Tag: ಕೋಯಿಕೋಡ್

  • ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್‌ ಭೀತಿ – ಕೋಝಿಕ್ಕೋಡ್‌ನ ಮದರಸಾಗಳಿಗೂ ರಜೆ ವಿಸ್ತರಣೆ

    ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್‌ ಭೀತಿ – ಕೋಝಿಕ್ಕೋಡ್‌ನ ಮದರಸಾಗಳಿಗೂ ರಜೆ ವಿಸ್ತರಣೆ

    ತಿರುವನಂತಪುರಂ: ಇಬ್ಬರನ್ನು ನಿಫಾ ವೈರಸ್‌ (Nipah Virus) ಹರಡುವಿಕೆ ತಡೆಗಟ್ಟಲು ಕೇರಳ ಸರ್ಕಾರ (Kerala Government) ಕೋಝಿಕೋಡ್‌ನ ಶಾಲಾ-ಕಾಲೇಜುಗಳಿಗೆ ನೀಡಿರುವ ರಜೆಯನ್ನ ಸೆಪ್ಟೆಂಬರ್‌ 16ರ ವರೆಗೆ ವಿಸ್ತರಣೆ ಮಾಡಿದೆ.

    ನಿಫಾ ವೈರಸ್‌ಗೆ ಇಬ್ಬರು ಸಾವನ್ನಪ್ಪಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಸೆಪ್ಟೆಂಬರ್‌ 14 ಮತ್ತು 15 ರಂದು ರಜೆ ಘೋಷಣೆ ಮಾಡಿತ್ತು. ಕೋಝಿಕೋಡ್‌ (Kozhikode) ಜಿಲ್ಲೆಯ ಅಂಗನವಾಡಿಗಳು, ಮದರಸಾಗಳು, ಟ್ಯೂಷನ್‌ ಸೆಂಟರ್‌ಗಳು ಸೇರಿದಂತೆ ವೃತ್ತಿಪರ ಕಾಲೇಜುಗಳೂ ಸೇರಿದಂತೆ ಎಲ್ಲ ರೀತಿಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ ವಿಶ್ವವಿದ್ಯಾಲಯ ಮತ್ತು ಪಬ್ಲಿಕ್ ಸರ್ವಿಸ್ ಕಮಿಷನ್ (PSC) ಪರೀಕ್ಷಾ ವೇಳಾಪಟ್ಟಿಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಶಿಕ್ಷಣ ಸಂಸ್ಥೆಗಳು ಆನ್‌ಲೈನ್‌ ತರಗತಿಗಳನ್ನ ಏರ್ಪಡಿಸುವಂತೆ ಒತ್ತಾಯಿಸಿವೆ.

    ಈ ದಿನಗಳು ಸಂಭ್ರಮಾಚರಣೆಯ ದಿನಗಳಾಗಬಾರದು, ಅನಗತ್ಯ ಪ್ರಯಾಣ ಮತ್ತು ಸಮಾರಂಭ ಆಯೋಜನೆ ಮಾಡುವುದನ್ನ ತಪ್ಪಿಸಬೇಕು ಅಂತಲೂ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ದೆಹಲಿಯಲ್ಲೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಚರ್ಚೆ ನಡೆಸಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    ಕೋಯಿಕೋಡ್‌ನ (Kozhikode) ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

    ಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ (Kerala) ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಸೌಮ್ಯ ಲಕ್ಷಣ ಹೊಂದಿರುವ ರೋಗಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    ತಿರುವನಂತಪುರಂ: ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಬುಧವಾರ ಮತ್ತೊಂದು ನಿಫಾ ವೈರಸ್ (Nipah Virus) ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

    ಕೋಯಿಕೋಡ್‌ನ (Kozhikode) ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ- ಸೇನಾಧಿಕಾರಿಗಳಿಬ್ಬರು ಹುತಾತ್ಮ

    ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ (Kerala) ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಜಿ20 ಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ್ದ ಚೀನಾ – ತಪಾಸಣೆಗೆ ನಿರಾಕರಿಸಿ ಹೋಟೆಲ್‌ನಲ್ಲಿ ಹೈಡ್ರಾಮಾ

    ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರಿಗೆ ಅನ್ಯಾಯ: ತ.ನಾಡು ಸಚಿವ

    ಕಂಟೈನ್‌ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್‌ಲೈನ್ ತರತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳದಲ್ಲಿ ಇಬ್ಬರು ಅಸಹಜ ಸಾವು – ನಿಫಾ ಸೋಂಕು ಶಂಕೆ

    ಕೇರಳದಲ್ಲಿ ಇಬ್ಬರು ಅಸಹಜ ಸಾವು – ನಿಫಾ ಸೋಂಕು ಶಂಕೆ

    ತಿರುವನಂತಪುರಂ: ಕೇರಳದಲ್ಲಿ ಇಬ್ಬರು ಅಸಹಜ ಸಾವನ್ನಪ್ಪಿದ್ದು, ನಿಫಾ ಸೋಂಕಿನಿಂದ (Nipah Virus) ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಬಳಿಕ ಕೇರಳ (Kerala) ಆರೋಗ್ಯ ಇಲಾಖೆ ಕೋಯಿಕೋಡ್ (Kozhikode) ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ.

    ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು ಆಗಸ್ಟ್ 30ರಂದು ಸಾವನ್ನಪ್ಪಿದ್ದಾರೆ. ಅವರು ಸ್ಯಾಂಪಲ್ ಕಳುಹಿಸಿರಲಿಲ್ಲ. ಇನ್ನೊಬ್ಬರು ಸೋಮವಾರ ಮೃತಪಟ್ಟಿದ್ದು, ಅವರ ಸ್ಯಾಂಪಲ್ ಅನ್ನು ಪುಣೆಗೆ (Pune) ಕಳುಹಿಸಿದ್ದಾರೆ. ಟೆಸ್ಟ್ ರಿಪೋರ್ಟ್ ಬರಬೇಕಿದೆ. ಇಂದು (ಮಂಗಳವಾರ) ಸಂಜೆ ಬರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಗಂಡು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

    ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಡಬಲ್‌ ಮರ್ಡರ್‌, ಹಿಂಸಾಚಾರ ಪ್ರಕರಣದಲ್ಲಿ ಬೇಕಾಗಿದ್ದ ಗೋರಕ್ಷಕ ಬಂಧನ

    ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಯಿಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಜನರಿಗೆ ಮನವಿ ಮಾಡಿದರು. ಇದನ್ನೂ ಓದಿ: ವಿವಾಹಿತ ಸೇನಾಧಿಕಾರಿ ಜೊತೆ ನೇಪಾಳಿ ಮಹಿಳೆ ಸಂಬಂಧ – ಮದುವೆಯಾಗು ಎಂದಿದ್ದಕ್ಕೆ ಕೊಲೆಯಾದ್ಳು

    ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ – ಮೂವರು ಆದಿವಾಸಿಗಳ ಹತ್ಯೆ

    ವೈರಸ್ ಹೇಗೆ ಹರಡುತ್ತದೆ?
    * ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
    * ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
    * ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

    ನಿಫಾ ವೈರಸ್ ಲಕ್ಷಣಗಳೇನು?
    * ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
    * ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
    * ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
    * ಬಳಿಕ ಪ್ರಜ್ಞಾಹೀನರಾಗುತ್ತಾರೆ
    * ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
    * ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]