Tag: ಕೊಳವೆ ಬಾವಿ

  • ಕೊಳವೆ ಬಾವಿಗೆ ಬಾಲಕ ಬಿದ್ದಿದ್ದ ಪ್ರಕರಣ – ಕಾರ್ಯಾಚರಣೆಗೆ ಬಳಸಿದ್ದ ಯಂತ್ರಗಳ 3.70 ಲಕ್ಷ ಬಿಲ್ ಬಾಕಿ

    ಕೊಳವೆ ಬಾವಿಗೆ ಬಾಲಕ ಬಿದ್ದಿದ್ದ ಪ್ರಕರಣ – ಕಾರ್ಯಾಚರಣೆಗೆ ಬಳಸಿದ್ದ ಯಂತ್ರಗಳ 3.70 ಲಕ್ಷ ಬಿಲ್ ಬಾಕಿ

    ವಿಜಯಪುರ: ಸಾತ್ವಿಕ್ ಎಂಬ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದ ಪ್ರಕರಣ ಸಂಬಂಧ ರಕ್ಷಣಾ ಕಾರ್ಯಾಚರಣೆಗೆ ಬಳಸಲಾಗಿದ್ದ ಯಂತ್ರೋಪಕರಣಗಳ 3.70 ಲಕ್ಷ ರೂ ಬಿಲ್ ಬಾಕಿ ಉಳಿದಿದೆ.

    ಹೌದು, ಕಳೆದ ವರ್ಷ ಏಪ್ರಿಲ್ 03 ರಂದು ಜಮೀನಿನಲ್ಲಿ ಆಟವಾಡುತ್ತಿದ್ದ ಬಾಲಕ ಸಾತ್ವಿಕ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿತ್ತು. ಬಾಲಕ ಕೊಳವೆ ಬಾವಿಗೆ ಬಿದ್ದ 4 ಗಂಟೆಯಲ್ಲಿ ತಾಲೂಕು ಆಡಳಿತ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.ಇದನ್ನೂ ಓದಿ: ಚಿಕ್ಕಮಗಳೂರು| ತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ!

    ಕಾರ್ಯಾಚರಣೆಯಲ್ಲಿ 2 ಹಿಟಾಚಿ, 3 ಜೆಸಿಬಿ, 4 ಟ್ರಾಕ್ಟರ್ ಬ್ರೇಕರ್ಸ್, 1 ಹ್ಯಾಂಡ್ ಡ್ರಿಲ್ಲಿಂಗ್, 1 ಸ್ಟೋನ್ ಕಟ್ಟಿಂಗ್ ಮಷಿನ್, 1 ವಾಟರ್ ಟ್ಯಾಂಕರ್ ಬಳಕೆ ಮಾಡಲಾಗಿತ್ತು. ಪರಿಸ್ಥಿತಿಯನ್ನು ಅರಿತ ಮಾಲೀಕರು ಈ ಎಲ್ಲ ಯಂತ್ರೋಪಕರಣಗಳನ್ನು ಯಾವುದೇ ಕಂಡಿಷನ್ ಇಲ್ಲದೆ ತಂದು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಅಲ್ಲದೆ ಸಾತ್ವಿಕ್ ರಕ್ಷಣೆಗೆ ಹಗಲು ರಾತ್ರಿಯೆನ್ನದೇ ಯಂತ್ರೋಪಕರಣಗಳ ಚಾಲಕರು, ಮಾಲೀಕರು ಕಾರ್ಯಾಚರಣೆ ನಡೆಸಿದ್ದರು. ಇದರ ಫಲವಾಗಿಯೇ ಯಶಸ್ವಿಯಾಗಿ ಬಾಲಕನನ್ನು ಕೊಳವೆ ಬಾವಿಯಿಂದ ಹೊರತರಲಾಯಿತು.

    ಆದರೆ ಕಾರ್ಯಾಚರಣೆ ವೇಳೆ ಹರಸಾಹಸಪಟ್ಟು ಮಗುವನ್ನು ಬದುಕುಳಿಸಿದ್ದ ಯಂತ್ರೋಪಕರಣಗಳ ಮಾಲೀಕರು ಈಗ ಅಲೆಡಾಡುವಂತಾಗಿದೆ. ಕಾರ್ಯಾಚರಣೆಗೆ ಬಳಸಲಾಗಿದ್ದ ಯಂತ್ರಗಳ 3.70 ಲಕ್ಷ ರೂ. ಬಿಲ್‌ನ್ನು ಜಿಲ್ಲಾಡಳಿತ ಬಾಕಿ ಉಳಿಸಿಕೊಂಡಿದೆ. ಕಳೆದ 11 ತಿಂಗಳಿಂದ ಬಿಲ್ ಬಾಕಿಯಿಟ್ಟುಕೊಂಡಿದ್ದು, ಪ್ರತಿನಿತ್ಯ ಬಿಲ್ ಕೊಡಿ ಎಂದು ಯಂತ್ರೋಪಕರಣಗಳ ಮಾಲೀಕರು ಅಲೆದಾಡುವಂತಾಗಿದೆ.

    ಇದು ಕೇವಲ ಯಂತ್ರೋಪಕರಣಗಳಿಗೆ ಹಾಕಿದ ಡೀಸೆಲ್ ಬಿಲ್ ಆಗಿದ್ದು, ಅಸಲಿಗೆ 10 ಲಕ್ಷ ರೂ.ಗೂ ಅಧಿಕ ಬಿಲ್ ಬರಬೇಕು. ಕೊಳವೆ ಬಾವಿ ಕಾರ್ಯಾಚರಣೆ ವೇಳೆ ಹಿಂದೆ ಮುಂದೆ ಯೋಚಿಸದೆ ಯಂತ್ರೋಪಕರಣಗಳನ್ನ ಒದಗಿಸಿದ್ದು, ಜಿಲ್ಲಾಡಳಿತ ಕೇವಲ ಡೀಸೆಲ್ ಬಿಲ್ ಕೊಡುವುದಕ್ಕೆ ಈ ರೀತಿ ಸತಾಯಿಸುತ್ತಿದ್ದಾರೆ ಎಂದು ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಹಿಂದಿ ಬೇಡ ಅನ್ನೋರು ತಮಿಳು ಸಿನಿಮಾವನ್ನು ಯಾಕೆ ಹಿಂದಿಗೆ ಡಬ್ಬಿಂಗ್‌ ಮಾಡ್ತೀರಿ: ಪವನ್‌ ಕಲ್ಯಾಣ್‌ ಪ್ರಶ್ನೆ

     

  • ಭೂಮಿಗೆ ತಟ್ಟುವ ತಾಪ – ಅಂತರ್ಜಲಕ್ಕೆ ಶಾಪ!

    ಭೂಮಿಗೆ ತಟ್ಟುವ ತಾಪ – ಅಂತರ್ಜಲಕ್ಕೆ ಶಾಪ!

    ʻʻಎಲ್ಲಿ ನೀರು ಹರಿಯುವುದೋ, ಅಲ್ಲಿ ನಾಗರಿಕತೆ ಅರಳುತ್ತದೆ, ಅಂತರ್ಜಲ (Groundwater) ಅಮೂಲ್ಯ ಅದನ್ನು ಮಿತವಾಗಿ ಬಳಸಿದರೆ ಬಾಳು ಬಂಗಾರ, ಹನಿ ಹನಿ ಗೂಡಿದರೆ ಹಳ್ಳ. ಹನಿ ಹನಿ ಇಂಗಿದರೆ ಅದುವೇ ಅಂತರ್ಜಲʼʼ ಇದು ಕೇವಲ ನುಡಿಯಲ್ಲ, ಜೀವ ಕೋಟಿಗೆ ನೀರು ಅನಿವಾರ್ಯ, ನೀರಿಗೆ ಮಳೆಯೇ ಆಧಾರ, ಅಂತರ್ಜಲದಿಂದಲೇ ಜೀವ ಕುಲದ ಉದ್ಧಾರ ಎಂಬುದನ್ನು ಪ್ರಮಾಣಿಕರಿಸುವ ಪ್ರಯತ್ನ. ಯಾವುದೇ ಒಂದು ಚಟುವಟಿಕೆಗೂ ಅತ್ಯಗತ್ಯವಾದ ಸಂಪನ್ಮೂಲ ನೀರು. ಇಂದಿನ ಜಲಕ್ಷಾಮಕ್ಕೆ ಅಂತರ್ಜಲದ ಪೂರೈಕೆ ಹಾಗೂ ಬೇಡಿಕೆಗೆ ಇರುವ ಅಗಾಧವಾದ ಅಸಮತೋಲನವೇ ಪ್ರಮುಖ ಕಾರಣವಾಗಿದೆ. ಭೂಮಿಯ (Earth) ಮೇಲೆ ಬೀಳುವ ಮಳೆ ನೀರು ವ್ಯರ್ಥವಾಗಿ ಹರಿದು ಸಮುದ್ರಕ್ಕೆ ಸೇರುವುದನ್ನು ತಪ್ಪಿಸಿ ನೆಲದಾಳಕ್ಕೆ ಇಂಗುವಂತೆ ಮಾಡದಿದ್ದರೆ ಜನ-ಜಾನುವಾರುಗಳು ನಾಶವಾಗುವ ಮೂಲಕ ನಾಗರಿಕತೆಯ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ.

    ಅದರಲ್ಲೂ ಇತ್ತೀಚಿನ ಅಧ್ಯಯನವೊಂದು (Water Study) ಅಂತರ್ಜಲಕ್ಕೆ ಆಗುವ ಅಪಾಯಗಳನ್ನು ಗುರುತಿಸಿದೆ. ಅಂತರ್ಜಲವು ನಮ್ಮ ಪಾದದ ಅಡಿಯಲ್ಲೇ ಇದೆ, ಭೂಮಿಯನ್ನು ಕೊರೆದು ಪಂಪ್‌ ಮಾಡುವಾಗ ಅದು ನಮ್ಮ ಅರಿವಿಗೆ ಬರುತ್ತದೆ. ನಮ್ಮ ಜೀವ ಕೋಟಿ, ಪರಿಸರ ವ್ಯವಸ್ಥೆಗೆ ಆಧಾರವಾಗಿರುವ ಅಂತರ್ಜಲ ಅಪಾಯದಲ್ಲಿದೆ ಎಂದರೆ ನೀವು ನಂಬುತ್ತೀರಾ? ಅಷ್ಟಕ್ಕೂ ಏನದು ಅಪಾಯ? ಭೂಮಿಯ ಮೇಲ್ಮೈ ತಾಪ ಹೆಚ್ಚಿದಷ್ಟು ಅಂತರ್ಜಲಕ್ಕೆ ಏನು ಹಾನಿಯಾಗಲಿದೆ? ಕುಡಿಯುವ ನೀರಿನ ಮೇಲೂ ಇದು ಪರಿಣಾಮ ಬೀರಲಿದೆಯೇ? ಎಂಬುದನ್ನು ನಾವಿಲ್ಲಿ ತಿಳಿಯಬಹುದು.

    ಅಂತರ್ಜಲದ ತಾಪ ಹೆಚ್ಚಿದರೆ ಏನಾಗುತ್ತದೆ?

    ಹವಾಮಾನ ಬದಲಾವಣೆಯಿಂದ ಅಂತರ್ಜಲ ರಕ್ಷಿಸಲ್ಪಡುತ್ತದೆ ಎಂದು ನಾವು ಭಾವಿಸಬಹುದು. ಏಕೆಂದರೆ ಅದು ಭೂಗತವಾಗಿರುತ್ತದೆ. ಆದ್ರೆ ನಿಜಾಂಶವೇ ಬೇರೆ. ಭೂಮಿಯ ಮೇಲ್ಮೈ ವಾತಾವರಣವು ಬೆಚ್ಚಗಾಗುತ್ತಿದ್ದಂತೆ ಹೆಚ್ಚು ಹೆಚ್ಚು ಶಾಖವು ಭೂಗತಕ್ಕೆ ತೂರಿಕೊಳ್ಳುತ್ತದೆ. ಈಗಾಗಲೇ ಇದಕ್ಕೆ ಸಾಕಷ್ಟು ಸಾಕ್ಷ್ಯಗಳೂ ಇವೆ. ಬೋರ್ವೆಲ್‌ ಕೊರೆಸಿದ ನಂತರ ಕೆಲವರು ಅವುಗಳನ್ನು ಮುಚ್ಚದೇ ಹಾಗೆಯೇ ಬಿಟ್ಟುಬಿಡುತ್ತಾರೆ. ಅಲ್ಲದೇ ಉಕ್ಕಿನ ಪೈಪ್‌ಗಳನ್ನು ಬಳಸುವುದರಿಂದ ಅದಕ್ಕೆ ತಗುಲುವ ಶಾಖವು ಅಂತರ್ಜಲದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಜೊತೆಗೆ ಭೂಗತ ದ್ರವ್ಯರಾಶಿಗಳು ಬೆಚ್ಚಗಾಗುತ್ತವೆ. ಪ್ರದೇಶದಿಂದ ಪ್ರದೇಶಕ್ಕೆ ಈ ಹವಾಮಾನ ಬದಲಾದಂತೆ ಅದು ಭೂಗತ ಜೀವರಾಶಿಗಳ ಮೇಲೆ ಪರಿಣಾಮ ಬೀರಲಿದ್ದು, ಅಂತರ್ಜಲ ಮಟ್ಟ ಕುಸಿಯಲು ಕಾರಣವಾಗುತ್ತದೆ. ಜೊತೆಗೆ ಕುಡಿಯುವ ನೀರಿನ ಕೊರತೆಗೂ ಕಾರಣವಾಗುತ್ತದೆ. ಮುಖ್ಯವಾಗಿ ಕೃಷಿ ಮತ್ತು ಕೈಗಾರಿಕೆಗಳು ಹೆಚ್ಚಾಗಿ ಈ ಅಂತರ್ಜಲವನ್ನು ಅವಲಂಬಿಸಿದ್ದು, ಅಂತರ್ಜಲದ ತಾಪ ಹೆಚ್ಚಿದಂತೆ ಈ ಎಲ್ಲ ಚಟುವಟಿಕೆಗಳ ಮೇಲೆಯೂ ಪರಿಣಾಮ ಬೀರಬಹುದು.

    ಅನೂಕೂಲವೂ ಇದೆ:

    ಕೆಲವೊಮ್ಮೆ ಬಿಸಿ ಅಂರ್ತಜಲ ಒಳ್ಳೆಯ ಪರಿಣಾಮ ಬೀರಬಹುದು. ಸಾಮಾನ್ಯವಾಗಿ ಭೂಮಿಯ ಮೇಲ್ಮೈ ತಾಪ ಹೆಚ್ಚಿದಂತೆ ಭೂಮಿಯೊಳಗೆ ಹತ್ತಾರು ಮೀಟರ್‌ ಆಳದಲ್ಲಿ ಶಾಖ ಹಿಡಿದಿಟ್ಟುಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ವಿದ್ಯುತ್‌ ಚಾಲಿತ ಪಂಪ್‌ಸೆಟ್‌ಗಳನ್ನು ಬಳಸುವುದರಿಂದ ಶಾಖವೂ ನೀರಿನೊಂದಿಗೆ ಹೊರಬರುತ್ತದೆ. ಈಗಾಗಲೇ ಯೂರೋಪಿನಾದ್ಯಂತ ಇದು ಬಳಕೆಯಲ್ಲಿದೆ ಎಂದು ತಜ್ಞರು ಹೇಳಿದ್ದಾರೆ.

    ಅನಾನುಕೂಲಗಳೇನು?

    ಅಂತರ್ಜಲ ಬಿಸಿಯಾದಷ್ಟೂ ಭೂಮಿಯ ಅಡಿಯಲ್ಲಿ ವಾಸಿಸುವ ಜೀವರಾಶಿಗಳ ಜೀವಕ್ಕೆ ಹಾನಿಯನ್ನುಂಟುಮಾಡುತ್ತದೆ. ಅಲ್ಲದೇ ಅಂತರ್ಜಲವನ್ನೇ ನಂಬಿ ಬದುಕುವ ರೈತರ ಬೆಳೆಗಳಿಗೆ ಇದರಿಂದ ಹಾನಿಯೂ ಸಂಭವಿಸಬಹುದು.

    ಬಿಸಿ ನೀರಿನಲ್ಲಿ ಆಮ್ಲಜನಕ ಕಡಿಮೆ:

    ಅಂತರ್ಜಲಗಳು ನದಿ ಮತ್ತು ಸರೋವರಗಳನ್ನು ಪೋಷಿಸಲು ನಿಯಮಿತವಾಗಿ ಹರಿಯುತ್ತದೆ. ಹಾಗೇಯೇ ಅಂತರ್ಜಲವನ್ನೇ ಅವಲಂಬಿಸಿರುವ ಪರಿಸರ ವ್ಯವಸ್ಥೆಯನ್ನೂ ಸಂರಕ್ಷಿಸುತ್ತದೆ. ಆದ್ರೆ ಈ ನದಿ ಮತ್ತು ಸರೋವರಗಳಿಗೆ ಹರಿಯುವ ಅಂತರ್ಜಲ ಜಲಚರಗಳ ಜೀವಕ್ಕೂ ಅಪಾಯ ತರುತ್ತದೆ. ಬಿಸಿನೀರಿನಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆ ಇರುವ ಕಾರಣದಿಂದ ಅವು ಜೀವ ಕಳೆದುಕೊಳ್ಳಲಿವೆ ಎಂದು ತಜ್ಞರು ವಿವರಿಸಿದ್ದಾರೆ.

    ಈಗಾಗಲೇ ಆಸ್ಟ್ರೇಲಿಯಾದ ಮುರ್ರೆ ಡಾರ್ಲಿಗ್‌ನಂತರ ಜಲಾನಯನ ಪ್ರದೇಶಗಳಲ್ಲಿ ಈ ಸಮಸ್ಯೆ ಬಂದೊದಗಿದೆ. ಹೆಚ್ಚಿದ ಅಂತರ್ಜಲ ತಾಪದಿಂದ ಆಮ್ಲಜನಕದ ಕೊರತೆಯುಂಟಾಗಿ ಮೀನುಗಳು ಮತ್ತು ಇತರ ಜಲಚರಗಳ ಮಾರಣಹೋಮಕ್ಕೆ ಕಾರಣವಾಗಿದೆ. ಆದ್ರೆ ಅಟ್ಲಾಂಟಿಕ್‌, ಸಾಲ್ಮಾನ್‌ನಂತಹ ತಣ್ಣೀರಿನ ಸರೋವರಗಳು ಶೀತ ಅಂತರ್ಜಲ ವಿಸರ್ಜನೆಯೊಂದಿಗೆ ಆಗಾಗ್ಗೆ ನೀರಿನ ತಾಪದೊಂದಿಗೆ ಸಮತೋಲನ ಕಾಯ್ದುಕೊಳ್ಳುತ್ತಿವೆ.

    ಕರ್ನಾಟಕದಲ್ಲಿ ಸದ್ಯ ಬೋರ್ವೆಲ್‌ ಕೊರೆಯಲು ಇರುವ ನಿಯಮಗಳೇನು?

    ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಕಂಡಿಕೆ 11ರನ್ವಯ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಎಲ್ಲಿ ಕೊಳವೆಬಾವಿ ಕೊರೆಯಬೇಕೆಂದರೆ ಸಂಬಂಧಪಟ್ಟ ಪ್ರಾಧಿಕಾರಿ/ಮಂಡಳಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯುವುದು. ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು. ಕಂಡಿಕೆ 17ರ ಅನ್ವಯ ಯಾವ ಸ್ಥಳದಲ್ಲಿ ಕೊಳವೆಬಾವಿ ಕೊರೆಯಲು ಅನುಮತಿ ನೀಡಲಾಗುತ್ತದೆಯೋ, ಅದೇ ಸ್ಥಳದಲ್ಲಿ ಬೋರ್‌ ಕೊರೆಯುವುದು ಕಡ್ಡಾಯ. ಈ ನಿಯಮ ಉಲ್ಲಂಘಿಸಿದವರಿಗೆ ಕೊಳವೆಬಾವಿ ಕೊರೆಸಲು ನೀಡಿರುವ ಅನುಮತಿ ರದ್ದುಪಡಿಸಲಾಗುವುದು ಮತ್ತು ಕಾನೂನು ಕ್ರಮ ಜರುಗಿಸಲಾಗುವುದು. 36 ಪ್ರಕರಣಗಳಲ್ಲಿ ಕೊಳವೆಬಾವಿ ಕೊರೆಯುವ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅವುಗಳನ್ನು ತಡೆಹಿಡಿಯಲಾಗಿದ್ದು, ಸಂಬಂಧಪಟ್ಟ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಲಮಂಡಳಿ ತಿಳಿಸಿದೆ.

    ಅನುಮತಿ ಪಡೆಯದಿದ್ದರೆ ಶಿಕ್ಷೆ ಏನು?

    ಅನುಮತಿ ಪಡೆಯದೇ ಕೊಳವೆ ಬಾವಿ ಕೊರೆಯುವವರು ಮತ್ತು ಕೊರೆಸುವವರು ಇಬ್ಬರಿಗೂ ಶಿಕ್ಷೆಯಾಗಲಿದೆ. ನ್ಯಾಯಾಲಯ ಕನಿಷ್ಠ 6 ತಿಂಗಳು ಶಿಕ್ಷೆ ಅಥವಾ ದಂಡ ವಿಧಿಸಬಹುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    ಜೀವನಕ್ಕೆ ಅಗತ್ಯವಾಗಿ ಬೇಕಾದ ನೀರು, ಗಾಳಿ ಎಲ್ಲರಿಗೂ, ಎಲ್ಲಾ ಕಾಲಕ್ಕೂ ಸುಲಭವಾಗಿ ದೊರೆಯುವಂತಾಗಬೇಕು. ಇದು ಪ್ರಕೃತಿಯ ನಿಯಮವೂ ಹೌದು. ಆದರೆ ಮಾನವ ಕೇವಲ ಹಕ್ಕುಗಳಿಗೆ ಹೋರಾಡಿ, ಕರ್ತವ್ಯ ಮರೆಯುತ್ತಿರುವುದರಿಂದ ನೀರಿನ ಸಮಸ್ಯೆ ಗಂಭೀರ ಘಟ್ಟ ತಲುಪುವಂತಾಗಿದೆ. ಅಂತರ್ಜಲ ಸಂರಕ್ಷಣೆ ಆಗದಿರುವುದರಿಂದ ಹಾಗೂ ಅಭಿವೃದ್ಧಿಗೆ ಕೆಲವರು ಅಡ್ಡಗಾಲು ಹಾಕಿರುವುದರಿಂದ ಜನತೆಗೆ ಶುದ್ಧವಾದ ನೀರು ಸಿಗದೇ ಅನಾರೋಗ್ಯದಿಂದ ಬಳಲುವಂತಾಗಿದೆ. ಭೂಮಿಯ ಮೇಲೆ ಹರಿಯುವ ನೀರಿಗೂ, ಭೂಮಿಯ ಒಳಗಿರುವ ಅಂತರ್ಜಲಕ್ಕೂ ಮಳೆಯೇ ಆಧಾರ, ಮಳೆ ಬಂದಾಗ ಬಹುಪಾಲು ನೀರು ನಿಲ್ಲದೇ ಹರಿದು ವ್ಯರ್ಥವಾಗುತ್ತಿದೆ. ಇದಕ್ಕೆ ಕೆರೆ, ಕಟ್ಟೆಗಳ ಒತ್ತುವರಿ, ನೀರು ಹರಿಯುವ ರಾಜ ಕಾಲುವೆಗಳನ್ನು ಮುಚ್ಚಿ ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದೇ ಕಾರಣವಾಗಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

    ಅಂತರ್ಜಲ ಬಳಕೆ ಎಷ್ಟು ಮುಖ್ಯವೋ ಅದೇ ರೀತಿ ಸಂರಕ್ಷಣೆ ಮತ್ತು ಅಬಿವೃದ್ಧಿಯು ಅಷ್ಟೇ ಮುಖ್ಯ. ಮಳೆ ಕಾಲ ಕಾಲಕ್ಕೆ ಸರಿಯಾಗಿ ಆಗದೆ ಏರುಪೇರು ಉಂಟಾಗದೇ ಅಸಮತೋಲನ ಹೆಚ್ಚುತ್ತಿದೆ. ಇದನ್ನು ಸರಿಪಡಿಸಬೇಕಾದರೆ ಕೃತಕ ಮರುಪೂರಣ ಕಾರ್ಯಕ್ರಮಗಳು ಮುಖ್ಯ, ಚೆಕ್ ಡ್ಯಾಮ್, ಸೋಸು ಕೆರೆ, ಇಂಗು ಬಾವಿಗಳ ರಚನೆ ಮಾಡುವುದು ಸರ್ಕಾರ ಮತ್ತು ಜನತೆಯ ಕರ್ತವ್ಯವೂ ಆಗಿದೆ.

  • ಕೊಳವೆ ಬಾವಿಗೆ ಬಿದ್ದು ಸಾವುಗೆದ್ದ ಸಾತ್ವಿಕ್ ಕ್ಷೇಮ-  ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೊಳವೆ ಬಾವಿಗೆ ಬಿದ್ದು ಸಾವುಗೆದ್ದ ಸಾತ್ವಿಕ್ ಕ್ಷೇಮ- ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್

    ವಿಜಯಪುರ: ಕೊಳವೆ ಬಾವಿಗೆ ಬಿದ್ದು ಸಾವು ಗೆದ್ದ 2 ವರ್ಷದ ಪುಟ್ಟ ಕಂದಮ್ಮ ಸಾತ್ವಿಕ್ (Sathwik) ಕ್ಷೇಮವಾಗಿದ್ದು, ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾನೆ.

    ಈ ಸಂಬಂಧ ಜಿಲ್ಲಾಧಿಕಾರಿ ಭೂಬಾಲನ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮಗು ಅರೋಗ್ಯವಾಗಿದ್ದಾನೆ. ಸಣ್ಣ-ಪುಟ್ಟ ಗಾಯ ಬಿಟ್ಟರೆ ಯಾವುದೇ ಗಾಯಗಳು ಇಲ್ಲ. ಘಟನೆ ಬಳಿಕ ಜಿಲ್ಲಾ ಆಸ್ಪತ್ರೆಯಲ್ಲಿನ ಚಿಕಿತ್ಸೆಗೆ ಮಗು ಸಂದ್ಪಿಸಿದೆ. ಮಗು ಚಟುವಟಿಕೆಯಿಂದ ಕೂಡಿದೆ. ಸದ್ಯಕ್ಕೆ ಯಾವುದೇ ತೊಂದರೆಯಿಲ್ಲ. ನಾಳೆ ಒಂದು ದಿನ ನೋಡಿಕೊಂಡು ಮಗುವನ್ನ ಡಿಸ್ಚಾರ್ಜ್ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

    ಸಾತ್ವಿಕ್‍ಗೆ ಮರು ನಾಮಕರಣ: ಮಗನ ಆರೋಗ್ಯದ ಕುರಿತು ತಂದೆ ಸತೀಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮಗ ಸಂಪೂರ್ಣ ಆರೋಗ್ಯದಿಂದ ಇದ್ದಾನೆ. ನಿನ್ನೆ ಎಂಆರ್‍ಐ ಸೇರಿದಂತೆ ಎಲ್ಲಾ ತಪಾಸಣೆ ನಡೆಸಿದ್ದಾರೆ. ಎಲ್ಲವೂ ಸಾಮಾನ್ಯವಾಗಿದೆ ಅಂತಾ ವೈದ್ಯರು ಹೇಳಿದ್ದಾರೆ. ನಮ್ಮ ಮಗನನ್ನ ಉಳಿಸಿಕೊಟ್ಟ ಸಂಪೂರ್ಣ ಜಿಲ್ಲಾಡಳಿತಕ್ಕೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಕೊಳವೆ ಬಾವಿ ದುರಂತ- ಸಾವು ಗೆದ್ದ ಸಾತ್ವಿಕ್‌

    ಲಚ್ಯಾಣ ಗ್ರಾಮದ ಆರಾಧ್ಯ ದೈವ ಸಿದ್ಧಲಿಂಗ ಮಹಾರಾಜರ ಕೃಪೆಯಿಂದಲೇ ನಮ್ಮ ಮಗ ಮರಳಿದ್ದಾನೆ. ಕಾರಣ ಸಿದ್ಧಲಿಂಗ ಮುತ್ಯಾನ ಹೆಸರನ್ನ ಸಾತ್ವಿಕ್ ಗೆ ಮರು ನಾಮಕರಣ ಮಾಡಲಿದ್ದೇವೆ. ಇದೇ ತಿಂಗಳ 28 ರಂದು ಸಿದ್ಧಲಿಂಗ ಮಹರಾಜರ ಜಾತ್ರಾ ಮಹೋತ್ಸವ ಇದೆ. ಆಗ ಸಾತ್ವಿಕ್ ಮರುನಾಮಕರಣ ಕಾರ್ಯ ಮಾಡಲಿದ್ದೇವೆ. ಸಮಸ್ತ ಕುಟುಂಬಸ್ಥರು, ಸಂಬಂಧಿಕರು, ಗ್ರಾಮಸ್ಥರು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

    ಸಾತ್ವಿಕ್ ತಪಾಸಣೆಗೆ ಬಂದ ಜಿಲ್ಲಾ ಸರ್ಜನ್ ಶಿವಾನಂದ ಮಾಸ್ತಿಹೊಳಿ ಪ್ರತಿಕ್ರಿಯಿಸಿ, ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಸಾತ್ವಿಕ್‍ಗೆ ಚಿಕಿತ್ಸೆ ನಡೆಯುತ್ತಿದ್ದು, ನಿನ್ನೆಯಿಂದಲೆ ತಪಾಸಣೆ ಕಾರ್ಯ ನಡೆದಿದೆ. ಸಾತ್ವಿಕ್ ನನ್ನ ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾನೆ. ಎರಡು ದಿನ ನಿಗಾದಲ್ಲಿ ಇಡಲಾಗಿದೆ. ಸದ್ಯ ವೈದ್ಯರ ತಂಡದಿಂದ ನಡೆಯುತ್ತಿರುವ ತಪಾಸಣೆ ಕಾರ್ಯ ನಡೆಸುತ್ತಿದೆ ಎಂದಿದ್ದಾರೆ.

    ಉಪ್ಪಿಟ್ಟು ಅಂದ್ರೆ ಇಷ್ಟ: ಸಾತ್ವಿಕ್ ಆರೋಗ್ಯವಾಗಿದ್ದಾನೆ, ಭಯಪಡುವ ಅವಶ್ಯಕತೆ ಇಲ್ಲ. ಆತನಿಗೆ ಉಪ್ಪಿಟ್ಟು ಅಂದ್ರೆ ಇಷ್ಟ. ಹೀಗಾಗಿ ಬೆಳಗ್ಗೆ ಉಪ್ಪಿಟ್ಟು, ರಾಗಿ ಗಂಜಿ ಸೇವಿಸಿದ್ದಾನೆ. ಸದ್ಯ ಯಾವುದೇ ತೊಂದರೆ ಇಲ್ಲ. ಏನೇ ಹೆಚ್ಚು ಕಮ್ಮಿ ಆಗುವುದಿದ್ದರೆ 48 ಗಂಟೆ ಒಳಗೆ ಆಗುತ್ತೆ. ಕಾರಣ 48 ಗಂಟೆ ನಿಗಾದಲ್ಲಿ ಇಟ್ಟಿದ್ದೇವೆ ಅಷ್ಟೆ. ಮಗುವಿನ ಆರೋಗ್ಯ ಸ್ಥಿತಿ ನೋಡಿ ಡಿಸ್ಚಾರ್ಜ್ ಮಾಡುತ್ತೇವೆ. ಇದೊಂದು ವಿಸ್ಮಯ ಅಂತಾನೆ ಹೇಳಬೇಕು. ಈ ರೀತಿ 16 ತಿಂಗಳ ಮಗು ಯಾವುದೆ ತೊಂದರೆ ಇಲ್ಲದೆ ಬದುಕುಳಿದಿದ್ದು ದೇವರ ಕೃಪೆ ಅಂತಾನೇ ಹೇಳಬೇಕು ಎಂದು ಅವರು ತಿಳಿಸಿದರು.

  • ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಚಿಕ್ಕೋಡಿ: ಹೀರೆಕುಡಿ (Hirekudi) ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ ಹತ್ಯೆಗೆ ಸಂಬಂಧಿಸಿದಂತೆ ಶೋಧಕಾರ್ಯ ಮುಗಿದಿದ್ದು, ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ (Borewell) ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ.

    ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದು, ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ (Chikkodi) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ- ಆರೋಪಿಗಳಿಂದ ತಪ್ಪೊಪ್ಪಿಗೆ

    ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿದ್ದು, ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಸ್ವಾಮೀಜಿಗೆ ಕರೆಂಟ್ ಶಾಕ್ (Current Shock) ನೀಡಿ ಹತ್ಯೆಗೈದ ಹಂತಕರು ಅವರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಬಟ್ಟೆಯಲ್ಲಿ ಸುತ್ತಿ ಗಂಟುಕಟ್ಟಿ ಕೊಳವೆ ಬಾವಿಯಲ್ಲಿ ಎಸೆದಿದ್ದಾರೆ. ನಿರಂತರ 10 ಗಂಟೆಗಳ ಕಾರ್ಯಾಚರಣೆಯ ಬಳಿಕ ಕೊಳವೆಬಾವಿಯಲ್ಲಿ ಸ್ವಾಮೀಜಿ ಮೃತದೇಹವಿರುವ ಗಂಟು ಪತ್ತೆಯಾಗಿದ್ದು, ಎಸ್‌ಡಿಆರ್‌ಎಫ್ ಸಿಬ್ಬಂದಿ, ಎಫ್‌ಎಸ್‌ಎಲ್ ತಂಡದ ಸಹಾಯದೊಂದಿಗೆ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿ ನೆನೆದು ಭಕ್ತರ ಕಣ್ಣೀರು, ಆಶ್ರಮದಲ್ಲಿ ನೀರವ ಮೌನ

    ಹಣಕಾಸಿನ (Money) ವಿಚಾರವಾಗಿ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ಆರೋಪಿಗಳು, ಅವರ ಮೃತದೇಹವನ್ನು ಸುಮಾರು 400 ಅಡಿ ಉದ್ದದ ಕೊಳವೆ ಬಾವಿಯಲ್ಲಿ ಎಸೆದಿರುವುದಾಗಿ ಮಾಹಿತಿಯನ್ನು ನೀಡಿದ್ದರು. ಈ ಹಿನ್ನೆಲೆ 400 ಅಡಿ ಉದ್ದದ ಕೊಳವೆಬಾವಿಯಲ್ಲಿ 40 ಅಡಿಗೆ ಕೇಸಿಂಗ್ ಪೈಪ್ ಅಳವಡಿಸಿದ್ದು, ಸುಮಾರು 20 ಅಡಿ ಆಳದಲ್ಲಿ ಪತ್ತೆಯಾದ ಸ್ವಾಮೀಜಿ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಂಜಿನಿಯರ್ ಕೈಯಿಂದ ಫೈಲ್ ಕಿತ್ತುಕೊಂಡು ಓಡಿ ಹೋದ ಕಂಟ್ರಾಕ್ಟರ್

    ಎಂಜಿನಿಯರ್ ಕೈಯಿಂದ ಫೈಲ್ ಕಿತ್ತುಕೊಂಡು ಓಡಿ ಹೋದ ಕಂಟ್ರಾಕ್ಟರ್

    ಹಾಸನ: ಎಂಜಿನಿಯರ್ ಕೈಯಿಂದ ಗುತ್ತಿಗೆದಾರರೊಬ್ಬರು ಫೈಲ್ ಕಿತ್ತುಕೊಂಡು ಓಡಿ ಹೋದ ಅಚ್ಚರಿಯ ಘಟನೆ ಆಲೂರು ಪಟ್ಟಣದಲ್ಲಿರುವ ಕಾವೇರಿ ನೀರಾವರಿ ನಿಗಮದ ಹೇಮಾವತಿ ಪುನರ್ ವಸತಿ ವಿಭಾಗದ ಕಚೇರಿಯಲ್ಲಿ ನಡೆದಿದೆ.

    ಪ್ರೀತಂ ಕೈಯಿಂದ ಫೈಲ್ ಕಿತ್ತುಕೊಂಡು ಓಡಿ ಹೋದ ಗುತ್ತಿಗೆದಾರ. ಎಸ್.ಸಿ.ಪಿ.ಟಿ.ಎಸ್.ಪಿ. ಯೋಜನೆಯಡಿ ಜಾರಿಯಾಗಿದ್ದ, ಕೊಳವೆಬಾವಿ ಕೊರೆಯುವ ಹಣ ಸಂದಾಯ ವಿಚಾರವಾಗಿ ಗೊಂದಲವಾಗಿದೆ.

    ಕೇಶವ್ ಶಾಮಣ್ಣ ಮತ್ತು ಗಂಗಾಧರ್ ಆಚಾರಿ ಎಂಬ ಇಬ್ಬರು ಇದರ ಮೂಲ ಗುತ್ತಿಗೆದಾರರಾಗಿದ್ದು, ಇದನ್ನು ಕೊರೆಯಲು ಹಾಗೂ ಎಲೆಕ್ಟ್ರಿಕ್ ಕೆಲಸದ ಮೇಲೆ ಈ ಗುತ್ತಿಗೆ ಪಡೆದಿದ್ದರು. ಈ ಗುತ್ತಿಗೆಯನ್ನು ಪ್ರೀತಂ ಎಂಬುವವರಿಗೆ ಉಪ ಗುತ್ತಿಗೆಯಾಗಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂಲ ಗುತ್ತಿದೆರಾರರು ಮತ್ತು ಉಪ ಗುತ್ತಿಗೆದಾರರ ನಡುವೆ ಕಿತ್ತಾಟ ನಡೆದಿದೆ. ಇದನ್ನೂ ಓದಿ: ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

    ಪ್ರೀತಂ ಎಲೆಕ್ಟ್ರಿಕ್ ಕೆಲಸ ಮಾಡಿದ್ದ ಹಣ ಸಂದಾಯ ಮಾಡಿಲ್ಲ. ಹಣ ಸಂದಾಯವಾಗದೇ ಇದ್ದರೆ ಬಿಲ್ ಮಾಡಲು ಬಿಡುವುದಿಲ್ಲ ಎಂದು ತಕರಾರು ತೆಗೆದಿದ್ದರು. ಈ ವೇಳೆ ಎಂಜಿನಿಯರ್ ನವೀನ್ ಬಿಲ್ ಪಾವತಿ ಮಾಡಿಸಲು ಮೇಲಾಧಿಕಾರಿ ಸಹಿಗೆ ಫೈಲ್ ತೆಗೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಉಪ ಗುತ್ತಿಗೆದಾರ ಪ್ರೀತಂ ಅವರ ಕೈಯಲ್ಲಿದ್ದ ಫೈಲ್ ಕಿತ್ತುಕೊಂಡು ಓಡಿ ಹೋಗಿದ್ದಾರೆ. ಇದನ್ನೂ ಓದಿ: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

    ಈ ಕುರಿತು ಪ್ರೀತಂ ವಿರುದ್ಧ ಪೊಲೀಸ್ ಠಾಣೆಗೆ ಇಂಜಿನಿಯರ್ ನವೀನ್ ದೂರು ನೀಡಿದ್ದು, ಅಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೊಳವೆ ಬಾವಿಗೆ ಬಿದ್ದ ಮಗು- 10 ಗಂಟೆಗಳ ಕಾರ್ಯಾಚರಣೆ ನಂತ್ರ ರಕ್ಷಣೆ

    ಕೊಳವೆ ಬಾವಿಗೆ ಬಿದ್ದ ಮಗು- 10 ಗಂಟೆಗಳ ಕಾರ್ಯಾಚರಣೆ ನಂತ್ರ ರಕ್ಷಣೆ

    ಭೋಪಾಲ್: 80 ಅಡಿ ಆಳದ ಕೊಳವೆ ಬಾವಿಗೆ ಬಿದ್ದ, ಒಂದು ವರ್ಷದ ಹೆಣ್ಣು ಮಗುವನ್ನು ಪೊಲೀಸರು ಮತ್ತು ರಾಜ್ಯ ವಿಪತ್ತು ತುರ್ತು ಮೀಸಲು ಪಡೆ (SDERF) 10 ಗಂಟೆ ಕಾರ್ಯಾಚರಣೆ ಮಾಡಿ ರಕ್ಷಿಸಿದ್ದಾರೆ.

    ಜಮೀನಿನಲ್ಲಿ ತಾಯಿ ಕೆಲಸ ಮಾಡುತ್ತಿದ್ದ ವೇಳೆ ದಿವ್ಯಾಂಶಿ ಆಟವಾಡುತ್ತಿದ್ದಳು. ಈ ವೇಳೆ ಇದ್ದಕ್ಕಿದ್ದಂತೆ ದಿವ್ಯಾಂಶಿ ಕಣ್ಮರೆಯಾಗಿದ್ದಳು. ಈ ವೇಳೆ ಹುಡುಕಾಡಿದಾಗ ಮಗು ತೆರೆದ ಕೊಳವೆ ಬಾವಿಗೆ ಬಿದ್ದಿರುವುದು ತಿಳಿದು ಬಂದಿದೆ. ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    80 ಅಡಿ ಆಳ ಇರುವ ಕೊಳವೆ ಬಾವಿಯಲ್ಲಿ, ಸುಮಾರು 15 ಅಡಿ ಆಳದಲ್ಲಿ ದಿವ್ಯಾಂಶಿ ಸಿಲುಕಿಕೊಂಡಿರುವುದು ಗೊತ್ತಾಗಿದೆ. ಮಗುವಿನ ಅಳುವ ಶಬ್ದ ಕೇಳಿಸಿದ ಪೊಲೀಸರು ಆಮ್ಲಜನಕದ ಒದಗಿಸಿದ್ದಾರೆ. ಬಳಿಕ ಗ್ವಾಲಿಯರ್‍ನಿಂದ ಬಂದ SDERF ತಂಡವು ಕಾರ್ಯಾಚರಣೆ ಕೈಗೊಂಡಿತು. ಕೊಳವೆ ಬಾವಿಗೆ ಸಿಸಿಟಿವಿ ಆಳವಡಿಸಿ ಮಗುವಿನ ಚಲನೆಯನ್ನು ಗಮನ ವಹಿಸಲಾಯಿತು. ನಂತರ ಜೆ.ಸಿ.ಬಿ ಯಂತ್ರಗಳನ್ನು ಬಳಸಿ ಕೊಳವೆ ಬಾವಿಗೆ ಸಮಾನಾಂತರವಾಗಿ ಗುಂಡಿ ತೋಡಿ ಬಾಲಕಿಯನ್ನು ರಕ್ಷಿಸಲಾಯಿತು. ಇದನ್ನೂ ಓದಿ: ಒಂಟಿಯಾಗಿದ್ದ ಅಮ್ಮನಿಗೆ ಮದುವೆ ಮಾಡಿಸಿದ ಮಗಳು

    ಛತ್ತರ್‍ಪುರ ಜಿಲ್ಲೆಯ ಗೌಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ 3.30ರ ಹೊತ್ತಿಗೆ ಕೊಳವೆ ಬಾವಿಗೆ ಬಿದ್ದ ದಿವ್ಯಾಂಶಿಯನ್ನು ಸುಮಾರು 10 ಗಂಟೆ ನಡೆದ ಸತತ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಮಗುವನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಛತ್ತರ್‍ಪುರ ಜಿಲ್ಲಾಧಿಕಾರಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ಸ್ಪರ್ಧಿ ಸೇರಿ 17 ಮಂದಿಗೆ ಕೊರೊನಾ- Miss World 2021 ಫೈನಲ್‌ ಮುಂದೂಡಿಕೆ

  • ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿ ಉಕ್ಕಿ ಹರಿದ ನೀರು

    ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿ ಉಕ್ಕಿ ಹರಿದ ನೀರು

    ಮಂಗಳೂರು: ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿ ಉಕ್ಕಿ ಹರಿದ ನೀರು ಕಂಡು ನಾಗದೇವರ ಪವಾಡ ಎಂದ ಜನ ಹೇಳಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗಾರಾಧನೆಯನ್ನು ಸಾಕಷ್ಟು ಭಯಭಕ್ತಿಯಿಂದ ಮಾಡಲಾಗುತ್ತದೆ. ಆಗೊಮ್ಮೆ ಈಗೊಮ್ಮೆ ನಾಗಶಕ್ತಿಯ ಕಾರಣಿಕವೂ ಇಲ್ಲಿ ಬೆಳಕಿಗೆ ಬರುತ್ತಿರುತ್ತದೆ. ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿಯೂ ನಾಗದೇವರು ಕಾರಣಿಕ ತೋರಿಸಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ.

    ನಾಗನ ಕಟ್ಟೆಯ ಬಳಿಯೇ ಇದ್ದ ಕೊಳವೆ ಬಾವಿಯೊಂದರಲ್ಲಿ ನೀರು ಬತ್ತಿ ಹೋಗಿತ್ತು. ಹೀಗಾಗಿ ನಾಗದೇವರಲ್ಲಿ ಪ್ರಾರ್ಥನೆ ಮಾಡಿ ಅಲ್ಲೇ ಪಕ್ಕದಲ್ಲಿ ಇನ್ನೊಂದು ಕೊಳವೆ ಬಾವಿ ಕೊರೆಯಲಾಯಿತು. ಆದರೆ ಆಶ್ಚರ್ಯ ಎಂಬಂತೆ 200 ಫೀಟ್ ಆಳದಲ್ಲಿಯೇ ಸುಮಾರು ಐದೂವರೆ ಇಂಚು ನೀರು ಲಭ್ಯವಾಗಿದೆ. ಇದಲ್ಲದೆ ಮೊದಲು ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿಯೂ ಅದೇ ಸಂದರ್ಭ ನೀರು ಉಕ್ಕಿ ಹರಿದಿದೆ.ಇದನ್ನು ಓದಿ: ದೈವ ಸ್ಥಳಗಳನ್ನು ಅಪವಿತ್ರಗೊಳಿಸಿದ್ದ ಓರ್ವ ರಕ್ತಕಾರಿ ಸಾವು – ಇನ್ನಿಬ್ಬರು ದೈವಗಳ ಮುಂದೆ ಶರಣು

    ಸದ್ಯ ನೀರು ಉಕ್ಕಿ ಹರಿಯುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನಾಗದೇವರ ಕಾರಣಿಕದ ಬಗ್ಗೆ ಸ್ಥಳೀಯರು ಕೊಂಡಾಡುತ್ತಿದ್ದಾರೆ.

  • ಕೊಳವೆ ಬಾವಿಗೆ ಬಿದ್ದು ರೈತ ಸಾವು

    ಕೊಳವೆ ಬಾವಿಗೆ ಬಿದ್ದು ರೈತ ಸಾವು

    ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ.

    ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು.

    ಸುಮಾರು 18ರಿಂದ 20 ಅಡಿ ಆಳದಲ್ಲಿ ಸಿಲುಕಿದ್ದ ಲಕ್ಕಪ್ಪ ಅವರ ದೇಹವನ್ನ ಕ್ಯಾಮೆರಾದಿಂದ ಗಮನಿಸಿ ಜೆಸಿಬಿ ಮೂಲಕ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಕೊಳವೆ ಬಾವಿಯಿಂದ ಶವವನ್ನ ಹೊರ ತೆಗೆದು ರಾಯಬಾಗ ತಾಲೂಕಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.

    ಕಳೆದ ವಾರ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರಿಸಿದ್ದ ಲಕ್ಕಪ್ಪ, ಕಡಿಮೆ ನೀರು ಬಂದಿದ್ದರಿಂದ ಮನನೊಂದ ಆತ್ಮಹತ್ಯೆಗೆ ಯತ್ನ ಮಾಡಿಕೊಂಡಿರಬಹದು ಎಂಬ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಯ ಮಾಹಿತಿ ತಿಳಿದು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬೆಳಗಾವಿ ಡಿಸಿ ಬೊಮ್ಮನಹಳ್ಳಿ, ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ಹೇಳಿದ್ದೇನೆ. ಇದು ಆತ್ಮಹತ್ಯೆ ಅಥವಾ ಕೊಲೆಯೇ ಎನ್ನುವ ತಿಳಿಯುತ್ತದೆ ಎಂದು ಹೇಳಿದರು.

  • ಕೊಳವೆ ಬಾವಿಯಿಂದ ಚಿಮ್ಮುತ್ತಿದೆ ತೈಲ ಮಿಶ್ರಿತ ಕೊಳಕು ನೀರು

    ಕೊಳವೆ ಬಾವಿಯಿಂದ ಚಿಮ್ಮುತ್ತಿದೆ ತೈಲ ಮಿಶ್ರಿತ ಕೊಳಕು ನೀರು

    ಕೋಲಾರ: ಹೊಸದಾಗಿ ಕೊರೆಯುತ್ತಿರುವ ಕೊಳವೆ ಬಾವಿಯಿಂದ ತೈಲ ಮಿಶ್ರಿತ ಕೊಳಕು ನೀರು ಹೊರ ಚಿಮ್ಮುತ್ತಿರುವ ವಿಚಿತ್ರ ಘಟನೆ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ.

    ಮಾಲೂರಿನ ಗ್ರೀನ್ ಸಿಟಿ ಶಾಲೆ ಆವರಣದಲ್ಲಿ ಕೊಳವೆ ಬಾವಿಯನ್ನು ಕೊರೆಸಲಾಗುತ್ತಿದ್ದು, ಕೊಳವೆ ಬಾವಿ ಕೊರೆಯುವ ಯಂತ್ರ 1,300 ಅಡಿ ಆಳ ತಲುಪುತ್ತಿದ್ದಂತೆ ಒಳಗಿನಿಂದ ತೈಲ ಮಿಶ್ರಿತ ಕೊಳಕು ನೀರು ಹೊರಬರಲು ಆರಂಭವಾಗಿದೆ. ಸಾಮಾನ್ಯವಾಗಿ ಕೊಳವೆ ಬಾವಿ ಕೊರೆದರೆ ಮಣ್ಣು ಮಿಶ್ರಿತ ನೀರು ಹೊರಬರುತ್ತದೆ. ಆದರೆ ಗ್ರೀನ್ ಸಿಟಿ ಶಾಲಾ ಆವರಣದಲ್ಲಿ ಕೊರೆದ ಕೊಳವೆ ಬಾವಿಯಿಂದ ತೈಲ ಮಿಶ್ರಿತ ಕೊಳಕು ನೀರು ಹೊರಚಿಮ್ಮುತ್ತಿದೆ. ಇದನ್ನು ಕಂಡು ಶಾಲಾ ಆಡಳಿತ ಮಂಡಳಿ ಹಾಗೂ ಸ್ಥಳೀಯರು ದಂಗಾಗಿದ್ದಾರೆ.

    ಶಾಲೆ ಮಕ್ಕಳಿಗೆ ಕುಡಿಯುವ ನೀರಿಗಾಗಿ ಆಡಳಿತ ಮಂಡಳಿ ಕೊಳವೆ ಬಾವಿ ಕೊರೆಸುತ್ತಿತ್ತು. ಆದರೆ ತೈಲ ಮಿಶ್ರಿತ ನೀರು ಹೊರಬಂದ ಹಿನ್ನೆಲೆ ಕೊಳವೆ ಬಾವಿ ಕೊರೆಯುವುದನ್ನು ನಿಲ್ಲಿಸಲಾಗಿದೆ. ಸದ್ಯ ಸ್ಥಳಕ್ಕೆ ಹಿರಿಯ ಭೂ ವಿಜ್ಞಾನಿಗಳು ಹಾಗೂ ಅಂತರ್ಜಲ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ತಮಿಳುನಾಡಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕ ಪರದಾಟ

    ತಮಿಳುನಾಡಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕ ಪರದಾಟ

    ಚೆನ್ನೈ: 2 ವರ್ಷದ ಬಾಲಕನೊಬ್ಬ ಕೊಳವೆಬಾವಿಗೆ ಬಿದ್ದಿರುವ ಘಟನೆ ತಮಿಳುನಾಡಿನ ತಿರಚ್ಚಿ ಜಿಲ್ಲೆಯ ನಡುಕಟ್ಟುಪಟ್ಟಿಯಲ್ಲಿ ನಡೆದಿದೆ.

    ಬಾಲಕನನ್ನು ಸುಜಿತ್ ವಿಲ್ಸನ್ ಎಂದು ಗುರುತಿಸಲಾಗಿದೆ. ಈತ 25 ಅಡಿ ಆಳಕ್ಕೆ ಬಿದ್ದಿದ್ದಾನೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಾಗ 7 ವರ್ಷದ ಹಿಂದೆ ತೆರೆದಿದ್ದ ಬೋರ್‍ವೆಲ್‍ಗೆ ಸುಜಿತ್ ವಿಲ್ಸನ್ ಬಿದ್ದಿದ್ದಾನೆ.

    ಬಾಲಕ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದೆ. ವೈದ್ಯರ ತಂಡ ಕೂಡ ಘಟನಾ ಸ್ಥಳಕ್ಕೆ ಬಂದಿದ್ದು, ಬಾಲಕನಿಗೆ ಆಕ್ಸಿಜನ್ ನೆರವು ನೀಡಲಾಗುತ್ತಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ.

    ಆರೋಗ್ಯ ಸಚಿವ ವಿಜಯಬಾಕರ್, ಪ್ರವಾಸೋದ್ಯಮ ಸಚಿವ ನಟರಾಜನ್ ಮುಂತಾದ ಗಣ್ಯರು ಸ್ಥಳದಲ್ಲಿದ್ದಾರೆ.