Tag: ಕೋಟಿಲಿಂಗೇಶ್ವರ

  • ಕೆಜಿಎಫ್‍ನಲ್ಲಿ ಕೋಟಿ ಶಿವಲಿಂಗಗಳ ಶಿವರಾತ್ರಿ ವೈಭವ

    ಕೆಜಿಎಫ್‍ನಲ್ಲಿ ಕೋಟಿ ಶಿವಲಿಂಗಗಳ ಶಿವರಾತ್ರಿ ವೈಭವ

    ಕೋಲಾರ: ಏಕ ಕಾಲದಲ್ಲಿ ಕೋಟಿ ಶಿವಲಿಂಗಗಳ ದರ್ಶನ ನೀಡುವ ವಿಶ್ವದ ಏಕೈಕ ಸ್ಥಳವಾದ ಜಿಲ್ಲೆಯ ಕಮ್ಮಸಂದ್ರದ ಕೋಟಿಲಿಂಗೇಶ್ವರದಲ್ಲಿ ಶಿವರಾತ್ರಿ ವೈಬವ ಜೋರಾಗಿದ್ದು, ಇಂದು ಮುಂಜಾನೆಯಿಂದಲೇ ವಿವಿಧ ರಾಜ್ಯಗಳಿಂದ ಜನಸ್ತೋಮ ಈ ಪುಣ್ಯ ಕ್ಷೇತ್ರದತ್ತ ಹರಿದು ಬಂದಿದೆ.

    ಒಂದೆಡೆ ಎಲ್ಲಿ ನೋಡಿದರು ಶಿವಲಿಂಗಗಳು, ಮತ್ತೊಂದೆಡೆ ಶಿವಲಿಂಗಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸುತ್ತಿರುವ ಮಹಿಳೆಯರು ಭಕ್ತರು. ಇದೆಲ್ಲಾ ದೃಷ್ಯಗಳು ಕಂಡು ಬಂದಿದ್ದು ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕಮ್ಮಸಂದ್ರದ ಕೋಟಿಲಿಂಗೇಶ್ವರ ಕ್ಷೇತ್ರದಲ್ಲಿ. ಹೌದು ಇಂದು ಮಹಾಶಿವರಾತ್ರಿ ಅಂಗವಾಗಿ ಕೋಟಿಲಿಂಗೇಶ್ವರದಲ್ಲಿ ವಿಶೇಷ ಪೂಜೆ, ಮುಂಜಾನೆಯಿಂದಲೇ ಅಲ್ಲಿನ 108 ಅಡಿಯ ಶಿವಲಿಂಗಕ್ಕೆ ಹಾಲಿನ ಅಭಿಷೇಕ ಹಾಗೂ ಅಲಂಕಾರವನ್ನು ಮಾಡಲಾಗಿದೆ.

    ಜೊತೆಗೆ ಇಲ್ಲಿನ ಕೋಟಿ ಶಿವಲಿಂಗಗಳಿಗೂ ಅದ್ಧೂರಿ ಅಲಂಕಾರ ಮಾಡಲಾಗಿದೆ. ಮುಂಜಾನೆಯಿಂದಲೂ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಜೊತೆಗೆ ಈ ವಿಶೇಷ ದಿನದಂದು ಲಕ್ಷಾಂತರ ಜನರು ಬಂದು ಕೋಟಿ ಶಿವಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಪೂಜೆಗಳಲ್ಲಿ ಹಲವೆಡೆಗಳಿಂದ ಬಂದಿದ್ದ ಭಕ್ತಾದಿಗಳು ಭಾಗಿಯಾಗುತ್ತಿದ್ದಾರೆ.

    ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಹಾಗೂ ಆಂಧ್ರ ಪ್ರದೇಶ, ತಮಿಳುನಾಡು, ಕೇರಳದಿಂದಲೂ ಸಾವಿರಾರು ಜನ ಭಕ್ತರು ಸಾಗರೋಪಾದಿಯಲ್ಲಿ ಕೋಟಿ ಲಿಂಗ ದರ್ಶನಕ್ಕೆ ಬರುತ್ತಿದ್ದಾರೆ. ಶಿವರಾತ್ರಿಯ ಈ ವಿಶೇಷ ದಿನದಂದು ಇಚ್ಚೆಯುಳ್ಳವರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಇಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡಿದರು. ವಿಶೇಷವಾಗಿ ಕೋಟಿಲಿಂಗೇಶ್ವರ ಕ್ಷೇತ್ರದಲ್ಲಿ ಹಲವಾರು ಜನ ಶಿವಲಿಂಗ ಪ್ರತಿಷ್ಠಾಪನೆ ಮಾಡಿ, ಸ್ವತಃ ತಾವೆ ಪೂಜೆ ಸಲ್ಲಿಸಿದರು.

    ಅಲ್ಲದೆ ಕೋಟಿಲಿಂಗೇಶ್ವರದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಭ್ರಹ್ಮರಥೋತ್ಸವ ಕೂಡಾ ನಡೆಯಿತು. ಇಷ್ಟೆಲ್ಲಾ ಕಾರ್ಯಕ್ರಮಗಳ ನಡುವೆ ಏಕ ಕಾಲದಲ್ಲಿ ಶಿವಲಿಂಗ ದರ್ಶನ ಮಾಡುವ ಜನರಿಗಂತೂ ಕೈಲಾಸವೇ ಧರೆಗಿಳಿದ ಅನುಭವವಾಗಿದೆ. ಹಾಗೆಯೇ ದರ್ಶನಕ್ಕೆ ಬರುತ್ತಿರುವ ಭಕ್ತರಿಗೆ ದೇವಾಲಯದಿಂದ ಸಾಕಷ್ಟು ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

    ಇಂದು ಮಹಾಶಿವರಾತ್ರಿಯ ಪ್ರಯುಕ್ತ ಮುಂಜಾನೆಯಿಂದಲೇ ಸಾವಿರಾರು ಭಕ್ತರು ಕೋಟಿ ಶಿವಲಿಂಗಗಳ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಶಿವಲಿಂಗಗಳ ದರ್ಶನ ಪಡೆದು ಶಿವನ ಕೃಪೆಗೆ ಪಾತ್ರರಾಗುತ್ತಿದ್ದಾರೆ.

  • ಕೋಟಿಲಿಂಗೇಶ್ವರ ಕ್ಷೇತ್ರದ ಧರ್ಮಾಧಿಕಾರಿ ವಿಧಿವಶ

    ಕೋಟಿಲಿಂಗೇಶ್ವರ ಕ್ಷೇತ್ರದ ಧರ್ಮಾಧಿಕಾರಿ ವಿಧಿವಶ

    ಕೋಲಾರ: ವಿಶ್ವ ವಿಖ್ಯಾತಿ ಪಡೆದ ಜಿಲ್ಲೆಯ ಕೋಟಿಶಿವಲಿಂಗ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಸಾಂಭ ಶಿವಮೂರ್ತಿ(74) ಸ್ವಾಮೀಜಿ ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ.

    ಕಳೆದ ಕೆಲ ದಿನಗಳಿಂದ ನಿಶ್ಯಕ್ತಿಯಿಂದ ಬಳಲುತ್ತಿದ್ದ ಶ್ರೀಗಳಿಗೆ ಗುರುವಾರ ಹೃದಯಾಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೋಲಾರ ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ ಕಮ್ಮಸಂದ್ರದಲ್ಲಿ ಇಂದು ಲಕ್ಷಾಂತರ ಭಕ್ತರ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಹೀಗಾಗಿ ರಾಜ್ಯ ಅಲ್ಲದೇ ಹೊರ ರಾಜ್ಯಗಳಿಂದಲೂ ಅಪಾರ ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ಬೆಮೆಲ್ ಉದ್ಯೋಗ ತೊರೆದು 1979 ರಲ್ಲಿ ಆಧ್ಯಾತ್ಮದತ್ತ ಮುಖ ಮಾಡಿದ್ದ ಶ್ರೀಗಳು ಕೋಲಾರದಲ್ಲಿ ಕೋಟಿ ಶಿವಲಿಂಗಗಳ ಸ್ಥಾಪನೆಗೆ ಮುಂದಾಗಿ, ವಿಶ್ವದಲ್ಲೇ ಎತ್ತರದ 108 ಅಡಿ ಲಿಂಗ ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಂದಿನಿಂದ ಗೋಪಲಾಪ್ಪನವರ ಸಾಂಭಶಿವ ಮೂರ್ತಿಗಳಾಗಿ ಪ್ರಪಂಚ ಪ್ರಸಿದ್ಧಿ ಪಡೆದು ಪ್ರತಿನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರ ಆಕರ್ಷಣೀಯ ಆಧ್ಯಾತ್ಮ ಕ್ಷೇತ್ರವನ್ನಾಗಿ ಮಾಡಿದ್ದರು.

    ಸಾಮೀಜಿಯವರು 1947 ಆಗಸ್ಟ್ 23 ರಂದು ಜನಿಸಿದ್ದು, ಪತ್ನಿ ರುಕ್ಮಿಣಿ, ಮಗ ಶಿವ ಪ್ರಸಾದ್, ಮಗಳು ಅನುರಾಧರನ್ನ ಅಗಲಿದ್ದಾರೆ. ಕೋಟಿಶಿವಲಿಂಗ ಕ್ಷೇತ್ರದ ಮುಕ್ತಿ ಮಂದಿರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲು ಕುಟುಂಬ ವರ್ಗ ನಿರ್ಧರಿಸಿದ್ದು, ಬಲಿಜ ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ಮಗ ಶಿವಪ್ರಸಾದ್ ನೆರವೇರಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಹಾಶಿವರಾತ್ರಿಗೆ ಕೋಟಿಲಿಂಗೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜಾ ಅಲಂಕಾರ

    ಮಹಾಶಿವರಾತ್ರಿಗೆ ಕೋಟಿಲಿಂಗೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜಾ ಅಲಂಕಾರ

    ಕೋಲಾರ: ಇಂದು ಮಹಾಶಿವರಾತ್ರಿ. ರಾಜ್ಯದೆಲ್ಲೆಡೆ ಶಿವನ ನಾಮ ಜಪ, ವ್ರತಾಚರಣೆಯಲ್ಲಿ ಜನರು ತೊಡಗಿದ್ದಾರೆ. ಶಿವರಾತ್ರಿ ಪ್ರಯುಕ್ತ ಕೋಲಾರದ ಬಂಗಾರಪೇಟೆ ತಾಲೂಕು ಕಮ್ಮಸಂದ್ರ ಕೋಟಿಲಿಂಗೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜಾ ಅಲಂಕಾರಗಳನ್ನ ಮಾಡಲಾಗಿದೆ.

    ಶಿವನ ನಾಮ ಸ್ಮರಿಸಿ ಕೋಟಿ ಶಿವಲಿಂಗ ದರ್ಶನ ಪಡೆದ್ರೆ ಒಳ್ಳೆಯದಾಗುತ್ತೆ ಅನ್ನೋ ನಂಬಿಕೆ ಭಕ್ತರಲ್ಲಿದೆ. ಹೀಗಾಗಿ ಇಂದು ನೆರೆಯ ಆಂಧ್ರ, ತಮಿಳುನಾಡು ಸೇರಿದಂತೆ ಇನ್ನಿತರ ರಾಜ್ಯಗಳಿಂದ ಭಕ್ತರು ಆಗಮಿಸಿ, ಪುಣ್ಯ ಕ್ಷೇತ್ರದಲ್ಲಿ ಶಿವರಾತ್ರಿ ಆಚರಿಸುತ್ತಾರೆ. ರಾತ್ರಿಯಿಂದ ವ್ರತಾಚರಣೆ ಮಾಡಿ, ನಂತರ ಇಲ್ಲಿ ಬಂದು ದೇವರಿಗೆ ಪೂಜೆ ಸಲ್ಲಿಸಿದ ನಂತರವೇ ಹಬ್ಬ ಆಚರಣೆ ಮಾಡೋದು ಇಲ್ಲಿನ ವಿಶೇಷ.

    ಮತ್ತೊಂದು ವಿಶೇಷತೆ ಅಂದ್ರೆ 108 ಅಡಿ ಶಿವಲಿಂಗ ಹಾಗೂ ಬೃಹದಾಕಾರದ ಬಸವ ಮೂರ್ತಿ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದ್ದು, ಸಾವಿರಾರು ಜನ ಕೋಟಿಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಾರೆ.