Tag: ಕೊಳಚೆ ನೀರು

  • ಬಾಗಲಕೋಟೆ| ರಸ್ತೆಗಳಲ್ಲಿ ಶೌಚಗುಂಡಿ, ಒಳಚರಂಡಿ ತುಂಬಿ ಮನೆಗೆ ನುಗ್ಗುತ್ತಿವೆ ಕೊಳಚೆ ನೀರು

    ಬಾಗಲಕೋಟೆ| ರಸ್ತೆಗಳಲ್ಲಿ ಶೌಚಗುಂಡಿ, ಒಳಚರಂಡಿ ತುಂಬಿ ಮನೆಗೆ ನುಗ್ಗುತ್ತಿವೆ ಕೊಳಚೆ ನೀರು

    ಬಾಗಲಕೋಟೆ: ವಿದ್ಯಾಗಿರಿಯಲ್ಲಿ ಒಳಚರಂಡಿ ನಿರ್ವಹಣೆಯನ್ನು ಬಾಗಲಕೋಟೆ (Bagalkote) ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (BTDA) ಬಿಟಿಡಿಎ ಕೈ ಬಿಟ್ಟಿದೆ. ಪರಿಣಾಮ ರಸ್ತೆಗಳಲ್ಲಿ ಶೌಚಗುಂಡಿಗಳು, ಒಳಚರಂಡಿ ತುಂಬಿ ಹರಿಯುತ್ತಿದ್ದು ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ.

    ದಿಢೀರ್‌ ನಿರ್ಮಾಣವಾಗಿರುವ ಈ ಸ್ಥಿತಿಯಿಂದ ನಗರಸಭೆ ಸಿಬ್ಬಂದಿಯೂ ಅಸಹಾಯಕರಾಗಿದ್ದಾರೆ. ವಿದ್ಯಾಗಿರಿ ನಗರಸಭೆ ನಿರ್ವಹಣೆಗೆ ಒಳಪಟ್ಟರೂ ಈವರೆಗೆ ಇಲ್ಲಿನ ಒಳಚರಂಡಿಯನ್ನು (Drainage) ಬಿಟಿಡಿಎಯಿಂದ ನಿರ್ವಹಿಸಲಾಗುತ್ತಿತ್ತು. ಆದರೆ ಲೆಕ್ಕಪರಿಶೋಧಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ನಿರ್ವಹಣೆ ಸಾಧ್ಯವಿಲ್ಲ ಎಂದು ಬಿಟಿಡಿಎ ಕೈ ತೊಳೆದುಕೊಂಡಿದೆ.

    ವಿದ್ಯಾಗಿರಿಯ ತೆಗ್ಗಿಲೇಔಟ್, ರೂಪ್‌ಲ್ಯಾಂಡ್, ಕುದರಿಕನ್ನೂರ ಲೇಔಟ್, ರೋಣ ಲೇಔಟ್, ಫುಡ್‌ಸ್ಟೇಶನ್ ಮುಂಭಾಗ ರಸ್ತೆಗಳಲ್ಲೇ ನೀರು ಉಕ್ಕಿ ಹರಿಯುತ್ತಿದೆ. ತೆಗ್ಗಿ ಲೇಔಟ್‌ನಲ್ಲಿ ನೀರು ಮನೆಗೆ ನುಗ್ಗಿದ್ದು, ನಮ್ಮ ಕಷ್ಟ ಕೇಳುವವರು ಯಾರು ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಜನ ಗೋಳಾಡುತ್ತಿದ್ದಾರೆ. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್‌ನನ್ನು ಎನ್‌ಕೌಂಟರ್‌ ಮಾಡಿದ್ರೆ 1,11,11,111 ರೂ. ಬಹುಮಾನ – ಕರ್ಣಿ ಸೇನೆಯಿಂದ ಘೋಷಣೆ

    ಈ ಕುರಿತು ಮಾತನಾಡಿದ ನಗರಸಭೆ ಸದಸ್ಯ ವೀರಪ್ಪ ಶಿರಗಣ್ಣವರ ಪ್ರತಿಕ್ರಿಯಿಸಿ, ನಗರಸಭೆ ಬಳಿ ಇರುವ ಒಂದು ವಾಹನದಿಂದಲೇ ಎಲ್ಲವನ್ನು ಸ್ವಚ್ಛಗೊಳಿಸುವ ಪ್ರಯತ್ನ ನಡೆದಿದೆ. ಸಿಬ್ಬಂದಿ ಸಹಕಾರಿಯಾಗಿದ್ದಾರೆ ಎಂಬ ಕಾರಣಕ್ಕೆ ಎಷ್ಟೇ ಕೆಲಸ ಬಂದರೂ ಅವರು ಗೊಣಗದೇ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆಯ ಶಾಸಕರು ಬಿಟಿಡಿಎಗೆ ಸಭಾಪತಿಯಾಗಿದ್ದು, ಇಂಥ ಸಂದರ್ಭದಲ್ಲಿ ಜನಕ್ಕೆ ನೆರವಾಗುವ ಕೆಲಸ ಮಾಡಬೇಕಿದೆ ಎಂದರು.

    ಬಿಟಿಡಿಎ-ನಗರಸಭೆ ಸಿಬ್ಬಂದಿಯನ್ನು ಕರೆದು ಬಗೆಹರಿಸುವ ಕೆಲಸವನ್ನಾದರೂ ಮಾಡಬೇಕು. ನಾವು ಸಾಧ್ಯವಾದಷ್ಟು ಜನರ ತೊಂದರೆಯನ್ನು ನಿವಾರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

    ವಿದ್ಯಾಗಿರಿಯಲ್ಲಿನ ಒಳಚರಂಡಿ ನಿರ್ವಹಣೆ ಸಂಬಂಧ ನಗರಸಭೆಯಿಂದ ಟೆಂಡರ್ ಕರೆಯಬೇಕಿದ್ದು, ಅಲ್ಲಿಯವರೆಗೂ ಜನರ ಕಷ್ಟ ತಪ್ಪಿದಲ್ಲ ಎಂಬ ಮಾತು ಕೇಳಿ ಬಂದಿದೆ. ಇದನ್ನೂ ಓದಿ: ತುಂಗಾ ಮೇಲ್ದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ಬೆಳೆಹಾನಿ

    ಈ ನಡುವೆ ವಿದ್ಯಾಗಿರಿಯ 20ನೇ ಕ್ರಾಸ್ ನಲ್ಲಿ ಹೊಸದಾಗಿ ರಸ್ತೆ ಡಾಂಬರೀಕರಣ ಮಾಡಲಾಗಿದ್ದು, ರಸ್ತೆ ಕೆಳಭಾಗದ ಪೈಪ್‌ಗಳು ಒಡೆದು ನಿರಂತರವಾಗಿ ನೀರು ಪೋಲಾಗುತ್ತಿದೆ. ಈ ಬಗ್ಗೆಯೂ ಸಾರ್ವಜನಿಕರು ದೂರು ನೀಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ.

  • ಹೊಸ ಅಪಾಯ- ನೀರಿನಲ್ಲಿಯೂ ಪತ್ತೆಯಾದ ಕೊರೊನಾ ವೈರಸ್

    ಹೊಸ ಅಪಾಯ- ನೀರಿನಲ್ಲಿಯೂ ಪತ್ತೆಯಾದ ಕೊರೊನಾ ವೈರಸ್

    – ಪಿಜಿಐ ಪರೀಕ್ಷೆಯಲ್ಲಿ ಬಹಿರಂಗ

    ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೊ ಹೊಸ ಅಪಾಯದ ಸುಳಿಯಲ್ಲಿ ಸಿಲುಕಿದ್ದು, ನೀರಿನಲ್ಲಿಯೂ ಕೊರೊನಾ ವೈರಸ್ ಪತ್ತೆಯಾಗಿರೋದು ಪಿಜಿಐ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.

    ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಶವಗಳು ತೇಲಿ ಬಂದ ಹಿನ್ನೆಲೆಯಲ್ಲಿ ನೀರನ್ನ ಪರೀಕ್ಷೆಗೆ ಒಳಪಡಿಸಬೇಕೆಂಬ ಚರ್ಚೆಗಳು ಮುನ್ನಲೆಗೆ ಬಂದಿದ್ದವು. ಐಸಿಎಂಆರ್ ಮತ್ತು ಡಬ್ಲ್ಯೂಹೆಚ್‍ಓ ಕೆಲ ಭಾಗದ ನೀರನ್ನ ಮಾದರಿಯಾಗಿ ತೆಗೆದುಕೊಂಡಿದ್ದು, ಪರೀಕ್ಷೆಗೆ ಮುಂದಾಗಿತ್ತು. ಕೊಳಚೆ ನೀರಿನ ಪರೀಕ್ಷೆಗಾಗಿ ಎಂಟು ಕೇಂದ್ರಗಳನ್ನ ಆರಂಭಿಸಲಾಗಿದೆ.

    ಮೊದಲ ಹಂತದಲ್ಲಿ ಲಕ್ನೋ ನಗರದ ಮೂರು ಪ್ರದೇಶಗಳ ಕೊಳಚೆ ನೀರನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಒಂದು ಸ್ಥಳದ ನೀರಿನಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ ಎಂದು ಪಿಜಿಐ ಮೈಕ್ರೋಬಯೋಲಾಜಿ ವಿಭಾಗದ ಅಧ್ಯಕ್ಷ ಉಜ್ಜವಲಾ ಘೋಷಾಲ್ ಖಚಿತ ಪಡಿಸಿದ್ದಾರೆ. ಲಕ್ನೋ ನಗರದ ಖಾದ್ರಾ, ಮೀನುಗಾರರ ಬಡವಾಣೆ, ಗಡಿಯಾರ ಗೋಪುರ ಬಡಾವಣೆಯಲ್ಲಿಯ ಕೊಳಚೆ ನೀರು ಸಂಗ್ರಹಿಸಲಾಗಿತ್ತು. ಪ್ರಯೋಗಾಲಯದ ಪರೀಕ್ಷೆಯಲ್ಲಿ ಒಂದು ಮಾದರಿ ನೀರಿನಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ ಎಂದು ಘೋಷಾಲ್ ಹೇಳುತ್ತಾರೆ.

    ಪತ್ತೆಯಾಗಿರುವ ಕೊರೊನಾ ವೈರಸ್ ಮತ್ತು ಪರೀಕ್ಷೆಗೆ ಒಳಪಡಿಸಲಾಗಿದ್ದ ನೀರನ್ನ ಐಸಿಎಂಆರ್ ಗೆ ಹಸ್ತಾಂತರಿಸಲಾಗಿದೆ. ಜನರ ಮಲದಿಂದಾಗಿ ನೀರಿನಲ್ಲಿ ಕೊರೊನಾ ವೈರಸ್ ಕಂಡು ಬಂದಿರೊ ಸಾಧ್ಯತೆಗಳಿವೆ. ಹೋಮ್ ಐಸೋಲೇಟ್ ನಲ್ಲಿರೋ ಸೋಂಕಿತರು ಬಳಸೋ ಶೌಚಾಲಯದಿಂದ ವೈರಸ್ ಚರಂಡಿ ಸೇರ್ಪಡೆಯಾಗ್ತಿದೆ. ಈ ಸಂಬಂಧ ಹಲವು ದೇಶಗಳಲ್ಲಿ ಸಂಶೋಧನೆ ಸಹ ನಡೆಸಲಾಗುತ್ತಿದೆ. ಮಲ ಸೋಂಕಿನಿಂದ ಶೇಕಡ ಅರ್ಧದಷ್ಟು ಜನ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ.

    ಸೋಂಕಿತ ಹೋಮ್ ಐಸೋಲೇಟ್ ನಲ್ಲಿದ್ದಾಗ ಆತನಿಗಾಗಿ ಪ್ರತ್ಯೇಕ ವಾಶ್ ರೂಮ್, ಶೌಚಾಲಯ ಇರಬೇಕು. ನೀರಿನ ಮೂಲಕ ಸೋಂಕು ಪಸರಿಸಲ್ಲ. ಈ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ. ಆದ್ರೆ ಜನರು ಎಚ್ಚರಿಕೆಯಿಂದ ಸರ್ಕಾರದ ಮಾರ್ಗಸೂಚಿ ಪಾಲಿಸಿ ಎಂದು ತಜ್ಞರು ಸಲಹೆ ನೀಡಿದ್ದಾರೆ.

  • ಮಳೆಗೆ ತುಂಬಿ ಹರಿದ ಎಚ್‍ಎಸ್‍ಆರ್ ಲೇಔಟ್ ಚರಂಡಿಗಳು!

    ಮಳೆಗೆ ತುಂಬಿ ಹರಿದ ಎಚ್‍ಎಸ್‍ಆರ್ ಲೇಔಟ್ ಚರಂಡಿಗಳು!

    ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆರಾಯನ ಆರ್ಭಟ ಆರಂಭವಾಗಿದ್ದು, ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಹೆಚ್‍ಎಸ್‍ಆರ್ ಬಡಾವಣೆಯ ಮನೆಗಳಿಗೆ ಕೊಳಚೆ ನೀರು ನುಗ್ಗಿ ಸ್ಥಳೀಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

    ರಾಜಕಾಲುವೆಗಳಲ್ಲಿ ತ್ಯಾಜ್ಯ ತುಂಬಿಕೊಂಡಿದ್ದು, ನೀರು ಹೋಗದೆ ಸಂಪೂರ್ಣ ಬಂದ್ ಆಗಿತ್ತು. ಅಷ್ಟೇ ಅಲ್ಲದೆ ಎಚ್‍ಎಸ್‍ಆರ್ ಲೇಔಟ್ ಚರಂಡಿಗಳನ್ನು ಸ್ವಚ್ಛಗೊಳಿಸದೇ ಸುಮಾರು ದಿನಗಳು ಕಳೆದಿತ್ತು. ಮಳೆಯಿಂದಾಗಿ ಒಳ ಚರಂಡಿಯಿಂದ ನೀರು ಮೇಲೆ ಬಂದು, ರಸ್ತೆ ಮೇಲೆ ಹಳ್ಳವೇ ನಿರ್ಮಾಣವಾಗಿತ್ತು.

    ಸವಾರರು ಈ ರಸ್ತೆಗಳ ಮೂಲಕ ಸಾಗಲು ಹರಸಾಹಸ ಪಟ್ಟಿದ್ದಾರೆ. ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ದುರ್ನಾತ ಹರಡಿದ್ದು, ಪಾದಚಾರಿಗಳು, ಅಂಗಡಿಯವರು, ವ್ಯಾಪಾರಿಗಳು ಮೂಗು ಮುಚ್ಚಿಕೊಂಡು ಜೀವನ ಮಾಡಬೇಕಾಗಿದೆ. ಇಷ್ಟೆಲ್ಲ ಅವಾಂತರವಾದರೂ ಬಡಾವಣೆಯ ಕಡೆ ಮುಖ್ಯ ಎಂಜಿನೀಯರ್ ಕೃಷ್ಣ ಗೌಡ ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆಯನ್ನು ಆಲಿಸದ್ದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸ್ಥಳಕ್ಕೆ ಭೇಟಿ ನೀಡಿದ ಕಾರ್ಪೊರೇಟರ್ ಗುರುಮೂರ್ತಿ ರೆಡ್ಡಿ ಅವರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಬಳಿಕ ಮಾತನಾಡಿ ಗುರುಮೂರ್ತಿ ಅವರು, ‘ನಾನು ಕಳೆದ ಬಾರಿ ಮಳೆ ಬಂದಾಗಲೇ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಆದರೂ ಸರಿಪಡಿಸಿಲ್ಲ, ಹೀಗಾಗಿ ಈ ಸಮಸ್ಯೆಯಾಗಿದೆ’ ಎಂದು ತಮ್ಮ ಅಸಹಾಯಕತೆ ತೊಡಿಕೊಂಡಿದ್ದಾರೆ. ಬಳಿಕ ಜೆಸಿಬಿ ಮೂಲಕ ರಸ್ತೆಯ ಮೇಲೆ ನಿಂತಿದ್ದ ಕೊಳಚೆ ನೀರನ್ನು ರಾಜ ಕಾಲುವೆಗೆ ಹರಿಬಿಡಲು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಮಕೂರಿನ ಈ ವಾರ್ಡ್‍ನಲ್ಲಿ ಬರ್ತಿದೆ ಕುಡಿಯೋ ನೀರಿನ ಜೊತೆ ಟಾಯ್ಲೆಟ್ ನೀರು!

    ತುಮಕೂರಿನ ಈ ವಾರ್ಡ್‍ನಲ್ಲಿ ಬರ್ತಿದೆ ಕುಡಿಯೋ ನೀರಿನ ಜೊತೆ ಟಾಯ್ಲೆಟ್ ನೀರು!

    ತುಮಕೂರು: ರಾಜ್ಯದೆಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ನೀರಿಲ್ಲದೇ ಜನ ಜಾನುವಾರಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆನೂ ಕುಡಿಯೋ ನೀರು ಸಾಗ್ತಿದ್ದು, ಆ ನೀರಿಗೆ ಟಾಯ್ಲೆಟ್ ನೀರು ಸೇರ್ಕೊಂಡು ಮನೆಗಳಿಗೆ ಸರಬರಾಜು ಆಗುತ್ತಿದೆ ಅಂತಾ ಸ್ಥಳೀಯರು ಆರೋಪಿಸಿದ್ದಾರೆ.

    ಹೌದು. ತುಮಕೂರು ನಗರದ 12ನೇ ವಾರ್ಡ್‍ನಲ್ಲಿ ಮನೆಯ ಸಂಪ್‍ಗಳಲ್ಲೂ ಕೊಳಚೆ ನೀರು, ಬಕೆಟ್‍ನಲ್ಲೂ ಕೊಳಚೆ ನೀರು. ವಾಟರ್ ಬಾಟೆಲ್‍ನಲ್ಲೂ ಕೊಳಚೆ ನೀರು ಬರುತ್ತಿದ್ದು, ಜನ ಈ ನೀರನ್ನೇ ಕುಡಿಯೋ ಪರಿಸ್ಥಿತಿ ಬಂದಿದೆ. ಇದಕ್ಕೆ ಕಾರಣ ಚರಂಡಿ ಪಕ್ಕದಲ್ಲಿ ನೀರಿನ ಪೈಪ್ ಒಡೆದಿರೋದು. ಇದ್ರಿಂದ ಗಲೀಜು ನೀರು ಮಿಶ್ರಿತವಾಗಿ ಬರುತ್ತಿದೆ. ಕೌನ್ಸಿಲರ್ ಈ ಕಡೆ ಬರ್ತಾ ಇಲ್ಲ. ಫೋನ್ ಮಾಡಿದ್ರೆ ರಿಸೀವ್ ಮಾಡಲ್ಲ ಅಂತಾ ಸ್ಥಳೀಯರಾದ ಮೋಸಿನಾ ಬಾನು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಮ್ಮ ಅಳಲು ತೋಡಿಕೊಂಡಿದ್ದಾರೆ.

    ಈ ಬಗ್ಗೆ ಮಹಾನಗರ ಪಾಲಿಕೆಗೆ ಹಲವು ಭಾರಿ ಸ್ಥಳೀಯರು ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಕುಡಿಯುವ ನೀರು ಬರುವ ಪೈಪ್‍ಲೈನ್ ಅನ್ನು ಒಳಚರಂಡಿ ಪಕ್ಕದಲ್ಲಿ ಹಾಕಿರುವುದು ಕಲುಷಿತ ನೀರು ಬರೋಕೆ ಕಾರಣ ಅಂತಾ ರಿಯಾನ್ ಖಾನ್ ಕಿಡಿಕಾರಿದ್ದಾರೆ.

    ಭೀಕರ ಬರ ಬಂದಿರೋ ಈ ಟೈಮ್‍ನಲ್ಲಿ ನೀರು ಹೀಗೆ ವ್ಯರ್ಥವಾಗ್ತಿರೋದು ಸರಿಯಲ್ಲ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಸಮಸ್ಯೆ ಬಗೆಹರಿಸದಿದ್ರೆ ಜನ ಬೀದಿಗಿಳಿಯೋದು ಗ್ಯಾರಂಟಿ.