Tag: ಕೋಡಿಹಳ್ಳಿ ಚಂದ್ರಶೇಖರ್

  • 2 ಬಸ್‍ಗಳಲ್ಲಿ ರೈತರನ್ನ ವಶಕ್ಕೆ ಪಡೆದ ಪೊಲೀಸರು

    2 ಬಸ್‍ಗಳಲ್ಲಿ ರೈತರನ್ನ ವಶಕ್ಕೆ ಪಡೆದ ಪೊಲೀಸರು

    ಬೆಂಗಳೂರು: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನಲ್ಲೇ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ. ಈಗಾಗಲೇ ಫ್ರೀಡಂಪಾರ್ಕ್ ಮತ್ತು ಮೌರ್ಯ ಸರ್ಕಲ್‍ನಲ್ಲಿ ರೈತರು ರಸ್ತೆ ತಡೆಗೆ ಸಜ್ಜಾಗುತ್ತಿದ್ದರು. ಇದೀಗ ಪೊಲೀಸರು ಹಲವು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೆದ್ದಾರಿ ಬಂದ್ ಮಾಡಿ ಶುಕ್ರವಾರ ಬೃಹತ್ ಪ್ರತಿಭಟನೆ  ಮಾಡಲು ನಿರ್ಧರಿಸಲಾಗಿದೆ. ಆದರೆ ಈಗಲೇ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದರು. ಅಲ್ಲದೇ ರಸ್ತೆಯಲ್ಲೇ ಮಲಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ರೈತರನ್ನು ತಡೆದಿದ್ದಾರೆ. ಆಗ ನೂಕು-ನುಗ್ಗಲು ಉಂಟಾಗಿದ್ದು, ರೈತರು ಪೊಲೀಸರೊಂದಿಗೆ ವಾಗ್ವಾದ ಮಾಡಿದ್ದಾರೆ.

    ಮೌರ್ಯ ಸರ್ಕಲ್ ರಸ್ತೆಯಲ್ಲಿ ರೈತರು ಕುಳಿತುಕೊಂಡು ಪ್ರತಿಭಟನೆ ಮಾಡಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಕೊನೆಗೆ ಪೊಲೀಸರು ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 2 ಬಸ್ಸುಗಳಲ್ಲಿ ಪೊಲೀಸರು ರೈತರನ್ನ ಕರೆದುಕೊಂಡು ಹೋಗಿದ್ದಾರೆ.

    ಸೋಮವಾರ ಬಂದ್‍ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದರು.

    ಇದೊಂದು ಕಾರ್ಪೊರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದ್ದಾರೆ.

  • ಸೋಮವಾರ ನೂರಕ್ಕೆ ನೂರರಷ್ಟು ಕರ್ನಾಟಕ ಬಂದ್- ಕೋಡಿಹಳ್ಳಿ ಚಂದ್ರಶೇಖರ್

    ಸೋಮವಾರ ನೂರಕ್ಕೆ ನೂರರಷ್ಟು ಕರ್ನಾಟಕ ಬಂದ್- ಕೋಡಿಹಳ್ಳಿ ಚಂದ್ರಶೇಖರ್

    -ಎಪಿಎಂಸಿ ಮಸೂದೆ ಮಂಡಿಸಿದ ಎಸ್.ಟಿ.ಸೋಮಶೇಖರ್
    -ಸರ್ಕಾರದ್ದು ಸರ್ವಾಧಿಕಾರ ಧೋರಣೆ

    ಬೆಂಗಳೂರು: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನೆಲ್ಲೆ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

    ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದ್ರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದಷ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.

  • ಸೆ.25ಕ್ಕೆ ಕರ್ನಾಟಕ ಬಂದ್ ಇರಲ್ಲ- ಕೋಡಿಹಳ್ಳಿ ಚಂದ್ರಶೇಖರ್

    ಸೆ.25ಕ್ಕೆ ಕರ್ನಾಟಕ ಬಂದ್ ಇರಲ್ಲ- ಕೋಡಿಹಳ್ಳಿ ಚಂದ್ರಶೇಖರ್

    ಬೆಂಗಳೂರು: ಕರ್ನಾಟಕ ಬಂದ್ ಕುರಿತು ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದ್ದು, ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

    ಇಂದು ಜೂಮ್ ಮೀಟಿಂಗ್‍ನಲ್ಲಿ ವಿವಿಧ ರೈತ ಮುಖಂಡರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಇರುವುದಿಲ್ಲ. ಕೇವಲ ರಾಷ್ಟ್ರಿಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಇದೀಗ ಅಧಿವೇಶನ ನಡೆಯುತ್ತಿದ್ದು, ಸದನಲ್ಲಿ ಈ ಕುರಿತು ಚರ್ಚಿಸಿ ಸರ್ಕಾರ ಬಿಲ್ ಹಿಂಪಡೆಯದಿದ್ದರೆ ಬಂದ್ ದಿನಾಂಕವನ್ನು ಪ್ರಕಟ ಮಾಡುತ್ತೇವೆ ಎಂದರು.

    ಅಖಿಲ ಭಾರತೀಯ ಕಿಸಾನ್ ಸಂಘರ್ಷ ಸಮಿತಿ ಬಂದ್‍ಗೆ ಕರೆ ಕೊಟ್ಟಿದೆ. ಪಂಜಾಬ್ ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಚಳುವಳಿ ತೀವ್ರವಾಗಿ ನಡೆಯುತ್ತಿದೆ. ಈ ಬಂದ್‍ಗೆ ನಾವು ಬೆಂಬಲ ಕೊಡುತ್ತೇವೆ. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆಯನ್ನು ಕೈಬಿಟ್ಟರೆ ರಾಜ್ಯ ರೈತಸಂಘದಿಂದ ಬಂದ್ ಇರಲ್ಲ. ಒಂದು ವೇಳೆ ಇದೇ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತಂದರೆ ಬಂದ್ ಮಾಡುತ್ತೇವೆ. ಪ್ರತಿಭಟನೆ ನೋಡಿ ಯಡಿಯೂರಪ್ಪನವರು ಮನಸ್ಸು ಬದಲಿಸಬಹುದು, ಕಾದುನೋಡುತ್ತೇವೆ ಎಂದು ತಿಳಿಸಿದರು.

  • ಬಡ್ಡಿ ಮನ್ನಾದ ಮೊದ್ಲು ಸಾಲ ಮನ್ನಾ ಮಾಡಿ: ಸಿಎಂಗೆ ಕೋಡಿಹಳ್ಳಿ ಆಗ್ರಹ

    ಬಡ್ಡಿ ಮನ್ನಾದ ಮೊದ್ಲು ಸಾಲ ಮನ್ನಾ ಮಾಡಿ: ಸಿಎಂಗೆ ಕೋಡಿಹಳ್ಳಿ ಆಗ್ರಹ

    ಹಾಸನ: ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ಎಲ್ಲ ಬ್ಯಾಂಕಿನಲ್ಲಿ 1 ಲಕ್ಷದವರೆಗಿನ ರೈತರ ಸಾಲಮನ್ನಾ ಮಾಡುತ್ತೇನೆ ಅಂದಿದ್ದರು. ಹೀಗಾಗಿ ಮೊದಲು ಸಾಲಮನ್ನಾ ಮಾಡಿ ಕೊಟ್ಟ ಮಾತು ಉಳಿಸಿಕೊಂಡು ನಂತರ ಬಡ್ಡಿಮನ್ನಾ ಘೋಷಣೆ ಮಾಡಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಆಗ್ರಹಿಸಿದ್ದಾರೆ.

    ರೈತರು ಸಹಕಾರಿ ಬ್ಯಾಂಕ್ ಸಾಲದ ಅಸಲನ್ನು ಮಾರ್ಚ್ ಒಳಗೆ ಕಟ್ಟಿದ್ರೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್‍ವೈ ಭಾನುವಾರ ಘೋಷಣೆ ಮಾಡಿದ್ರು. ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಕೋಡಿಹಳ್ಳಿ, ಯಡಿಯೂರಪ್ಪ ರೈತರ ಸಾಲ ವಸೂಲಿಗೆ ಬ್ಯಾಂಕ್ ಸಿಬ್ಬಂದಿಯನ್ನು ಬಿಟ್ಟು ಈಗ ಆದೇಶ ವಾಪಸ್ ಪಡೆದಿದ್ದೇವೆ ಅಂತಾರೆ ಎಂದು ಹೇಳಿದರು. ಇದನ್ನೂ ಓದಿ: ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ: ಸಿಎಂ

    ಮಾರ್ಚ್ ಒಳಗೆ ಅಸಲು ಕಟ್ಟಿದ್ರೆ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಅಂತ ಯಡಿಯೂರಪ್ಪ ಹೇಳ್ತಾರೆ. ಅವರು ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ಎಲ್ಲ ಬ್ಯಾಂಕಿನಲ್ಲಿ 1 ಲಕ್ಷದವರೆಗಿನ ಸಾಲಮನ್ನಾ ಮಾಡುತ್ತೇನೆ ಅಂದಿದ್ದರು. ನೀವು ಕುಮಾರಸ್ವಾಮಿಗೆ ಮುಂಚೆ ಮೂರು ದಿನ ಮುಖ್ಯಮಂತ್ರಿ ಆಗಿದ್ದಾಗ ಅದನ್ನು ಘೋಷಣೆ ಮಾಡಿದ್ರಿ. ಆದರೆ ಈಗ ಆರು ತಿಂಗಳಾದರೂ ಘೋಷಣೆ ಮಾಡಿಲ್ಲ. ಒಂದು ಲಕ್ಷ ಸಾಲಮನ್ನಾ ಮಾಡಿ ಕೊಟ್ಟ ಮಾತನ್ನು ಉಳಿಸಿಕೊಳ್ಳಿ. ನಂತರ ಬಡ್ಡಿಮನ್ನಾದ ಘೋಷಣೆ ಮಾಡಿ ಎಂದು ಆಗ್ರಹಿಸಿದ್ದಾರೆ.

    ನಾವಿರುವ ಪರಿಸ್ಥಿತಿಯಲ್ಲಿ ಅಸಲು ಕಟ್ಟಲು ಸಾಧ್ಯವಿಲ್ಲ. ರಾಜ್ಯದಲ್ಲಿ ಪ್ರವಾಹ ಬಂದು ಬೀದಿಪಾಲಾಗಿರುವವರಲ್ಲಿ ನೀವು ಸಾಲ ವಾಪಸ್ ಕೇಳುತ್ತೀರಿ. ರೈತರಿಗೆ ಸ್ವಾಮಿನಾಥನ್ ವರದಿ ಪ್ರಕಾರ ಯೋಗ್ಯ ಬೆಲೆ ಕೊಟ್ಟರೆ ಸಾಲ ಕೇಳಲು ನಿಮಗೆ ನೈತಿಕತೆ ಇದೆ ಎಂದು ಚಂದ್ರಶೇಖರ್ ಆಕ್ರೋಶ ಹೊರಹಾಕಿದ್ದಾರೆ.

  • ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಮೂರೂ ಬಿಟ್ಟಿವೆ: ಕೋಡಿಹಳ್ಳಿ ಆಕ್ರೋಶ

    ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಮೂರೂ ಬಿಟ್ಟಿವೆ: ಕೋಡಿಹಳ್ಳಿ ಆಕ್ರೋಶ

    -ಮರ್ಯಾದೆ ಬಿಟ್ಟು ಶಾಸಕರು ರೆಸಾರ್ಟ್ ಸೇರಿದ್ದಾರೆ

    ಧಾರವಾಡ: ನಮ್ಮ ರಾಜ್ಯದಲ್ಲಿ ಮೂರು ರಾಜಕೀಯ ಪಕ್ಷಗಳು ಮೂರೂ ಬಿಟ್ಟಿವೆ. ಇದನ್ನು ನೋಡಲಿಕ್ಕೆ ಅಸಹ್ಯ ಆಗುತ್ತಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ರಾಜಕೀಯ ಹೈಡ್ರಾಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಫ್ರಿಡಂ ಪಾರ್ಕ್ ನಲ್ಲಿ ಛೀ, ಥೂ ಅಂತಾ ಉಗಿದು ಚಳವಳಿ ಮಾಡಿದ್ವಿ. ಇಂತಹ ಕನಿಷ್ಠ ಮಟ್ಟದ ರಾಜಕಾರಣ ಕರ್ನಾಟಕದಲ್ಲಿ ಎಂದಿಗೂ ಆಗಿಲ್ಲ. ಈಗ ರೆಸಾರ್ಟಿನಲ್ಲಿ ಮಾನ ಮರ್ಯಾದೆ ಬಿಟ್ಟು ಶಾಸಕರು ಕುಳಿತಿದ್ದಾರೆ ಎಂದು ಕಿಡಿಕಾರಿದರು.

    ರಾಜ್ಯದಲ್ಲಿ ನಡೆಯುತ್ತಿರುವುದನ್ನು ನೋಡಲಿಕ್ಕೆ ಕೇಳೋದಿಕ್ಕೆ ಅಸಹ್ಯವಾಗುತ್ತೆ. ಹೀಗಾಗಿ ಬದಲಾದ ರಾಜಕೀಯ ಚಿಂತನೆ ನಮ್ಮ ನಾಡಿಗೆ ಬೇಕಿದೆ. ಈ ಬಗ್ಗೆ ನಾಡಿನ ಜನ ವಿಚಾರ ಮಾಡಬೇಕು ಎಂದು ಕೋಡಿಹಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದರು.

  • ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

    ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

    ಬೆಂಗಳೂರು: ಮಂಡ್ಯದ ನೂತನ ಸಂಸದೆಯಾಗಿ ಸುಮಲತಾ ಅಂಬರೀಶ್ ಆಯ್ಕೆಯಾಗಿದ್ದು, ಜೆಡಿಎಸ್ ಕೆಲ ಶಾಸಕರು ಜಾಣತನದಿಂದ ಕಾವೇರಿ ನೀರಿನ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಇತ್ತ ನೂತನ ಸಂಸದೆಯಾಗಿರುವ ಸುಮಲತಾ ಸಹ ಯಾರಿಂದನೂ ಹೇಳಿಸಿಕೊಂಡು ಕೆಲಸ ಮಾಡೋದು ನನ್ನ ಜಾಯಮಾನವಲ್ಲ. ಮಂಡ್ಯ ರೈತರ ಅಭಿವೃದ್ಧಿಯೇ ನನ್ನ ಮೊದಲ ಕರ್ತವ್ಯ ಎಂದು ತಿರುಗೇಟು ನೀಡಿದ್ದಾರೆ. ರೈತರಿಗೆ ಕಾವೇರಿ ವಿಚಾರದಲ್ಲಿ ಸರ್ಕಾರ ಹಾಗೂ ಸುಮಲತಾ ಸಂಘರ್ಷ ಮುಂದುವರಿಯುವ ಭೀತಿ ಉಂಟಾಗಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೊಸ ಎಂಪಿಎ ಕಿವಿಮಾತು ಹೇಳಿದ್ದಾರೆ.

     

    ಹೊಸ ಸಂಸದರಾಗಿರುವ ಸುಮಲತಾ ಅಂಬರೀಶ್ ತಮ್ಮ ಕರ್ತವ್ಯಗಳನ್ನು ಜ್ಞಾಪಿಸಿಕೊಳ್ಳಬೇಕು. ಕಾವೇರಿ ನದಿ ನೀರಿನ ವಿಚಾರ ಮತ್ತು ರೈತೆ ಸಮಸ್ಯೆಗಳತ್ತ ಸಂಸದರು ಹೆಚ್ಚು ಗಮನ ನೀಡಬೇಕು. ಸದ್ಯ ಕಾವೇರಿ ನಿರ್ವಹಣಾ ಮಂಡಳಿ ತಮಿಳುನಾಡಿಗೆ ಜೂನ್ ತಿಂಗಳ ನೀರು ಹರಿಸುವಂತೆ ಸೂಚಿಸಿದೆ. ಮಳೆ ಕೈ ಕೊಟ್ಟರೆ ಕರ್ನಾಟಕಕ್ಕೆ ತೊಂದರೆಯಾಗಲಿದೆ. ಅಂತಹ ಸಂದರ್ಭದಲ್ಲಿ ಲೋಕಸಭೆಯಲ್ಲಿ ಹೇಗೆ ಚರ್ಚಿಸಬೇಕು? ಪ್ರಧಾನಿಗಳನ್ನು ಭೇಟಿಯಾಗುವ ಸಂದರ್ಭ ಎದುರಾಗುತ್ತದೆ. ಹಾಗಾಗಿ ಮೊದಲ ಬಾರಿಗೆ ಸಂಸದರಾಗಿರುವ ಸುಮಲತಾ ಅವರು ಇಂತಹ ಕಠಿಣ ಸನ್ನಿವೇಶ ಎದುರಿಸಲು ಮೊದಲೇ ಸಿದ್ಧವಾಗಿರಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಸಲಹೆ ನೀಡಿದರು.

    ಮಂಡ್ಯ ಭಾಗದಲ್ಲಿ ಚುನಾವಣೆ ಆರಂಭಗೊಂಡಾಗ ರಾಜಕೀಯ ಸಂಘರ್ಷ ತಾರಕಕ್ಕೆ ಹೋಗಿದ್ದನ್ನು ಗಮನಿಸಿದ್ದೇನೆ. ಚುನಾವಣೆಯ ಫಲಿತಾಂಶ ಬಂದಿದ್ದು, ಜನತೆ ನೀಡಿದ ತೀರ್ಪನ್ನು ಎಲ್ಲರು ಒಪ್ಪಿಕೊಳ್ಳಬೇಕು. ಈ ಸಂಘರ್ಷ ಮತ್ತು ವಾದ-ವಿವಾದಗಳನ್ನು ಎಲ್ಲರೂ ಮರೆತು ರಾಜ್ಯದ ಅಭಿವೃದ್ಧಿಯ ಕೆಲಸಗಳಲ್ಲಿ ಒಂದಾಗಬೇಕು ಎಂದು ತಿಳಿಸಿದರು.

  • ದರ್ಶನ್ ಹೇಳಿಕೆಗೆ ಕೋಡಿಹಳ್ಳಿ ಚಂದ್ರಶೇಖರ್ ಕೆಂಡಾಮಂಡಲ

    ದರ್ಶನ್ ಹೇಳಿಕೆಗೆ ಕೋಡಿಹಳ್ಳಿ ಚಂದ್ರಶೇಖರ್ ಕೆಂಡಾಮಂಡಲ

    -ರೈತರ ಕಷ್ಟ ದರ್ಶನ್‍ಗೆ ಏನು ಗೊತ್ತು?
    -ಬೆಂಬಲ ಬೆಲೆ ಅನ್ನೋದು ಮೂರ್ಖತನ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಶನಿವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸಾಲಮನ್ನಾ ಮಾಡದಿದ್ರೆ ಪರವಾಗಿಲ್ಲ. ರೈತರ ಬೆಳೆಗಳಿಗೆ ಬೆಂಬಲ ನೀಡಿದರೆ ಅವರೇ ಸಾಲದಿಂದ ಋಣಮುಕ್ತರಾಗುತ್ತಾರೆ ಎಂದು ಹೇಳಿದ್ದರು. ಸದ್ಯ ದರ್ಶನ್ ಹೇಳಿಕೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಇಂದು ರೈತರು ನೇಣು ಬಿಗಿದುಕೊಂಡು ಜೀವ ಬಿಡುತ್ತಿದ್ದಾರೆ. ದರ್ಶನ್ ಅವರಿಗೆ ಆತ್ಮಹತ್ಯೆಗೆ ಶರಣಾಗುತ್ತಿರುವ ಕಷ್ಟ ಗೊತ್ತಿಲ್ಲ. ತಿಳುವಳಿಕೆ ಇಲ್ಲದೆ ದರ್ಶನ್ ಈ ರೀತಿ ಮಾತನಾಡಿದ್ದಾರೆ. ರೈತರ ಬಗ್ಗೆ ವಿಷಯಗಳು ಗೊತ್ತಿಲ್ಲದಿದ್ದರೆ, ನಮ್ಮೊಂದಿಗೆ ಚರ್ಚಿಸಿ ತಮ್ಮ ಪ್ರತಿಕ್ರಿಯೆ ನೀಡಬೇಕು. ರಾಜಕೀಯ ಭರಾಟೆಯಲ್ಲಿ ತಮಗೆ ತೋಚಿದ್ದನ್ನು ಮಾತನಾಡಿರಬಹುದು ಮುಂದಿನ ದಿನಗಳಲ್ಲಿ ತಮ್ಮ ಹೇಳಿಕೆಯನ್ನು ಸರಿ ಮಾಡಿಕೊಳ್ಳಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಸಲಹೆ ನೀಡಿದರು.

    ತಿಳಿದು ಮಾತನಾಡಲಿ: ಜೀವದ ಅರಿವಿಲ್ಲದೆ ದರ್ಶನ್ ಮಾತನಾಡುತ್ತಿದ್ದಾರೆ. ಬೆಂಬಲ ಬೆಲೆ ಎನ್ನುವುದೇ ಮೂರ್ಖತನದ ಮಾತು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಬದಲಾಗಿ ಸರ್ಕಾರ ಯೋಗ್ಯ ಬೆಲೆ ನೀಡಬೇಕು ಎಂಬುವುದು ನಮ್ಮ ವಾದ ಮತ್ತು ಹೋರಾಟ. ಬೆಂಬಲ ಬೆಲೆ ಎಂಬ ಪದವನ್ನು ಮೋಸಗಾರರು ಮತ್ತು ತಂತ್ರಗಾರರು ಬಳಸುತ್ತಾರೆ. ದರ್ಶನ್ ತಮ್ಮ ಸಿನಿಮಾಗೆ ಅರ್ಧ ಸಂಭಾವನೆ ತೆಗೆದುಕೊಳ್ಳುತ್ತೀನಿ ಎಂದು ಹೇಳಲಿ. ಅರ್ಧ ಸಂಭಾವನೆಯಲ್ಲಿ ಐಷಾರಾಮಿ ಕಾರುಗಳಲ್ಲಿ ಓಡಾಡೋಕ್ಕೆ ಆಗುತ್ತಾ ಅಂತಾ ನೋಡುತ್ತೇವೆ. ಚಿತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕ ಸಂಭಾವನೆ ಪಡೆಯುವ ಹಾಗೆ ರೈತರ ಬೆಳೆಗಳಿಗೂ ಯೋಗ್ಯ ಬೆಲೆ ನೀಡಬೇಕು. ರೈತರ ಶ್ರಮಕ್ಕೆ ಗೌರವವಾದ ಯೋಗ್ಯ ಬೆಲೆ ಬಂದಾಗ ಯಾರು ಸಾಲಮನ್ನಾ ಕೇಳುತ್ತಾರೆ. ದರ್ಶನ್ ಚಿಕ್ಕ ವಯಸ್ಸಿನವರಾಗಿದ್ದು, ಮುಂದಿನ ದಿನಗಳಲ್ಲಿ ತಿಳಿದು ಮಾತನಾಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದರು.

    ದರ್ಶನ್ ಹೇಳಿದ್ದೇನು?: ನಾವೆಲ್ಲ ಇಲ್ಲಿ ನೆಮ್ಮದಿಯಾಗಿ ಇದ್ದೀವಿ ಅಂದರೆ ಅದಕ್ಕೆ ಕಾರಣ ನಮ್ಮನ್ನು ಕಾಯುತ್ತಿರುವ ಸೈನಿಕರು. ಅದೇ ರೀತಿ ತುಂಬಾ ಕಡೆ ಸಾಲಮನ್ನ ಮಾಡಿಲ್ಲ, ಮಾಡಿಲ್ಲ ಎಂದು ಹೇಳುತ್ತಿದ್ದರು. ಆದರೆ ರೈತರ ಸಾಲಮನ್ನಾ ಮಾಡುವುದು ಬೇಡ. ಅವರಿಗೆ ಬೆಂಬಲ ಕೊಟ್ಟರೆ ಸಾಕು ರೈತರೇ ತಮ್ಮ ತಮ್ಮ ಸಾಲವನ್ನು ತೀರಿಸಿಕೊಳ್ಳುತ್ತಾರೆ. ರೈತರಿಗೆ ಸಾಲ ತೀರಿಸುವ ಶಕ್ತಿ ಇದೆ ಎಂದು ದರ್ಶನ್ ಹೇಳಿದ್ದರು.

  • ರೈತ ಸಂಘದ ಜಿಲ್ಲಾಧ್ಯಕ್ಷರನ್ನ ಏಕವಚನದಲ್ಲಿ ತರಾಟೆ ತೆಗೆದುಕೊಂಡ ರೈತ ಮಹಿಳೆ ಜಯಶ್ರೀ

    ರೈತ ಸಂಘದ ಜಿಲ್ಲಾಧ್ಯಕ್ಷರನ್ನ ಏಕವಚನದಲ್ಲಿ ತರಾಟೆ ತೆಗೆದುಕೊಂಡ ರೈತ ಮಹಿಳೆ ಜಯಶ್ರೀ

    ಬೆಳಗಾವಿ: ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಮತ್ತು ರೈತ ಮಹಿಳೆ ಜಯಶ್ರೀ ನಡುವೆ ಸಾರ್ವಜನಿಕವಾಗಿ ವಾಗ್ವಾದ ನಡೆದಿರುವ ಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ನಡೆದಿದೆ.

    ಕೊಡಿಹಳ್ಳಿ ಚಂದ್ರಶೇಖರ ಅವರ ವಿರುದ್ಧ ಜಯಶ್ರೀ ಮಾತನಾಡಿದ್ದಾರೆ ಎನ್ನಲಾಗಿದ್ದು, ಈ ವೇಳೆ ಸಂಘದ ಅಧ್ಯಕ್ಷ ಸತ್ಯಪ್ಪಾ ಅವರು ಏಕವಚನದಲ್ಲಿ ಜಯಶ್ರೀ ಅವರ ಕುರಿತು ಮಾತನಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಜಯಶ್ರೀ ಅವರು ನನ್ನ ಬಗ್ಗೆ ಮಾತನಾಡ ಬೇಡ. ನನ್ನ ಬಗ್ಗೆ ಕೇವಲವಾಗಿ ಮಾತನಾಡಿದರೆ ಸರಿ ಇರುವುದಿಲ್ಲ. ನಿನ್ನ ಹಿಂದೆ ಎಷ್ಟು ಜನ ಬರುತ್ತಾರೆ ಎಂದು ಏಕವಚನದಲ್ಲೇ ಪ್ರಶ್ನಿಸಿ ತರಾಟೆ ತೆಗೆದುಕೊಂಡಿದ್ದಾರೆ.

    ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘದ ಮುಂದಾಳತ್ವದಲ್ಲಿ ಇಂದಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಘಟನೆ ನಡೆದಿದ್ದು, ಇಬ್ಬರ ಜಗಳವನ್ನು ಕಂಡ ಸಂಘದ ಇತರೇ ಸದಸ್ಯರು ಜಗಳ ಬಿಡಿಸಿದ್ದಾರೆ. ಬಳಿಕ ಸ್ಥಳದಿಂದ ರೈತ ಮಹಿಳೆ ಜಯಶ್ರೀ  ತೆರಳಿದ್ದಾರೆ.

    ಬೆಳಗಾವಿ ಅಧಿವೇಶನಕ್ಕೂ ಮುನ್ನ ಜಿಲ್ಲಾ ರೈತ ಸಂಘದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆ ಬಳಿಕ ಸಂಘ ಎರಡು ಬಣಗಳಾಗಿ ವಿಭಜನೆ ಆಗಿದೆ ಎನ್ನಲಾಗಿದೆ. ಅಧಿವೇಶನಕ್ಕೂ ಮುನ್ನ ಕೋಡಿಹಳ್ಳಿ ಚಂದ್ರಶೇಖರ್ ಅವರು ಕೂಡ ಸಂಘದಲ್ಲಿ ಉಂಟಾದ ಬಿರುಕಿನಿಂದ ಅಸಮಾಧಾನಗೊಂಡಿದ್ದರು ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಅಂದು ಉಂಟಾದ ಅಸಮಾಧಾನವೇ ಇಂದು ಸದಸ್ಯರ ನಡುವಿನ ವಾಗ್ವಾದಕ್ಕೆ ಕಾರಣವಾಗಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಹಾರ ರಾಜಕೀಯಕ್ಕಿಂತ ರಾಜ್ಯ ರಾಜಕೀಯ ಕೀಳಾಗಿದೆ: ಕೋಡಿಹಳ್ಳಿ ಟೀಕೆ

    ಬಿಹಾರ ರಾಜಕೀಯಕ್ಕಿಂತ ರಾಜ್ಯ ರಾಜಕೀಯ ಕೀಳಾಗಿದೆ: ಕೋಡಿಹಳ್ಳಿ ಟೀಕೆ

    ಚಿಕ್ಕಬಳ್ಳಾಪುರ: ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳು ಅಸಹ್ಯ ಮೂಡಿಸುತ್ತಿದೆ. ಬಿಹಾರದ ರಾಜಕೀಯಕ್ಕಿಂತ ಕರ್ನಾಟಕ ರಾಜಕೀಯ ಕೀಳಾಗಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಹಾರ ರಾಜಕೀಯಕ್ಕಿಂತ ಕರ್ನಾಟಕದ ರಾಜಕೀಯ ಕೀಳಾಗುತ್ತಿದೆ. ಕರ್ನಾಟಕದಲ್ಲಿ ಶಾಸಕರು ಮೂರನೇ ಹಂತದ ರಾಜಕಾರಣಕ್ಕೆ ಇಳಿದಿದ್ದಾರೆ. ತಮ್ಮ ಶಾಸಕತ್ವವನ್ನು ಮಾರಿಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಇತಿಶ್ರೀ ಹಾಡಲೇ ಬೇಕು, ಇಲ್ಲವಾದಲ್ಲಿ ನಾಡಿಗೆ ಈ ವಿಚಾರ ಕಳಂಕವಾಗಲಿದೆ ಎಂದು ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಏರುಪೇರುಗಳ ಬಗ್ಗೆ ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ ಈ ಬಗ್ಗೆ ಚರ್ಚೆ ನಡೆಸಬೇಕಾದ ಶಾಸಕರು, ಮೂರನೇ ದರ್ಜೆಯ ರಾಜಕಾರಣ ಮಾಡುತ್ತಿರುವುದು ಬೇಸರ ಮೂಡಿಸಿದೆ ಎಂದು ಅಸಮಾಧಾನ ಹೊರಹಾಕಿದರು. ಅಲ್ಲದೇ ರಾಜ್ಯ ರಾಜಕೀಯವನ್ನು ಸರಿಮಾಡಲು ನಾಗರಿಕರು ಯೋಚನೆ ಮಾಡಬೇಕು. ಕೆಟ್ಟ, ಅಸಹ್ಯ ತರಿಸುವ ರಾಜಕಾರಣವನ್ನು ತಡೆಯಲು ನಾಗರಿಕರು ಆಲೋಚನೆ ಮಾಡಬೇಕು. ಇಲ್ಲವಾದಲ್ಲಿ ಇದೇ ಸ್ಥಿತಿ ಮುಂದೆಯೂ ನಡೆಯುತ್ತದೆ. ಹೀಗೆ ನಡೆಯಲು ನಾವು ಬಿಡಬಾರದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕರು ರೆಸಾರ್ಟಿನಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

    ಶಾಸಕರು ರೆಸಾರ್ಟಿನಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

    ರಾಯಚೂರು: ರಾಜ್ಯದ ಶಾಸಕರು ರೆಸಾರ್ಟಿನಲ್ಲಿ ತೋರಿರುವ ವರ್ತನೆಯಿಂದ ರಾಜ್ಯಕ್ಕೆ ಅಪಮಾನವಾಗಿದೆ. ಇನ್ನು ಮುಂದೆ ಶಾಸಕರು ರೆಸಾರ್ಟಿನಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಸೆಗಣಿ ಮುಖಕ್ಕೆ ಎರಚಿ ಪ್ರತಿಭಟನೆ ಮಾಡುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ.

    ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಆದರೆ ರಾಜಕೀಯ ಪಕ್ಷಗಳಿಗೆ ಇಂತಹ ಅಪಮಾನ ಯಾವುದೇ ಆಗುವುದಿಲ್ಲ. ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ರಾಜಕೀಯಕ್ಕಾಗಿ ರೆಸಾರ್ಟ್ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸೆಗಣಿ ಬಳಿಯಲಿದ್ದಾರೆ. ಈ ಮೂಲಕ ಇಂತಹ ಸಭೆಗಳಿಗೆ ಇತಿಶ್ರೀ ಹಾಡುತ್ತೇವೆ ಎಂದರು.

    ಸಿಎಂ ಕುಮಾರಸ್ವಾಮಿ ಅವರೊಂದಿಗೆ ನಾಳೆ ರೈತ ಸಂಘಟನೆಗಳ ಬಜೆಟ್ ಪೂರ್ವ ಸಭೆ ನಿಗದಿಯಾಗಿದೆ. ಮುಂದಿನ ಬಜೆಟ್‍ನಲ್ಲಿ ರೈತರ ಪರ ವಿಚಾರಗಳ ಸೇರ್ಪಡೆಗೆ ಒತ್ತಾಯಿಸಲು ನಿರ್ಧಾರ ಮಾಡಿರುವುದಾಗಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv