Tag: ಕೊಲೆ ಸುಪಾರಿ

  • ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿದೆ ಅಂತ ಮತ್ಸರ – ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದವ ಅರೆಸ್ಟ್

    ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿದೆ ಅಂತ ಮತ್ಸರ – ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದವ ಅರೆಸ್ಟ್

    ಬೆಂಗಳೂರು: ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂದು ಮತ್ಸರ ಉಂಟಾಗಿ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು (Bagalgunte Police) ಬಂಧಿಸಿದ್ದಾರೆ.

    ವೇನರಾಮ್ (45) ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿ. ನೇಮರಾಮ್ ಎಂಬ ವ್ಯಕ್ತಿ ಬಾಗಲಗುಂಟೆ ಸಿಡೇದಹಳ್ಳಿ ಬಳಿ ಹ್ಯಾಪಿ ಟೆಕ್ಸ್‌ಟೈಲ್‌ ಅಂಗಡಿ (Textile Shop) ಇಟ್ಟುಕೊಂಡಿದ್ದರು. ಅಂಗಡಿ ಪಕ್ಕದಲ್ಲೇ ವೇನರಾಮ್ ಹೈ ಫ್ಯಾಷನ್ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ. ನೇಮರಾಮ್ ಅಂಗಡಿಯಲ್ಲಿ ವ್ಯಾಪಾರ ಹೆಚ್ಚಾಗಿ ನಡೆಯುತ್ತಿತ್ತು. ಅದರಿಂದ ಮತ್ಸರಗೊಂಡ ಆರೋಪಿ ವೇನರಾಮ್ ಆ ಅಂಗಡಿಯಲ್ಲಿ ಬಟ್ಟೆ ಸರಿ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದ. ವೇನರಾಮ್ ಅಂಗಡಿಯಲ್ಲಿದ್ದ ಹುಡುಗನನ್ನ ನೇಮರಾಮ್ ತನ್ನ ಅಂಗಡಿಗೆ ಸೇರಿಸಿಕೊಂಡಿದ್ದ. ಇದರಿಂದ ಕೋಪಗೊಂಡಿದ್ದ ವೇನರಾಮ್, ನೇಮರಾಮ್ ಕೊಲೆಗೆ ಸುಪಾರಿ ಕೊಟ್ಟಿದ್ದ. ಇದನ್ನೂ ಓದಿ: ವಿಶ್ವದಲ್ಲಿ ನಮಗೆ ಯಾರೂ ಶತ್ರುಗಳಿಲ್ಲ, ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ದೊಡ್ಡ ಶತ್ರು – ಮೋದಿ

    ರಾಜಸ್ಥಾನದ ವಿನೋದ್ ಜಾಟ್ ಎಂಬಾತನಿಗೆ ವೇನರಾಮ್ 5 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದ. ಅದರಂತೆ ವ್ಯಾಪಾರ ಮುಗಿಸಿ ಹೊರಟಿದ್ದ ನೇಮರಾಮ್ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಎರಡು ಬೈಕ್‌ನಲ್ಲಿ ಬಂದು ವಿನೋದ್ ಟೀಂ ಅಟ್ಯಾಕ್ ಮಾಡಿತ್ತು. ಸದ್ಯ ಸುಪಾರಿ ಸಂಬಂಧ ವೇನರಾಮ್‌ನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ಪಡೆದ ಆರೋಪಿ ವಿನೋದ್ ಜಾಟ್‌ಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೆಹಲಿ | ಮಾದಕವಸ್ತು ಜಾಲದ ಮೇಲೆ 500 ಪೊಲೀಸರಿಂದ ರೇಡ್ – 63 ಮಂದಿ ಅರೆಸ್ಟ್

  • ರಾಜೇಂದ್ರ ಕೊಲೆ ಸುಪಾರಿ ಕೇಸ್ – 9 ದಿನ ಕಳೆದರೂ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸದ ಪೊಲೀಸರು

    ರಾಜೇಂದ್ರ ಕೊಲೆ ಸುಪಾರಿ ಕೇಸ್ – 9 ದಿನ ಕಳೆದರೂ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸದ ಪೊಲೀಸರು

    – ಅಮಾಯಕರನ್ನು ಫಿಟ್ ಮಾಡುವ ತಂತ್ರವೇ?

    ತುಮಕೂರು: ಎಂಎಲ್‌ಸಿ ರಾಜೇಂದ್ರ ರಾಜಣ್ಣರ (MLC Rajendra Rajanna) ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಿ 9 ದಿನ ಕಳೆದರೂ ಪೊಲೀಸರು ಕೋರ್ಟಿಗೆ ಹಾಜರುಪಡಿಸದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಆರೋಪಿಗಳಾದ ಸೋಮು, ಅಮಿತ್, ಭರತ್, ಯತೀಶ್ ಹಾಗೂ ಆಡಿಯೋದಲ್ಲಿ ಮಾತನಾಡಿದ ಮಹಿಳೆ ಪುಷ್ಪಾ, ಆಕೆಯ ಸ್ನೇಹಿತೆ ಯಶೋಧಾ ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿಸಿ 9 ದಿನ ಕಳೆದಿದೆ. ಬಂಧನವಾದ 24 ಗಂಟೆಯೊಳಗೆ ಕೋರ್ಟ್ (Court) ಮುಂದೆ ಹಾಜರುಪಡಿಸಬೇಕಿತ್ತು. ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸದೇ ಲೋಪ ಎಸಗಿದ್ದಾರೆ. ಎಲ್ಲಾ ಆರೋಪಿಗಳ ಬಳಿ ಬಲವಂತವಾಗಿ ವಿಚಾರಣೆಗೆ ಬಂದು ವಾಪಸ್ ಹೋಗಿದ್ದೇವೆ ಎಂದು ಪ್ರತಿದಿನ ಬರೆಸಿಕೊಂಡು ಸಹಿ ಹಾಕಿಸಿಕೊಳ್ಳುತಿದ್ದಾರೆ ಎಂದು ಬಂಧಿತರ ಸಂಬಂಧಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ

    ಅಲ್ಲದೇ ಏ5 ಆರೋಪಿ ಯತೀಶ್ ಅವರ ಸಂಬಂಧಿಗಳು ಪೊಲೀಸರ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇವರ ಅರ್ಜಿ ಪುರಸ್ಕರಿಸಿದ ಕೋರ್ಟ್ ಪೊಲೀಸರಿಗೆ ಛಿಮಾರಿ ಹಾಕಿ ಕಳುಹಿಸಿದೆ. ಕೋರ್ಟ್ ಎಚ್ಚರಿಕೆಯಿಂದ ಎಚ್ಚೆತ್ತುಕೊಂಡ ಪೊಲೀಸರು ಯತೀಶ್‌ನನ್ನು ಬಿಟ್ಟು ಕಳುಹಿಸಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲ ಎಂದು ಹಿಂಬರಹ ಕೊಟ್ಟು ಬಿಡುಗಡೆಗೊಳಿಸಿದ್ದಾರೆ. ಇದನ್ನೂ ಓದಿ: ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ 18 ಲಕ್ಷ ರೂ. ದೋಚಿದ ಖದೀಮರು

    ಅಮಾಯಕರನ್ನು ಫಿಟ್ ಮಾಡಲು ಒತ್ತಡ?
    ಕೊಲೆ ಸುಪಾರಿ ಪ್ರಕರಣ ಒಂದು ಕಟ್ಟು ಕಥೆ ಎಂಬುದು ಆರೋಪಿಗಳ ವಿಚಾರಣೆಯಿಂದ ಪೊಲೀಸರಿಗೆ ದೃಢಪಟ್ಟಿದೆ. ಪುಷ್ಪಾ ಎಂಬ ಮಹಿಳೆ ತನ್ನ ಸ್ನೇಹಿತ ಸೋಮು ಮೇಲಿನ ವೈಮನಸ್ಸಿನಿಂದ ಅವರ ಮೇಲೆ ಕೆಟ್ಟ ಹೆಸರು ಬರಲಿ ಎಂದು ಕೊಲೆ ಸುಪಾರಿ ವದಂತಿ ಹಬ್ಬಿಸಿದ್ದಳು. ವಿಚಾರಣೆ ವೇಳೆ ಆಕೆ ಇದನ್ನು ಒಪ್ಪಿಕೊಂಡಿದ್ದಾಳೆ. ಆದರೂ ಪೊಲೀಸರು ಎಲ್ಲಾ ಆರೋಪಿಗಳನ್ನು ಊರ್ಡಿಗೆರೆ ಹಾಗೂ ಸದಾಶಿವನಗರ ಉಪ ಠಾಣೆಯಲ್ಲಿ ಇರಿಸಿದ್ದಾರೆ ಹೊರತು ಕೋರ್ಟ್‌ಗೆ ಹಾಜರುಪಡಿಸಿಲ್ಲ. ಜೊತೆಗೆ ಅಮಾಯಕರನ್ನು ಫಿಟ್ ಮಾಡಲು ಸಂಚು ನಡೆಯುತ್ತಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಲೈನ್‍ಮೆನ್ ಬೈಕ್‍ಗೆ ಕಾರು ಡಿಕ್ಕಿ – ಸವಾರ ಹಾರಿ ಬಿದ್ರೂ ನಿಲ್ಲಿಸದೇ ಪರಾರಿಯಾದ ಚಾಲಕ

    ಆಡಿಯೋದಲ್ಲಿದ್ದ ರಾಕಿಗೆ ವಿಐಪಿ ಟ್ರೀಟ್‌ಮೆಂಟ್:
    ಪುಷ್ಪಾ ಜೊತೆ ಆಡಿಯೋದಲ್ಲಿ ಮಾತನಾಡಿದ ಯುವಕ ರಾಕಿಯನ್ನು ಪೊಲೀಸರು ಬಂಧಿಸಿ ವಿಚಾರಿಸಬೇಕಿತ್ತು. ತನಿಖಾ ತಂಡದಲ್ಲಿ ಇದ್ದ ಸಿಪಿಐ ಒಬ್ಬರ ಸಂಬಂಧಿ ರಾಕಿ. ಹಾಗಾಗಿ ರಾಕಿಯನ್ನು ವಿಚಾರಣೆ ಮಾಡಿ ಕಳುಹಿಸಿದ್ದಾರೆ ಎಂಬ ಆರೋಪ ಈಗ ಬಂದಿದೆ. ಇದನ್ನೂ ಓದಿ: ಭಾರೀ ಗಾಳಿ ಮಳೆಯಿಂದ ಶಾರ್ಟ್ ಸರ್ಕ್ಯೂಟ್ – ನೂರಾರು ಮನೆಗಳ ಟಿವಿ, ಫ್ರಿಡ್ಜ್‌ಗಳಿಗೆ ಹಾನಿ

  • ಎಣ್ಣೆ ವ್ಯಾಪಾರಿ ಕೊಲೆಗೆ ಸುಪಾರಿ: 6 ಆರೋಪಿಗಳ ಬಂಧನ

    ಎಣ್ಣೆ ವ್ಯಾಪಾರಿ ಕೊಲೆಗೆ ಸುಪಾರಿ: 6 ಆರೋಪಿಗಳ ಬಂಧನ

    – ಎರಡು ಬಾರಿ ಮಾರಣಾಂತಿಕ ಹಲ್ಲೆ ಮಾಡಿದ ಸುಪಾರಿ ಕಿಲ್ಲರ್ಸ್

    ರಾಯಚೂರು: ರಾಯಚೂರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರ ಮೇಲೆ ಹಾಡ ಹಗಲೇ ನಡೆದಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ರಾಯಚೂರಿನ ಅಡುಗೆ ಎಣ್ಣೆ ಅಂಗಡಿ ವ್ಯಾಪಾರಿ ತಿರುಮಲೇಶ ಸೇರಿ 6 ಜನರನ್ನು ಮಾರ್ಕೆಟ್ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.

    ವ್ಯಾಪಾರದಲ್ಲಿನ ಅಹಿತಕರ ಪೈಪೋಟಿ ಹಾಗೂ ವೈಷಮ್ಯದಿಂದ ವೀರಭದ್ರೇಶ್ವರ ಎಣ್ಣೆ ಅಂಗಡಿ ಮಾಲೀಕ ನರಸಿಂಹ ಮೂರ್ತಿ ಮೇಲೆ ಎರಡು ಬಾರಿ ಮಾರಣಾಂತಿಕ ಹಲ್ಲೆ ನಡೆದಿತ್ತು. ತಿರುಮಲೇಶ್, ಆತನ ಸಹೋದರ ಮಂಜುನಾಥ್, ಮಾವ ದೇವದಾಸ್ ಸೇರಿ ನರಸಿಂಹ ಮೂರ್ತಿಯನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು. ಮೂರು ಲಕ್ಷ ರೂಪಾಯಿಗೆ ಕೊಲೆ ಸುಪಾರಿ ಪಡೆದ ರಾಯಚೂರಿನ ಶ್ರೀಕಾಂತ್, ರಾಜೇಶ್, ಸುದರ್ಶನ್ 2017 ಜನವರಿ 4 ಹಾಗೂ ಫೆಬ್ರವರಿ 9 ರಂದು ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದ್ದು ಈ ಆರು ಜನರನ್ನ ಬಂಧಿಸಲಾಗಿದೆ.

    ಬಂಧಿತರಿಂದ 4 ಬೈಕ್, ಎರಡು ಲಕ್ಷ ರೂಪಾಯಿ ನಗದು, ಒಂದು ಲಾಂಗ್ ಜಪ್ತಿ ಮಾಡಲಾಗಿದೆ. ಸುಪಾರಿ ಪಡೆದ ಮೂವರು ಆರೋಪಿಗಳು ಈ ಹಿಂದೆ ಕೊಲೆ ಯತ್ನ ಪ್ರಕರಣ ಹಾಗೂ ಸರಗಳ್ಳತನ ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸಿ ಬಂದಿದ್ದಾರೆ.