋಂಕಿತರು ಆಗಿದ್ದಾರೆ. ಇನ್ನುಳಿದ ರೋಗಿಗಳ ಹತ್ತಿರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

    ಸಾಂದರ್ಭಿಕ ಚಿತ್ರ

    ಏಪ್ರಿಲ್ 21ರಂದು ನಾಸಿಕ್ ನಗರದ ಜಾಕೀರ್ ಹುಸೇನ್ ಆಸ್ಪತ್ರೆ ಮುಂದೆ ಟ್ಯಾಂಕರ್ ನಿಂದ ಆಕ್ಸಿಜನ್ ಸೋರಿಕೆಯಾದ ಪರಿಣಾಮ, ರೋಗಿಗಳಿಗೆ ಪ್ರಾಣವಾಯು ಸರಬರಾಜು ನಿಂತುಹೋಗಿ ಮೃತ್ಯು ರಣಕೇಕೆ ಹಾಕಿತ್ತು. 22 ಮಂದಿ ರೋಗಿಗಳು ಆಕ್ಸಿಜನ್ ಸಿಗದೇ ಉಸಿರು ಚೆಲ್ಲಿದ್ದರು. ಆಸ್ಪತ್ರೆಯಲ್ಲಿ 700 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. 170 ಮಂದಿಗೆ ವೆಂಟಿಲೇಟರ್ ಬೆಡ್, ಆಕ್ಸಿಜನ್ ಪೂರೈಕೆ ಇದ್ದ ಬೆಡ್‍ಗಳಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು.

    ಸಾಂದರ್ಭಿಕ ಚಿತ್ರ

    ಆದರೆ ಇದ್ದಕ್ಕಿದ್ದಂತೆ ಟ್ಯಾಂಕರ್‍ನಿಂದ ಆಕ್ಸಿಜನ್ ಲೀಕ್ ಆಗಿ, ಸುಮಾರು ಅರ್ಧಗಂಟೆ ಪ್ರಾಣವಾಯು ಪೂರೈಕೆ ಸ್ಥಗಿತಗೊಂಡಿತ್ತು. ಈ ವೇಳೆ ವೆಂಟಿಲೇಟರ್‍ನಲ್ಲಿದ್ದ 22 ಮಂದಿ ಪ್ರಾಣ ಕಳೆದುಕೊಂಡಿದ್ದರು. ಉಳಿದ ರೋಗಿಗಳನ್ನು ತುರ್ತಾಗಿ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿರತ್ತು.

  • ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್‌ನಲ್ಲಿ ಕಾಣಿಸಿಕೊಂಡ ಹೊಗೆ

    ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್‌ನಲ್ಲಿ ಕಾಣಿಸಿಕೊಂಡ ಹೊಗೆ

    – ರೋಗಿಗಳು ಇಲ್ಲದ್ದರಿಂದ ತಪ್ಪಿತು ಅನಾಹುತ

    ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು.

    ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

    ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಹೊಗೆ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಾರ್ಡ್ ನಲ್ಲಿ ಆವರಿಸಿಕೊಂಡಿದ್ದ ಹೊಗೆಯನ್ನು ಮುಕ್ತಗೊಳಿಸಿದರು. ಇದೀಗ ಪರಿಣಿತರ ತಂಡ ಈ ಕುರಿತು ಪರಿಶೀಲನೆ ನಡೆಸುತ್ತಿದೆ.