Tag: ಕೊರೊನಾ ಲಸಿಕೆ

  • ಯಾದಗಿರಿಯ ತಿಂಥಣಿ ರಾಜ್ಯದ ಮೊದಲ ಕೊರೊನಾ ಲಸಿಕೆ ಮುಕ್ತ ಗ್ರಾಮ ಪಂಚಾಯ್ತಿ

    ಯಾದಗಿರಿಯ ತಿಂಥಣಿ ರಾಜ್ಯದ ಮೊದಲ ಕೊರೊನಾ ಲಸಿಕೆ ಮುಕ್ತ ಗ್ರಾಮ ಪಂಚಾಯ್ತಿ

    ಯಾದಗಿರಿ: ಇಡೀ ಜಿಲ್ಲೆ ಮಾತ್ರವಲ್ಲದೆ ರಾಜ್ಯವೇ ಜನರಿಗೆ ಕೋವಿಡ್ ಲಸಿಕೆ ಹಾಕಲು ಹರಸಹಾಸ ಪಡುತ್ತಿದೆ. ಆದರೆ ಈ ತಿಂಥಣಿ ಮಾತ್ರ ಮಾತ್ರ ಕೋವಿಡ್ ಲಸಿಕೆ ಮುಕ್ತ, ರಾಜ್ಯದ ಮೊದಲ ಗ್ರಾಮವೇನಿಸಿದೆ. ಗ್ರಾಮದಲ್ಲಿ ಪ್ರತಿಶತ 100 ರಷ್ಟು ಫಲಾನುಭವಿಗಳಿಗೆ ಲಸಿಕೆ ನೀಡಿ ಈಗ ರಾಜ್ಯದಲ್ಲಿಯೇ ತಿಂಥಣಿ ಗ್ರಾಮ ಪಂಚಾಯ್ತಿ ಮಾದರಿ ಆಗಿದೆ.

    ತಿಂಥಣಿ, ತಾದಲಾಪುರ, ಶಾಂತಪುರ, ಹುಣಸಿಹೋಳಿ, ನಿಂಗದಹಳ್ಳಿ, ಬಂಡೋಳ್ಳಿ ಒಟ್ಟು ಆರು ಗ್ರಾಮಗಳು ಈ ತಿಂಥಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುತ್ತವೆ. ಕಳೆದ ಕೇವಲ 15 ದಿನದೊಳಲ್ಲಿ ತಿಂಥಣಿ ಲಸಿಕೆ ಮುಕ್ತ ಪಂಚಾಯತ ಆಗಿದೆ. ತಿಂಥಣಿ ಪಂಚಾಯ್ತಿ ವ್ಯಾಪ್ತಿಯಲ್ಲಿ 9 ಸಾವಿರ ಜನಸಂಖ್ಯೆ ಇದ್ದು, ಅದರಲ್ಲಿ 2 ಸಾವಿರ ಜನ ಬೃಹತ್ ನಗರಗಳತ್ತ ವಲಸೆ ಹೋಗಿದ್ದಾರೆ. ಸದ್ಯ 18 ಹಾಗೂ 45 ವರ್ಷ ಮೇಲ್ಪಟ್ಟವರು 4200 ಜನ ಇದ್ದು ಈ ಎಲ್ಲರೂ ಕೂಡ ಕೋವಿಡ್ ಲಸಿಕೆ ಪಡೆದಿದ್ದಾರೆ.

    ಕೊರೊನಾ ಮೊದಲನೆಯ ಅಲೆಯಲ್ಲಿ ತಿಂಥಣಿ ಪಂಚಾಯ್ತಿಯಲ್ಲಿ 28 ಪ್ರಕರಣಗಳು ಪತ್ತೆಯಾಗಿದ್ದವು, ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದ. ಎರಡನೇ ಅಲೆಯಲ್ಲಿ 56 ಪ್ರಕರಣಗಳು ಪತ್ತೆಯಾಗಿದ್ದವು. ಹೀಗಾಗಿ ಆರೋಗ್ಯ ಸಿಬ್ಬಂದಿ ಮತ್ತು ಜನಪ್ರತಿನಿಧಿಗಳು ಒಟ್ಟುಗೂಡಿ ಜನರಿಗೆ ಲಸಿಕೆ ಬಗ್ಗೆ ಅರಿವು ಮೂಡಿಸಿದ ಪರಿಣಾಮ, ಸಾಧನೆ ಸಾಧ್ಯವಾಗಿದೆ. ಇದನ್ನೂ ಓದಿ: ವಿವಿಧ ಆಕೃತಿಯಲ್ಲಿ ಮೂಡಿ ಬಂದ ಹಲಸಿನ ಹಣ್ಣು – ವಿಸ್ಮಯಕಾರಿ ಬೆಳವಣಿಗೆ

    ಇಂತಹ ಸಾಧನೆ ಮಾಡಿದ ಈ ಗ್ರಾಮ ಪಂಚಾಯತಿಗೆ ಜಿಲ್ಲಾಡಳಿತ ಅವರ ಗ್ರಾಮಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದೆ. ಇನ್ನೂ ಶಾಸಕ ರಾಜೂಗೌಡ ತಮ್ಮ ಶಾಸಕರ ಅನುದಾನದಿಂದ 25 ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ. ಒಟ್ಟಿನಲ್ಲಿ ಅಧಿಕಾರಿಗಳು, ಜನಪ್ರತಿನಿಧಿ ಹಾಗೂ ಗ್ರಾಮಸ್ಥರು ಮನಸ್ಸು ಮಾಡಿದ್ರೆ ಎನಾದರು ಸಾಧಿಸಬಹುದು ಎಂಬುದಕ್ಕೆ ತಿಂಥಣಿ ಗ್ರಾಮದ ಅತ್ಯುತ್ತಮ ಉದಾಹರಣೆ. ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಮಕ್ಕಳಿಗೆ ತೊಂದರೆ – ಸರ್ಕಾರ ಸಿದ್ಧತೆ ಮಾಡಿಕೊಳ್ಳಲಿ ಸಿದ್ದರಾಮಯ್ಯ

  • ಸ್ಪುಟ್ನಿಕ್ ಲಸಿಕೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಅಧಿಕೃತ ಚಾಲನೆ

    ಸ್ಪುಟ್ನಿಕ್ ಲಸಿಕೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಅಧಿಕೃತ ಚಾಲನೆ

    ಬೆಂಗಳೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಪುಟ್ನಿಕ್ ವಿ ಲಸಿಕೆಗೆ ಅಧಿಕೃತವಾಗಿ ಚಾಲನೆಗೊಂಡಿತು.

    ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರೋ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಪುಟ್ನಿಕ್ ವಿ ಲಸಿಕೆಯನ್ನು ಕಮರ್ಷಿಯಲ್ ಲಾಂಚ್ ಮಾಡಲಾಗಿದೆ. ಲಸಿಕೆ ನೀಡುವ ಪ್ರಕ್ರಿಯೆಯನ್ನು ವಿಭಿನ್ನವಾಗಿ ಆಯೋಜನೆ ಮಾಡಲಾಗಿದ್ದು, ಮಂಗಳಮುಖಿಯರಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

    ಪ್ರಾಥಮಿಕ ಹಂತವಾಗಿ 10 ಜನ ಮಂಗಳಮುಖಿಯರಿಗೆ ಉಚಿತವಾಗಿ ತಮ್ಮಿಷ್ಟದ ಕೋವಿಶೀಲ್ಡ್, ಕೋವ್ಯಾಕ್ಸಿನ್, ಸ್ಪುಟ್ನಿಕ್ ವಿ ಲಸಿಕೆ ನೀಡಲು ಮಣಿಪಾಲ್ ಆಸ್ಪತ್ರೆ ಮುಂದಾಗಿದೆ. ಬಹು ನಿರೀಕ್ಷಿತ ಸ್ಪುಟ್ನಿಕ್ ಲಸಿಕೆಯನ್ನ ಪಡೆಯಲು ಜನ ಉತ್ಸುಕರಾಗಿದ್ದು, ವಿಐಪಿಗಳೇ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಒಂದೇ ಡೋಸ್ ಪಡೆಯುವ ಪ್ರಕ್ರಿಯೆ ಈ ಲಸಿಕೆಗಿದೆ.

  • ವ್ಯಾಕ್ಸಿನ್ ಪೂರೈಕೆಯಲ್ಲಿ ಎರಡ್ಮೂರು ದಿನ ವ್ಯತ್ಯಯ: ಕೊಡಗು ಡಿಸಿ

    ವ್ಯಾಕ್ಸಿನ್ ಪೂರೈಕೆಯಲ್ಲಿ ಎರಡ್ಮೂರು ದಿನ ವ್ಯತ್ಯಯ: ಕೊಡಗು ಡಿಸಿ

    – ಕೊರೊನಾ ಅಬ್ಬರದ ನಡುವೆ ಖಾಲಿಯಾಗುತ್ತಿದೆ ಲಸಿಕೆ

    ಮಡಿಕೇರಿ: ಒಂದೆಡೆ ಕೊರೊನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ರಾಜ್ಯದ ವಿವಿಧೆಡೆ ಲಸಿಕಾ ಕೇಂದ್ರದ ಬಳಿ ನೋ ಸ್ಟಾಕ್(ಲಸಿಕೆ ಖಾಲಿಯಾಗಿದೆ) ನಾಳೆ ಬನ್ನಿ ಎಂಬ ಸಿದ್ಧ ಉತ್ತರ ಎದುರಾಗುತ್ತಿದೆ. ಲಸಿಕೆ ಹಾಕಿಸಿಕೊಳ್ಳಲು ಮೊದಲು ಹಿಂಜರಿದ ಜನ, ಈಗ ಕೊರೊನಾ ಲಸಿಕೆ ಪಡೆಯಲು ಮುಗಿಬೀಳುತ್ತಿದ್ದಾರೆ. ಆದರೆ ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನ್ ಕೊರತೆ ಎದುರಾಗುತ್ತಿದ್ದು, ಸ್ಟಾಕ್ ಇಲ್ಲ ಎಂಬ ಉತ್ತರ ಸಿಗುತ್ತಿದೆ.

    ಕೊಡಗಿನಲ್ಲೂ ಇದೇ ಪರಿಸ್ಥಿತಿ ಎದುರಾಗಿದ್ದು, ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ತಂಡೋಪತಂಡವಾಗಿ ಬರುತ್ತಿದ್ದಾರೆ. ಆದರೆ ಇಂದು ಹೇಗೋ ಎಲ್ಲ ಸೆಂಟರ್ ನಲ್ಲೂ ವ್ಯಾಕ್ಸಿನ್ ನೀಡಲಾಗಿದೆ. ಆದರೆ ನಾಳೆಯಿಂದ ಕೊಡಗಿನಲ್ಲಿ ವ್ಯಾಕ್ಸಿನ್ ಅಭಾವ ಹೆಚ್ಚಾಗುವ ಸಾಧ್ಯತೆ ಇದೆ. ವ್ಯಾಕ್ಸಿನ್ ಗಾಗಿ ಸಾರ್ವಜನಿಕರು ಎರಡ್ಮೂರು ದಿನ ಕಾಯಲೇ ಬೇಕು, ಯಾರೂ ಗೊಂದಲಕ್ಕೊಳಗಾಗಬಾರದು ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಯ ಲಸಿಕೆ ಕೊರತೆಯನ್ನು ಒಪ್ಪಿಕೊಂಡ ಸಚಿವ ಸುಧಾಕರ್

     

    ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಬೇಕೆಂದು ಸರ್ಕಾರ ಸೂಚಿಸಿರುವುದರಿಂದ 800 ಡೋಸ್ ಮಾತ್ರ ಕೊಡಗು ಜಿಲ್ಲೆಗೆ ಸಿಕ್ಕಿದೆ. ಹೀಗಾಗಿ ಸಾರ್ವಜನಿಕರಿಗೆ ವ್ಯಾಕ್ಸಿನ್ ನಲ್ಲಿ ವ್ಯತ್ಯಯ ಅಗುತ್ತದೆ. ಸಾರ್ವಜನಿಕರು ವ್ಯಾಕ್ಸಿನ್ ಬರುವವರೆಗೂ ಎರಡ್ಮೂರು ದಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಅರೋಗ್ಯ ಅಧಿಕಾರಿ ಮೋಹನ್, ಜಿಲ್ಲೆಗೆ 2,900 ಡೋಸ್ ಲಸಿಕೆ ಬಂದಿತ್ತು. ಕೊಡಗಿನಲ್ಲಿರುವ ಎಲ್ಲ ಲಸಿಕೆ ಕೇಂದ್ರಗಳಿಗೆ ಕಳುಹಿಸಲಾಗಿದೆ. ಎಲ್ಲ ಕಡೆಗಳಲ್ಲಿ ಜನರು ಬೆಳಿಗ್ಗೆಯೇ ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದಾರೆ. ಕೆಲವು ಕಡೆ ಮಧ್ಯಾಹ್ನದ ವೇಳೆಗೆ ವ್ಯಾಕ್ಸಿನ್ ಖಾಲಿಯಾಗಿದೆ. 2 ದಿನಗಳ ಕಾಲ ಲಸಿಕೆ ಇರುವುದಿಲ್ಲ. ಸರ್ಕಾರ ಎರಡು ದಿನಗಳಲ್ಲಿ ಪೂರೈಕೆ ಮಾಡುವುದಾಗಿ ತಿಳಿಸಿದೆ. ಆದರೆ ಬಂದ ಬಳಿಕವಷ್ಟೇ ಖಚಿತವಾಗಲಿದೆ ಎಂದು ತಿಳಿಸಿದ್ದಾರೆ.

    ಲಸಿಕೆ ಕೊರತೆ ಒಪ್ಪಿಕೊಂಡ ಸುಧಾಕರ್
    ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ನೀಗಿಸಲು ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿ ಮಾಡುತ್ತೇನೆ. ಲಸಿಕೆ ಹೆಚ್ಚಾಗಿ ನೀಡಲು ಮನವಿ ಮಾಡುತ್ತೇನೆ ಎಂದು ಹೇಳುವ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಸಿಕೆ ಕೊರತೆಯನ್ನು ಒಪ್ಪಿಕೊಂಡಿದ್ದಾರೆ.

    ರಾಜ್ಯದಲ್ಲಿ ಲಸಿಕೆ ಕೊರತೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಲಸಿಕೆ ಬರುತ್ತಿದೆ, ಈ ತಿಂಗಳು ಹೆಚ್ಚಾಗಿ ಲಸಿಕೆ ಬರಬೇಕಿತ್ತು ಆದರೆ ತಡವಾಗಿದೆ. ಲಸಿಕೆ ಪೂರೈಕೆ ಹೆಚ್ಚಿಸುವಂತೆ ಮನವಿ ಮಾಡಲು ಸೋಮವಾರ ಅಥವಾ ಮಂಗಳವಾರ ದೆಹಲಿಗೆ ತೆರಳುತ್ತೇನೆ. ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಕೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

  • ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ: ಬಾಲಕೃಷ್ಣ

    ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ: ಬಾಲಕೃಷ್ಣ

    ಹಾಸನ: ಕೊರೊನಾ ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ ಎಂದು ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಕಿಡಿಕಾರಿದ್ದಾರೆ.

    ಜಿಲ್ಲೆಯ ಚನ್ನರಾಯಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಕ್ಸಿನೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಸಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಮ್ಮ ತಾಲೂಕಿಗೆ ಎಪ್ಪತ್ತು ಸಾವಿರ ಡೋಸ್ ವ್ಯಾಕ್ಸಿನ್ ಬಂದಿದೆ. ಇನ್ನೂ ಹೆಚ್ಚಿನ ಲಸಿಕೆಯ ಅಗತ್ಯವಿದೆ ಎಂದು ಹೇಳಿದರು.

    ಈ ಕುರಿತು ಮನವಿ ಮಾಡಿದರೂ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ನೀಡುತ್ತಿಲ್ಲ. ತಾಲೂಕಿಗೆ ಲಸಿಕೆಗೋಸ್ಕರ ಭಿಕ್ಷೆ ಬೇಡುವಂತಹ ಸಂದರ್ಭ ಉಂಟಾಗಿದೆ. ತಾಲೂಕಿನ ಜನತೆಗೆ ಏನು ಹೇಳಬೇಕು ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

  • ಉಡುಪಿಯಲ್ಲಿ 19,500 ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಶನ್

    ಉಡುಪಿಯಲ್ಲಿ 19,500 ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಶನ್

    ಉಡುಪಿ: ಜಿಲ್ಲೆಯಾದ್ಯಂತ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ. ಉಡುಪಿ ಜಿಲ್ಲೆಗೆ 16,500 ಡೋಸೇಜ್ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಆಗಮಿಸಿದೆ. ಜಿಲ್ಲೆ ಉಡುಪಿ ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಕಾಲೇಜುಗಳಲ್ಲಿ ವ್ಯಾಕ್ಸಿನೇಷನ್ ನಡೆಯುತ್ತಿದೆ.

    ಮೊದಲ ದಿನ ಜಿಲ್ಲೆಯಲ್ಲಿ 6,000 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಹಾಕಿಸಲಾಗಿತ್ತು. ನಗರದ ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಳಗ್ಗೆಯಿಂದಲೇ ವ್ಯಾಕ್ಸಿನೇಶನ್ ಪ್ರಕ್ರಿಯೆ ಆರಂಭಗೊಂಡಿದೆ. ಮೊದಲ ದಿನ 700 ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವ್ಯಾಕ್ಸಿನೇಷನ್ ನೀಡಲಾಗಿತ್ತು. ಇಂದು ಸುಮಾರು 750 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ.

    ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ರಿಜಿಸ್ಟ್ರೇಷನ್ ಕೌಂಟರ್, ವೈಟಿಂಗ್ ರೂಮ್, ವ್ಯಾಕ್ಸಿನೇಷನ್ ಕೊಠಡಿ ನಿರ್ಮಾಣ ಮಾಡಲಾಗಿದ್ದು, ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

    ಸರ್ಕಾರದ ಈ ಕೆಲಸ ಬಹ ಬಹಳ ಉತ್ತಮವಾಗಿದೆ. ಉಚಿತವಾಗಿ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ಮಾಡುತ್ತಿರುವುದು ನಮಗೆ ಬಹಳ ಖುಷಿಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳಬೇಕಾದರೆ ಹಣ ಕೊಡಬೇಕಾಗಿತ್ತು. ಮೂರನೇ ಅಲೆಯ ಆತಂಕ, ಡೆಲ್ಟಾ ಪ್ಲಸ್ ಆತಂಕದ ವಾತಾವರಣ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಸಾರ್ವಜನಿಕರು ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿನಿ ಸಿಂಚನ ಅಭಿಪ್ರಾಯ ವ್ಯಕ್ತಪಡಿಸಿದರು.

    ಕಳೆದ ಎರಡು ತಿಂಗಳು ಮನೆಯಲ್ಲೇ ಇದ್ದೆವು. ವ್ಯಾಕ್ಸಿನೇಷನ್ ಮಾಡಿಸುತ್ತಿದ್ದಾರೆ. ಕಾಲೇಜು ಆರಂಭವಾದರೆ ಧೈರ್ಯದಿಂದ ಕಾಲೇಜಿಗೆ ಬರಬಹುದು. ಸರ್ಕಾರ ಕಾಲೇಜಿನಲ್ಲಿ ಉಚಿತವಾಗಿ ವ್ಯಾಕ್ಸಿನ್ ಕೊಡುತ್ತಿರೋದು ಬಡವರಿಗೆ ಬಹಳ ಉಪಕಾರಿಯಾಗಿದೆ ಎಂದು ವಿದ್ಯಾರ್ಥಿನಿ ಆಯಿಷಾ ಹೇಳಿದರು. ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನ ರಕ್ಷಿಸಿದ ಪಬ್ಲಿಕ್ ಹೀರೋ ವಿಶು ಶೆಟ್ಟಿ

    ಕಾಲೇಜಿನಲ್ಲಿ ಉಪನ್ಯಾಸಕರಿಗೆ ಕೂಡಾ ಲಸಿಕೆ ನೀಡಲಾಗಿದೆ. ಉಡುಪಿ ನಗರದ ಆಸುಪಾಸಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ ಎಂದು ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಹೇಳಿದರು. ಇದನ್ನು ಓದಿ: ರಾಜ್ಯದಲ್ಲಿಯ ಲಸಿಕೆ ಕೊರತೆಯನ್ನು ಒಪ್ಪಿಕೊಂಡ ಸಚಿವ ಸುಧಾಕರ್

  • ರಾಜ್ಯದಲ್ಲಿಯ ಲಸಿಕೆ ಕೊರತೆಯನ್ನು ಒಪ್ಪಿಕೊಂಡ ಸಚಿವ ಸುಧಾಕರ್

    ರಾಜ್ಯದಲ್ಲಿಯ ಲಸಿಕೆ ಕೊರತೆಯನ್ನು ಒಪ್ಪಿಕೊಂಡ ಸಚಿವ ಸುಧಾಕರ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ನೀಗಿಸಲು ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿ ಮಾಡುತ್ತೇನೆ. ಲಸಿಕೆ ಹೆಚ್ಚಾಗಿ ನೀಡಲು ಮನವಿ ಮಾಡುತ್ತೇನೆ ಎಂದು ಹೇಳುವ ಮೂಲಕ  ಲಸಿಕೆ ಕೊರತೆಯನ್ನ ಆರೋಗ್ಯ ಸಚಿವ ಸುಧಾಕರ್ ಒಪ್ಪಿಕೊಂಡರು.

    ರಾಜ್ಯದಲ್ಲಿ ಲಸಿಕೆ ಕೊರತೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಲಸಿಕೆ ಬರುತ್ತಿದೆ. ಈ ತಿಂಗಳು ಹೆಚ್ಚಾಗಿ ಲಸಿಕೆ ಬರಬೇಕಿತ್ತು. ಆದ್ರೆ ಲಸಿಕೆ ಬರೋದು ತಡವಾಗಿದೆ. ಲಸಿಕೆ ಪೂರೈಕೆ ಹೆಚ್ಚಳ ಮಾಡುವಂತೆ ಮನವಿ ಮಾಡಲು ಸೋಮವಾರ ಅಥವಾ ಮಂಗಳವಾರ ದೆಹಲಿಗೆ ತೆರಳುತ್ತೇನೆ. ಕೇಂದ್ರ ಆರೋಗ್ಯ ಸಚಿವರನ್ನ ಭೇಟಿಯಾಗಿ ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಕೆ ಮಾಡುವಂತೆ ಮನವಿ ಮಾಡುತ್ತೇನೆ ಅಂತ ತಿಳಿಸಿದರು.

    ಇದೇ ವೇಳೆ ಕಾಂಗ್ರೆಸ್ ನಲ್ಲಿ ಶುರುವಾಗಿರೋ ಸಿಎಂ ಮತ್ತು ದಲಿತ ಸಿಎಂ ಕಿತ್ತಾಟದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು ಸುಧಾಕರ್, ಕಾಂಗ್ರೆಸ್ ನ ಆತಂರಿಕ ವಿಷಯದ ಬಗ್ಗೆ ನಾನು ಮಾತಾಡಲ್ಲ. ಸಾಮಾನ್ಯ ಪದ್ದತಿಯಲ್ಲಿ ಕಾಂಗ್ರೆಸ್ ನಲ್ಲಿ ಪಕ್ಷದ ಅಧ್ಯಕ್ಷರು ಅಥವಾ ಸಿಎಲ್‍ಪಿ ಲೀಡರ್ ಗಳು ಸಿಎಂ ಆಗ್ತಾರೆ. ಇವೆರೆಡು ಪ್ರತೀತಿ ಕಾಂಗ್ರೆಸ್ ನಲ್ಲಿ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ನಲ್ಲಿ ನಡೆದುಕೊಂಡ ಬಂದಿರೋ ಪದ್ಧತಿ ಇದಾಗಿದೆ ಅಂತ ಹೇಳಿದರು.

    ಕೊಡಗು ಮತ್ತು ಮೈಸೂರಿನಲ್ಲಿ ಕೋವಿಡ್ ಕೇಸ್ ಹೆಚ್ಚಳ ಇದೆ. ಹೀಗಾಗಿ ಇಂದು ಆ ಜಿಲ್ಲೆಗಳಿಗೆ ಪ್ರವಾಸ ಹೋಗ್ತಿದ್ದೇನೆ. ಕೊರೊನಾ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಿಯಂತ್ರಣಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತೆ ಎಂದು ಸಚಿವರು ಮಾಹಿತಿ ನೀಡಿದರು.

  • ಕೆಲಸದ ಒತ್ತಡದಿಂದಾಗಿ ವ್ಯಕ್ತಿಗೆ ಖಾಲಿ ಸಿರಿಂಜ್ ಚುಚ್ಚಿದ ನರ್ಸ್..!

    ಕೆಲಸದ ಒತ್ತಡದಿಂದಾಗಿ ವ್ಯಕ್ತಿಗೆ ಖಾಲಿ ಸಿರಿಂಜ್ ಚುಚ್ಚಿದ ನರ್ಸ್..!

    ಪಾಟ್ನಾ: ಮಹಾಮಾರಿ ಕೊರೊನಾ ವೈರಸ್ ದೇಶಕ್ಕೆ ವಕ್ಕರಿಸಿದ ಬಳಿಕ ಜನರ ಒಳದಲ್ಲ ಒಮದು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ನರ್ಸ್ ಗಳಂತು ತಮ್ಮ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಈ ಕೆಲಸದ ಒತ್ತಡ ಜನರನ್ನು ಯಾವ ಮಟ್ಟಕ್ಕೆ ಕರೆದೊಯ್ಯುತ್ತದೆ ಎಂಬುದಕ್ಕೆ ಬಿಹಾರದಲ್ಲಿ ನಡೆದ ಘಟನೆಯೇ ಸಾಕ್ಷಿ.

    ಹೌದು. ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹೋದ ವ್ಯಕ್ತಿಗೆ ನರ್ಸ್ ಒಬ್ಬರು ಖಾಲಿ ಸಿರಿಂಜ್ ಚುಚ್ಚಿದ ಘಟನೆ ಬಿಹಾರದ ಛಪ್ಪರಾ ನಗರದ ವಾರ್ಡ್ ನಂಬರ್ 1ರಲ್ಲಿ ನಡೆದಿದೆ.

    ನರ್ಸ್ ಇತರರೊಂದಿಗೆ ಮಾತನಾಡುತ್ತಾ ಸಿರಿಂಹ್ ಓಪನ್ ಮಾಡಿ ಯಾವುದೇ ಲಸಿಕೆಯ ಪ್ರಮಾಣವಿಲ್ಲದೆ ವ್ಯಕ್ತಿಗೆ ಚುಚ್ಚಿದ್ದಾರೆ. ಇದನ್ನು ವ್ಯಕ್ತಿಯ ಗೆಳೆಯ ವೀಡಿಯೋ ಮಾಡಿದ್ದು, ಈ ವೇಳೆ ಖಾಲಿ ಸಿರಿಂಜ್ ಚುಚ್ಚಿರೋದು ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನರ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಜಾಲತಾಣಿಗರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವ್ಯಾಕ್ಸಿನ್ ಕೊರತೆ- NO STOCK ಫಲಕ ಹಾಕಿದ ಆಸ್ಪತ್ರೆಗಳು

    ಈ ಸಂಬಂಧ ಅಧಿಕಾರಿ ಪ್ರತಿಕ್ರಿಯಿಸಿ, ಪ್ರಕರಣ ನಡೆದಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನರ್ಸ್ ಚಂದ ಕುಮಾರಿ(48)ಅವರಿಗೆ ನೋಟೀಸ್ ನಿಡಲಾಗಿದೆ. ಅಲ್ಲದೆ 48 ಗಂಟೆಯೊಳಗೆ ಸೂಕ್ತ ಕಾರಣ ನೀಡುವಂತೆ ಸೂಚಿಸಲಾಗಿದೆ. ಅಲ್ಲದೆ ಈಗಾಗಲೇ ನರ್ಸ್ ನ ಅಮಾನತು ಮಾಡಲಾಗಿದೆ ಎಂದರು.

    ಲಸಿಕಾ ಕೇಂದ್ರದಲ್ಲಿನ ಕೆಲಸದ ಒತ್ತಡದಿಂದ ನರ್ಸ್ ಈ ರೀತಿ ಮಾಡಿದ್ದಾರೆ. ಮುಂದೆ ಆ ವ್ಯಕ್ತಿ ಆಯ್ಕೆ ಮಾಡಿದ ದಿನ ಲಸಿಕೆ ನೀಡಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ನನ್ನೊಂದಿಗೆ ಇದೆಯಾ? ಕುಲದೀಪ್ ಸೆನ್‍ಗರ್ ಜೊತೆ?: ಉನ್ನಾವೋ ಪ್ರಕರಣದ ಸಂತ್ರಸ್ತೆ

  • ಕಾಂಗ್ರೆಸ್ ವತಿಯಿಂದ ರಾಜ್ಯದಲ್ಲಿ ಕೋವಿಡ್ ಡೆತ್ ಆಡಿಟ್ ಅಭಿಯಾನ ಡಿಕೆಶಿ

    ಕಾಂಗ್ರೆಸ್ ವತಿಯಿಂದ ರಾಜ್ಯದಲ್ಲಿ ಕೋವಿಡ್ ಡೆತ್ ಆಡಿಟ್ ಅಭಿಯಾನ ಡಿಕೆಶಿ

    ಬೆಂಗಳೂರು: ಕೋವಿಡ್ ನಿಂದಾಗಿ ಸಾವು-ನೋವು ಉಂಡವರು, ಉದ್ಯೋಗ, ಆರೋಗ್ಯ ಕಳೆದುಕೊಂಡವರು, ಆರ್ಥಿಕವಾಗಿ ಸಂಕಷ್ಟಕ್ಕೀಡಾದ ರೈತರು, ಕಾರ್ಮಿಕರು, ವರ್ತಕರು, ಬಡವರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಆತ್ಮಸ್ಥೈರ್ಯ ತುಂಬಿ, ಅವರಿಗೆ ನೆರವಾಗಲು ಕಾಂಗ್ರೆಸ್ ಪಕ್ಷ 30 ದಿನಗಳ ಅಭಿಯಾನ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

    ಕೋವಿಡ್ ಸಮಯದಲ್ಲಿ ಸರ್ಕಾರ ಏನು ಮಾಡಿತು ಎಂಬುದು ಬಹಳ ಮುಖ್ಯ. ದೇಶ ಹಾಗೂ ರಾಜ್ಯದಲ್ಲಿ ಸಂಕಷ್ಟಕ್ಕೀಡಾದವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಸರ್ಕಾರವನ್ನು ಕಾಂಗ್ರೆಸ್ ಆಗ್ರಹಿಸಿತ್ತು. 20 ಲಕ್ಷ ಕೋಟಿ ಪ್ಯಾಕೇಜ್ ನಿಂದ ಯಾರಿಗೆ ಅನುಕೂಲವಾಯಿತು ಎಂದು ಕೇಳಿದರೂ ಮಾಹಿತಿ ಕೊಡಲಿಲ್ಲ. ರಾಜ್ಯ ಸರ್ಕಾರದ ಪ್ಯಾಕೇಜ್ ಬಗ್ಗೆಯೂ ಯಾವುದೇ ಮಾಹಿತಿ ಸಿಗಲಿಲ್ಲ.

    ಕೋವಿಡ್ ನಿಂದ ಸತ್ತವರ ಆಡಿಟ್ ಮಾಡಿ ಎಂದು ಕೇಳಿದರೂ ಆ ಬಗ್ಗೆ ಸರ್ಕಾರ ಚಿಂತನೆ ಮಾಡಿಲ್ಲ. ಕೇವಲ ಸೀಮಿತ ಮಾನದಂಡಗಳನ್ನು ಇಟ್ಟುಕೊಂಡು, ಕೆಲವರಿಗೆ ಮಾತ್ರ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತು. ಇನ್ನು ಕೇಂದ್ರ ಸರ್ಕಾರ 4 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿ, 8 ತಾಸುಗಳಲ್ಲಿ ಅದನ್ನು ಹಿಂಪಡೆದಿದೆ. ಆಕ್ಸಿಜನ್ ಕೊರತೆ, ಹಾಸಿಗೆ ಸಿಗದೆ, ಚಿಕಿತ್ಸೆ ಸಿಗದೇ ಸತ್ತವರ ಸಂಖ್ಯೆ ಸರ್ಕಾರ ಕೊಟ್ಟಿರುವ ಅಂಕಿ-ಅಂಶಕ್ಕಿಂತ ಐದು ಪಟ್ಟು ಹೆಚ್ಚಾಗಿದೆ. ಡೆತ್ ಆಡಿಟ್ ಮಾಡುವುದಾಗಿ ಸಿಎಂ ಹೇಳಿಕೆ ಕೊಟ್ಟರೂ, ಆ ಸಂಬಂಧ ಆದೇಶ ಹೊರಡಿಸಲಿಲ್ಲ.

    ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಯಾರು ಕೋವಿಡ್ ನಿಂದ ನೊಂದಿದ್ದಾರೆ, ಬೆಂದಿದ್ದಾರೆ, ಜೀವ, ಜೀವನ ಕಳೆದುಕೊಂಡಿದ್ದಾರೆ, ಅವರನ್ನು ತಲುಪಲು ಪಕ್ಷ ಅಭಿಯಾನ ಹಮ್ಮಿಕೊಂಡಿದೆ. ಅಖಿಲ ಭಾರತ ಕಾಂಗ್ರೆಸ್ ಪಕ್ಷ ರಾಷ್ಟ್ರ ವ್ಯಾಪ್ತಿಯಲ್ಲಿ ಒಂದು ತಿಂಗಳ ಕಾಲ ಅಭಿಯಾನ ಹಮ್ಮಿಕೊಂಡು, ನಮಗೂ ಮಾರ್ಗದರ್ಶನ ನೀಡಿದೆ.

    ನಮ್ಮ ಎಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು, ಸೋತವರ ಜತೆ ಈ ಮಾಹಿತಿ ಹಂಚಿಕೊಳ್ಳುತ್ತೇವೆ. ಕೋವಿಡ್ ನಿಂದ ಪ್ರಾಣ, ಉದ್ಯೋಗ ಕಳೆದುಕೊಂಡು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವವರ ಬಗ್ಗೆ ಮಾಹಿತಿ ಕಲೆಹಾಕಿ, ಅವರಿಗೆ ಮಾನಸಿಕವಾಗಿ ಶಕ್ತಿ ತುಂಬಲು ಈ ಕಾರ್ಯಕ್ರಮ ರೂಪಿಸಲಾಗಿದೆ.

    ಪಂಚಾಯಿತಿಯಿಂದ ಪಾರ್ಲಿಮೆಂಟ್ ಕ್ಷೇತ್ರದವರೆಗೂ, ಬ್ಲಾಕ್ ಮಟ್ಟದಿಂದ ಟೌನ್ ಗಳವರೆಗೆ ಕೋವಿಡ್ ವಾರಿಯರ್ ಗಳನ್ನು ನೇಮಕ ಮಾಡಿ, ಸ್ಥಳೀಯ ನಾಯಕರ ಮುಂದಾಳತ್ವದಲ್ಲಿ ತಂಡ ರಚಿಸಿ ಕನಿಷ್ಠ 200 ಕುಟುಂಬಗಳನ್ನು ಭೇಟಿ ಮಾಡಿ, ಅವರಿಗೆ ಸಾಂತ್ವನ ಹೇಳುವ ಗುರಿ ಹೊಂದಲಾಗಿದೆ. ಕೋವಿಡ್ ನಿಂದ ಆ ಕುಟುಂಬ ಏನೆಲ್ಲಾ ಸಂಕಷ್ಟ ಅನುಭವಿಸಿದೆ, ನಾವು ಅವರಿಗೆ ಹೇಗೆ ನೆರವಾಗಬಹುದು, ಸರ್ಕಾರದ ಮೇಲೆ ಒತ್ತಡ ಹಾಕಿ ಏನೆಲ್ಲ ನೆರವು ಕೊಡಿಸಬಹುದು ಎಂಬ ಮಾಹಿತಿ ಪಡೆಯಲಾಗುವುದು.

    ತಮ್ಮ ಮನೆಯಲ್ಲಿ ಯಾರಾದರೂ ಸೋಂಕಿತರಾಗಿದ್ದಾರಾ? ಸೋಂಕಿನಿಂದ ಸತ್ತಿದ್ದಾರಾ? ಸತ್ತಿದ್ದರೆ ಅವರ ಹೆಸರು ಹಾಗೂ ವಯಸ್ಸು ಏನು? ಮೃತಪಟ್ಟವರು ಮನೆಯಲ್ಲಿ ದುಡಿಯುವ ವ್ಯಕ್ತಿಯಾಗಿದ್ದರಾ? ಕುಟುಂಬದಲ್ಲಿ ಕೋವಿಡ್/ ಲಾಕ್ ಡೌನ್ ನಿಂದ ಯಾರಾದರೂ ಉದ್ಯೋಗ ಕಳೆದುಕೊಂಡಿದ್ದಾರಾ? ಉದ್ಯೋಗ ಕಳೆದುಕೊಂಡಿದ್ದರೆ ಅವರ ಹೆಸರು ಹಾಗೂ ವಯಸ್ಸು? ಆ ಕುಟುಂಬಕ್ಕೆ ಅಗತ್ಯವಾಗಿರುವ ನೆರವು (ದಿನಸಿ, ಉದ್ಯೋಗ, ಶಿಕ್ಷಣ, ಆರ್ಥಿಕ ನೆರವು) ಏನು? ಎಂಬ ಮಾಹಿತಿ ಕಲೆಹಾಕಿ ಅದನ್ನು ಕೆಪಿಸಿಸಿಗೆ ಕಳುಹಿಸಿಕೊಡಬೇಕು. ನಂತರ ಅದನ್ನು ಎಐಸಿಸಿಗೆ ರವಾನಿಸಲಾಗುವುದು.

    ಸರ್ಕಾರದ ಪರಿಹಾರ ಪಡೆಯಲು ನೋಂದಣಿ ಮಾಡಿಸಿಕೊಳ್ಳುವ ದಿನಾಂಕವನ್ನು ಸರ್ಕಾರ 30ನೇ ತಾರೀಖಿನವರೆಗೆ ವಿಸ್ತರಿಸಿದ್ದು, ಹೀಗಾಗಿ ನಮ್ಮ ಕಾರ್ಯಕರ್ತರು ಎಲ್ಲ ವರ್ಗದವರ ಮಾಹಿತಿ ಪಡೆದು, ಅವರು ಪರಿಹಾರ ಪಡೆಯಲು ನೋಂದಣಿ ಮಾಡಿಸಬೇಕು ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ.

    ಜುಲೈ 1 ರಿಂದ 30 ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ನಮ್ಮ ನಾಯಕರು, ಪದಾಧಿಕಾರಿಗಳು ಪ್ರತಿ ಬ್ಲಾಕ್ ನಲ್ಲಿ ಕನಿಷ್ಠ 10 ಜನರ ತಂಡ ರಚಿಸಿ, ಜನರ ಧ್ವನಿಯಾಗಿ ಅವರ ಬೆನ್ನಿಗೆ ನಿಲ್ಲಬೇಕು. ಭವಿಷ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅನ್ಯಾಯವಾಗಿರುವ ಎಲ್ಲರಿಗೂ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುತ್ತದೆ. ಆದರೆ ಈಗ ಸದ್ಯದ ಮಟ್ಟಿಗೆ ಅವರಿಗೆ ನಮ್ಮ ಕೈಲಾದ ನೆರವು ನೀಡುತ್ತೇವೆ.

    1.20 ಲಕ್ಷ ಮರಣ ಪ್ರಮಾಣ ಪತ್ರ:
    ಕೋವಿಡ್ ನಿಂದ ಸತ್ತವರ ಸಂಖ್ಯೆ 30 ಸಾವಿರ ಎಂದು ಸರ್ಕಾರ ಹೇಳುತ್ತಿದೆ. ಆದರೆ ರಾಜ್ಯದಲ್ಲಿ 1.20 ಲಕ್ಷ ಮರಣ ಪ್ರಮಾಣ ಪತ್ರ ವಿತರಿಸಲಾಗಿದೆ. ಮರಣ ಪ್ರಮಾಣಪತ್ರದಲ್ಲಿ ಸಾವಿನ ಕಾರಣ ಹೇಳುವುದಿಲ್ಲ. ಹೀಗಾಗಿ ಅವರಿಗೆ ಪರಿಹಾರ ಸಿಗುವುದಿಲ್ಲ. ಹಾಗಾಗಿ ಜನರಲ್ಲಿ ತಿಳುವಳಿಕೆ ಮೂಡಿಸಿ, ಕೋವಿಡ್ ನಿಂದ ಸತ್ತಿರುವ ಎಲ್ಲರಿಗೂ ಪ್ರಮಾಣಪತ್ರ ಕೊಡಿಸಿ, ಪರಿಹಾರ ಕೊಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತದೆ. ಕೋವಿಡ್ ನಿಂದ ಸತ್ತರೆ ಬೇರೆ ಕಾರಣದ ಸಾವು ಎಂದು ಘೋಷಣೆ ಮಾಡಿರುವ ಉದಾಹರಣೆಗಳು ಇವೆ. ಹೀಗಾಗಿ ಕೋವಿಡ್ ನಿಂದ ಸತ್ತವರ ಕುಟುಂಬಕ್ಕೆ ಸಹಾಯ ಹಸ್ತ ನೀಡಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಸರ್ಕಾರ ಸಮೀಕ್ಷೆ ನಡೆಸಿ, ಪರಿಹಾರ ನೀಡಲು ಹಿಂದೇಟು ಹಾಕಿದೆ. ಹೀಗಾಗಿ ಕಾಂಗ್ರೆಸ್ ಕೋವಿಡ್ ವಾರಿಯರ್ಸ್ ಮನೆ, ಮನೆಗೂ ಹೋಗಿ ಅವರಿಗೆ ನೆರವಾಗಲಿದೆ.

    ನಮ್ಮ ಹೋರಾಟ, ಬಿಜೆಪಿಯವರ ಪ್ರಚಾರ:
    ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಹೋರಾಟ ಮಾಡಿತು. ನಾವು ಶಾಸಕರ ನಿಧಿಯಿಂದ 100 ಕೋಟಿ ಬಳಸಿಕೊಂಡು ಉಚಿತ ಲಸಿಕೆ ನೀಡುತ್ತೇವೆ ಎಂದು ಹೇಳಿದೆವು. ಆದರೆ ಅನುಮತಿ ನೀಡಲಿಲ್ಲ. ರಾಜ್ಯಪಾಲರನ್ನು ಭೇಟಿಯಾಗಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ಬರೆದೆವು. ನಂತರ ನ್ಯಾಯಾಲಯಗಳು ಮಧ್ಯಪ್ರವೇಶಿಸಿ ಲಸಿಕೆ ನೀಡುವಂತೆ ಚಾಟಿ ಬೀಸಿದವು. ಆದರೆ ಒಂದೇ ಒಂದು ದಿನ ರಾಜ್ಯ ಸರ್ಕಾರವಾಗಲಿ, ಸಂಸದರಾಗಲಿ ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡುವಂತೆ ಧ್ವನಿ ಎತ್ತಲಿಲ್ಲ. ಆದರೆ ಈಗ ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತು ಹಾಕಿಸಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ.

  • ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭಕ್ಕೆ ತಾಂತ್ರಿಕ ಸಮಿತಿ ಸಲಹೆ: ಸುಧಾಕರ್

    ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭಕ್ಕೆ ತಾಂತ್ರಿಕ ಸಮಿತಿ ಸಲಹೆ: ಸುಧಾಕರ್

    ಚಿಕ್ಕಬಳ್ಳಾಪುರ: ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಕೋವಿಡ್ ಲಸಿಕೆ ನೀಡಿ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಬೇಡ. ಲಸಿಕೆ ನೀಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತ ಟ್ಯಾಬ್ ಗಳನ್ನು ವಿತರಿಸಿ ಮಾತನಾಡಿದ ಅವರು, ಶಾಲಾ-ಕಾಲೇಜುಗಳ ಆರಂಭಕ್ಕೂ ಮುನ್ನವೇ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡಲಿದ್ದು, ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕ ಪಡೆದು ಕೋವಿಡ್ ವೈರಾಣು ವಿರುದ್ಧ ಸರ್ಕಾರ ಮಾಡುತ್ತಿರುವ ಹೋರಾಟದಲ್ಲಿ ಕೈ ಜೋಡಿಸಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಕಾಲೇಜುಗಳ ಆರಂಭಕ್ಕೂ ಮೊದಲೇ 18 ವರ್ಷ ತುಂಬಿದ ಎಲ್ಲರಿಗೂ ಲಸಿಕೆ ನೀಡಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು. ಇದನ್ನೂ ಓದಿ: 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ

    ನಿನ್ನೆಯವರೆಗೆ ರಾಜ್ಯದಲ್ಲಿ 2 ಕೋಟಿ ಲಸಿಕೆ ನೀಡಲಾಗಿದ್ದು, ಜೂನ್ 21ರಂದು ಹಮ್ಮಿಕೊಂಡಿದ್ದ ಒಂದು ದಿನದ ಲಸಿಕಾ ಮೇಳದಲ್ಲಿ 11 ಲಕ್ಷಕ್ಕೂ ಹೆಚ್ವು ಜನರಿಗೆ ಲಸಿಕೆ ನೀಡಿ ದಾಖಲೆ ಬರೆಯಲಾಗಿದೆ. ಈ ಪೈಕಿ 40ಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಲಸಿಕೆ ಹಾಕುವ ಕಾರ್ಯಕ್ರಮ ಮುಂದುವರೆಯಲಿದ್ದು ಇಡೀ ರಾಜ್ಯವನ್ನು ಕೋವಿಡ್ ಮುಕ್ತ ಮಾಡಲು ಸರ್ಕಾರ ಪಣ ತೊಟ್ಟಿದೆ ಎಂದರು.

    ಮೂರನೇ ಅಲೆ ಬರುವ ಸಾಧ್ಯತೆಗಳ ಬಗ್ಗೆ ತಜ್ಞರು ಸಲಹೆ ನೀಡಿರುವ ಕಾರಣ ಎಲ್ಲರೂ ಎರಡೂ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು. ಮಾಸ್ಕ್ ಧರಿಸುವುದನ್ನು ಮತ್ತು ವ್ಯಕ್ತಿಗತ ಅಂತರ ಕಾಪಾಡುವ ಮೂಲಕ ಸೋಂಕು ಹರಡದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

    ಇಂದಿನ ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದಕ್ಕೆ ಪೂರಕವಾಗಿ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೂ ಆನ್‍ಲೈನ್ ಶಿಕ್ಷಣ ದೊರೆಯುವಂತೆ ಉಚಿತ ಟ್ಯಾಬ್ ಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಸರ್ಕಾರದ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

  • ಎಲ್ಲರಿಗೂ ಉಚಿತ ವ್ಯಾಕ್ಸಿನ್ ಕೊಡಬೇಕು, ಮೂರನೇ ಅಲೆಗೂ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕು: ರಾಮಲಿಂಗಾ ರೆಡ್ಡಿ

    ಎಲ್ಲರಿಗೂ ಉಚಿತ ವ್ಯಾಕ್ಸಿನ್ ಕೊಡಬೇಕು, ಮೂರನೇ ಅಲೆಗೂ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕು: ರಾಮಲಿಂಗಾ ರೆಡ್ಡಿ

    ಬೆಂಗಳೂರು: ದೇಶದ ಶೇ.75ರಷ್ಟು ಜನರಿಗೆ ಉಚಿತವಾಗಿ ಲಸಿಕೆ ನೀಡುವ ಸರ್ಕಾರ ಉಳಿದ ಶೇ.25ರಷ್ಟು ಜನಕ್ಕೆ ಯಾಕೆ ಖಾಸಗಿಯವರ ಮೂಲಕ ನೀಡುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸರ್ಕಾರವೇ ಉಚಿತ ಲಸಿಕೆಯನ್ನು ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

    ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ ಅವರು, ಶೇ.75ರಷ್ಟು ಜನರಿಗೆ ಉಚಿತವಾಗಿ ಲಸಿಕೆ ನೀಡುವ ಸರ್ಕಾರ ಉಳಿದ ಶೇ.25ರಷ್ಟು ಜನರಿಗೆ ಯಾಕೆ ಉಚಿತ ಲಸಿಕೆ ನೀಡಲು ಸಾಧ್ಯವಿಲ್ಲ? ಈ ಶೇ.25ರಷ್ಟು ಜನರನ್ನು ಹೇಗೆ ವರ್ಗೀಕರಣ ಮಾಡಲಾಗುತ್ತದೆ? ಎಂದು ಪ್ರಶ್ನಿಸಿದರು.

    ಕೇಂದ್ರ ಸರ್ಕಾರಕ್ಕೆ ಲಸಿಕೆ ವಿಚಾರವಾಗಿ ಸಾಕಷ್ಟು ಗೊಂದಲಗಳಿವೆ. ಕೋವಿಡ್ ಮೊದಲ ಅಲೆ ಬಂದಾಗಲೇ ಸರ್ಕಾರ ಎಚ್ಚರ ವಹಿಸಬೇಕಿತ್ತು. ಲಸಿಕೆ ತಯಾರಿಕೆ ವಿಚಾರವಾಗಿ ಸರ್ಕಾರ ಕಾರ್ಯಪ್ರವೃತ್ತವಾಗಬೇಕಿತ್ತು. ಲಸಿಕೆ ಉತ್ಪಾದಿಸಲು ಇತರ ಕಂಪನಿಗಳಿಗೆ ಅವಕಾಶ ಕಲ್ಪಿಸಬೇಕಿತ್ತು. ಎರಡನೇ ಅಲೆ ಆರಂಭವಾಗುತ್ತದೆ ಎಂದು ಎಚ್ಚರಿಕೆ ಇದ್ದರೂ ಸರ್ಕಾರ ಎಚ್ಛೆತ್ತುಕೊಳ್ಳಲಿಲ್ಲ. ಬಿಹಾರ ಹಾಗೂ ಪಶ್ಚಿಮ ಬಂಗಾಳ ಚುನಾವಣೆ ಸಮಯದಲ್ಲೂ ಬಿಜೆಪಿ ಸರ್ಕಾರ ಉಚಿತ ಲಸಿಕೆ ಘೋಷಿಸಿತ್ತು. ಆದರೆ ನಂತರ ಮುಂಚೂಣಿ ವಾರಿಯರ್ಸ್, ಆನಂತರ ಹಿರಿಯರಿಗೆ, ತದನಂತರ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಎಂದು ಘೋಷಿಸಿದ್ದರು. ವಿರೋಧ ಪಕ್ಷಗಳು, ಮಾಧ್ಯಮಗಳಿಂದ ವ್ಯಾಪಕ ಟೀಕೆ ಆರಂಭವಾದ ನಂತರ, ಲಸಿಕೆ ಇದೆಯೋ ಇಲ್ಲವೋ ಎಂಬುದನ್ನು ಗಮನಿಸದೇ ಪ್ರಧಾನಿಗಳು ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಘೋಷಿಸಿದರು ಎಂದು ತಿಳಿಸಿದರು.

    ಜವಾಬ್ದಾರಿ ಸ್ಥಾನದಲ್ಲಿ ಕೂತಿರುವ ಪ್ರಧಾನಿಗಳು ಲಸಿಕೆ ಲಭ್ಯತೆ ಬಗ್ಗೆ ಚಿಂತಿಸದೇ ಸಾಂಕೇತಿಕವಾಗಿ ಲಸಿಕೆ ಅಭಿಯಾನ ಆರಂಭಿಸಿದರು. ನಂತರ ಕೇಂದ್ರ ಸರ್ಕಾರಕ್ಕೆ, ರಾಜ್ಯ ಸರ್ಕಾರಕ್ಕೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ವಿವಿಧ ದರ ನಿಗದಿ ಮಾಡಿದರು. ಕೋವ್ಯಾಕ್ಸಿನ್ ಬೆಲೆ ಒಂದು ಡೋಸ್ ಗೆ 900ರಿಂದ 1200 ರೂ.ವರೆಗೂ ನಿಗದಿ ಮಾಡಲಾಯಿತು. ಆ ಮೂಲಕ ಒಬ್ಬ ವ್ಯಕ್ತಿ ಲಸಿಕೆ ಪಡೆಯಲು 1800ರಿಂದ 2400 ರೂ. ವರೆಗೂ ವೆಚ್ಚ ಭರಿಸಬೇಕಾಯಿತು. ಒಂದೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಾಗದಿದ್ದರೆ, ಖಾಸಗಿ ಆಸ್ಪತ್ರೆಗಳಿಗೆ ಮಾತ್ರ ಲಸಿಕೆ ಪೂರೈಕೆಯಾಗುತ್ತಿತ್ತು. ಕೇಂದ್ರ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಉತ್ತೇಜನ ನೀಡಿತ್ತು. ಈ ಬಗ್ಗೆ ಟೀಕೆಗಳು ವ್ಯಕ್ತವಾಯಿತು. ನಂತರ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತೀಯ ವೈದ್ಯಕೀಯ ಸಮಿತಿಯು ಆರೋಗ್ಯ ಮಂತ್ರಿಗಳಿಗೆ ನಿದ್ದೆಯಿಂದ ಎದ್ದೇಳಿ ಎಂದು ಪತ್ರ ಬರೆಯಲಾಯಿತು. ಇದೆಲ್ಲದರ ನಂತರ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಲಸಿಕೆಗಾಗಿ ಮೀಸಲಿಟ್ಟ 35 ಸಾವಿರ ಕೋಟಿ ಹಣದ ಲೆಕ್ಕ ಕೇಳಿದ ನಂತರ ಮೂರು ತಿಂಗಳ ಕಾಲ ಮೆನೆಯಿಂದಾಚೆಗೆ ಬಾರದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಗಳು 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಎಂದು ಘೋಷಿಸಿದರು ಎಂದರು. ಇದನ್ನೂ ಓದಿ: ಕೊವಾಕ್ಸಿನ್ ಶೇ.77.8ರಷ್ಟು ಪರಿಣಾಮಕಾರಿ – 3ನೇ ಕ್ಲಿನಿಕಲ್ ಟ್ರಯಲ್ ವರದಿ ಸಲ್ಲಿಕೆ

    ಕೇಂದ್ರ ಸರ್ಕಾರ ತನ್ನ ನೂತನ ಲಸಿಕೆ ನೀತಿಯಲ್ಲಿ 18-44 ವಯೋಮಾನದವರಲ್ಲಿ ಶೇ.75ರಷ್ಟು ಲಸಿಕೆ ಉಚಿತವಾಗಿ ನೀಡುತ್ತೇವೆ. ಉಳಿದ ಶೇ.25ರಷ್ಟನ್ನು ಖಾಸಗಿ ಆಸ್ಪತ್ರೆಗಳ ಮೂಲಕ ನೀಡುತ್ತೇವೆ ಎಂದು ಹೇಳಿದೆ. ದೇಶದ ಜನಸಂಖ್ಯೆ 138 ಕೋಟಿ ಜನ. ಕೇಂದ್ರ ಸರ್ಕಾರ ಹೇಳುವ ಶೇ.25ರಷ್ಟು ಜನ ಎಂದರೆ ಸುಮಾರು 34.5 ಕೋಟಿಯಷ್ಟು ಜನರು ಬರುತ್ತಾರೆ. ಅದರಲ್ಲಿ ಶೇ.61ರಷ್ಟು ಜನ 18 ವರ್ಷ ಮೇಲ್ಪಟ್ಟವರಾಗಿದ್ದಾರೆ. ಅಂದರೆ ಸುಮಾರು 20 ಕೋಟಿ ಜನ 18 ವರ್ಷ ಮೇಲ್ಪಟ್ಟವರು ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಬೇಕಾಗಿದೆ. ಒಬ್ಬ ವ್ಯಕ್ತಿಗೆ ಪ್ರತಿ ಡೋಸ್ ಗೆ 300 ರೂ.ನಂತೆ ಎರಡು ಡೋಸ್ ಗೆ 600 ರೂ ಖರ್ಚು ಮಾಡಿದರೆ ಸುಮಾರು 54 ಸಾವಿರ ರೂ.ನಷ್ಟು ಕೋಟಿಯಷ್ಟು ವೆಚ್ಚ ತಗುಲುತ್ತದೆ. ಕೇಂದ್ರ ಸರ್ಕಾರ ಈಗಾಗಲೇ 35 ಸಾವಿರ ಕೋಟಿ ಬಜೆಟ್ ನಲ್ಲಿ ಮೀಸಲಿಟ್ಟದ್ದು, ಇನ್ನು 19 ಸಾವಿರ ಕೋಟಿಯನ್ನು ಕೊಟ್ಟರೆ ಈ ಶೇ.25ರಷ್ಟು ಜನರಿಗೂ ಉಚಿತವಾಗಿ ಸರ್ಕಾರವೇ ಲಸಿಕೆ ನೀಡಬಹುದಾಗಿದೆ. ಆಗ ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಿದಂತಾಗುತ್ತದೆ ಎಂದು ವಿವರಿಸಿದರು.

    ಇದೇ ಶೇ.25ರಷ್ಟು ಜನ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದರೆ ಒಬ್ಬರಿಗೆ ಕನಿಷ್ಠ ಸರಾಸರಿಯಲ್ಲಿ 2 ಸಾವಿರ ರೂ. ನಂತೆ ಎಷ್ಟು ಕೋಟಿ ಹಣ ಖರ್ಚಾಗುತ್ತದೆ ಎಂಬುದನ್ನು ಗಮನಿಸಬೇಕು. ಈ ಶೇ.25ರಷ್ಟು ಜನ ಯಾವ ಪಾಪ ಮಾಡಿದ್ದರು? ಅವರಿಗೆ ಸರ್ಕಾರ ಯಾಕೆ ಉಚಿತ ಲಸಿಕೆ ನೀಡಲು ನಿರಾಕರಿಸುತ್ತದೆ? ಇವರಿಗೆ ಸರ್ಕಾರ ಉಚಿತವಾಗಿ ಲಸಿಕೆ ನೀಡಿದರೆ 8- 9 ಸಾವಿರ ಕೋಟಿ ರೂ. ನಲ್ಲಿ ಮುಗಿಯುತ್ತದೆ, ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದರೆ ಜನರಿಗೆ 50 ಸಾವಿರ ಕೋಟಿಗಿಂತ ಹೆಚ್ಚು ಹೊರೆ ಬೀಳುತ್ತದೆ. ಇದು ಸರ್ಕಾರದ ದ್ವಂದ್ವ ನೀತಿಗೆ ಸಾಕ್ಷಿ. ಒಬ್ಬೊಬ್ಬರಿಗೆ ಒಂದಂದು ನ್ಯಾಯಾ ಯಾಕೆ ಎಂಬುದು ನಮ್ಮ ಪ್ರಶ್ನೆ. ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಪ್ರಧಾನಿಗಳನ್ನು ಒತ್ತಾಯಿಸುತ್ತದೆ ಎಂದರು.

    ನಮ್ಮ ಕ್ಷೇತ್ರದಲ್ಲಿ ಇದುವರಿಗೂ 1.30 ಲಕ್ಷದಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ನಮ್ಮ ರಾಜ್ಯದ ಜನರಿಗೆ ಆಕ್ಸಿಜನ್, ಲಸಿಕೆ ಎಲ್ಲವೂ ನ್ಯಾಯಾಲಯದ ಸೂಚನೆ ಹಾಗೂ ಮಾಧ್ಯಮಗಳ ಟೀಕೆಯಿಂದ ಸಿಕ್ಕಿದೆ. ಆದರೆ ಸರ್ಕಾರ ಮಾತ್ರ ತಾವೇ ಈ ಸಾಧನೆ ಮಾಡಿರುವಂತೆ ಪತ್ರಿಕೆಗಳಲ್ಲಿ ಪುಟಗಟ್ಟಲೆ ಜಾಹೀರಾತು ನೀಡುತ್ತಿದ್ದಾರೆ ಎಂದು ತಿಳಿಸಿದರು.

    ಮೂರನೇ ಅಲೆ ರಾಜ್ಯದಲ್ಲಿ ಸುಮಾರು 1.50 ಲಕ್ಷ ಮಕ್ಕಳಿಗೆ ಸೋಂಕು ತಗುಲಲಿದೆ ಎಂದು ನಾರಾಯಣ ಹೃದಯಾಲಯದ ತಜ್ಞ ವೈದ್ಯರಾದ ದೇವಿ ಶೆಟ್ಟಿ ಅವರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ಮೊದದಲ ಹಾಗೂ ಎರಡನೇ ಅಲೆಯಲ್ಲಿ ಎಡವಿದ್ದು, ಮೂರನೆ ಅಲೆಯನ್ನು ಎದುರಿಸಲು ಸಿದ್ಧವಾಗಬೇಕು. ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಸುಳ್ಳು ಸಾವಿನ ಸಂಖ್ಯೆಗಳನ್ನು ನೀಡಿದೆ. ನಮ್ಮ ರಾಜ್ಯದಲ್ಲೂ 30 ಸಾವಿರ ಮಂದಿ ಸಾವಿನ ಲೆಕ್ಕ ತೋರಿಸುತ್ತಿದ್ದು, 1 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಸರ್ಕಾರ ಮೂರನೇ ಅಲೆ ವಿಚಾರವಾಗಿ ಸರ್ವಪಕ್ಷ ಹಾಗೂ ತಜ್ಞರ ಸಭೆ ಕರೆದು ಎಲ್ಲರ ಸಲಹೆಗಳನ್ನು ಪರಿಗಣಿಸಬೇಕು ಎಂದು ಸಲಹೆ ನೀಡಿದರು.

    ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದ ಚರ್ಚೆಗೆ ಸಂಬಂಧಿಸಿದಂತೆ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಎಲ್ಲರಿಗೂ ಸೂಚನೆಯನ್ನು ನೀಡಿದ್ದು, ಪ್ರತಿಯೊಬ್ಬರೂ ಅವರ ನಿರ್ದೇಶನವನ್ನು ಪಾಲಿಸಬೇಕು ಎಂದಷ್ಟೇ ಹೇಳುತ್ತೇನೆ. ಅದನ್ನು ಹೊರತಾಗಿ ಬೇರೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.