Tag: ಕೊಲೆ ಸಂಚು

  • ರಾಜೇಂದ್ರ ಕೊಲೆ ಸಂಚು ಪ್ರಕರಣ – ಮುಖ್ಯ ಆರೋಪಿ ಸೋಮ ಪೊಲೀಸರಿಗೆ ಶರಣು

    ರಾಜೇಂದ್ರ ಕೊಲೆ ಸಂಚು ಪ್ರಕರಣ – ಮುಖ್ಯ ಆರೋಪಿ ಸೋಮ ಪೊಲೀಸರಿಗೆ ಶರಣು

    ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ (R Rajendra) ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಸೋಮ, ಎ-3 ಅಮಿತ್ ಬುಧವಾರ ಕ್ಯಾತ್ಸಂದ್ರ (Kyathasandra) ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ.

    ಕೊಲೆ ಸಂಚಿನ ವಿಷಯ ಹೊರಬಂದ ನಂತರ ಪ್ರಮುಖ ಆರೋಪಿ ಸೋಮ ತಲೆ ಮರೆಸಿಕೊಂಡಿದ್ದ. ಪ್ರಕರಣದ ತನಿಖೆಗೆ ರಚಿಸಿದ ವಿಶೇಷ ತಂಡ ಆರೋಪಿಗಳಾದ ಭರತ್, ಯತೀಶ್, ಪುಷ್ಪಾ ಮತ್ತು ಯಶೋದ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ಇದೀಗ ಸೋಮ ಹಾಗೂ ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ. ಇದನ್ನೂ ಓದಿ: ರಷ್ಯಾದಲ್ಲಿ ಕೋವಿಡ್ ಮಾದರಿ ನಿಗೂಢ ವೈರಸ್!

    ಪ್ರಮುಖ ಆರೋಪಿ ಸೋಮನಿಗೆ 5 ಲಕ್ಷ ರೂ. ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮನು ಎಂಬವನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ನಿಮ್ಮ ವಕ್ಫ್‌ಗೆ ಒಬ್ಬ ಮುಸ್ಲಿಮೇತರರೂ ಬರುವುದಿಲ್ಲ – ಅಮಿತ್ ಶಾ

    ನನ್ನನ್ನು ಕೊಲೆ ಮಾಡಲು 70 ಲಕ್ಷ ಹಣಕ್ಕೆ ಸುಪಾರಿ ನೀಡಲಾಗಿದೆ. ಮುಂಗಡವಾಗಿ 5 ಲಕ್ಷ ರೂ. ಕೊಡಲಾಗಿದೆ. ಈ ಬಗ್ಗೆ ಆಡಿಯೊ ಲಭ್ಯವಾಗಿದ್ದು, ಪರಿಶೀಲಿಸಿ ತನಿಖೆ ನಡೆಸಬೇಕು ಎಂದು ಕೋರಿ ಆರ್.ರಾಜೇಂದ್ರ ಮಾರ್ಚ್ 29ರಂದು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ನ್ಯಾಯಾಧೀಶರ ಮನೆಯಲ್ಲಿಯೇ 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ

  • ಪತ್ನಿಯನ್ನು ಸ್ಕ್ಯಾನ್ ಮಾಡಲು 15 ನಿಮಿಷ ತೆಗೆದುಕೊಂಡಿದ್ದಕ್ಕೆ ಸಂಶಯಪಟ್ಟು ಹತ್ಯೆಗೆ ಸುಪಾರಿ ಕೊಟ್ಟ ಪತಿ

    ಪತ್ನಿಯನ್ನು ಸ್ಕ್ಯಾನ್ ಮಾಡಲು 15 ನಿಮಿಷ ತೆಗೆದುಕೊಂಡಿದ್ದಕ್ಕೆ ಸಂಶಯಪಟ್ಟು ಹತ್ಯೆಗೆ ಸುಪಾರಿ ಕೊಟ್ಟ ಪತಿ

    ಯಾದಗಿರಿ: ಹೆಂಡತಿಯನ್ನು (Wife) ಆರೋಗ್ಯ ತಪಾಸಣೆಗಾಗಿ ಸ್ಕ್ಯಾನಿಂಗ್ ಸೆಂಟರ್‌ಗೆ (Scanning Center) ಕರೆದುಕೊಂಡು ಹೋಗಿದ್ದಾಗ ಅಲ್ಲಿನ ಸಿಬ್ಬಂದಿ ಮೇಲೆ ಸಂಶಯಪಟ್ಟ ಪತಿ (Husband) ಆತನ ಹತ್ಯೆಗೆ ಸುಪಾರಿ ನೀಡಿದ್ದ. ಆದರೆ ಹತ್ಯೆಗೂ ಮುನ್ನವೇ ಸುಪಾರಿ ಪಡೆದಿದ್ದಾತನೊಂದಿಗೆ ಪತಿಯೂ ಸಹ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಯಾದಗಿರಿ (Yadgiri) ನಗರ ಪೊಲೀಸ್ ಠಾಣೆಯ ಪೊಲೀಸರು ಎಚ್ಚೆತ್ತುಕೊಂಡು ಕೊಲೆಗೆ ಹೊಂಚು ಹಾಕಿ ಕುಳಿತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಇದರಿಂದ ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್‌ಐ ದೇವೇಂದ್ರ ರೆಡ್ಡಿ ಹಾಗೂ ನೇತೃತ್ವದ ತಂಡ ಓರ್ವನ ಪ್ರಾಣ ಕಾಪಾಡಿದಂತಾಗಿದೆ.

    ಯಾದಗಿರಿ ತಾಲೂಕಿನ ಮುದ್ನಾಳ್ ತಾಂಡಾ ಗ್ರಾಮದ ನಾನ್ಯಾ ನಾಯಕ್ ಕಳೆದ 8 ತಿಂಗಳ ಹಿಂದೆ ತನ್ನ ಹೆಂಡತಿಯನ್ನು ತಪಾಸಣೆಗಾಗಿ ಯಾದಗಿರಿ ನಗರದ ಶಿವಸಾಯಿ ಸ್ಕ್ಯಾನ್ ಸೆಂಟರ್‌ಗೆ ಕರೆದುಕೊಂಡು ಹೋಗಿದ್ದ. ಸ್ಕ್ಯಾನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ನಾನ್ಯಾ ನಾಯಕನ ಹೆಂಡತಿಯನ್ನು 15 ನಿಮಿಷಗಳ ಕಾಲ ತಪಾಸಣೆ ಮಾಡಿದ್ದಾನೆ. ಇದರಿಂದ ನಾಯಕ್ ತನ್ನ ಹೆಂಡತಿ ಇಷ್ಟು ಸಮಯ ಒಳಗಡೆ ಇರುವುದಕ್ಕೆ ಸುರೇಶ್‌ನ ಮೇಲೆ ಸಂಶಯ ಪಟ್ಟಿದ್ದಾನೆ. ಇದೇ ಕಾರಣಕ್ಕೆ ಸುರೇಶ್‌ನನ್ನು ಕೊಲ್ಲಲು ಕಳೆದ 8 ತಿಂಗಳಿಂದ ಪರಿತಪಿಸುತ್ತಿದ್ದ.

    ನಾನ್ಯಾ ನಾಯಕ್ ಬೆಂಗಳೂರಿನಲ್ಲಿದ್ದ ತನ್ನ ಪರಿಚಯಸ್ಥನಿಗೆ ಸ್ಕ್ಯಾನ್ ಸೆಂಟರ್‌ನಲ್ಲಿ ಕೆಲಸ ಮಾಡುವ ಸುರೇಶ್‌ನ ಹತ್ಯೆಗೆ 50 ಸಾವಿರ ರೂ. ಹಣ ಹಾಗೂ ಬಂಗಾರದ ಉಂಗುರ ನೀಡಿದ್ದ. ಅದರಂತೆ ಸುಪಾರಿ ಪಡೆದಿದ್ದಾತ ಪುಣೆಯಲ್ಲಿ ಕಂಟ್ರಿ ಪಿಸ್ತೂಲ್, ಚಾಕು, ಪಂಚ್ ಖರೀದಿಸಿ ಸುರೇಶ್‌ನನ್ನು ಹತ್ಯೆ ಮಾಡಲು ಏಪ್ರಿಲ್ 20ರಂದು ಯಾದಗಿರಿ ನಗರದ ಲಾಡ್ಜ್ ಒಂದರಲ್ಲಿ ಹೊಂಚು ಹಾಕಿ ಕುಳಿತಿದ್ದ. ಇದನ್ನೂ ಓದಿ: ‘ಅಗ್ನಿಸಾಕ್ಷಿ’ ಸೀರಿಯಲ್‌ ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ

    ಚುನಾವಣೆ ಹಿನ್ನೆಲೆ ಪೊಲೀಸರು ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ವೇಳೆ ಯಾದಗಿರಿ ಗ್ರಾಮೀಣ ಠಾಣೆ ಪಿಎಸ್‌ಐ ದೇವೇಂದ್ರ ರೆಡ್ಡಿ ಹಾಗೂ ಸಿಬ್ಬಂದಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಬೆಂಗಳೂರಿನ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆತ ತೊದಲುತ್ತಿದ್ದುದನ್ನು ಗಮನಿಸಿದ ಪಿಎಸ್‌ಐ ಆತ ಉಳಿದುಕೊಂಡಿದ್ದ ಲಾಡ್ಜ್‌ಗೆ ತೆರಳಿ ತಪಾಸಣೆ ನಡೆಸಿದ್ದಾರೆ.

    ಈ ವೇಳೆ ಆತನ ರೂಮ್‌ನಲ್ಲಿ ಕಂಟ್ರಿ ಪಿಸ್ತೂಲ್, 3 ಜೀವಂತ ಗುಂಡುಗಳು, ಬಟನ್ ಚಾಕು, ಪಂಚ್ ಪತ್ತೆಯಾಗಿವೆ. ಇದನ್ನು ವಶಪಡಿಸಿಕೊಂಡು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹತ್ಯೆಗೆ ಸುಪಾರಿ ನೀಡಿರುವ ವಿಷಯ ಬೆಳಕಿಗೆ ಬಂದಿದೆ. ನಂತರ ಸುಪಾರಿ ನೀಡಿದ ನಾನ್ಯಾ ನಾಯಕ್‌ನನ್ನು ಹಾಗೂ ಹತ್ಯೆಗೆ ಸುಪಾರಿ ಪಡೆದವನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಇದನ್ನೂ ಓದಿ: 2 ಲಾರಿಗಳ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

    ಯಾದಗಿರಿ ವಿಭಾಗದ ಡಿವೈಎಸ್‌ಪಿ ಬಸವೇಶ್ವರ, ನಗರ ಠಾಣೆ ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ದೇವಿಂದ್ರ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡದಕ್ಕೆ ಯಾದಗಿರಿ ಎಸ್‌ಪಿ ಡಾ. ಸಿಬಿ ವೇದಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

  • ಪೊಲೀಸರ ತನಿಖೆ ನಂತರ ಶಾಸಕರ ಕೊಲೆ ಸಂಚು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ: ಡಿ.ಕೆ ಸುರೇಶ್

    ಪೊಲೀಸರ ತನಿಖೆ ನಂತರ ಶಾಸಕರ ಕೊಲೆ ಸಂಚು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ: ಡಿ.ಕೆ ಸುರೇಶ್

    ಹಾಸನ: ಪೊಲೀಸರ ತನಿಖೆ ನಂತರ ಶಾಸಕ ಎಸ್‍ಆರ್ ವಿಶ್ವನಾಥ್ ಕೊಲೆ ಸಂಚು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೋಪಾಲಕೃಷ್ಣ ಅವರು ವೀಡಿಯೋ ಮತ್ತು ಆಡಿಯೋ ರಿಲೀಸ್ ಮಾಡಿದ್ದೇವೆ ಅಂತಿದ್ದಾರೆ. ಈಗಿರುವುದು ಫೇಕ್ ವೀಡಿಯೋ ಎಂದು ಸಿಸಿಬಿಗೆ ಮನವಿ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ಯಾರೂ ಬೇಕಾದರೂ ಯಾವ ಪಕ್ಷದಲ್ಲಾದರೂ ಇರಲಿ ರಾಜಕೀಯವಾಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ರಾಜಕಾರಣದಲ್ಲಿ ವೈಯಕ್ತಿಕ ದ್ವೇಷ ಮಾಡುವುದು ಒಳ್ಳೆಯದಲ್ಲ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷದಲ್ಲಿದ್ದಲ್ಲಿದ್ದರೂ ಈ ರೀತಿ ಮಾಡುವುದು ಸರಿಯಾಗಿಲ್ಲ ಎಂದರು.

    ನಮಗೆ ಕೊಟ್ಟಿರುವ ಮಾಹಿತಿ ಪ್ರಕಾರ, ಫೇಕ್ ವೀಡಿಯೋ ಎಂದು ಹೇಳಿದ್ದಾರೆ. ಪೊಲೀಸರು ಅದಕ್ಕೆ ಬೇಕಾದ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಕುರಿತಾಗಿ ಗೋಪಾಲಕೃಷ್ಣ ಅವರು ಈಗಾಗಲೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಕೂಡ ಒಂದೊಂದು ಪಕ್ಷದಲ್ಲಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷ ಯಾವತ್ತೂ ಇಂಥ ಕೆಲಸ ಬೆಂಬಲಿಸಲ್ಲ ಎಂದು ತಿಳಿಸಿದರು.

    ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ: ಹಾಸನ ಜಿಲ್ಲೆಯಲ್ಲಿ ಭಯದ ವಾತಾವರಣವನ್ನು ಜನತಾದಳದ ನಾಯಕರು ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಕ್ತ ಚುನಾವಣೆಗಾಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದೇನೆ. ಮತದಾನದ ಹಕ್ಕಿರುವ ಗ್ರಾಪಂ ಸದಸ್ಯರಿಗೆ ತಮ್ಮ ಏಜೆಂಟ್‍ಗೆ ತೋರಿಸಿ ಮತ ಹಾಕುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಜೆಡಿಎಸ್ ನಾಯಕರ ವಿರುದ್ಧ ಸಂಸದ ಡಿಕೆ.ಸುರೇಶ್ ಆರೋಪ ಮಾಡಿದರು.

    ಚುನಾವಣೆ ನೀತಿ ಸಂಹಿತೆ ಇದ್ದರೂ ಸರ್ಕಾರಿ ವಾಹನ ಹಿಂಪಡೆದಿಲ್ಲ. ಲೋಕಸಭಾ ಕಚೇರಿ ಚುನಾವಣಾ ಕಾರ್ಯತಂತ್ರದ ಕೇಂದ್ರ ಸ್ಥಾನವಾಗಿದೆ. ಜಿಲ್ಲಾಡಳಿತ ಜೆಡಿಎಸ್ ಜೊತೆ ಶಾಮೀಲಾಗಿದೆ ಎಂದು ಕಾಣುತ್ತದೆ. ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರ ಸಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ:  ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್‍ಗೆ 3ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

    ದೇವೇಗೌಡರ ಪ್ರಧಾನಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ, ಜೆಡಿಎಸ್ ಮತ್ತು ಬಿಜೆಪಿ ಯಾವುದೇ ಕ್ಷಣದಲ್ಲಿ ಬೇಕಾದರೂ ಒಂದಾಗ್ತಾರೆ ಎಂಬುದು ಗೊತ್ತಿದೆ. ಜೆಡಿಎಸ್‍ನವರು ಬಿಜೆಪಿ ಜೊತೆಯಲ್ಲಿ ಅಥವಾ ಯಾರ ಜೊತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಅಧಿಕಾರಕ್ಕೋಸ್ಕರ ಹಾಗೂ ಸ್ಥಾನ ಉಳಿಯಲು ಅವರು ಏನು ಬೇಕಾದರೂ ಮಾಡುತ್ತಾರೆ. ಅವರು ಅದನ್ನು ಮೊದಲಿಂದಲೂ ಮಾಡಿಕೊಂಡು ಬಂದಿದ್ದಾರೆ ಮುಂದೆಯೂ ಈ ರೀತಿಯಾಗೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

    ಎ.ಮಂಜು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಎ.ಮಂಜು ಅವರು ಈಗಾಗಲೇ ಬಿಜೆಪಿಯ ಸಕ್ರಿಯ ನಾಯಕರಾಗಿದ್ದಾರೆ. ಅವರು ಏನು ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನುವುದರ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು. ಇದನ್ನೂ ಓದಿ: ನನಗೆ ಮತ ಹಾಕದಂತೆ ಜೆಡಿಎಸ್ ಮುಖಂಡರು ಬೆದರಿಕೆ ಹಾಕ್ತಿದ್ದಾರೆ: ಎಂ.ಶಂಕರ್ ಆರೋಪ

    ಕೊಡಗಿನಲ್ಲಿ ನಮ್ಮ ಪಕ್ಷದಿಂದ ಸ್ಪರ್ಧಿಸಿರುವ ಮಂಥರ್ ಕಾಂಗ್ರೆಸ್‍ಗಾಗಿ ಅನೇಕ ಕೆಲಸ ಮಾಡಿದ್ದಾರೆ. ಪಕ್ಷ ಅವರನ್ನು ಗುರುತಿಸಿ ಟಿಕೆಟ್ ನೀಡಿದೆ. ಮಂಥರ್ ಪರ ಎ.ಮಂಜು ಅವರು ಹೋಗಿ ಚುನಾವಣೆ ಪ್ರಚಾರ ಮಾಡೋದು ಅವರ ವೈಯಕ್ತಿಕ ವಿಷಯವಾಗಿದೆ. ಪಕ್ಷ ಅದನ್ನು ಸಮರ್ಥನೆ ಮಾಡಿಕೊಳ್ಳಲ್ಲ. ನಾನು ಶಾಸಕರಾದ ಶಿವಲಿಂಗೇಗೌಡ, ಪ್ರೀತಂಗೌಡ, ಬಾಲಕೃಷ್ಣ, ಕುಮಾರಸ್ವಾಮಿ ಸೇರಿದಂತೆ ಎಲ್ಲ ನಾಯಕರ ಬೆಂಬಲ ಕೋರುತ್ತೇನೆ ಎಂದ ಅವರು, ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಶಂಕರ್‍ಗೆ ಮತ ನೀಡಿ ಅಂತ ಮನವಿ ಮಾಡಿದರು.

  • ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ: ಎಸ್.ಆರ್ ವಿಶ್ವನಾಥ್

    ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ: ಎಸ್.ಆರ್ ವಿಶ್ವನಾಥ್

    ಬೆಂಗಳೂರು: ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತೇವೆ. ಈ ಮೂಲಕ ಕೊಲೆ ಸಂಚಿನ ಹಿಂದೆ ಇರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆಯನ್ನು ಕೈಗೊಂಡಿದ್ದು, ಎಲ್ಲರಿಗೂ ನೋಟಿಸ್ ನೀಡುತ್ತಾರೆ. ನನಗೆ ನೋಟಿಸ್ ಬಂದಾಗ ನಾನು ತನಿಖೆಗೆ ಸಹಕರಿಸುವೆ ಎಂದರು.

    ಆಡಳಿತ ಪಕ್ಷದ ಶಾಸಕನ ವಿರುದ್ಧವೇ ಕೊಲೆ ಸಂಚು ನಡೆಸಿದ್ದರಿಂದ ಮುಖ್ಯಮಂತ್ರಿಗಳು ಕಠಿಣ ಕ್ರಮವನ್ನು ಕೈಗೊಳ್ಳುತ್ತಾರೆ ಎಂದು ನಾನು ನಂಬಿದ್ದೇನೆ. ವಿರೋಧ ಪಕ್ಷಗಳಿಂದಲೂ ಸಾಕಷ್ಟು ಬೆಂಬಲದ ಕರೆಗಳು ಬಂದಿವೆ. ಪಕ್ಷಭೇದ ಮರೆತು ತನಿಖೆ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ನನ್ನ ಸೇವೆಯನ್ನು ಸಹಿಸಲಾಗದೆ ಕೊಲೆಗೆ ಸಂಚು: ಎಸ್.ಆರ್ ವಿಶ್ವನಾಥ್

    ದೂರಿನಲ್ಲಿ ಗೋಪಾಲಕೃಷ್ಣ ಹೆಸರನ್ನೊಂದೇ ಉಲ್ಲೇಖಿಸಿದ ಕುರಿತು ಮಾತನಾಡಿದ ಅವರು, ಕುಳ್ಳ ದೇವರಾಜು ಆಗಲಿ, ಗೋಪಾಲಕೃಷ್ಣ ಆಗಲಿ ಯಾರನ್ನು ಕ್ಷಮಿಸುವುದಿಲ್ಲ. ತಪ್ಪು ಮಾಡಿದವರನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಹಾಗೆ ಮಾಡುತ್ತೇನೆ. ಈ ಪ್ರಕರಣದಲ್ಲಿ ಇನ್ನು ಯಾರ್ಯಾರು ಶಾಮೀಲಾಗಿದ್ದಾರೆ ಎನ್ನುವುದು ಕೆಲವೇ ದಿನಗಳಲ್ಲಿ ತಿಳಿಯುತ್ತದೆ. ತನಿಖೆಯಿಂದಾಗಿ ಸಂಪೂರ್ಣ ಮಾಹಿತಿಯೂ ಬಹಿರಂಗವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಇಂದು ಚರ್ಚೆ ನಡೆಸಲಿದ್ದೇನೆ ಎಂದರು.

    ಶಾಸಕ ಎಸ್.ಆರ್ ವಿಶ್ವನಾಥ್ ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಿರುದ್ಧ ಬುಧವಾರ ಎಫ್‍ಐಆರ್ ದಾಖಲಾಗಿದೆ. ಕೊಲೆಗೆ ಸ್ಕೆಚ್ ಸಂಬಂಧ ಕುಳ್ಳ ದೇವರಾಜ್, ಧರ್ಮ, ಮಂಜು ಎಂಬ ಮೂವರನ್ನು ವಶಕ್ಕೆ ಪಡೆದು ಪೊಲೀಸರು ಬಿಟ್ಟುಕಳಿಸಿದ್ದಾರೆ. ಇದನ್ನೂ ಓದಿ:ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

  • ಎಸ್.ಆರ್ ವಿಶ್ವನಾಥ್ ನೀಡಿದ್ದ ಎಚ್ಚರಿಕೆಯೇ ಕೊಲೆ ಸಂಚಿಗೆ ಕಾರಣವಾಯ್ತಾ..?

    ಎಸ್.ಆರ್ ವಿಶ್ವನಾಥ್ ನೀಡಿದ್ದ ಎಚ್ಚರಿಕೆಯೇ ಕೊಲೆ ಸಂಚಿಗೆ ಕಾರಣವಾಯ್ತಾ..?

    ಬೆಂಗಳೂರು: ಶಾಸಕ ಎಸ್.ಆರ್ ವಿಶ್ವನಾಥ್ ಕೊಲೆಗೆ ಸುಪಾರಿ ಪ್ರಕರಣ ಸಂಬಂಧ ಕ್ಷಣಕ್ಕೊಂದು ಟ್ವಿಸ್ಟ್ ಸಿಕ್ತಿದೆ. ವಿಶ್ವನಾಥ್ ಮತ್ತು ಗೋಪಾಲಕೃಷ್ಣ ನಡುವಿನ ವೈಷಮ್ಯ ಇದೆಲ್ಲದಕ್ಕೂ ಕಾರಣ ಎನ್ನಲಾಗ್ತಿದೆ.

    ಯಲಹಂಕದಲ್ಲಿ ವೀರ ಸಾವರ್ಕರ್ ಮೇಲ್ಸೆತುವೆ ಉದ್ಘಾಟನೆ ದಿನದ ಹಿಂದಿನ ರಾತ್ರಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಸಜ್ಜಾಗಿದ್ರು. ಗೋಪಾಲಕೃಷ್ಣ ಸೂಚನೆಯಂತೆ ಕಪ್ಪು ಬಾವುಟಗಳನ್ನು ಹಿಡಿದು ಪ್ರತಿಭಟನೆಗೆ ಸಿದ್ಧರಾಗಿದ್ರು. ಆದರೆ ಶಾಸಕ ಎಸ್.ಆರ್ ವಿಶ್ವನಾಥ್, ಗೋಪಾಲಕೃಷ್ಣಗೆ ಕರೆ ಮಾಡಿ ಪ್ರತಿಭಟನೆ ಮಾಡಿದ್ರೆ ಹೌಸಿಂಗ್ ಬೋರ್ಡ್‍ಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕಟ್ಟುತ್ತಿರುವ ಮನೆ ನೆಲಸಮ ಮಾಡೋದಾಗಿ ಎಚ್ಚರಿಕೆ ನೀಡಿದ್ರು.

    ಅದರಂತೆ ಬೆಳ್ಳಂಬೆಳಗ್ಗೆ ಗೋಪಾಲಕೃಷ್ಣ ಮನೆ ಮುಂದೆ ಎರಡು ಜೆಸಿಬಿಗಳು ನಿಂತಿದ್ದವು. ಇದರಿಂದ ಹೆದರಿದ ಗೋಪಾಲಕೃಷ್ಣ ಪ್ರತಿಭಟನೆಯಿಂದ ಹಿಂದೆ ಸರಿದಿದ್ರು. ಪರಿಣಾಮ ಕಾರ್ಯಕರ್ತರ ಆಕ್ರೋಶ, ಬಿಜೆಪಿ ಕಾರ್ಯಕರ್ತರ ಅಪಹಾಸ್ಯದಿಂದ ಮುಜುಗರಕ್ಕೊಳಗಾಗಿದ್ರು. ಇದೇ ಕಾರಣದಿಂದ ವೈಷಮ್ಯ ಹೆಮ್ಮರವಾಗಿತ್ತು ಎನ್ನಲಾಗ್ತಿದೆ. ಇದನ್ನೂ ಓದಿ: ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

    ಇತ್ತ ಶಾಸಕರ ಕೊಲೆಗೆ ಸಂಚು ರೂಪಿಸಿರೋದನ್ನ ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು, ವಿಶ್ವನಾಥ್ ಬೆಂಬಲಿಗರು ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿರೋ ಹಿನ್ನೆಲೆಯಲ್ಲಿ ರಾಜಾನುಕುಂಟೆ ಪೊಲೀಸರು ಭದ್ರತೆಗೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.

  • ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

    ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

    – ಮೂವರನ್ನು ವಿಚಾರಿಸಿ ಕಳಿಸಿದ ಪೊಲೀಸರು

    ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಪ್ರಕರಣ ಸಂಬಂಧ ರಾಜಾನುಕುಂಟೆ ಪೊಲೀಸರು ಕೋರ್ಟ್ ಅನುಮತಿ ಪಡೆದು ಐಪಿಸಿ ಸೆಕ್ಷನ್ 120ಬಿ, 506 ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಕೊಲೆಗೆ ಸ್ಕೆಚ್ ಸಂಬಂಧ ಕುಳ್ಳ ದೇವರಾಜ್, ಧರ್ಮ, ಮಂಜು ಎಂಬ ಮೂವರನ್ನು ವಶಕ್ಕೆ ಪಡೆದು ಪೊಲೀಸರು ಬಿಟ್ಟುಕಳಿಸಿದ್ದಾರೆ. ಇದನ್ನೂ ಓದಿ: ನನ್ನ ಸೇವೆಯನ್ನು ಸಹಿಸಲಾಗದೆ ಕೊಲೆಗೆ ಸಂಚು: ಎಸ್.ಆರ್ ವಿಶ್ವನಾಥ್

    ಕುಳ್ಳ ದೇವರಾಜ್ ಕಡೆ ನಿಂತ್ರಾ ಪೊಲೀಸರು..?: ಹತ್ಯೆಗೆ ಸಂಚು ಕೇಸಲ್ಲಿ ಪೊಲೀಸರು ಕುಳ್ಳ ದೇವರಾಜ್ ಕಡೆ ನಿಂತ್ರಾ ಎಂಬ ಅನುಮಾನವೊಂದು ಎದ್ದು ಕಾಣುತ್ತಿದೆ. ಶಾಸಕರ ದೂರಿನಲ್ಲಿ ಗೋಪಾಲಕೃಷ್ಣ ಒಬ್ಬರೇ ಆರೋಪಿ. ಎಫ್‍ಐಆರ್ ಪ್ರತಿಯಲ್ಲಿ ಕೂಡ ಗೋಪಾಲಕೃಷ್ಣ ಒಬ್ಬರನ್ನೇ ಪೊಲೀಸರು ಆರೋಪಿಯನ್ನಾಗಿ ಮಾಡಿದ್ದಾರೆ. ದೂರಿನಲ್ಲಿ ಕುಳ್ಳ ದೇವರಾಜ್ ಹೆಸರು ಸೂಚಿಸಿದ್ದರೂ ಎಫ್‍ಐಆರ್‍ನಲ್ಲಿ ಹೆಸರಿಲ್ಲ. ಹೀಗಾಗಿ ಶಾಸಕ ಎಸ್.ಆರ್.ವಿಶ್ವನಾಥ್ ಒತ್ತಡಕ್ಕೆ ಪೊಲೀಸರು ಮಣಿದ್ರಾ ಎಂಬ ಸಂಶಯ ಹುಟ್ಟಿಕೊಂಡಿದೆ.  ಇದನ್ನೂ ಓದಿ: ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್‌ – ಸುಪಾರಿ ಕೊಡ್ತಿರೋ ವೀಡಿಯೋ, ಆಡಿಯೋ ವೈರಲ್‌

    ನೋಟಿಸ್ ಜಾರಿ: ಇತ್ತ ಪ್ರಕರಣ ಸಂಬಂಧ ರಾಜಾನುಕುಂಟೆ ಪೊಲೀಸರು ಶಾಸಕ ಎಸ್.ಆರ್.ವಿಶ್ವನಾಥ್‍ಗೆ ನೋಟಿಸ್ ನೀಡಿದ್ದಾರೆ. ದೂರಿನ ಜೊತೆ ಯಾವುದೇ ದಾಖಲೆಗಳನ್ನ ನೀಡದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಪಟ್ಟ ದಾಖಲೆ ನೀಡುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ, ಕುಳ್ಳ ದೇವರಾಜ್, ಕಾಂತ, ಧರ್ಮ, ಮಂಜ ಹಾಗೂ ಸಹಚರಿಗೆ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಮಂದಿಗೆ ರಾಜಾನುಕುಂಟೆ ಪೊಲೀಸರು ನೋಟಿಸ್ ನೀಡಿದ್ದಾರೆ.

    ತನಿಖಾಧಿಕಾರಿ ದೊಡ್ಡಬಳ್ಳಾಪುರ ಇನ್ಸ್ ಪೆಕ್ಟರ್ ನವೀನ್ ಮುಂದೆ ತ್ವರಿತವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ಉಲ್ಲೇಖ ಮಾಡಲಾಗಿದೆ.

  • ಮಗಳನ್ನೇ ಕೊಲೆ ಮಾಡಲು ಪ್ರಿಯಕರನೊಂದಿಗೆ ತಾಯಿ ಪ್ಲಾನ್!

    ಮಗಳನ್ನೇ ಕೊಲೆ ಮಾಡಲು ಪ್ರಿಯಕರನೊಂದಿಗೆ ತಾಯಿ ಪ್ಲಾನ್!

    ಕಲಬುರಗಿ: ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದಳು ಎಂಬ ಕಾರಣಕ್ಕೆ ಸ್ವಂತ ಮಗಳನ್ನೇ ಕೊಲೆ ಮಾಡಲು ತಾಯಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪ್ಲಾನ್ ಮಾಡಿರುವ ಆಘಾತಕಾರಿ ಘಟನೆ ತಾಲೂಕಿನ ಧೂತ್ತರಗಾಂಗ ಗ್ರಾಮದಲ್ಲಿ ನಡೆದಿದೆ.

    ತನ್ನ ಸ್ವಂತ ಮಗಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಮಹಿಳೆ ಹೆಸರು ಹೀರಾಬಾಯಿ. ಈಕೆ ಇದೇ ಗ್ರಾಮದ ಭೀಮಣ್ಣ ಎಂಬ ವ್ಯಕ್ತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಈ ವಿಷಯ ತಿಳಿದ ಮಗಳು ನಾಗಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋಪಗೊಂಡ ಹೀರಾಬಾಯಿ ಮಗಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾಳೆ.

    ತಾಯಿಯ ಅನೈತಿಕ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದಕ್ಕೆ ಹೀರಾಬಾಯಿ, ನೀನೂ ಬೇಕಾದರೂ ಆತನ ಜೊತೆ ಮಲಗು. ಆದರೆ ತನ್ನ ಕೃತ್ಯದ ಕುರಿತು ಯಾರಿಗೂ ಹೇಳಬೇಡ ಎಂದು ಹೇಳಿದ್ದಾಳೆ. ಇನ್ನು ಭೀಮಣ್ಣ ಸಹ ನಾಗಮ್ಮ ಅವರಿಗೆ ತನ್ನ ಜೊತೆ ಮಲಗಲು ಹೇಳಿದ್ದಾನೆ.

    ತಾಯಿಯ ಆಕ್ರಮ ಸಂಬಂಧವನ್ನು ತಪ್ಪಿಸಲು ನಾಗಮ್ಮ ಆಕೆಯ ಮೊಬೈಲ್ ಕಸಿದುಕೊಂಡಿದ್ದಾರೆ. ಆದರೆ ಹೀರಾಬಾಯಿ ಮಗಳ ಮೊಬೈಲ್ ನಿಂದ ತನ್ನ ಪ್ರಿಯಕರನಿಗೆ ಕರೆ ಮಾಡಿ ಕೊಲೆ ಮಾಡಲು ಸೂಚಿಸಿದ್ದಾಳೆ. ನಂತರ ಮೊಬೈಲ್ ಸಂಭಾಷಣೆ ಕೇಳಿದ ವೇಳೆ ತಾಯಿಯ ಸಂಚು ಬೆಳಕಿಗೆ ಬಂದಿದೆ. ಈ ಕುರಿತು ನಾಗಮ್ಮ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

    ಈಗಾಗಲೇ ನಾಗಮ್ಮರಿಗೆ ಮದುವೆಯಾಗಿದ್ದು, ಗಂಡನ ಕಿರುಕುಳದಿಂದ ನೊಂದ ಆಕೆ ತಾಯಿಯ ಬಳಿ ಆಶ್ರಯ ಪಡೆದಿದ್ದರು. ಆದರೆ ಸದ್ಯ ತಾಯಿಯೇ ಕೊಲೆ ಮಾಡಲು ಸಂಚು ರೂಪಿಸಿರುವುದು ನಾಗಮ್ಮಗೆ ಸಂಕಷ್ಟವನ್ನು ಉಂಟು ಮಾಡಿದೆ. ಆದರೆ ಪ್ರಕರಣದ ದೂರು ಪಡೆದು ನಾಗಮ್ಮರಿಗೆ ರಕ್ಷಣೆ ನೀಡಬೇಕಾದ ಪೊಲೀಸರು ಭೀಮಣ್ಣನ ಪ್ರಭಾವಕ್ಕೆ ಒಳಗಾಗಿ ದೂರು ದಾಖಲಿಸಿಕೊಂಡಿಲ್ಲ ಎಂದು ಆರೋಪ ಕೇಳಿಬಂದಿದೆ.