Tag: ಕೋಚಿಂಗ್ ಸೆಂಟರ್

  • ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

    ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

    ನವದೆಹಲಿ: ಇಲ್ಲಿನ ಹಳೇ ರಾಜೇಂದ್ರ ನಗರದಲ್ಲಿರುವ ಕೋಚಿಂಗ್‌ ಸೆಂಟರ್‌ಗೆ (Delhi Coaching Centre) ಮಳೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್‌ ಸೆಂಟರ್‌ ಮಾಲೀಕ ಹಾಗೂ ಸಂಯೋಜಕನನ್ನ ದೆಹಲಿ ಪೊಲೀಸರು (Delhi Police) ಬಂಧಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

    ಕೋಚಿಂಗ್‌ ಸೆಂಟರ್‌ ಮಾಲೀಕ ಅಭಿಷೇಕ್‌ ಗುಪ್ತಾ ಹಾಗೂ ಸಂಯೋಜಕ ದೇಶ್‌ಪಾಲ್‌ ಸಿಂಗ್‌ ಬಂಧಿತರು. ಕೇರಳ ಮೂಲದ ನವೀನ್‌, ಉತ್ತರ ಪ್ರದೇಶದ ಶ್ರೇಯಾ, ತೆಲಂಗಾಣದ ತಾನಿಯಾ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಅಶ್ಲೀಲ ವೀಡಿಯೋ ವೀಕ್ಷಿಸಿ ಸಹೋದರಿಯ ಅತ್ಯಾಚಾರಗೈದು ಹತ್ಯೆ – ಪ್ರಕರಣ ಮುಚ್ಚಿಡಲು ತಾಯಿ, ಹಿರಿಯ ಸಹೋದರಿಯರ ಸಾಥ್

    ನಿಯಮ ಉಲ್ಲಂಘನೆ ಕಾರಣ:
    ಕೋಚಿಂಗ್‌ ಸೆಂಟರ್‌ನಿಂದ ನೆಲಮಾಳಿಗೆಯಲ್ಲಿ ಪಾರ್ಕಿಂಗ್‌ ಮತ್ತು ಸ್ಟೋರ್‌ ರೂಮ್‌ಗಳಿಗಾಗಿ ಅನುಮತಿ ಪಡೆಯಲಾಗಿತ್ತು. 2 ನೆಲಮಾಳಿಗೆಗಳನ್ನ ಪಾರ್ಕಿಂಗ್ ಮತ್ತು ಸ್ಟೋರ್‌ ರೂಮ್‌ಗಾಗಿ ಇದೇ ತಿಂಗಳ ಜುಲೈ 9ರಂದು ಎನ್‌ಒಸಿ ಪಡೆದುಕೊಂಡಿತ್ತು. ಆದರೆ ನಿಯಮಕ್ಕೆ ವಿರುದ್ಧವಾಗಿ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಪ್ರೇಯಸಿಯನ್ನೇ ಬರ್ಬರವಾಗಿ ಇರಿದು ಕೊಂದ ಪ್ರಿಯಕರ – ಶವವನ್ನು ಪೊದೆಗೆ ಎಸೆದು ಎಸ್ಕೇಪ್

    ಈ ಗ್ರಂಥಾಲದಲ್ಲಿ 7 ವಿದ್ಯಾರ್ಥಿಗಳು ಓದುತ್ತಿದ್ದಾಗ ಏಕಾಏಕಿ ನೀರು ನುಗ್ಗಿದ ಪರಿಣಾಮ, ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜೇಂದ್ರ ನಗರದಲ್ಲಿರುವ ಕೋಚಿಂಗ್‌ ಸೆಂಟರ್‌ಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದ್ದು, ಈ ಕುರಿತ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಘಟನೆಯಲ್ಲಿ ಮೃತಪಟ್ಟವರಿಗೆ ಆಪ್‌ ಸಚಿವೆ ಅತಿಶಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!

  • 10ಕ್ಕೂ ಹೆಚ್ಚು ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ – ಸೋಮವಾರದ ಒಳಗೆ ಬಂದ್‌ಗೆ ಸೂಚನೆ!

    10ಕ್ಕೂ ಹೆಚ್ಚು ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ – ಸೋಮವಾರದ ಒಳಗೆ ಬಂದ್‌ಗೆ ಸೂಚನೆ!

    – ಗಡುವು ಮೀರಿದ್ರೆ ಕ್ರಿಮಿನಲ್‌ ಕೇಸ್‌ ಎಚ್ಚರಿಕೆ!

    ರಾಯಚೂರು: ಇಲ್ಲಿನ ಲಿಂಗಸುಗೂರು ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ (Coaching Centre) ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.

    ಲಿಂಗಸೂಗೂರು ಎಸಿ ಅವಿನಾಶ್ ಶಿಂಧೆ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರದೊಳಗಾಗಿ ಎಲ್ಲಾ ಕೋಚಿಂಗ್ ಸೆಂಟರ್‌ಗಳು ಬಂದ್ ಆಗಬೇಕು. ಗಡುವು ಮೀರಿದ ಬಳಿಕ ಕ್ಲಾಸ್ (Coaching Class) ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅನುಮತಿ ಪಡೆಯದೇ ರಾಜಾರೋಷವಾಗಿ ಕೋಚಿಂಗ್‌ ಸೆಂಟರ್‌ ನಡೆಸುತ್ತಿದ್ದದ್ದು ಕಂಡುಬಂದಿದೆ. ಕೆಲವು ವಸತಿ ಸಹಿತವಾಗಿದ್ದರೆ, ಇನ್ನೂ ಕೆಲವು ವಸತಿ ರಹಿತವಾಗಿ ನಡೆಸುತ್ತಿದ್ದದ್ದು ಪತ್ತೆಯಾಗಿದೆ. ಹಾಗಾಗಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರದ ಒಳಗೆ ಕೋಚಿಂಗ್‌ ಸೆಂಟರ್‌ಗಳನ್ನು ಬಂದ್‌ ಮಾಡುವಂತೆ ಸೂಚಿಸಿದೆ.

    ಎಲ್ಲಾ ಕೇಂದ್ರಗಳನ್ನು ಬಂದ್‌ ಮಾಡಿದ ಮಕ್ಕಳನ್ನು ತಮ್ಮ ತಮ್ಮ ಪೋಷಕರ ಬಳಿ ಕಳುಹಿಸಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ.

  • ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ – ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ವಿದ್ಯಾರ್ಥಿಗಳು

    ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ – ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ವಿದ್ಯಾರ್ಥಿಗಳು

    ನವದೆಹಲಿ: ಕೋಚಿಂಗ್ ಸೆಂಟರ್ (Coaching Centre) ಒಂದರಲ್ಲಿ ಭಾರೀ ಬೆಂಕಿ (Fire) ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು (Students) ಕಿಟಕಿಯಿಂದ (Window) ಹಾರಿ ಜೀವ ಉಳಿಸಿಕೊಂಡಿರುವ ಘಟನೆ ದೆಹಲಿಯ (Delhi) ಮುಖರ್ಜಿ ನಗರ ಪ್ರದೇಶದಲ್ಲಿ ನಡೆದಿದೆ.

    ನಗರದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 12:30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸಲು ಹಾಗೂ ರಕ್ಷಣಾ ಕಾರ್ಯಗಳನ್ನು ಮುಂದುವರಿಸಲಾಗಿದೆ.

    ಘಟನೆಗೆ ಸಂಬಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಹರಿದಾಡುತ್ತಿವೆ. ಜನರು, ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಿಟಕಿಗಳ ಮೂಲಕ ರಕ್ಷಣೆ ಮಾಡುತ್ತಿರುವುದು ಕಾಣಿಸಿಕೊಂಡಿದೆ. ಜನರು ಹಗ್ಗಗಳನ್ನು ಬಳಸಿ ಬೆಂಕಿಯಿಂದ ತಪ್ಪಿಸಿಕೊಳ್ಳುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

    ಕಟ್ಟಡದ ವಿದ್ಯುತ್ ಮೀಟರ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ತಪ್ಪಿಸಿಕೊಳ್ಳುತ್ತಿದ್ದಾಗ 4 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಸದ್ಯ ಯಾವುದೇ ವ್ಯಕ್ತಿ ಬೆಂಕಿ ತಗುಲಿದ ಕಟ್ಟಡದಲ್ಲಿ ಸಿಲುಕಿಕೊಂಡಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: KRS ಡ್ಯಾಂ ನೀರಿನ ಮಟ್ಟ 5 ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ

  • ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

    ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

    ಮುಂಬೈ: ಪಿಕ್ನಿಕ್ (Picnic) ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ (School Bus Accident) ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮುಂಬೈ (Mumbai) ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ.

    ಕೋಚಿಂಗ್ ತರಗತಿ ವಿದ್ಯಾರ್ಥಿಗಳು (Coaching Class) ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ರಾಯಗಢ ಜಿಲ್ಲೆಯ ಖೋಪೋಲಿ ಎಂಬಲ್ಲಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಮುಂದುವರಿದ ಮಾಂಡಸ್ ಅಬ್ಬರ: ಇನ್ನೂ 3 ದಿನ ಮಳೆ, ಚಳಿ – ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    ಮುಂಬೈನ ಚೆಂಬೂರ್‌ನಲ್ಲಿರುವ ಕೋಚಿಂಗ್ ಕೇಂದ್ರದ 10ನೇ ತರಗತಿಯ 48 ವಿದ್ಯಾರ್ಥಿಗಳು (Students) ಮತ್ತು ಇಬ್ಬರು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಲೋನಾವಾಲಾದಿಂದ ಹಿಂತಿರುಗುತ್ತಿತ್ತು. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ (Mumbai Pune ExpressWay) ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಟ್ಟದಿಂದ ಇಳಿಯುತ್ತಿದ್ದ ವೇಳೆ ಬಸ್ ಪಲ್ಟಿಯಾಗಿದೆ. ಇದನ್ನೂ ಓದಿ: ಗೋಕಾಕ್ ತಹಶೀಲ್ದಾರ್ ಮನೆಯಲ್ಲಿ ಕಳ್ಳತನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಎಗರಿಸಿ ಪರಾರಿ

    ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಲೋನಾವಾಲಾ, ಖೋಪೋಲಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    ಜೈಪುರ: ತನ್ನ ಮಗಳನ್ನು ಕೋಚಿಂಗ್ ಸೆಂಟರ್‌ಗೆ (Coaching Center) ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಶನಿವಾರ ರಾಜಸ್ಥಾನದ (Rajasthan) ಸಿಕಾರ್‌ನಲ್ಲಿ (Sikar) ನಡೆದ ಗ್ಯಾಂಗ್‌ವಾರ್‌ನಲ್ಲಿ (Gang War) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ.

    ವರದಿಗಳ ಪ್ರಕಾರ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಈ ವೇಳೆ ತಾರಾಚಂದ್ ಕಡ್ವಾಸರ್ ಅವರಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಅವರ 16 ವರ್ಷದ ಮಗಳು ಮೃತ ತಂದೆಯನ್ನು ತಬ್ಬಿಕೊಂಡು ಗೋಗರೆಯುತ್ತಿರುವ ಭಾವನಾತ್ಮಕ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

    ಸಿಕಾರ್ ನಗರದ ಪಿಪ್ರಾಲಿ ರಸ್ತೆಯಲ್ಲಿ ಗ್ಯಾಂಗ್‌ಸ್ಟರ್ ರಾಜು ಥೇತ್‌ನನ್ನು ಗುರಿಯಾಗಿಸಿಕೊಂಡು 4 ಜನರು ಗುಂಡು ಹಾರಿಸಿದ್ದಾರೆ. ಈ ವೇಳೆ ಥೇತ್ ಹಾಗೂ ತಾರಾಚಂದ್‌ಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಅವರನ್ನು ಬಂಧಿಸಲು ಪೊಲೀಸರು ರಾಜ್ಯಾದ್ಯಂತ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ದತ್ತಜಯಂತಿಗೆ ಕಾಫಿನಾಡಲ್ಲಿ ಪೊಲೀಸ್ ಸರ್ಪಗಾವಲು – ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ

    ಘಟನೆ ನಡೆದಿರುವ ಸ್ಥಳದಲ್ಲಿ ಹಲವಾರು ಹಾಸ್ಟೆಲ್ ಹಾಗೂ ಕೋಚಿಂಗ್ ಸೆಂಟರ್‌ಗಳಿದ್ದು, ಮೃತ ಗ್ಯಾಂಗ್‌ಸ್ಟರ್ ಥೇತ್‌ನ ಸಹೋದರ ಕೂಡಾ ಆ ಪ್ರದೇಶದಲ್ಲಿ ಹಾಸ್ಟೆಲ್ ನಡೆಸುತ್ತಿದ್ದರು. ಮೃತ ಥೇತ್ ಬೆಂಬಲಿಗರು ಸಿಕಾರ್‌ನಲ್ಲಿ ಬಂದ್‌ಗೆ ಕರೆ ನೀಡಿದ್ದಾರೆ. ಹಂತಕರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: 3 ದಿನವಾದ್ರೂ ಸಿಗದ ಚಾಲಾಕಿ ಚಿರತೆ – 4ನೇ ದಿನಕ್ಕೆ ಕಾರ್ಯಾಚರಣೆ

    Live Tv
    [brid partner=56869869 player=32851 video=960834 autoplay=true]

  • ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

    ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

    ಪಾಟ್ನಾ: ಅಪ್ರಾಪ್ತ ಬಾಲಕಿಯ ಮೇಲೆ ಐವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಚಾರಗೈದಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದಿದೆ.

    ಬಾಲಕಿಯು ಕೋಚಿಂಗ್ ಕ್ಲಾಸ್‍ನಿಂದ ಹಿಂತಿರುಗುತ್ತಿದ್ದಾಗ ಆರೋಪಿಗಳು ಬಾಲಕಿಯನ್ನು ಬಲವಂತವಾಗಿ ಸಮೀಪದ ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ಆ ಐವರು ಆರೋಪಿಗಳಲ್ಲಿ ವಿದ್ಯಾರ್ಥಿಯೋರ್ವ ಅದೇ ಕೋಚಿಂಗ್ ಸೆಂಟರ್‌ನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    ಅವನು ಈ ಹಿಂದೆ ಆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ಬಗ್ಗೆ ಕೋಚಿಂಗ್ ಸೆಂಟರ್‌ನ ಮುಖ್ಯಸ್ಥರಿಗೆ ಬಾಲಕಿಯ ಕುಟುಂಬದವರು ದೂರು ನೀಡಿದ್ದರು. ಈ ಹಿನ್ನೆಲೆ ಇನ್ನು ಮುಂದೆ ಬಾಲಕಿಗೆ ತೊಂದರೆಯಾಗುವುದಿಲ್ಲ ಅಂತಾ ಮುಖ್ಯಸ್ಥ ಭರವಸೆ ನೀಡಿದ್ದರು. ನಂತರ ಕುಟುಂಬವು ಅದೇ ಕೋಚಿಂಗ್ ಸೆಂಟರ್‌ಗೆ ಬಾಲಕಿಯನ್ನು ಕಳುಹಿಸಲು ನಿರ್ಧರಿಸಿದರು. ದೂರಿನ ಮೇರೆಗೆ ಕೋಪಗೊಂಡ ಆರೋಪಿ ಮತ್ತು ಅವನ ಸ್ನೇಹಿತರು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಯೋಜನೆ ರೂಪಿಸಿದ್ದರು. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಯ ನಂತರ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಕೊರೊನಾ ನಿಯಮ ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್- ಮಾಲೀಕ ಅರೆಸ್ಟ್

    ಕೊರೊನಾ ನಿಯಮ ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್- ಮಾಲೀಕ ಅರೆಸ್ಟ್

    ಅಹಮದಾಬಾದ್: ಕೊರೊನಾ ನಿಮಯವನ್ನು ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್ ಮಾಡಿ 555 ವಿದ್ಯಾರ್ಥಿಗಳಿಗೆ ಒಂದು ಕಡೆ ಸೇರಿಸಿ ಕೊಚಿಂಗ್ ನೀಡುತ್ತಿದ್ದ ಕೋಚಿಂಗ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

    ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಗುಜರಾತ್‍ನ ರಾಜ್ ಕೋಟ್ ಜಿಲ್ಲೆಯ ಜಸ್ದಾನ್ ನಗರದ ಕೋಚಿಂಗ್ ಸೆಂಟರ್ ಮೇಲೆ ಪೊಲೀಸರು ಭಾನುವಾರ ದಾಳಿ ನಡೆಸಿದ್ದು,  ಮಾಲೀಕ ಜಯ್ ಸುಖ್ ಸಂಖಾಲ್ವಾ(39 )ಎಂದು ಗುರುತಿಸಲಾಗಿದೆ. ಸೋಮವಾರ ಜಯ್ ಸುಖ್‍ನನ್ನು ಬಂಧಿಸಲಾಗಿದೆ. ದಾಳಿ ನಡೆಸಿದ ವೇಳೆ 550ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಿದ್ದರು ಎಂದು ರಾಜ್ ಕೋಟ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ತಿಳಿಸಿದ್ದಾರೆ.

    ಕೋವಿಡ್ 19 ಮಾರ್ಗಸೂಚಿ ಹಾಗೂ ಪೊಲೀಸ್ ಅಧಿಸೂಚನೆಯನ್ನು ಉಲ್ಲಂಘಿಸಿ ಸೋಂಕನ್ನು ಹರಡಲು ಕಾರಣಕರ್ತನಾಗಿರುವ ಜಯ್ ಸುಖ್ ನನ್ನು ಐಪಿಸಿ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಬಂಧಿಸಲಾಗಿದ್ದು, ವಿದ್ಯಾರ್ಥಿಗಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಮೀನಾ ವಿವರಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಜವಾಹರ್ ನವೋದಯ ವಿದ್ಯಾಲಯ ಮತ್ತು ಬಾಲಚಾಡಿ ಸೈನಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಯ್ ಸುಖ್ ಪ್ರವೇಶ ಪರೀಕ್ಷೆಯ ಕೋಚಿಂಗ್ ನೀಡುತ್ತಿದ್ದು, ಈತ ಕೋಚಿಂಗ್ ಕಮ್ ಹಾಸ್ಟೆಲ್ ನಡೆಸುತ್ತಿದ್ದ ಎಂದು ತಿಳಿಸಿದ್ದಾರೆ.

  • ಕೊರೊನಾ 2ನೇ ಅಲೆ, ಕೋಚಿಂಗ್ ಸೆಂಟರ್ ಬಂದ್ – ವಿದ್ಯಾರ್ಥಿಗಳಿಂದ ಗಲಾಟೆ

    ಕೊರೊನಾ 2ನೇ ಅಲೆ, ಕೋಚಿಂಗ್ ಸೆಂಟರ್ ಬಂದ್ – ವಿದ್ಯಾರ್ಥಿಗಳಿಂದ ಗಲಾಟೆ

    – ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ
    – ಗಲಾಟೆಯಲ್ಲಿ ಪೊಲೀಸರು, ಪತ್ರಕರ್ತರಿಗೆ ಗಾಯ

    ಪಾಟ್ನಾ: ಕೊರೊನಾ ನಿಯಂತ್ರಣಕ್ಕಾಗಿ ಹೆಚ್ಚು ಜನರು ಒಂದೆಡೆ ಸೇರುವ ಸ್ಥಳಗಳಿಗೆ ಸರ್ಕಾರ ನಿರ್ಬಂಧ ಹಾಕುತ್ತಿದೆ. ಬಿಹಾರದ ಸಾಸಾರಾಮ ನಗರದಲ್ಲಿ ಕೋಚಿಂಗ್ ಸೆಂಟರ್ ಬಂದ್ ಖಂಡಿಸಿ ವಿದ್ಯಾರ್ಥಿಗಳು ಗಲಾಟೆ ನಡೆಸಿದ್ದಾರೆ. ಸದ್ಯ ಪೊಲೀಸರು ಘಟನೆಗೆ ಸಂಬಂಧಿಸಿದಂತೆ 9 ವಿದ್ಯಾರ್ಥಿಗಳನ್ನ ವಶಕ್ಕೆ ಪಡೆದು, ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ.

    ಇಂದು ಬೆಳಗ್ಗೆ ಸಾಸಾರಾಮ ನಗರದ ಪೋಸ್ಟ್ ಆಫಿಸ್ ಚೌಕ ಮತ್ತು ಗೌರಕ್ಷಣಿ ಬಜಾರ್ ನಲ್ಲಿ ಅಪಾರ ಪ್ರಮಾಣದ ವಿದ್ಯಾರ್ಥಿಗಳು ಒಂದೆಡೆ ಸೇರಿ ಪ್ರತಿಭಟನೆಗೆ ಮುಂದಾದರು. ಜಿಲ್ಲಾಧಿಕಾರಿಗಳ ಆವರಣ ಪ್ರವೇಶಿಸಿದ ವಿದ್ಯಾರ್ಥಿಗಳು ಪ್ರಯಾಣಿಕರಿಗಾಗಿ ಹಾಕಲಾಗಿದ್ದ ಬೆಂಚುಗಳಿಗೆ ಬೆಂಕಿ ಹಾಕಿದ್ದಾರೆ. ಇನ್ನು ಕೆಲವರು ಆವರಣದಲ್ಲಿದ್ದ ವಸ್ತುಗಳನ್ನ ಧ್ವಂಸಗೊಳಿಸಿ ಜಿಲ್ಲಾಧಿಕಾರಿಗಳ ಆದೇಶದ ವಿರುದ್ಧ ದಿಕ್ಕಾರ ಕೂಗಿದ್ದಾರೆ.

    ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದಾಗಲೂ ವಿದ್ಯಾರ್ಥಿಗಳು ಪ್ರತಿಭಟನೆಯಿಂದ ಹಿಂದೆ ಸರಿಯಲು ಒಪ್ಪಿಲ್ಲ. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಘಟನೆಯಲ್ಲಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ನಾರಾಯಣ್ ಸಿಂಗ್ ಸೇರಿದಂತೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

    ವಿದ್ಯಾರ್ಥಿಗಳ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಅಶ್ರವಾಯು ಪ್ರಯೋಗಿಸಿ ಎಲ್ಲರನ್ನ ಚದುರಿಸಿದ್ದಾರೆ. ಪ್ರತಿಭಟನೆಯ ನೇತೃತ್ವವಹಿಸಿದ್ದ 9 ವಿದ್ಯಾರ್ಥಿಗಳು ಸೇರಿದಂತೆ 12ಕ್ಕೂ ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವರು ಕಲ್ಲು ತೂರಾಟ ನಡೆಸಿದ್ದರಿಂದ ಪತ್ರಕರ್ತರು ಸಹ ಗಾಯಗೊಂಡಿದ್ದಾರೆ.