Tag: ಕೊಲೆಗೆ ಯತ್ನ

  • ಓಡಿಹೋಗಿ ತಂಗಿಯನ್ನು ಮದುವೆಯಾದವನ ಬೆರಳನ್ನೇ ಕತ್ತರಿಸಿದ ಅಣ್ಣ

    ಓಡಿಹೋಗಿ ತಂಗಿಯನ್ನು ಮದುವೆಯಾದವನ ಬೆರಳನ್ನೇ ಕತ್ತರಿಸಿದ ಅಣ್ಣ

    ಬೆಂಗಳೂರು: ತಂಗಿಯನ್ನು ಪ್ರೇಮ ವಿವಾಹವಾಗಿದ್ದ ಬಾವನ ಮೇಲೆ ಅಣ್ಣ ಕೊಲೆಗೆ ಯತ್ನಿಸಿ, ಕಿರು ಬೆರಳು ಕತ್ತರಿಸಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ.

    ಪೀಣ್ಯ ಇಂಡಸ್ಟ್ರಿಯಲ್ ಏರಿಯಾದ ನಿವಾಸಿ ಹನುಮಂತನ ಮೇಲೆ ಹಲ್ಲೆ ಮಾಡಲಾಗಿದೆ. ಹನುಮಂತನ ಅತ್ತೆ ಮಗ ಸಂತೋಷ ಹಲ್ಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಆಗಸ್ಟ್ 12ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತೋಷ್ ಮನೆಯಲ್ಲೇ ವಾಸವಾಗಿದ್ದ ಹನುಮಂತ ಆರೋಪಿಯ ತಂಗಿಯನ್ನು ಪ್ರೀತಿಸಿದ್ದನು. ಇದಕ್ಕೆ ಸಂತೋಷ್ ತಂಗಿ ಕೂಡ ಒಪ್ಪಿದ್ದಳು. ಆದರೆ ಮನೆಯಲ್ಲಿ ತಮ್ಮ ಪ್ರೀತಿ ಒಪ್ಪದ ಕಾರಣಕ್ಕೆ ಇಬ್ಬರೂ ಕಳೆದ ಒಂದು ವರ್ಷದ ಹಿಂದೆ ಓಡಿಹೋಗಿದ್ದರು. ಆ ನಂತರ ಮದುವೆಯನ್ನು ಕೂಡ ಮಾಡಿಕೊಂಡಿದ್ದರು. ಇತ್ತ ಮನೆಯ ಮರ್ಯಾದೆ ಕಳೆದಿದ್ದಾರೆ ಎಂದು ಸಂತೋಷ್‍ಗೆ ಇಬ್ಬರ ಮೇಲೂ ಕೋಪವಿತ್ತು. ಆದರೆ ಓಡಿಹೋಗಿದ್ದವರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ.

    ಮದುವೆ ಬಳಿಕ ಆಗಸ್ಟ್ 12ರಂದು ಹನುಮಂತ ಸಂತೋಷನ ಕಣ್ಣಿಗೆ ಬಿದ್ದಿದ್ದನು. ಮೊದಲೇ ಕೋಪದಲ್ಲಿದ್ದ ಸಂತೋಷ್ ಸ್ನೇಹಿತನ ಜೊತೆ ಸೇರಿ ಹನುಮಂತನನ್ನು ಕೊಲೆ ಮಾಡಲು ಯತ್ನಿಸಿದ್ದನು. ಹನುಮಂತನನ್ನು ಚಾಕುವಿನಿಂದ ಸಂತೋಷ್ ಎದೆಗೆ ಇರಿಯಲು ಹೋದಾಗ, ತಪ್ಪಿಸಿಕೊಳ್ಳಲು ಪ್ರಯತ್ನಿಸುವ ಬರದಲ್ಲಿ ಹನುಮಂತನ ಎಡಗೈ ಕಿರುಬೆರಳು ಕಟ್ ಆಗಿತ್ತು. ಆಗ ಇಬ್ಬರು ಆರೋಪಿಗಳು ಪರಾರಿಯಾಗಿದ್ದರು.

    ಈ ಬಗ್ಗೆ ಹನುಮಂತ ಪೊಲೀಸರಿಗೆ ದೂರು ನೀಡಿದ್ದು, ಪರಪ್ಪನ ಅಗ್ರಹಾರ ಪೊಲೀಸರು ಆರೋಪಿಗಳಾದ ಸಂತೋಷ್ ಮತ್ತು ಪ್ರೇಮ್‍ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ತಾಯಿಯನ್ನೇ ಕೊಲ್ಲಲು ಯತ್ನಿಸಿದ್ದ ಮಗನಿಗೆ 5 ವರ್ಷ ಜೈಲು

    ತಾಯಿಯನ್ನೇ ಕೊಲ್ಲಲು ಯತ್ನಿಸಿದ್ದ ಮಗನಿಗೆ 5 ವರ್ಷ ಜೈಲು

    ರಾಯಚೂರು: ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿದ್ದ ಆರೋಪಿ ಮಗನಿಗೆ ಜಿಲ್ಲಾ ಸತ್ರ ನ್ಯಾಯಾಲವು 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ರಾಯಚೂರು ತಾಲೂಕಿನ ಹಿರಾಪುರದ ಗ್ರಾಮದ ಈರೇಶ್ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. ನರಸಮ್ಮ ಹಲ್ಲೆಗೊಳಗಾಗಿದ್ದ ತಾಯಿ. ಕೋರ್ಟ್ ಆರೋಪಿಗೆ 5 ವರ್ಷ ಜೈಲು ಶಿಕ್ಷೆಯ ಜೊತೆಗೆ 27,500 ರೂ. ದಂಡವನ್ನು ವಿಧಿಸಿದೆ.

    ಏನಿದು ಪ್ರಕರಣ?:
    ನರಸಮ್ಮ ಅವರು ಆಸ್ತಿಯನ್ನು ಮಾರಿ ಹಣವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಆ ಹಣವನ್ನು ತನಗೆ ನೀಡುವಂತೆ ಮಗ ಈರೇಶ್ ಒತ್ತಾಯಿಸಿದ್ದ. ಆದರೆ ನರಸಮ್ಮ ನನ್ನ ಜೀವನೋಪಾಯಕ್ಕೆ ಈ ಹಣ ಬೇಕು. ನಾನು ಕೊಡುವುದಿಲ್ಲ ಅಂತ ಮಗನಿಗೆ ಹೇಳಿದ್ದರು. ಇದರಿಂದಾಗಿ ಇಬ್ಬರ ನಡುವೆ ವಾಗ್ದಾಳಿ ಕೂಡ ಆಗಿತ್ತು. ಹಣ ಕೊಡಲಿಲ್ಲವೆಂದು ಈರೇಶ್ 2017ರ ಜುಲೈನಲ್ಲಿ ತಾಯಿಯ ಮೇಲೆ ಹಲ್ಲೆ ಮಾಡಿದ್ದ.

    ಈ ಕುರಿತು ನರಸಮ್ಮ ಯರಗೇರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈರೇಶ್‍ನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಪ್ರಕರಣ ನಡೆದು 18 ತಿಂಗಳ ಬಳಿಕ ಆರೋಪಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ಚಿತ್ರದುರ್ಗ: ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ಮಾಡದಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಗೊಲ್ಲರಹಟ್ಟಿ ನಿವಾಸಿ ಚಿದಾನಂದ(26) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ಶ್ರೀನಿವಾಸ, ಸುನಿಲ್, ಮಂಜ, ಪ್ರವೀಣ್ ಸೇರಿದಂತೆ ಏಳು ಜನರು ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ವೇಳೆ ಚಿದಾನಂದ ತಾಯಿ ಸಿದ್ದಮ್ಮ ಅವರ ಮೇಲೂ ಹಲ್ಲೆ ನಡೆದಿದೆ.

    ಆಗಿದ್ದೇನು?:
    ಚಿದಾನಂದ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರಿಯುತ್ತಿದ್ದರು. ಇದನ್ನು ಸಹಿಸದ ಅದೇ ಗ್ರಾಮದ ಮತ್ತೊಂದು ಕೋಮಿನ ಯುವಕರು ಇಂದು ಮದ್ಯ ಸೇವನೆ ಮಾಡಿ ಚಿದಾನಂದ ಮನೆಗೆ ಬಂದಿದ್ದರು. ಮನೆಯ ಮುಂದೆ ನಿಂತು ಸಿದ್ದಮ್ಮ ಅವರ ಜೊತೆಗೆ ಅಸಭ್ಯ ವರ್ತಿಸಿ, ನಿಂದಿಸಿದ್ದಾರೆ. ಈ ವೇಳೆ ಚಿದಾನಂದ ಮಧ್ಯ ಪ್ರವೇಶಿಸುತ್ತಿದ್ದಂತೆ ಅವರ ತಲೆಗೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.

    ಘಟನೆಯಿಂದಾಗಿ ಚಿದಾನಂದ ಅವರ ಎದೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಇದನ್ನು ತಡೆಯಲು ಬಂದಿದ್ದ ಸಿದ್ದಮ್ಮ ಅವರಿಗೂ ದುಷ್ಕರ್ಮಿಗಳು ಹೊಡೆದಿದ್ದಾರೆ. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಯುವಕರು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳು ಚಿದಾನಂದ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಮಗನ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿ ಸಹಿಸಲಾಗದೇ ಈ ಕೃತ್ಯ ಎಸಗಿದ್ದಾರೆ ಎಂದು ಚಿದಾನಂದ ತಾಯಿ ಸಿದ್ದಮ್ಮ ಆರೋಪಿಸಿದ್ದಾರೆ. ಹೊಸದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ಪ್ರೇಮ ವೈಫಲ್ಯಕ್ಕೆ ಪ್ರಿಯತಮೆ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!

    ಪ್ರೇಮ ವೈಫಲ್ಯಕ್ಕೆ ಪ್ರಿಯತಮೆ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!

    ಬೆಂಗಳೂರು: ಪ್ರೇಮ ವೈಫಲ್ಯವಾದರೆ ಪಾಗಲ್ ಪ್ರೇಮಿಗಳು ಎಂತಹ ಕೃತ್ಯಕ್ಕೆ ಬೇಕಾದರೂ ಇಳಿಯುತ್ತಾರೆ. ಇಂತಹದ್ದೇ ಪ್ರಕರಣವೊಂದು ಬೆಂಗಳೂರು ಹೊರ ವಲಯದ ಆನೇಕಲ್‍ನಲ್ಲಿ ನಡೆದಿದ್ದು, ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರಿಯತಮೆ ಕತ್ತು ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ.

    ಬೆಳ್ಳಂದೂರು ನಿವಾಸಿ ಗಿರೀಶ್ ಕೃತ್ಯ ಎಸಗಿದ ಪಾಗಲ್ ಪ್ರೇಮಿ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಯನ್ನು ಆನೇಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಆಗಿದ್ದೇನು?: ಯುವತಿಯ ಮನೆಯಲ್ಲಿ ಆಕೆಯನ್ನು ಬಿಟ್ಟು ಬೇರೆ ಯಾರೂ ಇಲ್ಲವೆಂದು ಗಿರೀಶ್ ಇಂದು ಬೆಳಗ್ಗೆ ಖಚಿತ ಪಡೆಸಿಕೊಂಡಿದ್ದಾನೆ. ಬಳಿಕ ಮನೆಗೆ ನುಗ್ಗಿದ ಗಿರೀಶ್ ಯುವತಿಯನ್ನು ಹಿಡಿದು, ಕತ್ತು ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಜೋರಾಗಿ ಕಿರುಚಾಡಿದ್ದಾಳೆ. ಇದನ್ನು ನೆರೆಹೊರೆಯವರು ಕೇಳಿಸಿಕೊಂಡಿದ್ದು, ತಕ್ಷಣವೇ ಯುವತಿಯ ಮನೆ ಕಡೆಗೆ ಬಂದಿದ್ದಾರೆ. ಇದನ್ನು ನೋಡಿದ ಗಿರೀಶ್ ಅಲ್ಲಿಂದ ಕಾಲ್ಕಿತ್ತಿದ್ದಾನೆ.

    ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಯುವತಿಯನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಪಾಗಲ್ ಪ್ರೇಮಿ ಗಿರೀಶ್ ವಿರುದ್ಧ ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮತ್ತೊಂದು ಹೆಣ್ಣು ಮಗು ಹುಟ್ಟಿದ್ದಕ್ಕೆ ಮೊದಲ ಮಗಳನ್ನೇ ಮಹಡಿಯಿಂದ ಎಸೆದ ತಂದೆ!

    ಮತ್ತೊಂದು ಹೆಣ್ಣು ಮಗು ಹುಟ್ಟಿದ್ದಕ್ಕೆ ಮೊದಲ ಮಗಳನ್ನೇ ಮಹಡಿಯಿಂದ ಎಸೆದ ತಂದೆ!

    ಲಕ್ನೋ: ಪತ್ನಿ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದಳು ಅಂತಾ ಪತಿಯೊಬ್ಬ ತನ್ನ 18 ತಿಂಗಳ ಮಗಳನ್ನು ಮನೆಯ ಮಹಡಿಯಿಂದ ಎಸೆದ ಅಮಾನವೀಯ ಘಟನೆ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.

    ಗುರುವಾರ ಸಿಬಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾರ್ಧುಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅರವಿಂದ್ ಗಂಗ್ವಾರ್ ಮಗುವನ್ನು ಎಸೆದ ಆರೋಪಿ. ಅರವಿಂದ್ ಪುತ್ರಿಯ ಸ್ಥಿತಿ ಗಂಭೀರವಾಗಿದ್ದು, ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ನಡೆದದ್ದು ಏನು?
    ಅರವಿಂದ್ ದಂಪತಿಗೆ ಈ ಮೊದಲು ಹೆಣ್ಣು ಮಗು ಜನಿಸಿತ್ತು. ಎರಡನೇ ಹೆರಿಗೆಯಲ್ಲಿ ಪತ್ನಿ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಗಂಡು ಮಗುವಿನ ಆಕಾಂಕ್ಷಿ ಆಗಿದ್ದ ಅರವಿಂದ್ ಪತ್ನಿಯ ಹೆರಿಗೆಯಾದ ಮೇಲೆ ನಿತ್ಯವೂ ಮನೆಯಲ್ಲಿ ಜಗಳವಾಡುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಗುರುವಾರ ಮದ್ಯ ಸೇವಿಸಿ ಮನೆಗೆ ಬಂದಿದ್ದ ಅರವಿಂದ್, ತನ್ನ 18 ತಿಂಗಳ ಮಗಳನ್ನು ಮನೆಯ ಮಹಡಿಯ ಮೇಲೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿ ಎಸದ ಪರಿಣಾಮ, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಅರವಿಂದ್ ಮೇಲೆ ಕೊಲೆಗೆ ಯತ್ನ ಆರೋಪದಡಿ ಪ್ರಕರಣ ದಾಖಲಾಗಿದೆ ಎಂದು ಎಸ್‍ಪಿ ಅಭಿಮನ್ಯು ಸಿಂಗ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಯತ್ನ-ಗೌರಿ ಹಂತಕರಿಂದ ಸ್ಫೋಟಕ ಮಾಹಿತಿ

    ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಯತ್ನ-ಗೌರಿ ಹಂತಕರಿಂದ ಸ್ಫೋಟಕ ಮಾಹಿತಿ

    ಮಂಗಳೂರು: ಗೌರಿ ಹಂತಕರು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಸಂಚು ರೂಪಿಸಿದ್ದರು ಎನ್ನುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

    ವಿಚಾರಣೆ ವೇಳೆ ಗೌರಿ ಹಂತಕರು ಮಾಹಿತಿಯನ್ನು ಬಾಯಿ ಬಿಟ್ಟಿದ್ದಾರೆ. ಗೌರಿ ಲಂಕೇಶ್ ಹತ್ಯೆಯ ಬಳಿಕ ವಿಚಾರವಾದಿ, ಮಂಗಳೂರು ನಿವಾಸಿ ನರೇಂದ್ರ ನಾಯಕ್ ಅವರನ್ನು ನಗರದಲ್ಲಿ ಹತ್ಯೆ ಮಾಡುವ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳ ಮೂಲಗಳು ತಿಳಿಸಿವೆ.

    ಹತ್ಯೆ ಮಾಡುತ್ತಿದ್ದರು ಎನ್ನುವ ಮಾಹಿತಿ ಗೊತ್ತಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನರೇಂದ್ರ ನಾಯಕ್, ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನನ್ನನ್ನು ಸುಮ್ಮನಿರಸಲು ಯಾರಿಂದಲೂ ಸಾಧ್ಯವಿಲ್ಲ, ಆತ್ಮೀಯ ಗೆಳೆಯರಾದ ನರೇಂದ್ರ ದಾಬೋಲ್ಕರ್, ಎಂ.ಎಂ.ಕಲ್ಬುರ್ಗಿ, ಗೌರಿ ಲಂಕೇಶ್‍ರನ್ನು ಹತ್ಯೆ ಮಾಡಿದ್ದಾರೆ. ನನ್ನ ಹೆಣ ಬೀಳುವವರೆಗೂ ನನ್ನ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.