Tag: ಕೋಲಾರ

  • ಕೋಲಾರದಲ್ಲಿ ಗಾಂಜಾ ಮತ್ತಿನಲ್ಲಿ 6 ಜನರಿಗೆ ಚಾಕು ಇರಿತ- ಆರೋಪಿ ಪೊಲೀಸ್ ವಶ

    ಕೋಲಾರದಲ್ಲಿ ಗಾಂಜಾ ಮತ್ತಿನಲ್ಲಿ 6 ಜನರಿಗೆ ಚಾಕು ಇರಿತ- ಆರೋಪಿ ಪೊಲೀಸ್ ವಶ

    ಕೋಲಾರ: ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೊರ್ವ 6 ಜನರಿಗೆ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೋಲಾರದಲ್ಲಿ ಶನಿವಾರ ರಾತ್ರಿ ನಡೆದಿದೆ.

    ಕೋಲಾರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿ 22 ವರ್ಷದ ಮುಕ್ತಾರ್ ಪೊಲೀಸರ ವಶದಲ್ಲಿದ್ದಾನೆ.

    ನಡೆದಿದ್ದೇನು?: ಗಾಂಜಾ ಮತ್ತಿನಲ್ಲಿ ಯುವಕ ಮುಕ್ತಾರ್ ಕೋಲಾರ ಹೊರವಲಯದ ಟಮಕ ನಿವಾಸಿ 37 ವರ್ಷದ ಶ್ರೀನಿವಾಸ್, ಕೀಲುಕೋಟೆ ನಿವಾಸಿ 46 ವರ್ಷದ ವೆಂಕಟೇಶಪ್ಪ ಹಾಗೂ ಇನ್ನಿತರರ ಮುಖ, ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ಆರೋಪಿ ಮುಕ್ತಾರ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಘಟನೆಯಲ್ಲಿ ಗಾಯಗೊಂಡವರಲ್ಲಿ ಇಬ್ಬರು ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ, ಉಳಿದಂತೆ ನಾಲ್ವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕೋಲಾರ ಎಸ್ಪಿ ದಿವ್ಯಾಗೋಪಿನಾಥ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಅಕ್ರಮ ಸಂಬಂಧಕ್ಕೆ ಬೇಸತ್ತು ಗಂಡನ ಕೊಲೆಗೆ 5 ಲಕ್ಷ ರೂ.ಗೆ ಸುಪಾರಿ ಕೊಟ್ಟ ಪತ್ನಿ

    ಅಕ್ರಮ ಸಂಬಂಧಕ್ಕೆ ಬೇಸತ್ತು ಗಂಡನ ಕೊಲೆಗೆ 5 ಲಕ್ಷ ರೂ.ಗೆ ಸುಪಾರಿ ಕೊಟ್ಟ ಪತ್ನಿ

    ಕೋಲಾರ: ಪತ್ನಿಯೊಬ್ಬಳು ತನ್ನ ಪತಿಯ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಕೋಲಾರ ಪೊಲೀಸರು ಯಶ್ವಸಿಯಾಗಿದ್ದಾರೆ.

    ಭಾಗ್ಯಮ್ಮ ಎಂಬ ಮಹಿಳೆ 2016ರ ಜನವರಿ 13ರಂದು ತನ್ನ ಪತಿ ನಾರಾಯಣ ಅವರನ್ನು ಕೊಲೆ ಮಾಡುವುದಕ್ಕಾಗಿ 5 ಲಕ್ಷ ರೂ. ಸುಪಾರಿ ನೀಡಿದ್ದಳು. ಕೊಲೆಯ ನಂತರ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಎಲ್ಲರನ್ನೂ ನಂಬಿಸಿದ್ದಳು.

    ಕೊಲೆಯಾದ ನಾರಾಯಣ ಮೂಲತಃ ಆಂಧ್ರಪ್ರದೇಶ ರಾಜ್ಯದ ನಿವಾಸಿ. 15 ವರ್ಷಗಳ ಹಿಂದೆ ನಾರಾಯಣಸ್ವಾಮಿ ಮುಳುಬಾಗಿಲು ಪಟ್ಟಣಕ್ಕೆ ಸಪ್ಲೈಯರ್ ಕೆಲಸಕ್ಕಾಗಿ ಆಗಮಿಸಿದ್ದರು. ನಂತರ ತಾವೇ ಒಂದು `ಬಾಯಿಕೊಂಡ ಗಂಗಮ್ಮ’ ಎಂಬ ಕಬಾಬ್ ಸೆಂಟರ್ ತೆರೆದು ಯಶ್ವಸಿಯಾಗಿ, ಸಾಕಷ್ಟು ಆಸ್ತಿ ಸಂಪಾದನೆ ಮಾಡಿಕೊಂಡಿದ್ದರು. ಆದರೆ ನಾರಾಯಣಸ್ವಾಮಿ ತನ್ನ ಪತ್ನಿ ಭಾಗ್ಯಮ್ಮಳ ಅಕ್ಕ ಮತ್ತು ಆಕೆಯ ಮಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು ಎನ್ನಲಾಗಿದೆ.

    ಗಂಡನ ಅಕ್ರಮ ಸಂಬಂಧದ ಬೇಸತ್ತ ಭಾಗ್ಯಮ್ಮ ತನಗೆ ಪರಿಚಯವಿದ್ದ ಬಾಲಾಜಿ ಸಿಂಗ್ ಎಂಬವರ ಮೂಲಕ ಜಮೀರ್ ಪಾಷಾ ಹಾಗು ವಾಸಿಂ ಪಾಷಾರನ್ನು ಸಂಪರ್ಕಿಸಿದ್ದಳು. ಇವರಿಬ್ಬರಿಗೂ ತನ್ನ ಪತಿಯನ್ನು ಕೊಲ್ಲಲು ಬರೋಬ್ಬರಿ 5 ಲಕ್ಷ ರೂ.ಗೆ ಸುಫಾರಿ ನೀಡಿದ್ದಳು.

    ಬೆಳಕಿಗೆ ಬಂದಿದ್ದು ಹೇಗೆ?: ಆರೋಪಿಗಳಾದ ಜಮೀರ್ ಪಾಷಾ ಮತ್ತು ವಾಸಿಂ ಪಾಷಾ ದರೋಡೆ ಪ್ರಕರಣದಲ್ಲಿ ಬಂಧಿಯಾಗಿದ್ದರು. ಪೊಲೀಸರ ವಿಚಾರಣೆ ವೇಳೆ ನಾರಾಯಣಸ್ವಾಮಿಯ ಕೊಲೆಯನ್ನು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾಗ್ಯಮ್ಮಳನ್ನು ಪೊಲೀಸರು ವಿಚಾರಿಸಿದಾಗ ಆಕೆಯು ಸಹ ತಪ್ಪೊಪ್ಪಿಕೊಂಡಿದ್ದಾಳೆ.

    ಇದನ್ನೂ ಓದಿ: ಶೀಲ ಶಂಕಿಸಿದ ಗಂಡನನ್ನೇ ಕೊಂದಳು ಪತ್ನಿ!

    ಗಂಡನನ್ನು ಕೊಲ್ಲಲು ಜಮೀರ್ ಪಾಷಾ ಹಾಗು ವಸೀಂ ಪಾಷಾ ಎಂಬವರಿಗೆ ಭಾಗ್ಯಮ್ಮ ಸುಪಾರಿ ನೀಡಿದ್ದಳು ಎಂಬುದು ಈಗ ಬಯಲಾಗಿದ್ದು, ನ್ಯಾಯಾಲಯದ ಆದೇಶದಂತೆ ಇಂದು ಉಪ ವಿಭಾಗಾಧಿಕಾರಿ ಮಂಜುನಾಥ ನೇತೃತ್ವದಲ್ಲಿ ಮುಳಬಾಗಿಲು ತಾಲೂಕು ಹೊಸಹಳ್ಳಿ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಆವರಣದಲ್ಲಿ ಮರು ಶವಪರೀಕ್ಷೆ ನಡೆಸಲಾಯಿತು.

    ಇದನ್ನೂ ಓದಿ: ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು!

     

  • ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವು

    ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವು

    ಕೋಲಾರ: ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣ ಮುತ್ಯಾಲಪೇಟೆಯಲ್ಲಿ ನಡೆದಿದೆ.

    ಮೇ 20 ರಂದು ಮನೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುವ ವೇಳೆ ಬೆಂಕಿ ತಗುಲಿ ತಂದೆ ಶ್ರೀಕಂಠ (45) ಹಾಗೂ ಅವರ ಮಕ್ಕಳಾದ 18 ವರ್ಷದ ಮಧುಮತಿ , 10 ವರ್ಷದ ರಕ್ಷಿತ ಗಾಯಗೊಂಡಿದ್ದರು. ಅವರಲ್ಲಿ ರಕ್ಷಿತ ಎಂಬ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಾವನ್ನಪ್ಪಿದ್ದಾಳೆ.

    ಮಗಳ ಸಾವಿನ ಸುದ್ದಿ ತಿಳಿದ ತಂದೆ ಶ್ರೀಕಂಠ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ ಇಬ್ಬರ ದುರ್ಮರಣ!

    ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ ಇಬ್ಬರ ದುರ್ಮರಣ!

    ಕೋಲಾರ: ಕುಡಿತದ ಚಟ ಬಿಡಲು ನಾಟಿ ಔಷಧಿಯನ್ನ ಕುಡಿದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಗವಾರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

    ನಗವಾರ ಗ್ರಾಮದ 55 ವರ್ಷದ ಚಲಪತಿ ಹಾಗೂ 38 ವರ್ಷದ ಶಂಕರಪ್ಪ ಎಂಬುವರು ಮೃತ ದುರ್ದೈವಿಗಳು.

    ಇವರು ಕಳೆದ ಹಲವು ದಿನಗಳಿಂದ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ರು, ಕುಡಿತದ ಚಟಕ್ಕೊಳಗಾಗಿದ್ದರಿಂದ ಚಟ ಬಿಡಿಸುವ ಸಲುವಾಗಿ ಸಂಬಂಧಿಕರು ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯ ಉಪ್ಪರಹಳ್ಳಿಯಲ್ಲಿ ನಾಟಿ ಔಷಧಿಯನ್ನ ಕೊಡಿಸಿ ಕರೆದುಕೊಂಡು ಬಂದಿದ್ರು. ಅಲ್ಲಿ ನಾಟಿವೈದ್ಯ ಸುಬ್ರಮಣಿ ಎಂಬಾತ ಮದ್ಯಪಾನದೊಂದಿಗೆ ನಾಟಿ ಔಷಧಿಯನ್ನ ಬೆರಸಿ ಕುಡಿಯಲು ನೀಡಿದ್ದನು. ಅದನ್ನ ಕುಡಿದು ಮನೆಗೆ ಬಂದ ಇಬ್ಬರು ತೀವ್ರ ಅಸ್ವಸ್ಥರಾಗಿ ಚಲಪತಿ ಎಂಬುವವರು ಮನೆಯಲ್ಲಿಯೆ ಮೃತಪಟ್ಟಿದ್ರೆ, ತೀವ್ರ ಅಸ್ವಸ್ಥನಾಗಿದ್ದ ಶಂಕರ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾರೆ.

    ಇಬ್ಬರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ನಂಗಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

     

  • ಕುಡಿಯಲು ನೀರು ಬೇಡುತ್ತಿವೆ ವನ್ಯಜೀವಿಗಳು

    ಕುಡಿಯಲು ನೀರು ಬೇಡುತ್ತಿವೆ ವನ್ಯಜೀವಿಗಳು

    ಕೋಲಾರ: ಅದು ಬರಕ್ಕೆ ತವರು ಜಿಲ್ಲೆ, ಬೇಸಿಗೆ ಬಂದ್ರೆ ಸಾಕು ಬಿಸಿ ತಾಳಲಾರದೆ ಕಾಡಿನಿಂದ ವನ್ಯ ಜೀವಿಗಳು ಅನ್ನ ನೀರಿಗಾಗಿ ನಾಡಿಗೆ ಬಂದು ಅಪಘಾತವಾಗಿ, ನಾಯಿಗಳ ದಾಳಿಗೆ ತುತ್ತಾಗುವುದು, ಇಲ್ಲ ಕಾಡಿನಲ್ಲೇ ಪ್ರಾಣ ಬಿಡುತ್ತಿವೆ. ಇಂತಹ ಸನ್ನಿವೇಶದಲ್ಲಿ ವನ್ಯಜೀವಿಗಳಿಗೆ ನೀರು ಆಹಾರದ ವ್ಯವಸ್ಥೆ ಮಾಡಿ ಮಾನವೀಯತೆ ತೋರಿಸಬೇಕಿದೆ.

    ಕಾಡಿನಲ್ಲಿ ಸ್ವಚ್ಚಂದವಾಗಿ ಕುಣಿಯುತ್ತಿರುವ ಕಾಡು ಪ್ರಾಣಿಗಳು ಈಗ ಆಹಾರ ಬಯಸಿ ನಾಡಿಗೆ ಬಂದು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿವೆ. ಮಳೆ ಅಭಾವದಿಂದ ಬರಗಾಲಕ್ಕೆ ತುತ್ತಾಗಿರುವ ಕೋಲಾರ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಶುರವಾಗಿದೆ. ಅದು ಕೇವಲ ಜನ-ಜಾನುವಾರುಗಳಿಗೆ ಮಾತ್ರವಲ್ಲದೇ ಕಾಡಿನಲ್ಲಿರುವ ಕಾಡು ಪ್ರಾಣಿಗಳು ಕೂಡ ನೀರಿಲ್ಲದೆ ಸಾಯುವ ಪರಿಸ್ಥಿತಿ ಬಂದಿದೆ.

    ಕಾಡಿನಲ್ಲಿರುವ ಕೆರೆ ಕುಂಟೆಗಳು ಬತ್ತಿ ಹೋಗಿದ್ದು, ಪ್ರಾಣಿಗಳು ನೀರಿಗಾಗಿ ಊರುಗಳತ್ತ ಬರುತ್ತಿದ್ದು, ಇದರಿಂದ ಅನೇಕ ಜಿಂಕೆ, ನವಿಲು, ಹಾವು ಮುಂತಾದ ಕಾಡು ಪ್ರಾಣಿಗಳು ನಾಯಿಗಳಿಗೆ, ವಾಹನಗಳಿಗೆ ಸಿಕ್ಕಿ ಪ್ರಾಣವನ್ನ ಕಳೆದುಕೊಳ್ಳುತ್ತಿವೆ. ಕೋಲಾರ ಜಿಲ್ಲೆಯಲ್ಲಿ ಸುಮಾರು 3 ರಿಂದ 4 ಸಾವಿರ ಕೃಷ್ಣಮೃಗಗಳಿದ್ದು, ನೀರಿಗಾಗಿ ನಾಡಿನತ್ತ ಬಂದು ಪ್ರಾಣ ಕಳೆದುಕೊಳ್ಳುತ್ತಿವೆ.

    ಕಾಡು ಪ್ರಾಣಿಗಳಿಗೆ ಬೇಕಿದೆ ನೀರು: ಬರದಿಂದ ಪರಿತಪ್ಪಿಸುತ್ತಿರುವ ಕಾಡಿನ ಪ್ರಾಣಿಗಳಿಗೆ ಬೇಸಿಗೆ ಮುಗಿಯವವರೆಗೂ ನೀರು ಒದಗಿಸುವ ಕೆಲಸ ಆಗಬೇಕಾಗಿದೆ. ಇದರಿಂದ ಕಾಡಿನ ಪ್ರಾಣಿ ಪಕ್ಷಿಗಳು, ನಾಡಿನತ್ತ ಮುಖ ಮಾಡುವುದು ಕಡಿಮೆಯಾಗುತ್ತದೆ. ಇಲ್ಲದಿದ್ದರೆ ನೀರನ್ನ ಹುಡುಕಿಕೊಂಡು ಬಂದು ನಾಯಿ ಅಥವಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವುದು ನಿಶ್ಚಿತ. ಅರಣ್ಯ ಸಂಪತ್ತನ್ನ ನಾಶ ಮಾಡಿ ಮಳೆಯಿಲ್ಲದೆ ಬರಗಾಲ ಅವರಿಸಿರುವ ಕೋಲಾರ ಜಿಲ್ಲೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಸಂಘ ಸಂಸ್ಥೆಗಳು ಮಾತ್ರವಲ್ಲ, ಪ್ರತಿಯೊಬ್ಬರು ತಮ್ಮ ಮನೆ ಹಾಗು ಛಾವಣಿ ಮೇಲೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿದ್ರೆ ಪ್ರಾಣಿ ಪಕ್ಷಿಗಳು ಉಳಿಯುತ್ತವೆ.

    ಒಟ್ನಲ್ಲಿ ಕೋಲಾರ ಜಿಲ್ಲೆಯಲ್ಲಿ ಜನ ಜಾನುವಾರುಗಳು ಮಾತ್ರವಲ್ಲದೆ ಕಾಡು ಪ್ರಾಣಿಗಳು ನೀರಿಗಾಗಿ ಪರಿತಪಿಸುತ್ತಿದ್ದು, ಇನ್ನಾದ್ರು ವನ್ಯ ಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ, ದಾನಿಗಳು ನೀರನ್ನ ಒದಗಿಸುವ ಜೊತೆಗೆ ಮೂಕ ಪ್ರಾಣಿಗಳ ಜೀವ ಉಳಿಸುವ ಕೆಲಸ ಮಾಡಿ ಮಾನವೀಯತೆ ಮರೆಯಬೇಕಿದೆ.

    https://www.youtube.com/watch?v=L63TZVBnyxA

     

  • ಕೋಲಾರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ- ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಾಶ

    ಕೋಲಾರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ- ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಾಶ

    ಕೋಲಾರ: ಬರದ ಜಿಲ್ಲೆ ಕೋಲಾರದಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ, ರೈತರ ಬದುಕೇ ಮೂರಾಬಟ್ಟೆಯಾಗಿದೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಬೆಳೆ, ಬಿರುಗಾಳಿ ಸಹಿತ ಮಳೆಗೆ ಕೊಚ್ಚಿಹೋಗಿದೆ.

    ಜಿಲ್ಲೆಯ ನಂಬಿಗಾನಹಳ್ಳಿ, ಆನೇಪುರ, ಶಕ್ಲಿಪುರ, ಚಿಕ್ಕಸಬ್ಬೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿನ ನೂರಾರು ಎಕರೆಯಲ್ಲಿ ಬೆಳೆದಿದ್ದ ಟೊಮ್ಯಾಟೋ, ಕ್ಯಾಪ್ಸಿಕಂ, ಬೀನ್ಸ್, ಮಾವಿನಕಾಯಿ, ಬಾಳೆ ತೋಟ, ಹಿಪ್ಪುನೇರಳೆ ಬೆಳೆ ನೆಲಸಮವಾಗಿದೆ.

    ನಂಬಿಗಾನಹಳ್ಳಿ ಕಾಲೋನಿಯಲ್ಲಿ ಐದಾರು ಮನೆಗಳ ಹೆಂಚುಗಳು ಹಾಗೂ ಸಿಮೆಂಟ್ ಶೀಟ್‍ಗಳು ಹಾರಿಹೋಗಿವೆ. ಇನ್ನೂ ಕೆಲವು ಕಡೆ ಲೈಟ್ ಕಂಬಗಳು, ನೂರಾರು ಮರಗಳು ನೆಲ್ಲಕ್ಕುರುಳಿವೆ. ಇತ್ತ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಪ್ಪೇನಹಳ್ಳಿಯಲ್ಲಿ ಮನೆ ಗೋಡೆ ಕುಸಿದು ಒರ್ವ ಸಾವನ್ನಪ್ಪಿ, ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ.

  • ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

    ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು.

    ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ ಮೇಲೆ ಬುಡ ಸಮೇತ ಮರ ಕಿತ್ತು ಬಿದ್ದಿದ್ದರಿಂದ, ಮನೆಯ ವರಾಂಡದಲ್ಲೆಲ್ಲಾ ಮರದ ಕೊಂಬೆಗಳು ಮುರಿದು ಬಿದ್ದಿತ್ತು. ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮನೆಯ ಮೇಲೆ ಬಿದ್ದ ಮರ ತೆರವುಗೊಳಿಸಲು ಹರಸಾಹಸ ಪಡುವಂತಾಯಿತು.

    ಬೆಸ್ಕಾಂಗೆ ಫೋನ್ ದೂರುಗಳ ಸುರಿ`ಮಳೆ: ತಿಳಿ ಮುಸ್ಸಂಜೆಯಿಂದ ಆರಂಭವಾದ ಮಳೆ ಆರ್ಭಟ ನಡುರಾತ್ರಿವರೆಗೆ ಆರ್ಭಟ ಮುಂದುವರಿದಿತ್ತು. ಕೇವಲ ಮೂರು ಗಂಟೆಯಲ್ಲಿ ಬೆಸ್ಕಾಂಗೆ ಬರೋಬ್ಬರಿ 3715 ದೂರುಗಳು ಬಂದಿವೆ. ಕರೆ ಸ್ವೀಕರಿಸಲಾಗದೇ 1912-ಬೆಸ್ಕಾಂ ಸಹಾಯವಾಣಿ ಸಂಪೂರ್ಣ ಸ್ಥಗಿತಗೊಂಡಿದೆ.

    ಬೆಂಗಳೂರು ಹೊರವಲಯದ ತಾವರೆಕೆರೆ ಠಾಣೆಯ ಮಾದಪಟ್ಟಣದ ಬಳಿ ಕಲ್ಲುಬಂಡೆ ಸಿಡಿಸಲು ಇಟ್ಟಿದ್ದ ಸಿಡಿಮದ್ದಿನ ಬಾಕ್ಸ್ ಗೆ ಸಿಡಿಲು ಬಡಿದು ಜಿಲೆಟಿನ್ ಕಡ್ಡಿಗಳು ಸ್ಫೋಟವಾಗಿ, ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ.

    ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಯ್ತು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆನ್ನೈ, ಹೈದ್ರಾಬಾದ್ ಕಡೆ ವಿಮಾನಗಳು ಮಾರ್ಗ ಬದಲಿಸಿದ್ವು. ಇನ್ನೊಂದೆಡೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಬಸವನಗುಡಿಯ ಶಂಕರಪುರ ಠಾಣೆ ಬಳಿ ಘಟನೆ ನಡೆದಿದೆ. ಡ್ರೈವ್ ಮಾಡುತ್ತಿದ್ದ ವೃದ್ಧನ ಕೈ ಮುರಿದಿದೆ.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮ ನಿನ್ನೆ ಸಂಜೆಯಿಂದ ಸುರಿದ ಮಳೆಗೆ ಬಹುತೇಕ ಗ್ರಾಮ ಜಲಾವೃತವಾಗಿದೆ. ಗಾಳಿ ಮಳೆಗೆ ಮನೆಗಳು, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಕೆಲವು ಮನೆಗಳ ಮೆಲ್ಛಾವಣಿ ತಗಡುಗಳು ಹಾರಿಹೋಗಿದ್ದು ಜನ ಹೈರಾಣಾಗಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಂಡಮಿಂದಪಲ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಐದು ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ರಾಮನಗರ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ನಾಗರಾಜು ಎಂಬುವವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇಟ್ಟುಮಡು ಗ್ರಾಮದಲ್ಲಿ 5 ವಿದ್ಯುತ್ ಕಂಬಗಳು ಹಾಗೂ ನಾಲ್ಕು ಮರಗಳು ಧರೆಗೆ ಉರುಳಿಬಿದ್ದಿವೆ.

    ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಪಾತಿಪಾಳ್ಯದಲ್ಲಿ ಸುರಿದ ಭಾರಿ ಮಳೆಗೆ ಚಿನ್ನಕ್ಕ ಎಂಬುವರ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ.

    ಶಿವಮೊಗ್ಗದಲ್ಲಿ ಮಳೆಯ ಆರ್ಭಟಕ್ಕೆ ಸಾಗರ ರಸ್ತೆಯ ಎಪಿಎಂಸಿ ಬಳಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಸಂಚಾರ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನ ಕತ್ತಲೆಯಲ್ಲಿ ಕಳೆಯುವಂತಾಯ್ತು.

    ಮಂಡ್ಯದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದ ಪರಿಣಾಮ, ಮಕ್ಕಳು ವೃದ್ಧರೆನ್ನದೇ ಹಲವರು ಬೀದಿಯಲ್ಲೇ ರಾತ್ರಿ ಕಳೆದಿದ್ದಾರೆ. ನಿನ್ನೆ ರಾತ್ರಿ ಮಂಡ್ಯ ದಲ್ಲಿ ಸಾಧಾರಣ ಮಳೆಯಾಗಿತ್ತು. ಆದ್ರೆ ಒಳ ಚರಂಡಿಯನ್ನು ಟೈಂಗೆ ಕ್ಲೀನ್ ಮಾಡಿಸದ ಕಾರಣ ಗಾಂಧಿನಗರದ ಮೂರನೇ ಕ್ರಾಸ್‍ನಲ್ಲಿ ನೀರು ಸಂಪೂರ್ಣ ಬ್ಲಾಕ್ ಆಗಿ ಮನೆಗಳಿಗೆ ನುಗ್ಗಿದೆ. ಪರಿಣಾಮ ಮನೆಯೊಳಗೆ ಇದ್ದ ದಿನಸಿ, ದಿನ ಬಳಕೆ ವಸ್ತುಗಳೆಲ್ಲಾ ನೀರು ಪಾಲಾಗಿವೆ. ಮನೆಯೊಳಗೆ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಎಲ್ರೂ ಹೊರಗೆ ಬಂದು ರಾತ್ರಿ ಕಳೆದಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ಕೋಲಾರದಲ್ಲಿ ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

    ಕೋಲಾರದಲ್ಲಿ ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

    ಕೋಲಾರ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ ಬೆಳಕಿಗೆ ಬಂದಿದೆ.

    ಬಂಗಾರಪೇಟೆ ತಾಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. 36 ವರ್ಷದ ತಂದೆ ಆರೋಪಿ ಭಾಸ್ಕರ್‍ನನ್ನ ಪೊಲೀಸರು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ.

    ತನ್ನ 14 ವರ್ಷದ ಮಗಳ ಮೇಲೆ ಕಳೆದ ಆರು ತಿಂಗಳಿಂದ ಮೂರ್ನಾಲ್ಕು ಬಾರಿ ತನ್ನ ಮುಂದೆ ಅತ್ಯಾಚಾರ ಮಾಡಿದ್ದಾನೆ. ಜೊತೆಗೆ ಭಾನುವಾರ ಕೂಡ ಅತ್ಯಾಚಾರಕ್ಕೆ ಯತ್ನಿಸಿದ, ಹಾಗಾಗಿ ಮನನೊಂದು ದೂರು ನೀಡಿದ್ದೇನೆ ಎಂದು ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

    ನನಗೆ ಇಂತಹ ನೀಚ ಗಂಡ ಬೇಡ, ಮಕ್ಕಳು ಮಾತ್ರ ಸಾಕು ಎಂದು ಪೊಲೀಸರಿಗೆ ನೀಡಿರುವ ನೀಡಿರುವ ದೂರಿನಲ್ಲಿ ನೊಂದ ತಾಯಿ ನೋವಿನಿಂದ ಹೇಳಿಕೊಂಡಿದ್ದಾರೆ.

    ಬೇತಮಂಗಲ ಪೊಲೀಸರು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಕೋಲಾರ: ನಕಲಿ ವೈದ್ಯ ಕೊಟ್ಟ ಇಂಜೆಕ್ಷನ್‍ಗೆ SSLC ಯುವಕ ಬಲಿ

    ಕೋಲಾರ: ನಕಲಿ ವೈದ್ಯ ಕೊಟ್ಟ ಇಂಜೆಕ್ಷನ್‍ಗೆ SSLC ಯುವಕ ಬಲಿ

    ಕೋಲಾರ: ನಕಲಿ ವೈದ್ಯ ನೀಡಿರುವ ಚುಚ್ಚುಮದ್ದಿನಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೇತಮಂಗಲದಲ್ಲಿರುವ ಶಾರದಾ ಕ್ಲಿನಿಕ್‍ನಲ್ಲಿ ಬುಧವಾರದಂದು ಚಿಕಿತ್ಸೆ ಪಡೆದಿರುವ ವಡ್ಡಹಳ್ಳಿ ನಿವಾಸಿಯಾದ 16 ವರ್ಷದ ಅಭಿರಾಮ್ ಮೃತಪಟ್ಟಿದ್ದಾನೆ. ಕಿವಿ ನೋವಿಗೆಂದು ಶಾರದಾ ಕ್ಲಿನಿಕ್‍ನ ನಕಲಿ ವೈದ್ಯ ನವೀನ್ ಕುಮಾರ್ ಚುಚ್ಚು ಮದ್ದು ನೀಡಿದ್ದು, ಈ ವೇಳೆ ಅಭಿರಾಮ್ ತಕ್ಷಣವೇ ಕುಸಿದು ಬಿದ್ದಿದ್ದಾನೆ. ಅದಾದ ನಂತರ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ ನಂತರ ಬಾಲಕ ಮೃತಪಟ್ಟಿದ್ದಾನೆ. ಅಭಿರಾಮ್ ಮನೆಯಲ್ಲಿ ಈಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ವೈದ್ಯ ನವೀನ್ ಕುಮಾರ್ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದಾನೆ ಎಂದು ಮೃತ ಬಾಲಕನ ಪೋಷಕರು ಹಾಗೂ ಸಂಬಂಧಿಕರು ಆರೋಪಸಿದ್ದಾರೆ. ಈ ಕುರಿತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

    ಬೇತಮಂಗಲದಲ್ಲಿರುವ ಶಾರದಾ ಕ್ಲಿನಿಕ್‍ನಲ್ಲಿ ಡಾ. ನವೀನ್ ಕುಮಾರ್ ಎಂಡಿ, ಎಫ್‍ಎಜಿ ಎಂದು ಹಾಗೂ ಅತನ ಪತ್ನಿ ಶ್ವೇತ ನವೀನ್ ಕುಮಾರ್ ಎಂಬಿಬಿಎಸ್‍ಯೆಂದು ಫಲಕ ಹಾಕಿಕೊಂಡಿದ್ದಾರೆ.

     

  • ಭಾರೀ ಮಳೆಗೆ ಕೋಲಾರದಲ್ಲಿ ಭೂ ಕುಸಿತವಾಗಿ ಹೊಂಡ ನಿರ್ಮಾಣ

    ಭಾರೀ ಮಳೆಗೆ ಕೋಲಾರದಲ್ಲಿ ಭೂ ಕುಸಿತವಾಗಿ ಹೊಂಡ ನಿರ್ಮಾಣ

    ಕೋಲಾರ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿ ಹೊಂಡವೇ ನಿರ್ಮಾಣವಾಗಿರುವ ಘಟನೆ ಕೋಲಾರದ ಕೆಜಿಎಫ್‍ನ ಉರಿಗಾಂ ಬಳಿಯಿರುವ ಮಂಜುನಾಥ ನಗರದಲ್ಲಿ ನಡೆದಿದೆ.

    ನಿನ್ನೆ ರಾತ್ರಿ ಬಿದ್ದ ಮಳೆಯಿಂದ ಸುಮಾರು 50 ರಿಂದ 70 ಅಡಿಗಳಷ್ಟು ಭೂಮಿ ಕುಸಿದು ಹೊಂಡ ನಿರ್ಮಾಣವಾಗಿದ್ದು, ಘಟನೆಯಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಭೂ ಕುಸಿತದಿಂದ ಉಂಟಾಗಿರುವ ಹೊಂಡವನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

    ಈ ಹಿಂದೆ ಕೆಜಿಎಫ್‍ನಲ್ಲಿ ಬಿಜಿಎಂಎಲ್ ಮೈನಿಂಗ್ ನೆಡದಿದ್ದು ಇದರ ಪರಿಣಾಮದಿಂದಲೇ ಭೂ ಕುಸಿತವಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆ ಸಂಭವಿಸಿದ್ದರೂ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ. ಹೀಗಾಗಿ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.