Tag: ಕೋಮುಗಲಭೆ

  • ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಿದ ಬಳಿಕ ಬಿ.ಸಿ.ರೋಡ್‌ನಲ್ಲಿ (BC Road) ಮತ್ತೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಮದ್ಯದಂಗಡಿ ಬಂದ್ ಮಾಡುವುದಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ (Mullai Muhilan) ಆದೇಶ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದ.ಕ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

    ಬಂಟ್ವಾಳ (Bantwal) ಪುರಸಭಾ ವ್ಯಾಪ್ತಿಯಲ್ಲಿ 48 ಗಂಟೆಗಳ ಕಾಲ ಮದ್ಯದಂಗಡಿ, ಶೇಂದಿ ಮಾರಾಟದ ಅಂಗಡಿಗಳ ಬಾಗಿಲು ಮುಚ್ಚುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಅಂಗಡಿಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು ಬಿದ್ದಿದೆ. ಇದನ್ನೂ ಓದಿ: ಮಂಗಳವಾರ ಸಚಿವ ಸಂಪುಟ ಸಭೆ – ಇಂದೇ ಕಲಬುರಗಿ ತಲುಪಿದ ಸಿಎಂ

    ಬಜರಂಗದಳ ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಪೊಲೀಸರು ಬಿಗಿ ಬಂದೋಬಸ್ತ್ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ. ಇದನ್ನೂ ಓದಿ: ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್

    ಉದ್ವಿಗ್ನಗೊಂಡಿದ್ದು ಯಾಕೆ?
    ನಾಗಮಂಗಲ (Nagamangala) ಗಲಭೆ ಖಂಡಿಸಿ ಸೆ.12ರಂದು ಮಂಗಳೂರಿನಲ್ಲಿ (Mangaluru) ನಡೆದಿದ್ದ ಪ್ರತಿಭಟನಾ ಭಾಷಣದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಸರ್ಕಾರ ಈದ್ ಮಿಲಾದ್ ಮೆರವಣಿಗೆ ತಡೆಯಬೇಕು. ಇಲ್ಲದಿದ್ದಲ್ಲಿ ಮತ್ತೆ ಇವರು ಗಲಭೆ ನಡೆಸ್ತಾರೆ ಎಂದಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಹಮ್ಮದ್ ಶರೀಫ್ ಹಾಗೂ ಆತನ ಸಹೋದರ ಹಸೀನಾರ್ ತಾಕತ್ ಇದ್ದರೆ ಸೋಮವಾರ ಬಿಸಿ ರೋಡ್‌ನ ಈದ್ ಮಿಲಾದ್ ಮೆರವಣಿಗೆಗೆ ಬನ್ನಿ ಅಂತ ಶರಣ್ ಪಂಪ್ ವೆಲ್‌ಗೆ ಸವಾಲ್ ಹಾಕಿ ಆಡಿಯೋ ಹರಿಯ ಬಿಟ್ಟಿದ್ದರು. ಆಡಿಯೋ ಹರಿ ಬಿಟ್ಟಿದ್ದ ಇಬ್ಬರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಸವಾಲು ಸ್ವೀಕರಿಸಿದ ಬಜರಂಗದಳ-ವಿಎಚ್‌ಪಿ ಇವತ್ತು ಬಿ.ಸಿ.ರೋಡ್ ಚಲೋ ಕರೆ ನೀಡಿತ್ತು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

  • ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ

    ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ

    ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ (Communal Violence) ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ (Nagamangala Violence) ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ (Congress) ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್‌ ಮಾಡಲು ಅರೆಸ್ಟ್‌: ಮುನಿರತ್ನ

    ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ. ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್

    ಮುನಿರತ್ನರನ್ನು ತಕ್ಷಣ ಬಂಧನ ಮಾಡಿದ್ದೇಕೆ?
    ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ (Muniratna) ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲಾ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ

    ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ (BJP) ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ

  • ನಾಗಮಂಗಲ ಕೋಮು ಗಲಭೆ ತಡೆಯೋ ಅವಕಾಶವಿದ್ರೂ ವಿಫಲವಾದ ಇಲಾಖೆಗಳು

    ನಾಗಮಂಗಲ ಕೋಮು ಗಲಭೆ ತಡೆಯೋ ಅವಕಾಶವಿದ್ರೂ ವಿಫಲವಾದ ಇಲಾಖೆಗಳು

    ಬೆಂಗಳೂರು: ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ (Ganesh Procession) ವೇಳೆ ನಡೆದ ಕೋಮು ಗಲಭೆಗೆ ಪೊಲೀಸ್‌ (Police) ಮತ್ತು ಗುಪ್ತಚರ ಇಲಾಖೆ (Intelligence Bureau) ವೈಫಲ್ಯವೇ ಕಾರಣ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

    ಹೌದು. ಕಳೆದ ವರ್ಷವೇ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ನಡೆದಿದ್ದ ಕಾರಣ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಆದರೆ ಮುನ್ನೆಚ್ಚರಿಕೆ ವಹಿಸದ ಕಾರಣ ಈ ಗಲಭೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ವೈಫಲ್ಯ ಹೇಗೆ?
    ನಾಗಮಂಗಲದ ಸ್ಥಿತಿಗತಿ ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ತಿಳಿಯುತ್ತದೆ. ಇದಕ್ಕೆ ಸಾಕ್ಷಿ ಪೆಟ್ರೋಲ್ ಬಾಂಬ್, ಕಲ್ಲು, ತಲವಾರ್‌ಗಳು. ಭಾರೀ ಪ್ರಮಾಣದಲ್ಲಿ ಕಲ್ಲುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಇದರ ಜೊತೆ ಪೆಟ್ರೋಲ್‌ ಬಾಂಬ್‌ ಸಂಗ್ರಹಿಸುವ ಮೂಲಕ ಮೊದಲೇ ಗಲಭೆಗೆ ಬೇಕಾದ ವಸ್ತುಗಳನ್ನು ರಹಸ್ಯವಾಗಿ ಇಟ್ಟುಕೊಂಡಿದ್ದರು. ಜೊತೆಗೆ ಭಾರೀ ಸಂಖ್ಯೆಯಲ್ಲಿ ಯುವಕರು ಮಸೀದಿ ರಸ್ತೆಯಲ್ಲಿ ಸೇರಿದ್ದರು. ಇಷ್ಟೆಲ್ಲಾ ಪೂರ್ವಭಾವಿ ಸಿದ್ಧತೆ ಮಾಡಿದ್ದರೂ ಗುಪ್ತಚರ ಇಲಾಖೆ ಈ ವಿಚಾರ ತಿಳಿಯುವಲ್ಲಿ ವಿಫಲವಾಗಿತ್ತು. ಈ ಪೂರ್ವಭಾವಿ ವಿಚಾರ ಗೊತ್ತಾಗಿದ್ದರೆ ಗಲಭೆಯನ್ನು ಮಟ್ಟ ಹಾಕಬಹುದಿತ್ತು. ಇದನ್ನೂ ಓದಿ: ನಾನಿನ್ನೂ ವೆಬ್‌ಸೀರಿಸ್‌ ನೋಡಿಲ್ಲ, ಮಾಡುವವರು ಸರ್ಕಾರವನ್ನು ಒಳ್ಳೆಯ ರೀತಿಯಲ್ಲಿ ತೋರಿಸಲ್ಲ: ಎಸ್.ಜೈಶಂಕರ್

    ಗಲಭೆಗೂ ಮುನ್ನವೇ ಪೊಲೀಸ್ ಇಲಾಖೆ ಮೈ ಮರೆತಿತ್ತು. ಬದ್ರಿಕೊಪ್ಪಲು ಗ್ರಾಮದಿಂದ ಹೊರಟ ಮೆರವಣಿಗೆ ಮಂಡ್ಯ ವೃತ್ತಕ್ಕೆ ಬಂದಾಗ ಅನ್ಯಕೋಮಿನ ಯುವಕರು ಕ್ಯಾತೆ ಎತ್ತಿದ್ದರು. ಈ ವೇಳೆ ಮೆರವಣಿಗೆಯ ದಾರಿಯನ್ನು ಬದಲಿಸಿದರು. ಈ ಸಂದರ್ಭದಲ್ಲೇ ಪ್ರತಿಭಟನಾ ಯುವಕರಿಗೆ ತಿಳಿ ಹೇಳಬಹುದಿತ್ತು. ಆದರೆ ಪೊಲೀಸರು ಆ ಕೆಲಸ ಮಾಡಿರಲಿಲ್ಲ.

    ಪೊಲೀಸರು ಮತ್ತೆ ಮಸೀದಿ ಇರುವ ರಸ್ತೆಯಲ್ಲಿ ಮೆರವಣಿಗೆಗೆ ಅವಕಾಶ ನೀಡಿದ್ದರು. ಈ ವೇಳೆ ಜೈ ಗಣಪತಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದಾಗಿ ಪ್ರತಿಯಾಗಿ ಅಲ್ಲಾ-ಹು ಅಕ್ಬರ್ ಘೋಷಣೆ ಕೂಗಿ ಕಲ್ಲು ತೂರಿದ್ದಾರೆ.

    ಕಳೆದ ಬಾರಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಯಾವ ದಾರಿಯಲ್ಲಿ ಮೆರವಣಿಗೆ ಹೋಗುತ್ತದೆ? ಎಷ್ಟು ಪೊಲೀಸರನ್ನು ಭದ್ರತೆಗೆ ನಿಯೋಜಿಸಬೇಕು ಎನ್ನುವುದು ತಿಳಿದಿರಬೇಕಿತ್ತು. ಎರಡನೆಯದಾಗಿ ಪ್ರತಿಭಟನಾ ಯುವಕರಿಗೆ ಪೊಲೀಸರು ತಿಳಿ ಹೇಳಬೇಕಿತ್ತು. ಪೊಲೀಸರು ಈ ಎರಡು ಕೆಲಸ ಸರಿಯಾಗಿ ಮಾಡಿದ್ದರೆ ಗಲಭೆ ಆಗುತ್ತಿರಲಿಲ್ಲ ಎಂಬ ಮಾತು ಕೇಳಿ ಬಂದಿದೆ.

    ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್‌ ಅಧಿಕಾರಿ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ಅವರನ್ನು ಎತ್ತಗಂಡಿ ಮಾಡಲಾಗಿದೆ. ಇದರ ಜೊತೆ ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ (Ashok Kumar) ಅವರನ್ನು ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಅಮಾನತು ಮಾಡಿ ಆದೇಶ ಪ್ರಕಟಿಸಿದ್ದಾರೆ.

     

  • ಕಲ್ಲು ತೂರಾಟ, ತಲವಾರ್‌ ಪ್ರದರ್ಶನ, ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ – ನಾಗಮಂಗಲ ಧಗಧಗಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ಸುದ್ದಿ

    ಕಲ್ಲು ತೂರಾಟ, ತಲವಾರ್‌ ಪ್ರದರ್ಶನ, ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ – ನಾಗಮಂಗಲ ಧಗಧಗಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ಸುದ್ದಿ

    ಮಂಡ್ಯ: ಉದ್ರಿಕ್ತರ ಕಿಚ್ಚಿಗೆ ನಾಗಮಂಗಲ (Nagamangala) ಉದ್ವಿಘ್ನಗೊಂಡಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಶನಿವಾರದವರೆಗೆ 144 ಸೆಕ್ಷನ್‌ ಹಾಕಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ.

    ಅಷ್ಟಕ್ಕೂ ಈ ಗಲಾಟೆ ನಡೆದಿದ್ದು ಹೇಗೆ? ಶಾಂತವಾಗಿದ್ದ ನಾಗಮಂಗಲ ಧಗಧಗಿಸಿದ್ದು (Communal Violence) ಹೇಗೆ ಎನ್ನುವುದರ ಸಂಪೂರ್ಣ ವಿವರವವನ್ನು ಇಲ್ಲಿ ನೀಡಲಾಗಿದೆ.

    ಮೆರವಣಿಗೆ ಆರಂಭ
    ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಮೆರವಣಿಗೆ (Ganpati Idol Procession) ಮೂಲಕ ತರಲಾಗುತ್ತಿತ್ತು. ಅದ್ದೂರಿ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆಗೆ ಆಯೋಜಕರು ಸಜ್ಜಾಗಿದ್ದರು.

    ಕಲ್ಲು ತೂರಾಟ ಆರಂಭ
    ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬರುತ್ತಿದ್ದಂತೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ದರ್ಗಾ ಬಳಿ ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಮಾಡಿ ಕಲ್ಲು ತೂರಿದ್ದಾರೆ. ಈ ವೇಳೆ ಎರಡು ಗುಂಪಿನ ಯುವಕರ ಮಧ್ಯೆ ವಾಕ್ಸಮರ ಶುರುವಾಗಿದೆ. ನೋಡನೋಡುತ್ತಿದ್ದಂತೆ ತಳ್ಳಾಟ, ನೂಕಾಟ ನಡೆದಿದೆ.

    ಗಣೇಶ ಮೂರ್ತಿ ನಿಲ್ಲಿಸಿ ಪ್ರತಿಭಟನೆ
    ಕಿಡಿಗೇಡಿಗಳ ಕೃತ್ಯ ಖಂಡಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿಯನ್ನು ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಬೇಕು, ಕ್ರಮ ಜರುಗಿಸಬೇಕು ಅಂತ ಆಗ್ರಹಿಸಿದ್ದಾರೆ.  ಇದನ್ನೂ ಓದಿ: ನಾಗಮಂಗಲದಲ್ಲಿ 144 ಸೆಕ್ಷನ್‌ ಜಾರಿ – ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ

    ತಲವಾರ್ ಪ್ರದರ್ಶನ
    ಈ ಸಂದರ್ಭದಲ್ಲಿ ಕಿಡಿಗೇಡಿಗಳ ಗುಂಪು ತಲವಾರ್ ಪ್ರದರ್ಶಿಸಿ, ಜೀವ ಬೆದರಿಕೆ ಹಾಕಿದೆ. ದರ್ಗಾ ಬಳಿ ಗಣೇಶ ಮೆರವಣೆಗೆ ಬಂದರೆ ನಿಮ್ಮನ್ನು ಉಳಿಸುವುದಿಲ್ಲ ಎಂಬಂತೆ ಜೀವ ಬೆದರಿಕೆ ಹಾಕಿ ತಲವಾರ್‌ಗಳನ್ನು ತೋರಿಸಿದ್ದಾರೆ.

    ಘರ್ಷಣೆ; ಲಾಠಿ ಚಾರ್ಜ್
    ಯಾವಾಗ ತಲವಾರ್ ಪ್ರದರ್ಶಿಸಿ ಕಿರಿಕ್‌ ಮಾಡಿದರೋ ಆಗ ಎರಡು ಗುಂಪಿನ ಯುವಕರ ಮಧ್ಯೆ ಘರ್ಷಣೆ ಶುರುವಾಗಿ ಪರಸ್ಪರ ಹೊಡೆದಾಟ ನಡೆದಿದೆ. ಘಟನಾ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು ಜಮಾಯಿಸಿದ್ದರಿಂದ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

    ಮತ್ತೆ ಕಲ್ಲು ತೂರಾಟ, ಪೋಲಿಸರಿಗೂ ಗಾಯ
    ಲಾಠಿ ಚಾರ್ಜ್ ಆದ ಬಳಿಕ ಮತ್ತೆ ಕಿಡಿಗೇಡಿಗಳ ಗ್ಯಾಂಗ್ ಕಲ್ಲು ತೂರಾಟ ನಡೆಸಿ ಉದ್ದಟತನ ಮೆರೆದಿದೆ. ಕಲ್ಲು ತೂರಾಟದ ವೇಳೆ ಪೊಲೀಸ್ ಕಾನ್‌ಸ್ಟೇಬಲ್‌ ಅವರಿಗೂ ಗಾಯಗಳಾಗಿವೆ. ಇದನ್ನೂ ಓದಿ: ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ತಲವಾರ್ ವಶಕ್ಕೆ
    ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಕಿಡಿಗೇಡಿಗಳ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಬಳಿಕ ಅವರ ಬಳಿಯಿದ್ದ ತಲವಾರ್‌ ಅನ್ನು ವಶಕ್ಕೆ ಪಡೆದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಿದರು.

    ಅಂಗಡಿಗಳ ಮೇಲೆ ಕಲ್ಲು:
    ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ ಎನ್ನುವಷ್ಟರಲ್ಲಿ ಉದ್ರಿಕ್ತರ ಗುಂಪಿನಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿ ಮತ್ತೆ ಕಿಡಿಗೇಡಿ ಕೃತ್ಯಕ್ಕೆ ಮುಂದಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಿಡಿಗೇಡಿಗಳು ಸೇರಿದ ನಂತರ ಅಲ್ಲೇ ಇದ್ದ ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರು ನಿರಂತರವಾಗಿ ಕಲ್ಲು ತೂರಾಟ ನಡೆಸುವ ಮೂಲಕ ಗಲಭೆಯನ್ನು ಮತ್ತಷ್ಟು ಜಾಸ್ತಿ ಮಾಡಿದ್ದಾರೆ.

    ಪೆಟ್ರೋಲ್ ಬಾಂಬ್ ದಾಳಿ
    ಕಲ್ಲು ತೂರಾಟ ನಡೆಸುವುದರ ಜೊತೆ ಕಿಡಿಗೇಡಿ ಯುವಕರು ಪೆಟ್ರೋಲ್ ಬಾಂಬ್ ದಾಳಿ ಮಾಡಿ, ಅಂಗಡಿಗಳಿಗೆ ವಾಹನಗಳಿಗೂ ಬೆಂಕಿ ಹಚ್ಚಿ ಕ್ರೌರ್ಯ ಮೆರೆದಿದ್ದಾರೆ. ಇದರ ಜೊತೆಗೆ ಅಲ್ಲೇ ಇದ್ದ ಗುಜರಿ ಅಂಗಡಿಯೊಂದು ಕಿಡಿಗೇಡಿಗಳ ಅಟ್ಟಹಾಸಕ್ಕೆ ಸುಟ್ಟು ಭಸ್ಮವಾಗಿದೆ.

    ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ
    ಅಂಗಡಿ, ಮುಂಗಟ್ಟು ಮಾತ್ರವೇ ಅಲ್ಲ, ರಸ್ತೆಯಲ್ಲಿ ಸಿಕ್ಕ-ಸಿಕ್ಕ ವಾಹನಗಳ ಮೇಲೂ ಪೆಟ್ರೋಲ್ ಬಾಂಬ್ ದಾಳಿ ಮಾಡಿದ್ದಾರೆ. ನೋಡನೋಡುತ್ತಿದ್ದಂತೆ ಅಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿದೆ.

    ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿ
    ಇಷ್ಟೆಲ್ಲಾ ಘಟನೆ ನಂತರ ನಾಗಮಂಗಲದಲ್ಲಿ ಉದ್ವಿಗ್ನ ವಾತಾವರಣ ಮತ್ತಷ್ಟು ಹೆಚ್ಚಾಯಿತು. ಎತ್ತ ನೋಡಿದರೂ ಬೆಂಕಿಯ ಜ್ವಾಲೆ ಜೋರಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಇದನ್ನೂ ಓದಿ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್‌ಡಿಕೆ ಬೇಸರ

     

    ಬಿಲ್ಡಿಂಗ್ ಒಳಗಡೆಯಿಂದ ಕಲ್ಲು ತೂರಾಟ
    ಇದಾದ ಬಳಿಕ ಮತ್ತೆ ಬಿಲ್ಡಿಂಗ್ ಒಳಗಡೆಯಿಂದ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಒಬ್ಬೊಬ್ಬರಾಗಿ ಹಿಂದೂ ಯುವಕರ ಮೇಲೆ ಕಲ್ಲಿನ ದಾಳಿಯೇ ಮಾಡುತ್ತಾರೆ. ಶಾಂತವಾಗಿದ್ದ ಯುವಕರ ಮೇಲೆ ಮತ್ತೆ ಕಲ್ಲು ತೂರಾಟ ಮಾಡುವ ಮೂಲಕ ಪರಿಸ್ಥಿತಿಯನ್ನು ಮತ್ತೆ ಉದ್ವಿಗ್ನ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಾರೆ.

    ವಾಹನಗಳ ಮೇಲೆ ರಾಡ್‌ನಿಂದ ದಾಳಿ
    ಇದಷ್ಟೆ ಅಲ್ಲದೆ ರಸ್ತೆ ಬದಿ ನಿಂತಿದ್ದ ವಾಹನಗಳ ಮೇಲೂ ರಾಡ್‌ನಿಂದ ದಾಳಿ ಮಾಡಿ ಜಖಂಗೊಳಿಸುತ್ತಾರೆ. ಕಾರು, ಬೈಕ್, ಸ್ಕೂಟರ್‌ಗಳ ಮೇಲೆ ದಾಳಿ ಮಾಡುತ್ತಾರೆ. ಮತ್ತೆ ಉದ್ದಟತನ ಪ್ರದರ್ಶಿಸಿದ ಗ್ಯಾಂಗ್ ಹಿಂದೂಗಳ ವಾಹನಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಾರೆ. ಅಲ್ಲದೇ ಹಿಂದೂ ಯುವಕರ ಮೇಲೂ ಹಲ್ಲೆ ಮಾಡಿದ್ದಾರೆ. ಈ ವೇಳೆ ಕೆಲ ಯುವಕರಿಗೆ ಗಾಯಗಳಾದ ಘಟನೆಯೂ ನಡೆದಿದೆ.

    ಪೊಲೀಸ್ ಭದ್ರತೆ ಹೆಚ್ಚಳ
    ಪರಿಸ್ಥಿತಿಯನ್ನು ನಿಯಂತ್ರಣ ಮಾಡಲೇಬೇಕು ಎಂದು ಪಣತೊಟ್ಟ ಖಾಕಿ ಟೀಂ ಭದ್ರತೆ ಹೆಚ್ಚಳ ಮಾಡಿ ನಾಗಮಂಗಲಕ್ಕೆ ಬರುವ ನಾಲ್ಕು ದಿಕ್ಕಿನಲ್ಲೂ ವಾಹನಗಳನ್ನ ತಡೆದು, ನಾಗಮಂಗಲಕ್ಕೆ ಎಂಟ್ರಿಕೊಡಂತೆ ವಾರ್ನ್ ಮಾಡಿ ನಾಕಬಂದಿ ಹಾಕ್ತಾರೆ.

    ಮತ್ತೆ ಲಾಠಿ ಚಾರ್ಜ್; ಪರಿಸ್ಥಿತಿ ಕಂಟ್ರೋಲ್
    ಯಾವಾಗ ಪೊಲೀಸ್ ಭದ್ರತೆ ಹೆಚ್ಚಾಗುತ್ತದೋ ಅವಾಗ ಅಸಲಿ ಆಟಕ್ಕೆ ಬ್ರೇಕ್ ಬಿತ್ತು. ಫೀಲ್ಡ್‌ಗೆ ಇಳಿದ ಪೊಲೀಸರು ಗಲ್ಲಿಗಲ್ಲಿಗೂ ನುಗ್ಗಿ ಕಿಡಿಗೇಡಿಗಳ ಮೇಲೆ ಲಾಠಿ ಚಾರ್ಜ್ ಮಾಡುವ ಮೂಲಕ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುತ್ತಾರೆ.

    ಹಣ್ಣುಗಳ ಅಂಗಡಿ ಚೆಲ್ಲಾಪಿಲ್ಲಿ
    ಅನ್ಯಕೋಮಿನ ಕಿಡಿಗೇಡಿಗಳ ಅಟ್ಟಹಾಸ ಹೇಗಿತ್ತು ಅಂದರೆ ಹಣ್ಣುಗಳ ಅಂಗಡಿಗಳ ಮೇಲೂ ದಾಳಿ ಮಾಡಿದ್ದಾರೆ. ಹಣ್ಣುಗಳೆಲ್ಲಾ ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

    ಎಸ್‌ಪಿ, ಡಿಸಿ, ಐಜಿಪಿ ಭೇಟಿ, ರೌಂಡ್ಸ್
    ಇದಾದ ಬಳಿಕ ಘಟನಾ ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ, ಐಜಿಪಿ ಬೋರಲಿಂಗಯ್ಯ ಸೇರಿದಂತೆ ಜಿಲ್ಲಾಧಿಕಾರಿ ಕೂಡ ಭೇಟಿ ಕೊಟ್ಟು ನಾಗಮಂಗಲ ಪಟ್ಟಣವನ್ನು ಒಂದು ರೌಂಡ್ಸ್ ಹಾಕಿ ಪರಿಶೀಲನೆ ನಡೆಸುತ್ತಾರೆ.

    ಠಾಣೆ ಪಕ್ಕದ ಅಂಗಡಿಗೆ ಬೆಂಕಿ
    ಪೊಲೀಸರು ರೌಂಡ್ಸ್ ಹಾಕಿ ತೆರಳಿದ ಬಳಿಕವೂ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಅಂಗಡಿಗೆ ಬೆಂಕಿ ಹಚ್ಚಿ ಉದ್ದಟತನ ಮೆರೆದಿದ್ದಾರೆ.

     

  • ನಾಗಮಂಗಲದಲ್ಲಿ 144 ಸೆಕ್ಷನ್‌ ಜಾರಿ – ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ

    ನಾಗಮಂಗಲದಲ್ಲಿ 144 ಸೆಕ್ಷನ್‌ ಜಾರಿ – ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ

    ಮಂಡ್ಯ: ಗಣೇಶ ವಿಸರ್ಜನೆ ವೇಳೆ (Ganpati Idol Procession) ಕೋಮುಗಲಭೆ (Communal Violence) ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ (Nagamangala town) 144 ಸೆಕ್ಷನ್‌ ಜಾರಿ ಮಾಡಲಾಗಿದೆ.

    ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ. ಇದನ್ನೂ ಓದಿ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್‌ಡಿಕೆ ಬೇಸರ

     

    ನಾಗಮಂಗಲ ಬಂದ್‌: ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್‌ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರೇ ಹಿಂದೂಪರ ಸಂಘಟನೆಗಳು  ಕರೆ ನೀಡಿವೆ.

  • ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸಂಚು – ವಾಟ್ಸಪ್ ಚಾಟ್ ಹಂಚಿಕೊಂಡ ಬಿ.ಕೆ ಹರಿಪ್ರಸಾದ್

    ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸಂಚು – ವಾಟ್ಸಪ್ ಚಾಟ್ ಹಂಚಿಕೊಂಡ ಬಿ.ಕೆ ಹರಿಪ್ರಸಾದ್

    -ದೇಶದ್ರೋಹ ಕೇಸ್ ಹಾಕಲು ಒತ್ತಾಯ

    ಬೆಂಗಳೂರು: ಅಯೋಧ್ಯೆಗೆ ಹೋಗೋರಿಗೆ ರಕ್ಷಣೆ ಕೊಡ್ಬೇಕು, ಇಲ್ಲದಿದ್ದರೆ ಗೋಧ್ರಾ ಮಾದರಿ ಘಟನೆ ಆಗಬಹುದು ಎಂದಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad), ಮತ್ತೆ ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ.

    ರಾಷ್ಟ್ರ ರಕ್ಷಣಾ ಪಡೆ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಪುನಿತ್ ಕೆರೆಹಳ್ಳಿ ಹಾಕಿದ್ದಾರೆ ಎನ್ನಲಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ, ಕರ್ನಾಟಕದಲ್ಲಿ ಕೋಮು ಗಲಭೆ ಎಬ್ಬಿಸೋಕೆ ಬಿಜೆಪಿ (BJP) ನಮಗೆ ಬೆಂಬಲ ಕೊಟ್ಟಿದೆ. ಆದ್ದರಿಂದ ಎಲ್ಲಾ ಕಾರ್ಯಕರ್ತರು ರೆಡಿ ಆಗಿ ಇರಿ. ಎಲ್ಲಿ ಏನು ಮಾಡ್ಬೇಕು ಅನ್ನೋದನ್ನು ನಾವು ಈ ಗ್ರೂಪ್ ಮೂಲಕ ಮಾಹಿತಿ ಕೊಡ್ತೀವಿ. 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಬರಹವಿದೆ. ಇದನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಎಲ್ಲಾ ಜೈಲುಗಳಲ್ಲೂ ರಾಮಮಂದಿರ ಉದ್ಘಾಟನೆ ನೇರಪ್ರಸಾರ

    ಕೋಮುಗಲಭೆಗೆ (Communal Riots) ಬಿಜೆಪಿ ತನ್ನ ಸಹೋದರ ಸಂಘಟನೆಗಳನ್ನು ರೆಡಿ ಮಾಡ್ತಿರೋದು ಇದರಿಂದ ಗೊತ್ತಾಗುತ್ತೆ. ರೌಡಿಶೀಟರ್ ಪುನಿತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿ ಕೋಮುಗಲಭೆ ನಡೆಸುವ ಫತ್ವಾ ನೀಡಿದೆ. ವಿಶ್ವಗುರುವನ್ನು ಮತ್ತೆ ಪ್ರಧಾನಿ ಮಾಡಲು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ಸಮಾಜಘಾತುಕರಿಗೆ ಇಡೀ ಬಿಜೆಪಿ ಬೆಂಬಲ ನೀಡ್ತಿದೆ ಅನ್ನೋದು ಜಗಜ್ಜಾಹೀರಾಗ್ತಿದೆ. ಕೂಡಲೇ ಸರ್ಕಾರ ಇಂತಹ ಶಕ್ತಿಗಳನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

    ಇಂತಹವರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಆದ್ರೆ, ಇದು ಸುಳ್ಳು, ಇದು ತಿರುಚಿದ ಪೋಸ್ಟ್, ಬಿ.ಕೆ ಹರಿಪ್ರಸಾದ್ ವಿರುದ್ಧ ದೂರು ಕೊಡುತ್ತೇನೆ ಎಂದು ಪುನೀತ್ ಕೆರೆಹಳ್ಳಿ ಹೇಳಿದ್ದಾರೆ. ಇದನ್ನೂ ಓದಿ: ಆದಿತ್ಯ-L1 ಮಿಷನ್‌ ಸಕ್ಸಸ್‌; ನಿಗದಿತ ಕಕ್ಷೆ ತಲುಪಿದ ನೌಕೆ – ISRO ಸಾಧನೆಗೆ ಮೋದಿ ಮೆಚ್ಚುಗೆ

  • ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಬೆಂಗಳೂರು: ಶಿವಮೊಗ್ಗ (Shivamogga) ಕೋಮುಗಲಭೆ (Communal Riots) ಪ್ರಕರಣದಲ್ಲಿ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದ್ದು, ಸದ್ಯ ಶಿವಮೊಗ್ಗ ಶಾಂತಿಯುತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ರಾಗಿಗುಡ್ಡದಲ್ಲಿ (Ragigudda) ಈ ಘಟನೆ ನಡೆದಿದ್ದು, ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಕಲ್ಲು ತೂರಾಟ ಮಾಡಿದವರು, ಗಲಾಟೆ ಮಾಡಿದ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದೆ. ಅವರ ಮೇಲೆ ಮೊಕದ್ದಮೆ ಹಾಕಲಾಗಿದೆ. ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲ್ಲು ಎಸೆಯೋದು ಕಾನೂನು ಬಾಹಿರ ಚಟುವಟಿಕೆ. ಇಂತಹ ಘಟನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇಂತಹ ಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

    ಶಿವಮೊಗ್ಗ ಈಗ ಸಂಪೂರ್ಣ ನಿಯಂತ್ರಣದಲ್ಲಿ ಇದೆ. ಶಿವಮೊಗ್ಗ ಶಾಂತಿಯುತವಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಶಾಂತಿ ಕಾಪಾಡಿ ಎಂದು ನಾನು ಮನವಿ ಮಾಡುತ್ತೇನೆ. ಶಾಂತಿ ಕಾಪಾಡಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.  ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫೇಮಸ್ ಆಗ್ಬೇಕು ಅಂತ ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಾಲಕ

    ಫೇಮಸ್ ಆಗ್ಬೇಕು ಅಂತ ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಾಲಕ

    ಮಂಗಳೂರು: ಇತ್ತೀಚೆಗೆ ದೇಶದ ನಾನಾಕಡೆ ಹಿಂದೂ ಮುಸ್ಲಿಮರ ನಡುವೆ ಒಂದಿಲ್ಲೊಂದು ವಿಚಾರಗಳಿಗೆ ಕೋಮುಗಲಭೆ ನಡೆಯುತ್ತಲೇ ಇದೆ. ಆದರೆ ಇಲ್ಲೊಬ್ಬ 13 ವರ್ಷದ ಬಾಲಕ ದಿಢೀರ್ ಫೇಮಸ್ ಆಗಬೇಕು ಅಂತ ಸಿನಿಮೀಯ ರೀತಿಯಲ್ಲೇ ಕಥೆ ಕಟ್ಟಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದಾನೆ.

    `ನಾನು ಮದರಸಾನಿಂದ ಬರುತ್ತಿದ್ದೆ. ಆಗ ಬೈಕ್‌ನಲ್ಲಿ ಕೇಸರಿ ಶಾಲು ಧರಿಸಿ ಬಂದಿದ್ದ ಇಬ್ಬರು ನನ್ನ ಮೇಲೆ ಹಲ್ಲೆ ಮಾಡಿದ್ರು’ ಎಂದು ಸಿನಿಮೀಯ ಮಾದರಿಯಲ್ಲಿ ಕಥೆ ಹೆಣೆದಿದ್ದಾನೆ. ಈ ಮೂಲಕ ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸಿ ತನಿಖೆ ಬಳಿಕ ಪೊಲೀಸರಿಗೆ ತಗ್ಲಾಕ್ಕೊಂಡಿದ್ದಾನೆ. ಇದನ್ನೂ ಓದಿ: 4 ರಾಜ್ಯಗಳಲ್ಲಿ 9 ಎಫ್‌ಐಆರ್ – ಬಿಜೆಪಿ ಮಾಜಿ ವಕ್ತಾರೆ ನೂಪುರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇಕೆ?

    ಹೌದು. 13 ವರ್ಷದ ಬಾಲಕನೊಬ್ಬ ತನ್ನ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ಶಾಲೆಯಲ್ಲಿ, ಮನೆಯಲ್ಲಿ ಯಾರೂ ನನ್ನ ಬಗ್ಗೆ ಮುತುವರ್ಜಿ ವಹಿಸುತ್ತಿಲ್ಲ, ಶಾಲೆಯಲ್ಲಿ ಕಲಿತ ಪಾಠ ತಲೆಗೆ ಹತ್ತುತ್ತಿಲ್ಲ’ ಎಂದು ದಿಢೀರ್ ಫೇಮಸ್ ಆಗ್ಬೇಕು ಅಂತ ಮುಂದಾಗಿ ಈ ರೀತಿ ಕಥೆ ಕಟ್ಟಿದ್ದಾನೆ. ಪೊಲೀಸರು ವೈದ್ಯರು ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳ ಮುಂದೆ ಬಾಲಕನನ್ನು ತನಿಖೆಗೆ ಒಳಪಡಿಸಿದಾಗ ಈ ಸತ್ಯ ಬಯಲಾಗಿದೆ. ಬಾಲಕ ಹೇಳಿದ್ದಷ್ಟೂ ಕಟ್ಟು ಕಥೆ ಎಂಬುದು ಗೊತ್ತಾಗಿದೆ.

    CRIME

    ಏನಿದು ಘಟನೆ?
    ಮದರಸಾದಲ್ಲಿ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯೊಬ್ಬ ಮದರಸಾದಿಂದ ಬರುವಾಗ ಬೈಕ್‌ನಲ್ಲಿ ಕೇಸರಿ ಶಾಲು ಧರಿಸಿ ಬಂದ ಇಬ್ಬರು ಹಲ್ಲೆ ಮಾಡಿದ್ರು ಎಂದು ಹೇಳಿಕೊಂಡಿದ್ದಾನೆ. ಕಳೆದ ಜೂನ್ 27ರಂದು ಮಂಗಳೂರು ನಗರ ಹೊರವಲಯದ ಕಾಟಿಪಳ್ಳದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸರ್ಕಾರಿ ದುಡ್ಡು, ಫ್ಯಾಮಿಲಿ ಟ್ರಿಪ್- ಅಧ್ಯಯನ ಹೆಸರಲ್ಲಿ ಶಾಸಕರ ಲಡಾಕ್ ಜಾಲಿ ರೈಡ್

    ಕೇಸರಿ ಶಾಲು ಧರಿಸಿ ಬಂದು ಹಲ್ಲೆ ಮಾಡಿದ್ರು ಅಂತ ತಾನೇ ಕಥೆ ಕಟ್ಟಿದ್ದಾನೆ. ಹಲ್ಲೆ ಮಾಡಿದ್ದಾರೆ ಅಂತ ಹಲ್ಲೆ ಮಾಡಿದರು ಅಂತ ಮಸೀದಿ ಉಸ್ತಾದ್ ಗಳಿಗೆ ದೂರು ನೀಡಿದ್ದಾನೆ. ದೂರು ನೀಡುವ ಮುನ್ನ ಪೆನ್‌ನಿಂದ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ಬಂದಿದ್ದಾನೆ. ಇದೇ ವಿಚಾರವನ್ನು ಮುಂದಿಟ್ಟು ಎಲ್ಲರ ಗಮನ ಸೆಳೆಯಲು ಮುಂದಾಗಿದ್ದಾನೆ. ಆದರೆ ಸೂಕ್ಷ್ಮಪ್ರದೇಶವಾಗಿದ್ದ ಮಂಗಳೂರಿನಲ್ಲಿ ಬಾಲಕನ ಹಲ್ಲೆ ವಿಚಾರ ಆತಂಕ ಮೂಡಿಸಿತ್ತು. ಪೊಲೀಸರು ಬಾಲಕನನ್ನು ತನಿಖೆಗೆ ಒಳಪಡಿಸಿದಾಗ ಅದು ಕಟ್ಟುಕಥೆ ಎಂಬುದು ಬಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Live Tv

  • ಕೋಮು ಗಲಭೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ರಕ್ಷಣೆ ನೀಡಲ್ಲ: ಮುನೇನಕೊಪ್ಪ

    ಕೋಮು ಗಲಭೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ರಕ್ಷಣೆ ನೀಡಲ್ಲ: ಮುನೇನಕೊಪ್ಪ

    ರಾಯಚೂರು: ಕೋಮುಗಲಭೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ರಕ್ಷಣೆ ಕೊಡುವುದಿಲ್ಲ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶ ಭಾವೈಕ್ಯತೆ ನಾಡು. ಕೋಮುಗಲಭೆ ಮಾಡುವ ಎಂಥಹದ್ದೇ ಶಕ್ತಿ ಇದ್ದರೂ ಅದನ್ನು ಮಟ್ಟ ಹಾಕುವ ಕೆಲಸ ಸರ್ಕಾರ ಮಾಡುತ್ತದೆ ಎಂದ ಅವರು, ಕೋಮು ಗಲಭೆ ಆದರೆ ಬಿಜೆಪಿಗೆ ಲಾಭ ಆಗುತ್ತದೆ ಎಂದು ಹೇಳಿದ್ದ ಈಶ್ವರ ಖಂಡ್ರೆಗೆ ತಿರುಗೇಟು ನೀಡಿದರು. ರಾಜಕಾರಣವನ್ನು ಚುನಾವಣೆ ಸಂದರ್ಭದಲ್ಲಿ ಮಾಡಲಿ ಈಗಲ್ಲ ಎಂದರು.

    ಜನರ ಮಧ್ಯೆ ಈ ರೀತಿಯ ಕೋಮು ಸಂಘರ್ಷ ಹಚ್ಚುವುದು ಸರಿಯಾದದ್ದಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ. ನಾವೊಂದು ಪಕ್ಷದಲ್ಲಿದ್ದೇವೆ. ಚುನಾವಣೆ ಬಂದಾಗ ರಾಜಕೀಯ ಮಾಡಲಿ, ರಾಜ್ಯ ಮತ್ತು ದೇಶದ ಶಾಂತಿಯಿಂದ ಇರಬೇಕು ಎನ್ನುವುದನ್ನು ಬಯಸುತ್ತೇವೆ. ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: CFI, PFI ಸಂಘಟನೆಗಳೇ ಮಕ್ಕಳ ಭವಿಷ್ಯ ಹಾಳಾಗೋದಕ್ಕೆ ಕಾರಣ: ಬಿ.ಸಿ.ನಾಗೇಶ್

    ಕೋಮುಗಲಭೆಗೆ ಕಾರಣರಾದವರ ಮೇಲೆ ರಾಜ್ಯದಲ್ಲಿ ಬುಲ್ಡೋಜರ್ ಸಂಸ್ಕೃತಿ ತರಲು ಸರ್ಕಾರ ಮುಂದಾಗಿದೆಯಾ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮುಖ್ಯಮಂತ್ರಿಗಳು ಬಹಳ ತಿಳುವಳಿಕೆ ಇರುವಂತರು. ಮುಖ್ಯಮಂತ್ರಿಗಳು ತುಂಬಾ ಅನುಭವ ಇರುವಂತವರು. ಮುಖ್ಯಮಂತ್ರಿಗಳು ಒಂದು ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳು ಮತ್ತು ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ: ಪ್ರವೀಣ್ ಸೂದ್

  • ಪ್ರಾಣ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ಪೊಲೀಸ್ ಪೇದೆ: ಫೋಟೋ ವೈರಲ್

    ಪ್ರಾಣ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ಪೊಲೀಸ್ ಪೇದೆ: ಫೋಟೋ ವೈರಲ್

    ಜೈಪುರ್: ಪೊಲೀಸ್ ಪೇದೆಯೊಬ್ಬರು ಗಲಭೆಕೋರರು ಸುಟ್ಟುಹಾಕಿದ ಸುಡುವ ಕಟ್ಟಡಗಳ ಹಿಂದಿನ ಕಿರಿದಾದ ಕಾಲುದಾರಿಯ ಮೂಲಕ ಮಗುವೊಂದನ್ನು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ರಾಜಸ್ಥಾನದ ಕರೌಲಿಯಲ್ಲಿ ನಡೆದಿದೆ.

    31 ವರ್ಷ ವಯಸ್ಸಿನ ಪೇದೆ ನೇತ್ರೇಶ್ ಶರ್ಮಾ ಕೋಮು ಗಲಭೆ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇಡೀ ಊರಿಗೆ ಬೆಂಕಿ ಬಿದ್ದಿತ್ತು. ಆಗ ಒಂದು ಮನೆಯೊಳಗೆ ಇಬ್ಬರು ಮಹಿಳೆಯರು ಬೆಂಕಿಯಲ್ಲಿ ಸಿಲುಕಿದ್ದರು. ಅವರ ಜೊತೆಗೆ ಒಂದು ಮಗುವೂ ಇತ್ತು. ಈ ವೇಳೆ ಶರ್ಮಾ ಅವರು ಮಗುವನ್ನು ಒಂದು ಬಟ್ಟೆಯಲ್ಲಿ ಸುತ್ತಿಕೊಂಡು ಅದನ್ನು ತನ್ನ ಎದೆಗೆ ಅಪ್ಪಿಕೊಂಡು ಸುರಕ್ಷಿತ ಪ್ರದೇಶಕ್ಕೆ ತಲುಪಿಸಲು ಓಡಿದರು. ಆ ವೇಳೆ ತೆಗೆದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

    ಘಟನೆ ಕುರಿತ ಈ ಚಿತ್ರವನ್ನು ಐಪಿಎಸ್ ಅಧಿಕಾರಿ ಸುಕೀರ್ತಿ ಮಾಧವ್ ಮಿಶ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಮೂಲ್ಯವಾದ ಜೀವವೊಂದನ್ನು ಉಳಿಸಿದ್ದಕ್ಕಾಗಿ ಪೋಲೀಸ್ ಪೇದೆ ನೇತ್ರೇಶ್ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಸಕಾಲ ಯೋಜನೆಯಲ್ಲಿ ಶೀಘ್ರವೇ ತತ್ಕಾಲ್ ಸೇವೆ- ಬಿ.ಸಿ. ನಾಗೇಶ್

    ಶನಿವಾರ ರಾಜಸ್ಥಾನದ ಕರೌಲಿ ಪ್ರದೇಶದಲ್ಲಿ ನಡೆದ ಕೋಮುಗಲಭೆಯ ಸಂದರ್ಭದಲ್ಲಿ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ. ಏಪ್ರಿಲ್ 2 ರಂದು ರಾಜಸ್ಥಾನದ ಕರೌಲಿಯಲ್ಲಿ ಧಾರ್ಮಿಕ ಮೆರವಣಿಗೆಯ ಭಾಗವಾಗಿ ತೆಗೆದ ಮೋಟಾರ್‌ ಸೈಕಲ್ ರ್‍ಯಾಲಿ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದರಿಂದ ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 42 ಜನರು ಗಾಯಗೊಂಡಿದ್ದಾರೆ.

    ಹಿಂದೂ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮೋಟಾರ್ ಬೈಕ್ ರ್ಯಾಲಿಯೊಂದನ್ನು ಎರ್ಪಡಿದ್ದರು. ರ್‍ಯಾಲಿಯಲ್ಲಿ ಉಂಟಾದ ಹಿಂಸಾಚಾರವು ಗಲಭೆಕೋರರಿಂದ ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇಲ್ಲಿಯವರೆಗೆ 30 ಜನರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ ತಿಳಿಸಿದ್ದಾರೆ.