Tag: ಕೊರೋನ ವೈರಸ್

  • ಇಂದಿನಿಂದ ಯುಪಿ, ಪಂಜಾಬ್, ಸಿಕ್ಕಿಂನಲ್ಲಿ ಶಾಲೆಗಳು ಓಪನ್ – ಮಾರ್ಗಸೂಚಿಯಲ್ಲಿ ಏನಿದೆ?

    ಇಂದಿನಿಂದ ಯುಪಿ, ಪಂಜಾಬ್, ಸಿಕ್ಕಿಂನಲ್ಲಿ ಶಾಲೆಗಳು ಓಪನ್ – ಮಾರ್ಗಸೂಚಿಯಲ್ಲಿ ಏನಿದೆ?

    ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್‍ನಿಂದ ಮುಚ್ಚಿರುವ ಶಾಲೆಗಳು ಹಂತ ಹಂತವಾಗಿ ತೆರೆಯಲ್ಪಡುತ್ತಿದೆ. ಅನ್‍ಲಾಕ್ 5.0 ಅಂಗವಾಗಿ 9 ರಿಂದ 12 ತರಗತಿವರೆಗಿನ ಶಾಲೆಗಳು ಉತ್ತರ ಪ್ರದೇಶ, ಪಂಜಾಬ್ ಮತ್ತು ಸಕ್ಕಿಂನಲ್ಲಿ ಸೋಮವಾರದಿಂದ ಪ್ರಾರಂಭವಾಗಿದೆ.

    ಶಾಲೆಗಳು ಪ್ರಾರಂಭವಾಗುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರದ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಕಟ್ಟು ನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರತಿಯೊಬ್ಬರು ಇದನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ.

    ಉತ್ತರಪ್ರದೇಶದಲ್ಲಿ ಪ್ರಾರಂಭವಾಗುವ ಶಾಲೆಗಳು ಎರಡು ಪಾಳಿಯಲ್ಲಿ ತರಗತಿಗಳು ನಡೆಯಲಿದೆ. ಮೊದಲ ಪಾಳಿಯಲ್ಲಿ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿರುತ್ತಾರೆ. ಎರಡನೇ ಪಾಳಿಯಲ್ಲಿ 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುತ್ತದೆ.

    ಮೊದಲ ಪಾಳಿಯಲ್ಲಿ ಬೆಳಿಗ್ಗೆ 8:50 ರಿಂದ ಮಧ್ಯಾಹ್ನ 3:50ರವರೆಗೆ ನಡೆದರೆ ಎರಡನೇ ಪಾಳಿಯನ್ನು ಮಧ್ಯಾಹ್ನ 12:20 ರಿಂದ ಮಧ್ಯಾಹ್ನ 3:30ರವರೆಗೆ ನಡೆಸಲಾಗುತ್ತದೆ. ಸರ್ಕಾರದ ಆದೇಶದಂತೆ ಪ್ರತಿ ತರಗತಿಯಲ್ಲಿ 50 ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಲಾಗುವುದು ಮತ್ತು ಉಳಿದ ವಿದ್ಯಾರ್ಥಿಗಳಿಗೆ ಮರುದಿನ ತರಗತಿಯನ್ನು ನಡೆಸಲಾಗುತ್ತದೆ.

    ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ. ತರಗತಿಗಳು ಪ್ರಾರಂಭವಾಗುವ ಮುನ್ನ ಶುಚಿತ್ವವನ್ನು ಕಾಪಾಡಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ. ಶಾಲೆಗಳಲ್ಲಿ ಸ್ಯಾನಿಟೈಸರ್, ಹ್ಯಾಂಡ್ ವಾಶ್ ಇಡಬೇಕು ಮತ್ತು ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದೆ.

    ಸಿಬ್ಬಂದಿ ಅಥವಾ ವಿದ್ಯಾರ್ಥಿಯಲ್ಲಿ ಜ್ವರ ಅಥವಾ ಶೀತದ ಲಕ್ಷಣ ಕಾಣಿಸಿಕೊಂಡರೆ ಪ್ರಾಥಮಿಕ ಚಿಕಿತ್ಸೆ ನಂತರ ಅವರನ್ನು ಮನೆಗೆ ಕಳುಹಿಸಿಕೊಡಬೇಕು. ಶಾಲಾ ಬಸ್ಸುಗಳನ್ನು ಪ್ರತಿನಿತ್ಯ ಸ್ವಚ್ಛಗೊಳಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    ಪಂಜಾಬ್‍ನಲ್ಲಿ ಹೇಗೆ?
    ಸರ್ಕಾರದ ಆದೇಶದ ಪ್ರಕಾರ ಪ್ರತಿದಿನ ಮೂರು ಗಂಟೆಗಳ ಕಾಲ ಮಾತ್ರ ಶಾಲೆ ತೆರೆದಿರುತ್ತೆದೆ. ಕಂಟೈನ್ಮೆಂಟ್ ಜೋನ್‍ನಲ್ಲಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ತರಗತಿಗೆ ಹಾಜರಾಗಲು ಅವಕಾಶ ಇರುವುದಿಲ್ಲ. ಓರ್ವ ವಿದ್ಯಾರ್ಥಿ ಮಾತ್ರ ಒಂದು ಬೆಂಚ್‍ನಲ್ಲಿ ಕುಳಿತು ಪಾಠ ಕೇಳಲು ಅವಕಾಶ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    ಸಿಕ್ಕಿಂನಲ್ಲಿ ಹೇಗೆ?
    ಸಿಕ್ಕಿಂನಲ್ಲಿ ಸೆಪ್ಟೆಂಬರ್ 21 ರಿಂದಲೇ ಹೆಚ್ಚಿನ ಶಾಲೆಗಳನ್ನು ತೆರೆಯಲಾಗಿದೆ. ಆದರೆ ಇಂದಿನಿಂದ ಎಲ್ಲಾ ಶಾಲೆಗಳನ್ನು ಶ್ರೇಣೀಕೃತ ರೀತಿಯಲ್ಲಿ ಪುನಃ ತೆರೆಯಲು ಸಿಕ್ಕಿಂ ಸರ್ಕಾರ ನಿರ್ಧರಿಸಿದೆ. ಜೊತೆಗೆ ಚಳಿಗಾಲದ ರಜೆ ಮತ್ತು ವಾರಾಂತ್ಯದ ರಜೆಯನ್ನು ರದ್ದುಗೊಳಿಸುವುದಾಗಿ ಸರ್ಕಾರ ಘೋಷಿಸಿದೆ.

    ಆನ್‍ಲೈನ್ ತರಗತಿಗಳು ಆಫ್‍ಲೈನ್ ತರಗತಿಗಳೊಂದಿಗೆ ಮುಂದುವರೆಯುತ್ತವೆ. ವಿದ್ಯಾರ್ಥಿಯನ್ನು ಶಾಲೆಗೆ ಬರುವಂತೆ ಒತ್ತಾಯಿಸುವಂತಿಲ್ಲ. ಪೋಷಕರು ತಮ್ಮ ಮಗುವನ್ನು ಶಾಲೆಗೆ ಕಳುಹಿಸಲು ಲಿಖಿತ ಒಪ್ಪಿಗೆಯನ್ನು ನೀಡಬೇಕಾಗುತ್ತದೆ.

  • ಬೆಂಗಳೂರು ಟೆಕ್ಕಿಗೆ ಕೊರೋನಾ ಬಂದಿದ್ದು ಹೇಗೆ?

    ಬೆಂಗಳೂರು ಟೆಕ್ಕಿಗೆ ಕೊರೋನಾ ಬಂದಿದ್ದು ಹೇಗೆ?

    ಬೆಂಗಳೂರು: ತೆಲಂಗಾಣ ಆರೋಗ್ಯ ಇಲಾಖೆ ಬೆಂಗಳೂರು ಟೆಕ್ಕಿ ಕೊರೋನಾ ವೈರಸ್ ತುತ್ತಾಗಿರೋದನ್ನು ಖಚಿತ ಪಡಿಸಿದೆ. ಟೆಕ್ಕಿಯನ್ನು ಹೈದರಾಬಾದ್ ನಗರದ ಗಾಂಧಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಟೆಕ್ಕಿಗೆ ಕೊರೋನಾ ವೈರಸ್ ಬಂದಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

    ಟೆಕ್ಕಿ ಕಚೇರಿಯ ಕೆಲಸಕ್ಕಾಗಿ ಫೆಬ್ರವರಿ 17ರಂದು ದುಬೈಗೆ ತೆರಳಿದ್ದರು. ದುಬೈನಿಂದ ಫೆಬ್ರವರಿ 20ರಂದು ಬೆಂಗಳೂರಿಗೆ ವಾಪಸ್ ಆಗಿದ್ದರು. ಎರಡು ದಿನ ಕೆಲಸಕ್ಕೆ ಹಾಜರಾಗಿದ್ದ ಟೆಕ್ಕಿ ಹೈದರಾಬಾದ್ ನಲ್ಲಿರುವ ಊರಿಗೆ ತೆರಳಿದ್ದರು. ಮನೆಗೆ ಬರುವಾಗಲೇ ಟೆಕ್ಕಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಕುರಿತು ಕುಟುಂಬಕ್ಕೂ ಮಾಹಿತಿ ನೀಡಿದ್ದರು. ತದನಂತರ ಸಿಕಂದರಾಬಾದ್ ನಲ್ಲಿರು ಅಪೋಲೋ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದರು. ಜ್ವರ ಕಡಿಮೆಯಾಗದಿದ್ದಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು.

    ಟೆಕ್ಕಿ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕೆಲಸ ಮಾಡುತ್ತಿದ್ದು, ಪ್ರೊಜೆಕ್ಟ್ ವರ್ಕ್ ಸಂಬಂಧಿಸಿದಂತೆ ದುಬೈಗೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೊರೋನಾ ಸೋಂಕಿಗೆ ತುತ್ತಾಗಿರುವ ಟೆಕ್ಕಿ ಬೆಂಗಳೂರಿನ ಪಿಜಿಯಲ್ಲಿ ವಾಸವಾಗಿದ್ದರು ಕುರಿತು ತಿಳಿದು ಬಂದಿದೆ.

    ಮಾರ್ಚ್ 1ರಂದು ಜ್ವರ ಹಾಗೂ ಕಫ ಕಡಿಮೆಯಾಗದಿದ್ದಾಗ ಟೆಕ್ಕಿಯ ರಕ್ತದ ಮಾದರಿಯನ್ನು ತಪಾಸಣೆಗಾಗಿ ಗಾಂಧಿ ಆಸ್ಪತ್ರೆಗೆ ಕಳಿಸಿದಾಗ ಮಾರ್ಚ್ 2ರಂದು ಕೊರೋನಾ ಸೋಂಕು ಇರೋದು ಪತ್ತೆಯಾಗಿತ್ತು. ಕೂಡಲೇ ಆಸ್ಪತ್ರೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಾಹಿತಿ ರವಾನಿಸಿತ್ತು. ಪುಣೆಯ ಲ್ಯಾಬ್ ನಿಂದಲೂ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ.

    ಕೊರೋನಾ ವೈರಸ್ ಗೆ ತುತ್ತಾಗಿರುವ ಟೆಕ್ಕಿಯನ್ನು ತೀವ್ರನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತೆಲಂಗಾಣ ಆರೋಗ್ಯ ಸಚಿವರು ಖಚಿತಪಡಿಸಿದ್ದಾರೆ. ಕೊರೋನಾ ಸೋಂಕಿತ ಟೆಕ್ಕಿ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದನು. ಹಾಗಾಗಿ ಟೆಕ್ಕಿ ಪ್ರಯಾಣ ಬೆಳೆಸಿದ ಬಸ್ ನಲ್ಲಿಯ ಪ್ರಯಾಣಿಕರ ಮಾಹಿತಿಗೆ ಅಧಿಕಾರಿಗಳು ಮುಂದಾಗಿದ್ದಾರೆ.

    ಕಳೆದ ಎರಡು ದಿನಗಳಿಂದ ಟೆಕ್ಕಿ ಸುಮಾರು 80 ಜನರೊಂದಿಗೆ ಸಂಪರ್ಕದಲ್ಲಿದ್ದನು. ಬಸ್ ನಲ್ಲಿ ಸಹ ಪ್ರಯಾಣಿಕರು, ಕುಟುಂಬಸ್ಥರು, ವೈದ್ಯರು ಮತ್ತು ಅಪೋಲೋ ಆಸ್ಪತ್ರೆಯ ಸಿಬ್ಬಂದಿ ಜೊತೆ ಸಂಪರ್ಕದಲ್ಲಿದ್ದನು. ಎಲ್ಲರ ಮೇಲೆ ನಿಗಾ ಇರಿಸಲಾಗಿದೆ. ಈ ಸಂಬಂಧ ಟೆಕ್ಕಿ ಕೆಲಸ ಮಾಡುತ್ತಿರುವ ಕಂಪನಿ ಮತ್ತು ಆತ ಪ್ರಯಾಣ ಬೆಳೆಸಿದ ಬಸ್ ಮಾಲೀಕರಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ರಾಜೇಂದ್ರ ಹೇಳಿದ್ದಾರೆ.

  • 24 ವರ್ಷದ ಬೆಂಗ್ಳೂರು ಟೆಕ್ಕಿಗೆ ಕೊರೋನಾ ವೈರಸ್

    24 ವರ್ಷದ ಬೆಂಗ್ಳೂರು ಟೆಕ್ಕಿಗೆ ಕೊರೋನಾ ವೈರಸ್

    -ಹೈದರಾಬಾದ್‍ಗೆ ಪ್ರಯಾಣ ಬೆಳೆಸಿದ್ದ ಟೆಕ್ಕಿ
    -ಸಹ ಪ್ರಯಾಣಿಕರ ಮಾಹಿತಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    ಹೈದರಾಬಾದ್: ತೆಲಂಗಾಣದ ಇಬ್ಬರಲ್ಲಿ ಬೆಂಗಳೂರು ಮೂಲದ ಟೆಕ್ಕಿ ಕೊರೋನಾ ವೈರಸ್‍ಗೆ ತುತ್ತಾಗಿರುವ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಟೆಕ್ಕಿಗೆ ಕೊರೋನಾ ವೈರಸ್‍ಗೆ ಒಳಗಾಗಿರೋದು ದೃಢಪಟ್ಟಿದೆ.

    ಕೊರೋನಾ ವೈರಸ್ ಗೆ ತುತ್ತಾಗಿರುವ ಟೆಕ್ಕಿಯನ್ನು ತೀವ್ರನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತೆಲಂಗಾಣ ಆರೋಗ್ಯ ಸಚಿವರು ಖಚಿತಪಡಿಸಿದ್ದಾರೆ. ಕೊರೋನಾ ಸೋಂಕಿತ ಟೆಕ್ಕಿ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದನು. ಹಾಗಾಗಿ ಟೆಕ್ಕಿ ಪ್ರಯಾಣ ಬೆಳೆಸಿದ ಬಸ್ ನಲ್ಲಿಯ ಪ್ರಯಾಣಿಕರ ಮಾಹಿತಿಗೆ ಅಧಿಕಾರಿಗಳು ಮುಂದಾಗಿದ್ದಾರೆ.

    ಹೈದರಾಬಾದ್ ನಗರದ ಮಹೀಂದ್ರ ಹಿಲ್ಸ್ ನಲ್ಲಿ ವಾಸವಾಗಿದ್ದ ಟೆಕ್ಕಿಗೆ ಮೊದಲು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಾಂಧಿ ಆಸ್ಪತ್ರೆಗೆ ರೆಫೆರ್ ಮಾಡಲಾಗಿತ್ತು. ಪುಣೆ ಲ್ಯಾಬ್ ನಿಂದ ಬಂದ ವರದಿಯಲ್ಲಿಯೂ ಟೆಕ್ಕಿ ಕೊರೋನ ವೈರಸ್ ಗೆ ತುತ್ತಾಗಿರುವುದು ಖಚಿತವಾಗಿದೆ.

    ಕಳೆದ ಎರಡು ದಿನಗಳಿಂದ ಟೆಕ್ಕಿ ಸುಮಾರು 80 ಜನರೊಂದಿಗೆ ಸಂಪರ್ಕದಲ್ಲಿದ್ದನು. ಬಸ್ ನಲ್ಲಿ ಸಹ ಪ್ರಯಾಣಿಕರು, ಕುಟುಂಬಸ್ಥರು, ವೈದ್ಯರು ಮತ್ತು ಅಪೋಲೋ ಆಸ್ಪತ್ರೆಯ ಸಿಬ್ಬಂದಿ ಜೊತೆ ಸಂಪರ್ಕದಲ್ಲಿದ್ದನು. ಎಲ್ಲರ ಮೇಲೆ ನಿಗಾ ಇರಿಸಲಾಗಿದೆ. ಈ ಸಂಬಂಧ ಟೆಕ್ಕಿ ಕೆಲಸ ಮಾಡುತ್ತಿರುವ ಕಂಪನಿ ಮತ್ತು ಆತ ಪ್ರಯಾಣ ಬೆಳೆಸಿದ ಬಸ್ ಮಾಲೀಕರಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ರಾಜೇಂದ್ರ ಹೇಳಿದ್ದಾರೆ.