Tag: ಕೊರೊನಾ ಸೋಂಕಿತ

  • ಕೊರೊನಾ ಸೋಂಕಿತರಿಗೆ ಊಟದ ಡಬ್ಬದ ಮೂಲಕ ಸಂದೇಶ ಕೊಟ್ಟ ಬಾಲಕ

    ಕೊರೊನಾ ಸೋಂಕಿತರಿಗೆ ಊಟದ ಡಬ್ಬದ ಮೂಲಕ ಸಂದೇಶ ಕೊಟ್ಟ ಬಾಲಕ

    ಕೋವಿಡ್-19 ರೋಗಿಗಳಿಗಾಗಿ ತನ್ನ ತಾಯಿ ಸಿದ್ಧಪಡಿಸಿದ ಊಟದ ಡಬ್ಬದ ಮೇಲೆ ಬಾಲಕನೋರ್ವ ವಿಶೇಷ ಸಂದೇಶವನ್ನು ಬರೆದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಊಟದ ಪ್ಯಾಕ್ ಮೇಲೆ ಬಾಲಕ ಖುಷಿಯಾಗಿರಿ ಎಂದು ಹಿಂದಿಯಲ್ಲಿ ಬರೆದಿದ್ದು, ಫೋಟೋಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ದೇಶವು ಕೊರೊನಾ ವೈರಸ್ ಎರಡನೇ ಅಲೆ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ ಈ ಫೋಟೋ ಅನೇಕ ಜನರ ಹೃದಯ ಗೆಲ್ಲುತ್ತಿದೆ.

    ಫೋಟೋದಲ್ಲಿ ಬಾಲಕ ಹಸಿರು ಬಣ್ಣದ ಶರ್ಟ್ ಧರಿಸಿದ್ದು, ಊಟದ ಡಬ್ಬದ ರಟ್ಟಿನ ಮುಚ್ಚಳದ ಮೇಲೆ ‘ಖುಷ್ ರಹಿಯೆ'(ಸಂತೋಷವಾಗಿರಿ) ಎಂದು ಪ್ರತಿಯೊಂದು ಡಬ್ಬದ ಮೇಲೆ ಹಿಂದಿಯಲ್ಲಿ ಬರೆದುಕೊಂಡು ಬರುತ್ತಿರುತ್ತಾನೆ. ಪದಗಳ ಜೊತೆಗೆ ನಗು ಮುಖದ ಚಿಹ್ನೆಯನ್ನು ಕೂಡ ಬರೆದಿದ್ದಾನೆ.

    ಈ ಫೋಟೋವನ್ನು ಮನೀಷ್ ಸಾರನ್‍ಗಲ್ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಲ್ಲಿಯವರೆಗೂ ಫೋಟೋಗೆ 12,000 ಲೈಕ್ಸ್ ಹಾಗೂ ನೂರಕ್ಕೂ ಹೆಚ್ಚು ಕಮೆಂಟ್‍ಗಳು ಹರಿದುಬಂದಿದೆ.

  • ಕೋವಿಡ್ ಸೋಂಕಿತರ ಸಹಾಯಕ್ಕಾಗಿ ಆಟೋ ಓಡಿಸುತ್ತಿರುವ ಶಿಕ್ಷಕ

    ಕೋವಿಡ್ ಸೋಂಕಿತರ ಸಹಾಯಕ್ಕಾಗಿ ಆಟೋ ಓಡಿಸುತ್ತಿರುವ ಶಿಕ್ಷಕ

    ಮುಂಬೈ: ಕೊರೊನಾ ವೈರಸ್ ಎರಡನೇ ಅಲೆ ಮಧ್ಯೆ, ಮುಂಬೈನ ಶಾಲಾ ಶಿಕ್ಷಕರೊಬ್ಬರು ಕೋವಿಡ್ ಸೋಂಕಿತರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

    ವೃತ್ತಿಯಲ್ಲಿ ಶಿಕ್ಷಕರಾಗಿರುವ ದತ್ತಾತ್ರೇಯ ಸಾವಂತ್ ಆಟೋ ಓಡಿಸುತ್ತಿದ್ದಾರೆ. ಮುಂಜಾಗ್ರತೆ ಕ್ರಮಗಳೊಂದಿಗೆ ಪಿಪಿಇ ಕಿಟ್ ಧರಿಸಿ, ವಾಹನವನ್ನು ಸ್ಯಾನಿಟೈಸ್‍ಗೊಳಿಸಿ, ಸೋಂಕಿತರನ್ನು ಆಸ್ಪತ್ರೆ, ಕೋವಿಡ್ ಕೇಂದ್ರ ಮತ್ತು ಮನೆಗಳಿಗೆ ಕರೆದೊಯ್ಯುತ್ತಿದ್ದಾರೆ.

    ಈ ಕುರಿತಂತೆ ಮಾತನಾಡಿದ ಅವರು, ನಾನು ವೈಯಕ್ತಿಕವಾಗಿ ಬೇಕಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ಪ್ರಸ್ತುತ ಕೊರೊನಾ ಸೋಂಕಿತರ ಸಂಖ್ಯೆ ಅತೀ ವೇಗವಾಗಿ ಹೆಚ್ಚಾಗುತ್ತಿದೆ. ಅನೇಕ ಮಂದಿ ಚಿಕಿತ್ಸೆ ಕೊರತೆಯಿಂದಾಗಿ ಸಾವನ್ನಪ್ಪುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಡ ರೋಗಿಗಳು ಸರ್ಕಾರದಿಂದ ಸರಿಯಾದ ಸಮಯಕ್ಕೆ ಸಹಾಯ ಪಡೆಯುತ್ತಿದ್ದಾರೋ ಇಲ್ಲವೋ, ಖಾಸಗಿ ಅಂಬುಲೆನ್ಸ್ ಕೂಡ ಕೈಗೆಟಕುವಂತಿಲ್ಲ. ಸಾಮಾನ್ಯವಾಗಿ ಸಾರ್ವಜನಿಕ ವಾಹನಗಳು ಕೋವಿಡ್ ಸೋಂಕಿತರಿಗೆ ಸೇವೆಯನ್ನು ಒದಗಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ನನ್ನ ಕಡೆಯಿಂದ ಸೋಕಿಂತರಿಗೆ ಉಚಿತವಾಗಿ ಸೇವೆ ಲಭ್ಯವಿರುತ್ತದೆ.

    ನಾನು ಕೊರೊನಾ ಸೋಂಕಿತರನ್ನು ಕೋವಿಡ್ ಕೇಂದ್ರ, ಆಸ್ಪತ್ರೆಗಳಿಗೆ ಉಚಿತವಾಗಿ ಕರೆದುಕೊಂಡು ಹೋಗಿ ಬಿಡುತ್ತೇನೆ ಮತ್ತು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಂತಹ ರೋಗಿಗಳನ್ನು ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ದತ್ತಾತ್ರೇಯ ಸಾವಂತ್‍ರವರು ಮುಂಬೈ ಉಪನಗರ ಘಾಟ್ಕೋಪರ್ ನಿವಾಸಿಯಾಗಿದ್ದು, ಜ್ಞಾನಸಾಗರ್ ವಿದ್ಯಾ ಮಂದಿರ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಾವಂತ್ ಕಳೆದ ಕೆಲವು ದಿನಗಳಿಂದ ಈಶಾನ್ಯ ಮುಂಬೈನಲ್ಲಿ ಆಟೋ ಓಡಿಸುವ ಮೂಲಕ ಜನರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿಯವರೆಗೂ 26 ಕೋವಿಡ್ ಸೋಂಕಿತರಿಗೆ ಉಚಿತವಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಈ ಕಾರ್ಯಕ್ಕೆ ಎಲ್ಲರೂ ಇದೀಗ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಕೋವಿಡ್ ಕಡಿಮೆಯಾಗುವವರೆಗೂ ತಮ್ಮ ಸೇವೆಯನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

  • ಕೊರೊನಾ ವಾರ್ಡಿನಿಂದ ಸೋಂಕಿತ ಗಂಧದ ಕಳ್ಳ ಪರಾರಿ

    ಕೊರೊನಾ ವಾರ್ಡಿನಿಂದ ಸೋಂಕಿತ ಗಂಧದ ಕಳ್ಳ ಪರಾರಿ

    ಕಾರವಾರ: ಕೊರೊನಾ ಸೋಂಕಿತ ಗಂಧದ ಕಳ್ಳ ಕೋವಿಡ್ ವಾರ್ಡಿನಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕ್ರಿಮ್ಸ್ ಕೋವಿಡ್ ವಾರ್ಡಿನಲ್ಲಿ ನಡೆದಿದೆ.

    ಮುಂಡಗೋಡಿನ ನಿವಾಸಿ ಸೈಯದ್ ಇಸ್ರಾಲ್ ಕರೀಮ್ ಕಾನ್ ಕೊರೊನಾ ವಾರ್ಡಿನಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ ಕಳ್ಳನಾಗಿದ್ದಾನೆ. ಎರಡು ದಿನದ ಹಿಂದೆ ಮುಂಡಗೋಡಿನಲ್ಲಿ ಗಂಧ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಲಾಗಿತ್ತು.

    ಬಂಧನದ ನಂತರ ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೋವಿಡ್ ವಾರ್ಡಿಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ರಾತ್ರಿ ವಾರ್ಡಿನಿಂದ ಪರಾರಿಯಾಗಿದ್ದು, ಆರೋಪಿಗಾಗಿ ಶೋಧ ನಡೆಸಲಾಗುತಿದೆ. ಈ ಸಂಬಂಧ ಕಾರವಾರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವೈದ್ಯರ ನಿರ್ಲಕ್ಷ್ಯಕ್ಕೆ ಸೋಂಕಿತ ಸಾವು – ಡಿಸಿ ಕಚೇರಿ ಮುಂದೆ ಕುಟುಂಬಸ್ಥರ ಆಕ್ರೋಶ

    ವೈದ್ಯರ ನಿರ್ಲಕ್ಷ್ಯಕ್ಕೆ ಸೋಂಕಿತ ಸಾವು – ಡಿಸಿ ಕಚೇರಿ ಮುಂದೆ ಕುಟುಂಬಸ್ಥರ ಆಕ್ರೋಶ

    ಹಾಸನ: ಚೆನ್ನಾಗಿದ್ದ ರೋಗಿಗೆ ಕೊರೊನಾ ಎಂದು ಹೇಳಿ ವೈದ್ಯರು ತುರ್ತು ಘಟಕದಲ್ಲಿಟ್ಟು ಒಂದು ಜೀವ ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾಸನದಲ್ಲಿ ನಡೆದಿದೆ.

    ಚನ್ನರಾಯಪಟ್ಟಣ ತಾಲೂಕಿನ ಎ. ಚೋಳನಹಳ್ಳಿಯಲ್ಲಿ ನಿವಾಸಿಯಾಗಿರುವ ಮಹೇಶ್ (50) ಕಳೆದ 8 ದಿನಗಳ ಹಿಂದೆ, ಹಾಸನ ಜಿಲ್ಲಾಸ್ಪತ್ರೆಗೆ ಕೊರೊನಾ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹೇಶ್ ಮೃತಪಟ್ಟಿದ್ದಾರೆ. ಮಹೇಶ್ ಚೆನ್ನಾಗಿಯೇ ಇದ್ದರು. ಕೊನೆಯಲ್ಲಿ ಕೊರೊನಾ ಇದೆ ಎಂದು ಹೇಳಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಅವರ ಜೊತೆ ನಾವುಗಳು ಆರು ಜನರು ಸಂಪರ್ಕದಲ್ಲಿದ್ದೇವೆ. ನಮಗೆ ಯಾವ ಪಾಸಿಟಿವ್ ಇಲ್ಲದಿದ್ದರೂ ಅವರಿಗೊಬ್ಬರಿಗೆ ಮಾತ್ರ ಪಾಸಿಟಿವ್ ಬಂದಿದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇಲ್ಲಿ ಆಗದಿದ್ದರೇ ವಾಪಸ್ ಕಳುಹಿಸಿ ನಾವು ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿರುವುದಾಗಿ ಮನವಿ ಮಾಡಲಾಯಿತು. ಆದರೂ ಬಲವಂತವಾಗಿ ಐಸಿಯುಗೆ ಹಾಕಿ ಈಗ ಒಂದು ಪ್ರಾಣದ ಜೊತೆ ಆಟವಾಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.

    ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸರ್ಜನ್ ಕೃಷ್ಣಮೂರ್ತಿ ಸೂಕ್ತ ತನಿಖೆ ಮಾಡಿಸಿ ನ್ಯಾಯಕೊಡಿಸುವುದಾಗಿ ಭರವಸೆ ನೀಡಿದ ನಂತರ ಕುಟುಂಬಸ್ಥರು ಪ್ರತಿಭಟನೆ ಹಿಂಪಡೆದಿದ್ದಾರೆ.

  • ಅಂಬುಲೆನ್ಸ್ ಪಲ್ಟಿ- ಕೊರೊನಾ ಸೋಂಕಿತ, ಬೈಕ್ ಸವಾರ ಸಾವು

    ಅಂಬುಲೆನ್ಸ್ ಪಲ್ಟಿ- ಕೊರೊನಾ ಸೋಂಕಿತ, ಬೈಕ್ ಸವಾರ ಸಾವು

    – ಬೈಕ್‍ಗೆ ಡಿಕ್ಕಿ ಸಂಭವಿಸಿ ಅಪಘಾತ

    ಚಿಕ್ಕೋಡಿ/ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಬೈಕ್ ಹಿಂಬದಿ ಸವಾರ ಹಾಗೂ ಅಂಬುಲೆನ್ಸ್‍ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಅಂಬುಲೆನ್ಸ್ ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ ಮೂಲದ 51 ವರ್ಷದ ಕೊರೊನಾ ಸೋಂಕಿತ ಹಾಗೂ ರಬಕವಿ ಮೂಲದ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ.

    ಅಪಘಾತ ಸಂಭವಿಸಿದ ತಕ್ಷಣ ಚಿಕಿತ್ಸೆಗಾಗಿ ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆತರಲಾಗಿದ್ದು, ಆಸ್ಪತ್ರೆಯಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತ ಸೋಂಕಿತ ಮಹಾರಾಷ್ಟ್ರದ ಜತ್ತ ತಾಲೂಕಿನ ಸಿಂಧೂರ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅಥಣಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೋಂಕಿತ ದಾಖಲಾಗಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕರೆದೊಯ್ಯುತ್ತಿದ್ದ ವೇಳೆ ಅಂಬುಲೆನ್ಸ್ ಪಲ್ಟಿಯಾಗಿದೆ. ಉಳಿದ ಇಬ್ಬರು ಗಾಯಾಳುಗಳಿಗೆ ಹುಕ್ಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾನು ಬರಲ್ಲ ಅಂದ್ರೆ ಬರಲ್ಲ, ಏನು ಮಾಡ್ತೀರಾ ಮಾಡ್ಕೊಳ್ಳಿ: ಸೋಂಕಿತ ರಂಪಾಟ

    ನಾನು ಬರಲ್ಲ ಅಂದ್ರೆ ಬರಲ್ಲ, ಏನು ಮಾಡ್ತೀರಾ ಮಾಡ್ಕೊಳ್ಳಿ: ಸೋಂಕಿತ ರಂಪಾಟ

    ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದರೂ ನಾನು ಆಸ್ಪತ್ರೆಗೆ ಬರಲ್ಲ ಎಂದು ಸೋಂಕಿತನೊಬ್ಬ ರಂಪಾಟ ಮಾಡಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

    ಕೊರೊನಾ ಸೋಂಕಿತ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಆಗಿದ್ದು, ಅಗಸ್ಟ್ 21ರಂದು ಬಂದ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲು ಬಿನ್ನಿಪೇಟೆಯಲ್ಲಿರುವ ಆತನ ಮನೆಗೆ ಅಧಿಕಾರಿಗಳು ಹೋಗಿದ್ದಾರೆ. ಈ ವೇಳೆ ಬೆಂಗಳೂರಿನ ಮಾಗಡಿ ರಸ್ತೆಯ ಕೆಪಿ ಅಗ್ರಹಾರದ ಬಿಬಿಎಂಪಿ ಮೆಡಿಕಲ್ ಆಫೀಸರ್ ಜೊತೆ ಸೋಂಕಿತ ಜಗಳವಾಡಿ ಕಿರಿಕ್ ಮಾಡಿದ್ದಾನೆ. ಇದನ್ನು ಓದಿ: ದೇವರು ಬಂದಿದೆ, ಪೊಲೀಸರು ಕಾಲಿಗೆ ಬೀಳ್ಬೇಕು – ಸೋಂಕಿತೆಯ ಹೈಡ್ರಾಮ

    ಸದ್ಯ ಕರ್ತವ್ಯದಲ್ಲಿರುವ ಚಾಲಕ, ಹಲವರ ಸಂಪರ್ಕಕ್ಕೆ ಬಂದಿದ್ದಾನೆ. ಹೀಗಾಗಿ ಕೂಡಲೇ ಆಸ್ಪತ್ರೆಗೆ ಬನ್ನಿ ಎಂದು ಆರೋಗ್ಯಾಧಿಕಾರಿಗಳು ಮನೆ ಬಳಿ ಹೋಗಿದ್ದಾರೆ. ಈ ವೇಳೆ ಆತ ನನಗೆ ಏನು ಆಗಿಲ್ಲ. ನಾನು ಬರುವುದಿಲ್ಲ. ಇನ್ನೊಮ್ಮೆ ಟೆಸ್ಟ್ ಮಾಡಿ ಎಂದು ಕಿರಿಕ್ ಮಾಡಿದ್ದಾನೆ. ಜೊತೆಗೆ ನಾನು ಬರಲ್ಲ ಅಂದರೆ ಬರಲ್ಲ. ಏನು ಮಾಡ್ತೀರಾ ಮಾಡಿಕೊಳ್ಳಿ ಎಂದು ಅವಾಜ್ ಹಾಕಿದ್ದಾನೆ.

  • ಅನ್ನ, ನೀರು ಸಿಗದೆ ನರಳಿ ಪ್ರಾಣ ಬಿಟ್ಟ ಕೊರೊನಾ ಸೋಂಕಿತ

    ಅನ್ನ, ನೀರು ಸಿಗದೆ ನರಳಿ ಪ್ರಾಣ ಬಿಟ್ಟ ಕೊರೊನಾ ಸೋಂಕಿತ

    ಬಳ್ಳಾರಿ: ಹೋಂ ಐಸೊಲೇಷನ್‍ನಲ್ಲಿದ್ದ ಕೊರೊನಾ ಸೋಂಕಿತ ಹಸಿವಿನಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ಬಳ್ಳಾರಿಯ ಬಿ ಬೆಳಗಲ್ಲು ಗ್ರಾಮದಲ್ಲಿ ಈ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ಮನೆಯಲ್ಲೇ ಪ್ರತ್ಯೇಕವಾಗಿದ್ದ ಕೊರೊನಾ ಸೋಂಕಿತ ವೃದ್ಧ ವ್ಯಕ್ತಿ ಊಟ ಸಿಗದೇ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಬಳ್ಳಾರಿ ಜಿಲ್ಲಾಡಳಿತ ಆದೇಶ ನೀಡಿದೆ.

    ಮೂಲಗಳ ಪ್ರಕಾರ ಬಳ್ಳಾರಿಯ ಟಿ ಬೆಳಗಲ್ಲು ಗ್ರಾಮದ ವೃದ್ಧ ವ್ಯಕ್ತಿಗೆ ಸೋಂಕು ತಗುಲಿರುವ ವಿಚಾರ ತಿಳಿಯುತ್ತಲೇ ಅವರನ್ನು ಕುಟುಂಬಸ್ಥರು ಮನೆಯಲ್ಲೇ ಬಿಟ್ಟು ಪ್ರತ್ಯೇಕವಾಗಿ ಹೊರಟು ಹೋಗಿದ್ದಾರೆ. ಮನೆಯಲ್ಲೇ ಇದ್ದ ಸೋಂಕಿತ ವೃದ್ಧ ಕೋವಿಡ್ ಸಹಾಯವಾಣಿಗೆ ನಿರಂತರವಾಗಿ ಕರೆ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ.

    ಹೀಗಾಗಿ ಅನ್ನ ನೀರು, ಸೂಕ್ತ ಚಿಕಿತ್ಸೆ ಸಿಗದೇ ವೃದ್ಧ ಮನೆಯಲ್ಲೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ತನಿಖೆಗೆ ಆದೇಶ ಮಾಡಿದ್ದಾರೆ.

  • ಅಂಬುಲೆನ್ಸ್ ಬರದಕ್ಕೆ ಪಿಪಿಇ ಕಿಟ್ ಧರಿಸಿ ಬೈಕ್ ಏರಿ ಬಂದ ಸೋಂಕಿತ

    ಅಂಬುಲೆನ್ಸ್ ಬರದಕ್ಕೆ ಪಿಪಿಇ ಕಿಟ್ ಧರಿಸಿ ಬೈಕ್ ಏರಿ ಬಂದ ಸೋಂಕಿತ

    – ವಿಡಿಯೋ ವೈರಲ್ ಬಳಿಕ ಎಚ್ಚೆತ್ತ ಅಧಿಕಾರಿಗಳು

    ಭೋಪಾಲ್: ಅಂಬುಲೆನ್ಸ್ ಬರದಕ್ಕೆ ಕೊರೊನಾ ಸೋಂಕಿತ ಪಿಪಿಇ ಕಿಟ್ ಧರಿಸಿ ಬೈಕ್ ಮೇಲೆ ಕೋವಿಡ್ ಕೇರ್ ಸೆಂಟರ್ ಗೆ ಬಂದಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯ ಬುಧ್ನಿಯಲ್ಲಿ ನಡೆದಿದೆ.

    ಬುಧ್ನಿಯ ಆನಂದ ನಗರದ ಯವಕನೋರ್ವ ಭಾನುವಾರ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಮಂಗಳವಾರ ಯುವಕನಿಗೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ. ಮಂಗಳವಾರ ಯುವಕನಿಗೆ ಕರೆ ಮಾಡಿದ ಅಧಿಕಾರಿಗಳು ಆಸ್ಪತ್ರೆಗೆ ಬಂದು ರಿಪೋರ್ಟ್ ಕಲೆಕ್ಟ್ ಮಾಡಿಕೊಳ್ಳಲು ಸೂಚಿಸಿದ್ದಾರೆ.

    ಬುಧ್ನಿಯ ಆರೋಗ್ಯ ಕೇಂದ್ರಕ್ಕೆ ಬಂದ ಸೋಂಕಿತನಿಗೆ ಪಾಸಿಟಿವ್ ರಿಪೋರ್ಟ್ ಜೊತೆ ಪಿಪಿಇ ಕಿಟ್ ಸಹ ನೀಡಿದ್ದಾರೆ. ಅಂಬುಲೆನ್ಸ್ ಬರಲು ತಡವಾದ ಹಿನ್ನೆಲೆಯಲ್ಲಿ ಯುವಕ ಪಿಪಿಇ ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ತಲುಪಿದ್ದಾನೆ.

    ಸೋಂಕಿತ ಬೈಕ್ ಮೇಲೆ ಹೋಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಇದೊಂದು ಉದಾಹರಣೆ ಎಂದು ಕಿಡಿಕಾರಿದ್ದಾರೆ. ವಿಡಿಯೋ ವೈರಲ್ ಆಗುತ್ತಲೇ ಎಚ್ಚೆತ್ತ ಜಿಲ್ಲಾ ಪಂಚಾಯ್ತಿ ಸಿಇಓ ಮನೋಜ್ ಕುಮಾರ್, ಆಸ್ಪತ್ರೆಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

  • ಸೋಂಕಿತರಿಂದ ಸುಲಿಗೆ- ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ

    ಸೋಂಕಿತರಿಂದ ಸುಲಿಗೆ- ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ

    – ಸೋಂಕಿತರಿಂದ 5 ಲಕ್ಷ ಪಡೆದಿರುವ ಬಗ್ಗೆ ಮಾಹಿತಿ
    – ಹಣ ಮರಳಿಸುವಂತೆ ತಾಕೀತು

    ಬೆಂಗಳೂರು: ಕೊರೊನಾ ಸೋಂಕಿತರಿಂದ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಇಂದೂ ಸಹ ಹಲವು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

    ಎಡಿಜಿಪಿ ಸುನೀಲ್ ಅಗರ್‍ವಾಲ್, ಐಎಎಸ್ ಉಮಾ ಮಹಾದೇವನ್ ತಂಡದಿಂದ ಪರಿಶೀಲನೆ ನಡೆಸಲಾಗಿದ್ದು, ಸರ್ಜಾಪುರ ರಸ್ತೆಯ ಕೊಲಂಬಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಂದ ಹೆಚ್ಚುವರಿ ಹಣ ಪಡೆದಿರುವುದು ಪತ್ತೆಯಾಗಿದೆ. 14 ಸೋಂಕಿತರಿಂದ 5,02,245 ರೂ.ಗಳನ್ನ ಪಡೆದಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆದಿರುವುದು ದಾಳಿ ವೇಳೆ ಪತ್ತೆಯಾಗಿದೆ. ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ಸೋಂಕಿತ ಬ್ಯಾಂಕ್ ಖಾತೆಗೆ ಮರಳಿ ಜಮೆ ಮಾಡುವಂತೆ ಅಧಿಕಾರಿಗಳು ಆಸ್ಪತ್ರೆಗೆ ಸೂಚಿಸಿದ್ದಾರೆ. ಅಲ್ಲದೆ ಸೋಂಕಿತರಿಂದ ಹೆಚ್ಚುವರಿ ಹಣ ವಸೂಲಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

    ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಿರುವ ಬಗ್ಗೆ ಡಿಸ್ ಪ್ಲೇ ಬೊರ್ಡ್ ಖಡ್ಡಾಯವಾಗಿ ಅಳವಡಿಸುವಂತೆ ಇದೇ ವೇಳೆ ಸೂಚನೆ ನೀಡಿದ್ದಾರೆ. ತಂಡ ಇನ್ನೂ ನಾಲ್ಕು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಮಾರತ್ ಹಳ್ಳಿಯ ಸರ್ಕಾರಿ ಆಸ್ಪತ್ರೆ, ಯಶೋಮತಿ, ವೈಟ್‍ಫೀಲ್ಡ್ ನ ಕೋಲಂಬಿಯಾ ಏಷ್ಯಾ, ವೈದೇಹಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ. ನಾಲ್ಕು ಆಸ್ಪತ್ರೆಗಳ ಬಿಲ್ ಪರಿಶೀಲನೆ ನಡೆಸಿದ್ದು ಹೆಚ್ಚು ಹಣ ಪಡೆಯದಂತೆ ವಾರ್ನ್ ಮಾಡಿದ್ದಾರೆ.

  • ತಪಾಸಣೆ ವೇಳೆ ಡಿಸಿ ನಂಬರ್ ಕೊಟ್ಟ ಸೋಂಕಿತ – ಕರೆ ಸ್ವೀಕರಿಸಿ ದಂಗಾದ ಜಿಲ್ಲಾಧಿಕಾರಿ

    ತಪಾಸಣೆ ವೇಳೆ ಡಿಸಿ ನಂಬರ್ ಕೊಟ್ಟ ಸೋಂಕಿತ – ಕರೆ ಸ್ವೀಕರಿಸಿ ದಂಗಾದ ಜಿಲ್ಲಾಧಿಕಾರಿ

    ಮೈಸೂರು: ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬ ಕಿತಾಪತಿ ಮಾಡಿರುವ ಘಟನೆ ಮೈಸೂರಿನ ಹೆಬ್ಬಾಳ ಬಡಾವಣೆಯಲ್ಲಿ ನಡೆದಿದೆ.

    ಕೊರೊನಾ ತಪಾಸಣೆಗೆ ಬಂದ ವ್ಯಕ್ತಿಯೋರ್ವ ಪರೀಕ್ಷೆ ವೇಳೆ ತನ್ನ ನಂಬರ್ ಬದಲಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಅವರ ನಂಬರ್ ಅನ್ನು ಜಿಲ್ಲಾಡಳಿತಕ್ಕೆ ಕೊಟ್ಟು ಯಾಮಾರಿಸಿದ್ದಾನೆ. ಇದಾದ ಬಳಿಕ ಆ ವ್ಯಕ್ತಿಯ ಕೊರೊನಾ ವರದಿ ಬಂದಿದ್ದು, ಆತನಿಗೆ ಕೊರೊನಾ ಇರುವುದು ದೃಢಪಟ್ಟಿದೆ.

    ಕೊರೊನಾ ದೃಢಪಟ್ಟ ವ್ಯಕ್ತಿ ನೀಡಿದ ನಂಬರ್ ಗೆ ಮೈಸೂರು ಜಿಲ್ಲಾಡಳಿತದ ಕೊರೊನಾ ಕಂಟ್ರೋಲ್ ರೂಂನಿಂದ ಕರೆ ಮಾಡಿದ್ದಾರೆ. ನಿಮಗೆ ಪಾಸಿಟಿವ್ ಬಂದಿದೆ ಎಲ್ಲಿದ್ದೀರಾ ಎಂದು ಕೇಳಿದ್ದಾರೆ. ಈ ಮಾತುಗಳನ್ನು ಕೇಳಿ ಒಮ್ಮೆ ಗಾಬರಿಯಾದ ಡಿಸಿಯವರು, ನನಗೆ ಕೊರೊನಾ ಇದ್ಯಾ ಎಂದು ಭಾವಿಸಿ ನಾನ್ ರೀ ಜಿಲ್ಲಾಧಿಕಾರಿ ಮಾತಾನಾಡುತ್ತಿದ್ದೇನೆ ಎಂದು ಡಿಸಿ ಅಭಿರಾಮ್ ಅವರು ಹೇಳಿದ್ದಾರೆ.

    ಆಗ ಜಿಲ್ಲಾಡಳಿತದವರು ನಂಬರ್ ನೋಡಿ ಚೆಕ್ ಮಾಡಿದಾಗ ಕೊರೊನಾ ಸೋಂಕಿತ ಪರೀಕ್ಷೆ ವೇಳೆ ಆತನ ನಂಬರ್ ಬದಲು ಡಿಸಿ ಅವರ ನಂಬರ್ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಸದ್ಯ ತಪ್ಪು ನಂಬರ್ ಕೊಟ್ಟು ಕೊರೊನಾ ಸೋಂಕಿತ ಎಸ್ಕೇಪ್ ಆಗಿದ್ದು, ಸೋಂಕಿತನಿಗಾಗಿ ಅಧಿಕಾರಿಗಳು ಹುಡುಕಾಟ ಶುರು ಮಾಡಿದ್ದಾರೆ.

    ಈ ವಿಚಾರವಾಗಿ ಬೇಸರದಿಂದ ಈ ರೀತಿ ಕಿತಾಪತಿ ಕೆಲಸ ಮಾಡಿದ ವ್ಯಕ್ತಿಗೆ ಸಲಹೆ ನೀಡಿರುವ ಜಿಲ್ಲಾಧಿಕಾರಿ ಅಭಿರಾಮ್ ಅವರು, ಈ ರೀತಿ ಮಾಡಿದರೆ ಕೊರೊನಾ ಸಮಸ್ಯೆ ಜಿಲ್ಲೆಯಲ್ಲಿ ಮತ್ತಷ್ಟು ಉಲ್ಬಣ ಆಗಲಿದೆ. ಸಾರ್ವಜನಿಕರು ಕೊರೊನಾ ಕಂಟ್ರೋಲ್ ರೂಂಗೆ ಸರಿಯಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.