Tag: ಕೊರೊನಾ ಲಸಿಕೆ

  • 3ನೇ ಹಂತದ ಪರೀಕ್ಷೆಗೆ ಒಳಗಾದ ಹಿರಿಯೂರು ಕಾದಂಬರಿಕಾರ – ಇನ್ನೆರಡು ತಿಂಗಳಲ್ಲಿ ಲಸಿಕೆ?

    3ನೇ ಹಂತದ ಪರೀಕ್ಷೆಗೆ ಒಳಗಾದ ಹಿರಿಯೂರು ಕಾದಂಬರಿಕಾರ – ಇನ್ನೆರಡು ತಿಂಗಳಲ್ಲಿ ಲಸಿಕೆ?

    ಚಿತ್ರದುರ್ಗ: ಎರಡನೇ ಹಂತದ ಪರೀಕ್ಷೆ ಬಳಿಕ ಹಿರಿಯೂರಿನ ಖ್ಯಾತ ಕಾದಂಬರಿಕಾರ ಡಿ.ಸಿ.ಪಾಣಿ 3ನೇ ಹಂತದ ಲಸಿಕೆ ಪರೀಕ್ಷೆಗೆ ಒಳಗಾಗಿದ್ದು, ಅಂತಿಮ ಹಂತದ ಪರೀಕ್ಷೆ ಬಳಿಕ ಅಂದರೆ ಇನ್ನೆರೆಡು ತಿಂಗಳಲ್ಲಿ ಕೋವಾಕ್ಸಿನ್ ಲಭ್ಯವಾಗುವ ಸಾಧ್ಯತೆ ಇದೆಯಾ ಎಂಬ ಪ್ರಶ್ನೆ ಇದೀಗ ಮೂಡಿದೆ.

    ಕೋವಾಕ್ಸಿನ್ ಲಸಿಕೆಯ ಅಂತಿಮ ಹಂತದ ಪ್ರಯೋಗ ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ ನಡೆಯಿತು. ಈ ಪ್ರಯೋಗಕ್ಕೆ ಒಳಗಾಗಿರುವ ಜಿಲ್ಲೆಯ ಹಿರಿಯೂರು ಪಟ್ಟಣದ ಖ್ಯಾತ ಕಾದಂಬರಿಕಾರ ಡಿ.ಸಿ ಪಾಣಿಯವರು ಇನ್ನೆರೆಡು ತಿಂಗಳಲ್ಲಿ ಕೋವಾಕ್ಸಿನ್ ಲಭ್ಯವಾಗುವ ಸಾಧ್ಯತೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಅಕ್ಟೋಬರ್ 14ರಂದು ನನಗೆ 3ನೇ ಹಂತದ ಲಸಿಕೆ ಪ್ರಯೋಗ ಮಾಡಲಾಯಿತು. ಇದೇ ಕೊನೆಯ ಪ್ರಯೋಗವಾಗಿದೆ. ಪ್ರಥಮ ಬಾರಿಗೆ ಆಗಸ್ಟ್ 16ರಂದು ಮೊದಲ ಹಂತ ಹಾಗೂ ಸೆಪ್ಟೆಂಬರ್ 29ರಂದು 2ನೇ ಹಂತದ ಲಸಿಕೆ ಪ್ರಯೋಗ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ನನ್ನ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿಲ್ಲ. ಹೀಗೆ ಯಶಸ್ವಿಯಾಗಿದ್ದರಿಂದ ಇನ್ನು 15 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಗ ನಡೆಯಬಹುದು ಎಂದು ಹೇಳಿದ್ದಾರೆ.

    ದೇಶ ಕೋವಿಡ್ ನಿಂದಾಗಿ ಕಂಗಾಲಾಗಿರುವ ಹಿನ್ನೆಲೆ ಸ್ವತಃ ನಾನೇ ಪರೀಕ್ಷೆಗೆ ಒಳಗಾಗಬೇಕು ಎಂಬ ಉದ್ದೇಶದಿಂದ ಪ್ರಯೋಗಕ್ಕೆ ಒಳಗಾದೆ. ಈವರೆಗೆ ಸರ್ಕಾರ ನೀಡುವ ಯಾವುದೇ ಸೌಕರ್ಯನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

    ಕೋವಾಕ್ಸಿನ್ ಹೆಸರಿನ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಡುಹಿಡಿದಿದೆ. ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಮತ್ತು ರಾಷ್ಟ್ರೀಯ ವೈರಾಲಜಿ ಇನ್‍ಸ್ಟಿಟ್ಯೂಟ್(ಎನ್‍ಐವಿ) ಸಹಭಾಗಿತ್ವದಲ್ಲಿ ಲಸಿಕೆಯನ್ನು ಅಭಿವೃದ್ಧಿ ಪಡಿಸಿದೆ.

  • ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆಗಳನ್ನ ತೆರೆಯದಿರುವುದು ಒಳ್ಳೆಯದು: ಶ್ರೀನಿವಾಸಮೂರ್ತಿ

    ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆಗಳನ್ನ ತೆರೆಯದಿರುವುದು ಒಳ್ಳೆಯದು: ಶ್ರೀನಿವಾಸಮೂರ್ತಿ

    ಬೆಂಗಳೂರು: ಕೊರೊನಾ ನಡುವೆ ರಾಜ್ಯದಲ್ಲಿ ಶಾಲಾ ಕಾಲೇಜು ಓಪನ್ ವಿಚಾರದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ಎಲ್ಲಾ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಇದು ಸ್ವಾಗತಾರ್ಹ ಎಂದು ಬೆಂಗಳೂರು ಹೊರವಲಯ ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಪಬ್ಲಿಕ್ ಟಿವಿ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶಾಲಾ, ಕಾಲೇಜುಗಳ ಆರಂಭ – ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಸುರೇಶ್‌ ಕುಮಾರ್‌

    ಮಹಾಮಾರಿ ಕೊರೊನಾದಿಂದ ಜನಸಾಮಾನ್ಯರು ಸೇರಿದಂತೆ ನಮ್ಮಲ್ಲಿ ರೈಲ್ವೇ ಮಂತ್ರಿ, ಒಬ್ಬರು ಶಾಸಕರು ಇತ್ತೀಚೆಗೆ ತೀರಿಕೊಂಡಿದ್ದಾರೆ. ನನ್ನ ಅಭಿಪ್ರಾಯದಂತೆ ಈ ಮಹಾಮಾರಿ ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆಗಳನ್ನ ತೆರೆಯದೆ ಇರುವುದೇ ಒಳ್ಳೆಯದು ಎಂದಿದ್ದಾರೆ.

    ಇತ್ತ ಈಗಾಗಲೇ ಶಿಕ್ಷಕರು ಮನೆಮನೆಗೆ ಹೋಗಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಅದನ್ನು ಇನ್ನೂ ಎರಡು ತಿಂಗಳು ಮುಂದುವರಿಸುವುದು ಒಳ್ಳೆಯದು. ಕೊರೊನಾಗೆ ಲಸಿಕೆ ಕಂಡು ಹಿಡುಯುವುದು ಒಳ್ಳೆಯದು. ಶಾಲಾ ಮಕ್ಕಳಿಗೆ ಒಬ್ಬರಿಗೆ ಬಂದರೆ ಇಡೀ ಶಾಲೆ ನಾಶ ಆಗಬಿಡುತ್ತೆ. ಈ ಕೊರೊನಾ ಒಂದು ದಾರಿದ್ರ್ಯ ಕಾಯಿಲೆಯಾಗಿದೆ ಎಂದು ಶ್ರೀನಿವಾಸಮೂರ್ತಿ ಹೇಳಿದರು.

    ಸಚಿವರ ಅಭಿಪ್ರಾಯ ಜೊತೆಯಲ್ಲಿ ನಮ್ಮ ತಾಲೂಕಿನ ಶಿಕ್ಷಕರು ಮತ್ತು ಪೋಷಕರ ಜೊತೆ ಮಾತನಾಡುತ್ತೀನಿ. ಶಾಲೆಗಳು ಆರಂಭ ಮಾಡಲೇಬೇಕಾದರೆ ಬೆಳಗ್ಗೆ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಮಧ್ಯಾಹ್ನದ ನಂತರ 6, 7ನೇ ವಿದ್ಯಾರ್ಥಿಗಳಿಗೆ ತರಗತಿ ಮಾಡಲಿ. ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸ್ ಮಾಡಿ ತರಗತಿ ಪ್ರಾರಂಭ ಮಾಡಲಿ. ಆದರೂ ಇದು ಕಷ್ಟವಾಗುತ್ತದೆ. ಹೀಗಾಗಿ ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆ ತೆರೆಯುವುದು ಬೇಡ ಎಂಬುದು ನನ್ನ ಅಭಿಪ್ರಾಯ ಎಂದರು.

  • ಆಕ್ಸ್‌ಫರ್ಡ್‌ ಕೊರೊನಾ ಲಸಿಕೆಯ ಪ್ರಯೋಗಕ್ಕೆ ತಾತ್ಕಾಲಿಕ ತಡೆ

    ಆಕ್ಸ್‌ಫರ್ಡ್‌ ಕೊರೊನಾ ಲಸಿಕೆಯ ಪ್ರಯೋಗಕ್ಕೆ ತಾತ್ಕಾಲಿಕ ತಡೆ

    ಲಂಡನ್‌: ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸುತ್ತಿರುವ ಕೋವಿಡ್‌ 19 ಲಸಿಕೆಯ ಪ್ರಯೋಗವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

    ಲಸಿಕೆಯನ್ನು ಹಾಕಿಸಿಕೊಂಡ ವ್ಯಕ್ತಿಯ ಆರೋಗ್ಯದಲ್ಲಿ ಅಡ್ಡ ಪರಿಣಾಮ ಕಂಡು ಬಂದ ಹಿನ್ನೆಲೆಯಲ್ಲಿ ಮನುಷ್ಯನ ಮೇಲೆ ನಡೆಯುತ್ತಿರುವ ಪ್ರಯೋಗವನ್ನು ತಡೆ ಹಿಡಿಯಲಾಗಿದೆ.

    ಈ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯಲ್ಲಿ ಅಡ್ಡ ಪರಿಣಾಮ ಕಂಡು ಬಂದಿದೆ. ಅಡ್ಡ ಪರಿಣಾಮ ಯಾಕೆ ಆಯ್ತು ಎಂಬುದರ ಬಗ್ಗೆ ನಾವು ಅಧ್ಯಯನ ಮಾಡುತ್ತೇವೆ ಎಂದು ವಕ್ತಾರರು ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಆಕ್ಸ್‌ಫರ್ಡ್‌ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ AZD1222 ಹೆಸರಿನ ಲಸಿಕೆ ಪ್ರಯೋಗ ವಿಶ್ವದ ಹಲವೆಡೆ ನಡೆಯುತ್ತಿದೆ. ಹೀಗಾಗಿ ಯಾವ ದೇಶದ ವ್ಯಕ್ತಿ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಷ್ಟೇ ಅಲ್ಲದೇ ವ್ಯಕ್ತಿಯ ಆರೋಗ್ಯ ಸ್ಥಿತಿ ಹೇಗಿದೆ ಎಂಬುದು ತಿಳಿದು ಬಂದಿಲ್ಲ.

    ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ ವಿಶ್ವದಲ್ಲಿ ಒಟ್ಟು 180 ಲಸಿಕೆಗಳು ಅಭಿವೃದ್ಧಿಯಾಗುತ್ತಿದೆ. ಈ ಪೈಕಿ ಎಲ್ಲರ ನಿರೀಕ್ಷೆ ಆಕ್ಸ್‌ಫರ್ಡ್‌ ಲಸಿಕೆಯ ಮೇಲಿತ್ತು. ಮೊದಲ ಕ್ಲಿನಿಕಲ್‌ ಟ್ರಯಲ್‌ ಯಶಸ್ವಿಯಾಗಿತ್ತು. 1,077 ಮಂದಿ ಆರೋಗ್ಯಕರ ಸ್ವಯಂಸೇವಕರ ಮೇಲೆ ನಡೆಸಿದ ಆರಂಭಿಕ ಹಂತದ ಕ್ಲಿನಿಕಲ್ ಟ್ರಯಲ್‌ ಯಶಸ್ವಿಯಾಗಿದ್ದು, ಈ ವೇಳೆ ಲಸಿಕೆ ರೋಗನಿರೋಧಕ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ವೈದ್ಯ ಕ್ಷೇತ್ರಕ್ಕೆ ಸಂಬಂಧಿಸಿದ ‘ದಿ ಲ್ಯಾನ್ಸೆಟ್‌ ಮೆಡಿಕಲ್‌ ಜರ್ನಲ್’‌ನಲ್ಲಿ ಸಂಶೋಧನಾ ವರದಿ ಪ್ರಕಟವಾಗಿತ್ತು.

    ಸ್ವಯಂಸೇವಕರ ಮೇಲೆ ನಡೆದ ಪ್ರಯೋಗದ ಮೇಲೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ. ಲಸಿಕೆ ನೀಡಿದ ಬಳಿಕ ಅವರ ದೇಹದಲ್ಲಿ ಕೊರೊನಾ ವೈರಸ್‌ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು(ಆಂಟಿಡಿಬಾಡಿಸ್‌) ಮತ್ತು ಟಿ- ಕೋಶಗಳು ಸೃಷ್ಟಿಯಾಗಿದೆ. ಪ್ರಯೋಗದಲ್ಲಿ 56 ದಿನಗಳ ಕಾಲ ಈ ಪ್ರತಿಕಾಯಗಳು ವೈರಸ್‌ ವಿರುದ್ಧ ಹೋರಾಡಿರುವುದು ದೃಢಪಟ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

    ಸಂಶೋಧನೆಯ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಪ್ರತಿಕ್ರಿಯಿಸಿ, ಈ ಲಸಿಕೆ ಜನರನ್ನು ಎಷ್ಟು ಕಾಲದವರೆಗೆ ಕೊರೊನಾದಿಂದ ರಕ್ಷಿಸುತ್ತದೆ ಎನ್ನುವುದು ಇನ್ನು ದೃಢಪಟ್ಟಿಲ್ಲ. ಹೀಗಾಗಿ ಮತ್ತಷ್ಟ್ರು ಪ್ರಯೋಗಗಳು ನಡೆಯಬೇಕಿದೆ ಎಂದು ತಿಳಿಸಿದ್ದರು. ಈ ಲಸಿಕೆ ಬಗ್ಗೆ ಭಾರೀ ವಿಶ್ವಾಸ ಇಟ್ಟುಕೊಂಡಿರುವ ಇಂಗ್ಲೆಂಡ್‌ ಸರ್ಕಾರ 1 ಕೋಟಿ ಡೋಸ್‌ಗಳಿಗೆ ಈಗಾಗಲೇ ಆರ್ಡರ್‌ ಕೂಡ ನೀಡಿದೆ.

    ಲಸಿಕೆ ಪ್ರಯೋಗ ಹೇಗೆ?
    ಆರೋಗ್ಯವಂತ ವ್ಯಕ್ತಿಗಳ ಮೇಲೆ ಲಸಿಕೆಗಳ ಪ್ರಯೋಗ ನಡೆಯುತ್ತದೆ. ಲಸಿಕೆ ಹಾಕಿಸಿಕೊಳ್ಳುವ ಮುನ್ನ ಆತನ ದೇಹವನ್ನು ಪರೀಕ್ಷಿಸಲಾಗುತ್ತದೆ. ಈ ವ್ಯಕ್ತಿಯ ದೇಹದ ಮೇಲೆ ಲಸಿಕೆ ಪ್ರಯೋಗ ಮಾಡಬಹುದು ಎಂದು ವೈದ್ಯರು ನಿರ್ಧಾರಕ್ಕೆ ಬಂದ ಬಳಿಕ ಲಸಿಕೆಯನ್ನು ನೀಡಲಾಗುತ್ತದೆ. ಲಸಿಕೆ ಹಾಕಿಸಿಕೊಂಡ ಬಳಿಕ ವ್ಯಕ್ತಿ ನಿಗದಿತ ದಿನಾಂಕದಂದು ಆಸ್ಪತ್ರೆಗೆ ದಾಖಲಾಗಿ ದೇಹವನ್ನು ಪರೀಕ್ಷೆ ಮಾಡಬೇಕಾಗುತ್ತದೆ.

    ಎಲ್ಲರಿಗಿಂತ ಮೊದಲು ಹೇಗೆ?
    ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ತೀವ್ರತೆರನಾದ ಶ್ವಾಸಕೋಶದ ಸಮಸ್ಯೆ ತರಬಲ್ಲ ಸಾರ್ಸ್ (ಸಿವಿಯ‌ ಅಕ್ಯೂಟ್ ರೆಸ್ಪಿರೇಟರಿ ಸಿಂಡೋಮ್) ಹಾಗೂ ಎಂಇಆರ್‌ಎಸ್ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡೋಮ್) ಸೋಂಕಿಗೆ ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿತ್ತು. ಈ ನಡುವೆ ಉಸಿರಾಟದ ಸಮಸ್ಯೆಗೆ ಕಾರಣವಾಗಬಲ್ಲ ಕೊರೊನಾ ವೈರಸ್‌ ಬಂದಿದೆ. ಹೀಗಾಗಿ ಕೂಡಲೇ ತಂಡ ಕೋವಿಡ್‌ಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿದೆ. ಬೇರೆಯವರು ಲಸಿಕೆ ಕಂಡು ಹಿಡಿಯುವ ಪ್ರಯೋಗ ನಡೆಸುವುದಕ್ಕೆ ಮುನ್ನವೇ ಇವರು ವೈರಸ್‌ ಕುರಿತು ಸಾಕಷ್ಟು ಸಂಶೋಧನೆ ನಡೆಸಿರುವ ಕಾರಣ ವಿಶ್ವದಲ್ಲಿ ಈ ಲಸಿಕೆ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

     

  • 73 ದಿನಗಳಲ್ಲಿ ಜನರ ಕೈಗೆ ಕೊರೊನಾ ಲಸಿಕೆ?

    73 ದಿನಗಳಲ್ಲಿ ಜನರ ಕೈಗೆ ಕೊರೊನಾ ಲಸಿಕೆ?

    -58 ದಿನಗಳಲ್ಲಿ ವ್ಯಾಕ್ಸಿನ್ ಪರೀಕ್ಷೆ ಪೂರ್ಣ

    ನವದೆಹಲಿ: ಕೊರೊನಾದಿಂದ ತತ್ತರಿಸಿದ ಭಾರತಕ್ಕೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. 73 ದಿನದಲ್ಲಿ ಮಹಾಮಾರಿ ಕೋವಿಡ್ ಗೆ ಮದ್ದು ಸಿಗಲಿದೆ ಅಂತಾ ಭಾರತದ ಸಂಸ್ಥೆಯೊಂದು ಹೇಳಿಕೊಂಡಿದೆ. ಮಹಾಮರಿ ಕೊರೊನಾ ಆರ್ಭಟಕ್ಕೆ ಭಾರತ ತತ್ತರಿಸಿದೆ.

    ವಿಶ್ವದ ಅತಿ ಹೆಚ್ಚು ಕೊರೊನಾ ಸೋಂಕಿತರು ಹೊಂದಿರುವ ಮೂರನೇ ದೇಶ ಅನ್ನೋ ಕುಖ್ಯಾತಿಗೂ ಒಳಗಾಗಿದೆ. ಏಳು ತಿಂಗಳು ಇನ್ನು ಬೆಂಬಡಿದ ಈ ಹೆಮ್ಮಾರಿಗೆ ಗುಡ್ ಬೈ ಹೇಳುವ ಸಮಯ ಸನ್ನಿಹಿತವಾಗುತ್ತಿದೆ. ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅನ್ನೊ ಸಂಸ್ಥೆ ಇನ್ನು 73 ದಿನಗಳಲ್ಲಿ ಲಸಿಕೆ ಮಾರಾಟಕ್ಕೆ ಮುಕ್ತ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

    ಭಾರತದಲ್ಲಿ ಬ್ರಿಟನ್ ವ್ಯಾಕ್ಸಿನ್ ಪರೀಕ್ಷೆ: ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಬ್ರಿಟನ್ ನಲ್ಲಿರುವ ಆಕ್ಸ್ ಫರ್ಡ್ ಯೂನಿವರ್ಸಿಟಿ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಆಕ್ಸ್ ಫರ್ಡ್ ಯೂನಿವರ್ಸಿಟಿ ಮತ್ತು ಆಸ್ಟ್ರಜೇನಿಕಾ ಎಂಬ ಸಂಸ್ಥೆ ಅಭಿವೃದ್ಧಿ ಪಡಸಿರುವ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ಅನುಮತಿ ಪಡೆದುಕೊಂಡಿದ್ದಾರೆ.

    ಇದರ ಭಾಗವಾಗಿ ಭಾರತದಲ್ಲೂ ಆಕ್ಸ್ ಫರ್ಡ್ ಯೂನಿವರ್ಸಿಟಿಯ ಕೋವಿಶೀಲ್ಡ್ ಹೆಸರಿನ ಕೊರೊನಾ ನಿಗ್ರಹ ಸಲಿಕೆ ಭಾರತದಲ್ಲಿ ನಿನ್ನೆಯಿಂದ ಪ್ರಯೋಗಕ್ಕೆ ಒಳಪಟ್ಟಿದೆ. ಅಹಮದಾಬಾದ್, ಮುಂಬೈ ಮತ್ತು ಪುಣೆಯಲ್ಲಿ ಆರಂಭದಲ್ಲಿ 1,600 ಅಧಿಕ ಮಂದಿಯ ಮೇಲೆ ಪ್ರಯೋಗ ನಡೆಯಲಿದ್ದು ಮೂರನೇ ಹಂತದ ಪ್ರಯೋಗಗಳನ್ನು ಜೊತೆಯಾಗಿ ಮಾಡಲಿದೆ.

    ಈ ಸಲಿಕೆಯ ಪ್ರಯೋಗಗಳನ್ನು ಭಾರತದಲ್ಲಿ 58 ದಿನಗಳಲ್ಲಿ ಮುಗಿಸಲಿದ್ದು 73 ದಿನಗಳಲ್ಲಿ ಅಂದ್ರೆ ಅಕ್ಟೋಬರ್ ಅಂತ್ಯಕ್ಕೆ ಜನರ ಕೈಗೆ ಸಿಗುವಂತೆ ವಾಣಿಜ್ಯೀಕರಣ ಮಾಡಲಾಗುವುದು ಎಂದು ಸೀರಮ್ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ. ಕೇಂದ್ರ ಆರೋಗ್ಯ ಇಲಾಖೆಯೂ ಈ ಲಸಿಕೆಯ ಪ್ರಯೋಗಳ ಮೇಲೆ ನಿಗಾ ಇಟ್ಟಿದ್ದು ಶೀಘ್ರ ಉತ್ತಮ ಫಲಿತಾಂಶ ಬರುವ ನಿರೀಕ್ಷೆಯಲ್ಲಿದೆ.

  • ಹಸಿರು ನಿಶಾನೆ ಸಿಕ್ಕಿದ ಕೂಡಲೇ ಭಾರೀ ಪ್ರಮಾಣದಲ್ಲಿ ಕೊರೊನಾ ಲಸಿಕೆ ಉತ್ಪಾದನೆ: ಮೋದಿ

    ಹಸಿರು ನಿಶಾನೆ ಸಿಕ್ಕಿದ ಕೂಡಲೇ ಭಾರೀ ಪ್ರಮಾಣದಲ್ಲಿ ಕೊರೊನಾ ಲಸಿಕೆ ಉತ್ಪಾದನೆ: ಮೋದಿ

    ನವದೆಹಲಿ: ನಮ್ಮ ದೇಶದಲ್ಲಿ ಒಂದಲ್ಲ ಎರಡಲ್ಲ ಮೂರು ಕೊರೊನಾ ಲಸಿಕೆಗಳು ತಯಾರಾಗುತ್ತಿವೆ. ಲಸಿಕೆ ಉತ್ಪಾದನೆಗೆ ಹಸಿರು ನಿಶಾನೆ ಸಿಕ್ಕಿದ ಬಳಿಕ ಅತ್ಯಧಿಕ ಪ್ರಮಾಣದಲ್ಲಿ ಉತ್ಪಾದನೆ ಮಾಡಿ ಭಾರತೀಯರಿಗೆ ನೀಡಲು ಮಾರ್ಗಸೂಚಿ ಸಹ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ 7ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಮೋದಿ, ಪ್ರತಿಯೊಬ್ಬರು ಕೊರೊನಾಗೆ ಲಸಿಕೆ ಯಾವಾಗ ಬರುತ್ತದೆ ಎಂದು ಕೇಳುತ್ತಿದ್ದಾರೆ. ಆದರೆ ಮೂರು ಲಸಿಕೆಗೆಗಳು ವಿವಿಧ ಹಂತದ ಪ್ರಯೋಗದಲ್ಲಿದೆ. ವಿಜ್ಞಾನಿಗಳಿಂದ ಈ ಲಸಿಕೆಗೆ ಹಸಿರು ನಿಶಾನೆ ಸಿಕ್ಕಿದ ಕೂಡಲೇ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಯಾಗಲಿದೆ ಎಂದು ತಿಳಿಸಿದರು.

    ಆರಂಭದಲ್ಲೇ ಕೊರೊನಾ ವಾರಿಯರ್ಸ್‌ಗಳಿಗೆ ಗೌರವ ಸಲ್ಲಿಸಿ ಭಾಷಣ ಆರಂಭಸಿದ ಮೋದಿ ಕೊರೊನಾ ಬಂದ ಸಮಯದಲ್ಲಿ 3 ಸಾವಿರ ಮಂದಿಗೆ ಪ್ರತಿ ದಿನ ಪರೀಕ್ಷೆ ನಡೆಯುತ್ತಿತ್ತು. ಆದರೆ ಈಗ ಪ್ರತಿ ದಿನ 7 ಲಕ್ಷ ಮಂದಿಗೆ ಪರೀಕ್ಷೆ ಮಾಡುತ್ತಿದ್ದೇವೆ. ಆರಂಭದಲ್ಲಿ ಎನ್‌ 95 ಮಾಸ್ಕ್‌, ಪಿಪಿಇ ಕಿಟ್‌, ವೆಂಟಿಲೇಟರ್‌ಗಳು ಉತ್ಪಾದನೆ ಆಗುತ್ತಿರಲಿಲ್ಲ. ಆದರೆ ಈಗ ಇವುಗಳನ್ನು ಉತ್ಪಾದಿಸಲು ಸಾಮರ್ಥ್ಯ ಪಡೆದಿದ್ದೇವೆ. ಆತ್ಮ ನಿರ್ಭರ ಭಾರತದ ಕನಸು ನನಸು ಮಾಡಬೇಕು ಎಂದು ಕರೆ ನೀಡಿದರು.

    ಈ ಭಾಷಣದಲ್ಲೇ ರಾಷ್ಟ್ರೀಯ ಡಿಜಿಟಲ್‌ ಹೆಲ್ತ್‌ ಮಿಷನ್‌(ಎನ್‌ಡಿಎಚ್‌ಎಂ) ಬಗ್ಗೆ ಮಾತನಾಡಿದ ಮೋದಿ, ಪ್ರತೀ ಭಾರತೀಯರಿಗೆ ಡಿಜಿಟಲ್‌ ಆರೋಗ್ಯ ಕಾರ್ಡ್‌ ನೀಡಲು ಸರ್ಕಾರ ಮುಂದಾಗಿದೆ. ರೋಗಿಗಳ ಸಂಪೂರ್ಣ ಚಿಕಿತ್ಸೆಯ ವಿವರ ವೈದ್ಯರಿಗೆ ಇದರಿಂದ ಸಿಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದ ಪ್ರಜೆಗಳಿಗೆ ಸಿಗಲಿದೆ ಆರೋಗ್ಯ ಐಡಿ ಕಾರ್ಡ್‌. ಈ ಕಾರ್ಡ್‌ ಹೇಗಿರಲಿದೆ?

  • ಆಕ್ಸ್‌ಫರ್ಡ್‌ ಕೊರೊನಾ ಲಸಿಕೆ ಸುರಕ್ಷಿತ, ಯಾವುದೇ ಅಡ್ಡ ಪರಿಣಾಮವಿಲ್ಲ

    ಆಕ್ಸ್‌ಫರ್ಡ್‌ ಕೊರೊನಾ ಲಸಿಕೆ ಸುರಕ್ಷಿತ, ಯಾವುದೇ ಅಡ್ಡ ಪರಿಣಾಮವಿಲ್ಲ

    – 1,077 ಮಂದಿ ಆರೋಗ್ಯಕರ ಸ್ವಯಂಸೇವಕರ ಮೇಲೆ ಪ್ರಯೋಗ
    – 56 ದಿನಗಳ ಕಾಲ ವೈರಸ್‌ ವಿರುದ್ಧ ಹೋರಾಟ

    ಲಂಡನ್‌: ಕೊರೊನಾ ವೈರಸ್‌ನಿಂದ ನಲುಗುತ್ತಿರುವ ವಿಶ್ವಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಲಸಿಕೆ ಸುರಕ್ಷಿತವಾಗಿದೆ.

    ಆಕ್ಸ್‌ಫರ್ಡ್‌ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ AZD1222 ಹೆಸರಿನ ಲಸಿಕೆಯ ಸುರಕ್ಷಿತವಾಗಿದೆ ಎಂದು ವೈದ್ಯ ಕ್ಷೇತ್ರಕ್ಕೆ ಸಂಬಂಧಿಸಿದ ‘ದಿ ಲ್ಯಾನ್ಸೆಟ್‌ ಮೆಡಿಕಲ್‌ ಜರ್ನಲ್’‌ನಲ್ಲಿ ಸಂಶೋಧನಾ ವರದಿ ಪ್ರಕಟವಾಗಿದೆ.

    1,077 ಮಂದಿ ಆರೋಗ್ಯಕರ ಸ್ವಯಂಸೇವಕರ ಮೇಲೆ ನಡೆಸಿದ ಆರಂಭಿಕ ಹಂತದ ಕ್ಲಿನಿಕಲ್ ಟ್ರಯಲ್‌ ಯಶಸ್ವಿಯಾಗಿದ್ದು, ಈ ವೇಳೆ ಲಸಿಕೆ ರೋಗನಿರೋಧಕ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ತಿಳಿಸಿದೆ.

    ಸ್ವಯಂಸೇವಕರ ಮೇಲೆ ನಡೆದ ಪ್ರಯೋಗದ ಮೇಲೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ. ಲಸಿಕೆ ನೀಡಿದ ಬಳಿಕ ಅವರ ದೇಹದಲ್ಲಿ ಕೊರೊನಾ ವೈರಸ್‌ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು(ಆಂಟಿಡಿಬಾಡಿಸ್‌) ಮತ್ತು ಟಿ- ಕೋಶಗಳು ಸೃಷ್ಟಿಯಾಗಿದೆ. ಪ್ರಯೋಗದಲ್ಲಿ 56 ದಿನಗಳ ಕಾಲ ಈ ಪ್ರತಿಕಾಯಗಳು ವೈರಸ್‌ ವಿರುದ್ಧ ಹೋರಾಡಿರುವುದು ದೃಢಪಟ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

    ಸಂಶೋಧನೆಯ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಪ್ರತಿಕ್ರಿಯಿಸಿ, ಈ ಲಸಿಕೆ ಜನರನ್ನು ಎಷ್ಟು ಕಾಲದವರೆಗೆ ಕೊರೊನಾದಿಂದ ರಕ್ಷಿಸುತ್ತದೆ ಎನ್ನುವುದು ಇನ್ನು ದೃಢಪಟ್ಟಿಲ್ಲ. ಹೀಗಾಗಿ ಮತ್ತಷ್ಟ್ರು ಪ್ರಯೋಗಗಳು ನಡೆಯಬೇಕಿದೆ ಎಂದು ತಿಳಿಸಿದ್ದಾರೆ. ಈ ಲಸಿಕೆ ಬಗ್ಗೆ ಭಾರೀ ವಿಶ್ವಾಸ ಇಟ್ಟುಕೊಂಡಿರುವ ಇಂಗ್ಲೆಂಡ್‌ ಸರ್ಕಾರ 1 ಕೋಟಿ ಡೋಸ್‌ಗಳಿಗೆ ಈಗಾಗಲೇ ಆರ್ಡರ್‌ ಕೂಡ ನೀಡಿದೆ.

    ಎಲ್ಲರಿಗಿಂತ ಮೊದಲು ಹೇಗೆ?
    ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ತೀವ್ರತೆರನಾದ ಶ್ವಾಸಕೋಶದ ಸಮಸ್ಯೆ ತರಬಲ್ಲ ಸಾರ್ಸ್ (ಸಿವಿಯ‌ ಅಕ್ಯೂಟ್ ರೆಸ್ಪಿರೇಟರಿ ಸಿಂಡೋಮ್) ಹಾಗೂ ಎಂಇಆರ್‌ಎಸ್ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡೋಮ್) ಸೋಂಕಿಗೆ ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿತ್ತು. ಈ ನಡುವೆ ಉಸಿರಾಟದ ಸಮಸ್ಯೆಗೆ ಕಾರಣವಾಗಬಲ್ಲ ಕೊರೊನಾ ವೈರಸ್‌ ಬಂದಿದೆ. ಹೀಗಾಗಿ ಕೂಡಲೇ ತಂಡ ಕೋವಿಡ್‌ಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿದೆ. ಬೇರೆಯವರು ಲಸಿಕೆ ಕಂಡು ಹಿಡಿಯುವ ಪ್ರಯೋಗ ನಡೆಸುವುದಕ್ಕೆ ಮುನ್ನವೇ ಇವರು ವೈರಸ್‌ ಕುರಿತು ಸಾಕಷ್ಟು ಸಂಶೋಧನೆ ನಡೆಸಿರುವ ಕಾರಣ ವಿಶ್ವದಲ್ಲಿ ಈ ಲಸಿಕೆ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

    ಹೈದರಬಾದಿನ ಭಾರತ್‌ ಬಯೋಟೆಕ್‌, ಚೀನಾದ ಸಿನೋವಾಕ್ ಬಯೋಟೆಕ್, ಚೀನಾ ಸರ್ಕಾರಿ ಸ್ವಾಮ್ಯದ ಸಿನೊಫಾರ್ಮ್ ಮತ್ತು ಅಮೆರಿಕಾದ ಬಯೋಟೆಕ್ ಸಂಸ್ಥೆ ಮೊಡೆರ್ನಾ ಸಹ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು ಕ್ಲಿನಿಕಲ್‌ ಪ್ರಯೋಗ ನಡೆಯುತ್ತಿದೆ.

  • ಮೊದಲ ಬಾರಿಗೆ ಕೊರೊನಾ ಲಸಿಕೆ ಅಮೆರಿಕದಲ್ಲಿ ಪ್ರಯೋಗ

    ಮೊದಲ ಬಾರಿಗೆ ಕೊರೊನಾ ಲಸಿಕೆ ಅಮೆರಿಕದಲ್ಲಿ ಪ್ರಯೋಗ

    ವಾಷಿಂಗ್ಟನ್: ಕೊರೊನಾಗೆ ವಿಶ್ವಾದ್ಯಂತ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದು, ಈಗ ಮೊದಲ ಬಾರಿಗೆ ಅಮೆರಿಕದಲ್ಲಿ ಕೊರೊನಾ ಲಸಿಕೆಯನ್ನು ವ್ಯಕ್ತಿಯೊಬ್ಬರ ಮೇಲೆ ಪ್ರಯೋಗಿಸಲಾಗಿದೆ.

    ಸಾಧಾರಣವಾಗಿ ಒಂದು ಔಷಧಿಯನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿದ ಬಳಿಕ ಮಾನವನ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಆದರೆ ಈಗ ಕೊರೊನಾ ಔಷಧಿ ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಪ್ರಯೋಗ ಮಾಡಲಾಗಿದೆ.

    ಬಯೋಟೆಕ್ನಾಲಜಿ ಕಂಪನಿ ಮಾಡರ್ನಾ ಮತ್ತು ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಹೆಲ್ತ್ ವಿಜ್ಞಾನಿಗಳು ಜಂಟಿಯಾಗಿ ಎಂಆರ್‌ಎನ್ಎ-1273 ಹೆಸರಿನ ಔಷಧಿಯನ್ನು ಕಂಡು ಹಿಡಿದಿದ್ದು ಸಿಯಾಟಲ್‍ನಲ್ಲಿರುವ ಹೆಲ್ತ್ ರಿಸರ್ಚ್ ಇನ್‍ಸ್ಟಿಟ್ಯೂಟ್ ನಲ್ಲಿ 43 ವರ್ಷದ ಮಹಿಳೆ ಮೇಲೆ ಪ್ರಯೋಗಿಸಲಾಗಿದೆ.

    ಎಂಆರ್‌ಎನ್ಎ-1273 ಔಷಧಿ ಪ್ರಯೋಗಕ್ಕೆ ಆರೋಗ್ಯವಂತ 45 ಮಂದಿ ವಯಸ್ಕರನ್ನು ಆಯ್ಕೆ ಮಾಡಲಾಗಿದೆ. ಇವರಿಗೆ 2 ಬಾರಿ ಔಷಧಿಯನ್ನು ನೀಡಲಾಗುತ್ತದೆ. ಈ ಔಷಧಿ ನೀಡಿದ ನಂತರ ಈ ವ್ಯಕ್ತಿಗಳ ದೇಹದಲ್ಲಿ ಆರೋಗ್ಯದಲ್ಲಿ ಏನು ಬದಲಾಗುತ್ತದೆ ಮತ್ತು ಎಷ್ಟು ಪ್ರಮಾಣದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂಬುದನ್ನು ತಿಳಿಯಲಾಗುತ್ತದೆ. ಇದಾದ ಬಳಿಕ ಕೊರೊನಾ ಪೀಡಿತ ವ್ಯಕ್ತಿಯ ದೇಹದಲ್ಲಿರುವ ವೈರಸ್ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ತಿಳಿಯಲಾಗುತ್ತದೆ.

    ಚೀನಾದಲ್ಲಿ ಕೊರೊನಾ ವೈರಸ್ ಪತ್ತೆಯಾದ ನಂತರ ಸಂಶೋಧನಾ ತಂಡ ಫೆ.7ರಂದು  ಔಷಧಿ ತಯಾರಿಸಿತ್ತು. ಬಳಿಕ ವಿವಿಧ ಪರೀಕ್ಷೆಗೆ ಒಳಪಟ್ಟು ಈಗ ಪ್ರಯೋಗಿಸಲಾಗುತ್ತದೆ.