Tag: ಕೊರೊನಾ ವ್ಯಾಕ್ಸಿನ್

  • ಸಾರ್ವಜನಿಕರಿಗೆ ಕೊರೊನಾ ವ್ಯಾಕ್ಸಿನ್ – ಮಾಹಿತಿ ನೀಡಲು ಜನ ಹಿಂದೇಟು

    ಸಾರ್ವಜನಿಕರಿಗೆ ಕೊರೊನಾ ವ್ಯಾಕ್ಸಿನ್ – ಮಾಹಿತಿ ನೀಡಲು ಜನ ಹಿಂದೇಟು

    – ಮಾಹಿತಿ ಸಿಗದೇ ಆಶಾ, ಹೆಲ್ತ್ ವರ್ಕರ್ಸ್ ಪರದಾಟ

    ಬೆಂಗಳೂರು: ಎರಡನೇ ಅಲೆ ಆತಂಕದ ಮಧ್ಯೆ ಸಾರ್ವಜನಿಕರಿಗೆ ವ್ಯಾಕ್ಸಿನ್ ವಿತರಿಸಲು ಸಿದ್ಧತೆ ನಡೆದಿದೆ. ಹೈ ರಿಸ್ಕ್ ಕೇಸ್ ಮತ್ತೆ 50 ವರ್ಷ ಮೇಲ್ಪಟ್ಟವರ ಪಟ್ಟಿ ಸಿದ್ಧತೆಗೆ ಆರೋಗ್ಯ ಇಲಾಖೆ ಹರಸಾಹಸ ಪಡ್ತಿದೆ. ಮನೆ ಮನೆ ಸರ್ವೇ ವೇಳೆ ವ್ಯಾಕ್ಸಿನ್ ಡೇಟಾ ಎಂಟ್ರಿಗೆ ಸಾರ್ವಜನಿಕರು ಮಾಹಿತಿ ಕೊಡಲು ಹಿಂದೇಟು ಹಾಕುತ್ತಿದ್ದು, ಮಾಹಿತಿ ಸಿಗದೇ ಆಶಾ ಕಾರ್ಯಕರ್ತೆಯರು ಆರೋಗ್ಯಾಧಿಕಾರಿಗಳ ಪರದಾಟ ಪಬ್ಲಿಕ್ ರಿಯಾಲಿಟಿ ಚೆಕ್ ನಲ್ಲಿ ಬಯಲಾಗಿದೆ.

    ಮಾರ್ಚ್ 1 ರಿಂದ ಸಾರ್ವಜನಿಕರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲು ಆರೋಗ್ಯ ಇಲಾಖೆ ಸಜ್ಜಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮತ್ತು ನಾನಾ ಕಾಯಿಲೆಗಳಿಂದ ಬಳಲುತ್ತಾ ಇರೋ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ನಿರ್ಧಾರ ಮಾಡಿದ್ದಾರೆ. ಆದರೆ ರಾಜ್ಯದಲ್ಲಿ ಹೈರಿಸ್ಕ್ ಜನ, 50 ವರ್ಷ ಮೇಲ್ಪಟ್ಟವರು ಮತ್ತು ಬಹು ಕಾಯಿಲೆಯಿಂದ ಬಳಲುತ್ತಾ ಇರೋರು ಎಷ್ಟು ಜನ ಇದ್ದಾರೆ? ಎಷ್ಟು ವ್ಯಾಕ್ಸಿನ್ ಕೊಡಬೇಕು? ಫಲಾನುಭವಿಗಳು ಎಷ್ಟು ಆಗ್ತಾರೆ ಅಂತಾ ತಿಳಿಯಲು ಸರ್ಕಾರ ಸರ್ವೇ ನಡೆಸುತ್ತಿದೆ. ಈ ಸರ್ವೇಯನ್ನ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಮತ್ತು ಸ್ವಯಂ ಸೇವಕರು ನಡೆಸುತ್ತಿದ್ದಾರೆ. ಆದರೆ ಈ ಸರ್ವೇ ವೇಳೆ ಸಾರ್ವಜನಿಕರು ಸರಿಯಾಗಿ ನೀಡುತ್ತಿಲ್ಲ. ಸ್ವತಃ ಪಬ್ಲಿಕ್ ಟಿವಿ ಆರೋಗ್ಯ ಸಿಬ್ಬಂದಿ ಜೊತೆ ಸರ್ವೇಗೆ ಇಳಿದಾಗ ಅಲ್ಲಿನ ರಿಯಾಲಿಟಿ ಬಯಲಾಗಿದೆ.

    ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಜೊತೆ ಸರ್ಬೇಗೆ ಪಬ್ಲಿಕ್ ಟಿವಿ ಇಳಿಯಿತು. ಪ್ಯಾಲೇಸ್ ಗುಟ್ಟಹಳ್ಳಿಯ ಜಟಕಾಸ್ಟಾಂಡ್ ವಸತಿ ಗೃಹದ ಸಂಕೀರ್ಣದ ಬಳಿ ಸರ್ವೇಗೆ ಇಳಿದಾಗ ಅಲ್ಲಿನ ಮನೆ ಅವರು ಸ್ಪಂದಿಸಿದ್ರು. ಆರೋಗ್ಯ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ರು. ವ್ಯಾಕ್ಸಿನ್ ತೆಗೆದುಕೊಳ್ಳೋದು ಉತ್ತಮ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದರು.

    ಬಾಂಧವ್ಯ ನಗರದಲ್ಲಿ ಸರ್ವೆಗೆ ಅಂತಾ ಒಂದು ಮನೆಗೆ ತೆರಳಿದೆವು. ಅಲ್ಲಿನ ನಿವಾಸಿ ನಿಮಗೆ ಎಷ್ಟು ವಯಸ್ಸು ಅಂದರೆ ಒಂದು ಬಾರಿ 49 ವರ್ಷ ಅಂತಾರೆ. ಒಂದು ಬಾರಿ 51 ವರ್ಷ ಅಂತಾರೆ. ಮನೆಯಲ್ಲಿಯೇ ಇದ್ದು ಆಧಾರ್ ಕಾರ್ಡ್ ವೋಟರ್ ಐಡಿ ಕೇಳಿದ್ರೆ ಇಲ್ಲ ಅಂತಾರೆ. ವ್ಯಾಕ್ಸಿನ್ ಮಾತ್ರ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಾರೆ. ಕೆಲವರು ನಾವು ಆರೋಗ್ಯವಾಗಿದ್ದು, ಲಸಿಕೆ ಬೇಡ ಅಂತ ಹೇಳುತ್ತಾರೆ.

    ಪಬ್ಲಿಕ್ ಟಿವಿ ದಿವಾನರ ಪಾಳ್ಯದಲ್ಲೂ ಈ ಬಗ್ಗೆ ರಿಯಾಲಿಟಿ ಚೆಕ್ ನಡೆಸಿತ್ತು. ದಿವಾನರ ಪಾಳ್ಯದಲ್ಲಿ ಮತ್ತಿಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರು, ಮನೆ ಮನೆಗೆ ಹೋಗಿ ಸರ್ವೇ ನಡೆಸಿದರು. ಆದರೆ ವಾರ್ಡ್ ನ ಮನೆ ಮನೆಗೆ ಹೋದಾಗ ಅಲ್ಲಿಯ ಬಹುತೇಕ ನಿವಾಸಿಗಳು ಆರೋಗ್ಯ ಸಿಬ್ಬಂದಿಗಳಿಗೆ ಸ್ಪಂದಿಸಲಿಲ್ಲ. ಇದರಿಂದ ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಅಧಿಕಾರಿಗಳು ಹೈರಾಣಾದರು.

  • ಮಾರ್ಚ್ 1 ರಿಂದ ಹಿರಿಯ ನಾಗರಿಕರಿಗೆ ಉಚಿತ ಕೊರೊನಾ ಲಸಿಕೆ – ಕೇಂದ್ರ ಸರ್ಕಾರ

    ಮಾರ್ಚ್ 1 ರಿಂದ ಹಿರಿಯ ನಾಗರಿಕರಿಗೆ ಉಚಿತ ಕೊರೊನಾ ಲಸಿಕೆ – ಕೇಂದ್ರ ಸರ್ಕಾರ

    ನವದೆಹಲಿ: ಹಿರಿಯ ನಾಗರಿಕರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ 2ಕ್ಕಿಂತ ಹೆಚ್ಚು ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಸರ್ಕಾರ ತಿಳಿಸಿದೆ.

    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಕಾಶ್ ಜಾವಡೇಕರ್, ಮಾರ್ಚ್ 1ರಿಂದ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಎರಡರಲ್ಲೂ ಲಸಿಕೆ ಪಡೆಯಬಹುದಾಗಿದ್ದು, 45 ವರ್ಷ ಮೇಲ್ಪಟ್ಟವರು ತಮಗೆ 2ಕ್ಕಿಂತ ಹೆಚ್ಚು ಕಾಯಿಲೆಗಳು ಇರುವ ಬಗ್ಗೆ ಸರ್ಟಿಫಿಕೇಟ್ ತೋರಿಸಿ ಲಸಿಕೆ ಪಡೆಯಬಹುದಾಗಿದೆ ಎಂದು ಹೇಳಿದರು.

    ಸುಮಾರು 10 ಸಾವಿರಕ್ಕೂ ಅಧಿಕ ಸರ್ಕಾರಿ ಕೇಂದ್ರಗಳು, 20 ಸಾವಿರಕ್ಕೂ ಅಧಿಕ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ವ್ಯಾಕ್ಸಿನ್ ಪಡೆಯಬಹುದಾಗಿದ್ದು, ಖಾಸಗಿ ಕೇಂದ್ರಗಳಲ್ಲಿ ಪಡೆಯುವವರು ಹಣ ಪಾವತಿಸಬೇಕಾಗುತ್ತದೆ. ಒಂದು ಡೋಸ್‍ಗೆ ಎಷ್ಟು ಹಣ ನೀಡಬೇಕು ಎಂಬುದನ್ನು ಎರಡ್ಮೂರು ದಿನಗಳಲ್ಲಿ ತಿಳಿಸಲಾಗುವುದು. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದರು.

    ಜನವರಿ 16ರಿಂದ ಕೊವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ವಿತರಣಾ ಪ್ರಕ್ರಿಯೆ ಆರಂಭವಾಗಿದ್ದು, ಆರಂಭದಲ್ಲಿ ಆರೋಗ್ಯ ಸಿಬ್ಬಂದಿ ಬಳಿಕ ಮುಂಚೂಣಿಯಲ್ಲಿರುವ ಸರ್ಕಾರಿ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು. ಈಗ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ 2ಕ್ಕೂ ಹೆಚ್ಚು ಖಾಯಿಲೆಯಿಂದ ನರಳುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ.

    ಆರಂಭದಲ್ಲಿ 50 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ವ್ಯಾಕ್ಸಿನ್ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಬಳಿಕ ವಯಸ್ಸಿನ ಅಂತರವನ್ನು 60 ವರ್ಷಕ್ಕೆ ಹೆಚ್ಚಿಸಲಾಗಿದೆ. 60 ವರ್ಷ ಮೇಲ್ಪಟ್ಟವರು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಪಡೆಯಬೇಕಾದಲ್ಲಿ ಕೋ-ವಿನ್ ಆ್ಯಪ್ ಕಡ್ಡಾಯವಾಗಿ ಇರಬೇಕು ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ಬೆಳಗಾವಿಯಲ್ಲಿ ವ್ಯಾಕ್ಸಿನ್ ಪಡೆದ 18 ಜನರಿಗೆ ಜ್ವರ-  ಹೆದರುವ ಅಗತ್ಯವಿಲ್ಲ ಎಂದ ಆರೋಗ್ಯ ಇಲಾಖೆ

    ಬೆಳಗಾವಿಯಲ್ಲಿ ವ್ಯಾಕ್ಸಿನ್ ಪಡೆದ 18 ಜನರಿಗೆ ಜ್ವರ- ಹೆದರುವ ಅಗತ್ಯವಿಲ್ಲ ಎಂದ ಆರೋಗ್ಯ ಇಲಾಖೆ

    ಬೆಳಗಾವಿ: ಕೊರೊನಾ ಲಸಿಕೆ ಪಡೆದು ಜಿಲ್ಲೆಯಲ್ಲಿ 18 ಜರಿಗೆ ಸಾಧಾರಣ ಜ್ವರ ಮತ್ತು ಮೈಕೈ ನೋವು ಕಂಡುಬಂದಿದೆ. ಆದರೆ ಲಸಿಕೆ ಪಡೆದಾಗ ಇವೆಲ್ಲ ಸಹಜ ಯಾರೂ ಹೆದರುವ ಅಗತ್ಯವಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಈ ವರೆಗೆ ಮೂರು 3,500 ಜನ ಲಸಿಕೆ ಪಡೆದಿದ್ದು, ಒಟ್ಟು 35,960 ಜನರಿಗೆ ಲಸಿಕೆ ನೀಡಬೇಕಾಗಿದೆ. ಲಸಿಕೆ ಪಡೆದ ಕರೊನಾ ವಾರಿಯರ್ಸ್ ಸುರಕ್ಷಿತ ಮತ್ತು ಆರೋಗ್ಯವಾಗಿದ್ದಾರೆ. ಮುಂದಿನ ದಿನಗಳಲ್ಲಿ ಲಸಿಕೆ ಪಡೆಯುವ ಫಲಾನುಭವಿಗಳ ಪಟ್ಟಿ ದುಪ್ಪಟ್ಟು ಆಗಲಿದೆ ಎಂದು ಜಿಲ್ಲಾ ಲಸಿಕಾಧಿಕಾರಿ ಡಾ.ಗಡಾದ ತಿಳಿಸಿದ್ದಾರೆ.

    ಕೊವಿಶೀಲ್ಡ್ ಲಸಿಕೆಯನ್ನು ಪಡೆದ ಕೆಲವರಿಗೆ ಆರೋಗ್ಯ ತೊಂದರೆಯಾಗುತ್ತಿದೆ ಎಂದು ಗಾಳಿ ಸುದ್ದಿ ಹರಡುತ್ತಿದ್ದು, ಇದಕ್ಕೆ ಯಾರೂ ಕಿವಿಗೊಡಬಾರದು. ವ್ಯಾಕ್ಸಿನ್ ಪಡೆದಾಗ ಕೆಲವು ಸಣ್ಣಪುಟ್ಟ ಜ್ವರ ಹಾಗೂ ಮೈಕೈನೋವು ಸಹಜವಾಗಿರುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳ ಅಧಿಕಾರಿಗಳು ಹಾಗೂ ಲಸಿಕಾ ಸಿಬ್ಬಂದಿ ಜೊತೆ ನಿರಂತರ ಸಂಪರ್ಕ ಸಾಧಿಸಲಾಗುತ್ತಿದೆ.

    ಆನ್‍ಲೈನ್ ಮೂಲಕ ಜಿಲ್ಲಾ ಲಸಿಕಾಧಿಕಾರಿಗಳ ಜೊತೆ ವಿಡಿಯೋ ಸಂವಾದ ಆರಂಭವಾಗಿದೆ. ಪ್ರತಿ ತಾಲೂಕಿನಿಂದ ಎಲ್ಲ ಲಸಿಕಾ ಸಿಬ್ಬಂದಿ ಮುಖ್ಯಸ್ಥರ ಜೊತೆ ಜಿಲ್ಲಾ ಲಸಿಕಾಧಿಕಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ಲಸಿಕೆ ಪಡೆದವರಿಗೆ ಯಾರಿಗಾದರೂ ರಿಯಾಕ್ಷನ್ ಆರಂಭವಾದರೆ ತಕ್ಷಣ ಚಿಕಿತ್ಸೆ ನೀಡುವ ತಂಡ 24 ಗಂಟೆ ಕಾರ್ಯಗತವಾಗುತ್ತದೆ.

  • ಚಿತ್ರದುರ್ಗದಲ್ಲಿ ರೀಜನಲ್ ವ್ಯಾಕ್ಸಿನ್ ಸ್ಟೋರೇಜ್ ಸೆಂಟರ್ ತೆರೆಯಲು ಇಲಾಖೆ ಸಜ್ಜು

    ಚಿತ್ರದುರ್ಗದಲ್ಲಿ ರೀಜನಲ್ ವ್ಯಾಕ್ಸಿನ್ ಸ್ಟೋರೇಜ್ ಸೆಂಟರ್ ತೆರೆಯಲು ಇಲಾಖೆ ಸಜ್ಜು

    ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಇಂದು ಅಹಮ್ಮದಾಬಾದ್, ಹೈದರಾಬಾದ್ ಹಾಗೂ ಪೂನಾದಲ್ಲಿ ಸಿದ್ಧವಾಗಿರುವ ಕೋವಿಡ್ ವ್ಯಾಕ್ಸಿನ್ ಕೋಲ್ಡ್ ಸ್ಟೋರೇಜ್ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಬೆನ್ನಲ್ಲೇ ಮಧ್ಯಕರ್ನಾಟಕದ ಪ್ರಮುಖ ಜಿಲ್ಲೆ ಎನಿಸಿರುವ ಕೋಟೆನಾಡು ಚಿತ್ರದುರ್ಗದಲ್ಲೂ ಸಹ ರೀಜನಲ್ ವ್ಯಾಕ್ಸಿನ್ ಸ್ಟೋರೇಜ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ.

    ಚಿತ್ರದುರ್ಗದ ಡಿಹೆಚ್ ಓ ಕಚೇರಿಯಲ್ಲಿ ವ್ಯಾಕ್ಸಿನ್ ಸಂಗ್ರಹಣ ಘಟಕ ತೆರೆಯಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಈ ವ್ಯಾಕ್ಸಿನ್ ಸೆಂಟರ್ ನಲ್ಲಿ ಸುಮಾರು 30 ಲಕ್ಷ ದೋಸ್ ನಷ್ಟು ವ್ಯಾಕ್ಸಿನ್ ಸಂಗ್ರಹಿಸಿಡುವ ಸಾಮಥ್ರ್ಯವಿದೆ. ಅಲ್ಲದೇ ಚಿತ್ರದುರ್ಗದಿಂದ ಮಧ್ಯಕರ್ನಾಟಕದಲ್ಲಿರುವ ಶಿವಮೊಗ್ಗ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ವ್ಯಾಕ್ಸಿನ್ ಸಪ್ಲೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಕರ್ನಾಟಕದ ಮಧ್ಯಭಾಗದಲ್ಲಿರುವ ಚಿತ್ರದುರ್ಗದಿಂದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ವ್ಯಾಕ್ಸಿನ್ ಸಪ್ಲೆ ಮಾಡಲು ಅನುಕೂಲವಾಗಬಹುದೆಂಬ ಉದ್ದೇಶದಿಂದ ಇಲ್ಲಿ ವ್ಯಾಕ್ಸಿನ್ ಸಂಗ್ರಹಣ ಕೇಂದ್ರ ತೆರೆಯಲಾಗಿದೆ ಎಂದು ಚಿತ್ರದುರ್ಗ ಡಿಹೆಚ್ ಓ ಡಾ. ಪಾಲಾಕ್ಷ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

  • ವ್ಯಾಕ್ಸಿನ್ ಹಂಚಿಕೆಗೆ ಕೇಂದ್ರದ ತಯಾರಿ- ಮೂರು ತಂಡಗಳು ರಚಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ

    ವ್ಯಾಕ್ಸಿನ್ ಹಂಚಿಕೆಗೆ ಕೇಂದ್ರದ ತಯಾರಿ- ಮೂರು ತಂಡಗಳು ರಚಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ

    ನವದೆಹಲಿ: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ವ್ಯಾಕ್ಸಿನ್ ಹಂಚಿಕೆ ಸಿದ್ಧತೆಯಲ್ಲಿರುವ ಕೇಂದ್ರ ಸರ್ಕಾರ ಇದಕ್ಕಾಗಿ ಮೂರು ತಂಡಗಳನ್ನು ರಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.

    ಸುಗಮ ವ್ಯಾಕ್ಸಿನ್ ಹಂಚಿಕೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ‘ಪ್ರಧಾನ ಕಾರ್ಯ ಪಡೆ’, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಥವಾ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ‘ರಾಜ್ಯ ಕಾರ್ಯಪಡೆ’ ಹಾಗೂ ಜಿಲ್ಲಾಧಿಕಾರಗಳ ನೇತೃತ್ವದಲ್ಲಿ ‘ಜಿಲ್ಲಾ ಕಾರ್ಯಪಡೆ’ ರಚಿಸಲು ಸೂಚಿಸಲಾಗಿದೆ.

    ಈ ಮೂರು ತಂಡಗಳ ನೇತೃತ್ವದಲ್ಲಿ ದೇಶಕ್ಕೆ ವ್ಯಾಕ್ಸಿನ್ ಹಂಚಿಕೆಯಾಗಲಿದ್ದು, ವ್ಯಾಕ್ಸಿನ್ ಆಗಮನಕ್ಕೂ ಮುನ್ನ ಗ್ರೌಂಡ್ ಲೆವಲ್ ನಲ್ಲಿ ವಿತರಣೆ ಲೆಕ್ಕಾಚಾರ ಹಾಗೂ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದ್ದು, ಇದಕ್ಕಾಗಿ ಈ ಮೂರು ತಂಡಗಳಿಗೆ ಪ್ರತ್ಯೇಕವಾದ ಜವಾಬ್ದಾರಿ ವಹಿಸಲಾಗಿದೆ.

    ರಾಜ್ಯದ ಪ್ರಧಾನ ಕಾರ್ಯಪಡೆಯು ವ್ಯಾಕ್ಸಿನ್ ಹಂಚಿಕೆಯಲ್ಲಿ ಎಲ್ಲಾ ಇಲಾಖೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲಿದೆ ಮತ್ತು ಜನರು ಸಮರ್ಪಕವಾಗಿ ವ್ಯಾಕ್ಸಿನ್ ಹಂಚಿಕೆ ಅಭಿಯಾನದಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕಿದೆ. ಅಲ್ಲದೇ ರಾಜ್ಯಕ್ಕೆ ಆಗಮಿಸುವ ವ್ಯಾಕ್ಸಿನ್‍ಗಳ ಟ್ರ್ಯಾಕಿಂಗ್ ಮಾಡುವುದು ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಲಸಿಕೆಯ ಬಗ್ಗೆ ತಪ್ಪು ಮಾಹಿತಿ ಮತ್ತು ವದಂತಿಗಳಿಗೆ ತಡೆಯುವ ಕೆಲಸ ಮಾಡಲಿದೆ.

    ಆರೋಗ್ಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿರುವ ರಾಜ್ಯ ಕಾರ್ಯಪಡೆ ಜಿಲ್ಲಾವಾರು ವ್ಯಾಕ್ಸಿನ್ ಹಂಚಿಕೆ ಗಮನಿಸಲಿದೆ. ವ್ಯಾಕ್ಸಿನ್ ಅನ್ನು ಸರ್ಕಾರಿ ಮತ್ತು ಖಾಸಗಿ ವಲಯಗಳಿಗೆ ಹಂಚಿಕೆ ಜವಾಬ್ದಾರಿ ಜೊತೆಗೆ ವ್ಯಾಕ್ಸಿನ್ ಕೇಂದ್ರಗಳ ಮ್ಯಾಪಿಂಗ್ ಮಾಡುವುದು ಈ ತಂಡದ ಕಾರ್ಯವಾಗಿದೆ. ಇದರ ಜೊತೆಗೆ ಜನ ಸಮೂಹ ಮತ್ತು ಸಮಯ ನಿರ್ವಹಣೆ, ಡೋಸ್ ಗಳಿಗೆ ಅವಧಿ ನಿಗದಿ ಪಡಿಸುವುದು, ಆರ್ಥಿಕತೆ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ ಮಾಡುವುದು ಈ ತಂಡದ ಜವಾಬ್ದಾರಿ ಎಂದು ಆರೋಗ್ಯ ಇಲಾಖೆ ಹೇಳಿದೆ.

    ಇನ್ನು ಜಿಲ್ಲಾ ಕಾರ್ಯಪಡೆ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಹಂಚಿಕೆ ಮತ್ತು ಪ್ರಮಾಣ ನಿಗಧಿ ಪಡಿಸಲಿದೆ. ಅಲ್ಲದೇ ವ್ಯಾಕ್ಸಿನ್ ಹಂಚಿಕೆಗೆ ಹಳ್ಳಿಗಳಿಂದ ನಗರಗಳವರೆಗೂ ಮ್ಯಾಪಿಂಗ್ ಮತ್ತು ಮೈಕ್ರೋ ಪ್ಲಾನಿಂಗ್ ಮಾಡಿ ಕೋಲ್ಡ್ ಸ್ಟೋರೇಜ್ ಗಳ ಜೊತೆಗೆ ಸಂವಹನ ಹೊಂದುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಇದಲ್ಲದೇ ಲಸಿಕೆ ಲಾಜಿಸ್ಟಿಕ್ಸ್ ಯೋಜನೆ ಮತ್ತು ಬ್ಲಾಕ್ ಹಂತದಲ್ಲಿ ವಿತರಣೆಗೆ ಯೋಜನೆ ಮಾಡುವುದು ಜಿಲ್ಲಾ ಕಾರ್ಯಪಡೆಗೆ ಜವಾಬ್ದಾರಿವಹಿಸಿದೆ.

  • ದೇಶದ ಪ್ರತಿವಾಸಿಗೂ ಉಚಿತ ಕೊರೊನಾ ವ್ಯಾಕ್ಸಿನ್: ಕೇಂದ್ರ ಸಚಿವ ಸಾರಂಗಿ

    ದೇಶದ ಪ್ರತಿವಾಸಿಗೂ ಉಚಿತ ಕೊರೊನಾ ವ್ಯಾಕ್ಸಿನ್: ಕೇಂದ್ರ ಸಚಿವ ಸಾರಂಗಿ

    ಭುವನೇಶ್ವರ: ದೇಶದ ಎಲ್ಲ ವಾಸಿಗಳಿಗೂ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.

    ಭಾನುವಾರ ಓಡಿಶಾದ ಬಾಲಸೋರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ ಪಕ್ಷದ ಸಭೆಯಲ್ಲಿ ಪ್ರತಾಪ್ ಸಾರಂಗಿ ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಈಗಾಗಲೇ ಪ್ರಧಾನ ಮಂತ್ರಿಗಳು ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಹೇಳಿದ್ದಾರೆ. ಹಾಗಾಗಿ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ವ್ಯಾಕ್ಸಿನ್ ಗೆ ಅಂದಾಜು 500 ರೂ. ತಗಲಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರ ಜನತೆಗೆ ಉಚಿತ ಕೊರೊನಾ ವ್ಯಾಕ್ಸಿನ್ – ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಓಡಿಶಾದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಆರ್ಪಿ ಸ್ವೈನ್, ಕೇಂದ್ರ ಸರ್ಕಾರ ಕೊರೊನಾ ವ್ಯಾಕ್ಸಿನ್ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಬಿಹಾರ ಚುನಾವಣೆಯಲ್ಲಿಯೂ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಹಾಗಾಗಿ ಓಡಿಶಾದವರು ಆಗಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರತಾಪ್ ಸಾರಂಗಿ ಜನರ ಬಳಿ ಕ್ಷಮೆ ಕೇಳಬೇಕು. ಓಡಿಶಾದಲ್ಲಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಬಿಜೆಪಿಯ ನಿಲುವು ಏನು ಎಂಬುದನ್ನ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದರು. ಇದನ್ನೂ ಓದಿ: ಡಿಸಿಜಿಐ ಶೋಕಾಸ್ ನೋಟಿಸ್ – ಕೊರೊನಾ ವ್ಯಾಕ್ಸಿನ್ ಪ್ರಯೋಗ ನಿಲ್ಲಿಸಿದ ಸೆರಮ್

    ತಮಿಳುನಾಡು, ಮಧ್ಯ ಪ್ರದೇಶ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ರಾಜಕೀಯ ಮೇಲಾಟಗಳು ಆರಂಭಗೊಂಡಿವೆ. ಚುನಾವಣೆಯಲ್ಲಿ ಗೆದ್ದರೆ ಉಚಿತ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ರಾಜಕೀಯ ಪಕ್ಷಗಳು ಆಶ್ವಾಸನೆಗಳನ್ನ ನೀಡುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೇಶದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಎಲ್ಲಿಯವರೆಗೂ ಮದ್ದಿಲ್ಲ, ಅಲ್ಲಿಯವರೆಗೂ ಕೊರೊನಾ ಬಗ್ಗೆ ಮೈಮರೆಯಬೇಡಿ : ಪ್ರಧಾನಿ ಮೋದಿ

  • ಬಿಹಾರ ಜನತೆಗೆ ಉಚಿತ ಕೊರೊನಾ ವ್ಯಾಕ್ಸಿನ್ – ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಬಿಹಾರ ಜನತೆಗೆ ಉಚಿತ ಕೊರೊನಾ ವ್ಯಾಕ್ಸಿನ್ – ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಪಾಟ್ನಾ: ದೇಶದಲ್ಲಿ ಕೊರೊನಾ ನಡುವೆಯೇ ಚುನಾವಣೆಗಳು ನಡೆಯುತ್ತಿವೆ. ಇಂದು ಬಿಜೆಪಿ ಬಿಹಾರ ಚುನಾವಣೆಗಾಗಿ ಪಕ್ಷದ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿನ ಬಿಜೆಪಿಯ ಒಂದು ವಾಗ್ದಾನ ಸಾರ್ವಜನಿಕರು ಸೇರಿದಂತೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ #Vaccineelectionism ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದೆ.

    ಬಿಜೆಪಿಯ ಚುನಾವಣೆ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಬಿಹಾರದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ವಾಗ್ದಾನ ನೀಡಿದೆ. ಬಿಹಾರ ಜನತೆಗೆ ಬಿಜೆಪಿ ನೀಡುತ್ತಿರುವ ಮೊದಲ ವಾಗ್ದಾನ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಭಾರತ ಸೇರಿದಂತೆ ವಿಶ್ವದಾದ್ಯಂತ ಕೊರೊನಾ ಲಸಿಕೆಗೆ ಸಂಶೋಧನೆಗಳು ನಡೆಯುತ್ತಿವೆ. ಕೊರೊನಾ ವ್ಯಾಕ್ಸಿನ್ ಬರುವ ಮುನ್ನವೇ ಬಿಜೆಪಿ ಚುನಾವಣೆಯಲ್ಲಿ ಲಾಭ ಪಡೆಯಲು ಮುಂದಾಗಿದೆ ಎಂದು ವಿಪಕ್ಷಗಳು ಕಿಡಿಕಾರಿವೆ. ಇನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ, ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳ ಪರಿಸ್ಥಿತಿ ಏನು? ಭಾರತೀಯರು ಬಿಜೆಪಿಗೆ ಮತ ನೀಡದಿದ್ರೆ ಉಚಿತ ಕೊರೊನ ಲಸಿಕೆ ಸಿಗುವದಿಲ್ವಾ ಎಂದು ಕೇಂದ್ರ ಸರ್ಕಾರವನ್ನ ಪ್ರಶ್ನೆ ಮಾಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಅಶ್ವಿನಿ ಚೌಬೆ, ಕೊರೊನಾ ವ್ಯಾಕ್ಸಿನ್ ಗಾಗಿ ಇಡೀ ವಿಶ್ವದಲ್ಲಿಯೇ ಸಂಶೋಧನೆಗಳು ನಡೆಯುತ್ತಿವೆ. ವ್ಯಾಕ್ಸಿನ್ ಕಂಡು ಹಿಡಿದಾಗ ಅದನ್ನ ಸಮಾನವಾಗಿ ವಿತರಿಸುವ ಕುರಿತು ಸಿದ್ಧತೆಗಳು ನಡೆದಿವೆ. ಪ್ರಾಥಮಿಕ ಅವಶ್ಯಕತೆ ಇರೋ ಜನರು ಸೇರಿದಂತೆ ಎಲ್ಲ ವರ್ಗದವರಿಗೂ ಉಚಿತ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಹೇಳಿದ್ದಾರೆ.

  • ಎರಡು ತಿಂಗಳಲ್ಲಿ ಕೊರೊನಾ ವ್ಯಾಕ್ಸಿನ್ ಬರುತ್ತೆ: ವಿಜ್ಞಾನಿ ಪ್ರೊ. ರಂಗಪ್ಪ

    ಎರಡು ತಿಂಗಳಲ್ಲಿ ಕೊರೊನಾ ವ್ಯಾಕ್ಸಿನ್ ಬರುತ್ತೆ: ವಿಜ್ಞಾನಿ ಪ್ರೊ. ರಂಗಪ್ಪ

    – ಸಂಶೋಧಕರ ಜೊತೆ ನಿರಂತರ ಸಂಪರ್ಕವಿದೆ

    ಮೈಸೂರು: ಎರಡು ತಿಂಗಳಲ್ಲಿ ಕೋವಿಡ್-19ಗೆ ವ್ಯಾಕ್ಸಿನ್ ಬರುತ್ತದೆ ಎಂದು ಮೈಸೂರಿನಲ್ಲಿ ವಿಜ್ಞಾನಿ ಪ್ರೊ ಕೆ.ಎಸ್ ರಂಗಪ್ಪ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಯುಕೆಯ ಆಕ್ಸ್ ಫರ್ಡ್ ವಿವಿಯ ಎಡ್ವರ್ಡ್ ಜನರಲ್ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆದಿದೆ. ಸಂಶೋಧನೆ ಮೂರನೇ ಹಂತ ತಲುಪಿದೆ. ಅಲ್ಲಿಯ ಸಂಶೋಧಕರ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ಸಂಶೋಧನೆ ತುಂಬಾ ಚೆನ್ನಾಗಿ ನಡೆದಿದೆ. ಇನ್ನೂ ಎರಡು ತಿಂಗಳಲ್ಲಿ ವಾಕ್ಸಿನ್ ಬರುವುದು ಖಚಿತವಾಗಿದೆ ಎಂದು ಸ್ಪಷ್ಟಪಡಿಸಿದರು.

    6 ಸಾವಿರ ಜನರಿಂದ ಸಂಶೋಧನೆ ನಡೆಯುತ್ತಿದೆ. ಪ್ರಯೋಗಾತ್ಮಕವಾಗಿ ಈಗಾಗಲೇ ಹಲವರಿಗೆ ವ್ಯಾಕ್ಸಿನ್ ನೀಡಲಾಗಿದೆ. ಗಾಳಿಯ ಮೂಲಕ ನೀರಿನ ಮೂಲಕ ಕೋವಿಡ್ ಬರುವುದಿಲ್ಲ. ಗಾಳಿ ಮತ್ತು ನೀರಿನಿಂದ ಶೇಕಡ 1ರಷ್ಟು ಸೋಂಕು ಬರುವ ಸಾಧ್ಯತೆ ಇಲ್ಲ. ಬರೀ ಕೋವಿಡ್‍ನಿಂದಲೇ ಜನರು ಸಾಯುತ್ತಿಲ್ಲ. ಬೇರೆ ಬೇರೆ ಆರೋಗ್ಯದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

    ಈ ವೈರಸ್‍ಗೆ ವ್ಯಾಕ್ಸಿನ್ 2 ಸಾವಿರಕ್ಕಿಂತ ಕಡಿಮೆಗೆ ಸಿಗಲಿದೆ. ಯಾವುದೇ ಕಾರಣಕ್ಕೂ ಹೆಚ್ಚು ಬೆಲೆ ಆಗುವುದಿಲ್ಲ. ಕೊರೊನಾ ಪ್ರಾಣಿಗಳಿಂದಲೇ ಬಂದಿದೆ ಎಂಬುದು ಸಂಶೋಧನೆಯಿಂದ ಧೃಡಪಟ್ಟಿದೆ. ಇದು ಮ್ಯಾನ್ ಮೇಡ್ ಅಂತ ಹೇಳಲು ಸಾಧ್ಯವಿಲ್ಲ. ಚೀನಾದ ಲ್ಯಾಬ್‍ನಿಂದ ಹೊರ ಬಂದಿದ್ದು ಅಪರಾಧ, ಚೀನಾದಲ್ಲಿ ಅಮೆರಿಕಾದ ವಿಜ್ಞಾನಿಗಳೇ ಹೆಚ್ಚು ಇದ್ದಾರೆ ಎಂದು ರಂಗಪ್ಪ ತಿಳಿಸಿದ್ದಾರೆ.

    ಭಾರತ-ಚೀನಾ ಗಡಿ ವಿವಾದ ಹಿನ್ನೆಲೆ 500 ಕೋಟಿಯ ಪ್ರಾಜೆಕ್ಟ್ ಅರ್ಧಕ್ಕೆ ನಿಂತಿದೆ. ಕ್ಯಾನ್ಸರ್ ಸಂಬಂಧಿತ ಸಂಶೊಧನೆಗೆ ಚೀನಾ ದೇಶದ ಜೊತೆ ಒಡಂಬಡಿಕೆಯನ್ನು ಸದ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರ ಹೇಳಿದರೆ ನಾನು ಮುಂದೆಯೂ ಅದನ್ನು ಮಾಡುವುದಿಲ್ಲ. ಆದರೆ ಸರ್ಕಾರ ಯಾವ ಸಂದರ್ಭದಲ್ಲೂ ಈ ರೀತಿ ಮಾಡುವುದಿಲ್ಲ ಎಂದು ಕೆಎಸ್ ರಂಗಪ್ಪ ಮಾಹಿತಿ ನೀಡಿದ್ದಾರೆ.

  • ಡಿಸಿಜಿಐ ಶೋಕಾಸ್ ನೋಟಿಸ್ – ಕೊರೊನಾ ವ್ಯಾಕ್ಸಿನ್ ಪ್ರಯೋಗ ನಿಲ್ಲಿಸಿದ ಸೆರಮ್

    ಡಿಸಿಜಿಐ ಶೋಕಾಸ್ ನೋಟಿಸ್ – ಕೊರೊನಾ ವ್ಯಾಕ್ಸಿನ್ ಪ್ರಯೋಗ ನಿಲ್ಲಿಸಿದ ಸೆರಮ್

    ನವದೆಹಲಿ: ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಶೋಕಾಸ್ ನೋಟಿಸ್ ಬಳಿಕ ಪುಣೆಯ ಸೆರಮ್ ಇನ್ಸಿಟ್ಯೂಟ್ ಆಫ್ ಇಂಡಿಯ ಸಂಸ್ಥೆ ಕೊರೊನಾ ಲಸಿಕೆ ಪ್ರಯೋಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

    ಪ್ರಯೋಗಗಳನ್ನು ನಿಲ್ಲಿಸಿರುವ ಬಗ್ಗೆ ಇಂದು ಸೆರಮ್ ಸಂಸ್ಥೆ ಅಧಿಕೃತ ಮಾಹಿತಿ ನೀಡಿದೆ. ದೇಶದ 17 ಪ್ರದೇಶಗಳಲ್ಲಿ 1,600 ಮಂದಿಯ ಮೇಲೆ ಪ್ರಯೋಗ ನಡೆಸಲಾಗುತ್ತಿತ್ತು ಡಿಸಿಜಿಐ ಶೋಕಾಸ್ ನೋಟಿಸ್ ಹಿನ್ನೆಲೆ ಪ್ರಯೋಗ ನಿಲ್ಲಿಸಿದೆ ಎಂದು ಹೇಳಿದೆ.

    ಬ್ರಿಟನ್ ನಲ್ಲಿ ಈ ಲಸಿಕೆ ಪ್ರಯೋಗ ಒಳಪಟ್ಟ ವ್ಯಕ್ತಿಗೆ ಅನಾರೋಗ್ಯ ಉಂಟಾದ ಹಿನ್ನಲೆ, ಅಲ್ಲಿ ಪ್ರಯೋಗಗಳನ್ನು ನಿಲ್ಲಿಸಲಾಗಿದೆ. ಲಸಿಕೆ ಅಭಿವೃದ್ಧಿ ಪಡಿಸಿರುವ ಸಂಸ್ಥೆ ಅಸ್ಟ್ರಾಜೆನಿಕಾ ಪ್ರಯೋಗಗಳು ಪುನಾರಂಭಿಸಿದ ಬಳಿಕವಷ್ಟೇ ಭಾರತದಲ್ಲಿ ಪ್ರಯೋಗಗಳು ಮತ್ತೆ ಆರಂಭವಾಗಲಿದೆ ಎಂದು ಸೆರಮ್ ಹೇಳಿದೆ.

    ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ ಆಕ್ಸ್ ಫರ್ಡ್ ಯೂನಿವರ್ಸಿಟಿ ಮತ್ತು ಆಸ್ಟ್ರಾಜೆನೆಕಾ ಫಾರ್ಮಾ ಕಂಪನಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಕೊರೊನಾ ವ್ಯಾಕ್ಸಿನ್ ಅನ್ನು ಭಾರತದಲ್ಲಿ ಮಾನವರ ಮೇಲೆ ಎರಡು ಮತ್ತು ಮೂರನೇ ಹಂತದಲ್ಲಿ ಪ್ರಯೋಗ ನಡೆಸುತ್ತಿತ್ತು.

    ಲಸಿಕೆಯಿಂದ ವ್ಯಕ್ತಿ ಅನಾರೋಗ್ಯಕ್ಕೆ ಒಳಪಟ್ಟ ವಿಚಾರ ತಿಳಿಸದ ಹಿನ್ನೆಲೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಶೋಕಾಸ್ ನೋಟಿಸ್ ನೀಡಿತ್ತು. ಮತ್ತು ಕೂಡಲೇ ಪ್ರಯೋಗಗಳನ್ನು ನಿಲ್ಲಿಸಲು ಆದೇಶಿಸಿತ್ತು.