Tag: ಕೋರ್ಟ್‌ ಬೇಲ್‌

  • ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

    ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

    – ಜು.22ಕ್ಕೆ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ

    ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜಾಮೀನು ಪಡೆದು ಶೂಟಿಂಗ್, ವಿದೇಶ ಪ್ರವಾಸ ಅಂತಾ ಜಾಲಿ ಮೂಡ್‌ನಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ (Supreme Court) ಬದಲಾವಣೆಯ ಬಗ್ಗೆ ಪರೋಕ್ಷವಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಮಂಗಳವಾರ (ಜು.22) ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದ್ದು ಅಂದು ದರ್ಶನ ಪವಿತ್ರಾಗೌಡ (Pavithra Gowda) ಸೇರಿ ಏಳು ಮಂದಿಯ ಭವಿಷ್ಯ ನಿರ್ಧಾರವಾಗಲಿದೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ, ಜಾಮೀನು ಪಡೆದು ಸದ್ಯ ಶೂಟಿಂಗ್‌ಗಾಗಿ ವಿದೇಶಿ ಪ್ರವಾಸ ಅಂತಾ ಬ್ಯುಸಿಯಾಗಿರುವ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಡುವ ಸಾಧ್ಯತೆ ಇದೆ. ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು (Bengaluru Police) ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾ.ಪರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠ ಹೈಕೋರ್ಟ್ ಆದೇಶದ ಬಗ್ಗೆ ಭಿನ್ನಾಭಿಪ್ರಾಯಗಳನ್ನ ವ್ಯಕ್ತಪಡಿಸಿದೆ.

    ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾ. ಪರ್ದಿವಾಲಾ. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು. ಹೈಕೋರ್ಟ್ ಆದೇಶವನ್ನ ಹೇಗೆ ನೀಡಿದೆ ಅನ್ನೋದನ್ನ ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಹೇಳಿದ ನ್ಯಾಯಾಲಯ ಕೇಳಿತು. ಇದನ್ನೂ ಓದಿ: ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

    22ಕ್ಕೆ ಜಾಮೀನು ಭವಿಷ್ಯ ನಿರ್ಧಾರ
    ಇದಕ್ಕೆ ಪ್ರತಿಯಾಗಿ ದರ್ಶನ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲು ಮುಂದಾಗಿದ್ದರು. ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾ. ಪರ್ದಿವಾಲಾ ಮಂಗಳವಾರ ಅಂತಿಮವಾದ ಮಂಡಿಸಿ, ಅಂದೇ ಈ ಬಗ್ಗೆ ತೀರ್ಪು ನೀಡಲಾಗುವುದು ಎಂದು ಹೇಳಿದರು. ಹೀಗಾಗೀ ಅಂದು ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಣ್ಣಗುಂಡಿ ಬಳಿ ಗುಡ್ಡಕುಸಿತ, ಬೆಂ-ಮಂ ರಾ.ಹೆದ್ದಾರಿ ಬಂದ್

    ಮಂಗಳವಾರವೇ ಪವಿತ್ರಾ ಗೌಡ ಸೇರಿ ಇತರ ಐವರ ಭವಿಷ್ಯ 
    ಇನ್ನೂ ಮಂಗಳವಾರ ನಟ ದರ್ಶನ ಮಾತ್ರವಲ್ಲ, ಆಪ್ತೆ ಪವಿತ್ರಾ ಗೌಡ ಸೇರಿ ಇತರೆ ಐವರು ಆರೋಪಿಗಳ ಭವಿಷ್ಯವೂ ನಿರ್ಧಾರವಾಗಲಿದೆ. ದರ್ಶನ ಪರ ವಾದ ಆಲಿಸಿದ ಬಳಿಕ ಉಳಿದ ಆರೋಪಿಗಳ ಪರ ವಾದವನ್ನೂ ಕೋರ್ಟ್ ಆಲಿಸಲಿದೆ. ಇದಾದ ಬಳಿಕ ಕೋರ್ಟ್ ತನ್ನ ಅಂತಿಮ ಆದೇಶ ನೀಡಲಿದೆ. ಇದನ್ನೂ ಓದಿ: 40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ಮಂದಿಗೆ ನೋಟಿಸ್‌: ವಾಣಿಜ್ಯ ತೆರಿಗೆ ಇಲಾಖೆ

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ತನಿಖೆ ಮಾಡಿ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಹೀಗಾಗಿ ಜಾಮೀನು ಸಿಗಬಹುದು ಮುಂದುವರಿಸಬಹುದು ಎನ್ನುವುದು ದರ್ಶನ ಮತ್ತು ಇತರೆ ಆರೋಪಿಗಳ ಪರ ವಕೀಲರ ಲೆಕ್ಕಾಚಾರ. ಆದ್ರೆ ಹೈಕೋರ್ಟ್ ಆದೇಶದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವ ಸುಪ್ರೀಂ ಕೋರ್ಟ್ ದರ್ಶನ್ ಗೆ ಜಾಮೀನು ನೀಡಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದೆ. ಹೀಗಾಗೀ ಜಾಮೀನು ರದ್ದಾಗುವ ಸಾಧ್ಯತೆ ಇದೆ ಅಂತಾರೆ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಚಂದ್ರಕಾಂತ್ ಅಂಗಡಿ.

  • ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

    ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

    ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ (Munirathna) ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇಡೀ ರಾಜ್ಯಕ್ಕೆ ಬೆಳಕು ನೀಡುವ ರಾಯಚೂರಿನಲ್ಲೇ ಬೆಳಕಿಲ್ಲ – ಸಾರ್ವಜನಿಕರಿಂದ ತೀವ್ರ ಆಕ್ರೋಶ

    ಶುಕ್ರವಾರವಷ್ಟೇ ಬಂಧಿಸಿದ್ದ ಪೊಲೀಸರು:
    ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದರು. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – 4 ದಿನಗಳಲ್ಲಿ 4 ಸಾವು

    ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: Mysuru Dasara | ಮೊದಲಿಂದಲೂ ಧನಂಜಯ – ಕಂಜನ್ ನಡುವೆ ಜಗಳವಿದೆ, ಮೊದಲೂ ಅಲ್ಲ ಕೊನೆಯೂ ಅಲ್ಲ: ಡಿಸಿಎಫ್

    ಏನಿದು ಪ್ರಕರಣ?
    ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಐಟಿ ಆಕ್ಟ್‌ 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

    <iframe width=”560″ height=”315″ src=”https://www.youtube.com/embed/YCyGPc4hol0?si=bWm8KsOw-pBHO2Ad” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>

  • ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್

    ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್

    ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು (kaggalipura Police) ಶುಕ್ರವಾರ ಬಂಧಿಸಿದ್ದಾರೆ.

    ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದಾರೆ. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು (ಶುಕ್ರವಾರ) ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ – ಹೆಚ್.ಡಿ ರೇವಣ್ಣ ಸವಾಲ್

    ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿದೆ. 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರದಲ್ಲಿ ಬಂಧಿಸಲಾಯಿತು. ಮಾರ್ಗಮಧ್ಯದಲ್ಲೇ ವೈದ್ಯಕೀಯ ತಪಾಸಣೆ ಮುಗಿದ ಬಳಿಕ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ವಿಚಾರಣೆ ನಂತರ ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದು ಇಂದಿರಾ ಕ್ಯಾಂಟೀನ್ ಬಂದ್ – ಅಕ್ರಮ ಚಟುವಟಿಕೆಗಳ ತಾಣವಾದ ಕ್ಯಾಂಟೀನ್

    ಏನಿದು ಪ್ರಕರಣ?
    ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್‌ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್‌ ಕುಮಾರ್‌ (ಎ2), ಸುಧಾಕರ (ಎ3), ಕಿರಣ್‌ ಕುಮಾರ್‌ (ಎ4), ಲೋಹಿತ್‌ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ – 41 ದಿನಗಳ ಬಳಿಕ ವೈದ್ಯರ ಮುಷ್ಕರ ವಾಪಸ್

  • ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಬ್ರಿಜ್ ಭೂಷಣ್‌ಗೆ ಬಿಗ್ ರಿಲೀಫ್

    ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಬ್ರಿಜ್ ಭೂಷಣ್‌ಗೆ ಬಿಗ್ ರಿಲೀಫ್

    ನವದೆಹಲಿ: ಕುಸ್ತಿಪಟುಗಳ (Wrestlers) ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ (Brij Bhushan Singh) ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Delhi’s Rouse Avenue court) ಗುರುವಾರ ಜಾಮೀನು ನೀಡಿದೆ.

    ಎಂಪಿ, ಎಂಎಲ್‌ಎ ವಿಶೇಷ ನ್ಯಾಯಾಧೀಶರಾದ ಹರ್ಜೀತ್ ಸಿಂಗ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಅನುಮತಿಯಿಲ್ಲದೇ ಬ್ರಿಜ್ ಭೂಷಣ್ ದೇಶ ತೊರೆಯುವಂತಿಲ್ಲ ಹಾಗೂ ತನ್ನ ವಿರುದ್ಧ ಪ್ರಕರಣ ದಾಖಲಿಸಿದವರ ವಿರುದ್ಧ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕುವಂತಿಲ್ಲ ಎಂದು ಕೋರ್ಟ್ ಎಚ್ಚರಿಕೆ ಕೊಟ್ಟಿದೆ. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

    ಡಬ್ಲ್ಯುಎಫ್‌ಐನ ಮಾಜಿ ಹೆಚ್ಚುವರಿ ಕಾರ್ಯದರ್ಶಿ ವಿನೋದ್ ತೋಮರ್ ಅವರಿಗೂ ನ್ಯಾಯಾಲಯ ಜಾಮೀನು ನೀಡಿದೆ. ಬ್ರಿಜ್ ಭೂಷಣ್ ಹಾಗೂ ವಿನೋದ್ ತೋಮರ್ ಅವರಿಗೆ ತಲಾ 25,000 ರೂ. ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ತೋಮರ್, ಬ್ರಿಜ್ ಭೂಷಣ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದರು ಹಾಗೂ ಕುಸ್ತಿ ಸಂಸ್ಥೆಯ ದೈನಂದಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಈ ವರ್ಷದ ಜನವರಿಯಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ ವಿನೋದ್ ತೋಮರ್ ಅವರನ್ನ ಅಮಾನತುಗೊಳಿಸಿತ್ತು.

    ಒಲಿಂಪಿಕ್ಸ್ ಪದಕ ವಿಜೇತರಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಅನೇಕ ಅಪ್ರಾಪ್ತೆಯರು ಸೇರಿ 7 ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಆರೋಪ ಹೊರಿಸಿದ್ದರು. ಅಲ್ಲದೇ ಅವರನ್ನು ಬಂಧಿಸಬೇಕು ಹಾಗೂ ಡಬ್ಲ್ಯೂಎಫ್‌ಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದರು. ಕಳೆದ ಜೂನ್ ತಿಂಗಳಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು. ಇದನ್ನೂ ಓದಿ: ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್‌ ಪ್ರಶ್ನೆ

    ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ದೆಹಲಿ ಪೊಲೀಸರು 2 ಎಫ್‌ಐಆರ್ ಮತ್ತು 10 ದೂರುಗಳನ್ನ ದಾಖಲಿಸಿದ್ದರು. ಬ್ರಿಜ್ ಭೂಷಣ್ ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆಯಿಟ್ಟಿದ್ದರು, ಅನುಚಿತವಾಗಿ ದೇಹ ಸ್ಪರ್ಶಿಸುವುದು, ಹುಡುಗಿಯರ ಎದೆ ಮೇಲೆ ಕೈ ಹಾಕುವುದು, ಮೈ-ಕೈ ಮುಟ್ಟುವುದು, ಅವರನ್ನು ಹಿಂಬಾಲಿಸುವುದು ಆರೋಪ ಸೇರಿದಂತೆ 10 ದೂರುಗಳನ್ನ ದಾಖಲಿಸಿಕೊಂಡಿದ್ದರು. ಕಳೆದ ಏಪ್ರಿಲ್ 21 ರಂದೇ ದೂರು ದಾಖಲಾಗಿದ್ದು, ಏಪ್ರಿಲ್ 28 ರಂದು ಎರಡು ಈIಖ ದಾಖಲಾಗಿದೆ. ಭೂಷಣ್ ವಿರುದ್ಧ IPC ಸೆಕ್ಷನ್ 354, 354 (ಎ), 354 (ಡಿ) ಹಾಗೂ ಸೆಕ್ಷನ್ 34ರ ಅಡಿಯಲ್ಲಿ ಕೇಸ್ ದಾಖಲಾಗಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಗೆ ಒಳಪಡಿಸಬಹುದಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]