Tag: ಕೊಲ್ಲಾಪುರ

  • ದಲಿತರ ಮನೆಯಲ್ಲಿ ಅಡುಗೆ ಮಾಡಿ `ಪಾಕ ಪ್ರವೀಣ’ನಾದ ರಾಹುಲ್ ಗಾಂಧಿ

    ದಲಿತರ ಮನೆಯಲ್ಲಿ ಅಡುಗೆ ಮಾಡಿ `ಪಾಕ ಪ್ರವೀಣ’ನಾದ ರಾಹುಲ್ ಗಾಂಧಿ

    ನವದೆಹಲಿ: ಕಾಂಗ್ರೆಸ್ ನಾಯಕ ಇತ್ತೀಚೆಗೆ ರಾಹುಲ್ ಗಾಂಧಿ (Rahul Gandhi) ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಲಿತ ಕುಟುಂಬದವರೊಂದಿಗೆ ಸೇರಿ ಪಾಕಪದ್ಧತಿ ರುಚಿಯನ್ನು ಸವಿದರು. ಈ ವೀಡಿಯೋವನ್ನು ತಮ್ಮ ಎಕ್ಸ್ (X) ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

    ಅ.5 ರಂದು ಮಹಾರಾಷ್ಟ್ರದ (Maharashtra) ಕೊಲ್ಲಾಪುರದ (Kolhapur) ಉಂಚಾನ್ ಗ್ರಾಮದಲ್ಲಿ ದಲಿತ ರೈತ ಅಜಯ್ ತುಕಾರಾಂ ಸನಡೆ ಹಾಗೂ ಅಂಜನಾ ತುಕಾರಾಂ ಸನಡೆ ಎನ್ನುವವರ ಮನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರ ಪಾಕ ಪದ್ಧತಿ, ಅವರ ಊಟ ಹೇಗಿರುತ್ತದೆ ಎನ್ನುವ ಮಹತ್ವವನ್ನು ತಿಳಿದುಕೊಂಡರು.ಇದನ್ನೂ ಓದಿ:2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್‌ ಶಾ

    ಅವರ ಕುಟುಂಬದವರೊಂದಿಗೆ ಸೇರಿ ಮಸಾಲೆ ಭರಿತ ಊಟವನ್ನು ಮಾಡಿ, ತಾವೂ ವಿದರು. ಈ ವೇಳೆ ರಾಹುಲ್ ಗಾಂಧಿಯವರೊAದಿಗೆ `ದಲಿತ್ ಕಿಚನ್ಸ್ ಆಫ್ ಮರಾಠವಾಡ’ ಪುಸ್ತಕದ ಲೇಖಕ ಶಾಹು ಪಟೋಲೆ ಅವರು ಜೊತೆಗಿದ್ದರು.

    ನಿಮ್ಮ ದೈನಂದಿನ ಊಟ ಏನು? ಅಡುಗೆ ಪದ್ಧತಿ ಹೇಗಿದೆ ಎನ್ನುವುದು ಯಾರಿಗೂ ತಿಳಿದಿಲ್ಲ. ಅದನ್ನು ತಿಳಿಯಲು ನಾನು ಇಂದು ಇಲ್ಲಿಗೆ ಬಂದಿದ್ದೇನೆ ಎಂದರು. ದಲಿತರು ಸಮಾಜದಲ್ಲಿ ಎದುರಿಸುತ್ತಿರುವ ತಾರತಮ್ಯದ ಸಮಸ್ಯೆ ಹೀಗೆ ಬೇರೆ ವಿಷಯಗಳ ಕುರಿತು ಮಾತನಾಡಿದರು. ನಾನಿರುವ ಸ್ಥಾನವನ್ನು ಜನರು ಗೌರವಿಸುತ್ತಾರೆ. ಆದರೆ ನಾನು ಜಾತಿಯನ್ನು ಗೌರವಿಸುವುದಿಲ್ಲ ಎಂದರು.

    ಈ ಕುರಿತು ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಂವಿಧಾನವು ಬಹುಜನರಿಗೆ ಪಾಲು ಮತ್ತು ಹಕ್ಕನ್ನು ನೀಡಿದೆ. ನಾವೆಲ್ಲರೂ ಸಹೋದರತ್ವ ಮನೋಭಾವದಿಂದ ಶ್ರಮಿಸಿದಾಗ ಸಮಾನತೆ ಸಾಧ್ಯ ಎಂದರು. ನಾವು `ಚಾನೆ ಕೆ ಸಾಗ್ ಕಿ ಸಬ್ಜಿ’,`ಹರಭಾರಿಯಾಚಿ ಭಾಜಿ’ ಹಾಗೂ ಬೆಗನ್ ದಾಲ್ ಅಡುಗೆ ಮಾಡಿರುವುದಾಗಿ ತಿಳಿಸಿದ್ದಾರೆ. ಹಂಚಿಕೊಂಡಿರುವ ವೀಡಿಯೋದಲ್ಲಿ ರಾಹುಲ್ ಗಾಂಧಿ ಅಡುಗೆ ಮಾಡಿ, ಅವರೊಟ್ಟಿಗೆ ಊಟ ಮಾಡಿರುವುದು ವೈರಲ್ ಆಗಿದೆ.ಇದನ್ನೂ ಓದಿ:ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

  • ಕಲ್ಲು ಹಿಡಿದು ಗೂಂಡಾಗಳ ಬೆನ್ನಟ್ಟಿ ಮಗನನ್ನು ಪ್ರಾಣಾಪಾಯದಿಂದ ರಕ್ಷಿಸಿದ ತಾಯಿ

    ಕಲ್ಲು ಹಿಡಿದು ಗೂಂಡಾಗಳ ಬೆನ್ನಟ್ಟಿ ಮಗನನ್ನು ಪ್ರಾಣಾಪಾಯದಿಂದ ರಕ್ಷಿಸಿದ ತಾಯಿ

    ಮುಂಬೈ: ಕತ್ತಿ ದಾಳಿಯಿಂದ ತನ್ನ ಮಗನನ್ನು ರಕ್ಷಿಸಿಲು ತಾಯಿ ಕಲ್ಲು ಹಿಡಿದು ಗೂಂಡಾಗಳ ಬೆನ್ನಟ್ಟಿ ಪ್ರಾಣಾಪಾಯದಿಂದ ರಕ್ಷಿಸಿದ ಘಟನೆಯೊಂದು ಮಹಾರಾಷ್ಟ್ರದ (Maharashtra) ಕೊಲ್ಲಾಪುರದಲ್ಲಿ (Kolhapur) ನಡೆದಿದೆ.

    ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದೆ. ತನ್ನ ಜೀವವನ್ನು ಲೆಕ್ಕಿಸದೇ ಮಗನನ್ನು ಪ್ರಾಣಾಪಾಯದಿಂದ ಪಾರು ಮಾಡಿದ ತಾಯಿಯ ಧೈರ್ಯವು ಈ ವಿಡಿಯೋದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಚುರುಕು ಪಡೆದ ಮುಡಾ ಹಗರಣದ ತನಿಖೆ – ಮೂರು ಪಕ್ಷದ ನಾಯಕರಿಗೆ ಈಗ ಭಯ

    ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಜೈಸಿಂಗ್‌ಪುರದ ನಂದಿನಿ ನಾಕಾ ರೋಡ್ (Nandini Naka Road) ಬಳಿ ಯುವಕನೊಬ್ಬ ಕತ್ತಿಯಿಂದ (Sword) ಹಲ್ಲೆ ನಡೆಸಿದ್ದಾನೆ. ರಸ್ತೆಯ ಸಿಸಿಟಿವಿಯಲ್ಲಿ (CCTV) ಹಲ್ಲೆ ನಡೆಸಿರುವ ಹಾಗೂ ತಾಯಿ ಬಂದು ಮಗನನ್ನು ರಕ್ಷಿಸಿರುವ ದೃಶ್ಯಾವಳಿಗಳು ಸೆರೆಯಾಗಿವೆ.

    ಕತ್ತಿಯಿಂದ ಮಗನನ್ನು ದಾಳಿ ಮಾಡಲು ಬಂದ ಗೂಂಡಾಗಳನ್ನು ಮಹಿಳೆ ಕಲ್ಲನ್ನು ಹಿಡಿದು ಬೆನ್ನಟ್ಟಿಕೊಂಡು ಹೋಗಿದ್ದಾಳೆ. ದಾಳಿ ಮಾಡಿದವರನ್ನು ಕಲ್ಲಿನಿಂದ ಅಟ್ಟಿಸಿಕೊಂಡು ಹೋಗಿ ಸೇಡು ತೀರಿಸಿಕೊಂಡಿದ್ದಾಳೆ. ಈ ಘಟನೆ ಸೋಮವಾರ (ಆ.19ರ) ಮಧ್ಯಾಹ್ನ 1.20ರ ಸುಮಾರಿಗೆ ಜಯಸಿಂಗ್‌ಪುರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ವ್ಹೀಲಿಂಗ್ ಪುಂಡರ ವಿರುದ್ಧ ಪೊಲೀಸರ ಸೈಲೆಂಟ್ ಸಮರ

  • ದುಬೈನಲ್ಲಿ ತೈಲ ವ್ಯಾಪಾರ ಮಾಡ್ತಿದ್ದ ಉದ್ಯಮಿ ಕಾರು ಅಡ್ಡಗಟ್ಟಿ 95 ಲಕ್ಷ ರೂ. ದರೋಡೆ

    ದುಬೈನಲ್ಲಿ ತೈಲ ವ್ಯಾಪಾರ ಮಾಡ್ತಿದ್ದ ಉದ್ಯಮಿ ಕಾರು ಅಡ್ಡಗಟ್ಟಿ 95 ಲಕ್ಷ ರೂ. ದರೋಡೆ

    ದಾವಣಗೆರೆ: ಕೊಲ್ಲಾಪುರದಿಂದ ಕೊಡಗಿನ ವಿರಾಜಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದ ಉದ್ಯಮಿಯ ಕಾರನ್ನು ಕಳ್ಳರು ಅಡ್ಡಗಟ್ಟಿ 95 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಚನ್ನಗಿರಿಯಲ್ಲಿ ನಡೆದಿದೆ.

    ದುಬೈನಲ್ಲಿ ತೈಲ ವ್ಯಾಪಾರ ಮಾಡುತ್ತಿರುವ ನಬೀಲ್ಕೆ ಎಂಬವವರ ಕುಟುಂಬ ಕಾರಿನಲ್ಲಿ ಪ್ರಯಾಣ ಮಾಡುತ್ತಿತ್ತು. ಈ ವೇಳೆ ಚನ್ನಗಿರಿ (Channagiri) ತಾಲ್ಲೂಕಿನ ಬೀರೂರು ರಾಜ್ಯ ಹೆದ್ದಾರಿಯಲ್ಲಿನ ಬುಕ್ಕಾಂಬುದಿ ಕೆರೆ ಬಳಿ ದರೋಡೆಕೋರರು ಕಾರನ್ನು ಅಡ್ಡಗಟ್ಟಿ 95 ಲಕ್ಷ ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆ ಜೂ. 18ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಹಶೀಲ್ದಾರ್ ಮನೆ ಮೇಲೆ ಮುಂದುವರೆದ ʼಲೋಕಾʼ ದಾಳಿ – ಬಗೆದಷ್ಟು ಸಿಗುತ್ತಿದೆ ಕೋಟಿಗಟ್ಟಲೇ ಆಸ್ತಿ

    ಮಹಾರಾಷ್ಟ್ರದ (Maharashtra) ಕೊಲ್ಲಾಪುರ ಜಿಲ್ಲೆಯ ಸಾನೆ ಗುರೂಜಿ ಪಟ್ಟಣದಲ್ಲಿ ನಬೀಲ್ಕೆಯವರ ಕುಟುಂಬ ಚಿನ್ನಾಭರಣದ ಅಂಗಡಿ ನಡೆಸುತ್ತಿತ್ತು. ಅಲ್ಲಿದ್ದ ಚಿನ್ನವನ್ನು ಮಾರಾಟ ಮಾಡಿ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಅಂಗಡಿ ತೆರೆಯಲು ಹಣದೊಂದಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೀಲೇಶ್ ಹಾಗೂ ಅಭಿಜಿತ್ ಬುರುತ್ತಿದ್ದಾಗ ಈ ಘಟನೆ ನಡೆದಿದೆ. 10 ರಿಂದ 15 ಜನ ದರೋಡೆಕೋರರ ತಂಡ ಬುಕ್ಕಾಂಬುದಿ ಕೆರೆ ಬಳಿ ಕಾರನ್ನು ಅಡ್ಡಗಟ್ಟಿ, ಪಿಸ್ತೂಲ್ ತೋರಿಸಿ ಹಣ ದೋಚಿ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಕಾರಿನಲ್ಲಿದ್ದ ನೀಲೇಶ್ ಹಾಗೂ ಅಭಿಜಿತ್‍ನನ್ನು ಕರೆದುಕೊಂಡು ಹೋಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

    ಈ ಸಂಬಂಧ ಅಂಗಡಿ ಮಾಲೀಕ ನಬೀಲ್ಕೆ, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬುಕ್ಕಾಂಬುದಿ ಕೆರೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ವ್ಯಾಪ್ತಿಗೆ ಒಳಪಡುವುದರಿಂದ ಪ್ರಕರಣವನ್ನು ಚನ್ನಗಿರಿ ಪೊಲೀಸರು ಅಜ್ಜಂಪುರ ಠಾಣೆಗೆ ವರ್ಗಾಯಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಇಲ್ಲೇ ಮಣ್ಣುಮಾಡಿ ಅಂತ 15 ವರ್ಷದ ಹಿಂದೆಯೇ ಗುಂಡಿ ತೋಡಿದ್ದ – ವ್ಯಕ್ತಿ ಮರಣದ ಬಳಿಕ ಅಲ್ಲೇ ಅಂತ್ಯಸಂಸ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವಿಯ ಮೇಲೆ ಮುನಿಸಿಕೊಂಡ್ರಾ ರಮೇಶ್ ಜಾರಕಿಹೊಳಿ?

    ದೇವಿಯ ಮೇಲೆ ಮುನಿಸಿಕೊಂಡ್ರಾ ರಮೇಶ್ ಜಾರಕಿಹೊಳಿ?

    ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮನ್ನು ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನೆಲೆ ಕಳೆದೆರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಪಕ್ಷದವರ ಮೇಲಷ್ಟೆ ಅಲ್ಲದೆ ತನ್ನ ಆರಾಧ್ಯ ಧೈವ ಕೊಲ್ಲಾಪುರ ಮಹಾಲಕ್ಷ್ಮಿ ಮೇಲೂ ಮುನಿಸಿಕೊಂಡಿದ್ದಾರೆ.

    ರಮೇಶ್ ಜಾರಕಿಹೊಳಿ ಅವರು ಪ್ರತಿ ಶುಕ್ರವಾರ ತಪ್ಪದೇ ಕೊಲ್ಲಾಪುರಕ್ಕೆ ತೆರಳಿ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆಯುತ್ತಿದ್ದರು. ಇಂದು ದೇವಿಯ ದರ್ಶನ ಪಡೆಯಲು ಸಹ ಕೊಲ್ಲಾಪುರಕ್ಕೆ ತೆರಳದೇ ಅಜ್ಞಾತ ಸ್ಥಳದಲ್ಲಿಯೇ ಉಳಿದುಕೊಂಡಿದ್ದಾರೆ.

    ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಭಾಜಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡಿದ್ದವು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಎಲ್ಲಿಯೂ ಹೋಗಿಲ್ಲ, ಬೆಳಗಾವಿಯಲ್ಲಿದ್ದಾರೆ. ಸಚಿವ ಸಂಪುಟದಿಂದ ಅವರನ್ನು ಕೈ ಬಿಟ್ಟಿದ್ದರಿಂದ ಅಸಮಾಧಾನಗೊಂಡಿದ್ದಾರೆ. ನಾನು ಫೋನ್ ನಲ್ಲಿ ಅವರ ಜೊತೆ ಮಾತನಾಡಿದ್ದೇನೆ. ರಮೇಶ್ ಓರ್ವ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಪಕ್ಷ ತೊರೆಯಲ್ಲ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿವೃತ್ತಿ ದಿನದಂದೇ ಲಂಚಕ್ಕೆ ಕೈ ಚಾಚಿ ಸರ್ಕಾರಿ ನೌಕರ ಅರೆಸ್ಟ್!

    ನಿವೃತ್ತಿ ದಿನದಂದೇ ಲಂಚಕ್ಕೆ ಕೈ ಚಾಚಿ ಸರ್ಕಾರಿ ನೌಕರ ಅರೆಸ್ಟ್!

    ಮುಂಬೈ: ನಿವೃತ್ತಿ ದಿನದಂದೇ ಲಂಚ ತೆಗೆದುಕೊಳ್ಳುತ್ತಿದ್ದ ಸರ್ಕಾರಿ ಲೆಕ್ಕ ಪರಿಶೋಧಕನನ್ನು ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ರೆಡ್‍ಹ್ಯಾಂಡ್ ಆಗಿ ಹಿಡಿದು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ.

    58 ವರ್ಷದ ಸದಾಶಿವ ದ್ಯಾಂದೋಹಿಯವರು ಬಂಧಿತ ನೌಕರ. ಕೊಲ್ಲಾಪುರದ ಉಪ ಅರಣ್ಯ ಸಂರಕ್ಷಣಾ ಇಲಾಖೆಯಲ್ಲಿ ಲೆಕ್ಕ ಪರಿಶೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈತ ಪ್ರಮಾಣಪತ್ರ ನೀಡುವ ಕುರಿತು ವ್ಯಕ್ತಿಯೊಬ್ಬರಿಗೆ 2 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ. ಈತನ ಬೇಡಿಕೆಯ ವಿರುದ್ಧ ವ್ಯಕ್ತಿಯು ಕೊಲ್ಲಾಪುರ ವಿಭಾಗದ ಭ್ರಷ್ಟಾಚಾರ ನಿಗ್ರಹಕ್ಕೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳು ಬಲೆ ಬೀಸಿ 1500 ರೂಪಾಯಿ ಲಂಚ ಪಡೆಯುತ್ತಿರುವಾಗ ಬಂಧಿಸಿದ್ದಾರೆ.

    ಶುಕ್ರವಾರ ಸದಾಶಿವ್ ವೃತ್ತಿಯ ಕೊನೆಯ ದಿನ ಆಗಿತ್ತು. ನಿವೃತ್ತಿಯ ಕೇವಲ 2 ಗಂಟೆ ಮುಂಚೆ ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ಪಡೆಯ ಅಧಿಕಾರಿಗಳ ಬಲೆಗೆ ಬಿದ್ದು ಬಂಧಿತನಾಗಿದ್ದಾನೆ.