Tag: ಕೋಮುಗಲಭೆ

  • ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

    ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

    ಮಂಗಳೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಮಂಗಳವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆದಿತ್ತು. ಇದರ ಬೆನ್ನಲ್ಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಪ್ರತಿಭಟನೆ ನಡೆಸದಂತೆ ಸೆಕ್ಷನ್ 144 ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: 5 ತಿಂಗಳ ಗರ್ಭಿಣಿ ಪತ್ನಿಯನ್ನು ನೀರಿನಲ್ಲಿ ಮುಳುಗಿಸಿ ಕೊಂದ ಪತಿ

    ನಮಗೂ ಸಂಬಂಧವಿಲ್ಲ: ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್ ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದಾರೆ.

    ಪಿಎಫ್‍ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಮಾತನಾಡಿ, ಉಪ್ಪಿನಂಗಡಿ ತಲವಾರು ದಾಳಿಗೂ ನಿನ್ನೆ ಬಂಧಿಸಿದವರಿಗೂ ಸಂಬಂಧವಿಲ್ಲ. ಆದರೆ ಪ್ರಕರಣದ ಆರೋಪಿಗಳನ್ನು ಕರೆದುಕೊಂಡು ಬನ್ನಿ ಎಂದು ಹೇಳಿ ನಮ್ಮ ಪ್ರಮುಖರನ್ನು ಬಂಧಿಸಿದ್ದಾರೆ. ನಮ್ಮ ಮುಖಂಡರು ಠಾಣೆಯ ಒಳಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡುತ್ತಿದ್ದರು. ಆದರೆ ಹೊರಗೆ ಏಕಾಏಕಿ ನಮ್ಮ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!

    ರಾತ್ರಿ ವೇಳೆ ಬೀದಿ ದೀಪಗಳನ್ನು ಆರಿಸಿ ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಬೀಸಿದ್ದಾರೆ. ಕ್ಯಾಮೆರಾಗಳಲ್ಲಿ ಲಾಠಿ ಬೀಸಿದ ದೃಶ್ಯಗಳು ಸೆರೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ. ಬಂಟ್ವಾಳ ಎಸ್‌ಐ ಪ್ರಸನ್ನರಿಗೆ ಚೂರಿ ಇರಿತ ಆಗಿದೆ ಅಂತ ಸುದ್ದಿ ಹಬ್ಬಿಸಿದ್ದಾರೆ. ಚೂರಿ ಇರಿತ ಆಗಿದ್ದರೆ ಅವರಿಗೆ ಎಲ್ಲಿ ಗಾಯವಾಗಿದೆ ಅಂತ ತೋರಿಸಲಿ. ಯಾವ ಪೊಲೀಸ್ ಅಧಿಕಾರಿಗೂ ಗಾಯ ಆಗಿಲ್ಲ. ಆದರೆ ಕಥೆ ಕಟ್ಟುತ್ತಿದ್ದಾರೆ ಎಂದು ದೂರಿದರು.

    ಪೊಲೀಸ್ ಠಾಣೆಯ ಸುತ್ತ ಸಿಸಿ ಕ್ಯಾಮೆರಾ ಇದೆ. ಅದರ ವಿಡಿಯೋ ಬಹಿರಂಗಪಡಿಸಬೇಕು. ಪ್ರತಿಭಟನೆ ಮಾಡುತ್ತಿದ್ದವರು ಉದ್ವಿಗ್ನತೆ ಸೃಷ್ಟಿಸಿದ್ದರೆ ಅದರ ಸಿಸಿ ಟಿವಿ ಬಹಿರಂಗ ಪಡಿಸಲಿ. ಈ ವಿಚಾರದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮತ್ತು ಸಿಬ್ಬಂದಿಯ ತಲೆ ತಂಡವಾಗಬೇಕು. ನಮ್ಮ ಒಬ್ಬ ಧರ್ಮ ಗುರುವಿನ ತಲೆಗೆ ಹೊಡೆದಿದ್ದಾರೆ. ಇದು ಲಾಠಿಯಲ್ಲಿ ಹೊಡೆದಿಲ್ಲ. ಇದು ಬೇರೆ ಆಯುಧದಿಂದ ಹೊಡೆದಿರುವುದು. ಹೀಗಾಗಿ ನಾವು ಸರ್ವ ಜನರನ್ನು ಸೇರಿಸಿ ಡಿಸೆಂಬರ್ 17ರ ಶುಕ್ರವಾರ ಎಸ್‌ಪಿ ಕಚೇರಿ ಚಲೋ ನಡೆಸುತ್ತೇವೆ. ಎಲ್ಲರೂ ಒಟ್ಟಾಗಿ ಶುಕ್ರವಾರ ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.

  • ಎರಡು ವರ್ಷದ ಹಿಂದಿನ ಗಂಗಾವತಿಯ ಕೋಮುಗಲಭೆಗೆ ಗುಲಾಬಿ ಹೂ ಮೂಲಕ ತೆರೆ

    ಎರಡು ವರ್ಷದ ಹಿಂದಿನ ಗಂಗಾವತಿಯ ಕೋಮುಗಲಭೆಗೆ ಗುಲಾಬಿ ಹೂ ಮೂಲಕ ತೆರೆ

    ಕೊಪ್ಪಳ: ಹನುಮ ಮಾಲಾಧಾರಿಗಳಿಗೆ ಗುಲಾಬಿ ಹೂವು ನೀಡುವ ಮೂಲಕ ಎರಡು ವರ್ಷದ ಹಿಂದೆ ನಡೆದಿದ್ದ ಕೋಮುಗಲಭೆಗೆ ಗಂಗಾವತಿ ಮುಸ್ಲಿಮರು ತೆರೆ ಎಳೆದಿದ್ದಾರೆ.

    ಕೆಲ ಕಿಡಿಗಳ ಕೃತ್ಯದಿಂದಾಗಿ ಗಂಗಾವತಿಯು ಕಳೆದ ಎರಡು ವರ್ಷಗಳಿಂದ ಹಿಂದೂ-ಮುಸ್ಲಿಂ ಕೋಮುಗಲಭೆಗೆ ತತ್ತರಿಸಿ ಹೋಗಿತ್ತು. ಆದರೆ ಇಂದು ನಡೆದ ಹನುಮ ಮಾಲೆಯ ವಿಸರ್ಜನೆ ಸಮಯದಲ್ಲಿ ಹಿಂದೂ-ಮುಸ್ಲಿಮರು ಭಾವೈಕ್ಯತೆ ಮೆರೆದು ಹಳೆಯ ವೈಷಮ್ಯಕ್ಕೆ ತೆರೆ ಎಳೆದಿದ್ದಾರೆ. ಈ ದೃಶ್ಯವನ್ನು ಕಂಡ ಜನರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.

    ಗಂಗಾವತಿ ನಗರದ ಮೂಲಕ ಅಂಜನಾದ್ರಿ ಬೆಟ್ಟಕ್ಕೆ ಅನೇಕರು ಮೆರವಣಿಗೆ ಹೋಗುತ್ತಾರೆ. ಬಳಿಕ ಮೆಟ್ಟಿಲು ಹತ್ತಿ ಆಂಜನೇಯನ ದರ್ಶನ ಪಡೆಯುತ್ತಾರೆ. ಅಲ್ಲಿಯೇ ಮಾಲಾಧಾರಿಗಳು ಮಾಲೆಯನ್ನು ವಿಸರ್ಜನೆ ಮಾಡುತ್ತಾರೆ. ಹೀಗಾಗಿ ನಗರದ ಮೂಲಕ ಹೋಗುವ ಹಾಗೂ ಬೆಟ್ಟದಲ್ಲಿದ್ದ ಮಾಲಾಧಾರಿಗಳಿಗೆ ಮುಸ್ಲಿಂ ಭಾಂದವರು ಗುಲಾಬಿ ಹೂವು ನೀಡಿ ಶುಭಕೋರಿದರು.

    ಇಂದು ಏನಾಯ್ತು?
    ಉತ್ತರ ಕರ್ನಾಟಕದ ಸುಮಾರು 18 ಜಿಲ್ಲೆಗಳ ಹನುಮ ಮಾಲಾಧಾರಿಗಳು ಇಂದು ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಮಾಲೆ ವಿಸರ್ಜನೆ ಮಾಡಲು ಆಗಮಿಸಿದ್ದರು. ಈ ವಿಶೇಷ ಕಾರ್ಯಕ್ರಮಕ್ಕೆ ಇಂದು ಕೊನೆಯ ದಿನವಾಗಿದ್ದು, ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಮಾಲಾಧಾರಿಗಳಿಗೆ ಗಂಗಾವತಿ ನಗರದ ಮುಸ್ಲಿಂ ಮುಖಂಡರು, ಕಿರಿಯರು ಗುಲಾಬಿ ಹೂವು, ಹಣ್ಣು ಹಿಡಿದು ಅಂಜನಾದ್ರಿ ಬೆಟ್ಟಕ್ಕೆ ಸ್ವಾಗತಿಸಿದರು.

    ಕೊರಳಿಗೆ ಹನುಮಂತನ ಚಿತ್ರವಿದ್ದ ಕೇಸರಿ ಶಾಲು ಹಾಕಿಕೊಂಡು ನಿಂತಿದ್ದ ಮುಸ್ಲಿಂ ಬಾಂಧವರು, ಹುನುಮ ಮಾಲಾಧಾರಿಗಳನ್ನು ತಬ್ಬಿಕೊಂಡು ಭಾಯಿ ಭಾಯಿ ಎಂದು ಹೇಳಿ ಶುಭಕೋರಿದರು. ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿ, ಮಾಲಾಧಾರಿಗಳಿಗೆ ರಕ್ಷಣೆ ನೀಡಿ, ಧೈರ್ಯ ತುಂಬಿದರು.

    ಹಿಂದೆ ಏನಾಗಿತ್ತು?
    2016ರಲ್ಲಿ ನಡೆದ ಹನುಮ ಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಸ್ವಾಗತಕೊರಲು ಗಂಗಾವತಿಯಲ್ಲಿ ಬ್ಯಾನರ್ ಹಾಗೂ ಕೇಸರಿ ಧ್ವಜಗಳನನ್ನು ಹಾಕಲಾಗಿತ್ತು. ಇದನ್ನು ಕೆಲವರು ತೀವ್ರವಾಗಿ ವಿರೋಧಿಸಿದ್ದರು. ಬಳಿಕ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಹೊಡೆದಾಟವಾಗಿತ್ತು. ಪರಿಸ್ಥಿತಿ ಕೈಮಿರುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ನಿಯಂತ್ರಿಸಿದ್ದರು.

    ಈ ಘಟನೆಯಿಂದಾಗಿ ಗಂಗಾವತಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾರ್ವಜನಿಕ ಆಚರಣೆ, ಮೆರವಣಿಗೆಯನ್ನು ನಡೆಸುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶ ಜಾರಿ ಮಾಡಿತ್ತು. ಪರಿಣಾಮ ಕಳೆದ ಎರಡು ವರ್ಷಗಳಿಂದ ಗಣೇಶ ವಿಸರ್ಜನೆ, ಮೊಹರಂ ಸೇರಿದಂತೆ ಅನೇಕ ಹಬ್ಬಗಳನ್ನು ಅದ್ಧೂರಿಯಾಗಿ ಆಚರಿಸಲು ಆಗಿರಲಿಲ್ಲ.

    ಘಟನೆಯಿಂದಾಗಿ 2017ರಲ್ಲಿ ಜಿಲ್ಲೆಯ ಹುನುಮ ಮಾಲಾಧಾರಿಗಳಿಗೆ ಮಾತ್ರ ಅಂಜನಾದ್ರಿ ಬೆಟ್ಟಕ್ಕೆ ಮಾಲಾ ವಿಸರ್ಜನೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಭಾರೀ ಭದ್ರತೆ ಒದಗಿಸಲಾಗಿತ್ತು. ಈ ಬಾರಿಯೂ 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಹನುಮ ಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗಿತ್ತು. ಗಂಗಾವತಿಯ ಪ್ರಮುಖ ಸರ್ಕಲ್‍ನಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಯಿತು. ಇಂದು ನಡೆದ ಕಾರ್ಯಕ್ರಮದಲ್ಲಿ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಭಾಗಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 20 ವರ್ಷಗಳ ಹಿಂದೆ ಮೃತಪಟ್ಟ ಯುವಕನ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

    20 ವರ್ಷಗಳ ಹಿಂದೆ ಮೃತಪಟ್ಟ ಯುವಕನ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

    ಕೊಪ್ಪಳ: ಇಪ್ಪತ್ತು ವರ್ಷಗಳ ಹಿಂದೆ ಮೃತಪಟ್ಟ ಯುವಕನ ಮೇಲೆ ಗಂಗಾವತಿ ನಗರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.

    ಗಂಗಾವತಿ ತಾಲೂಕಿನ ಹಿರೇಜಂತಕಲ್ ಗ್ರಾಮದ ನಿವಾಸಿ ಮಲ್ಲಿಕಾರ್ಜುನ್ 1998 ರಲ್ಲಿ ಮೃತಪಟ್ಟಿದ್ರು. ಆದರೆ ಈಗ ಅವರ ಮೇಲೆ ಗಂಗಾವತಿ ನಗರ ಠಾಣೆ ಪೊಲೀಸರು ಮೂರು ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    2016 ರಲ್ಲಿ ಗಂಗಾವತಿಯಲ್ಲಿ ಕೋಮು ಗಲಭೆಯಾದ ಸಂದರ್ಭ ಪೊಲೀಸರು 92 ಜನರ ವಿರುದ್ಧ ದೂರು ದಾಖಲಿಸಿದ್ರು. ದೂರು ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸೋ ವೇಳೆ ಮೃತನ ಹೆಸರನ್ನು ಪರಿಶೀಲಿಸದೇ ಎಡವಟ್ಟು ಮಾಡಿದ್ದಾರೆ.

    ಗಂಗಾವತಿ ನಗರ ಠಾಣೆಯ ಪಿ.ಐ ಆಗಿದ್ದ ಭೀಮನಗೌಡ ಬೀರಾದಾರ್ ಮೃತನ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದು ಬೆಳಕಿಗೆ ಬಂದಿದೆ. ಕೋಮು ಗಲಭೆ ಸಮಯದಲ್ಲಿ ಪೊಲೀಸರು ಪ್ರಭಾವಿಗಳ ಒತ್ತಡಕ್ಕೆ ಮಣಿದು ಸಿಕ್ಕ ಸಿಕ್ಕವರ ಮೇಲೆ ಕೇಸ್ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಇದೀಗ ಅದು ಸಾಬೀತಾಗಿದ್ದು ಮೃತನನ್ನು ಪೊಲೀಸರು ಆರೋಪಿಯಾಗಿ ಮಾಡಿದ್ದು ಇದೀಗ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

    ಮಲ್ಲಿಕಾರ್ಜುನ್ ಪರ ವಕೀಲರು ಮರಣ ಪತ್ರವನ್ನು ನ್ಯಾಯಲಯಕ್ಕೆ ನೀಡಿ ಕಾನೂನು ಹೋರಾಟ ಮಾಡುತ್ತಿದ್ದಾರೆ.

     

     

  • ಡಿವಿಎಸ್, ಕರಂದ್ಲಾಜೆಯಿಂದ ಕೋಮು ಗಲಭೆ: ರಮಾನಾಥ ರೈ

    ಡಿವಿಎಸ್, ಕರಂದ್ಲಾಜೆಯಿಂದ ಕೋಮು ಗಲಭೆ: ರಮಾನಾಥ ರೈ

    ಮಂಗಳೂರು: ಕರಾವಳಿ ಭಾಗದಲ್ಲಿ ಕೋಮುಗಲಭೆ ಸೃಷ್ಟಿಯಾಗುವುದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ಸಚಿವ ಸದಾನಂದಗೌಡ ಕಾರಣ ಅಂತ ಅರಣ್ಯ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

    ಕರಾವಳಿಯಲ್ಲಿ ಕೋಮು ಗಲಭೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರಾವಳಿ ಭಾಗದಲ್ಲಿ ಕೋಮುಗಲಭೆ ಸೃಷ್ಟಿಯಾಗೋದಕ್ಕೆ ಶೋಭಾ ಕರಂದ್ಲಾಜೆ, ಸದಾನಂದಗೌಡ ಕಾರಣ. ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಹಾಗೂ ಉಡುಪಿ ಸಂಸದರು. ಸದಾನಂದಗೌಡರು ಬೆಂಗಳೂರು ಸಂಸದರು. ಅವರು ಅಲ್ಲಿಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದರು.

    ಸೂತಕದ ಮನೆಯಲ್ಲಿ ವಿಜಯೋತ್ಸವ ಮಾಡೋದು ಎಷ್ಟು ಸರಿ? ಕರಾವಳಿ ಭಾಗದಲ್ಲಿ ಕೋಮುಗಲಭೆ ನಿವಾರಣೆಗೆ ಶಾಂತಿ ಸಭೆ ಕರೆದಿದ್ದೇವೆ. ಇನ್ನೊಂದು ವಾರದಲ್ಲಿ ಶಾಂತಿ ಸಭೆ ನಡೆಸಲಾಗುವುದು. ಶಾಂತಿ ಸಭೆಗೆ ಬಿಜೆಪಿ, ಆರ್‍ಎಸ್‍ಎಸ್ ಮುಖಂಡರನ್ನೂ ಆಹ್ವಾನಿಸಿದ್ದೇವೆ. ಮಂಗಳೂರಿನಲ್ಲಿ ಶಾಂತಿ ಸಭೆ ಕರೆದಿದ್ದೇವೆ. ಎಲ್ಲರ ಜೊತೆಗೂ ಚರ್ಚೆ ನಡೆಸಿ ಸೌಹಾರ್ದ ವಾತಾವರಣ ರೂಪಿಸಲು ಮನವಿ ಮಾಡಿಕೊಳ್ತೇವೆ ಅಂದರು.

    ಇದನ್ನೂ ಓದಿ: ಕೇಂದ್ರಕ್ಕೆ ಅವಕಾಶ ಕೊಟ್ರೇ ಬರೀ 24 ಗಂಟೆಯಲ್ಲಿ ಕರಾವಳಿ ಶಾಂತವಾಗಿರಿಸ್ತೀವಿ- ಸಿಎಂಗೆ ಡಿವಿಎಸ್ ಬಹಿರಂಗ ಸವಾಲು

  • ಎಸ್‍ಡಿಪಿಐ ಆಶ್ರಫ್ ಕೊಲೆ ಪ್ರಕರಣ- ಪ್ರಮುಖ ಆರೋಪಿ ಎಸ್ಕೇಪ್

    ಎಸ್‍ಡಿಪಿಐ ಆಶ್ರಫ್ ಕೊಲೆ ಪ್ರಕರಣ- ಪ್ರಮುಖ ಆರೋಪಿ ಎಸ್ಕೇಪ್

    – ಐವರು ಆರೋಪಿಗಳ ಬಂಧನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕೋಮು ಗಲಭೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವಾಗಲೇ ಎಸ್‍ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ನಡೆದಿತ್ತು. ಜೂನ್ 21ರಂದು ಮಧ್ಯಾಹ್ನ ನಡೆದ ಹತ್ಯೆ ಭಾರೀ ಸುದ್ದಿಯಾಗಿತ್ತು.

    ಮಂಗಳೂರು ಪೊಲೀಸರು ಜಂಟಿಕಾರ್ಯಾಚರಣೆ ನಡೆಸಿ ಎರಡೇ ದಿನದಲ್ಲಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಟ್ವಾಳದ ಆಸುಪಾಸಿನ ನಿವಾಸಿಗಳಾದ ಪವನ್ ಕುಮಾರ್, ಅಭಿನ್ ರೈ, ಶಿವಪ್ರಸಾದ್, ಸಂತೋಷ್ ಮತ್ತು ರಂಜಿತ್ ಬಂಧಿತ ಆರೋಪಿಗಳು.

    ಆರೋಪಿಗಳ ಪೈಕಿ ನಾಲ್ವರ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಈಗಾಗ್ಲೆ ಹಲವಾರು ಕೇಸುಗಳಿವೆ. ಅಲ್ಲದೆ, ಈ ಹಿಂದೆ ಕೋಮು ಗಲಭೆಯಲ್ಲಿ ಗುರುತಿಸಿಕೊಂಡಿದ್ದರು. ಆದರೆ ಅಶ್ರಫ್ ಹತ್ಯೆಯನ್ನು ಯಾವ ಕಾರಣಕ್ಕೆ ನಡೆಸಿದ್ದಾರೆ ಅನ್ನೋದ್ರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಯ ಕಾರಣ, ಹಿಂದಿರುವ ಶಕ್ತಿಗಳೂ ಬೆಳಕಿಗೆ ಬರಲಿದೆ. ಪದೇ ಪದೇ ಅಪರಾಧ ಚಟುವಟಿಕೆಯಲ್ಲಿ ಪಾಲ್ಗೊಂಡವರ ವಿರುದ್ಧ ಗೂಂಡಾ ಕಾಯಿದೆ ಹಾಕಲಾಗುವುದು ಅಂತಾ ಐಜಿಪಿ ಹೇಳಿದ್ದಾರೆ.

    ಕೊಲೆಯ ಪ್ರಮುಖ ಆರೋಪಿ ಭರತ್ ಕುಮ್ಡೋಲು ತಲೆಮರೆಸಿಕೊಂಡಿದ್ದಾನೆ. ಈತ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಶಿಷ್ಯ ಅಂತ ಹೇಳಲಾಗ್ತಿದೆ. ಯಾಕಂದ್ರೆ, ಕಳೆದ ತಿಂಗಳ 28 ರಂದು ಪ್ರಭಾಕರ್ ಭಟ್ಟರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಭರತ್ ಕಾಣಿಸಿಕೊಂಡಿದ್ದನು ಎನ್ನಲಾಗಿದೆ.

    ಹೀಗಾಗಿ, ಬಂಟ್ವಾಳದ ಬೆಂಜನಪದವು ಬಳಿ ನಡೆದ ಆಶ್ರಫ್ ಮರ್ಡರ್ ಕೇಸ್‍ಗೂ ಭಟ್ಟರಿಗೂ ನಂಟಿದ್ಯಾ ಅನ್ನೋ ಅನುಮಾನ ಎದ್ದಿದೆ. ಆದರೆ, ಭರತ್ ಕುಮ್ಡೇಲು ಹಾಗೂ ದಿವ್ಯರಾಜ್ ಶೆಟ್ಟಿ, ಕೊಲೆಗೆ ಸಂಚು ರೂಪಿಸಿದವರಾಗಿದ್ದು ಇನ್ನೆರಡು ದಿನಗಳಲ್ಲಿ ಬಂಧಿಸುವುದಾಗಿ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಹೇಳಿದ್ದಾರೆ.