Tag: ಕೋಮು ಸಂಘರ್ಷ

  • Uttar Pradesh | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

    Uttar Pradesh | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

    ಲಕ್ನೋ: ದುರ್ಗಾದೇವಿ ಮೂರ್ತಿ ವಿಸರ್ಜಣೆ ವೇಳೆ ಎರಡು ಗುಂಪುಗಳ ನಡುವೆ ಕೋಮು ಸಂಘರ್ಷ (Communal clashes) ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟ ಪರಿಣಾಮ ಹಲವು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನ (Bahraich) ಹಳ್ಳಿಯೊಂದರಲ್ಲಿ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

    ಬಹ್ರೈಚ್‌ನ ಮಹ್ಸಿ ಉಪವಿಭಾಗದ ಮೂಲಕ ಸಾಗುತ್ತಿದ್ದ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದಾಗ ಘರ್ಷಣೆಗಳು ಭುಗಿಲೆದ್ದವು. ಘರ್ಷಣೆಯ ನಂತರ ಜಿಲ್ಲಾಡಳಿತವು ಮಹ್ಸಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕನಿಷ್ಠ 30 ಜನರನ್ನು ಬಂಧಿಸಿದ್ದಾರೆ. ಸಲ್ಮಾನ್ ಎಂದು ಗುರುತಿಸಲಾದ ಒರ್ವ ವ್ಯಕ್ತಿಯನ್ನು ಪೊಲೀಸರು (UP Police) ಆತನ ಮನೆ ಮತ್ತು ಅಂಗಡಿಯಿಂದ ಮೆರವಣಿಗೆಯ ಮೇಲೆ ಗುಂಡು ಹಾರಿಸಿದ ಪುರಾವೆಗಳನ್ನು ಕಂಡುಕೊಂಡ ಬಳಿಕ ಬಂಧಿಸಿದ್ದಾರೆ.

    ಜೊತೆಗೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಹತ್ತು ಜನರಲ್ಲಿ ಆರು ಜನರನ್ನು ಅಬ್ದುಲ್ ಹಮೀದ್, ಸರ್ಫರಾಜ್, ಫಹೀಮ್, ಸಾಹಿರ್ ಖಾನ್, ನಂಕೌ ಮತ್ತು ಮಾರ್ಫ್ ಅಲಿ ಎಂದು ಗುರುತಿಸಿದೆ ಬಾಕಿ ನಾಲ್ವರು ಆರೋಪಿಗಳ ಗುರುತು ಪತ್ತೆಯಾಗಬೇಕಿದೆ. ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್, ಸಿದ್ದರಾಮಯ್ಯ ಮುಸಲ್ಮಾನರ ಬಿಗ್‌ ಬಾಸ್: ಅಶೋಕ್‌ ಲೇವಡಿ

    ಗಲಭೆಕೋರರ ವಿರುದ್ಧ ಕಠಿಣ ಕ್ರಮ:
    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯನ್ನು ಖಂಡಿಸಿದ್ದಾರೆ. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಚರ್ಚಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದವರನ್ನು ಬಿಡಲಾಗುವುದಿಲ್ಲ. ಎಲ್ಲರಿಗೂ ಸುರಕ್ಷತೆಯ ಭರವಸೆ ಇದೆ, ಆದರೆ ಗಲಭೆಕೋರರನ್ನು ಮತ್ತು ಘಟನೆಗೆ ಕಾರಣವಾದವರ ನಿರ್ಲಕ್ಷ್ಯವನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

    ಯಾವುದೇ ಸಮುದಾಯವು ಇತರ ಸಮುದಾಯವನ್ನು ಕೆರಳಿಸಬಾರದು. ಯಾವುದೇ ಸಮುದಾಯವು ಇತರ ಸಮುದಾಯದ ಮೇಲೆ ಕಲ್ಲು ತೂರಾಟ ಮಾಡಬಾರದು. ನಿಮ್ಮ ಸಮಸ್ಯೆಗಳನ್ನು ಆಡಳಿತಕ್ಕೆ ಹೇಳುವುದು ಸರಿಯಾದ ಮಾರ್ಗವಾಗಿದೆ. ಆದರೆ ಜನರು ಸಮುದಾಯಗಳನ್ನು ಪ್ರಚೋದಿಸುತ್ತಾರೆ ಎಂದು ಎಸ್ಪಿ ನಾಯಕ ಎಸ್‌.ಟಿ ಹಸನ್ ಹೇಳಿದ್ದಾರೆ. ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

    ನಮಾಜ್ ಸಮಯದಲ್ಲಿ ಜನರು ಮಸೀದಿಗಳ ಬಳಿ ಧ್ವನಿವರ್ಧಕದಲ್ಲಿ ಡಿಜೆ ಹಾಕುತ್ತಾರೆ. ಅಂತಹ ಘರ್ಷಣೆಗಳು ನಡೆಯುವ ಹೆಚ್ಚಿನ ಸ್ಥಳಗಳಲ್ಲಿ ಅದು ಹಿಂದೂ-ಮುಸ್ಲಿಂ ಹಿಂಸಾಚಾರವಾಗಿ ಪರಿವರ್ತನೆಯಾಗುತ್ತದೆ. ಇದು ದೇಶ ಮತ್ತು ಸಮಾಜವನ್ನು ದುರ್ಬಲಗೊಳಿಸುತ್ತದೆ. ಕಾನೂನನ್ನು ಕೈಯಲ್ಲಿ ತೆಗೆದುಕೊಳ್ಳುವವರ ವಿರುದ್ಧ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮೊರಾದಾಬಾದ್ ಮಾಜಿ ಸಂಸದರು ಹೇಳಿದ್ದಾರೆ.

  • ಹರಿಯಾಣದಲ್ಲಿ ಕೋಮು ಸಂಘರ್ಷ: 3 ಜಿಲ್ಲೆಯ 14 ಹಳ್ಳಿಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ – ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ

    ಹರಿಯಾಣದಲ್ಲಿ ಕೋಮು ಸಂಘರ್ಷ: 3 ಜಿಲ್ಲೆಯ 14 ಹಳ್ಳಿಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ – ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ

    ಚಂಡೀಗಢ: ಹರಿಯಾಣದಲ್ಲಿ ಕೋಮು ಸಂಘರ್ಷ (Haryana Communal Violence) ದಿನದಿಂದ ದಿನಕ್ಕೆ ಉದ್ವಿಗ್ನಗೊಳ್ಳುತ್ತಿದೆ. ಈ ನಡುವೆ ಇಲ್ಲಿನ ಮೂರು ಜಿಲ್ಲೆಗಳ 14 ಹಳ್ಳಿಗಳಿಗೆ ಮುಸ್ಲಿಮರನ್ನ ಬಹಿಷ್ಕರಿಸಲು (Boycott Muslims) ನಿರ್ಧರಿಸಿರುವುದಾಗಿ 14 ಗ್ರಾಮ ಪಂಚಾಯಿತಿಗಳು ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ ಬರೆದಿವೆ.

    ಕಳೆದ ಜುಲೈ 31 ರಂದು ಆರಂಭವಾದ ಕೋಮು ಘರ್ಷಣೆಯಿಂದ ಮಹೇಂದ್ರಗಢ, ಜಜ್ಜರ್‌ ಮತ್ತು ರೇವಾರಿ ಜಿಲ್ಲೆಗಳಲ್ಲೂ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ 14 ಗ್ರಾಮ ಪಂಚಾಯಿತಿಗಳು ಮುಸ್ಲಿಮರನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿವೆ. ಕೋಮು ಘರ್ಷಣೆ ನಂತರ ಮುಸ್ಲಿಮರಿಗೆ ಮನೆ ಮತ್ತು ಅಂಗಡಿಗಳನ್ನ ಬಾಡಿಗೆಗೆ ನೀಡದಂತೆ ನಿರ್ಧಾರ ತೆಗೆದುಕೊಂಡಿದ್ದು ಪೊಲೀಸ್‌ ಇಲಾಖೆ (Police Department) ಹಾಗೂ ಜಿಲ್ಲಾಡಳಿತಕ್ಕೆ ಪತ್ರದ ಮೂಲಕ ತಿಳಿಸಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾರು ಅಪಘಾತ – ಇಬ್ಬರು ಮಕ್ಕಳು ಸೇರಿ 6 ಮಂದಿ ನೇಪಾಳಿ ಪ್ರಜೆಗಳು ದುರ್ಮರಣ

    ನುಹ್‌ ಜಿಲ್ಲೆಯಲ್ಲಿ ಸಂಭವಿಸಿದ ಕೋಮು ಸಂಘರ್ಷ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಗುರುಗ್ರಾಮ್‌, ಸೋನಿಪತ್‌ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿತ್ತು. ಗಲಭೆಕೋರರ ಗುಂಪು ವಿವಿಧ ಪ್ರದೇಶಗಳಿಗೆ ನುಗ್ಗಿ ಹಾನಿಯುಂಟುಮಾಡಿತ್ತು. ಈವರೆಗೆ 50ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದ್ದು 200ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ. ಇದರೊಂದಿಗೆ ಹಿಂಸಾಚಾರಕ್ಕೆ ಕಡಿವಾಣ ಹಾಕಲಾಗುತ್ತಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    14 ಹಳ್ಳಿಗಳ ಹಿಂದೂ ಮುಖಂಡರು ಬರೆದಿರುವ ಪತ್ರದಲ್ಲಿ ಮುಸ್ಲಿಂ ಸಮುದಾಯದ ಜನರಿಗೆ ಬಾಡಿಗೆ ಮನೆ, ಅಂಗಡಿಗಳನ್ನು ಬಾಡಿಗೆ ನೀಡುವುದಿಲ್ಲ. ಇಲ್ಲಿನ ಸಂಸ್ಥೆಗಳಲ್ಲೂ ಕೆಲಸ ನೀಡುವುದನ್ನ ನಿರಾಕರಿಸುವಂತೆ ಮನವಿ ಮಾಡಿದ್ದೇವೆ. ಬೀದಿ ಬದಿ ವ್ಯಾಪಾರಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತದೆ. ಹಿಂದೆಯೂ ಈ ರೀತಿ ಘೋಷಣೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದಾರೆ – ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ

    ಈ ನಡುವೆ ಗುರುಗ್ರಾಮ್‌ ನಗರ ಪಾಲಿಕೆ ಕೌನ್ಸಿಲರ್‌ ಬ್ರಹ್ಮ್ ಯಾದವ್, ಜನರು ತಮ್ಮ ಆಸ್ತಿಯನ್ನು ಇತರರಿಗೆ ಬಾಡಿಗೆ ಅಥವಾ ಮಾರಾಟ ಮಾಡುವ ಮುನ್ನ ಗುರುತಿನ ಸಾಕ್ಷಿಗಳನ್ನ ಪರಿಶೀಲಿಸಬೇಕು. ಜಿಲ್ಲೆಯ ವಾಲ್ಮೀಕಿ ಜನಾಂಗದವರೇ ಮಾಂಸದ ಅಂಗಡಿಗಳನ್ನ ನಡೆಸಬೇಕು. ಮುಸ್ಲಿಮರು ನಡೆಸುತ್ತಿರುವ ಅಂಗಡಿಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಯಾಣದಲ್ಲಿ ಮುಂದುವರಿದ ಘರ್ಷಣೆ; 116 ಮಂದಿ ಅರೆಸ್ಟ್‌ – ದೆಹಲಿಯಲ್ಲಿ ಅಲರ್ಟ್‌

    ಹರಿಯಾಣದಲ್ಲಿ ಮುಂದುವರಿದ ಘರ್ಷಣೆ; 116 ಮಂದಿ ಅರೆಸ್ಟ್‌ – ದೆಹಲಿಯಲ್ಲಿ ಅಲರ್ಟ್‌

    ಚಂಡೀಗಢ: ಹರಿಯಾಣದ (Haryana Violence) ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್‌ (VHP) ನಡೆಸಿದ ಧಾರ್ಮಿಕ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಶಮನವಾಗುವ ಸೂಚನೆ ಕಾಣುತ್ತಿಲ್ಲ. ಸಂಘರ್ಷ ಉಲ್ಬಣಗೊಳ್ಳುತ್ತಿದ್ದು, ಮಂಗಳವಾರ ತಡರಾತ್ರಿವರೆಗೂ ಪೊಲೀಸರು 116 ಮಂದಿಯನ್ನು ಬಂಧಿಸಿದ್ದಾರೆ. ಇಲ್ಲಿವರೆಗೂ ಸುಮಾರು 54 ಎಫ್‌ಐಆರ್‌ಗಳು ದಾಖಲಾಗಿವೆ. ಕೋಮು ಘರ್ಷಣೆಯಲ್ಲಿ ಒಟ್ಟು 6 ಮಂದಿ ಸಾವಿಗೀಡಾಗಿದ್ದಾರೆ.

    ಗುರುಗ್ರಾಮ್‌ನಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುರುಗ್ರಾಮ ಸೇರಿದಂತೆ ಸುತ್ತಮುತ್ತ ಭಾಗದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಇಂದು ಸಹ ಇಂಟರ್‌ನೆಟ್‌ ಸೌಲಭ್ಯ ಕಡಿತ ಮಾಡಲಾಗಿದೆ. ಪೊಲೀಸ್‌ ಮತ್ತು ಕೇಂದ್ರ ಭದ್ರತಾ ಪಡೆಯಿಂದ ಪರೇಡ್‌ ನಡೆಸಲಾಗಿದೆ. ಇದನ್ನೂ ಓದಿ: ಹರಿಯಾಣದಲ್ಲಿ ಕೋಮು ಸಂಘರ್ಷ: ಸಾವಿನ ಸಂಖ್ಯೆ 5ಕ್ಕೆ ಏರಿಕೆ, 70 ಮಂದಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಬೆಂಕಿ

    ನುಹ್ ಘರ್ಷಣೆಯನ್ನು ವಿರೋಧಿಸಿ ದೆಹಲಿಯ ನಿರ್ಮಾಣ್ ವಿಹಾರ್ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಯೋಜಿಸಿರುವ ಕಾರಣ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೇವಾತ್ ಪ್ರದೇಶದಲ್ಲಿ ನಡೆಯುತ್ತಿರುವ ಘರ್ಷಣೆಗಳ ವಿರುದ್ಧ ವಿಎಚ್‌ಪಿ ಇಂದು ಪ್ರತಿಭಟನೆಗೆ ಕರೆ ನೀಡಿದೆ. ವಿಎಚ್‌ಪಿ ಮತ್ತು ಬಜರಂಗದಳ ಬುಧವಾರ ಸಂಜೆ 4 ಗಂಟೆಗೆ ಮನೇಸರ್‌ನ ಭೀಸಂ ದಾಸ್ ಮಂದಿರದಲ್ಲಿ ಮಹಾಪಂಚಾಯತ್‌ಗೆ ಕರೆ ನೀಡಿದೆ.

    ನುಹ್‌ನಲ್ಲಿ ಘರ್ಷಣೆಯಾದ ಒಂದು ದಿನದ ನಂತರ ಮಂಗಳವಾರ ಗುಂಪೊಂದು ಗುರುಗ್ರಾಮ್‌ನ ಬಾದ್‌ಶಾಹ್‌ಪುರದಲ್ಲಿ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿತು. ಅಂಗಡಿಗಳನ್ನು ಧ್ವಂಸಗೊಳಿಸಿತು. ಗುಂಪು ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಅಂಗಡಿಗಳನ್ನು ಧ್ವಂಸಗೊಳಿಸಿತು. ಪ್ರದೇಶದ ಮಸೀದಿಯ ಮುಂದೆ “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಲಾಯಿತು. ಹಿಂಸಾಚಾರದ ನಂತರ ಬಾದಶಹಪುರ ಮಾರುಕಟ್ಟೆಯನ್ನು ಮುಚ್ಚಲಾಯಿತು. ಇದನ್ನೂ ಓದಿ: ಹರಿಯಾಣದಲ್ಲಿ ನಿಲ್ಲದ ಕೋಮು ಘರ್ಷಣೆ – ನಾಲ್ವರು ಸಾವು; 30 ಕ್ಕೂ ಹೆಚ್ಚು ಮಂದಿಗೆ ಗಾಯ

    ಮಂಗಳವಾರ ರಾತ್ರಿ ಗುರುಗ್ರಾಮ್‌ನಲ್ಲಿ ನಡೆದ ಹಿಂಸಾಚಾರದಿಂದಾಗಿ ದೆಹಲಿ ಅಲರ್ಟ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿನ ವರದಿಗಳಿಗೆ ಕಿವಿಗೊಡಬೇಡಿ, ತುರ್ತು ಸಂದರ್ಭದಲ್ಲಿ 112 ಕ್ಕೆ ಕರೆ ಮಾಡಿ ಎಂದು ಗುರುಗ್ರಾಮ್ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೀವನದಲ್ಲಿ ಯಾರಿಗೂ ಭಯ ಪಡಲ್ಲ, ನಾನು ಹುಲಿ ವಂಶದಲ್ಲಿ ಹುಟ್ಟಿದವನು: ರಮಾನಾಥ ರೈ

    ಜೀವನದಲ್ಲಿ ಯಾರಿಗೂ ಭಯ ಪಡಲ್ಲ, ನಾನು ಹುಲಿ ವಂಶದಲ್ಲಿ ಹುಟ್ಟಿದವನು: ರಮಾನಾಥ ರೈ

    – ಅನಾಮಿಕ ವ್ಯಕ್ತಿಯಿಂದ ಸಚಿವರಿಗೆ ಬೆದರಿಕೆ ಕರೆ

    ಬೆಂಗಳೂರು: ನನ್ನ ಜೀವನದಲ್ಲಿ ನಾನು ಯಾರಿಗೂ ಭಯ ಬಿಳೋಲ್ಲ. ಹುಲಿ, ಸಿಂಹ ವಂಶದಲ್ಲಿ ಹುಟ್ಟಿದವನು ನಾನು ಅಂತಾ ಅರಣ್ಯ ಸಚಿವ ರಮಾನಾಥ ರೈ ಆರ್‍ಎಸ್‍ಎಸ್ ಮುಖಂಡ ಪ್ರಭಾಕರ್ ಭಟ್‍ಗೆ ಚಾಲೆಂಜ್ ಹಾಕಿದ್ದಾರೆ.

    ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮಾತನಾಡಿರೋ ವಿಡಿಯೋವೊಂದನ್ನು ಮಾಧ್ಯಮದವರು ಪ್ರಸಾರ ಮಾಡಿದ್ದರ ವಿರುದ್ಧ ಕಿಡಿಕಾರಿದ ರೈ, ಕಲ್ಲಡ್ಕ ಪ್ರಭಾಕರ್‍ನನ್ನ ಅರೆಸ್ಟ್ ಮಾಡುತ್ತೇವೆ ಅಂದಿದ್ದನ್ನ ಮಾಧ್ಯಮದವರು ಸುದ್ದಿ ಮಾಡ್ತೀರಾ. ಅ ಒಂದು ಮಾತನ್ನ ಮಾಧ್ಯಮಗಳು ಹೆಚ್ಚು ಸುದ್ದಿ ಮಾಡ್ತೀರಿ ಅಂತಾ ಗರಂ ಆಗಿದ್ದಾರೆ.

    ಪ್ರಭಾಕರ್ ಕೋಮು ಸಂಘರ್ಷಕ್ಕೆ ಅಮಾಯಕರನ್ನ ಬಲಿ ತೆಗೆದುಕೊಳ್ತಿದ್ದಾನೆ. ಅವನ ಅಕ್ಕ, ಅಣ್ಣ, ತಮ್ಮ ಯಾರನ್ನ ಇದಕ್ಕೆ ಬಳಸಿಕೊಂಡಿಲ್ಲ. ಅವರ ಕುಟುಂಬದವರು ಒಬ್ಬರು ಇದ್ರೆ ನಾನು ರಾಜಕೀಯ ದಿಂದ ಹೊರಗೆ ಬರ್ತೀನಿ ಅಂತಾ ಕಲ್ಲಡ್ಕ ಪ್ರಭಾಕರ್ ಭಟ್ ಗೆ ರಮಾನಾಥ್ ರೈ ಸವಾಲು ಹಾಕಿದ್ದಾರೆ.

    ಕೊಲೆಗಾರರನ್ನ ರಕ್ಷಣೆ ಮಾಡ್ತಿರೋದು, ಹಿಂದೂ ಮುಸ್ಲಿಂ ನಡುವೆ ಗಲಾಟೆ ತಂದಿಡೋದೆ ಕಲ್ಲಡ್ಕ ಪ್ರಭಾಕರ್ ಭಟ್. ಕಲ್ಲಡ್ಕ ಪ್ರಭಾಕರ್ ಪುಕ್ಕಲ. ನನ್ನ ಮಾತಿಗೆ ನಾನು ಬದ್ದನಾಗಿದ್ದೇನೆ. ನನ್ನ ಹೇಳಿಕೆ ವಾಪಸ್ ತೆಗೆದುಕೊಳ್ಳೊಲ್ಲ. ನಾನು ಹಿಂದೂ ಮತೀಯವಾದ, ಮುಸ್ಲಿಂ ಮತೀಯವಾದ ಎರಡನ್ನೂ ವಿರೋಧ ಮಾಡ್ತೀನಿ. ಅಮಾಯಕ ಕುಟುಂಬಗಳನ್ನ ತನ್ನ ಬೆಳೆ ಬೇಯಿಸಿಕೊಳ್ಳಲು ಬಲಿ ಕೊಡೋಡು ಪ್ರಭಾಕರ್ ಭಟ್. ಬಿಜೆಪಿ ಪ್ರತಿಭಟನೆ ಮಾಡಿದ್ರೆ ಮಾಡಲಿ ಆಗ ನಾನು ನೋಡಿಕೊಳ್ತಿನಿ. ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ ಎಂದಿದ್ದಾರೆ.

    ಬೆದರಿಕೆ: ಸಚಿವ ರಮಾನಾಥ್ ರೈ ಅವರಿಗೆ ಕಿಡಿಗೇಡಿಗಳು ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಹಾಕಿದ ಅನಾಮಿಕ ವ್ಯಕ್ತಿ ತುಳು ಮಾತನಾಡುತ್ತಿದ್ದನು ಎಂದು ಹೇಳಲಾಗಿದೆ. ಮುಂಬೈನಿಂದ ಮಾತನಾಡುತ್ತಿದ್ದೇನೆ ಎಂದು ರಮಾನಾಥ್ ರೈಗೆ ಅವಾಜ್ ಹಾಕಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಖಾದರ್ ಅವ್ರು ಚಪ್ಪಲಿಯಲ್ಲಿ ಹೊಡೀತಿವಿ ಅಂತಾರೆ, ನೀವು ಕೇಸ್ ಹಾಕಿ ಅಂತೀರಾ? ಮುಸ್ಲಿಮರ ವೋಟು ಗಿಟ್ಟಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದೀರಾ? ಮುಂದಿನ ಚುನಾವಣೆಯಲ್ಲಿ ಯಾರು ಗೆಲ್ತಾರೆ, ಯಾರು ಸೋಲ್ತಾರೆ ನೋಡ್ತಿರಿ. ಪ್ರಭಾಕರ್ ಭಟ್ ನಮ್ಮ ಶಕ್ತಿ, ಅವರನ್ನ ಜೈಲಿಗೆ ಹಾಕಿಸೋಕೆ ಅವರೇನು ಟೆರರಿಸ್ಟಾ? ಪ್ರಭಾಕರ್ ಭಟ್‍ರನ್ನ ಮುಟ್ಟಿದ್ರೆ ಹಿಂದೂ ಸಮಾಜವೇ ಎದ್ದು ನಿಲ್ಲುತ್ತೆ ನೆನಪಿಡಿ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.