Tag: ಕೊಳ್ಳೆಗಾಲ

  • ಶಿವನಸಮುದ್ರಕ್ಕೆ ಶಿವಣ್ಣ ದಂಪತಿ ಭೇಟಿ – ಕಾವೇರಿ ನದಿಗೆ ಬಾಗಿನ ಅರ್ಪಣೆ

    ಶಿವನಸಮುದ್ರಕ್ಕೆ ಶಿವಣ್ಣ ದಂಪತಿ ಭೇಟಿ – ಕಾವೇರಿ ನದಿಗೆ ಬಾಗಿನ ಅರ್ಪಣೆ

    – ಆದಿಶಕ್ತಿ ಮಾರಮ್ಮ ದೇವಾಲಯಕ್ಕೆ ಸೀರೆ ಕಾಣಿಕೆ

    ಚಾಮರಾಜನಗರ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆ ಡಿಸೆಂಬರ್ 18 ರಂದು ವಿದೇಶಕ್ಕೆ ತೆರಳುತ್ತಿರುವ ನಟ ಡಾ.ಶಿವರಾಜ್ ಕುಮಾರ್ (Dr Shiva Rajkumar) ತಮ್ಮ ಪತ್ನಿ ಗೀತಾ ಅವರೊಂದಿಗೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ (Kollegala) ತಾಲೂಕಿನ ಶಿವನಸಮುದ್ರಕ್ಕೆ (Shivanasamudra) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

    ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಅವರು ಗಣಪತಿ ದೇವಸ್ಥಾನ, ಮಧ್ಯರಂಗ ಹಾಗೂ ಮೀನಾಕ್ಷಿ ಸಮೇತ ಸೋಮೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಚಕ್ರ ದರ್ಶನ ಮಾಡಿ ಆದಿಶಕ್ತಿ ಮಾರಮ್ಮ ದೇವಾಲಯಕ್ಕೆ ಸೀರೆ ಕಾಣಿಕೆ ಅರ್ಪಿಸಿದರು. ಇದನ್ನೂ ಓದಿ: ಸಿಂಗ್‌ ಬದಲು ಪ್ರಣಬ್‌ರನ್ನು ಪ್ರಧಾನಿ ಮಾಡುತ್ತಿದ್ದರೆ ಯುಪಿಎ-3 ಅಧಿಕಾರಕ್ಕೆ ಬರುತ್ತಿತ್ತು: ಮಣಿಶಂಕರ್‌ ಅಯ್ಯರ್‌

    ಈ ಮೊದಲು ನಟ ಶಿವರಾಜ್‌ಕುಮಾರ್ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಅಲ್ಲದೇ ಶಿವಣ್ಣ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದರು. ಶಿವಣ್ಣ ಕುಟುಂಬದ ಜೊತೆ ಭೈರತಿ ರಣಗಲ್ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಸಹ ತಿಮ್ಮಪ್ಪನ ದರ್ಶನ ಪಡೆದಿದ್ದರು. ಇದನ್ನೂ ಓದಿ: ಶುಕ್ರ ಗ್ರಹ ಮಾನವ ವಾಸಕ್ಕೆ ಯೋಗ್ಯವೇ? ವಿಜ್ಞಾನಿಗಳು ಹೇಳೋದೇನು?

  • ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ: 12 ಜನರ ಬಂಧನ

    ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ: 12 ಜನರ ಬಂಧನ

    ಚಾಮರಾಜನಗರ: ಅಂತರ್ಜಾತಿ ವಿವಾಹವಾದ (Inter Caste Marriage) ಜೋಡಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ (Social exclusion) ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ (Kollegala) ಕುಣಗಳ್ಳಿಯ (Kunagalli) 12 ಮಂದಿಯನ್ನು ಬಂಧಿಸಲಾಗಿದೆ.

    ಗೋವಿಂದರಾಜು ಎಂಬ ಯುವಕ ದಲಿತ ಯುವತಿಯನ್ನು ಮದುವೆಯಾಗಿದ್ದ. ಇದನ್ನು ವಿರೋಧಿಸಿ ಉಪ್ಪಾರ (Uppara) ಸಮುದಾಯದ ಮುಖಂಡರು ಗೋವಿಂದರಾಜು ಕುಟುಂಬಕ್ಕೆ 6 ಲಕ್ಷ ರೂ. ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಇದನ್ನೂ ಓದಿ: ಬಿಸಿ ಟೀ ತಂದುಕೊಡದ್ದಕ್ಕೆ ಗದರಿದ ಅತ್ತೆ- ರಾಡ್‍ನಿಂದ ಹೊಡೆದು ಕೊಲೆಗೈದ ಸೊಸೆ

    KILLING CRIME

    ಘಟನೆಗೆ ಸಂಬಂಧಿಸಿದಂತೆ ಅಗರ-ಮಾಂಬಳ್ಳಿ (Agara-Mamballi) ಪೊಲೀಸ್ ಠಾಣೆಯಲ್ಲಿ 15 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 1860ರ ಅಡಿ ಪ್ರಕರಣ ದಾಖಲಾಗಿತ್ತು. ಮಹಿಳೆ ಸೇರಿದಂತೆ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ.

    ನೊಂದ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ 1 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದನ್ನೂ ಓದಿ: ಸುಳ್ಳು ವಯಸ್ಸಿನ ದಾಖಲೆ ಆರೋಪ ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು

  • 19 ವರ್ಷದ ಬಳಿಕ ಬಂತು ಬಲಿ ಹಬ್ಬ- ಜೀವ ಹೋದ ವ್ಯಕ್ತಿಗೆ ಬರುತ್ತೆ ಮರುಜೀವ

    19 ವರ್ಷದ ಬಳಿಕ ಬಂತು ಬಲಿ ಹಬ್ಬ- ಜೀವ ಹೋದ ವ್ಯಕ್ತಿಗೆ ಬರುತ್ತೆ ಮರುಜೀವ

    ಚಾಮರಾಜನಗರ: ಅಲ್ಲಿ ಆ ವ್ಯಕ್ತಿಯ ಜೀವ ಹೋಗಿರುತ್ತದೆ, ಈ ಹಿನ್ನೆಲೆಯಲ್ಲಿ ಆತನ ಶವವನ್ನು ಊರ ತುಂಬಾ ಎಸೆದಾಡಿಕೊಂಡು ಮೆರವಣಿಗೆ ಮಾಡುತ್ತಾರೆ. ಹೀಗೆ ನಿರ್ಜೀವವಾಗಿದ್ದ ವ್ಯಕ್ತಿಗೆ 9 ತಾಸಿನ ನಂತರ ಮರುಜೀವ ಬರುತ್ತದೆ.

    ಹೌದು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಸೀಗಮಾರಮ್ಮ ದೇವಿಯ ಜಾತ್ರೆಯಲ್ಲಿ ತಲತಲಾಂತರದಿಂದ ಆಚರಿಸಿಕೊಂಡು ಬಂದ ಆಚರಣೆಯಾಗಿದೆ. 19 ವರ್ಷಗಳ ಬಳಿಕ ಸೀಗಮಾರಮ್ಮ ಬಲಿ ಹಬ್ಬ ನಡೆಯುತ್ತಿದೆ. ಈ ಹಬ್ಬವನ್ನು ಗ್ರಾಮದ ಎಲ್ಲಾ ಸಮುದಾಯಗಳು ಒಟ್ಟಿಗೆ ಸೇರಿ ಆಚರಣೆ ಮಾಡುತ್ತಾರೆ. 24 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಪ್ರತಿಯೊಂದು ಸಮುದಾಯಕ್ಕೂ ಒಂದೊಂದು ಜವಾಬ್ದಾರಿ ವಹಿಸಲಾಗುತ್ತದೆ.

    ಬಲಿ ಕೊಡುವ ಕರ್ತವ್ಯವನ್ನು ನಾಯಕ ಸಮುದಾಯಕ್ಕೆ, ಹೆಬ್ರೆ ಬಾರಿಸುವುದು ಪರಿಶಿಷ್ಟ ಜಾತಿಗೆ, ಕನಕಂಡ್ರಿ ಹೊರುವುದು ಶಿವಾರ್ಚಕರಿಗೆ ಹೀಗೆ ಎಲ್ಲಾ ಸಮುದಾಯಕ್ಕೂ ಜವಾಬ್ದಾರಿ ನೀಡಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಬಲಿ ಬೀಳುವ ವ್ಯಕ್ತಿಗೆ ಎರಡು ದಿನ ಮುಂಚೆಯೇ ವೀಳ್ಯ ನೀಡಲಾಗುತ್ತದೆ. ಅವರು ಊರಿನ ಬಲಿ ಬೀಳುವ ಮನೆಯಲ್ಲಿ ವಾಸಿಸುತ್ತಾರೆ.

    ನರ ಬಲಿ: ಬಲಿ ನೀಡುವ ದಿನ ಬಲಿ ಬೀಳುವ ವ್ಯಕ್ತಿಯನ್ನು ಗ್ರಾಮಕ್ಕೆ ಕರೆದೊಯ್ಯಲಾಗುತ್ತದೆ. ಈ ವೇಳೆ ಸೀಗಮಾರಮ್ಮ ದೇವತೆ ಮೈಮೇಲೆ ಬಂದ ಅರ್ಚಕರು ಬಲಿ ಬೀಳುವ ವ್ಯಕ್ತಿಗೆ ಅಕ್ಕಿ ಕಾಳು ಎಸೆಯುತ್ತಾರೆ. ಆ ವೇಳೆ ಅರ್ಧ ಜೀವ ಹೋಗುತ್ತದೆ.

    ಅರೆ ಜೀವವಾದ ವ್ಯಕ್ತಿಯನ್ನು ಮತ್ತೆ ಬಲಿ ಮನೆಗೆ ಕರೆತಂದು ಬಲಿ ಮನೆಯಲ್ಲಿ ಮಲಗಿಸಲಾಗುತ್ತದೆ. ಈ ವೇಳೆ ಸೀಗೆಮಾರಮ್ಮ ದೇವತೆ ಮೈಮೇಲೆ ಬರುವ ಅರ್ಚಕ ಆವೇಷದಿಂದ ಬಲಿ ವ್ಯಕ್ತಿಯ ಮೇಲೆ ಕಾಲಿಡುತ್ತಾರೆ. ಆ ಸಂದರ್ಭದಲ್ಲಿ ಆ ಬಲಿ ವ್ಯಕ್ತಿಯ ಜೀವ ಹೋಗುತ್ತದೆ ಎನ್ನುವ ನಂಬಿಕೆಯಿದೆ. ಹೀಗೆ ರಾತ್ರಿ ಆ ವ್ಯಕ್ತಿಯನ್ನು ಊರತುಂಬೆಲ್ಲಾ ಮೆರವಣಿಗೆ ಮಾಡುತ್ತಾರೆ. ಮೆರವಣಿಗೆ ವೇಳೆ ಶವವನ್ನು ಎಸೆಯಲಾಗುತ್ತದೆ. ಸತತ 9 ತಾಸು ಆತನ ಉಸಿರಾಟ ನಿಂತು ಹೋಗಿರುತ್ತದೆ. ಆದರೆ ಹೀಗೆ ಬಲಿ ಬಿದ್ದ ವ್ಯಕ್ತಿಗೆ ಬೆಳಗ್ಗೆ ಮತ್ತೆ ಮರುಜೀವ ಬರುತ್ತದೆ. ಪ್ರಾಣ ಹೋಗಿ ನಿಷ್ಕ್ರೀಯವಾದ ವ್ಯಕ್ತಿಯನ್ನು ಬಲಿ ಪೀಠಕ್ಕೆ ಕೊಂಡೊಯ್ಯುವ ಗ್ರಾಮಸ್ಥರು. ಬಲಿ ಪೀಠದ ಬಳಿ ಸತ್ತ ವ್ಯಕ್ತಿಯ ದರ್ಶನಕ್ಕೆ ಅವಕಾಶ ಕೊಡುತ್ತಾರೆ. ಇದನ್ನೂ ಓದಿ: ಲಕ್ಷ್ಮಣ ಸವದಿಯ ಮುಂದಿನ ರಾಜಕೀಯ ಹಾದಿ ಏನು?

    ಮರುಜೀವ ಬಂತು: ಬೆಳಗ್ಗೆ 9 ಗಂಟೆ ವೇಳೆಗೆ ಒಳಗೆರೆ ಹುಚ್ಚಮ್ಮ ದೇವತೆ ಮೈಮೇಲೆ ಬಂದ ಅರ್ಚಕರಿಂದ ನಿರ್ಜೀವ ವ್ಯಕ್ತಿ ಮೇಲೆ ತೀರ್ಥ ಪ್ರೋಕ್ಷಣೆ ಮಾಡಲಾಗುತ್ತದೆ. ಸತ್ತ ವ್ಯಕ್ತಿಗೆ ತೀರ್ಥ ಪ್ರೋಕ್ಷಣೆಯಿಂದ ಮರುಜೀವ ಬರುವುದೇ ವಿಶೇಷ. ಸತ್ತಿದ್ದ ವ್ಯಕ್ತಿಗೆ 11ನೇ ದಿನ ಸಾಂಕೇತಿಕವಾಗಿ ತಿಥಿ ಕಾರ್ಯ ನಡೆಯುತ್ತದೆ. ಹೀಗೆ ಬಲಿ ಬೀಳುವ ವ್ಯಕ್ತಿ ಇನ್ನು ಮುಂದೆ ತನ್ನ ಜೀವಮಾನದಲ್ಲಿ ಹೊರಗೆ ಊಟ ತಿಂಡಿ ಮಾಡುವಂತಿಲ್ಲ. ಇದನ್ನೂ ಓದಿ: ಮೈಸೂರು ಮೃಗಾಲಯದಲ್ಲಿ ಸಂಭ್ರಮ- ಮೂರು ಮರಿಗಳಿಗೆ ಜನ್ಮ ನೀಡಿದ ತಾರಾ!

    ಈ ಹಬ್ಬದ ವೇಳೆ ಗ್ರಾಮದಲ್ಲಿ ಮಾಂಸಹಾರ ಮಾಡಲ್ಲ, ಮದ್ಯಪಾನ ಮಾಡಲ್ಲ, ಮನೆಗಳಲ್ಲಿ ಒಗ್ಗರಣೆ ಹಾಕಲ್ಲ. ಈ ಅವಧಿಯಲ್ಲಿ ಮದುವೆ ಸೇರಿದಂತೆ ಶುಭಕಾರ್ಯಗಳು ನಿಷಿದ್ಧವಾಗಿದೆ. ಈ ಅವಧಿಯಲ್ಲಿ ಯಾರಾದರು ಸತ್ತರೆ ಒಂದೇ ಗಂಟೆ ಅವಧಿಯಲ್ಲಿ ಗ್ರಾಮದಿಂದ ಹೊರಕ್ಕೆ ಶವ ಸಾಗಾಣೆ ಮಾಡುತ್ತಾರೆ.

    ಒಟ್ಟಿನಲ್ಲಿ ಆಧುನಿಕ ಯುಗದಲ್ಲೂ ಕೂಡ ಇಂತಹ ಆಚರಣೆ ನಡೆಯುತ್ತಿರುವುದು ವಿಶೇಷವಾಗಿದೆ. ಬಲಿ ಬೀಳುವ ವ್ಯಕ್ತಿಗೆ ಪ್ರಾಣ ಪಕ್ಷಿ ಹಾರಿ ಹೋಗಿರುತ್ತದೆ ಎಂಬುದು ಗ್ರಾಮಸ್ಥರ ನಂಬಿಕೆ. ಈ ನಂಬಿಕೆಯ ಆಧಾರದ ಮೇಲೆ ಇಲ್ಲಿ ಸೀಗ ಮಾರಮ್ಮ ಬಲಿ ಜಾತ್ರೆ ನಡೆದುಕೊಂಡು ಹೋಗುತ್ತಿದೆ.

  • ವಿಚಿತ್ರ ಜ್ವರ, ಮೊದಲ ಬಲಿ- ಗ್ರಾಮದಲ್ಲಿ ಭಯದ ವಾತಾವರಣ

    ವಿಚಿತ್ರ ಜ್ವರ, ಮೊದಲ ಬಲಿ- ಗ್ರಾಮದಲ್ಲಿ ಭಯದ ವಾತಾವರಣ

    ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದ ಜನರು ವಿಚಿತ್ರ ಜ್ವರದಿಂದ ಬಳಲುತ್ತಿದ್ದು, ಡೆಂಗ್ಯೂ ಶಂಕೆ ವ್ಯಕ್ತವಾಗಿದೆ. ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಾಗರ್ ಎಂಬ ಯುವಕ ಸಾವನ್ನಪ್ಪಿದ್ದಾನೆ.

    ಗ್ರಾಮದ ಜನತೆ ವಿಚಿತ್ರ ಜ್ವರದಿಂದ ಬಳಲುತ್ತಿದ್ದಾರೆ. ಸುಮಾರು 150 ರಿಂದ 200 ಜನ ವಿಚಿತ್ರ ಜ್ವರಕ್ಕೆ ಒಳಗಾಗಿದ್ದು, ಸೂಕ್ತ ಚಿಕಿತ್ಸೆ ದೊರಕದೆ ನರಳುತ್ತಿದ್ದಾರೆ. ಇಡೀ ಗ್ರಾಮವೇ ಜ್ವರದಿಂದ ಬಳಲುತ್ತಿದ್ದರೂ ಸಹ ಆರೋಗ್ಯಾಧಿಕಾರಿಗಳಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ರೋಗಿಗಳ ಕಷ್ಟಕ್ಕೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

    ಕೂಡಲೇ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡದಿದ್ರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ತೀವ್ರ ಜ್ವರದಿಂದ ಬಳಲುತ್ತಿರುವ ರೋಗಿಗಳನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ರೋಗಿಗಳು ಊರಿನಲ್ಲೆ ಇದ್ದು ಸೂಕ್ತ ಚಿಕಿತ್ಸೆಗೆ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.

    ವಿಚಿತ್ರ ಜ್ವರಕ್ಕೆ ಮೊದಲ ಬಲಿಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಾಗರ್ ಎಂಬ ಯುವಕ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗೆ ಸಾವನ್ನಪ್ಪಿದ್ದಾನೆ. ಗ್ರಾಮದಲ್ಲಿ ಇದೀಗ ಭಯದ ವಾತಾವರಣ ನಿರ್ಮಾಣವಾಗಿದ್ದು, ಆರೋಗ್ಯ ಇಲಾಖೆ ಇನ್ನಾದ್ರೂ ಎಚ್ಚೆತ್ತು ಸೂಕ್ತ ಚಿಕಿತ್ಸೆಗೆ ಮುಂದಾಗಬೇಕಿದೆ.

  • ಆರ್‌ಟಿಐ ಕಾರ್ಯಕರ್ತರಿಗೆ ತಪ್ಪು ಮಾಹಿತಿ – ನಗರಸಭೆ ಆಯುಕ್ತರಿಗೆ ಬಿತ್ತು ದಂಡ

    ಆರ್‌ಟಿಐ ಕಾರ್ಯಕರ್ತರಿಗೆ ತಪ್ಪು ಮಾಹಿತಿ – ನಗರಸಭೆ ಆಯುಕ್ತರಿಗೆ ಬಿತ್ತು ದಂಡ

    ಚಾಮರಾಜನಗರ: ತಪ್ಪು ಹಾಗೂ ವಿಳಂಬ ನೀತಿ ಅನುಸರಿಸಿದ್ದಕ್ಕಾಗಿ ಕೊಳ್ಳೇಗಾಲ ನಗರಸಭೆ ಆಯುಕ್ತರಿಗೆ ಮಾಹಿತಿ ಹಕ್ಕು ಆಯೋಗ 10 ಸಾವಿರ ರೂ. ದಂಡ ವಿಧಿಸಿದೆ.

    ಕೊಳ್ಳೇಗಾಲ ನಗರಸಭೆ ಆಯುಕ್ತ ನಾಗಶೆಟ್ಟಿಗೆ ದಂಡ ವಿಧಿಸಲಾಗಿದೆ. ಕೊಳ್ಳೇಗಾಲದಲ್ಲಿನ ಕಲ್ಯಾಣಮಂಟಪಗಳ ಸಂಖ್ಯೆ, ಮಾಂಸದಂಗಡಿಗಳ ಸಂಖ್ಯೆ ಕುರಿತು ಆರ್‌ಟಿಐ ಕಾರ್ಯಕರ್ತ ದಶರಥ ಅವರು ಕೇಳಿದ್ದ ಪ್ರಶ್ನೆಗೆ ಆಯುಕ್ತರು ತಪ್ಪು ಮಾಹಿತಿ ನೀಡಿದ್ದಲ್ಲದೆ ವಿಳಂಬ ನೀತಿಯನ್ನು ಅನುಸರಿಸಿದ್ದರು. ಈ ಬಗ್ಗೆ ದಶರಥ್ ಅವರು ಸಾರ್ವಜನಿಕ ಮಾಹಿತಿ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು. ಈ ಆಧಾರದ ಮೇರೆಗೆ ಸಾರ್ವಜನಿಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ಮಂಜುನಾಥ್ ಅವರು ನಾಗಶೆಟ್ಟಿ ಅವರಿಗೆ 10 ಸಾವಿರ ರೂ. ದಂಡ ಕಟ್ಟುವಂತೆ ಆದೇಶಿಸಿದ್ದಾರೆ.

    ಈ ಸಂಬಂಧ ಎರಡು ಪ್ರಕರಣಗಳನ್ನೂ ಕೈಗೆತ್ತಿಕೊಂಡ ಆಯುಕ್ತ ಮಂಜುನಾಥ್ ಅವರು ವಾದ-ವಿವಾದ ಆಲಿಸಿ ಎರಡೂ ಪ್ರಕರಣಗಳಿಗೆ ತಲಾ 5 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಒಟ್ಟು 10 ಸಾವಿರ ರೂ. ದಂಡವನ್ನು ನಾಗಶೆಟ್ಟಿ ಅವರ ಮಾಸಿಕ ಸಂಬಳದಲ್ಲಿ 2 ಕಂತುಗಳಾಗಿ ಪಡೆಯಲು ಸೂಚಿಸಲಾಗಿದೆ.

  • ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ- ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಜಿ.ಪಂ ಸದಸ್ಯ

    ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ- ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಜಿ.ಪಂ ಸದಸ್ಯ

    ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯ ಮತ್ತು ಬೆಂಬಲಿಗರು ಕೊಳ್ಳೆಗಾಲದ ಕೃಷಿ ಇಲಾಖೆಯ ಕಚೇರಿಗೆ ನುಗ್ಗಿ ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಜಿಲ್ಲೆಯ

    ಕುಂತೂರು ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಎಲ್.ನಾಗರಾಜು ಮತ್ತು ಬೆಂಬಲಿಗರು ಕೊಳ್ಳೆಗಾಲದ ಸಹಾಯಕ ಕೃಷಿ ಇಲಾಖೆಯ ಕಚೇರಿಗೆ ನುಗ್ಗಿ ಸಹಾಯಕ ನಿರ್ದೇಶಕ ಬಿ.ಎಸ್.ಮಹದೇವಯ್ಯ ಹಾಗೂ ಮಹಿಳಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಉಮಾಶಂಕರ್ ಎಂಬ ಡಿ.ದರ್ಜೆಯ ನೌಕರನ ಮೇಲೆ ಹಲ್ಲೆ ನಡೆಸಿದ್ದಾರೆ.

    ಸಹಾಯಕ ನಿರ್ದೇಶಕ ಎಲ್.ಮಹದೇವಯ್ಯ

    ಮಾಹಿತಿ ಹಕ್ಕಿನಡಿ ಸರಿಯಾದ ಮಾಹಿತಿ ನೀಡಿಲ್ಲವೆಂದು ಆರೋಪಿಸಿ ಡಿ ದರ್ಜೆ ನೌಕರನ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಉಪನಿರ್ದೇಶಕರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ತಮ್ಮ ಬಳಿಯಿರುವ ದಾಖಲೆಗಳನ್ನು ನೀಡಿದ್ದೇವೆ ಎಂದು ತಿಳಿಸಿದ್ರೂ ನಮ್ಮ ಹಲ್ಲೆ ನಡೆಸಿದ್ದಾರೆ ಎಂದು ಸಹಾಯಕ ನಿರ್ದೇಶಕ ಎಲ್.ಮಹದೇವಯ್ಯ ಹೇಳಿದ್ದಾರೆ.

    ಎಲ್.ನಾಗರಾಜು ಸೇರಿದಂತೆ ಐವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಹಾಗೂ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಸಹಾಯಕ ನಿರ್ದೇಶಕ ಎಲ್.ಮಹದೇವಯ್ಯ ದೂರು ದಾಖಲಿಸಿದ್ದಾರೆ. ಇನ್ನೂ ಹಲ್ಲೆಗೊಳಗಾದ ಡಿ ದರ್ಜೆ ನೌಕರ ಉಮಾಶಂಕರ್ ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     

    ನೌಕರ ಉಮಾಶಂಕರ್