Tag: ಕೋಲಾರ

  • ರಾಜ್ಯದ ಹಲವೆಡೆ ರಾತ್ರಿ ಗುಡುಗು ಸಹಿತ ಮಳೆ- ಮೈಸೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

    ರಾಜ್ಯದ ಹಲವೆಡೆ ರಾತ್ರಿ ಗುಡುಗು ಸಹಿತ ಮಳೆ- ಮೈಸೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

    ಬೆಂಗಳೂರು: ಮಂಗಳವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆ ಬಂದಿದ್ದರಿಂದ ವಾಹನ ಸವಾರರು ಪರದಾಡಿದರು. ರಾಮನಗರದಲ್ಲೂ ಭಾರಿ ಮಳೆಯಾಗಿದ್ದು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುವಂತಾಯಿತು.

    ಮೈಸೂರಿನಲ್ಲೂ ಮಳೆಯಾಗಿದ್ದು, ನಗರದ ಹೊರವಲಯದ ಕೆಂಪಯ್ಯನಹುಂಡಿಯಲ್ಲಿ ಸಿಡಲು ಬಡಿದು ನಾಡನಹಳ್ಳಿ ಗ್ರಾಮದ ನಿವಾಸಿ ನಾಗರಾಜು (42) ಎಂಬವರು ಸಾವನ್ನಪ್ಪಿದ್ದಾರೆ. ಕೆಂಪಯ್ಯನಹುಂಡಿಗೆ ಕೂಲಿ ಕೆಲಸಕ್ಕೆ ನಾಗರಾಜು ಬಂದಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಪಿ.ಗಂಗಾಪುರದಲ್ಲಿ ಒನಮ್ಮ ಎಂಬುವರಿಗೆ ಸೇರಿದ ಸೀಮೆಹಸುವೊಂದು ಸಿಡಿಲು ಬಡಿತಕ್ಕೆ ಸಿಲುಕಿ ಸಾವನ್ನಪ್ಪಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಿತ್ತಲಪುರಗ್ರಾಮದಲ್ಲಿ ಗ್ರಾಮದ ನಂಜುಂಡಯ್ಯ ಎಂಬುವರಿಗೆ ಸೇರಿದ ಹಸು ಸಾವನ್ನಪ್ಪಿದೆ. ಈ ವೇಳೆ ಅದೃಷ್ಟವಶಾತ್ ಸ್ಥಳದಲ್ಲಿದ್ದ ನಂಜುಡಯ್ಯ ಪಾರಾಗಿದ್ದಾರೆ.

     

  • ಬೆಳಕು ಇಂಪ್ಯಾಕ್ಟ್: 16 ವರ್ಷಗಳಿಂದ ಹಾಲು ಕುಡಿಯುವ ಬಾಲಕನಿಗೆ ಸಿಕ್ತು ನೆರವು

    ಬೆಳಕು ಇಂಪ್ಯಾಕ್ಟ್: 16 ವರ್ಷಗಳಿಂದ ಹಾಲು ಕುಡಿಯುವ ಬಾಲಕನಿಗೆ ಸಿಕ್ತು ನೆರವು

    ಕೋಲಾರ: ಆತ ಅನ್ನ ತಿನ್ನಲ್ಲ ನೀರು ಕುಡಿಯಲ್ಲ, ಕಳೆದ 16 ವರ್ಷಗಳಿಂದ ಅನ್ನ ನೀರು ಇಲ್ಲದೆ ಬದುಕುತ್ತಿರುವ ಬಾಲಕನಿಗೆ ಕೇವಲ ಹಾಲಷ್ಟೇ ಆಹಾರ. ಬರಿ ಹಾಲು ಕುಡಿದೆ ಜೀವನ ಸವೆಸುತ್ತಿರುವ ಬಾಲಕನಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ಆಸರೆಯಾಗಿದೆ. ಬೆಳಕಿನ ನೆರವಿನಿಂದ ಬಾಲಕನಿಗೆ ಹಾಲು, ಆತನನ್ನ ಪೋಷಣೆ ಮಾಡಲು ಕುಟುಂಬಕ್ಕೆ ನೆರವು ಸಿಕ್ಕಿದೆ.

    ಕೋಲಾರ ತಾಲೂಕಿನ ಕೋಡಿ ಕಣ್ಣೂರು ಗ್ರಾಮದ ಗೋವಿಂದಪ್ಪ ದಂಪತಿಗಳ ಎರಡನೆ ಮಗ ಸಂತೋಷ್ ಕೇವಲ ಹಾಲು ಮಾತ್ರ ಕುಡಿಯುತ್ತಾನೆ. ಸಂತೋಷ್ ಹುಟ್ಟಿದಾಗಿನಿಂದಲೂ ಅನ್ನವನ್ನು ಸೇವಿಸಲ್ಲ. ಇದುವರೆಗೂ ಬದುಕಿರೋದು ಕೇವಲ ಹಾಲನ್ನ ಕುಡಿದು ಅನ್ನೋದೆ ವಿಶೇಷ. ಬೇರೆ ಲಿಕ್ವಡ್ ಕುಡಿಸುವ ಪೋಷಕರು ಪಟ್ಟಿರುವ ಪ್ರಯತ್ನ ಅಷ್ಟಿಷ್ಟಲ್ಲ, ಈತನ ಬಾಯಿಗೆ ತಿಂಡಿ ಅಥವಾ ಇನ್ನೇನಾದ್ರು ತಿನ್ನಿಸೋದಿಕ್ಕೆ ಬಂದ್ರು ಉಗಿದುಬಿಡ್ತಾನೆ. ಹಾಲು ತುಂಬಿದ ಬಾಟಲ್ ಮಾತ್ರ ಈತನಿಗೆ ಗೊತ್ತಿರೋದು.

    ಹೀಗಿರುವಾಗ ಸಂತೋಷ್ ಪೋಷಕರು ಪಬ್ಲಿಕ್ ಟಿವಿಯನ್ನ ಸಂಪರ್ಕಿಸಿ ಪ್ರತಿ ನಿತ್ಯ ಹಾಲು ಕೊಡಿಸುವಂತೆ ಮನವಿ ಮಾಡಿದ್ರು. ಪಬ್ಲಿಕ್ ಟಿವಿ ಮನವಿಯಂತೆ ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಪ್ರತಿನಿತ್ಯ ಹಾಲು ನೀಡುತ್ತಿದೆ. ಜೊತೆಗೆ ಕುಟುಂಬ ಪೋಷಣೆಗೆ ಒಂದು ಉದ್ಯೋಗಕ್ಕೆ ಕೂಡ ಬೆಳಕು ಆಸರೆಯಾಗಿದೆ.

    ಬೆಳಕಿನ ಆಸರೆ: ಸಂತೋಷ್ 6 ತಿಂಗಳ ಮಗುವಿನಲ್ಲಿ ಪಿಡ್ಸ್ ಬಂದು ಶಾಕ್ ಆದ ಕಾರಣ ಒಂದು ಕೈ, ಮೆದಳು ಸ್ವಾಧೀನ ಕಳೆದುಕೊಂಡಿದೆ. ಬೆಂಗಳೂರಿನ ವಿಕ್ಟೋರಿಯಾ, ನಿಮ್ಹಾನ್ಸ್ ಆಸ್ಪತ್ರೆಗಳು ಸೇರಿದಂತೆ ಹಲವೆಡೆ ತೋರಿಸಲಾಗಿದೆ. ಆದ್ರೂ ಯಾವುದೆ ಪ್ರಯೋಜನವಾಗಿಲ್ಲ, ಮೆದುಲಿಗೆ ಶಾಕ್ ಆಗಿರೋ ಕಾರಣ ಜೀವನ ಪರ್ಯಂತ ಇದು ಸರಿಹೋಗಲ್ಲ ಎಂದು ವೈದ್ಯರು ಹೇಳಿ ಕಳುಹಿಸಿದ್ದಾರೆ. ಕೂಲಿ ಮಾಡಿ ಜೀವನ ಸಾಗಿಸುವುದು ಕಷ್ಟಕರವಾದ ಜೀವನದಲ್ಲಿ ಮಗನಿಗೆ ದಿನಕ್ಕೆ ಅಲ್ಪಸ್ವಲ್ಪ ಹಾಲಿನ ಜೊತೆಗೆ, ಕೋಲಾರ ನೂತನ ವಿಧಾನ ಸೌಧ ಬಳಿ ಜೆರಾಕ್ಸ್ ಅಂಗಡಿ ಹಾಕಿ ಕೊಳ್ಳಲು ಅನುಮತಿ ಸಿಕ್ಕಿದೆ. ಅದರಂತೆ ಈಗ ಹಾಲು ಹಾಗೂ ಉದ್ಯೋಗ ಕಲ್ಪಿಸುವ ಮೂಲಕ ಬಡ ಕುಟುಂಬಕ್ಕೆ ಬೆಳಕಿನ ಆಸರೆ ಸಿಕ್ಕಿದೆ.

    ಒಟ್ನಲ್ಲಿ ಬೆಳಕು ಕಾರ್ಯಕ್ರಮದ ಮೂಲಕ ಸಂತೋಷನಿಗೆ ಹಾಲು ಕೊಡಿಸಿದ ಸಂತೋಷ, ಇತ್ತ ಕುಟುಂಬ ಪೋಷಣೆಗೆ ಒಂದು ಸಣ್ಣ ಅಂಗಡಿಗೂ ಅನುಮತಿ ನೀಡಿದ ಕಾಳಜಿ, ಇದರಿಂದ ಒಂದು ಬಡ ಕುಟುಂಬಕ್ಕೆ ಬೆಳಕು ಆಸರೆಯಾಯಿತಲ್ಲ ಎಂಬುದೇ ನೆಮ್ಮದಿಯ ವಿಚಾರ.

     

  • ನೋಡನೋಡುತ್ತಿದ್ದಂತೆ ಕಲ್ಯಾಣಿಯಲ್ಲಿ ಮುಳುಗಿ ವ್ಯಕ್ತಿ ಸಾವು: ಮಾನವೀಯತೆ ಮರೆತ ಕೋಲಾರ ಜನ

    ನೋಡನೋಡುತ್ತಿದ್ದಂತೆ ಕಲ್ಯಾಣಿಯಲ್ಲಿ ಮುಳುಗಿ ವ್ಯಕ್ತಿ ಸಾವು: ಮಾನವೀಯತೆ ಮರೆತ ಕೋಲಾರ ಜನ

    ಕೋಲಾರ: ಸಾವು ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಗಳಿಗೆ ಸಹಾಯ ಮಾಡಿ ಎಂದು ಮಾಧ್ಯಮಗಳು ಸಾಕಷ್ಟು ಬಾರಿ ಸುದ್ದಿ ಪ್ರಸಾರ ಮಾಡಿದರೂ ಕೋಲಾರದ ಜನ ಮಾನವೀಯತೆಯನ್ನು ಮರೆತಿದ್ದಾರೆ.

    ಜನರು ನೋಡ ನೋಡುತ್ತಿದ್ದಂತೆ ಹಾರೋಹಳ್ಳಿ ನಿವಾಸಿ ನಂಜಪ್ಪ(70) ಕೋಲಾರ ನಗರದ ಟೇಕಲ್ ರಸ್ತೆಯಲ್ಲಿರುವ ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

    ಅಪಾಯದಲ್ಲಿದ್ದಾಗ ರಕ್ಷಣೆ ಮಾಡಬೇಕಾದ ಜನ ನಂಜಪ್ಪ ಅವರ ಕೊನೆ ಕ್ಷಣಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು ಶವವನ್ನು ಹುಡುಕುತ್ತಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=1AdWGm0-7yY

  • ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್

    ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್

    ಕೋಲಾರ: ತೆಲುಗು ಪ್ರಭಾವವೇ ಹೆಚ್ಚಿರುವ ಕೋಲಾರದ ಗಡಿ ಶ್ರೀನಿವಾಸಪುರದ ಕಿರಣ್ ಕನ್ನಡದ ಕಂಪು ಪಸರಿಸ್ತಿದ್ದಾರೆ.

    ಸಣ್ಣದೊಂದು ಕೊಠಡಿಯಲ್ಲಿಯೇ ಹೋರಾಟಗಾರರು, ಜ್ಞಾನಪೀಠ ಪುರಸ್ಕೃತರು, ಸಂತರು, ದಾರ್ಶನಿಕರು, ಸಮಾಜ ಸುಧಾರಕರ ಫೋಟೊಗಳಿಗೆ ಪೂಜೆ ಸಲ್ಲಿಸುತ್ತಿರುವ ಕಿರಣ್, ಕೋಲಾರದ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತ್ತಕೋತ್ತರ ಪದವಿ ವಿದ್ಯಾರ್ಥಿ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗಡಿ ಸೋಮಯಾಜಲಹಳ್ಳಿಯಲ್ಲಿ ಇಂದಿಗೂ ತೆಲುಗಿನ ಪ್ರಭಾವವೇ ಹೆಚ್ಚು. ಇದರ ನಡುವೆಯೂ ಕಿರಣ್ ಮಾತ್ರ ಕನ್ನಡವನ್ನೇ ಪಸರಿಸ್ತಿದ್ದಾರೆ.

    ಸರ್ಕಾರದ ಸಣ್ಣ ಕಟ್ಟಡದ ಆಶ್ರಯ ಪಡೆದುಕೊಂಡಿರುವ ಕಿರಣ್, ಮನೆಯವರ ಆಸರೆ ಇಲ್ಲದೆ ವಿದ್ಯಾರ್ಥಿ ವೇತನದಲ್ಲೇ ಓದ್ತಿದ್ದಾರೆ. ಕಿರಣ್ ಹವ್ಯಾಸ ಮತ್ತು ಕನ್ನಡಾಭಿಮಾನವನ್ನ ಕಂಡ ಸ್ಥಳೀಯರು ಬೆಂಬಲಕ್ಕೆ ನಿಂತಿದ್ದಾರೆ.

    ಒಟ್ಟಿನಲ್ಲಿ, ಯುವ ಪೀಳಿಗೆಯಂತೆ ಮೊಬೈಲ್ ಮೇನಿಯಾದಲ್ಲಿ ಮುಳುಗಿಹೋಗದ ಕಿರಣ್ ಎಲ್ಲರ ಗಮನ ಸೆಳೆದಿದ್ದಾರೆ.

    https://www.youtube.com/watch?v=VqZ-7hzYkNQ

  • ಹೊಸ ಬಟ್ಟೆ, ಕೈ,ಕಾಲಲ್ಲಿ ಬೆಳ್ಳಿ ಒಡವೆ- 3 ತಿಂಗಳ ಹೆಣ್ಣು ಮಗುವನ್ನ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋದ್ರು

    ಹೊಸ ಬಟ್ಟೆ, ಕೈ,ಕಾಲಲ್ಲಿ ಬೆಳ್ಳಿ ಒಡವೆ- 3 ತಿಂಗಳ ಹೆಣ್ಣು ಮಗುವನ್ನ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋದ್ರು

    ಕೋಲಾರ: ಅನಾರೋಗ್ಯ ಪೀಡಿತ ಮೂರು ತಿಂಗಳ ಮುದ್ದಾದ ಹೆಣ್ಣು ಮಗುವೊಂದನ್ನ ಪೋಷಕರು ಬಿಟ್ಟು ಹೋಗಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.

    ಕಳೆದ ರಾತ್ರಿ ಹತ್ತು ಗಂಟೆ ಸುಮಾರಿಗೆ ಕೋಲಾರ ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿ ಮಗುವನ್ನು ಬಿಟ್ಟು ಹೋಗಿದ್ದು, ಮಗು ಅಳುವ ಶಬ್ದವನ್ನು ಕೇಳಿ ಆಸ್ಪತ್ರೆ ಸಿಬ್ಬಂದಿ ಹೋಗಿ ನೋಡಿದ್ದಾರೆ. ಸುಮಾರು ಮೂರು ತಿಂಗಳ ಹೆಣ್ಣು ಮಗುವೊಂದು ಅನಾಥವಾಗಿ ಅಳುತ್ತಾ ಮಲಗಿದ್ದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಮಗುವನ್ನು ತಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

    ಮಗುವಿಗೆ ಪಿಡ್ಸ್ ಇದ್ದು ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಸದ್ಯ ಜಿಲ್ಲಾಸ್ಪತ್ರೆ ಸಿಬ್ಬಂದಿ ಮಗುವಿಗೆ ಆರೈಕೆ ಮಾಡುತ್ತಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಾಗೂ ಕೋಲಾರ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

    ಮಗು ನೀಲಿ ಬಣ್ಣದ ಬಟ್ಟೆ ಧರಿಸಿದ್ದು, ಕಾಲಿಗೆ ಬೆಳ್ಳಿ ಕಾಲೊಂದಿಗೆ, ಕೈಗೆ ಬಳೆಗಳನ್ನೆಲ್ಲಾ ಹಾಕಲಾಗಿದೆ. ಮಗುವನ್ನ ನೋಡಿದ್ರೆ ಯಾರೋ ಸ್ಥಿತಿವಂತರ ಮನೆಯ ಮಗು ಎಂದು ತಿಳಿದುಬರುತ್ತಿದೆ. ಆದ್ರೆ ಮಗುವನ್ನು ಯಾಕೆ ಆಸ್ಪತ್ರೆ ಬಳಿ ಬಿಟ್ಟುಹೋಗಿದ್ದಾರೆ ಅನ್ನೋದು ತಿಳಿದುಬಂದಿಲ್ಲ. ಪೋಷಕರಿಂದ ದೂರಾಗಿ ಅನಾಥವಾಗಿರುವ ಮಗು ಸದ್ಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಪ್ರೀತಿಯ ಆರೈಕೆಯಲ್ಲಿದೆ.

  • ವಿಡಿಯೋ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎದುರೇ ಇತ್ತಂಡಗಳ ಹೊಡೆದಾಟ

    ವಿಡಿಯೋ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎದುರೇ ಇತ್ತಂಡಗಳ ಹೊಡೆದಾಟ

    ಕೋಲಾರ: ನಗರದ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎದುರೇ ಇತ್ತಂಡಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ದೃಶ್ಯಗಳು ಜಿಲ್ಲಾಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

    ನಗರದ ಶೇನ್ ಷಾ ಬಡವಾಣೆಯಲ್ಲಿ ಉರುಸ್ ಮೆರವಣಿಗೆ ವೇಳೆ ಏಜಾಜ್ ಅಹಮದ್ ಮತ್ತು ವಸೀಮ್ ಗುಂಪುಗಳ ನಡುವೆ ಗಲಾಟೆ ಉಂಟಾಗಿತ್ತು. ಎರಡು ಗುಂಪುಗಳು ಒಬ್ಬರ ಮೇಲೊಬ್ಬರು ಬ್ಲೇಡ್ ಮತ್ತು ಚಾಕುವಿನಿಂದ ಹಲ್ಲೆ ಮಾಡಿಕೊಂಡಿದ್ದರು. ಗಲಾಟೆಯಲ್ಲಿ ಏಜಾಜ್ ಅಹಮದ್ ಗುಂಪಿನ 6 ಜನರು ಗಂಭೀರವಾಗಿ ಗಾಯಗಳಾಗಿತ್ತು.

    ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ತೀವ್ರ ನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡುತ್ತಿದ್ದಂತೆ ತುರ್ತು ನಿಗಾ ಘಟಕದಲ್ಲಿ ಸ್ಥಳದಲ್ಲಿಯೇ ಪೊಲೀಸರು ಇದ್ದರೂ ಎರಡು ಗುಂಪುಗಳ ಸದಸ್ಯರು ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿಕೊಳ್ಳಲು ಮುಂದಾಗಿದ್ದರು. ಇದರಿಂದ ಆಸ್ಪತ್ರೆಯಲ್ಲಿದ್ದ ಸಿಬ್ಬಂದಿ ಮತ್ತು ರೋಗಿಗಳಲ್ಲಿ ಭಯದ ವಾತವಾರಣ ನಿರ್ಮಾಣವಾಗಿತ್ತು.

    ವಿಷಯ ತಿಳಿದು ಸ್ಥಳಕ್ಕಾಗಾಮಿಸಿದ ನಗರ ಠಾಣಾ ಪಿಎಸ್‍ಐ ಪ್ರದೀಪ್ ವಾಸೀಂ ಗುಂಪಿನ 8 ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=EnSV5WDKu1M

     

  • ಹುಡುಗ, ಹುಡುಗಿಯ ಲವ್ ಕೇಸ್‍ನಲ್ಲಿ ಉಪ್ಪಿಯ ಡಾ. ಮೋದಿ ಸ್ಕ್ರಿಪ್ಟ್ ಹೋಯ್ತು!

    ಹುಡುಗ, ಹುಡುಗಿಯ ಲವ್ ಕೇಸ್‍ನಲ್ಲಿ ಉಪ್ಪಿಯ ಡಾ. ಮೋದಿ ಸ್ಕ್ರಿಪ್ಟ್ ಹೋಯ್ತು!

    ಬೆಂಗಳೂರು: ಹುಡುಗ, ಹುಡುಗಿಯ ಲವ್, ಥಳಿತ ಕೇಸ್‍ನಲ್ಲಿ ನಟ ಉಪೇಂದ್ರ ಅವರ ಮುಂದಿನ ‘ಡಾಕ್ಟರ್ ಮೋದಿ’ ಸ್ಕ್ರಿಪ್ಟ್ ಕಾಪಿಯನ್ನು ಯುವತಿಯ ಪೋಷಕರು ಕದ್ದುಕೊಂಡು ಹೋಗಿದ್ದಾರೆಂಬ ಆರೋಪ ಕೇಳಿ ಬಂದಿದೆ.

    ಈ ಪ್ರಕರಣದ ಸಂಬಂಧ ಪ್ರಿಯಕರ ರಮೇಶ್ ತಾನು ಪ್ರೀತಿಸುತ್ತಿದ್ದ ಯುವತಿಯ ತಾಯಿ ವೇದಾವತಿ ಮತ್ತು ಮಾವ ರಮೇಶ್ ಮೇಲೆ ಎಚ್‍ಎಸ್‍ಆರ್ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಏನಿದು ಲವ್ ಸ್ಟೋರಿ?
    ತೀರ್ಥಹಳ್ಳಿ ಮೂಲದ ಎಂಕಾಂ ಓದಿರುವ ಶ್ರೀಕರ ಹಾಗೂ ಕೋಲಾರದ ಬಿಇ ಪದವೀಧರೆ ಶ್ವೇತಾಗೆ ಶಾದಿ ಡಾಟ್ ಕಾಂನಲ್ಲಿ ಪರಿಚಯವಾಗಿದೆ. ಈ ಪರಿಚಯ ಕೆಲ ದಿನಗಳ ಬಳಿಕ ಪ್ರೀತಿಗೆ ತಿರುಗಿದೆ. ನಗರದ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗ ಮಾಡಿಕೊಂಡಿದ್ದ ಇವರು ಕಳೆದ ಒಂದು ವರ್ಷ 8 ತಿಂಗಳಿನಿಂದ ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು.

    ಈ ಮಧ್ಯೆ ಶ್ವೇತಾ ಎರಡು ಭಾರಿ ಗರ್ಭವತಿಯಾಗಿದ್ದು, ತಾಯಿ ಅಬಾರ್ಷನ್ ಮಾಡಿಸಿದ್ದರಂತೆ. ಇದಾದ ಬಳಿಕ ಶ್ವೇತಾ ತಾಯಿ ವೇದಾವತಿ ಮತ್ತು ಮಾವ ರಮೇಶ್, ಕದ್ದು ಮುಚ್ಚಿ ಮದುವೆಯಾಗಿರುವುದು ಸರಿಯಲ್ಲ, ಅದ್ಧೂರಿಯಾಗಿ ಸಾರ್ವಜನಿಕವಾಗಿ ನಿಮ್ಮಿಬ್ಬರಿಗೂ ಮದುವೆ ಮಾಡಿಸುವುದಾಗಿ ಭರವಸೆ ನೀಡಿ ಮಗಳನ್ನು ಕೋಲಾರಕ್ಕೆ ಕರೆದೊಯ್ದಿದ್ದಾರೆ.

    ರಮೇಶ್ ಆರೋಪ ಏನು?
    ಊರಿಗೆ ಕರೆದೊಯ್ದ ನಂತರ ಶ್ವೇತಾ ಪೋಷಕರು ಮದುವೆ ವಿಚಾರ ಮಾತನಾಡಬೇಕು ಕೋಲಾರಕ್ಕೆ ಬಾ ಎಂದು ನನಗೆ ಫೋನ್ ಮಾಡಿ ತಿಳಿಸಿದ್ದರು. ಫೋನ್ ಕರೆಯ ಹಿನ್ನೆಲೆಯಲ್ಲಿ ಭಾನುವಾರ ಕೋಲಾರಕ್ಕೆ ಬಂದಾಗ ನನ್ನ ಮೇಲೆ ಮೇಲೆ ಶ್ವೇತಾ ತಾಯಿ ವೇದಾವತಿ ತಮ್ಮ ರಮೇಶ್ ಕೆಲ ಗೂಂಡಾಗಳನ್ನು ಕರೆಸಿ ಹಲ್ಲೆ ಮಾಡಿಸಿದ್ದಾರೆ. ಅಷ್ಟೇ ಅಲ್ಲದೇ ತಮ್ಮದೇ ಕಾರಿನಲ್ಲಿ ನನ್ನನ್ನು ಬೆಂಗಳೂರಿನ ಹೆಚ್‍ಎಸ್‍ಆರ್ ಲೇಔಟ್‍ನ ಮನೆಗೆ ಕರೆ ತಂದು ನನ್ನ ಮತ್ತು ಶ್ವೇತಾ ಮದುವೆಗೆ ಸಂಬಂಧಿಸಿದ ಫೋಟೋಗಳು, ಲವ್ ಲೆಟರ್ ಗಳು ಮತ್ತು ನನ್ನ ಆಫೀಸ್‍ಗೆ ಸಂಬಂಧಿಸಿದ ಕೆಲ ಡಾಟಾ ಮತ್ತು ಮಾರ್ಕ್ಸ್ ಕಾರ್ಡ್‍ಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಮೋದಿ ಸ್ಕ್ರಿಪ್ಟ್ ಹೋಯ್ತು:
    ನಿರ್ದೇಶಕ ಉದಯ್ ಪ್ರಕಾಶ್ ಅವರಿಗೆ ಸಹಾಯಕನಾಗಿ ನಾನು ಕೆಲಸ ಮಾಡುತ್ತಿದ್ದು, ನಟ ಉಪೇಂದ್ರ ಅವರ ಮುಂದಿನ ಚಿತ್ರ ಡಾಕ್ಟರ್ ಮೋದಿಗೆ ಸ್ಕ್ರಿಪ್ಟ್ ಮಾಡಿದ್ದೆ. ಆ ಸ್ಕ್ರಿಪ್ಟ್ ಹಾರ್ಡ್ ಕಾಪಿಯನ್ನೂ ಶ್ವೇತಾ ಪೋಷಕರು ಕದ್ದುಕೊಂಡು ಹೋಗಿದ್ದಾರೆ. ಹೀಗಾಗಿ ನನಗೆ ಈ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕೆಂದು ಎಚ್‍ಎಸ್‍ಆರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

  • ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು

    ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು

    ಕೋಲಾರ: ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲವನ್ನ ಧ್ವಂಸಗೊಳಿಸಿ ಬೆಂಕಿ ಇಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತೆರ್ನಹಳ್ಳಿ ಗ್ರಾಮದಲ್ಲಿ ತಡ ರಾತ್ರಿ ಈ ಘಟನೆ ನಡೆದಿದೆ. ವಕೀಲ ಚಂದ್ರಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಈ ದೇವಾಲಯ ನಿರ್ಮಾಣವಾಗಿತ್ತು.

    ಜಮೀನಿನಲ್ಲಿ ದೇವಾಲಯ ನಿರ್ಮಿಸಿದ್ದಕ್ಕೆ ನಾರಾಯಣಮ್ಮ ಅಕ್ಷೇಪ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಜಮೀನು ವಿವಾದದ ಹಿನ್ನೆಲೆಯಲ್ಲಿ ನಾರಾಯಣಮ್ಮ ದೇಗುಲಕ್ಕೆ ಬೆಂಕಿ ಇಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಬೆಳಕು ಇಂಪ್ಯಾಕ್ಟ್: 16 ವರ್ಷದಿಂದ ಕೇವಲ ಹಾಲು ಕುಡಿಯೋ ಬಾಲಕನಿಗೆ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ನೆರವು

    ಬೆಳಕು ಇಂಪ್ಯಾಕ್ಟ್: 16 ವರ್ಷದಿಂದ ಕೇವಲ ಹಾಲು ಕುಡಿಯೋ ಬಾಲಕನಿಗೆ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ನೆರವು

    ಕೋಲಾರ: ಈ ಹುಡುಗ ಅನ್ನ ತಿನ್ನಲ್ಲ, ನೀರು ಕುಡಿಯಲ್ಲ, ಕಳೆದ 16 ವರ್ಷಗಳಿಂದ ಅನ್ನ ನೀರು ಇಲ್ಲದೆ ಬದುಕುತ್ತಿರುವ ಬಾಲಕನಿಗೆ ಕೇವಲ ಹಾಲಷ್ಟೆ ಆಹಾರ. ಬರಿ ಹಾಲು ಕುಡಿದೇ ಜೀವನ ಸವೆಸುತ್ತಿರುವ ಬಾಲಕನಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ಆಸರೆಯಾಗಿದೆ. ಬೆಳಕಿನ ನೆರವಿನಿಂದ ಬಾಲಕನಿಗೆ ಹಾಲು, ಆತನನ್ನ ಪೋಷಣೆ ಮಾಡಲು ಕುಟುಂಬಕ್ಕೆ ನೆರವು ಸಿಕ್ಕಿದೆ.

    ಕೋಲಾರ ತಾಲೂಕಿನ ಕೋಡಿ ಕಣ್ಣೂರು ಗ್ರಾಮದ ಗೋವಿಂದಪ್ಪ ದಂಪತಿಯ ಎರಡನೆ ಮಗ ಸಂತೋಷ್ ಹುಟ್ಟಿದಾಗಿನಿಂದಲೂ ಅನ್ನವನ್ನು ಸೇವಿಸಲ್ಲ. ಈತ ಇದುವರೆಗೂ ಹಾಲನ್ನು ಕುಡಿದು ಬದುಕಿದ್ದಾನೆ. ಸಂತೋಷ್ ಪೋಷಕರು ಬೇರೆ ಆಹಾರ ತಿನ್ನಿಸಲು ಪಟ್ಟ ಪ್ರಯತ್ನ ಅಷ್ಟಿಷ್ಟಲ್ಲ. ಈತನ ಬಾಯಿಗೆ ತಿಂಡಿ ಅಥವಾ ಇನ್ನೇನಾದ್ರು ತಿನ್ನಿಸೋದಿಕ್ಕೆ ಬಂದ್ರೂ ಉಗಿದುಬಿಡ್ತಾನೆ. ಹಾಲು ತುಂಬಿದ ಬಾಟಲ್ ಮಾತ್ರ ಈತನಿಗೆ ಗೊತ್ತಿರೋದು. ಹೀಗಿರುವಾಗ ಈತನ ಪೋಷಕರು ಪಬ್ಲಿಕ್ ಟಿವಿಯನ್ನ ಸಂಪರ್ಕಿಸಿ ಪ್ರತಿ ನಿತ್ಯ ಹಾಲು ಕೊಡಿಸುವಂತೆ ಮನವಿ ಮಾಡಿದ್ರು.

    ಸಂತೋಷ್ 6 ತಿಂಗಳ ಮಗುವಾಗಿದ್ದಾಗ ಪಿಡ್ಸ್ ಬಂದು ಶಾಕ್ ಆದ ಕಾರಣ ಒಂದು ಕೈ, ಮೆದಳು ಸ್ವಾಧೀನ ಕಳೆದುಕೊಂಡಿದ್ದಾನೆ. ಬೆಂಗಳೂರಿನ ವಿಕ್ಟೋರಿಯಾ, ನಿಮ್ಹಾನ್ಸ್ ಆಸ್ಪತ್ರೆಗಳು ಸೇರಿದಂತೆ ಹಲವೆಡೆ ತೋರಿಸಲಾಗಿದೆ. ಆದ್ರೂ ಯಾವುದೇ ಪ್ರಯೋಜನವಾಗಿಲ್ಲ. ಮೆದುಳಿಗೆ ಶಾಕ್ ಆಗಿರೋ ಕಾರಣ ಜೀವನಪರ್ಯಂತ ಇದು ಸರಿಹೋಗಲ್ಲ ಎಂದು ವೈದ್ಯರು ಹೇಳಿ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದಲ್ಲಿ ಮಾಡಲಾದ ಮನವಿಯಂತೆ ಈಗ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಈ ಕುಟುಂಬಕ್ಕೆ ಪ್ರತಿನಿತ್ಯ ಹಾಲು ನೀಡುತ್ತಿದೆ. ಜೊತೆಗೆ ಕುಟುಂಬ ಪೋಷಣೆಗೆ ಒಂದು ಉದ್ಯೋಗಕ್ಕೆ ಕೂಡ ಬೆಳಕು ಆಸರೆಯಾಗಿದೆ. ಕೂಲಿ ಮಾಡಿ ಜೀವನ ಸಾಗಿಸುವವರಾಗಿರೋದ್ರಿಂದ ಕಷ್ಟಕರವಾದ ಜೀವನದಲ್ಲಿ ಮಗನಿಗೆ ದಿನಕ್ಕೆ ಅಲ್ಪಸ್ವಲ್ಪ ಹಾಲಿನ ಜೊತೆಗೆ, ಕೋಲಾರ ನೂತನ ವಿಧಾನ ಸೌಧ ಬಳಿ ಜೆರಾಕ್ಸ್ ಅಂಗಡಿ ಹಾಕಿ ಕೊಳ್ಳಲು ಅನುಮತಿ ಸಿಕ್ಕಿದೆ. ಅದರಂತೆ ಈಗ ಹಾಲಿನ ವ್ಯವಸ್ಥೆ ಹಾಗೂ ಉದ್ಯೋಗ ಕಲ್ಪಿಸುವ ಮೂಲಕ ಬಡ ಕುಟುಂಬಕ್ಕೆ ಬೆಳಕಿನ ಆಸರೆ ಸಿಕ್ಕಿದೆ.

     

  • ಕೋಲಾರದಲ್ಲಿ ಟೆಂಪೋ ಟ್ರಾವೆಲರ್‍ಗೆ ಆಯಿಲ್ ಟ್ಯಾಂಕರ್ ಡಿಕ್ಕಿ- ಮೂವರ ಸಾವು

    ಕೋಲಾರದಲ್ಲಿ ಟೆಂಪೋ ಟ್ರಾವೆಲರ್‍ಗೆ ಆಯಿಲ್ ಟ್ಯಾಂಕರ್ ಡಿಕ್ಕಿ- ಮೂವರ ಸಾವು

    ಕೋಲಾರ: ಟೆಂಪೋ ಟ್ರಾವೆಲರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಂಡ್ರಿಗ ಎಂಬ ಗ್ರಾಮದಲ್ಲಿ ನಡೆದಿದೆ.

    ಟೆಂಪೋ ಟ್ರಾವೆಲರ್ ಚಾಲಕ ವಿಶಾಲ್ ಬಾಬು (35), ಕಾಮಾಕ್ಷಿ (27) ಹಾಗು ಬಾಲಕ ರಿದಯ್ (2) ಎಂಬವರು ಮೃತ ದುರ್ಧೈವಿಗಳಾಗಿದ್ದಾರೆ. ಇವರೆಲ್ಲರೂ ತುಮಕೂರು ಜಿಲ್ಲೆಯವರು ಎಂದು ಹೇಳಲಾಗಿದೆ.

    ತುಮಕೂರಿನಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 12 ಮಂದಿ ಟೆಂಪೋ ಟ್ರಾವೆಲರ್ ನಲ್ಲಿ ಹೊರಟಿದ್ದರು. ಈ ವೇಳೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಂಡ್ರಿಗ ಎಂಬಲ್ಲಿ ಟ್ರಾವೆಲರ್ ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಬಂಗಾರಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.