Tag: ಕೊರೋನಾ ಎಫೆಕ್ಟ್

  • ಕೊರೊನಾ ಎಫೆಕ್ಟ್: ಕಾಲಿಗೆ ನಮಸ್ಕರಿಸಲು ಬಂದ ಪ್ರತಾಪ್ ಸಿಂಹ, ತಡೆದ ಬೋಪಯ್ಯ

    ಕೊರೊನಾ ಎಫೆಕ್ಟ್: ಕಾಲಿಗೆ ನಮಸ್ಕರಿಸಲು ಬಂದ ಪ್ರತಾಪ್ ಸಿಂಹ, ತಡೆದ ಬೋಪಯ್ಯ

    – ‘ಮೈಸೂರಿನವರನ್ನು ಕಂಡ್ರೆ ಭಯ ನಾ ಸರ್..!’

    ಮಡಿಕೇರಿ: ಕೊರೋನಾ ವೈರಸ್‍ನ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವೇಳೆ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಚರ್ಚೆ ನಡೆಸಲು ವಿರಾಜಪೇಟೆಗೆ ಸಂಸದ ಪ್ರತಾಪ್ ಸಿಂಹ, ಸಚಿವ ಸೋಮಣ್ಣ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಾಲಿಗೆ ನಮಸ್ಕರಿಸಲು ಮುಂದಾದ ಪ್ರತಾಪ್ ಸಿಂಹ ಅವರನ್ನು ತಡೆದ ಶಾಸಕ ಬೋಪಯ್ಯ ಅವರು ದೂರದಿಂದಲೇ ನಮಸ್ಕರಿಸಲು ತಿಳಿಸಿದ ಘಟನೆ ನಡೆಯಿತು.

    ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರೊಂದಿಗೆ ವಿರಾಜಪೇಟೆಗೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕೆ.ಜಿ ಬೋಪಯ್ಯ ಅವರ ಕಾಲಿಗೆ ನಮಸ್ಕರಿಸಲು ಪ್ರತಾಪ್ ಸಿಂಹ ಮುಂದಾದರು. ಕೂಡಲೇ ಸಂಸದರನ್ನು ತಡೆದ ಬೋಪಯ್ಯ ಅವರು, ‘ದೂರವೇ ನಿಂತು ನಮಸ್ಕರಿಸಿ. ನೀವು ಮೈಸೂರಿನವರು ಸ್ವಲ್ಪ ಭಯವಾಗುತ್ತದೆ ಎಂದರು. ಇದಕ್ಕೆ ನಗುತ್ತಲೇ ಉತ್ತರಿಸಿದ ಸಂಸದರು, ‘ಮೈಸೂರಿನವರನ್ನು ಕಂಡ್ರೆ ಭಯ ನಾ ಸರ್..!’ ಎಂದು ಸ್ಥಳದಿಂದ ತೆರಳಿದರು. ಇತ್ತ ಪಕ್ಷದ ಕಾರ್ಯಕರ್ತರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಉಸ್ತುವಾರಿ ಸಚಿವರನ್ನು ಮುಗಿಬಿದ್ದು ಮಾತಾನಾಡಿಸುವ ದೃಶ್ಯ ಕಂಡು ಬಂತು.

    ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ದೇಶವೇ ಲಾಕ್‍ಡೌನ್ ಆಗಿದೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಾಕಷ್ಟು ತಿಳುವಳಿಕೆ ನೀಡಲಾಗುತ್ತಿದೆ. ಸಚಿವ ಸೋಮಣ್ಣ ಬಂದಿದ್ದ ವೇಳೆ ಸ್ಥಳೀಯರು, ಕಾರ್ಯಕರ್ತರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ. ಘಟನೆ ಬಳಿಕ ಎಚ್ಚೆತ್ತ ಪೊಲೀಸರು ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪದೇ ಪದೇ ಸೂಚನೆ ನೀಡಿದರು. ಪೊಲೀಸರ ಸೂಚನೆಯ ಬಳಿಕವೂ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿರ್ಲಷ್ಯ ವಹಿಸಲಾಗಿತ್ತು.