Tag: ಕೊರೊನಾ ಸೋಂಕಿತೆ

  • ಕೊರೊನಾದಿಂದ ಗುಣಮುಖರಾದ ಮಹಿಳೆ ಮೇಲೆ ಸೆಕ್ಯೂರಿಟಿ ಗಾರ್ಡ್‍ನಿಂದ ಹಲ್ಲೆ

    ಕೊರೊನಾದಿಂದ ಗುಣಮುಖರಾದ ಮಹಿಳೆ ಮೇಲೆ ಸೆಕ್ಯೂರಿಟಿ ಗಾರ್ಡ್‍ನಿಂದ ಹಲ್ಲೆ

    ಹಾಸನ: ಕೋವಿಡ್ ರೋಗಿಯ ಮೇಲೆ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹಲ್ಲೆ ನಡೆಸಿರುವ ಘಟನೆ ಹಾಸನ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.

    14 ದಿನದ ಐಸೊಲೇಷನ್ ಚಿಕಿತ್ಸೆ ಮುಗಿಸಿ ಮನೆಗೆ ಹೋಗಬೇಕಿದ್ದ ಕೋವಿಡ್ ರೋಗಿಯೊಬ್ಬರ ಮೇಲೆ ಸೆಕ್ಯೂರಿಟಿ ಗಾರ್ಡ್ ರಘು ಎಂಬಾತ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಕೊರೊನಾ ಗುಣಮುಖರಾಗಿ ಮನೆಗೆ ಹೋಗಬೇಕಿದ್ದ ಮಹಿಳೆ ಮತ್ತೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

    ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಹಿಮ್ಸ್ ಅಧೀಕ್ಷಕ ಕೃಷ್ಣಮೂರ್ತಿ ಮಹಿಳೆಗೆ ಸಾಂತ್ವನ ಹೇಳಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಸಿಬ್ಬಂದಿಗೆ ರೋಗಿಗಳ ಜೊತೆ ಸೌಜನ್ಯದಿಂದ ವರ್ತಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ವೇಳೆ ಹಲ್ಲೆ ಮಾಡಿಲ್ಲ ಎಂದು ಸಬೂಬು ಹೇಳಿದ ಸೆಕ್ಯೂರಿಟಿ ಗಾರ್ಡ್ ವಿರುದ್ಧ ಆಕ್ರೋಶ ಹೊರಹಾಕಿದ ಅವರು ಆತನ ವಿರುದ್ಧ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ.

  • ಅಂಬುಲೆನ್ಸ್ ಕಳುಹಿಸದ ಆರೋಗ್ಯ ಇಲಾಖೆ- 1 ಕಿ.ಮೀ ನಡೆದುಕೊಂಡೆ ಬಂದ ಸೋಂಕಿತೆ

    ಅಂಬುಲೆನ್ಸ್ ಕಳುಹಿಸದ ಆರೋಗ್ಯ ಇಲಾಖೆ- 1 ಕಿ.ಮೀ ನಡೆದುಕೊಂಡೆ ಬಂದ ಸೋಂಕಿತೆ

    ಕೊಪ್ಪಳ: ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಮಹಿಳೆಯೊಬ್ಬಳು ಒಂದು ಕಿಲೋ ಮೀಟರ್ ನಡೆದುಕೊಂಡು ಬಂದು ಕೋವಿಡ್ ಆಸ್ಪತ್ರೆಗೆ ದಾಖಲಾದ ಘಟನೆ ಬೆಳಕಿಗೆ ಬಂದಿದೆ.

    ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಈ ಘಟನೆ ನಡೆದಿದ್ದು, ಕಳೆದ ರಾತ್ರಿ ಮಹಿಳೆಯಲ್ಲಿ ಕೊರೊನಾ ದೃಢ ಪಡುತ್ತಿದಂತೆ ಆರೋಗ್ಯ ಇಲಾಖೆ ಅಂಬುಲೆನ್ಸ್ ಕಳುಹಿಸಿಕೊಡದಿದ್ದಾಗ ತನ್ನ ಪತಿಯೊಂದಿಗೆ ಒಂದು ಕಿಲೋ ಮೀಟರ್ ನಡೆದುಕೊಂಡು ಬಂದು ಕೋವಿಡ್ ಆಸ್ಪತ್ರೆಗೆ ಸೇರಿದ್ದಾಳೆ. ಅಂಬುಲೆನ್ಸ್ ಕಳಿಸಿ ಎಂದು ಕೇಳಿಕೊಂಡರೂ ಸಹ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ.

    ಇದರಿಂದ ಯಾವ ಆಟೋ ಆಸರೆ ಪಡೆಯದೆ, ನನ್ನಿಂದ ಇನ್ನೊಬ್ಬರಿಗೆ ಸೋಂಕು ತಗುಲಬಹುದು ಎಂದು ಅರಿತ ಮಹಿಳೆ ತನ್ನ ಪತಿಯೊಂದಿಗೆ ನಡೆದುಕೊಂಡೆ ಆಸ್ಪತ್ರೆ ಸೇರಿದ್ದಾಳೆ. ಗಂಗಾವತಿ ನಗರದ ಮುರಾರಿ ನಗರ ನಿವಾಸಿಯಾಗಿರುವ ಮಹಿಳೆ ಕಳೆದ 15 ದಿನಗಳ ಹಿಂದೆ ಬೆಂಗಳೂರಿನಿಂದ ಗಂಗಾವತಿಗೆ ಆಗಮಿಸಿದ್ದರು. ರೋಗ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಂಟಲು ದ್ರವದ ಟೆಸ್ಟ್ ಮಾಡಿಸಲಾಗಿತ್ತು.

    ಕಳೆದ ರಾತ್ರಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಹಿಳೆ ಅಂಬುಲೆನ್ಸ್ ಆಸರೆಯಿಲ್ಲದೆ ಕೋವಿಡ್ ಆಸ್ಪತ್ರೆ ಸೇರಿದ್ದಾಳೆ. ಅಂಬುಲೆನ್ಸ್ ಕಳೆಸಿ ಕೊಡದ ಆರೋಗ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಕೊರೊನಾ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ- ಹೆಣ್ಣು ಮಗು ಜನನ

    ಕೊರೊನಾ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ- ಹೆಣ್ಣು ಮಗು ಜನನ

    ಗದಗ: ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ ವೈದ್ಯಕೀಯ ಸಿಬ್ಬಂದಿಗಳ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿರುವ ಘಟನೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಜಿಲ್ಲೆಯ ಗೋಜನೂರು ಗ್ರಾಮದ ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಗಿದೆ. ಸೋಂಕಿತರು ಅಂದರೆ ನಿಷ್ಠೂರವಾಗಿ ನೋಡುವುದರ ಜೊತೆಗೆ ಯಾರು ಹತ್ರಾನೂ ಸುಳಿಯಲ್ಲ. ಈ ಸಂದರ್ಭದಲ್ಲಿ ಗದಗ ಜಿಮ್ಸ್ ವೈದ್ಯರು ಸಿಸೇರಿನ್ ಮೂಲಕ ಎರಡು ಜೀವ ಉಳಿಸಿದ್ದಾರೆ. ವೈದ್ಯರಾದ ಡಾ.ಶಿವನಗೌಡ, ಡಾ.ಶೃತಿ ಹಾಗೂ ಡಾ ಅಜಯ್ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದರಿಂದ ಸೋಂಕಿತೆಗೆ ಹೆಣ್ಣು ಮಗು ಜನನವಾಗಿದೆ.

    ನವಜಾತ ಶಿಶು 2.7 ಕೆಜಿ ತೂಕ ಹೊಂದಿದೆ. ಶಿಶುವಿಗೆ ಸ್ವಲ್ಪ ಉಸಿರಾಟದ ತೊಂದರೆ ಇರೋದರಿಂದ ಕೋವಿಡ್-19 ವಾರ್ಡ್‍ನಲ್ಲಿ ವಿಶೇಷ ಆರೈಕೆ ಮಾಡಲಾಗುತ್ತಿದೆ. ಮಗು ಚೇತರಿಸಿಕೊಳ್ಳುವ ಲಕ್ಷಣಗಳು ಇದೆ ಎಂದು ವೈದ್ಯರು ಹೇಳಿದ್ದಾರೆ. ಸೋಂಕಿತ ಮಹಿಳೆಗೆ ಮೊದಲನೇಯ ಹೆರಿಗೆ ಕೂಡ ಶಸ್ತ್ರಚಿಕಿತ್ಸೆಯಿಂದ ಆಗಿತ್ತು. ಈಗ 2ನೇ ಹೆರಿಗೆಯನ್ನು ಕೂಡ ಶಸ್ತ್ರಚಿಕಿತ್ಸೆ ಮೂಲಕ ಮಾಡಲಾಗಿದೆ. ಗದಗ ವೈದ್ಯಕೀಯ ಸಿಬ್ಬಂದಿ ತಂಡದ ಉತ್ತಮ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೀಯ ವ್ಯಕ್ತವಾಗುತ್ತಿದೆ.

  • ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

    ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

    – ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.

    ಕೊರೊನಾ ಸೋಂಕು ಪಾಸಿಟಿವ್ ಇದ್ದ ಹುಬ್ಬಳ್ಳಿ ತಾಲೂಕು ಉಮಚಗಿ ಗ್ರಾಮದ 25 ವರ್ಷದ ತುಂಬು ಗರ್ಭಿಣಿಗೆ, 39 ವಾರಗಳು ಹಾಗೂ 04 ದಿನಗಳು ಪೂರ್ಣಗೊಂಡಿದ್ದರೂ ಸಹಜ ಹೆರಿಗೆ ಸಾಧ್ಯವಿಲ್ಲದ ಲಕ್ಷಣಗಳಿದ್ದವು. ಹೀಗಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವಲ್ಲಿ ಕಿಮ್ಸ್ ವೈದ್ಯರ ತಂಡ ಯಶಸ್ವಿಯಾಗಿದೆ.

    ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿದ್ದು, 3.5 ಕೆ.ಜಿ ತೂಕದ ಹೆಣ್ಣು ಮಗುವಿಗೆ ತಾಯಿ ಜನ್ಮ ನೀಡಿದ್ದಾಳೆ. ವಿಭಾಗದ ಮುಖ್ಯಸ್ಥೆ ಡಾ.ಕಸ್ತೂರಿ ಡೋಣಿಮಠ, ಶಸ್ತ್ರಚಿಕಿತ್ಸಕ ಡಾ.ವೈ.ಎಂ.ಕಬಾಡಿ, ಅರವಳಿಕೆ ತಜ್ಞೆ ಡಾ.ವೀಣಾ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ.ಅಕ್ಷತಾ ನಿಂಗನೂರೆ, ಡಾ.ಸಹನಾ, ಡಾ.ರೂಪಾ, ನರ್ಸಿಂಗ್ ವಿಭಾಗದ ಶ್ವೇತಾ, ರೇಷ್ಮಾ, ಸಹಾಯಕ ಸಿಬ್ಬಂದಿ ಕಳಕಪ್ಪ ಮತ್ತಿತರರ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.

    ಕಿಮ್ಸ್ ತಜ್ಞರ ಕಾರ್ಯಕ್ಕೆ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.