Tag: ಕೊಳವೆಬಾವಿ

  • ಕೊಪ್ಪಳ: 5 ಗಂಟೆಗಳ ಕಾರ್ಯಾಚರಣೆ ನಡೆಸಿ, ಕೊಳವೆ ಬಾವಿಗೆ ಬಿದ್ದಿದ್ದ ಕುರಿಮರಿಯ ರಕ್ಷಣೆ

    ಕೊಪ್ಪಳ: 5 ಗಂಟೆಗಳ ಕಾರ್ಯಾಚರಣೆ ನಡೆಸಿ, ಕೊಳವೆ ಬಾವಿಗೆ ಬಿದ್ದಿದ್ದ ಕುರಿಮರಿಯ ರಕ್ಷಣೆ

    ಕೊಪ್ಪಳ: ಕೊಳವೆ ಬಾವಿಗೆ ಬಿದ್ದ ಕುರಿ ಮರಿಯನ್ನು ಜನರು ರಕ್ಷಣೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಜಿಲ್ಲೆಯ ಗಂಗಾವತಿ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಕುರುಮರಿಯೊಂದು ಬಿದ್ದಿತ್ತು. ವೆಂಕಟೇಶ ಬುಕ್ಕ ಎಂಬವರು ತಮ್ಮ ಹೊಲದಲ್ಲಿ ಎರಡು ತಿಂಗಳ ಹಿಂದೆ ಕೊಳವೆ ಬಾವಿ ಕೊರೆಸಿದ್ರು. ಆದ್ರೆ ನೀರು ಬಾರದ ಹಿನ್ನಲೆಯಲ್ಲಿ ಕೊಳವೆ ಬಾವಿ ಮುಚ್ಚದೆ ಹಾಗೆ ಬಿಟ್ಟಿದ್ದರು. ದುರ್ಗಪ್ಪ ಎಂಬವರು ತಮ್ಮ ಕುರಿಗಳನ್ನು ಮೇಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಕೊಳವೆ ಬಾವಿ ಪಕ್ಕದಲ್ಲೇ ಇದ್ದ ನೀರನ್ನು ಕುಡಿಯಲು ಕುರಿಗಳು ಹೋಗಿದ್ದ ಸಂದರ್ಭದಲ್ಲಿ ಕೊಳವೆ ಬಾವಿಗೆ ಒಂದು ವರ್ಷದ ಕುರಿಮರಿ ಬಿದ್ದಿತ್ತು.

    ಬೆಳಗ್ಗೆ 11 ಗಂಟೆಗೆ ಕುರಿಮರಿ ಕೊಳವೆ ಬಾವಿಗೆ ಬಿದ್ದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮತ್ತು ಹೊಲದ ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಕಾರಟಗಿ ಪೊಲೀಸರು ಪರಿಶೀಲನೆ ನಡೆಸಿ ಹೋಗಿದ್ದಾರೆ. ಆದರೆ ಗ್ರಾಮಸ್ಥರು ಕಬ್ಬಿಣದ ಕೊಂಡಿ ಹಾಕಿ ಹಗ್ಗದ ಸಹಾಯದಿಂದ ಕುರಿಮರಿಯನ್ನು ಕೊಳವೆ ಬಾವಿಯಿಂದ ಮೇಲೆತ್ತಿದ್ದಾರೆ.

    ಸತತ ಐದು ಗಂಟೆಗಳ ಕಾಲ ಗ್ರಾಮಸ್ಥರು ಪರಿಶ್ರಮಪಟ್ಟು ಕುರಿಮರಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಕುರಿಮರಿಯನ್ನು ಎತ್ತಲು ಕಬ್ಬಿಣದ ಕೊಂಡಿಗಳನ್ನು ಹಾಕಿದ್ದರಿಂದ ಗಾಯಗೊಂಡಿದೆ.

    https://www.youtube.com/watch?v=udR2aTzGwA0

     

  • ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಮೃತ್ಯುಕೂಪ ಕೊಳವೆಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಕೊನೆಗೂ ಬದುಕಲೇ ಇಲ್ಲ.

    ಅಥಣಿಯ ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾವೇರಿಯ ಮರಣೋತ್ತರ ಪರೀಕ್ಷೆ ನಡೆಸಲಾಯ್ತು. ಈ ವೇಳೆ ಅಥಣಿ ತಹಸೀಲ್ದಾರ್ ಉಮಾದೇವಿ ಹಾಜರಿದ್ದರು. ಇನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಕ್ಕೆ ಶವ ಹಸ್ತಾಂತರಿಸಲಾಯ್ತು. ಈ ವೇಳೆ ಹೆತ್ತವ್ವ ಸವಿತಾ ಮತ್ತು ತಂದೆ ಅಜಿತ್ ಗೋಳಾಟ ಎಂಥವರ ಕರಳು ಕಿವುಚುವಂತಿತ್ತು. ಸಂಬಂಧಿಕರಂತೂ ಎದೆ ಎದೆ ಹೊಡೆದುಕೊಂಡ್ರು. ಗ್ರಾಮಸ್ಥರೆಲ್ಲರೂ ಗೋಳಾಡಿದರು. ಬಳಿಕ ಝುಂಜರವಾಡ ಗ್ರಾಮದಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಯ್ತು.

    ಏಪ್ರಿಲ್ 22ರಂದು ಅಮ್ಮನ ಜೊತೆ ಕಟ್ಟಿಗೆ ಆರಿಸಲು ಹೋಗಿದ್ದ ಕಾವೇರಿ ಸಂಜೆ 5 ಗಂಟೆ ಸುಮಾರಿಗೆ ಶಂಕರಪ್ಪ ಹಿಪ್ಪರಗಿ ಅವ್ರ ತೋಟದ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. ಸುದ್ದಿ ತಿಳಿದು ರಾತ್ರಿ 8 ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭಿಸಿದ್ದ ರಕ್ಷಣಾ ಪಡೆಗಳು ಸತತ 54 ಗಂಟೆ ಕಾರ್ಯಾಚರಣೆ ಬಳಿಕ ಸೋಮವಾರ ರಾತ್ರಿ 11.33ರ ಸುಮಾರಿಗೆ ಕಾವೇರಿಯ ಮೃತದೇಹವನ್ನ ಹೊರ ತೆಗೆದರು.

    28 ಅಡಿಯಲ್ಲಿ ಸಿಲುಕಿದ್ದ ಕಾವೇರಿಯನ್ನ ಸುರಂಗ ಕೊರೆದು ನಿನ್ನೆ ರಾತ್ರಿ ರಕ್ಷಣಾ ಸಿಬ್ಬಂದಿ ಹೊರ ತೆಗೆದ್ರು. ಆದಾಗಲೇ ಸಾವನ್ನಪ್ಪಿದ್ದ ಕಾವೇರಿ ಬಾಯಲ್ಲಿ ರಕ್ತ ಬಂದಿತ್ತು. ಲವಲವಿಕೆಯಿಂದ ಚೂಟಿಯಾಗಿದ್ದ ಮಗಳನ್ನ ಶವವಾಗಿ ಕಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.