– ಶೀಘ್ರವೇ ಸೀರಂ ಜೊತೆ ಖರೀದಿ ಸಂಬಂಧ ಸರ್ಕಾರ ಒಪ್ಪಂದ – ಆರಂಭದಲ್ಲಿ ಸಿಗಲಿದೆ 6 ಕೋಟಿ ಡೋಸ್
ನವದೆಹಲಿ: ಇಂಗ್ಲೆಂಡಿನ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್ ಲಸಿಕೆ ಖರೀದಿ ವಿಚಾರವಾಗಿ ಶೀಘ್ರವೇ ಪುಣೆಯ ಸೀರಂ ಮತ್ತು ಭಾರತ ಸರ್ಕಾರದ ನಡುವೆ ಒಪ್ಪಂದ ನಡೆಯುವ ಸಾಧ್ಯತೆಯಿದೆ.
ವಿಶ್ವದ ಅತಿದೊಡ್ಡ ಲಸಿಕೆ ತಯಾರಿಕಾ ಸಂಸ್ಥೆ ಸೀರಂ 1 ಡೋಸ್ಗೆ 250 ರೂ. ದರ ನಿಗದಿ ಪಡಿಸಿದ್ದು ಒಪ್ಪಂದದ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.
ಈ ಕುರಿತು ಮಾತನಾಡಿದ ಸಂಸ್ಥೆ ಸಿಇಒ ಅದರ್ ಪೂನಾವಾಲಾ, ಖಾಸಗಿಯಾಗಿ ಖರೀದಿಸಿದರೆ ಈ ಲಸಿಕೆಗೆ ದರ ಪ್ರತಿ ಡೋಸ್ಗೆ 1 ಸಾವಿರ ರೂ. ಆಗಲಿದೆ. ಆದರೆ ಸರ್ಕಾರ ಭಾರೀ ಪ್ರಮಾಣದಲ್ಲಿ ಖರೀದಿಸಿದರೆ ಕಡಿಮೆ ಹಣಕ್ಕೆ ಸಿಗಲಿದೆ ಎಂದು ಹೇಳಿದ್ದಾರೆ.
ಒಪ್ಪಂದದ ಬಳಿಕ ಆರಂಭದಲ್ಲಿ 6 ಕೋಟಿ ಡೋಸ್, ಜನವರಿ- ಫೆಬ್ರವರಿಯಲ್ಲಿ 10 ಕೋಟಿ ಲಸಿಕೆಯನ್ನು ಕಂಪನಿ ಸರ್ಕಾರಕ್ಕೆ ನೀಡಲಿದೆ.
ಸೀರಂ ಕಂಪನಿ ಬಿಲ್ ಗೇಟ್ಸ್ ಪ್ರತಿಷ್ಠಾನದ ಜೊತೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಜಗತ್ತಿನ ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ 250 ರೂ. ನಂತೆ ಲಸಿಕೆಯನ್ನು ನೀಡಬೇಕಿದೆ.
ಮಾರ್ಚ್ ವೇಳೆಗೆ ಕೋವಿಶೀಲ್ಡ್ ಲಸಿಕೆ ಭಾರತದ ಮೆಡಿಕಲ್ ಸ್ಟೋರ್ನಲ್ಲೂ ಸಿಗುವ ಸಾಧ್ಯತೆಯಿದೆ. ಆದರೆ ಇಲ್ಲಿ 1 ಡೋಸ್ ಬೆಲೆ 600 ರೂ. ಇರಬಹುದು ಎಂದು ಕಂಪನಿ ಸುಳಿವು ನೀಡಿದೆ.
ಕೋವಿಶೀಲ್ಡ್ ಲಸಿಕೆ ಶೇ.70ರಷ್ಟು ಪರಿಣಾಮಕಾರಿಯಾಗಿದೆ ಎಂದು ಕಂಪನಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಬಳಕೆಗೆ ಅನುಮತಿ ನೀಡುವಂತೆ ಸೀರಂ ಸಂಸ್ಥೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ(ಡಿಸಿಜಿಐ) ಅರ್ಜಿ ಸಲ್ಲಿಸಿದೆ.
ಭಾರತದಲ್ಲಿಈ ರೀತಿ ಮನವಿ ಮಾಡಿಕೊಂಡ ಮೊದಲ ದೇಶಿಯ ಸಂಸ್ಥೆ ಸೀರಂ ಆಗಿದೆ. ಆಕ್ಸ್ಫರ್ಡ್ ಮತ್ತು ಆಸ್ಟ್ರಾಜೆನಿಕಾ ಸಂಸ್ಥೆ ಜಂಟಿಯಾಗಿ ಸಂಶೋಧಿಸಿದ ಕೋವಿಶೀಲ್ಡ್ ಲಸಿಕೆಯನ್ನು ಸಿರಂ ಸಂಸ್ಥೆ ಭಾರತದಲ್ಲಿ ಉತ್ಪಾದನೆ ಮಾಡುತ್ತಿದೆ.
ಸದ್ಯ ಕೋವಿಶೀಲ್ಡ್ ಲಸಿಕೆಯ ಮೂರನೇ ಹಂತದ ಪ್ರಯೋಗ ಭಾರತದಲ್ಲಿ ನಡೆಯುತ್ತಿದೆ. ಇದು ಪೂರ್ಣಗೊಳ್ಳುವ ಮೊದಲೇ ಲಸಿಕೆಗೆ ಬಳಕೆಗೆ ಅನುಮತಿ ಕೋರಲಾಗಿದೆ. ಕೋವಿಶೀಲ್ಡ್ನಿಂದ ಯಾವುದೇ ಸೈಡ್ ಎಫೆಕ್ಟ್ ಇಲ್ಲ ಎಂದು ಸೀರಂ ಸಂಸ್ಥೆ ಹೇಳಿಕೊಂಡಿದೆ.
ಲಂಡನ್: ಇಂಗ್ಲೆಂಡ್ನಲ್ಲಿ ಫೈಝರ್/ಬಯೋಎನ್ಟೆಕ್ ಕೊರೊನಾ ಲಸಿಕೆಯನ್ನು ಜನರಿಗೆ ನೀಡಲಾಗುತ್ತಿದ್ದು, ಮೊದಲ ಬ್ಯಾಚ್ನಲ್ಲಿ ಭಾರತೀಯ ಮೂಲದ ದಂಪತಿಗೆ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಟೈನ್ ಮತ್ತು ವೇರ್ ನಿವಾಸಿಯಾಗಿರುವ 87 ವರ್ಷದ ಡಾ. ಹರಿ ಶುಕ್ಲಾ ಮತ್ತು ಅವರ ಪತ್ನಿ ರಂಜನ ಅವರು ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ. ನ್ಯೂಕ್ಯಾಸಲ್ ಆಸ್ಪತ್ರೆಯಲ್ಲಿ ಮಂಗಳವಾರ ದಂಪತಿಗೆ ಇಂಜೆಕ್ಷನ್ ಚುಚ್ಚುವ ಮೂಲಕ ಕೋವಿಡ್ ಲಸಿಕೆಯನ್ನು ನೀಡಲಾಯಿತು.
Hari Shukla, and his wife Ranjan have become the first two patients at Newcastle Hospitals – and two of the first people in the world- to receive the #COVID19 vaccine @NHSEnglandpic.twitter.com/1kgAyONnvo
ಹರಿ ಶುಕ್ಲಾ, ಮತ್ತು ಅವರ ಪತ್ನಿ ರಂಜನ ಅವರು ನಮ್ಮ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯುತ್ತಿರುವ ವಿಶ್ವದ ಮೊದಲ ವ್ಯಕ್ತಿಗಳು ಇವರು ಎಂದು ನ್ಯೂಕ್ಯಾಸಲ್ ಆಸ್ಪತ್ರೆ ಟ್ವೀಟ್ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಹರಿ ಶುಕ್ಲಾ, ಫೋನ್ ಕರೆಯ ಮೂಲಕ ಈ ವಿಚಾರ ತಿಳಿದಾಗ ನನಗೆ ಬಹಳ ಸಂತಸವಾಯಿತು. ಕೋವಿಡ್ ಲಸಿಕೆಯ ಎರಡು ಡೋಸ್ ಪೈಕಿ ಮೊದಲ ಡೋಸ್ ಸ್ವೀಕರಿಸಲಿದ್ದೇನೆ. ಇದು ನನ್ನ ಕರ್ತವ್ಯ’ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಈ ಸಾಂಕ್ರಾಮಿಕ ಸೋಂಕು ಕೊನೆಗೊಳ್ಳಲಿದೆ ಎಂಬ ವಿಶ್ವಾಸದಲ್ಲಿದ್ದೇನೆ. ಲಸಿಕೆ ತೆಗೆದುಕೊಳ್ಳಲು ನನಗೆ ಯಾವುದೇ ಭಯವಿಲ್ಲ. ಲಸಿಕೆಯನ್ನು ಪಡೆಯುವ ಮೂಲಕ ನಾನು ಸೋಂಕನ್ನು ತಡೆಯುವಲ್ಲಿ ಸಣ್ಣ ಕೆಲಸವನ್ನು ಮಾಡುತ್ತಿರುವುದಕ್ಕೆ ಸಂತಸವಿದೆ ಎಂದು ಹೇಳಿದರು.
ಇನ್ನೊಂದೆಡೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು, ಇದನ್ನು ದೊಡ್ಡ ಹೆಜ್ಜೆ ಎಂದು ಬಣ್ಣಿಸಿದ್ದಾರೆ. ಅಲ್ಲದೆ ಈ ದಿನವನ್ನು ‘ವಿ ಡೇ’ ಅಥವಾ ಬ್ರಿಟನ್ನ ‘ವ್ಯಾಕ್ಸಿನ್ ಡೇ’ ಎಂದು ಕರೆದಿದ್ದಾರೆ.
ಆರಂಭದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ, 80 ವರ್ಷ ಮೇಲ್ಪಟ್ಟವರಿಗೆ, ಆರೈಕಾ ಕೇಂದ್ರಗಳಲ್ಲಿ ಇರುವ ಮಂದಿಗೆ ಲಸಿಕೆ ನೀಡಲಾಗುತ್ತದೆ. 2 ವಾರಗಳಲ್ಲಿ ಇವರಿಗೆಲ್ಲ ನೀಡಿದ ಮೇಲೆ ಈಗಾಗಲೇ ಗುರುತಿಸಿರುವ ಪ್ರಾಶಸ್ತ್ಯದ ಗುಂಪುಗಳಿಗೆ ಹಂಚಿಕೆ ಮಾಡಲಾಗುತ್ತದೆ.
75 ಮತ್ತು ಮೇಲ್ಪಟ್ಟು, 70 ಮತ್ತು ಮೇಲ್ಪಟ್ಟು, 65 ಮೇಲ್ಪಟ್ಟು, 16 ರಿಂದ 64 ವರ್ಷವದರಿಗೆ ಅವರ ಆರೋಗ್ಯ ಸ್ಥಿತಿಯನ್ನು ನೋಡಿಕೊಂಡು ನೀಡಲಾಗುತ್ತದೆ. ಆರಂಭದಲ್ಲಿ 8 ಲಕ್ಷ ಲಸಿಕೆ ಬರಲಿದ್ದು, ಇದು 4 ಲಕ್ಷ ಮಂದಿಗೆ ಸಾಕಾಗುತ್ತದೆ.
ತಾನು ತಯಾರಿಸಿದ ಕೊರೊನಾ ಲಸಿಕೆ ಶೇ. 95ರಷ್ಟು ಪರಿಣಾಮಕಾರಿಯಾಗಿದೆ ಎಂದು ನ.18 ರಂದು ಫೈಝರ್ ಕಂಪನಿ ಅಧಿಕೃತವಾಗಿ ತಿಳಿಸಿತ್ತು. ಈ ಹೇಳಿಕೆಯ ಬೆನ್ನಲ್ಲೇ ಇಂಗ್ಲೆಂಡ್ ಸರ್ಕಾರ ಇಂದಿನಿಂದಲೇ ಲಸಿಕೆ ವಿತರಿಸಲು ಮುಂದಾಗಿದೆ.
ಅಹಮದಾಬಾದ್: ಕೊರೊನಾ ಲಸಿಕೆ ಅಭಿವೃದ್ಧಿ ಪರಿಶೀಲನೆಗೆ ಇಂದು ಪ್ರಧಾನಿ ಮೋದಿಯವರು ಪ್ರವಾಸಗೈಗೊಂಡಿದ್ದು, ಸದ್ಯ ಗುಜರಾತಿನ ಅಹಮದಾಬಾದ್ಗೆ ಬಂದಿದ್ದಾರೆ.
ಕೋವಿಡ್ ಲಸಿಕೆಯ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆಯಲು ಮೋದಿ ಇಂದು ಅಹಮದಾಬಾದ್, ಪುಣೆ ಮತ್ತು ಹೈದರಾಬಾದಿಗೆ ಪ್ರವಾಸಗೈಗೊಂಡಿದ್ದಾರೆ. ಈ ಪ್ರವಾಸದ ಅಂಗವಾಗಿ ಈಗ ಗುಜರಾತಿನ ಅಹಮದಾಬಾದ್ಗೆ ಬಂದಿರುವ ಮೋದಿಯವರು ಝೈಡಸ್ ಬಯೋಟೆಕ್ ಪಾರ್ಕ್ ಗೆ ಭೇಟಿ ನೀಡಲಿದ್ದಾರೆ.
Prime Minister Narendra Modi arrives at Gujarat's Ahmedabad, to visit the Zydus Biotech Park to review the #COVID19 vaccine development
Later today, the PM will visit Bharat Biotech in Hyderabad and Serum Institute of India in Pune pic.twitter.com/EtDNh5vKMY
ಝೈಡಸ್ ಬಯೋಟೆಕ್ ಪಾರ್ಕ್ ಭೇಟಿಯ ನಂತರ ಇಂದು ಪ್ರಧಾನಿ ಹೈದರಾಬಾದ್ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಭೇಟಿ ನೀಡಲಿದ್ದಾರೆ. ಇಂದು ಬೆಳಗ್ಗೆಯಿಂದ ಸಂಜೆಯವರಿಗೂ ಲಸಿಕೆ ಪ್ರವಾಸದಲ್ಲಿ ಭಾಗಿಯಾಗಲಿರುವ ಮೋದಿ, ಇಂದು ಮಧ್ಯಾಹ್ನ ಹೈದರಾಬಾದ್ನ ಭಾರತ್ ಬಯೋಟೆಕ್ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಸಂಜೆ ವೇಳೆಗೆ ಪುಣೆಯ ಸೆರಮ್ ಸಂಸ್ಥೆಗೆ ತೆರಳಲಿದ್ದಾರೆ.
ಇಂದು ಮೋದಿ ಭೇಟಿ ನೀಡಲಿರುವ ಕಂಪನಿಗಳ ಕೊರೊನಾ ಲಸಿಕೆ ಸಂಶೋಧನೆ ಮತ್ತು ಯಾವ ಹಂತಕ್ಕೆ ಬಂದಿವೆ ಎಂಬ ಮಾಹಿತಿ ನೀಡುವುದಾದರೆ, ಅಹಮದಾಬಾದ್ ಝೈಡಸ್ ಬಯೋಟೆಕ್ ಸಂಸ್ಥೆಯು ಝೈಕೋವಿ-ಡಿ ಎಂಬ ಕೋವಿಡ್ ಲಸಿಕೆಯನ್ನು ತಯಾರು ಮಾಡುತ್ತಿದೆ. ಸದ್ಯ ಈ ಕಾರ್ಯ 2ನೇ ಹಂತದಲ್ಲಿ ಇದ್ದು, ಜೂನ್ ಬಳಿಕವೇ ಲಸಿಕೆ ಸಿಗುವ ನಿರೀಕ್ಷೆ ಇದೆ.
ಇದರ ಜೊತೆಗೆ ಹೈದರಾಬಾದ್ನ ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಕಂಪನಿ ಸೇರಿ ಜಂಟಿಯಾಗಿ ಉತ್ಪಾದನೆ ಮಾಡುತ್ತಿರುವ ಕೊವ್ಯಾಕ್ಸಿನ್ ಲಸಿಕೆ 3ನೇ ಹಂತದ ಪ್ರಯೋಗ ನಡೆಸುತ್ತಿದೆ. ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಕ್ಸ್ ಫರ್ಡ್ ವಿವಿ ಸಹಭಾಗಿತ್ವದಲ್ಲಿ ಆಸ್ಟ್ರಾಜೆನಿಕಾ ಎಂಬ ಕೊರೊನಾ ಲಸಿಕೆಯನ್ನು ತಯಾರು ಮಾಡುತ್ತಿದ್ದು, 3ನೇ ಹಂತದ ಪ್ರಯೋಗವನ್ನು ನಡೆಸುತ್ತಿದೆ.
ಮೈಸೂರು: ಇನ್ನು ನಾಲ್ಕು ವಾರಗಳಲ್ಲಿ ಕೊರೊನಾ ಲಸಿಕೆ ಬರಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನು ನಾಲ್ಕೈದು ವಾರಗಳಲ್ಲಿ ಕೊರೊನಾ ಲಸಿಕೆ ಬರಲಿದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಹಲವು ರಾಜ್ಯಗಳ ಸಿಎಂ ಸಭೆ ಕರೆದಿದ್ದರು. ಕೊರೊನಾ ಲಸಿಕೆ ವಿಚಾರವಾಗಿಯೇ ಚರ್ಚೆ ನಡೆಸಲಾಗಿದೆ. ಅಲ್ಲದೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಹ ಹೇಳಿದ್ದಾರೆ. ಇದೇ ವೇಳೆ ನಾಲ್ಕು ವಾರಗಳಲ್ಲಿ ಕೊರೊನಾ ಲಸಿಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದರು.
Participated in the Video Conference today chaired by PM Shri @narendramodi Ji on Covid19 management. Discussed the state’s plan for vaccine administration and assured Karnataka is fully equipped for a smooth roll-out of the vaccine as and when it’s ready.@AmitShah@PMOIndiapic.twitter.com/XpsRuQkyQD
ಲಸಿಕೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದರು. ನಾವು ಸಹ ಜಿಲ್ಲಾ ಮಟ್ಟದಲ್ಲಿ ಲಸಿಕೆ ಹಂಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದಕ್ಕೆ ಬೇಕಾದ ತಯಾರಿ ನಡೆದಿದೆ. ದೊಡ್ಡ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಲಸಿಕೆ ವಿತರಣೆಯ ತಯಾರಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಈ ಕುರಿತು ವಿವರಿಸಿದ್ದಾರೆ. ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಅವರು ಭಾಗವಹಿಸಿ ಲಸಿಕೆ ಬಗ್ಗೆ ಮಾಹಿತಿ ನೀಡಿದರು. ಯಾವ್ಯಾವ ದೇಶಗಳಲ್ಲಿ ಲಸಿಕೆ ತಯಾರಿಕೆ ಸ್ಥಿತಿ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಿಳಿಸಿದರು. ಇಡೀ ವಿಶ್ವದಲ್ಲಿ ಹಲವು ಕಡೆ ಲಸಿಕೆ ತಯಾರಾಗುತ್ತಿದೆ. ಈ ಪೈಕಿ ನಮ್ಮ ದೇಶದಲ್ಲಿ 50 ಲಸಿಕೆಗಳು ಕ್ಲಿನಿಕಲ್ ಸಂಶೋಧನೆಗಳ ಹಂತದಲ್ಲಿವೆ. 25 ಲಸಿಕೆಗಳು ಅಡ್ವಾನ್ಸ್ ಟ್ರಯಲ್ ನಲ್ಲಿವೆ. 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್ ಹಂತದಲ್ಲಿವೆ. ಭಾರತದಲ್ಲಿ ಒಟ್ಟು 24 ಸಂಸ್ಥೆಗಳಿಗೆ ಲಸಿಕೆ ತಯಾರಿಸುವ ಸಾಮರ್ಥ್ಯ ಇದೆ ಎಂಬ ಮಾಹಿತಿ ನೀಡಿದರು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
30 ಕೋಟಿ ಜನರಿಗೆ ಲಸಿಕೆ:
ಲಸಿಕೆ ಬರುವಾಗ ಸರಿಯಾದ ರೀತಿಯಲ್ಲಿ ವಿತರಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಅದ್ಯತೆ ಮೇರೆಗೆ ವಿತರಣೆ ಬಗ್ಗೆ ಸಭೆಯಲ್ಲಿ ಹೇಳಲಾಯಿತು. ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಂಚುವ ಉದ್ದೇಶ ಹೊಂದಲಾಗಿದೆ. ಈ ಪೈಕಿ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ, 2 ಕೋಟಿ ಕೊರೊನಾ ವಾರಿಯರ್ಸ್ಗೆ ಹಾಗೂ 26 ಕೋಟಿ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ವಿವರಿಸಿದ್ದಾರೆ.
ಬೂತ್ ಮಾದರಿಯಲ್ಲಿ ಹಂಚಿಕೆ:
ಲಸಿಕೆ ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿಗಳ ರಚನೆಗೆ ನಿರ್ಧರಿಸಲಾಗಿದ್ದು, ಸಿಎಂ ನೇತೃತ್ವದಲ್ಲಿ, ಡಿಸಿಗಳ ನೇತೃತ್ವದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆಗೆ ನಿರ್ಧಾರಿಸಲಾಗಿದೆ. ಲಸಿಕೆ ಹಂಚಿಕೆಗೆ ಬೂತ್ ಗಳನ್ನು ರಚನೆ ಮಾಡಲಾಗುತ್ತಿದ್ದು, ಚುನಾವಣಾ ಬೂತ್ ಗಳ ಮಾದರಿಯಲ್ಲಿ ವಿತರಣೆ ಕೇಂದ್ರಗಳನ್ನು ರಚಿಸಲಾಗುತ್ತಿದೆ. ಅಲ್ಲದೆ ಕೊರೊನಾ ಲಸಿಕೆ ಕೊಟ್ಟ ಬಳಿಕ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಸಹ ಸೂಚಿಸಲಾಗುತ್ತದೆ. ಲಸಿಕೆಯ ಡೋಸ್ ಕೊಟ್ಟ ವ್ಯಕ್ತಿಗಳ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ ಎಂದು ಮಾಹಿತಿ ನೀದ್ದಾರೆ.
– ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿ ರಚನೆ
– ಕೊರೊನಾ ವಾರಿಯರ್ಸ್ಗೆ ಮೊದಲ ಆದ್ಯತೆ
– ಬಳಿಕ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ
ಬೆಂಗಳೂರು: ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಲಸಿಕೆ ತಲುಪಿಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಲಸಿಕೆ ವಿತರಣೆಯ ತಯಾರಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಈ ಕುರಿತು ವಿವರಿಸಿದ್ದಾರೆ.
Participated in the Video Conference today chaired by PM Shri @narendramodi Ji on Covid19 management. Discussed the state’s plan for vaccine administration and assured Karnataka is fully equipped for a smooth roll-out of the vaccine as and when it’s ready.@AmitShah@PMOIndiapic.twitter.com/XpsRuQkyQD
ಸಭೆಯ ಬಳಿಕ ಮಾತನಾಡಿದ ಅವರು, ಕೊರೊನಾ ಲಸಿಕೆ ಬಗ್ಗೆ ವಿವರವಾದ ಚರ್ಚೆ ನಡೆಸಲಾಗಿದೆ. ಹೆಚ್ಚು ಕೋವಿಡ್ ಪ್ರಕರಣಗಳು ಹಾಗೂ ಕಡಿಮೆ ಪ್ರಕರಣಗಳು ಇರುವ ರಾಜ್ಯಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಅವರು ಭಾಗವಹಿಸಿ ಲಸಿಕೆ ಬಗ್ಗೆ ಮಾಹಿತಿ ನೀಡಿದರು. ಯಾವ್ಯಾವ ದೇಶಗಳಲ್ಲಿ ಲಸಿಕೆ ತಯಾರಿಕೆ ಸ್ಥಿತಿ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಿಳಿಸಿದರು. ಇಡೀ ವಿಶ್ವದಲ್ಲಿ ಹಲವು ಕಡೆ ಲಸಿಕೆ ತಯಾರಾಗುತ್ತಿದೆ. ಈ ಪೈಕಿ ನಮ್ಮ ದೇಶದಲ್ಲಿ 50 ಲಸಿಕೆಗಳು ಕ್ಲಿನಿಕಲ್ ಸಂಶೋಧನೆಗಳ ಹಂತದಲ್ಲಿವೆ. 25 ಲಸಿಕೆಗಳು ಅಡ್ವಾನ್ಸ್ ಟ್ರಯಲ್ ನಲ್ಲಿವೆ. 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್ ಹಂತದಲ್ಲಿವೆ. ಭಾರತದಲ್ಲಿ ಒಟ್ಟು 24 ಸಂಸ್ಥೆಗಳಿಗೆ ಲಸಿಕೆ ತಯಾರಿಸುವ ಸಾಮರ್ಥ್ಯ ಇದೆ ಎಂಬ ಮಾಹಿತಿ ನೀಡಿದರು ಎಂದು ಬೊಮ್ಮಾಯಿ ತಿಳಿಸಿದರು.
30 ಕೋಟಿ ಜನರಿಗೆ ಲಸಿಕೆ:
ಲಸಿಕೆ ಬರುವಾಗ ಸರಿಯಾದ ರೀತಿಯಲ್ಲಿ ವಿತರಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಅದ್ಯತೆ ಮೇರೆಗೆ ವಿತರಣೆ ಬಗ್ಗೆ ಸಭೆಯಲ್ಲಿ ಹೇಳಲಾಯಿತು. ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಂಚುವ ಉದ್ದೇಶ ಹೊಂದಲಾಗಿದೆ. ಈ ಪೈಕಿ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ, 2 ಕೋಟಿ ಕೊರೊನಾ ವಾರಿಯರ್ಸ್ಗೆ ಹಾಗೂ 26 ಕೋಟಿ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ವಿವರಿಸಿದರು.
ಬೂತ್ ಮಾದರಿಯಲ್ಲಿ ಹಂಚಿಕೆ:
ಲಸಿಕೆ ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿಗಳ ರಚನೆಗೆ ನಿರ್ಧರಿಸಲಾಗಿದ್ದು, ಸಿಎಂ ನೇತೃತ್ವದಲ್ಲಿ, ಡಿಸಿಗಳ ನೇತೃತ್ವದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆಗೆ ನಿರ್ಧಾರಿಸಲಾಗಿದೆ. ಲಸಿಕೆ ಹಂಚಿಕೆಗೆ ಬೂತ್ ಗಳನ್ನು ರಚನೆ ಮಾಡಲಾಗುತ್ತಿದ್ದು, ಚುನಾವಣಾ ಬೂತ್ ಗಳ ಮಾದರಿಯಲ್ಲಿ ವಿತರಣೆ ಕೇಂದ್ರಗಳನ್ನು ರಚಿಸಲಾಗುತ್ತಿದೆ. ಅಲ್ಲದೆ ಕೊರೊನಾ ಲಸಿಕೆ ಕೊಟ್ಟ ಬಳಿಕ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಸಹ ಸೂಚಿಸಲಾಗುತ್ತದೆ. ಲಸಿಕೆಯ ಡೋಸ್ ಕೊಟ್ಟ ವ್ಯಕ್ತಿಗಳ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಲಸಿಕೆ ಬರುವ ದಿನಾಂಕದ ಬಗ್ಗೆ ಪ್ರಧಾನಿ ಮೋದಿಯವರು ಮಾಹಿತಿ ಕೊಡಲಿಲ್ಲ. ನಿಖರ ದಿನಾಂಕ ಹೇಳಲು ಸಾಧ್ಯವಿಲ್ಲ ಎಂದರು. ಲಸಿಕೆ ತಯಾರಿಕೆ ಹಂತಗಳ ಬಗ್ಗೆ ಮಾತ್ರ ಮಾಹಿತಿ ನೀಡಿದರು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಈ ವಿಡಿಯೋ ಸಂವಾದದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೈದರಾಬಾದ್ನಿಂದ ಭಾಗವಹಿಸಿ, ಕೇಂದ್ರ ಸರ್ಕಾರದ ಸೂಚನೆಯಂತೆ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳು, 10,000 ವ್ಯಾಕ್ಸಿನೇಟರ್ ಸಿಬ್ಬಂದಿ ಗುರುತಿಸಲಾಗಿದೆ. ರಾಜ್ಯದಲ್ಲಿ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದ್ದು, ಪಶು ಸಂಗೋಪನೆ ಇಲಾಖೆ, ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನೂ ಬಳಸಲಾಗುವುದು ಎಂದು ತಿಳಿಸಿದರು.
ಲಂಡನ್: ಕೊರೊನಾ ಲಸಿಕೆಗಾಗಿ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ಕಂಪನಿಗಳು ಜಂಟಿಯಾಗಿ ಸಂಶೋಧಿಸುತ್ತಿರುವ ಕೊರೊನಾ ಲಸಿಕೆ ಯಶಸ್ವಿಯಾಗಿದೆ.
ಈಗ ಸಕ್ಸಸ್ ಆಗಿರುವ ಆಸ್ಟ್ರಾಜೆನೆಕಾ ಲಸಿಕೆಯೂ ಯಾವುದೇ ಅಡ್ಡಪರಿಣಾಮವಿಲ್ಲದೇ ಕೆಲಸ ಮಾಡಲಿದೆ. ಜೊತೆಗೆ ಇದು ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ಹೇಳಿಕೆ ನೀಡಿದೆ. ಈ ಲಸಿಕೆ ಈಗಾಗಲೇ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಲಸಿಕೆ ಉತ್ಪಾದನೆಗೆ ಕಂಪನಿಯು ಅನುಮತಿ ಪಡೆಯುವ ನಿರೀಕ್ಷೆ ಇದೆ.
ಲಸಿಕೆ ಹೇಗಿದೆ?
ಆಸ್ಟ್ರಾಜೆನೆಕಾ ಮತ್ತು ಆಕ್ಸಫರ್ಡ್ ಕಂಪನಿಗಳು ಜಂಟಿಯಾಗಿ ಆವಿಷ್ಕಾರ ಮಾಡಿರುವ ಈ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ. 1 ಡೋಸ್ನಲ್ಲೇ ಆಸ್ಟ್ರಾಜೆನೆಕಾ ಲಸಿಕೆ ಶೇಕಡಾ 90ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. 1 ತಿಂಗಳ ಬಳಿಕ 2 ಫುಲ್ ಡೋಸ್ ಕೊಟ್ಟಾಗ ಶೇ.62ರಷ್ಟು ಪರಿಣಾಮಕಾರಿಯಾಗಿ ಈ ಲಸಿಕೆ ಕೆಲಸ ಮಾಡಲಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ತಿಳಿಸಿದೆ.
2 ಫುಲ್ ಡೋಸ್ಗಳ ಪರಿಣಾಮಗಳನ್ನು ಒಟ್ಟಿಗೆ ವಿಶ್ಲೇಷಿಸಿದರೆ ಆಸ್ಟ್ರಾಜೆನೆಕಾ ಲಸಿಕೆ ಶೇಕಡಾ 70ರಷ್ಟು ಪರಿಣಾಮಕಾರಿಯಾಗಿದ್ದು, ಕೊರೋನಾ ಸೋಂಕು ತಡೆಯುವಿಕೆಯಲ್ಲಿ ಪರಿಣಾಮ ಬೀರಲಿದೆ. ಈ ಲಸಿಕೆಯ ಪ್ರಯೋಗಕ್ಕೆ ಒಳಗಾದವರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ, ಗಂಭೀರ ಕಾಯಿಲೆಗಳು ಕಾಣಿಸಿಕೊಂಡಿಲ್ಲ. ಜೊತೆಗೆ 2-8 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶದಲ್ಲಿ ಲಸಿಕೆ ಸಂಗ್ರಹ ಮತ್ತು ಸಾಗಾಟ ಮಾಡಬಹುದು. ಲಸಿಕೆ ಉತ್ಪಾದನೆ ಆದ ಬಳಿಕ 6 ತಿಂಗಳಲ್ಲಿ ನೀಡಬಹುದು. 2021ರಲ್ಲಿ 300 ಕೋಟಿಯಷ್ಟು ಲಸಿಕೆ ಉತ್ಪಾದನೆ ಗುರಿ ಹೊಂದಿದ್ದೇವೆ ಎಂದು ಆಸ್ಟ್ರಾಜೆನೆಕಾ ಮಾಹಿತಿ ನೀಡಿದೆ.
ಫೆಬ್ರವರಿ ವೇಳೆಗೆ ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಎರಡು ಲಸಿಕೆಗಳು ಲಭ್ಯವಿರುತ್ತವೆ ಎಂದು ಹೇಳಲಾಗಿದ್ದು, ಫೆಬ್ರವರಿ ಆರಂಭದಲ್ಲೇ ಆಸ್ಟ್ರಾಜೆನೆಕಾ ಮತ್ತು ಭಾರತ್ ಬಯೋಟೆಕ್ನ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ.
ಎಲ್ಲರಿಗಿಂತ ಮೊದಲು ಹೇಗೆ?
ಆಕ್ಸ್ಫರ್ಡ್ ವಿಶ್ವವಿದ್ಯಾಲಯ ತೀವ್ರತೆರನಾದ ಶ್ವಾಸಕೋಶದ ಸಮಸ್ಯೆ ತರಬಲ್ಲ ಸಾರ್ಸ್ (ಸಿವಿಯರ್ ಅಕ್ಯೂಟ್ ರೆಸ್ಪಿರೇಟರಿ ಸಿಂಡೋಮ್) ಹಾಗೂ ಎಂಇಆರ್ಎಸ್ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡೋಮ್) ಸೋಂಕಿಗೆ ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿತ್ತು. ಈ ನಡುವೆ ಉಸಿರಾಟದ ಸಮಸ್ಯೆಗೆ ಕಾರಣವಾಗಬಲ್ಲ ಕೊರೊನಾ ವೈರಸ್ ಬಂದಿದೆ. ಹೀಗಾಗಿ ಕೂಡಲೇ ತಂಡ ಕೋವಿಡ್ಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿತ್ತು. ಬೇರೆಯವರು ಲಸಿಕೆ ಕಂಡು ಹಿಡಿಯುವ ಪ್ರಯೋಗ ನಡೆಸುವುದಕ್ಕೆ ಮುನ್ನವೇ ಇವರು ವೈರಸ್ ಕುರಿತು ಸಾಕಷ್ಟು ಸಂಶೋಧನೆ ನಡೆಸಿರುವ ಕಾರಣ ವಿಶ್ವದಲ್ಲಿ ಈ ಲಸಿಕೆ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಕೋವಿಡ್ 19ಗೆ ಇನ್ನು 3-4 ತಿಂಗಳಿನಲ್ಲಿ ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಕೇಂದ್ರ ಸಚಿವರೇ ಅಧಿಕೃತವಾಗಿ ತಿಳಿಸಿದ ಹಿನ್ನೆಲೆಯಲ್ಲಿ ಲಸಿಕೆಯನ್ನು ಹೇಗೆ ಹಂಚಿಕೆ ಮಾಡಬಹುದು? ಸಾಧಾರಣವಾಗಿ ಲಸಿಕೆಯನ್ನು ಹೇಗೆ ಕಂಪನಿಯಿಂದ ಆಸ್ಪತ್ರೆಗೆ ಸಾಗಿಸಲಾಗುತ್ತದೆ? ಯಾರಿಗೆ ಮೊದಲು ಲಸಿಕೆ ಸಿಗಬಹುದು ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ.
ಹೇಗೆ ವಿತರಣೆ ಮಾಡಲಾಗುತ್ತದೆ?
ಸೋಂಕಿಗೆ ಲಸಿಕೆಯನ್ನು ಕಂಡುಹಿಡಿಯುವುದು ಒಂದು ಸವಾಲು ಆದರೆ ಕಂಡುಹಿಡಿದ ಲಸಿಕೆಯನ್ನು ವಿತರಿಸುವುದು ಮತ್ತೊಂದು ಸವಾಲಿನ ಕೆಲಸ. ಕಂಪನಿ ಲಸಿಕೆಯನ್ನು ಕಂಡುಹಿಡಿದ ಬಳಿಕ ಅದನ್ನು ಕೋಲ್ಡ್ ಚೈನ್ ಮೂಲಕ ಅಂತಿಮವಾಗಿ ಜನರಿಗೆ ತಲುಪಿಸಲಾಗುತ್ತದೆ. ಕೋಲ್ಡ್ ಚೈನ್ ಪ್ರಕ್ರಿಯೆ ಬಹಳ ಕಷ್ಟದ ಕೆಲಸ. ಸಾಗಾಣಿಕೆಯ ವೇಳೆ ಸಣ್ಣ ಎಡವಟ್ಟು ಆದರೂ ಲಸಿಕೆ ಹಾಳಾಗಬಹುದು. ಲಸಿಕೆಗಳನ್ನು, ಔಷಧಿಗಳನ್ನು ಫ್ರಿಡ್ಜ್ ಅಥವಾ ಕೋಲ್ಡ್ ಸ್ಟೋರೇಜ್, ಐಸ್ ತುಂಬಿರುವ ಬಾಕ್ಸ್ಗಳಲ್ಲಿ ಇಡುತ್ತಾರೆ. ತಾಪಮಾನ ಜಾಸ್ತಿಯಾದರೆ ಲಸಿಕೆ ಹಾಳಾಗಿ ವಿರುದ್ಧ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.
ಏನಿದು ಕೋಲ್ಡ್ ಚೈನ್?
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಪ್ರಕಾರ, ‘ಕೋಲ್ಡ್ ಚೈನ್’ ಎನ್ನುವುದು ಉತ್ಪಾದನಾ ಹಂತದಿಂದ ಬಳಕೆಯ ಹಂತದವರೆಗೆ ಶಿಫಾರಸು ಮಾಡಿದ ತಾಪಮಾನದಲ್ಲಿ ಲಸಿಕೆಗಳನ್ನು ಸಂಗ್ರಹಿಸಿ ಸಾಗಿಸುವ ವ್ಯವಸ್ಥೆ. ವಿಮಾನಗಳು, ಟ್ರಕ್ಗಳು ಮತ್ತು ಕೋಲ್ಡ್ ಸ್ಟೋರೇಜ್ ಗೋದಾಮುಗಳು ಈ ಮೂರು ಕೋಲ್ಡ್ ಚೈನ್ನಲ್ಲಿ ಇರುವ ಪ್ರಮುಖ ಭಾಗಗಳು. ಕೊರೊನಾ ವಿಶ್ವವ್ಯಾಪಿ ಹರಡಿರುವ ಸೋಂಕು ಆಗಿರುವ ಕಾರಣ ವಿಭಿನ್ನ ತಾಪಮಾನಗಳು ಮತ್ತು ವಿಭಿನ್ನ ನಿರ್ವಹಣಾ ವಿಧಾನಗಳ ಮೂಲಕ ಲಸಿಕೆಯನ್ನು ಸಾಗಿಸಬೇಕಾಗುತ್ತದೆ.
ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ಸೆಂಟರ್ ಫಾರ್ ಎಕ್ಸಲೆನ್ಸ್ ವರದಿಯ ಪ್ರಕಾರ ವಾರ್ಷಿಕವಾಗಿ ಉತ್ಪಾದನೆಯಾದ ಸ್ಥಳದಿಂದ ಗಮ್ಯ ಸ್ಥಳವನ್ನು ತಲುಪುವ ವೇಳೆಗೆ ಶೇ.25ರಷ್ಟು ಲಸಿಕೆಗಳು ತಾಪಮಾನ ದೋಷದಿಂದ ಹಾಳಾಗುತ್ತದೆ. ಇದರಿಂದ ವಾರ್ಷಿಕವಾಗಿ 34.1 ಶತಕೋಟಿ ಡಾಲರ್ ನಷ್ಟವಾಗುತ್ತಿದೆ ಎಂದು ಹೇಳಿದೆ.
ಕೋವಿಡ್ 19 ಲಸಿಕೆಗಳನ್ನು ಯಾವ ತಾಪಮಾನದಲ್ಲಿ ಸಂಗ್ರಹಿಸಬೇಕು?
ದಢಾರ, ಮಂಪ್ಸ್, ರುಬೆಲ್ಲಾ ಮತ್ತು ವರಿಸೆಲ್ಲಾಗೆ ಹಾಕುವ ಎಂಎಂಆರ್ವಿ ಮತ್ತು ಜೋಸ್ಟರ್ ಲಸಿಕೆಗಳನ್ನು -50 ಡಿಗ್ರಿ ಸೆಲ್ಸಿಯಸ್ ಮತ್ತು -15 ಡಿಗ್ರಿ ಸೆಲ್ಸಿಯಸ್ ನಡುವಿನ ತಾಪಮಾನದಲ್ಲಿ ಸಂಗ್ರಹಿಸಲಾಗುತ್ತದೆ. ಬಿಸಿಜಿಯಂತಹ ಇತರ ಸಾಂಪ್ರದಾಯಿಕ ಲಸಿಕೆಗಳನ್ನು ಸಾಮಾನ್ಯವಾಗಿ -25 ಡಿಗ್ರಿ ಸೆಲ್ಸಿಯಸ್ ಮತ್ತು -15 ಡಿಗ್ರಿ ಸೆಲ್ಸಿಯಸ್ ನಡುವಿನ ತಾಪಮಾನದಲ್ಲಿ ಸಂಗ್ರಹಿಸಲಾಗುತ್ತದೆ. ಈ ಕಾರಣಕ್ಕೆ ಕೆಲವು ಪ್ರಮುಖ ಕೋವಿಡ್ -19 ಲಸಿಕೆಗಳನ್ನು ಹೆಚ್ಚು ತಂಪಾದ ತಾಪಮಾನದಲ್ಲಿ ಸಂಗ್ರಹಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಆರ್ಎನ್ಎ ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಲಾದ ಫೈಜರ್ ಮತ್ತು ಮೊಡೆರ್ನಾದ ಲಸಿಕೆಯನ್ನು ಮೈನಸ್ 70 ಡಿಗ್ರಿ ಸೆಲ್ಸಿಯಸ್ ನಲ್ಲಿ ಸಂಗ್ರಹಿಸಡಬೇಕಾಗುತ್ತದೆ. ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ನಲ್ಲಿ ತಯಾರಾಗುತ್ತಿರುವ ಆಕ್ಸ್ಫರ್ಡ್ ಲಸಿಕೆ ಕೋವಿಶೀಲ್ಡ್ ಅನ್ನು ಫ್ರಿಡ್ಜ್ನಲ್ಲಿ ಇರಿಸಿದರೂ ಯಾವುದೇ ಹಾನಿಯಾಯಾಗುವುದಿಲ್ಲ. 2 ರಿಂದ 8 ಡಿಗ್ರಿ ಸೆಲ್ಸಿಯಸ್ನಲ್ಲಿ ಇಡಬಹುದು ಎಂದು ಸೀರಂ ತಿಳಿಸಿದೆ.
ಕೋಲ್ಡ್ ಚೈನ್ ಮುಖ್ಯ ಯಾಕೆ?
ಲಸಿಕೆಗಳು ಸೂಕ್ಷ್ಮ ಉತ್ಪನ್ನವಾಗಿದ್ದು ಅತಿಯಾದ ಶಾಖ, ಬೆಳಕು ಅಥವಾ ಶೀತದಲ್ಲಿ ಹಾನಿಗೊಳಗಾಗಬಹುದು. ಈ ಕಾರಣಕ್ಕೆ ತಾಪಮಾನ-ನಿಯಂತ್ರಿತ ವ್ಯವಸ್ಥೆಯ ಮೂಲಕ ಸಂಗ್ರಹಿಸಿ ಸರಬರಾಜು ಮಾಡಬೇಕಾಗುತ್ತದೆ.
ಸಂಗ್ರಹಿಸಲು, ವಿತರಿಸಲು ಇರುವ ಸಮಸ್ಯೆಗಳೇನು?
ಕೊರೊನಾ ಒಂದು ಪ್ರದೇಶ, ಒಂದು ದೇಶಕ್ಕೆ ಮೀಸಲಾಗಿದ್ದರೆ ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ. ಆದರೆ ಇದು ಸಾಂಕ್ರಾಮಿಕ ಸೋಂಕು ಆಗಿದ್ದು ವಿಶ್ವಕ್ಕೆ ಹರಡಿರುವ ಕಾರಣ ಲಸಿಕೆ ವಿತರಣೆ ಮಾಡುವುದು ಸವಾಲಿನ ಕೆಲಸ. ಮೂಲಸೌಕರ್ಯ ಮತ್ತು ಶೇಖರಣಾ ಸೌಲಭ್ಯಗಳಲ್ಲಿ ಹೂಡಿಕೆ, ವಿಶೇಷವಾಗಿ ಅಲ್ಟ್ರಾಕೋಲ್ಡ್ ಘನೀಕರಿಸುವ ಸಾಮರ್ಥ್ಯ ಕೋವಿಡ್ ಲಸಿಕೆ ಅಭಿವೃದ್ಧಿ ನಡೆಯುತ್ತಿರುವ ವೇಗದಲ್ಲಿ ನಡೆಯುತ್ತಿಲ್ಲ. ಸದ್ಯಕ್ಕೆ ಆಸ್ಪತ್ರೆಗಳಲ್ಲಿ ಮಾತ್ರ ಸೌಲಭ್ಯವಿದೆ. ಹೀಗಾಗಿ ಆರಂಭಿಕ ಹಂತದಲ್ಲಿ ಆಸ್ಪತ್ರೆಗಳಲ್ಲಿ ಮಾತ್ರ ಲಸಿಕೆ ವಿತರಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಿಶೇಷವಾಗಿ ಭಾರತದಂತಹ ತಾಪಮಾನ ಹೆಚ್ಚಿರುವ ದೇಶದಲ್ಲಿ ಲಸಿಕೆಯನ್ನು ಎಲ್ಲ ಜನರಿಗೆ ವಿತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚುವರಿ ಕೋಲ್ಡ್ ಚೈನ್ ಶೇಖರಣಾ ಸೌಲಭ್ಯಗಳನ್ನು ಗುರುತಿಸಲು ಪ್ರಾರಂಭಿಸಿದೆ. ಇದನ್ನೂ ಓದಿ: ಲಸಿಕೆ ಸ್ಟೋರೇಜ್ಗೆ ಸಿದ್ಧವಾಗುತ್ತಿದೆ ಬೆಂಗಳೂರಿನ ದಾಸಪ್ಪ ಆಸ್ಪತ್ರೆ
ಲಸಿಕೆಯ ಜೊತೆಗೆ ಸೀಸೆ, ಆಲ್ಕೋಹಾಲ್ ಸ್ವಾಬ್, ಸಿರಿಂಜ್ ಇತ್ಯಾದಿ ವಸ್ತುಗಳು ಸಹ ಬೇಕಾಗುತ್ತದೆ. ಈ ವಸ್ತುಗಳು ಭಾರೀ ಪ್ರಮಾಣದಲ್ಲಿ ಉತ್ಪಾದನೆ ಮಾಡಬೇಕಾಗುತ್ತದೆ. ಮೆಡಿಕಲ್ ವಸ್ತು ಉತ್ಪಾದನೆಯನ್ನು ಭಾರತ ಮುಂಚೂಣಿಯಲ್ಲಿ ಇರುವ ಕಾರಣ ಈ ವಸ್ತುಗಳಿಗೆ ಸಮಸ್ಯೆಯಾಗಲಾರದು.
ಬೇರೆ ದೇಶಗಳು ಏನು ಮಾಡುತ್ತಿವೆ?
ಅಮೆರಿಕದ ಯುನೈಟೆಡ್ ಪಾರ್ಸೆಲ್ ಸರ್ವಿಸ್(ಯುಪಿಎಸ್) ಮತ್ತು ಜರ್ಮನ್ ಲಾಜಿಸ್ಟಿಕ್ಸ್ ಕಂಪನಿ ಡಿಹೆಚ್ಎಲ್ ನಂತಹ ಹಲವಾರು ಲಾಜಿಸ್ಟಿಕ್ಸ್ ಕಂಪನಿಗಳು ಈಗಾಗಲೇ ಹೊಸ ಶೇಖರಣಾ ಸೌಲಭ್ಯಗಳನ್ನು ನಿರ್ಮಿಸಲು ಪ್ರಾರಂಭಿಸಿವೆ. ಬ್ಲೂಮ್ಬರ್ಗ್ ವರದಿಯಂತೆ ಫುಟ್ಬಾಲ್ ಮೈದಾನದ ಗಾತ್ರದ ಎರಡು ಫ್ರೀಜರ್ ಫಾರ್ಮ್ಗಳನ್ನು ಯುಪಿಎಸ್ ನಿರ್ಮಿಸುತ್ತಿದೆ.
ಭಾರತದಲ್ಲಿ ವಿತರಣೆ ಹೇಗೆ?
ಆರಂಭದಲ್ಲಿ ದೇಶದ 25-30 ಕೋಟಿ ಮಂದಿಗೆ ಲಸಿಕೆ ನೀಡಲು ಕೇಂದ್ರ ಸಿದ್ಧತೆ ಮಾಡಿಕೊಂಡಿದೆ. ಜೂನ್ ಹೊತ್ತಿಗೆ 40-50 ಕೋಟಿ ಡೋಸ್ ಸಿದ್ಧವಾಗಲಿದ್ದು ವೈಜ್ಞಾನಿಕ ದತ್ತಾಂಶಗಳ ಆಧಾರದ ಮೇಲೆ ವ್ಯಾಕ್ಸಿನ್ ಹಂಚಿಕೆ ಮಾಡಲಾಗುತ್ತದೆ. ಕೊರೊನಾ ವಾರಿಯರ್ಸ್, ಆರೋಗ್ಯ ಸಿಬ್ಬಂದಿಗೆ ಮೊದಲ ಆದ್ಯತೆಯ ಬಳಿಕ ವಯೋವೃದ್ಧರು, ರೋಗಪೀಡಿತರಿಗೂ ಲಸಿಕೆ ನೀಡಲಾಗುತ್ತದೆ. ವಯಸ್ಸಿನ ಆಧಾರದ ಮೇಲೆಯೂ ಕೊರೋನಾ ಲಸಿಕೆ ಹಾಕಲಾಗುತ್ತದೆ. ಲಸಿಕೆ ಎಲ್ಲಿದೆ? ಹೇಗೆ ಹಂಚಿಕೆ ಆಗ್ತಿದೆ ಎಂಬುದರ ಬಗ್ಗೆ ಇ-ಟ್ರ್ಯಾಕಿಂಗ್ ಮಾಡಿ ನಿಗಾ ಇಡಲಾಗುತ್ತದೆ.
– ಲಸಿಕೆ ತಯಾರಿಸುತ್ತಿರುವ ಆಸ್ಟ್ರಾಜನಿಕಾ ಜೊತೆ ಚರ್ಚೆ – ಎಲ್ಲರಿಗೂ ಉಚಿತ ಲಸಿಕೆ ನೀಡಲು ಸರ್ಕಾರ ಬದ್ಧ
ಬೆಂಗಳೂರು: 2021 ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಇಂದು ಲಸಿಕೆ ಅಭಿವೃದ್ಧಿಯ ಪ್ರಗತಿ, ಅದರ ಸಾಧಕ-ಬಾಧಕಗಳ ಕುರಿತು ಮಾಹಿತಿ ನೀಡಿದರು. 2021ರ ಆರಂಭದ ವೇಳೆಗೆ ಲಸಿಕೆ ಲಭ್ಯವಾಗುವ ವಿಶ್ವಾಸ ವ್ಯಕ್ತಪಡಿಸಿದರು. (1/5) pic.twitter.com/VMMFeFG31J
ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಪ್ರಯೋಗ ಮಾಡಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಸಂಸ್ಥೆ ಜೊತೆಗೂ ಒಪ್ಪಂದವಾಗಿದೆ. 56 ದಿನಗಳ ಹಿಂದಷ್ಟೇ ಒಂದನೇ ಹಂತದ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ. ಇನ್ನು 2 ಹಾಗೂ 3 ನೇ ಹಂತದಲ್ಲಿ ದೇಶದ 1,600 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ. ಇನ್ನಷ್ಟು ಹೆಚ್ಚು ಜನರನ್ನು ಲಸಿಕೆ ಪ್ರಯೋಗಕ್ಕೆ ಒಳಪಡಿಸಬೇಕು ಎಂದು ಸಂಸ್ಥೆಗೆ ಕೋರಲಾಗಿದೆ. ಜೊತೆಗೆ ರಾಜ್ಯದಲ್ಲಿ ಲಸಿಕೆ ವಿತರಣೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ. 100 ಕೋಟಿ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ ಎಂದು ಸಚಿವರು ವಿವರಿಸಿದರು. ಇದನ್ನೂ ಓದಿ: ಪ್ರತಿ ನಿಮಿಷಕ್ಕೆ 500, ಪ್ರತಿ ಗಂಟೆಗೆ 30 ಸಾವಿರ ಸೀಸೆ ಲಸಿಕೆ ಉತ್ಪಾದಿಸುತ್ತೇವೆ: ಸೇರಮ್ ಸಿಇಓ
ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ನಂತರ ವಯೋವೃದ್ಧರು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುವುದು. (2/5) pic.twitter.com/ZgXV8Yq2ot
ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದೊಂದಿಗೆ ಆರೋಗ್ಯ ತಜ್ಞರು, ತಾಂತ್ರಿಕ ಪರಿಣತರು, ಪೂರೈಕೆದಾರರನ್ನು ಒಳಗೊಂಡಂತೆ ತಾಂತ್ರಿಕ ಸಮಿತಿ ರಚಿಸಿದ್ದು, ಲಸಿಕೆಯ ಪೂರೈಕೆ, ಸಂಗ್ರಹಣೆ, ವಿತರಣೆ ಕುರಿತು ಸಮಿತಿ ಸಲಹೆ ನೀಡಲಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ವಯೋವೃದ್ಧರು, ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ.
ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಇತರೆ ಸಂಸ್ಥೆಗಳಾದ ಸೀರಮ್ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಸಂಸ್ಥೆಗಳ ಜೊತೆಗೂ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು. ಲಸಿಕೆ ಕಂಡುಹಿಡಿಯಲು ವಿಶ್ವದಾದ್ಯಂತ ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಲಸಿಕೆ ಎಂದು ಲಭ್ಯವಾಗುತ್ತದೆ ಎಂಬ ಪ್ರಶ್ನೆಗೆ ನಿಖರ ಉತ್ತರ ಯಾರ ಬಳಿಯೂ ಸದ್ಯಕ್ಕಿಲ್ಲ. (3/5) pic.twitter.com/5QLFP1epU1
ಲಸಿಕೆಯ ದರದ ಬಗ್ಗೆ ಈಗ ಚರ್ಚೆಯಾಗುತ್ತಿದೆ. ನಮ್ಮ ಸರ್ಕಾರ ಕೋವಿಡ್ ಪರೀಕ್ಷೆ, ಚಿಕಿತ್ಸೆ ಮೊದಲಾದ ವೆಚ್ಚಗಳನ್ನು ಭರಿಸಿದೆ. ಅದೇ ರೀತಿ ರಾಜ್ಯದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಬದ್ಧ ಎಂದು ತಿಳಿಸಿದರು.
ಒಂದನೇ ಹಂತದ ಪ್ರಯೋಗದಲ್ಲಿ ಲಸಿಕೆ ನೀಡಿದಾಗ 28 ದಿನಗಳಲ್ಲಿ ಆ್ಯಂಟಿಬಾಡಿ ಉತ್ಪಾದನೆ ಆಗಿದೆ. 1 ನೇ ಹಂತದಲ್ಲಿ ಕೊರೊನಾ ಸೋಂಕು ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದೆ. 2, 3 ನೇ ಹಂತಗಳಲ್ಲಿ ಕೊರೊನಾ ಸೋಂಕು ಬಂದಿರುವವರಿಗೂ ಲಸಿಕೆ ನೀಡಲಾಗುತ್ತದೆ. ಪ್ರಯೋಗ ಯಶಸ್ವಿಯಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ರಾಜ್ಯದಲ್ಲಿ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು.
ರೋಟಾ ವೈರಸ್ ಗೆ ಲಸಿಕೆ ಸಿಗಲು 29 ವರ್ಷ ಬೇಕಾಯ್ತು. ಎಬೋಲಾ ವೈರಸ್ ಗೆ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯ್ತು. ಮಂಪ್ಸ್ ವೈರಸ್ ಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆ. ಈಗ ಕೊರೊನಾ ವೈರಸ್ ಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದೇವೆ. (4/5) pic.twitter.com/MVFiitOZvl
ನಾನು ಆರೋಗ್ಯ ಖಾತೆ ವಹಿಸಿಕೊಂಡ ಬಳಿಕ ಕಳೆದ ಹತ್ತು ದಿನಗಳಿಂದ ಈಚೆಗೆ ಕೋರಾನಾ ಸೋಂಕು ಮತ್ತು ಕೋವಿಡ್ ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಇದಕ್ಕೆ ಕೆಲವರು ಸಂಶಯದಿಂದಲೂ ನೋಡುತ್ತಿದ್ದಾರೆ. ಯಾವುದೇ ಅಂಕಿ- ಸಂಖ್ಯೆಯನ್ನು ನಾವು ವ್ಯತ್ಯಾಸ ಮಾಡುವ ಕೆಲಸ ಮಾಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಕರ್ನಾಟಕ ಸರ್ಕಾರ ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.
ಕೊರೊನಾ ವೈರಸ್ ವಿರುದ್ಧದ ಈ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ. ವಿಜ್ಞಾನಿಗಳ ಪ್ರಯತ್ನ ಆದಷ್ಟು ಬೇಗ ಫಲ ನೀಡಲಿ ಎಂದು ಆಶಿಸುತ್ತಾ ಲಸಿಕೆ ಸಿಗುವವರೆಗೂ ಮಾಸ್ಕ್ ಧರಿಸಿವುದು, ಪದೇ ಪದೇ ಕೈ ತೊಳೆಯುವುದು ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸೋಣ. (5/5) pic.twitter.com/RqwV0Wne43
ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಆದ್ದರಿಂದ ಲಸಿಕೆಯ ದರದ ಬಗ್ಗೆ ಚರ್ಚಿಸಿಲ್ಲ. ಲಾಭಕ್ಕಾಗಿ ಲಸಿಕೆ ಮಾಡುತ್ತಿಲ್ಲ ಎಂದು ಆಸ್ಟ್ರಾಜನಿಕಾ ಕಂಪನಿಯವರು ಹೇಳಿದ್ದಾರೆ. ಕೋವಿಡ್ ಅಂಕಿ ಅಂಶದಲ್ಲಿ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯವರು ಕೂಡ ನಮ್ಮ ಸರ್ಕಾರ ನೀಡುವ ಮಾಹಿತಿ ಪಾರದರ್ಶಕತೆಯಿಂದ ಕೂಡಿದೆ ಎಂದು ಶ್ಲಾಘಿಸಿದೆ. ನವೆಂಬರ್, ಡಿಸೆಂಬರ್, ಜನವರಿಯ ಚಳಿಗಾಲದ ಅವಧಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಸಚಿವರು ಹೇಳಿದರು.
ಸಾವು, ಸೋಂಕು ಮತ್ತು ಗುಣಮುಖರಾದವರ ಅಂಕಿ-ಅಂಶಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುತ್ತಿದ್ದೇವೆ. ಇಳಿಮುಖವಾಗಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಯೊಬ್ಬ ಕೊರೋನಾ ಯೋಧರ ಪ್ರಯತ್ನ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಟ್ರಾಜನಿಕಾ ವ್ಯವಸ್ಥಾಪಕ ನಿರ್ದೇಶಕ ಗಗನ್ ದೀಪ್ ಸಿಂಗ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ಸಭೆಯಲ್ಲಿದ್ದರು.
ನವದೆಹಲಿ: ಕೊರೊನಾ ವೈರಸ್ಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಈಗಲೇ ಕೇಂದ್ರ ಸರ್ಕಾರ ಲಸಿಕೆಗೆ ಹಂಚಿಕೆ ಮಾಡಲು ಸಿದ್ಧತೆ ನಡೆಸುತ್ತಿದೆ.
ಯಾವೆಲ್ಲ ಲಸಿಕೆ?
ಇಂಗ್ಲೆಂಡಿನ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ದೇಶದಲ್ಲಿ ಮೊದಲು ಲಭ್ಯವಾಗಬಹುದು. ಈಗಾಗಲೇ ಪುಣೆಯ ಸೀರಂ ಸಂಸ್ಥೆ ಮೂರನೇ ಹಂತದ ಲಸಿಕೆ ಪ್ರಯೋಗ ನಡೆಸಿದೆ. ಇದರ ಜೊತೆ ಜೊತೆಗೆ 30 ಕೋಟಿ ಡೋಸ್ ಉತ್ಪಾದಿಸಲು ತಯಾರಿ ನಡೆಸಿದೆ.
ರಷ್ಯಾದ ಸ್ಟುಟ್ನಿಕ್ ವಿ ಲಸಿಕೆ ಪ್ರಯೋಗ ಇಂದಿನಿಂದ ದೇಶದಲ್ಲಿ ಆರಂಭವಾಗಿದೆ. ಹೈದರಾಬಾದಿನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯ ಅಂತಿಮ ಹಂತದ ಪ್ರಯೋಗಕ್ಕೆ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದಲ್ಲಿ ಫೆಬ್ರವರಿಯಲ್ಲಿ ನಮ್ಮದೇ ಲಸಿಕೆ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ. ಇದನ್ನೂ ಓದಿ: ಪ್ರತಿ ನಿಮಿಷಕ್ಕೆ 500, ಪ್ರತಿ ಗಂಟೆಗೆ 30 ಸಾವಿರ ಸೀಸೆ ಲಸಿಕೆ ಉತ್ಪಾದಿಸುತ್ತೇವೆ: ಸೀರಂ ಸಿಇಓ
ಲಸಿಕೆ ಹಂಚಿಕೆ ಪ್ಲಾನ್ ಏನು?
ಅ.20 ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎಲ್ಲ ಪ್ರಜೆಗಳಿಗೆ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಹೀಗಾಗಿ ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಲಸಿಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. 130 ಕೋಟಿ ಮಂದಿಗೆ ಲಸಿಕೆ ನೀಡಲು 50 ಸಾವಿರ ಕೋಟಿ ರೂ. ಹಣವನ್ನು ಮೀಸಲಿಡಲು ಚಿಂತನೆ ನಡೆದಿದೆ. ಒಂದು ಲಸಿಕೆಗೆ ಕನಿಷ್ಠ 500 ರೂ. ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ.
ಒಬ್ಬೊಬ್ಬರಿಗೆ ಎರಡು ಡೋಸ್ ನೀಡಿದರೆ ಇಡೀ ದೇಶಕ್ಕೆ 260 ಕೋಟಿ ಕೊರೋನಾ ಡೋಸ್ ಬೇಕಾಗುತ್ತದೆ. ಲಸಿಕೆ ಸಾಗಣೆ, ಸಂಗ್ರಹಣೆ ವೆಚ್ಚ 200 ರೂ. ಆಗಬಹುದು. ಎಲ್ಲ ರಾಜ್ಯಗಳಿಗೂ ಕೇಂದ್ರದಿಂದಲೇ ರಿಯಾಯಿತಿ ದರದಲ್ಲಿ ಲಸಿಕೆ ನೀಡಲು ಚಿಂತನೆ ನಡೆದಿದೆ.
ಮೈಸೂರು: ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ ಎಂದು ತಮ್ಮ ಪಕ್ಷದ ನಾಯಕರನ್ನೇ ಪರಿಷತ್ ಸದಸ್ಯ ವಿಶ್ವನಾಥ್ ಅವರು ಪ್ರಶ್ನೆ ಮಾಡಿದ್ದಾರೆ.
ಸದ್ಯ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಬಿಹಾರದಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ತಿಳಿಸಿದೆ. ಇದೇ ವಿಚಾರ ಈಗ ಸಖತ್ ಚರ್ಚೆಯಾಗುತ್ತಿದೆ. ಇಂದು ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಕೊರೊನಾ ವಿಚಾರ ರಾಜಕೀಯ ಚರ್ಚೆಗೆ ಬಳಸಿಕೊಳ್ಳಬಾರದು ಎಂದಿದ್ದಾರೆ.
ಕೊರೊನಾ ವಿಚಾರವನ್ನ ರಾಜಕೀಯಕ್ಕೆ ತರಬೇಡಿ. ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ? ಯಾವುದೇ ಪಕ್ಷವಾಗಲಿ ಕೊರೊನಾ ವಿಚಾರ ರಾಜಕೀಯ ಚರ್ಚೆಗೆ ಬಳಸಿಕೊಳ್ಳಬಾರದು. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಮ್ಮ ಪಕ್ಷದ ಪ್ರಣಾಳಿಕೆ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ.