Tag: ಕೊಲ್ಲೂರು ದೇವಸ್ಥಾನ

  • ಕೊಲ್ಲೂರಿಗೆ ಬಿ.ವೈ ರಾಘವೇಂದ್ರ ಭೇಟಿ- ಬಿಎಂಎಸ್ ಬಗ್ಗೆ ಗಂಟಿಹೊಳೆ ಜೊತೆ ಚರ್ಚೆ

    ಕೊಲ್ಲೂರಿಗೆ ಬಿ.ವೈ ರಾಘವೇಂದ್ರ ಭೇಟಿ- ಬಿಎಂಎಸ್ ಬಗ್ಗೆ ಗಂಟಿಹೊಳೆ ಜೊತೆ ಚರ್ಚೆ

    ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ, ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ (BY Raghavendra) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ್ದಾರೆ.

    ಉಡುಪಿ ಜಿಲ್ಲೆ ಬೈಂದೂರು ತಾಲೂಕು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ ಅವರು ತಾಯಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ದೇಗುಲದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ದೇವರ ದರ್ಶನ ಮಾಡಿ ಅರ್ಚನೆ ಸಲ್ಲಿಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ ಹೊರಗಿನವರು ನಮ್ಮವರೂ ಮೋಸ ಮಾಡ್ತಾರೆ, ಅನುಭವವಿದೆ: ಪರಮೇಶ್ವರ್

    ಬೈಂದೂರು ವಿಧಾನಸಭಾ ಕ್ಷೇತ್ರ ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಒಳಪಡುವ ಕಾರಣ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಂಸದರ ಜೊತೆಗಿದ್ದರು. ಬೈಂದೂರು ಮಾಜಿ ಶಾಸಕ ಬಿಜೆಪಿ ಮುಖಂಡ ಬಿ.ಎಂ ಸುಕುಮಾರ್ ಶೆಟ್ಟಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಬಗ್ಗೆ ಎರಡು ದಿನದ ಹಿಂದೆ ಘೋಷಣೆ ಮಾಡಿದ್ದರು. ದೇಗುಲ ಭೇಟಿ ಸಂದರ್ಭದಲ್ಲಿ ಸಾಧಕ-ಬಾಧಕಗಳ ಚರ್ಚೆ ಸಂಸದರು ಮತ್ತು ಶಾಸಕರ ನಡುವೆ ನಡೆಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಉಡುಪಿ: ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಕಡೆಗೋಲು ಶ್ರೀಕೃಷ್ಣನ ವಿಶೇಷ ದರ್ಶನ ಪಡೆದರು.

    ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲರು ಇಂದು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಈ ವೇಳೆ ಮಠದಲ್ಲೇ ಸ್ವಲ್ಪ ಸಮಯ ಸ್ವಾಮೀಜಿ ಹಾಗೂ ರಾಜ್ಯಪಾಲರು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಪರ್ಯಾಯ ಅದಮಾರು ಮಠದಿಂದ ಗೌರವಿಸಲಾಯಿತು. ರಾಜ್ಯಪಾಲರು ಸ್ವಾಮೀಜಿಯನ್ನು ಸನ್ಮಾನಿಸಿದರು.

    ಈ ಸಂದರ್ಭದಲ್ಲಿ ಪರ್ಯಾಯ ಈಶಪ್ರೀಯ ತೀರ್ಥಶ್ರೀಪಾದರ ಭೇಟಿಯಾದರು. ಶಾಸಕ ರಘುಪತಿ ಭಟ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ನಂತರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರು ಮೂಕಾಂಬಿಕೆಯ ದರ್ಶನ ಪಡೆದರು. ದೇಗುಲದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್

    ಕೊಲ್ಲೂರು ಮೂಕಾಂಬಿಕಾ ದೇವಳ ವತಿಯಿಂದ ರಾಜ್ಯಪಾಲರಿಗೆ ಗೌರವ ಸಲ್ಲಿಸಲಾಯಿತು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ರಾಜ್ಯಪಾಲರು ತೆರಳಿದರು. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

  • ಕೊಲ್ಲೂರು ದೇವಸ್ಥಾನದ ಬಾಣಸಿಗರಿಗೆ ಬಂತು ಯೂನಿಫಾರ್ಮ್

    ಕೊಲ್ಲೂರು ದೇವಸ್ಥಾನದ ಬಾಣಸಿಗರಿಗೆ ಬಂತು ಯೂನಿಫಾರ್ಮ್

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸುವವರಿಗೆ ಇನ್ಮುಂದೆ ರಾಯಲ್ ಟ್ರೀಟ್ಮೆಂಟ್ ಸಿಗಲಿದೆ. ಯೂನಿಫಾರ್ಮ್ ಹಾಕಿಕೊಂಡು ಭೋಜನ ಶಾಲೆಯ ಸಿಬ್ಬಂದಿ ಊಟ ಬಡಿಸಲಿದ್ದಾರೆ.

    ದಕ್ಷಿಣ ಭಾರತದ ಪ್ರಸಿದ್ಧ ದೇವಿ ಕ್ಷೇತ್ರಗಳಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವೂ ಒಂದು. ದಿನನಿತ್ಯ ಇಲ್ಲಿ ಸಾವಿರಾರು ಜನ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಾರೆ. ವರಮಾನ ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿರುವ ಕೊಲ್ಲೂರು ದೇವಳದ ಅಡುಗೆ ಸಿಬ್ಬಂದಿಗೆ ಸಮವಸ್ತ್ರ ವಿತರಣೆ ಮಾಡಲಾಗಿದೆ.

    ದೇವಸ್ಥಾನದ ಭೋಜನ ಶಾಲೆಯಲ್ಲಿ ಅನ್ನ ಪ್ರಸಾದ ವಿತರಣೆ ವೇಳೆ ಸಿಬ್ಬಂದಿ ಸಮವಸ್ತ್ರ ತೊಟ್ಟು ಭಕ್ತರಿಗೆ ಇನ್ನು ಮಂದೆ ಊಟ ಬಡಿಸಲಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಕೊಲ್ಲೂರು ದೇವಸ್ಥಾನಕ್ಕೆ ಬರುವ ಸಂದರ್ಭದಲ್ಲಿ ಶಿಸ್ತು ಇರಲಿ ಎಂದು ದೇವಸ್ಥಾನದ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

    ಶುಚಿತ್ವ ಕಾಪಾಡುವ ಉದ್ದೇಶದಿಂದ ಈ ಸಮವಸ್ತ್ರ ಜಾರಿ ಗೊಳಿಸಿರುವುದಾಗಿ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಪ್ರಸಿದ್ಧ ದೇವಸ್ಥಾನದಲ್ಲಿ ಸಮವಸ್ತ್ರ ಜಾರಿಯಾಗಬೇಕು ಎಂಬ ಬೇಡಿಕೆಯೂ ಇದೆ. ಶುಚಿತ್ವ ಮತ್ತು ಗೌರವದ ಸಂಕೇತವಾಗಿ ಈ ಸಮವಸ್ತ್ರವನ್ನು ದೇವಸ್ಥಾನ ಜಾರಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv