Tag: ಕೋಡಿಮಠ

  • ಮತಾಂಧತೆ ಹೆಚ್ಚಾಗುತ್ತೆ, ಧಾರ್ಮಿಕ ಮುಖಂಡನ ಸಾವಾಗುತ್ತೆ: ಕೋಡಿಮಠದ ಶ್ರೀ ಭವಿಷ್ಯ

    ಮತಾಂಧತೆ ಹೆಚ್ಚಾಗುತ್ತೆ, ಧಾರ್ಮಿಕ ಮುಖಂಡನ ಸಾವಾಗುತ್ತೆ: ಕೋಡಿಮಠದ ಶ್ರೀ ಭವಿಷ್ಯ

    – ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕೋಡಿಮಠದ ಶ್ರೀಗಳು ಹೇಳಿದ್ದೇನು?

    ಕೋಲಾರ: ಈವರ್ಷ ಧಾರ್ಮಿಕ ಮುಖಂಡನೊಬ್ಬನ (Religious Leader) ಸಾವಾಗುತ್ತೆ, ಮತಾಂಧತೆ ಹೆಚ್ಚಾಗುತ್ತದೆ. ಜಾಗತಿಕ ಮಟ್ಟದಲ್ಲಿ ಬಾಂಬ್ ಸ್ಫೋಟ ಸಂಭವಿಸುತ್ತೆ, ಭೂಕಂಪ ಆಗುತ್ತೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodimutt Swamiji) ಭವಿಷ್ಯ ನುಡಿದಿದ್ದಾರೆ.

    ಕೋಲಾರ (Kolara) ತಾಲೂಕಿನ ನರಸಾಪುರದ ಖಾಸಗಿ ಕಾರ್ಯಕ್ರಮದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವರ್ಷ ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ, ನೀರಿನ ಹಾವಳಿ, ಯುದ್ಧ ಆಗುತ್ತೆ. ಅನೇಕ ಸಾವು ನೋವುಗಳು ಸಂಭವಿಸುತ್ತೆ. ಮತಾದಂತೆ ಹೆಚ್ಚಾಗುತ್ತೆ, ಬಾಂಬ್ ಸ್ಫೋಟ ಸಂಭವಿಸುತ್ತೆ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆತಂಕಪಟ್ಟಿದ್ದಾರೆ.

    ಉತ್ತಮ ಮಳೆ-ಬೆಳೆ ಆಗುತ್ತೆ:
    ರಾಜ್ಯ ಹಾಗೂ ರಾಷ್ಟ್ರ ರಾಜಕಾರಣ ಕುರಿತು ಯುಗಾದಿ ಕಳೆದ ನಂತರ ಹೇಳುವೆ. ಒಂದು ತಿಂಗಳು ಕಳೆದ ಮೇಲೆ ಮಳೆ, ಬೆಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ. ಯುಗಾದಿ ನಂತರ ರಾಜ್ಯದಲ್ಲಿ ಒಳ್ಳೆಯ ಮಳೆ, ಬೆಳೆ ಆಗುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಬಲಿ; ಕರ್ನಾಟಕ ಸರ್ಕಾರದಿಂದ ಪರಿಹಾರ – ಈಶ್ವರ್‌ ಖಂಡ್ರೆ ಹೇಳಿದ್ದೇನು?

    ಗ್ಯಾರಂಟಿಗಳ ಬಗ್ಗೆ ನುಣುಚಿಕೊಂಡ ಶ್ರೀಗಳು:
    ಇದೇ ವೇಳೆ ರಾಜ್ಯ ಸರ್ಕಾರ ಗ್ಯಾರಂಟಿಗಳ (Gurantee Scheme) ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, ನನಗಿಂತ ನಿಮಗೇ ಚೆನ್ನಾಗಿ ಗೊತ್ತು ಎಂದು ನುಣುಚಿಕೊಂಡಿದ್ದಾರೆ. ಯುಗಾದಿಯ ನಂತರ ನೂತನ ಸಂವತ್ಸರದ ಭವಿಷ್ಯ ಬರಲಿದೆ. ನಂತರ ರಾಷ್ಟ್ರ ರಾಜಕಾರಣದ ಬಗ್ಗೆಯೂ ಹೇಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲು; ಅಧಿಕಾರಿಯ ವಿರುದ್ಧ ಕ್ರಮ ವಹಿಸಿ: ಅಶೋಕ್ ಒತ್ತಾಯ

  • ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ: ಕೋಡಿಮಠದ ಶ್ರೀ ಭವಿಷ್ಯ

    ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ: ಕೋಡಿಮಠದ ಶ್ರೀ ಭವಿಷ್ಯ

    – ಚುನಾವಣೆ, ಸರ್ಕಾರದ ಬಗ್ಗೆ ಶ್ರೀಗಳು ಹೇಳಿದ್ದೇನು..?

    ಧಾರವಾಡ: ಆಶ್ವಿಜ ಕೊನೆಯಿಂದ ಯುಗಾದಿ (Yugadi) ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠ (KodiMutt) ದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು. ಅದು ಸಂರಕ್ಷಣೆಯಾಗುತ್ತದೆ. ಪ್ರಾರಂಭದಲ್ಲೇ ನಾನು ಮಳೆ (Rain), ಗಾಳಿ, ಗುಡುಗು ಇದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು-ನೋವುಗಳಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದು ಹೇಳಿದ್ದೆ. ಅದರಂತೆ ಇನ್ನೂ ಮುಂದೆ ಮಳೆಯಾಗುವ ಲಕ್ಷಣ ಇದೆ ಎಂದರು.

    ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ. ಮಳೆಯಿಂದ, ರೋಗದಿಂದ ಹಾಗೂ ಭೂಮಿಯಿಂದ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಈಗಲೂ ಅಂತಹ ಪರಿಸ್ಥಿತಿದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ ಎಂದು ತಿಳಿಸಿದರು.

    ಈ ಸಂವತ್ಸರದ ಕಡೆವರೆಗೂ ಈ ತೊಂದರೆ ಇದೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದೂ ಆಗುತ್ತದೆ ಕಾದು ನೋಡಿ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದೆ. ಅಪಮೃತ್ಯು ಹೆಚ್ಚಿದೆ. ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಒಂದೆಡೆ ಪ್ರಕೃತಿ ವಿಕೋಪ, ಮತಾಂಧತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ ಎಂದರು. ಇದನ್ನೂ ಓದಿ: ದಸರಾ ಹಬ್ಬಕ್ಕೆ ಬೋನಸ್ ಕೊಡಲಿಲ್ಲವೆಂದು ಗ್ರಾಮ ಪಂಚಾಯತ್ ಕಚೇರಿಗೆ ಚಪ್ಪಲಿ ಹಾರ ಹಾಕಿದ ನೌಕರ

    ಇನ್ನೊಂದು ವರ್ಷದಲ್ಲಿ ಕೊರೊನಾ (Corona Virus) ಹೋಗುತ್ತದೆ. ಬಳ್ಳಾರಿಯಲ್ಲಿ ಈ ಬಗ್ಗೆ ಹೇಳಿದ್ದೆ. ಕೊರೊನಾ ಹೋಗುತ್ತದೆ. ಹೋಗುವಾಗ ಜಗತ್ತಿಗೆ ವಿಪರೀತ ಕ್ಷಾಮ ಕೊಟ್ಟು ಹೋಗುತ್ತದೆ. ದುಃಖ ಕೊಟ್ಟು ಹೋಗುತ್ತದೆ, ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ. ಅಂತಹ ಪ್ರಸಂಗ ಇದೆ. ಕೊರೊನಾ ಈ ವರ್ಷದಲ್ಲಿ ಬಿಡುಗಡೆಯಾಗತ್ತದೆ. ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ. ಆದರೆ ಈ ಕೊರೊನಾ ಮೊದಲು ಬಂದಿದ್ದೇ ದೇವರ ಮೇಲೆ. ಮೊದಲು ಮಠ, ಮಾನ್ಯಗಳ ಮೇಲೆ ಬಂತು ಆ ಮೇಲೆ ಮನುಷ್ಯರ ಮೇಲೆ ಬಂತು. ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ. ಬಹಳ ಕಷ್ಟ ಕೊಟ್ಟು ಹೋಗುತ್ತದೆ ಎಂದು ಸ್ವಾಮೀಜಿ ನುಡಿದರು.

    ಇದೇ ವೇಳೆ ರಾಜಕೀಯ ಭವಿಷ್ಯ ಬಗ್ಗೆ ಮಾತನಾಡಿ, ಎಲ್ಲರಿಗೂ ಒಳ್ಳೆಯದಾಗಲಿ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಹೇಳುತ್ತೇನೆ. ರಾಜಕೀಯ (Politics) ಬದಲಾವಣೆ ಬಗ್ಗೆ ಏನೂ ಹೇಳಲು ಹೋಗೋದಿಲ್ಲ ಎಂದು ಹೇಳಿ ಸ್ವಾಮೀಜಿ ನಸುನಕ್ಕರು. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗೋದಿಲ್ಲ. ಅಶುಭವಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ ಭೂಮಿಗೆ ಎಂಥ ರೋಗರುಜಿನ ಬಂದರೂ ತಡೆಯುವ ಶಕ್ತಿಯಿದೆ: ಕೊರೊನಾ ಬಗ್ಗೆ ಕೋಡಿಶ್ರೀ ಭವಿಷ್ಯ

    ಭಾರತದ ಭೂಮಿಗೆ ಎಂಥ ರೋಗರುಜಿನ ಬಂದರೂ ತಡೆಯುವ ಶಕ್ತಿಯಿದೆ: ಕೊರೊನಾ ಬಗ್ಗೆ ಕೋಡಿಶ್ರೀ ಭವಿಷ್ಯ

    ಹಾಸನ: ಈಗ ಬಂದಿರುವ ಕಾಯಿಲೆ ಮುಂದೆ ಜಡತ್ವದಂಥ ಕಲ್ಲು, ಮರಕ್ಕೂ ಆವರಿಸಲಿದೆ. ಆದರೆ ಭಾರತದ ಭೂಮಿಗೆ ಎಂಥ ರೋಗರುಜಿನ ಬಂದರೂ ತಡೆಯುವ ಶಕ್ತಿಯಿದೆ ಎಂದು ಕೊರೊನಾ ವೈರಸ್ ಬಗ್ಗೆ ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಳಿ ಇರುವ ಕೋಡಿಮಠದಲ್ಲಿ ಮಾತನಾಡಿದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು, ಋಷಿ ಮುನಿಗಳ ಮಂತ್ರ, ಜಪ ತಪ ಶಕ್ತಿ ನಮ್ಮ ದೇಶದ ರಕ್ಷಣೆ ಮಾಡಿಕೊಂಡು ಬರುತ್ತಿದೆ. ಈ ತಂತ್ರಯುಗದಲ್ಲಿ ಮಾನವ ಎಲ್ಲಾ ಪಡೆದುಕೊಂಡ, ಆದರೆ ಶಾಂತಿ ಪಡೆಯಲಿಲ್ಲ. ಕೊರೊನಾದಂತ ಭಯಂಕರ ರೋಗಕ್ಕೆ ಮನುಷ್ಯ ಹೆದರದೆ ನಂಬಿಕೆ ಉಳಿಸಿಕೊಂಡು ದೇವರ ಮೇಲೆ ಸಂಕಲ್ಪ ಮಾಡಬೇಕು. ಆಗ ಅವನಿಗೆ ಏನೂ ಆಗುವುದಿಲ್ಲ ಎಂದು ಶ್ರೀಗಳು ತಿಳಿಸಿದರು.

    ಇಂದು ಈ ರೀತಿಯ ಘಟನೆಗಳಿಗೆ ಕಾರಣ ಪ್ರಕೃತಿಯನ್ನು ಹಾಳು ಮಾಡಿದ್ದು, ಮನುಷ್ಯ ಎಲ್ಲಿ ಕಳೆದುಕೊಂಡಿದ್ದಾನೆ ಅಲ್ಲೇ ಹುಡುಕಬೇಕು. ಪ್ರಕೃತಿಯಿಂದಲೇ ಕಳೆದುಕೊಂಡಿದ್ದಾನೆ ಅಲ್ಲಿಯೇ ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ಶ್ರೀಗಳು ತಿಳಿಸಿದರು. ಕೊರೊನಾ ವೈರಸ್ ಋಷಿ ಮುನಿ ಕೊಟ್ಟ ಗಿಡಮೂಲಿಕೆ, ಹಳ್ಳಿನಾಟಿ ವೈದ್ಯರಿಂದಲೂ ಹುಷರಾಗುತ್ತೆ ಅಂತವರನ್ನ ಹುಡುಕಬೇಕು. ಈಗ ಬಂದ ಕಾಯಿಲೆ ರೀತಿ ಮುಂದೆ ಜಡತ್ವದಂತ ಕಲ್ಲು, ಮರಕ್ಕೂ ರೋಗ ಆವರಿಸುತ್ತೆ. ದೈವ ಮತ್ತು ಪ್ರಕೃತಿಯನ್ನು ಕಾಪಾಡಿದರೆ ಮಾತ್ರ ಉಳಿವು ಸಾಧ್ಯ. ಅನ್ನ ಭೂಮಿಯಿಂದ ಬಂದು ನಮಗೆ ಶಕ್ತಿ ಸಿಕ್ಕಿದೆ. ಆ ಭೂಮಿಯನ್ನೆ ನಾವು ಬಿಟ್ಟಿಲ್ಲ. ಹೀಗಾಗಿ ಈ ರೋಗಗಳೆಲ್ಲಾ ಮನುಷ್ಯ ಪ್ರಕೃತಿ ಮೇಲೆ ಮಾಡುತ್ತಿರುವ ದಬ್ಬಾಳಿಕೆಯಿಂದ ಬಂದಿರೋದು ಎಂದು ಬೇಸರ ವ್ಯಕ್ತಪಡಿಸಿದರು.

    ಅರಣ್ಯ ನಾಶ ಮಾಡಿ ನಾಡಿನಲ್ಲಿ ಸುಖವಿಲ್ಲದಂತಾಗಿದೆ. ಹಿಂದೆ ಭೂಮಿ ಮೇಲೆ ಮನುಷ್ಯ ಮಲಗುತ್ತಿದ್ದ. ಆದರೆ ಇಂದು ಮನುಷ್ಯ ಉಪ್ಪರಿಗೆ ಮೇಲೆ ಮಲಗುತ್ತಿದ್ದಾನೆ. ಇದರಿಂದ ಮನುಷ್ಯ ಮತ್ತು ಭೂಮಿ ಅಂತರ ಕಮ್ಮಿ ಆಗಿದೆ. ಭೂಮಿ ಬಿಟ್ಟು ಮನುಷ್ಯ ಏನೂ ಮಾಡಲಾಗದು. ಸಾವಿರ ಸಾಗರ ಒಬ್ಬ ಮಗನಿಗೆ ಸಮಾನ. ಸಾವಿರ ಮಗ ಒಂದು ಮರಕ್ಕೆ ಸಮಾನ. ಅಂತ ಮರವನ್ನ ನಾವು ಕಾಪಾಡಲೇಬೇಕು. ಮನುಷ್ಯ ಧ್ಯಾನಸ್ಥನಾಗಿ ಎಲ್ಲವನ್ನೂ ಜಯಿಸಬೇಕು ಎಂದು ಕೋಡಿಶ್ರೀಗಳು ಕೊರೊನಾದಂತ ರೋಗ ತಡೆಯುವ ಬಗ್ಗೆ ತಿಳಿ ಹೇಳಿದರು.