Tag: ಕೊರೊನಾ ಲಸಿಕೆ

  • 45 ವರ್ಷ ಮೇಲ್ಪಟ್ಟವರಿಗೆ ಕಾರ್ಯ ಸ್ಥಳದಲ್ಲೇ ಲಸಿಕೆ

    45 ವರ್ಷ ಮೇಲ್ಪಟ್ಟವರಿಗೆ ಕಾರ್ಯ ಸ್ಥಳದಲ್ಲೇ ಲಸಿಕೆ

    ನವದೆಹಲಿ: 45 ವರ್ಷ ಮೇಲ್ಪಟ್ಟವರಿಗೆ ಕೆಲಸ ಮಾಡುವ ಸ್ಥಳದಲ್ಲೇ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

    ಏಪ್ರಿಲ್ 11 ರಿಂದ ಸಾರ್ವಜನಿಕ ಮತ್ತು ಖಾಸಗಿಯಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಿಗೆ ಅವರು ಕೆಲಸ ಮಾಡುವ ಸ್ಥಳದಲ್ಲಿ ಲಸಿಕೆ ನೀಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

    ಕೋವಿಡ್ ಲಸಿಕೆ ವಿತರಣೆ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಹೆಜ್ಜೆಯನ್ನು ಇಟ್ಟಿದ್ದು ಒಂದು ಕೊರೊನಾ ಲಸಿಕೆ ಕೇಂದ್ರ ತೆರೆಯಬೇಕಾದರೆ 100 ಮಂದಿ 45 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಇರಬೇಕು ಎಂದು ತಿಳಿಸಿದೆ.

    ಕೆಲಸ ಮಾಡುವ ಸ್ಥಳದಲ್ಲೇ ಲಸಿಕೆ ವಿತರಿಸುವ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

  • 2ನೇ ಡೋಸ್ ಲಸಿಕೆ ಪಡೆದು 27 ದಿನ- ಚಾಮರಾಜನಗರ ಡಿಸಿಗೆ ಕೊರೊನಾ ದೃಢ

    2ನೇ ಡೋಸ್ ಲಸಿಕೆ ಪಡೆದು 27 ದಿನ- ಚಾಮರಾಜನಗರ ಡಿಸಿಗೆ ಕೊರೊನಾ ದೃಢ

    ಚಾಮರಾಜಕನಗರ: ಕೋವಿಶೀಲ್ಡ್ 2ನೇ ಡೋಸ್ ಲಸಿಕೆ ಪಡೆದು 27 ದಿನ ಕಳೆದ ಬಳಿಕವೂ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ.

    ಜಿಲ್ಲಾಧಿಕಾರಿಗೆ ಎರಡು ದಿನಗಳ ಹಿಂದೆ ನೆಗಡಿ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಶನಿವಾರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿತ್ತು. ಭಾನುವಾರ ಫಲಿತಾಂಶ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ. ಸದ್ಯ ಅವರು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ಖಚಿತ ಪಡಿಸಿದ್ದಾರೆ.

    ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಫೆ.8ರಂದು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದರು. ಮಾ.8ರಂದು ಎರಡನೇ ಡೋಸ್ ಲಸಿಕೆ ಸಹ ಪಡೆದಿದ್ದರು. ಕೋವಿಶೀಲ್ಡ್‍ನ ಎರಡನೇ ಡೋಸ್ ಪಡೆದು 27 ದಿನಗಳಾಗಿದೆ.

  • ಕೊರೊನಾ ಲಸಿಕೆ ಪಡೆದ ಯತ್ನಾಳ್

    ಕೊರೊನಾ ಲಸಿಕೆ ಪಡೆದ ಯತ್ನಾಳ್

    ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೊದಲನೇ ಡೋಸ್ ಕೊರೊನಾ ಲಸಿಕೆಯನ್ನು ಪಡೆದರು.

    45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ನಾಲ್ಕನೇ ಹಂತದ ಕೋವಿಡ್-19 ಲಸಿಕೆ ಅಭಿಯಾನ ಆರಂಭಿಸಿದ್ದು, ಇದರ ಭಾಗವಾಗಿ ಇಂದು ಯತ್ನಾಳ್ ಅವರು ಜಿಲ್ಲಾಸ್ಪತ್ರೆಗೆ ತೆರಳಿ ಮೊದಲ ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

    ಭಾರತದಲ್ಲೇ ಅಭಿವೃದ್ಧಿ ಪಡಿಸಿದ ಅತ್ಯಂತ ಸುರಕ್ಷಿತ, ಕೊರೊನಾವನ್ನು ಮಣಿಸಲು ಅಗತ್ಯವಿರುವ ಈ ಲಸಿಕೆಯನ್ನು ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಪಡೆದುಕೊಳ್ಳಬೇಕು. ಕೋವಿಡ್-19 ಲಸಿಕೆ ಕುರಿತು ಜಾಗೃತಿ ಮೂಡಿಸಿ, ಸ್ವಯಂಪ್ರೇರಿತವಾಗಿ ಲಸಿಕೆ ಪಡೆದು ಭಾರತವನ್ನು ಕೊರೊನಾ ಮುಕ್ತವಾಗಿಸಲು ಸಹಕರಿಸಿ ಎಂದು ಯತ್ನಾಳ್ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ.ರಾಜಕುಮಾರ್ ಯರಗಲ್, ಡಾ.ಶರಣಪ್ಪ ಕಟ್ಟಿ, ಡಾ.ಎಸ್.ಎಲ್.ಲಕ್ಕಣ್ಣವರ್, ಡಾ.ಕವಿತಾ ದೊಡ್ಡಮನಿ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

  • ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಲಸಿಕಾ ಕೇಂದ್ರ ಆರಂಭ

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಲಸಿಕಾ ಕೇಂದ್ರ ಆರಂಭ

    ಹುಬ್ಬಳ್ಳಿ: ಲಸಿಕಾ ಕೇಂದ್ರ ಹೆಚ್ಚಳ ಮಾಡುವ ಸರ್ಕಾರದ ಉದ್ದೇಶದಂತೆ ವಿವಿಧೆಡೆ ಹೊಸ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ನಗರದ ವಿಮಾನ ನಿಲ್ದಾಣದಲ್ಲಿ ಸಹ ಲಸಿಕಾ ಕೇಂದ್ರ ತೆರೆಯಲಾಗಿದೆ.

    ಸರ್ಕಾರ ನೀಡಿರುವ ಮಾರ್ಗಸೂಚಿ ಅನ್ವಯ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರ ನಿರ್ದೇಶನದಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೊರೊನಾ ಲಸಿಕಾ ಕೇಂದ್ರ ತೆರೆಯಲಾಗಿದೆ. ವಿಮಾನ ನಿಲ್ದಾಣದ ಸುಮಾರು 200 ಅರ್ಹ ಪಲಾನುಭವಿಗಳಿಗೆ ಹಾಗೂ ಇತರರಿಗೆ ಸ್ಥಳದಲ್ಲಿಯೇ ಲಸಿಕೆ ಹಾಕಲಾಗುತ್ತಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ, ಲಸಿಕಾ ಕೇಂದ್ರವನ್ನು ಪರಿಶೀಲಿಸಿದರು.

    ಕೊರೊನಾ ಹಾಟ್‍ಸ್ಪಾಟ್ ಜಿಲ್ಲೆಗಳಲ್ಲಿ ಒಂದಾಗಿರುವ ಅವಳಿ ನಗರ ಹುಬ್ಬಳ್ಳಿ-ಧಾರವಾಡಗಳಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೊರೊನಾ 2ನೇ ಅಲೆ ಕಾಣಿಸಿಕೊಂಡ ನಂತರ ಪ್ರತಿನಿತ್ಯ ಪಾಸಿಟಿವ್ ಕೇಸ್ ಗಳ ಸಂಖ್ಯೆ 50ರ ಗಡಿ ದಾಟುತ್ತಿದೆ. ಅದರಲ್ಲೂ ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಹೀಗಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಕಾಲೇಜ್ ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

    ಕಳೆದ 5 ದಿನಗಳಿಂದ ಕಾಲೇಜು ಬಂದ್ ಮಾಡಲಾಗಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅಲ್ಲದೆ ಧಾರವಾಡ ಜಿಲ್ಲೆಯಲ್ಲಿ ಪ್ರತಿನಿತ್ಯ ಕೇಸ್ ಗಳು ಹೆಚ್ಚಳವಾಗುತ್ತಿರುವುದು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ.

  • 45 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಿ- ಸುಧಾಕರ್ ಮನವಿ

    45 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಿ- ಸುಧಾಕರ್ ಮನವಿ

    – 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ಲಭ್ಯ

    ಮಂಗಳೂರು: ಎಪ್ರಿಲ್ 1 ರಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜನರು ಸ್ವಯಂಪ್ರೇರಿತರಾಗಿ ಬರಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ಈಗಾಗಲೇ 3 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಹೊಸದಾಗಿ 2 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ಸಿಗಲಿದೆ. ಒಂದು ಕೇಂದ್ರದಲ್ಲಿ 100 ಮಂದಿ ಲಸಿಕೆ ಪಡೆದರೆ 5 ಲಕ್ಷ ಹಾಗೂ 50 ಮಂದಿ ಲಸಿಕೆ ಪಡೆದರೆ, ಎರಡೂವರೆ ಲಕ್ಷ ಜನರಿಗೆ ಲಸಿಕೆ ನೀಡಬಹುದು. ಹೀಗಾಗಿ ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಲು ಬರಬೇಕು ಎಂದು ಕೋರಿದರು.

    ಕೇರಳಕ್ಕೂ ದಕ್ಷಿಣ ಕನ್ನಡಕ್ಕೂ ಅವಿನಾಭಾವ ಸಂಬಂಧ. ಈ ಎರಡು ಪ್ರದೇಶಗಳ ನಡುವೆ ಹೆಚ್ಚು ಜನರು ಸಂಚರಿಸುತ್ತಾರೆ. ಆರ್ ಟಿಪಿಸಿಆರ್ ನೆಗೆಟಿವ್ ವರದಿ ಪರೀಕ್ಷಿಸಬೇಕು ಎಂಬ ಮಾರ್ಗಸೂಚಿ ನಿಯಮವೂ ಇದೆ. ಬಿಗಿಯಾದ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡುತ್ತೇನೆ. ಹೆಚ್ಚು ಸೋಂಕಿತ ಪ್ರಕರಣಗಳು ಕಂಡುಬರುತ್ತಿಲ್ಲ. ಆದರೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಗಡಿಭಾಗ ಆಗಿರುವುದರಿಂದ ಎಚ್ಚರಕೆಯಿಂದಿರಬೇಕು. ಕೋವಿಡ್ ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಬೇಕು. ಜಿಲ್ಲೆಯ ಆರೋಗ್ಯ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆದು ಬೇರೆಯವರಿಗೆ ಸ್ಫೂರ್ತಿ ನೀಡಬೇಕು ಎಂದರು.

    ದಕ್ಷಿಣ ಕನ್ನಡದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ನಡೆಯುತ್ತಿದೆ. ಇನ್ನಷ್ಟು ಕಾರ್ಯ ಚುರುಕು ಆಗಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಜನಸಾಮಾನ್ಯರಿಗೆ ಸೇವೆ ದೊರೆಯುವಂತೆ ಮಾಡಬೇಕಿದೆ. ತಜ್ಞ ವೈದ್ಯರು ತಮ್ಮ ಕ್ಷೇತ್ರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಹೆಚ್ಚಿಸಬೇಕೆಂದು ಸೂಚಿಸಲಾಗಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಶೇ.40 ರಷ್ಟು ಪ್ರಗತಿಯಾಗಿದೆ. ಇನ್ನೂ ಶೇ.60 ಗುರಿಯನ್ನು ತಲುಪಬೇಕಿದೆ. ಜಿಲ್ಲೆಯ ಎಲ್ಲ ಪಿಎಚ್ ಸಿಗಳಲ್ಲಿ ಕಾಂಪೌಂಡ್, ಕೈತೋಟವನ್ನು ಗ್ರಾಮ ಪಂಚಾಯಿತಿ ಯೋಜನೆಗಳಡಿ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

  • ಕೊರೊನಾ ಲಸಿಕೆಯಿಂದ ಸೈಡ್ ಎಫೆಕ್ಟ್ ಇದೆಯಾ? ಹರ್ಷವರ್ಧನ್ ಉತ್ತರ

    ಕೊರೊನಾ ಲಸಿಕೆಯಿಂದ ಸೈಡ್ ಎಫೆಕ್ಟ್ ಇದೆಯಾ? ಹರ್ಷವರ್ಧನ್ ಉತ್ತರ

    ನವದೆಹಲಿ: ಕೊರೊನಾ ತಡೆಗಾಗಿ ಲಸಿಕೆ ಅಭಿಯಾನ ಕಾರ್ಯಕ್ರಮ ಇಡೀ ದೇಶದಲ್ಲಿಯೇ ವೇಗವಾಗಿ ನಡೆಯುತ್ತಿದೆ. ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಸಿಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮಗಳಿವೆಯಾ ಪ್ರಶ್ನೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸ್ಪಷ್ಟನೆ ನೀಡಿದ್ದಾರೆ.

    ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹರ್ಷವರ್ಧನ್ ಕೊರೊನಾ ಲಸಿಕೆ ಮತ್ತು ಅಭಿಯಾನದ ಕುರಿತಾಗಿ ತಿಳಿಸಿದರು. ದೇಶದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಿವೆ. ಇಷ್ಟು ದೊಡ್ಡ ಜನಸಂಖ್ಯೆ ಇರೋ ದೇಶದಲ್ಲಿ ಲಸಿಕೆ ಅಭಿಯಾನ ವ್ಯವಸ್ಥಿತವಾಗಿ ನಡೆಯುತ್ತಿದೆ. ಆ್ಯಪ್ ಮೂಲಕ ಲಸಿಕೆ ಪಡೆಯುವ ಸ್ಥಳವನ್ನ ನೀವೇ ಬುಕ್ ಮಾಡಿಕೊಳ್ಳಬಹುದು ಅಥವಾ ನೇರವಾಗಿ ಆಸ್ಪತ್ರೆಗೆ ತೆರಳಿ ನೋಂದಾಯಿಸಿಕೊಂಡು ಲಸಿಕೆ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

    ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆ ಉಚಿತವಾಗಿ ಸಿಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಜನರಿಗೆ ಕೈಗೆಟುಕುವ ದರ ಅಂದ್ರೆ 250 ರೂ.ಯಲ್ಲಿ ಲಸಿಕೆ ಸಿಗುತ್ತಿದೆ. 250 ರೂ.ಯಲ್ಲಿ ಖಾಸಗಿ ಆಸ್ಪತ್ರೆಗಳು ಲಸಿಕೆಗೆ 150 ರೂಪಾಯಿ ಮತ್ತು ಸೇವೆಗೆ 100 ರೂ. ಶುಲ್ಕ ವಿಧಿಸುತ್ತಿವೆ.

    ಸೈಡ್ ಎಫೆಕ್ಟ್ ಇದೆಯಾ?: ನಾನು ನಿನ್ನೆ ದೆಹಲಿಯ ಸುಮಾರು 10 ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಜೊತೆ ಮಾತನಾಡಿದೆ. ಯಾರು ಲಸಿಕೆಯಿಂದ ಅಡ್ಡ ಪರಿಣಾಮದ ಬಗ್ಗೆ ಹೇಳಿಲ್ಲ ಎಂದು ಹೇಳಿದರು.

  • ಶುಕ್ರಿಯಾ ಭಾರತ್- ಕೊರೊನಾ ಲಸಿಕೆ ನೀಡಿದ್ದಕ್ಕೆ ಭೂತಾನ್‍ನ ಪುಟ್ಟ ಕಲಾವಿದೆಯಿಂದ ಭಾರತಕ್ಕೆ ಧನ್ಯವಾದ

    ಶುಕ್ರಿಯಾ ಭಾರತ್- ಕೊರೊನಾ ಲಸಿಕೆ ನೀಡಿದ್ದಕ್ಕೆ ಭೂತಾನ್‍ನ ಪುಟ್ಟ ಕಲಾವಿದೆಯಿಂದ ಭಾರತಕ್ಕೆ ಧನ್ಯವಾದ

    ಥಿಂಫು: ವಿಶ್ವದ ವಿವಿಧ ರಾಷ್ಟ್ರಗಳಿಗೆ ಭಾರತದಿಂದ ಈಗಾಗಲೇ ಬೃಹತ್ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಕಳುಹಿಸಲಾಗಿದ್ದು, ಇದಕ್ಕೆ ಪ್ರತಿಯಾಗಿ ಆ ದೇಶದ ಪ್ರತಿನಿಧಿಗಳು, ಸೆಲೆಬ್ರಿಟಿಗಳು ಧನ್ಯವಾದ ತಿಳಿಸುತ್ತಿದ್ದಾರೆ. ಅದೇ ರೀತಿ ಭೂತಾನ್‍ಗೂ ಕೊರೊನಾ ಲಸಿಕೆ ಕಳಹಿಸಲಾಗಿದ್ದು, ಅಲ್ಲಿನ ಪುಟ್ಟ ಕಲಾವಿದೆ ವೀಡಿಯೋ ಸಂದೇಶದ ಮೂಲಕ ಧನ್ಯವಾದ ಹೇಳಿದ್ದಾಳೆ.

    ಭೂತಾನಲ್ಲಿನ ಭಾರತದ ರಾಯಭಾರಿ ರುಚಿರಾ ಕಾಂಬೋಜ್ ಈ ವೀಡಿಯೋವನ್ನು ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಸ್ಥಳೀಯ ಬಾಲ ಪ್ರತಿಭೆ ಖೆನ್ರಾಬ್ ಯೀಡ್ಝಿನ್ ಸೈಲ್ಡೆನ್ ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ. ಭಾರತ ಅಗತ್ಯ ವ್ಯಾಕ್ಸಿನ್ ಡೋಸಸ್ ನೀಡಿದ್ದಕ್ಕಾಗಿ ಭಾರತಕ್ಕೆ ಧನ್ಯವಾದಗಳು ಎಂದು ಭೂತಾನ್‍ನ ಪುಟ್ಟ ಕಲಾವಿದೆ ತುಂಬಾ ಕ್ಯೂಟ್ ಆಗಿ ವಿಶ್ ಮಾಡಿದ್ದಾಳೆ.

    ಆರಂಭದಲ್ಲಿ ತನ್ನನ್ನು ಪರಿಚಯ ಮಾಡಿಕೊಂಡು ಮಾತು ಆರಂಭಿಸುವ ಬಾಲಕಿ, ದೇಶದಲ್ಲಿ ವ್ಯಾಕ್ಸಿನ್ ಡ್ರೈವ್ ಆರಂಭವಾಗಲು ಅಗತ್ಯವಿರುವ ಲಸಿಕೆ ಡೋಸ್ ಕಳುಹಿಸುವ ಮೂಲಕ ತುಂಬಾ ದಯೆ ತೋರಿಸಿದ್ದಕ್ಕೆ ಭಾರತಕ್ಕೆ ಧನ್ಯವಾದ ಎಂದು ಹೇಳಿದ್ದಾಳೆ. ವೀಡಿಯೋದ ಕೊನೆಯಲ್ಲಿ ತನ್ನ ಮುಗ್ದತೆ ಮೂಲಕವೇ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿ ಶುಕ್ರಿಯಾ ಎಂದು ಹೇಳಿ ನೆಟ್ಟಿಗರ ಮನಸು ಗೆದ್ದಿದ್ದಾಳೆ.

    ಭೂತಾನ್‍ನಲ್ಲಿ ಭಾರತದ ರಾಯಭಾರಿಯಾಗಿರುವ ರುಚಿರಾ ಅವರು ಈ ವೀಡಿಯೋವನ್ನು ಟ್ವೀಟ್ ಮಾಡಿ ಸಾಲುಗಳನ್ನು ಬರೆದಿದ್ದು, ಖೆನ್ರಾಬ್ ನಿಮ್ಮ ಧನ್ಯವಾದ ನಮ್ಮ ಹೃದಯ ಸ್ಪರ್ಶಿಸಿದೆ ಎಂದು ಬರೆದಿದ್ದಾರೆ. ಅಲ್ಲದೆ ವ್ಯಾಕ್ಸಿನ್ ಮೈತ್ರಿ, ಇಂಡಿಯಾ ಭೂತಾನ್ ಫ್ರಂಡ್‍ಶಿಪ್ ಹ್ಯಾಶ್ ಟ್ಯಾಗ್‍ಗಳನ್ನು ಬಳಸಿದ್ದಾರೆ.

    ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟ್ವಿಟ್ಟರ್ ನಲ್ಲಿ 13,400 ವ್ಯೂವ್ಸ್ ಪಡೆದಿದೆ. 290 ಜನ ರೀಟ್ವೀಟ್ ಮಾಡಿದ್ದಾರೆ. ಅಲ್ಲದೆ 1,354 ಲೈಕ್ಸ್ ಪಡೆದಿದೆ. ಆಕೆಯ ಕ್ಯೂಟ್‍ನೆಸ್ ಬಗ್ಗೆ ಜಾಲತಾಣದಲ್ಲಿ ಸಖತ್ ಚರ್ಚೆ ನಡೆಯುತ್ತಿದೆ. ಸಚ್ ಎ ಲವ್ಲಿ ಥ್ಯಾಂಕ್ಯೂ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದು, ಮತ್ತೊಬ್ಬರು ತಮಾಷೆಯಾಗಿ ನಾವು ಅವಳನ್ನು ಉಳಿಸಿಕೊಳ್ಳಬಹುದೇ ಎಂದು ಕೇಳಿದ್ದಾರೆ.

    ಮಾಚ್ 22ರಂದು 400 ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಭೂತಾನ್‍ಗೆ ಕಳುಹಿಸಲಾಗಿದ್ದು, ಲಸಿಕೆಯನ್ನು ಕಾಂಬೋಜ್ ಸ್ವೀಕರಿಸಿದ್ದು, ಪರೋ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಸಚಿವ ತಾಂಡಿ ದೋರ್ಜಿ ಅವರಿಗೆ ಹಸ್ತಾಂತರಿಸಲಾಯಿತು. ವ್ಯಾಕ್ಸಿನ್ ಡ್ರೈವ್ ಆರಂಭಿಸಲು ಸಾಧ್ಯವಾಗಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಮಾರ್ಚ್ 27ರಿಂದ ವ್ಯಾಕ್ಸಿನೇಶನ್ ಡ್ರೈವ್ ಆರಂಭವಾಗಿದೆ ಎಂದು ಸಹ ತಿಳಿಸಿದ್ದಾರೆ.

  • ರಾಜ್ಯಗಳು ಸ್ಥಳೀಯವಾಗಿ ನಿರ್ಬಂಧ ಹೇರಬಹುದು – ಕೇಂದ್ರದಿಂದ ಹೊಸ ಕೋವಿಡ್ ಮಾರ್ಗಸೂಚಿ

    ರಾಜ್ಯಗಳು ಸ್ಥಳೀಯವಾಗಿ ನಿರ್ಬಂಧ ಹೇರಬಹುದು – ಕೇಂದ್ರದಿಂದ ಹೊಸ ಕೋವಿಡ್ ಮಾರ್ಗಸೂಚಿ

    ನವದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಜಿಲ್ಲಾ, ಸಣ್ಣ ನಗರಗಳ ಮಟ್ಟದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮ ಹಾಗೂ ನಿರ್ಬಂಧಗಳ ಬಗ್ಗೆ ತಿಳಿಸಿದೆ.

    ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಕೊರೊನಾ ಮಾರ್ಗಸೂಚಿಗಳು, ಕಂಟೈನ್ಮೆಂಟ್ ಝೋನ್, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಸಿದೆ. ಟೆಸ್ಟ್, ಟ್ರ್ಯಾಕ್, ಟ್ರೀಟ್ ಪದ್ಧತಿಯನ್ನು ತಪ್ಪದೇ ಪಾಲಿಸುವಂತೆ ತಿಳಿಸಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕಡ್ಡಾಯವಾಗಿ ಎಚ್ಚರಿಕೆ ವಹಿಸಬೇಕು ಎಂದು ಒತ್ತಿ ಹೇಳಿದೆ.

    ಅಂತರಾಜ್ಯ ಹಾಗೂ ಅಂತರ್ ಜಿಲ್ಲೆಯ ಪ್ರಯಾಣಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಅಲ್ಲದೆ ಪಕ್ಕದ ದೇಶಗಳೊಂದಿಗೂ ವ್ಯಾಪಾರ, ವ್ಯವಹಾರಕ್ಕೆ ಅನುಮತಿ ನೀಡಲಾಗಿದೆ. ಇದಕ್ಕಾಗಿ ಯಾವುದೇ ಪ್ರತ್ಯೇಕ ಒಪ್ಪಿಗೆ, ಅನುಮತಿ, ಇ-ಪರ್ಮಿಟ್ ಬೇಕಿಲ್ಲ. ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕಳೆದ 5 ತಿಂಗಳಿಂದ ಕೊರೊನಾ ನಿಯಂತ್ರಣದಲ್ಲಿತ್ತು, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿತ್ತು ಎಂದು ಸಚಿವಾಲಯ ತಿಳಿಸಿದೆ.

    ಇದೀಗ ಕೊರೊನಾ ಪ್ರಕರಣಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದನ್ನು ದೇಶದ ಕೆಲ ಭಾಗಗಳಲ್ಲಿ ನೋಡಿದ್ದೇವೆ. ಹೀಗಾಗಿ ಟೆಸ್ಟ್, ಟ್ರ್ಯಾಕ್, ಟ್ರೀಟ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನೋಡಬೇಕಿದೆ. ಅಲ್ಲದೆ ಲಸಿಕೆ ಪ್ರಕ್ರಿಯೆಯನ್ನು ಸಹ ಚುರುಕುಗೊಳಿಸಬೇಕಿದ್ದು, ಅರ್ಹ ಎಲ್ಲರಿಗೂ ಲಸಿಕೆ ನೀಡುವ ಕಾರ್ಯವಾಗಬೇಕಿದೆ ಎಂದು ಆರೋಗ್ಯ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

    ಹೊಸ ಮಾರ್ಗಸೂಚಿ ಪ್ರಕಾರ, ಆರ್‍ಟಿ-ಪಿಸಿಆರ್ ಟೆಸ್ಟ್ ಪ್ರಮಾಣ ಕಡಿಮೆ ಇರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಬೇಕು. ನಿಗದಿಪಡಿಸಿರುವುದರಲ್ಲಿ ಶೇ.70 ಅಥವಾ ಅದಕ್ಕೂ ಹೆಚ್ಚು ತಲುಪಬೇಕು. ಕೊರೊನಾ ಪ್ರಕರಣ ಪತ್ತೆಯಾಗುತ್ತಿದ್ದಂತೆ ಶೀಘ್ರ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಬೇಕು. ಅಲ್ಲದೆ ಕೆಲಸದ ಸ್ಥಳಗಳಲ್ಲಿ ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು ಎಂದು ಎಚ್ಚರಿಸಲಾಗಿದೆ.

    ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಗಳು ಎಚ್ಚರ ವಹಿಸಬೇಕು. ನಿಯಮ ಪಾಲಿಸದಿದ್ದಲ್ಲಿ ಮುಲಾಜಿಲ್ಲದೆ ದಂಡ ವಿಧಿಸಬೇಕು. ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ, ಪರಿಸ್ಥಿತಿ ಹದಗೆಟ್ಟಿದೆ ಎಂದಾಗ ರಾಜ್ಯ ಸರ್ಕಾರ ಹಾಗೂ ಕೇಂದ್ರಡಳಿತ ಪ್ರದೇಶಗಳು ಸ್ಥಳೀಯವಾಗಿ ನಿರ್ಬಂಧ ಹೇರಬಹುದಾಗಿದೆ ಎಂದು ಗೃಹ ಸಚಿವಾಲಯ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

    ಇಂತಹ ಕಠಿಣ ಪರಿಸ್ಥಿತಿಯಲ್ಲಿ, ಕೊರೊನಾ ಲಿಂಕ್ ಕತ್ತರಿಸಲು ಲಸಿಕೆ ಅಗತ್ಯವಾಗಿದೆ. ಅರ್ಹ ಎಲ್ಲರಿಗೂ ಲಸಿಕೆ ಸಿಗುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ಆದಷ್ಟು ಬೇಕ ಲಸಿಕೆ ನೀಡಬೇಕು ಎಂದು ತಿಳಿಸಿದೆ.

  • ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಇಲ್ಲ: ಸಚಿವ ಸುಧಾಕರ್

    ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಇಲ್ಲ: ಸಚಿವ ಸುಧಾಕರ್

    ಚಿಕ್ಕಬಳ್ಳಾಪುರ: ಮುಂದಿನ ವಾರ ರಾಜ್ಯಕ್ಕೆ 12.5 ಲಕ್ಷ ಡೋಸ್ ಲಸಿಕೆ ಸಿಗಲಿದೆ. ಅಲ್ಲದೆ ನಾಳೆ ತುರ್ತು 4 ಲಕ್ಷ ಡೋಸ್ ಲಸಿಕೆ ಬರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಲಸಿಕೆಯ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

    ಈ ಕುರಿತು ಚಿಕ್ಕಬಳ್ಳಾಪುರ ತಾಲೂಕು ಆವಲನಾಗೇನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಆಗುವುದಿಲ್ಲ. ನಾನೇ ಸ್ವತಃ ಕೇಂದ್ರ ಆರೋಗ್ಯ ಸಚಿವರ ಬಳಿ ಮಾತನಾಡಿದ್ದೇನೆ. ರಾಜ್ಯಕ್ಕೆ 12.5 ಲಕ್ಷ ಡೋಸ್ ಲಸಿಕೆ ಮುಂದಿನ ವಾರ ಸಿಗಲಿದೆ. ಆದರೆ ತುರ್ತು ನಾಳೆ ವಿಮಾನದ ಮೂಲಕ 4 ಲಕ್ಷ ಡೋಸ್ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

    ಕೋವಿಡ್ ಎರಡನೇ ಅಲೆ ಇದೆ. ಅನೇಕ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಾಗರಿಕರು ಕೂಡ ಕೋವಿಡ್ ಸುರಕ್ಷತಾ ಕ್ರಮ ಅನುಸರಿಸಬೇಕು ಎಂಬುದನ್ನು ಅರಿಯಬೇಕು. ಅನಗತ್ಯವಾಗಿ ಗುಂಪುಗೂಡುವುದು, ಮಾಸ್ಕ್ ಧರಿಸದಿರುವುದು ಮೊದಲಾದ ಕ್ರಮಗಳಿಗೆ ಈಗಾಗಲೇ ಕಡಿವಾಣ ಹಾಕಲಾಗಿದೆ. ಸಭೆ, ಸಮಾರಂಭಗಳನ್ನು 2 ತಿಂಗಳ ಮಟ್ಟಿಗೆ ಮುಂದೂಡಬೇಕು ಎಂದು ಕೋರಿದರು.

    ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಬಹುದು. ಎಲ್ಲರೂ ಕೂಡಲೇ ಕೋವಿಡ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಬೇಕು ಎಂದು ಸಚಿವರು ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.

    ಕಾನೂನು ಕ್ರಮ ಜಾರಿ
    ಅಮಾಯಕ ದಲಿತ ಯುವಕ ಸ್ವಂತ ದುಡಿಮೆಯಿಂದ ಆತ್ಮಗೌರವ, ಸ್ವಾಭಿಮಾನದ ಬದುಕನ್ನು ಬದುಕುತ್ತಿದ್ದ. ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿದ್ದ ಅವರನ್ನು ಹಿಂದಿನ ಯಾವುದೋ ವೈಷಮ್ಯದಿಂದ ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಅಂತಹ ಪಾಪಿಗಳ ವಿರುದ್ಧ ಕಾನೂನು ಕ್ರಮ ಜಾರಿಯಾಗಲಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಇದರ ಹಿಂದೆ ಇರುವವವರ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಹೇಳಲಾಗಿದೆ. ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಕೂಡ ಬಿಡುವ ಪ್ರಶ್ನೆಯೇ ಇಲ್ಲ. 56 ವರ್ಷಗಳ ನಂತರ ನನ್ನ ಕ್ಷೇತ್ರದಲ್ಲಿ ಅಪರಾಧ ನಡೆದಿದೆ. ತಪ್ಪಿತಸ್ಥರಿಗೆ ಉಗ್ರವಾದ ಶಿಕ್ಷೆಯಾಗಲಿದೆ. ಈ ಘಟನೆಯಿಂದ ಬಹಳ ದುಃಖವಾಗಿದೆ ಎಂದರು.

  • ಗಮನಿಸಿ, ಒಂದಲ್ಲ, ಎರಡು ತಿಂಗಳ ನಂತ್ರ ಸಿಗಲಿದೆ ಕೋವಿಶೀಲ್ಡ್ ಎರಡನೇ ಡೋಸ್

    ಗಮನಿಸಿ, ಒಂದಲ್ಲ, ಎರಡು ತಿಂಗಳ ನಂತ್ರ ಸಿಗಲಿದೆ ಕೋವಿಶೀಲ್ಡ್ ಎರಡನೇ ಡೋಸ್

    – ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಆದೇಶ

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಇಡೀ ದೇಶ ಒಂದಾಗಿ ಹೋರಾಡುತ್ತಿದೆ. ಕೊರೊನಾ ವ್ಯಾಕ್ಸಿನ್ ನೀಡುವ ಕಾರ್ಯಕ್ರಮ ಸಹ ಭರದಿಂದ ಸಾಗುತ್ತಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ ಗಳ ನಡುವಿನ ಅಂತರವನ್ನ 28 ದಿನದಿಂದ ಎರಡು ತಿಂಗಳಿಗೆ ಹೆಚ್ಚಿಸಲಾಗಿದೆ.

    ಕೋವಿಶೀಲ್ಡ್ ಮೊದಲ ಮತ್ತು ಎರಡನೇ ಡೋಸ್ ನಡುವಿನ ಅಂತರವನ್ನ 6 ರಿಂದ 8 ವಾರಗಳಿಗೆ ಹೆಚ್ಚಿಸಲಾಗಿದೆ. ಸದ್ಯ 28 ದಿನಕ್ಕೆ ಎರಡನೇ ಡೋಸ್ ನೀಡಲಾಗುತ್ತಿದೆ. ತಜ್ಞರ ಸಲಹೆ ಮೇರೆಗೆ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ನೀಡುವ ನಡುವಿನ ಅವಧಿಯನ್ನ ಹೆಚ್ಚಿಸಲಾಗಿದೆ ಎಂದು ಕೇಂದ್ರ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ.

    ಎನ್‍ಟಿಎಜಿಐ ಮತ್ತು ವ್ಯಾಕ್ಸಿನೇಷನ್ ಎಕ್ಸಪರ್ಟ್ ಗ್ರೂಪ್ ರಿಸರ್ಚ್ ಪ್ರಕಾರ ಡೋಸ್ ಗಳ ನಡುವಿನ ಅಂತರ ಹೆಚ್ಚಿಸುವದರಿಂದ ಹೆಚ್ಚು ಲಾಭದಾಯಕವಾಗಿರಲಿದೆ ಎಂದು ತಿಳಿದು ಬಂದಿದೆ. ಆದ್ದರಿಂದ ತಜ್ಞರ ತಂಡ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು ಎಂದು ವರದಿಯಾಗಿದೆ.

    ಮಹಾರಾಷ್ಟ್ರದ ಪುಣೆಯ ಸೇರಂ ಇನ್ಸಿಟ್ಯೂಟ್ ನಲ್ಲಿ ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಆಗುತ್ತಿದೆ. ಜನವರಿ 16ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿತ್ತು. ಎರಡನೇ ಡೋಸ್ ಮಾರ್ಚ್ 1ರಿಂದ ಆರಂಭಿಸಲಾಗಿತ್ತು.