ಕೋಲ್ಕತ್ತಾ: ಇಲ್ಲಿನ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯವು (CFSL) ಕೇಂದ್ರೀಯ ತನಿಖಾ ದಳಕ್ಕೆ (CBI) ವರದಿ ಅಂಶಗಳು ಬಹಿರಂಗಗೊಂಡಿದೆ. ಆದ್ರೆ ವರದಿಯ ಅಂಶಗಳು ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ.
ಸಿಬಿಐಗೆ ಸಲ್ಲಿಸಿದ ವರದಿಯಲ್ಲಿ ಸಾಕ್ಷ್ಯಗಳಿಲ್ಲದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೌದು. ದೆಹಲಿಯ ಸಿಎಫ್ಎಸ್ಎಲ್ನ ತಜ್ಞರು ಕಳೆದ ಆಗಸ್ಟ್ 14ರಂದು ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಪರಾಧ ನಡೆದ ಸ್ಥಳದಲ್ಲಿ ಪರಿಶೀಲಿಸಿದ್ದರು. ಈ ವೇಳೆ ಅತ್ಯಾಚಾರಿ ಎದುರು ಸಂತ್ರಸ್ತೆ ತೋರಿಸಿದ ಸಂಭಾವ್ಯ ಹೋರಾಟ ಅಥವಾ ಅವರ ನಡುವಿನ ಪ್ರತಿರೋಧದ ಸಾಕ್ಷ್ಯವು ಸ್ಥಳದಲ್ಲಿ ಕಾಣೆಯಾಗಿದೆ. ಕೆಲವು ಪ್ರಮುಖ ಸಾಕ್ಷ್ಯಗಳು ಸ್ಥಳದಲ್ಲಿ ಕಂಡುಬಂದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎಂದು ಸಿಬಿಐ ಮೂಲಗಳು ಕೋರ್ಟ್ಗೆ ತಿಳಿಸಿವೆ.
ಮೊದಲು ತನಿಖೆ ನಡೆಸಿದ್ದ ಕೋಲ್ಕತ್ತಾ ಪೊಲೀಸರು, ಆಗಸ್ಟ್ 9 ರಂದು ಸಂತ್ರಸ್ತೆಯ ದೇಹವನ್ನು ಗುರುತಿಸಿದ ಸೆಮಿನಾರ್ ಹಾಲ್ನಿಂದ 40 ವಸ್ತುಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿತ್ತು. ನಂತರ ಪ್ರಕರಣವನ್ನ ಸಿಬಿಐ ತನಿಖೆಗೆ ವರ್ಗಾಯಿಸಲಾಗಿತ್ತು. ಅದಾದ ಬಳಿಕ ವಶಕ್ಕೆ ಪಡೆದಿದ್ದ ವಸ್ತುಗಳನ್ನು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.
ಇದಕ್ಕೂ ಮೊದಲು ಆಗಸ್ಟ್ 14 ರಂದು, CFSL ತಜ್ಞರ ತಂಡವು ಅಪರಾಧ ನಡೆದ ಸೆಮಿನಾರ್ ಹಾಲ್ ಅನ್ನು ಭೌತಿಕವಾಗಿ ಪರೀಕ್ಷಿಸಿತ್ತು. ಆಗ ವಶಪಡಿಸಿಕೊಂಡ ವಸ್ತುಗಳ ವಿಧಿವಿಜ್ಞಾನ ವರದಿಗಳ ಆಧಾರದ ಮೇಲೆ ಸಿಬಿಐಗೆ ವರದಿ ಸಲ್ಲಿಸಿತು. ಇದನ್ನೂ ಓದಿ: 4 ಮಕ್ಕಳೊಂದಿಗೆ ಪಾಕ್ನಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಗರ್ಭಿಣಿ
ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Medical College and Hospital) ಕರ್ತವ್ಯನಿರತ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ.
ಸೋಮವಾರ ಮಧ್ಯಾಹ್ನ ಸೀಲ್ದಾಹ್ನಲ್ಲಿರುವ ಕೋಲ್ಕತ್ತಾದ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ದೋಷಾರೋಪ ಪಟ್ಟಿ (Chargesheet) ಸಲ್ಲಿಸಿದೆ. ವಿರಾಮದ ಸಮಯದಲ್ಲಿ ಟ್ರೈನಿ ವೈದ್ಯೆ ಆಸ್ಪತ್ರೆ ಸೆಮಿನಾರ್ ಕೊಠಡಿಯಲ್ಲಿ ವಿಶ್ರಾಂತಿಗೆ ಹೋದಾಗ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಮೂಲಗಳ ಪ್ರಕಾರ, ಚಾರ್ಚ್ಶೀಟ್ನಲ್ಲಿ ಆರೋಪಿ ಸಂಜಯ್ ರಾಯ್ ಹೆಸರಿಸಿರುವ ಸುಮಾರು 200 ಜನರ ಹೇಳಿಕೆಗಳನ್ನ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಗ್ಯಾಂಗ್ ರೇಪ್ ಆಗಿರಬಹುದು ಎಂದು ಶಂಕಿಸಿ ಹೇಳಿಕೆ ನೀಡಿದ್ದಾರೆ ಎಂದು ಚಾರ್ಚ್ಶೀಟ್ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.
ಆಗಸ್ಟ್ 9ರಂದು ಟ್ರೈನಿ ವೈದ್ಯೆ ಹತ್ಯೆಗೀಡಾದ ನಂತರ ತನಿಖಾ ಹಂತದಲ್ಲಿ ಒಂದೊಂದೇ ಭಯಾನಕ ಸತ್ಯಗಳು ಬಯಲಾಗುತ್ತಾ ಹೋದವು. ಇದರಿಂದ ದೇಶವ್ಯಾಪಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರಿಂದ ಎಚ್ಚೆತ್ತ ಹೈಕೋರ್ಟ್ ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ತನಿಖೆ ವಹಿಸುವಂತೆ ಸೂಚಿಸಿತು. ಬಳಿಕ ಆರೋಪಿ ಹೇಳಿಕೆ ಆಧರಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಸಿಬಿಐ ಅಂದಿನ ಪ್ರಾಂಶುಪಾಲನಾಗಿದ್ದ ಸಂದೀಪ್ ಘೋಷ್ ಅವರನ್ನೂ ಬಂಧಿಸಿ ತನಿಖೆ ನಡೆಸಿತು.
ಕೋಲ್ಕತ್ತಾ ಪ್ರಕರಣ ಏನು?
ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಈ ಪ್ರಕರಣದ ತನಿಖೆ ಹೊಣೆ ಹೊತ್ತಿದ್ದ ಸಿಬಿಐ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜು (RG Kar Medical College) ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಆತ್ಮಹತ್ಯೆ ಅಂತ ಬಿಂಬಿಸಲು ಪ್ರಯತ್ನಿಸಿದ್ದರು. ಅದಕ್ಕಾಗಿ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾರೆ ಎಂಬುದಾಗಿ ಸಿಬಿಐ ಕೋರ್ಟ್ಗೆ ಸಲ್ಲಿಸಿದ ತನ್ನ ರಿಮ್ಯಾಂಡ್ ಕಾಪಿಯಲ್ಲಿ ತಿಳಿಸಿದೆ.
ಆರ್.ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರ ಮತ್ತು ʻಹ್ಯತ್ಯಾʼಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ (Evidence) ನಾಶ ಆರೋಪದ ಮೇಲೆ ಸಂದೀಪ್ ಘೋಷ್ ಅವರನ್ನ ಸಿಬಿಐ (CBI) ಬಂಧಿಸಿದೆ. ಈ ಕೇಸ್ನಲ್ಲಿ ಎಫ್ಐಆರ್ ದಾಖಲಿಸಲು ವಿಳಂಬ ಮಾಡಿದ್ದಕ್ಕಾಗಿ ತಲಾ ಠಾಣೆಯ ಪೊಲೀಸ್ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಹ ಬಂಧಿಸಲಾಗಿದೆ. ಇದನ್ನೂ ಓದಿ: ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್ನಲ್ಲಿರುವ ಟಾಪ್ -5 ಕಲಿಗಳು ಯಾರು?
ಈ ಪ್ರಕರಣದ ಕುರಿತು ಸಿಬಿಐ ಕೋರ್ಟ್ಗೆ ಸಲ್ಲಿಸಿದ ರಿಮ್ಯಾಂಡ್ ಕಾಪಿಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಡಾ. ಸಂದೀಪ್ ಘೋಷ್ ಆಗಸ್ಟ್ 9ರಂದು ಬೆಳಗ್ಗೆ 9:58ರ ವೇಳೆಗೆ ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರೂ ತಕ್ಷಣ ಆಸ್ಪತ್ರೆ ತಲುಪಲಿಲ್ಲ. ಪೊಲೀಸರಿಗೆ ದೂರು ಸಹ ದಾಖಲಿಸಲಿಲ್ಲ. ಸಂತ್ರಸ್ತೆಯ ದೇಹದ ಮೇಲೆ ಗಾಯದ ಗುರುತುಗಳಿದ್ದರೂ ಅದನ್ನು ಆತ್ಮಹತ್ಯೆ ಅಂತ ಬಿಂಬಿಸಲು ಹೊರಟಿದ್ದರು. ಆಸ್ಪತ್ರೆಯಿಂದ ಸಂತ್ರಸ್ತೆ ಪೋಷಕರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಅಂತ ತಿಳಿಸಿದ್ದರು ಎಂದು ಸಿಬಿಐ ತನ್ನ ರಿಮ್ಯಾಂಡ್ ಕಾಪಿಯಲ್ಲಿ ಉಲ್ಲೇಖಿಸಿದೆ.
ಮುಂದುವರಿದು, ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಾದ ನಂತರ ಘೋಷ್ ಪೊಲೀಸ್ ಅಧಿಕಾರಿ ಮತ್ತು ವಕೀಲರೊಂದಿಗೆ ಸಂಪರ್ಕದಲ್ಲಿದ್ದರು. ಸಂತ್ರಸ್ತೆ ಪೋಷಕರು ಆಸ್ಪತ್ರೆಗೆ ಬಂದಾಗಲೂ ಅವರನ್ನು ಭೇಟಿಯಾಗಲಿಲ್ಲ. ಘಟನೆ ನಂತರ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳ ಬಗ್ಗೆ ಗಮನ ಹರಿಸಲಿಲ್ಲ. ಮೃತದೇಹವನ್ನು ತಕ್ಷಣವೇ ಶವಾಗಾರಕ್ಕೆ ಕಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ಸಿಬಿಐ ಕೋರ್ಟ್ಗೆ ತಿಳಿಸಿದೆ. ಇದನ್ನೂ ಓದಿ: ವರದಕ್ಷಿಣೆಯಾಗಿ ಬೈಕ್ ಕೇಳಿದ್ದ ಪತಿ – ಕೊಡದಿದ್ದಕ್ಕೆ ತವರು ಮನೆಯಿಂದ ಕರೆತಂದು ಪತ್ನಿಯನ್ನೇ ಕೊಂದ!
ಇನ್ನೂ ಪೊಲೀಸ್ ಅಧಿಕಾರಿ ಮೊಂಡಲ್ ಸಹ ಮಾಹಿತಿ ಪಡೆದ ಒಂದು ಗಂಟೆ ನಂತರ ಘಟನಾ ಸ್ಥಳಕ್ಕೆ ತಲುಪಿದರು. ಘೋರ ಸ್ವರೂಪದಲ್ಲಿ ಕೊಲೆಯಾಗಿರುವುದು ಕಂಡುಬಂದರೂ ಸೂಕ್ತ ಸಮಯಕ್ಕೆ ಎಫ್ಐಆರ್ ದಾಖಲಿಸಲಿಲ್ಲ. ತಡರಾತ್ರಿ ಎಫ್ಐಆರ್ ದಾಖಲಿಸಲಾಗಿದೆ, ಸುಪ್ರೀಂ ಕೋರ್ಟ್ ಮತ್ತು ಕೋಲ್ಕತ್ತಾ ಹೈಕೋರ್ಟ್ ಪದೇ ಪದೇ ಹೇಳಿದರೂ ಪ್ರಕರಣದ ಕುರಿತು ತಲೆ ಕೆಡಿಸಿಕೊಂಡಿಲ್ಲ. ಕುಟುಂಬದ ಸದಸ್ಯರು ಮತ್ತೆ ಶವಪರೀಕ್ಷೆಗೆ ಒತ್ತಾಯಿಸಿದರೂ ಶವದ ಅಂತ್ಯಸಂಸ್ಕಾರಕ್ಕೆ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ ಎಂದು ಘಟನಾ ವಿವರವನ್ನು ಸಿಬಿಐ ಎಳೆಎಳೆಯಾಗಿ ಬಿಚ್ಚಿಟ್ಟಿದೆ.
ಕೋಲ್ಕತ್ತಾ: ಹಣಕಾಸು ಅವ್ಯವಹಾರ ಪ್ರಕಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ.
ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ನಾಶ ಆರೋಪಕ್ಕೆ ಆರೋಪದ ಮೇಲೆ ಸಂದೀಪ್ ಘೋಷ್ ಅವರನ್ನ ಬಂಧಿಸಿರುವುದಾಗಿ ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಭೀಕರ ಅಪಘಾತ – 6 ಯಾತ್ರಾರ್ಥಿಗಳು ದುರ್ಮರಣ
ಇದೇ ತಿಂಗಳ ಸೆಪ್ಟೆಂಬರ್ 2ರಂದು ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಬಂಧಿಸಿತ್ತು. ಬಳಿಕ ಆರ್ಥಿಕ ಅವ್ಯವಹಾರಗಳ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ ಕೋಲ್ಕತ್ತಾ ಹೈಕೋರ್ಟ್ (Kolkata High Court) ಆದೇಶವನ್ನು ಪ್ರಶ್ನಿಸಿ ಘೋಷ್ (Sandip Ghosh) ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.
ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹ:
ಸದ್ಯ ಪೊಲೀಸ್ ಅಧಿಕಾರಿ ಮೊಂಡಲ್ ಅವರ ಬಂಧನದ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನ ತಕ್ಷಣವೇ ಕರ್ತವ್ಯದಿಂದ ಅಮಾನತುಗೊಳಿಸಬೇಕು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್
ಕಳೆದ ತಿಂಗಳು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಲು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಮೂರು ವಾರಗಳ ಗಡುವು ನೀಡಿತ್ತು. ಸೆ.17ರಂದು ಗಡುವು ಮುಕ್ತಾಯವಾಗಲಿದ್ದು, ಅಂದೇ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಕೋಲ್ಕತ್ತಾ: ಇಲ್ಲಿನ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
ವೈದ್ಯಕೀಯ ಕಾಲೇಜಿನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ರ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಅಪ್ರಾಮಾಣಿಕತೆ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಅಲ್ಲದೇ ಪ್ರಕರಣ ಜಾಮೀನು ರಹಿತ ಸ್ವರೂಪದ್ದಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಮದುವೆಯಾಗ್ತೀನಿ ಅಂತಾ ಎಣ್ಣೆ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುರುಳ
ಸಂದೀಪ್ ಘೋಷ್, 2021ರ ಫೆಬ್ರವರಿಯಿಂದ 2023ರ ಸೆಪ್ಟೆಂಬರ್ ವರೆಗೆ RG ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಅಕ್ಟೋಬರ್ 2023 ರಲ್ಲಿ ವರ್ಗಾವಣೆಯಾಗಿದ್ದರು. ಇದಾದ ಒಂದೇ ತಿಂಗಳಲ್ಲಿ ಮತ್ತೆ ಅದೇ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದರು. ಕಳೆದ ತಿಂಗಳು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ದಿನದವರೆಗೂ ಅವರು ಹುದ್ದೆಯಲ್ಲಿದ್ದರು. ಆಗಸ್ಟ್ 9 ರಂದು ಟ್ರೈನಿ ವೈದ್ಯೆಯ ಮೃತ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಬಂಗಾಳ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದಿತು. ಬೆನ್ನಲ್ಲೇ ಸಂದೀಪ್ ಘೋಷ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದಾದ ಬಳಿಕ ಈ ಬೆನ್ನಲ್ಲೇ ಭಾರತೀಯ ವೈದ್ಯಕೀಯ ಸಂಘವು ಡಾ.ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿತು.
ಕೋಲ್ಕತ್ತಾ: ಕಳೆದ ತಿಂಗಳು ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದ್ದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ನನ್ನ (Sandip Ghosh) ಕೇಂದ್ರೀಯ ತನಿಖಾ ದಳ (CBI) ಸೋಮವಾರ ಬಂಧಿಸಿದೆ.
ವೈದ್ಯಕೀಯ ಕಾಲೇಜಿನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ರ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಅಪ್ರಾಮಾಣಿಕತೆ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಅಲ್ಲದೇ ಪ್ರಕರಣ ಜಾಮೀನು ರಹಿತ ಸ್ವರೂಪದ್ದಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ ಹೈಕೋರ್ಟ್ನ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಪೊಲೀಸರ ವಿಶೇಷ ತನಿಖಾ ತಂಡದಿಂದ ಸಿಬಿಐ ತನಿಖೆ ಹೊಣೆ ವಹಿಸಿಕೊಂಡಿತ್ತು. ಬಳಿಕ ಎಫ್ಐಆರ್ ದಾಖಲಿಸಿದ್ದ ಸಿಬಿಐ ಕಳೆದ 2 ವಾರಗಳಿಂದ 150ಕ್ಕೂ ಹೆಚ್ಚುಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.
ಸಂದೀಪ್ ಘೋಷ್, 2021ರ ಫೆಬ್ರವರಿಯಿಂದ 2023ರ ಸೆಪ್ಟೆಂಬರ್ ವರೆಗೆ RG ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. ಅಕ್ಟೋಬರ್ 2023 ರಲ್ಲಿ ವರ್ಗಾವಣೆಯಾಗಿದ್ದರು. ಇದಾದ ಒಂದೇ ತಿಂಗಳಲ್ಲಿ ಮತ್ತೆ ಅದೇ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದರು. ಕಳೆದ ತಿಂಗಳು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ದಿನದವರೆಗೂ ಅವರು ಹುದ್ದೆಯಲ್ಲಿದ್ದರು. ಆಗಸ್ಟ್ 9 ರಂದು ಟ್ರೈನಿ ವೈದ್ಯೆಯ ಮೃತ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಬಂಗಾಳ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದಿತು.
ನವದೆಹಲಿ: ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಾದ ಧೋರಣೆ ಅನುಸರಿಸಿದರೂ ಹಲವು ರಾಜ್ಯಗಳು ಇದರಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಆರೋಪಿಸಿದ್ದಾರೆ.
ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ (Kolkata rape-murder case) ಹಿನ್ನೆಲೆಯಲ್ಲಿ ಮಹಿಳಾ ಆರೋಗ್ಯ ಮತ್ತು ಮಹಿಳೆಯರ ಸುರಕ್ಷತೆ ಸಂಬಂಧ ಸರ್ಕಾರದ ಪ್ರಯತ್ನಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಇದನ್ನೂ ಓದಿ: ಮಳೆಯ ನಡುವೆ ಶ್ರೀ ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಅಪರಾಧಗಳನ್ನು ಪರಿಗಣಿಸಿದರೆ, ಎಲ್ಲಾ ಬದಲಾವಣೆಗಳ ಹೊರತಾಗಿಯೂ, ಬಹಳಷ್ಟು ಮಾಡಬೇಕಾಗಿದೆ ಎಂದು ತೋರುತ್ತದೆ. ನಮ್ಮ ಸರ್ಕಾರವು ಮಹಿಳೆಯರ (Womens) ಮೇಲಿನ ಅಪರಾಧಗಳ ಬಗ್ಗೆ ಕಟ್ಟುನಿಟ್ಟಾದ ಧೋರಣೆ ಅನುಸರಿಸಿದೆ, ಆದರೆ ಅನೇಕ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ವಾಧ್ವಾನ್ ಪೋರ್ಟ್ ಪ್ರಾಜೆಕ್ಟ್ ಉದ್ಘಾಟನೆ, ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಭಾಗಿಯಾದ ಪ್ರಧಾನಿ ಮೋದಿ
ಅತ್ಯಾಚಾರದಂತಹ ಘೋರ ಅಪರಾಧಗಳಿಗೆ ಮರಣದಂಡನೆ ವಿಧಿಸಲು ನರೇಂದ್ರ ಮೋದಿ ಸರ್ಕಾರ (Modi Government) ಕಾನೂನನ್ನು ತಿದ್ದುಪಡಿ ಮಾಡಿದೆ. ಐಪಿಸಿಯನ್ನು ಬದಲಿಸಿ ಭಾರತೀಯ ನ್ಯಾಯ ಸಂಹಿತಾ ಕಾನೂನಿನಲ್ಲಿ ಅತ್ಯಾಚಾರದಲ್ಲಿ ಬಲಿಪಶುವಿನ ಸಾವಿಗೆ ಕಾರಣವಾದ ಪ್ರಕರಣಗಳಲ್ಲಿ ಮರಣದಂಡನೆಗೆ ಅವಕಾಶ ನೀಡಿದೆ. ಹರಿಯಾಣದಂತಹ ರಾಜ್ಯಗಳಲ್ಲಿ ಲಿಂಗ ಅನುಪಾತದಲ್ಲಿ ಸುಧಾರಣೆಗಾಗಿ ಪ್ರಧಾನಿ ಮೋದಿಯವರ ‘ಬೇಟಿ ಬಚಾವೋ, ಬೇಟಿ ಪಢಾವೋ ‘ ಅಭಿಯಾನ ಆರಂಭಿಸಿದೆ. ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರವಾಗಿದೆ ಎಂದು ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.
2014-2019ರ ನಡುವೆ ಕೇಂದ್ರ ಗೃಹ ಸಚಿವರಾಗಿದ್ದ ಅವಧಿಯನ್ನು ನೆನಪಿಸಿಕೊಂಡ ರಾಜನಾಥ್ ಸಿಂಗ್, ಭದ್ರತಾ ಪಡೆಗಳಲ್ಲಿ ಮಹಿಳೆಯರೊಂದಿಗೆ ಮೂರನೇ ಒಂದು ಭಾಗದಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಿದ್ದೇನೆ ಎಂದು ಹೇಳಿದರು. ಇಂದು ಎಲ್ಲಾ ಪೊಲೀಸ್ ಪಡೆಗಳು ಮತ್ತು ಅರೆಸೇನಾ ಪಡೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಸಶಸ್ತ್ರ ಪಡೆಗಳಿಗೆ ಮಹಿಳೆಯರ ಪ್ರವೇಶಕ್ಕೆ ಇದ್ದ ಹಲವು ಅಡೆತಡೆಗಳನ್ನು ತೆಗೆದುಹಾಕಲಾಗಿದೆ. ಸಶಸ್ತ್ರ ಪಡೆಗಳ ಎಲ್ಲಾ ಮೂರು ವಿಭಾಗಗಳಲ್ಲಿ ನಾವು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಿದ್ದೇವೆ. ಸೈನಿಕ್ ಶಾಲೆಗಳಿಗೆ ಮಹಿಳೆಯರಿಗೂ ಪ್ರವೇಶ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್ಗೆ ತಡೆಯೊಡ್ಡಿದ ಸಿಎಂ ಶರ್ಮಾ
ಇಡೀ ದೇಶವನ್ನೇ ತಲ್ಲಣಗೊಳಿಸಿರುವ ಕೋಲ್ಕತ್ತಾ ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ತನಿಖೆ (Kolkata Case Investigation) ಹೊಸ ಹೊಸ ಆಯಾಮಗಳಲ್ಲಿ ನಡೆಯುತ್ತಿದ್ದು, ಹೊಸ ಹೊಸ ಸಾಕ್ಷ್ಯಗಳು ಬೆಳಕಿಗೆ ಬರುತ್ತಿವೆ.
ಕೋಲ್ಕತ್ತಾ (Kolkata) ಟ್ರೈನಿ ವೈದ್ಯೆ ರೇಪ್ & ಮರ್ಡರ್ ಕೇಸ್ನ ಆರೋಪಿ ಮದ್ಯ ಸೇವಿಸಿ ಆಗಾಗ್ಗೆ ಜಗಳವಾಡುತ್ತಿದ್ದ, ಸೆಕ್ಸ್ ವೀಡಿಯೋ ನೋಡುವ ಚಟ ಹೊಂದಿದ್ದ ಎಂಬ ಅಂಶಗಳು ತನಿಖೆಯಲ್ಲಿ ಬಯಲಾಗಿವೆ. ಆದ್ರೆ ಅದಕ್ಕಿಂತಲೂ ಕ್ರೂರವಾದ ಪ್ರಕರಣಗಳು ಉತ್ತರ ಪ್ರದೇಶದ ಬರೇಲಿಯಲ್ಲಿ ಬೆಳಕಿಗೆ ಬಂದಿತ್ತು. ಸೀರಿಯಲ್ ಕಿಲ್ಲರ್ವೊಬ್ಬ 40ಕ್ಕೂ ಹೆಚ್ಚು ವಯಸ್ಕ ಮಹಿಳೆಯರನ್ನು ಕೊಂದು ರುಂಡ-ಮುಂಡಗಳನ್ನು ಕತ್ತರಿಸಿ ಬಿಸಾಡಿದ್ದ. ಈ ಪ್ರಕರಣಗಳನ್ನು ಗಮನಿಸಿದಾಗ ಕೊಲೆಗಾರನ ಮನಸ್ಸು ಎಷ್ಟು ವಿಕೃತವಾಗಿತ್ತು ಎಂಬುದು ತಿಳಿಯುತ್ತದೆ. ಕೆಲ ಸಿನಿಮಾ, ವೆಬ್ಸಿರೀಸ್ಗಳಲ್ಲೂ (Web Series) ಇಂತಹ ಸೈಕೋ ಕಿಲ್ಲರ್ಗಳ ಬಗ್ಗೆ ಕಥೆ ಎಣೆಯಲಾಗಿದೆ. ಇಂತಹ ʻಕ್ರಿಮಿನಲ್ ಮೈಂಡ್ʼ (Criminal Mind) ಇರುವ ವ್ಯಕ್ತಿಗಳ ಬಗ್ಗೆ ಮನೋವಿಜ್ಞಾನಿಗಳು ಏನಂತಾರೆ ನೋಡೋಣ…
ವಿಜ್ಞಾನದಲ್ಲಿ ಎಲ್ಲದಕ್ಕೂ ಉತ್ತರವಿಲ್ಲ
ವಿಜ್ಞಾನ (Science) ಲೋಕವೆಂಬುದು ಕುತೂಹಲ, ಬಗೆದಷ್ಟು ಆಳ. ಇಲ್ಲಿ ಎಲ್ಲದಕ್ಕೂ ಉತ್ತರ ಸಿಗುವುದಿಲ್ಲ. ಕೆಲವೊಂದು ಅನುಭವಕ್ಕೆ ಬಂದಾಗಷ್ಟೇ ನಂಬಬೇಕಾಗುತ್ತದೆ, ಇಲ್ಲದಿದ್ದರೆ ಅನುಭವಕ್ಕಾಗಿ ಕಾಯಬೇಕಾಗುತ್ತೆ. ಆದಾಗ್ಯೂ ಕೆಲ ಮನೋವಿಜ್ಞಾನಿಗಳು ಮನುಷ್ಯನಲ್ಲಿ ಮಾನಸಿಕ ವಿಕೃತಿಗಳನ್ನು ಕಂಡಾಗ ಅವುಗಳನ್ನು ʻಕ್ರಿಮಿನಲ್ ಮೈಂಡ್ʼ ಅನ್ನೋ ಪದಗಳಲ್ಲಿ ಗುರುತಿಸಿ ಅಭಿಪ್ರಾಯಗಳನ್ನು ಪ್ರಕಟಿಸಿದ್ದಾರೆ. ʻಕ್ರಿಮಿನಲ್ ಮೈಂಡ್ʼ ಎಂಬ ಪದವನ್ನು ಮೊದಲಬಾರಿಗೆ 1928ರಲ್ಲಿ ಪರಿಚಯಿಸಲಾಯಿತು. ʻಜರ್ನಲ್ ಆಫ್ ಅಬ್ನಾರ್ಮಲ್ ಅಂಡ್ ಸೋಶಿಯಲ್ ಸೈಕಾಲಜಿʼ ಎಂಬ ಜರ್ನಲ್ನಲ್ಲಿ ಲೇಖನವೂ ಪ್ರಕಟವಾಯಿತು. ʻಕ್ರಿಮಿನಲ್ ಮೈಂಡ್ʼ ವ್ಯಕ್ತಿಗಳು ಕೇವಲ ಒಬ್ಬಿಬ್ಬರಿಗೆ ಮಾತ್ರವಲ್ಲ ಇಡೀ ಮಾನವ ಕುಲಕ್ಕೆ ಅಪಾಯಕಾರಿ ಎಂದು ಹೇಳಿದ್ದರು. ʻಕ್ರಿಮಿನಲ್ ಮೈಂಡ್ʼ ಎಂಬ ಪದವು ಸುಮಾರು ನೂರು ವರ್ಷಗಳ ಹಿಂದೆಯೇ ಅಸ್ತಿತ್ವಕ್ಕೆ ಬಂದಿದ್ದರೂ, ಇಂತಹ ಕೇಸ್ಗಳು ವಿಜ್ಞಾನ ಲೋಕಕ್ಕೆ ಹಾಗೂ ವಿಜ್ಞಾನಿಗಳಿಗೆ ಸವಾಲಿನದ್ದಾಗಿಯೇ ಇದೆ. ಕೆಲ ವಿಜ್ಞಾನಿಗಳು ಇಂತಹ ಮಾನಸಿಕ ಸ್ಥಿತಿಯುಳ್ಳ ವ್ಯಕ್ತಿಗಳನ್ನು ಮುಂಚಿತವಾಗಿಯೇ ಗುರುತಿಸಬಹುದಾ ಅನ್ನೋ ಪ್ರಯತ್ನಕ್ಕೂ ಮುಂದಾಗಿದ್ದಾರೆ. ಅದಕ್ಕಾಗಿ ಮೆದುಳಿನ ಸ್ಕ್ಯಾನರ್ಗಳ ಮೊರೆ ಹೋಗಿದ್ದಾರೆ.
ತಜ್ಞರ ಪ್ರಕಾರ, ಕೆಲವೇ ಕೆಲವು ಲಕ್ಷಣಗಳನ್ನು ನೋಡಿ ಭವಿಷ್ಯದಲ್ಲಿ ಯಾರೂ ಭಯಾನಕ ಕೊಲೆಗಾರನಾಗಬಹುದು ಅಂತ ನಿರ್ಧರಿಸಲು ಸಾಧ್ಯವಿಲ್ಲ. ಏಕೆಂದರೆ ಅನೇಕ ಸನ್ನಿವೇಶಗಳಲ್ಲಿ ಒಬ್ಬ ವ್ಯಕ್ತಿ ಪ್ರಚೋದನೆಯಿಂದಾಗಿ ತಪ್ಪು ಮಾಡಿರುತ್ತಾನೆ. ಆ ತಪ್ಪನ್ನು ಮುಚ್ಚಿಹಾಕಲು ಮತ್ತೆ ಮತ್ತೆ ತಪ್ಪು ಮಾಡುತ್ತಲೇ ಇರುತ್ತಾನೆ. ಇದನ್ನು ʻಕೋಲ್ಡ್ ಬ್ಲಡ್ʼ ಎಂದೂ ಸಹ ಕರೆಯುತ್ತಾರೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ.
ಕೋಲ್ಡ್ ಬ್ಲಡ್ ಹಿಂದಿನ ಕಥೆ ಏನು?
ಸಾಮಾನ್ಯವಾಗಿ ಮನೋವಿಜ್ಞಾನಿಗಳು ಹೇಳುವ ಪ್ರಕಾರ, ಕೊಲೆಗಾರನ ಮನಸ್ಥಿತಿ ಹೊಂದಿರುವ ವ್ಯಕ್ತಿಗಳಲ್ಲಿ ಮೆದುಳಿನ ಕಾರ್ಟೆಕ್ಸ್ ಎಂಬ ಭಾಗವು ಸಾಮಾನ್ಯ ಸ್ಥಿತಿಗಿಂತ ಕೊಂಚ ಕುಗ್ಗಿರುತ್ತದೆ. ಇದಕ್ಕೆ ಉದಾಹರಣೆಯೂ ಇದೆ. 90ರ ದಶಕದಲ್ಲಿ ನ್ಯೂರೋ ಕ್ರಿಮಿನಾಲಜಿಸ್ಟ್ ಅಡ್ರಿಯನ್ ರಯಾನ್ ಅವರು ಕೋಲ್ಡ್-ಬ್ಲಡ್ ಕೊಲೆಗಾರರ ಬಗ್ಗೆ ಅಧ್ಯಯನಕ್ಕೆ ಮುಂದಾಗಿದ್ದರು. ಅದಕ್ಕಾಗಿ ಅಮೆರಿಕನ್ ಜೈಲುಗಳಿಗೆ ತೆರಳಿದ್ದರು. ಆಗ ಕ್ಯಾಲಿಫೋರ್ನಿಯಾ ಇಂತಹ ಕೊಲೆ ಪ್ರಕಣಗಳಿಂದ ಕುಖ್ಯಾತಿಯಾಗಿತ್ತು. ಆದ್ದರಿಂದ ರಯಾನ್ ಅವರು ಇಂತಹವರ ಮೆದುಳಿನಲ್ಲಿರುವ ಜೀವರಾಸಾಯನಿಕ ಕ್ರಿಯೆಗಳನ್ನು ಅರ್ಥಮಾಡಿಕೊಳ್ಳಲು 40ಕ್ಕೂ ಹೆಚ್ಚು ಕೈದಿಗಳ ʻಪಾಸಿಟ್ರಾನ್ ಎಮಿಷನ್ ಟೊಮೊಗ್ರಫಿʼ (ಪಿಇಟಿ) ಟೆಸ್ಟ್ ಕೂಡ ನಡೆಸಿದ್ದರು. ಈ ವೇಳೆ ಮೆದುಳಿನ ಹಲವು ಭಾಗಗಳು ಕುಗ್ಗಿರುವುದು ಸ್ಕ್ಯಾನ್ನಲ್ಲಿ ಕಂಡುಬಂದಿತು. ರಯಾನ್ ತಮ್ಮ ಅಧ್ಯಯನ ವರದಿ ಬಿಡುಗಡೆ ಮಾಡಿದಾಗ ಜನರು ಆತನನ್ನು ಹುಚ್ಚ ಎಂದು ಕರೆಯಲು ಶುರು ಮಾಡಿದರು. ಕಾಲಾನಂತರದಲ್ಲಿ ಅದನ್ನು ಜನ ನಂಬತೊಡಗಿದರು. ಇದಾದ ಸ್ವಲ್ಪ ಸಮಯದ ನಂತರ ʻದಿ ಅನ್ಯಾಟಮಿ ಆಫ್ ವಯಲೆನ್ಸ್ʼ ಎಂಬ ಪುಸ್ತಕವನ್ನು ಹೊರತಂದರು, ಅದರಲ್ಲಿ ಡಾ.ರಯಾನ್ ಅಪರಾಧಿಗಳ ಮನಸ್ಸಿನಲ್ಲಿ ತಮ್ಮ 35 ವರ್ಷಗಳ ಅನುಭವವನ್ನು ದಾಖಲಿಸಿದರು.
ಪ್ರಿಫ್ರಂಟಲ್ ಕಾರ್ಟೆಕ್ಸ್ನಲ್ಲಿ ಈ ಕುಗ್ಗುವಿಕೆ ಏಕೆ ಆಗುತ್ತದೆ?
ವಿಜ್ಞಾನಿಗಳ ಪ್ರಕಾರ, ಇದಕ್ಕೆ ಹಲವು ಕಾರಣಗಳಿರಬಹುದು. ಆನುವಂಶಿಕವು ಆಗಿರಬಹುದು, ಕೆಲವೊಮ್ಮೆ ತಲೆಗೆ ಆಳವಾದ ಪೆಟ್ಟಾಗುವುದರಿಂದ, ಬಾಲ್ಯದಲ್ಲಿ ದೌರ್ಜನ್ಯಕ್ಕೆ ಒಳಗಾದವರು, ಕಷ್ಟದಿಂದ ಜೀವನ ನಡೆಸಿದವರಿಗೂ ಈ ರೀತಿ ಸಂಭವಿಸಬಹುದು. ಆದ್ರೆ ಸರಣಿ ಕೊಲೆಗಾರರ ಸ್ಥಿತಿ ಕೊಂಚ ವ್ಯತ್ಯಾಸ ಇರುತ್ತದೆ. ಅದರೂ ಅವರ ಆಲೋಚನೆ, ತಿಳಿವಳಿಕೆ ಹಾಗೂ ಒತ್ತಡಕ್ಕೆ ಒಳಗಾದ ಸನ್ನಿವೇಶಗಳು ಇವೆಲ್ಲವೂ ಅವರ ಮನಸ್ಥಿತಿಗೆ ಕಾರಣವಾಗಿರುತ್ತದೆ. ಅಂತಹವರು ತಮ್ಮ ಬಗ್ಗೆ ಬಿಟ್ಟು ಯಾರೊಬ್ಬರ ಬಗ್ಗೆಯೂ ಚಿಂತಿಸುವುದಿಲ್ಲ. ಒಂದು ವೇಳೆ ತಮ್ಮ ಮಾನಸಿಕ ಸ್ಥಿತಿಗೆ ತೊಂದರೆಯಾದ್ರೆ, ಪ್ಲ್ಯಾನ್ ಮಾಡಿ ಕೊಲೆ ಮಾಡುತ್ತಾರೆ. ಜೊತೆಗೆ ಕೊಲೆಯ ಪಶ್ಚಾತಾಪವೂ ಅವರಿಗೆ ಕಾಡುವುದಿಲ್ಲ, ಕೊಲೆ ಮಾಡಿರುವುದಾಗಿ ತಾವೇ ಒಪ್ಪಿಕೊಳ್ಳುತ್ತಾರೆ. ಇದೇ ರೀತಿ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ & ಮರ್ಡರ್ ಆರೋಪಿ ಸಂಜಯ್ ರಾಯ್ ಪ್ರಕರಣದಲ್ಲೂ ಆಗಿದೆ ಎಂದು ಹೇಳಲಾಗಿದೆ.
ಪಾಲಿಗ್ರಾಫ್ ಟೆಸ್ಟ್ ಏಕೆ ಬೇಕು?
ಸುಳ್ಳುಪತ್ತೆ ಮಾಡುವಲ್ಲಿ ಎಷ್ಟರಮಟ್ಟಿಗೆ ಯಶಸ್ಸು ಕಾಣುತ್ತೆ ಎನ್ನುವ ಬಗ್ಗೆ ಇಲ್ಲಿ ಒಂದಿಷ್ಟು ಮಾಹಿತಿ ನೀಡಲಾಗಿದೆ. ಈ ಪರೀಕ್ಷೆಯನ್ನು ಸಾಮಾನ್ಯವಾಗಿ, ಅಪರಾಧ ಪ್ರಕರಣದಲ್ಲಿ ಆರೋಪಿಗಳ ಮೇಲೆ ಮಾಡಲಾಗುತ್ತದೆ. ಆರೋಪಿ ಪದೇ ಪದೇ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದರೆ, ಆತನ ಮೇಲೆ ಸಿಕ್ಕಾಪಟ್ಟೆ ಡೌಟ್ ಇದ್ದಾಗ ಇಂಥ ಪರೀಕ್ಷೆಯನ್ನು ನಡೆಸಲಾಗುತ್ತದೆ. ಹಾಗೆಂದು ಎಲ್ಲಾ ಆರೋಪಿಗಳ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಏಕೆಂದರೆ, ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಇಂಥ ಪರೀಕ್ಷೆಗೆ ಒಳಪಡುವ ಮೊದಲು ಆರೋಪಿ ಇದಕ್ಕೆ ಒಪ್ಪಿಗೆ ಸೂಚಿಸುವುದು ಕಡ್ಡಾಯ. ಒಂದು ವೇಳೆ ಆರೋಪಿ ಈ ಪರೀಕ್ಷೆಗೆ ಒಳಗಾಗಲು ಒಪ್ಪಿಗೆ ಸೂಚಿಸದೇ ಹೋದರೆ, ಆಗಲೂ ಪರೀಕ್ಷೆ ಮಾಡಿದರೆ, ಭಾರತೀಯ ಸಂವಿಧಾನದ ಆರ್ಟಿಕಲ್ 20(3) ಪ್ರಕಾರ ಅದು ಕಾನೂನು ವಿರೋಧಿ ಆಗುತ್ತದೆ.
ಚಿಕ್ಕೋಡಿ: ಕೋಲ್ಕತ್ತಾದಲ್ಲಿ (Kolkata) ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ (Supreme Court) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲೂ ಸಹ ಅಮಾನವೀಯ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ.
10 ವರ್ಷ ವಯಸ್ಸಿನ ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು ಕೊಲೆಗೈದಿರುವ ಪೈಶಾಚಿಕ ಕೃತ್ಯ ನೆರೆಯ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿಗೆ ಸಮೀಪದಲ್ಲಿರುವ ಮಹಾರಾಷ್ಟ್ರದ (Maharashtra) ಕೊಲ್ಲಾಪುರ ಹೊರವಲಯದ ಶೇಯೇ ಪ್ರದೇಶದಲ್ಲಿ ಘಟನೆ ನಡೆದಿದ್ದು ಅತ್ಯಾಚಾರದ ವೇಳೆ ಬಾಲಕಿ ಚೀರಾಡಿದಕ್ಕೆ ಆಕೆಯನ್ನು ಕೊಲೆಗೈದು ಕಾಮುಕ ಪರಾರಿಯಾಗಿದ್ದ. ಇದನ್ನೂ ಓದಿ: ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು – ಶರಣ ಪ್ರಕಾಶ್ ಪಾಟೀಲ್
ಬಾಲಕಿ ತಾಯಿಯ ನಿಕಟ ಸಂಭಂಧಿಯಿಂದಲೇ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆಯಾಗಿದೆ. ಕಳೆದ 3 ತಿಂಗಳಿನಿಂದ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಕಾಮುಕ, ಮೃತ ಬಾಲಕಿಯ ಮನೆಯಿಂದ ಕೆಲವೇ ಅಂತರದಲ್ಲಿರುವ ಹೊಲದಲ್ಲಿ ಕೃತ್ಯ ಎಸಗಿದ್ದಾನೆ.
ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ ಶವ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪ್ರಕರಣ ನಡೆದು ಐದೇ ಗಂಟೆಗಳಲ್ಲಿ ಆರೋಪಿಯನ್ನು ಕೊಲ್ಲಾಪುರ ಪೊಲೀಸರು (Kollapur Police) ಬಂಧಿಸಿದ್ದಾರೆ. ಪೊಲೀಸರ ಮುಂದೆ ಆರೋಪಿ ದಿನೇಶ್ ಕುಮಾರ್ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಅಪ್ರಾಪ್ತೆಯ ಪೋಷಕರು ಬಿಹಾರ ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಕೊಲ್ಹಾಪುರದ ಶಿರೋಳಿ MIDC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತ ಬಾಲಕಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: Kolkata Horror | ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟ – ಶರಣ ಪ್ರಕಾಶ್ ಪಾಟೀಲ್
ನವದೆಹಲಿ/ಕೋಲ್ಕತ್ತಾ: ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ ಎಂದು ಸುಪ್ರೀಂ ಕೋರ್ಟ್ (Supreme Court) ಗುರುವಾರ ಹೇಳಿದೆ.
ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣದ ವಿಚಾರನೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DYChandrachud) ನೇತೃತ್ವದ ತ್ರಿಸದಸ್ಯ ಪೀಠ ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿತು. ಅಲ್ಲದೇ ಈ ಬಗ್ಗೆ ಕ್ರಮ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತು.
ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲ ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10 ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ (Kolkata Doctor) ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಪೀಠ ತಾಕೀತು ಮಾಡಿದೆ. ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ
ಅಲ್ಲದೇ ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಕೋಲ್ಕತ್ತಾ ಪೊಲೀಸರ ತನಿಖೆಯಲ್ಲಿನ ವಿಳಂಬ ಮತ್ತು ಸ್ಪಷ್ಟ ಅಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿರುವುದು ಅತ್ಯಂತ ಗೊಂದಲದ ಸಂಗತಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ಮೋದಿಗೆ ದೀದಿ ಪತ್ರ:
ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ. ಈ ಪತ್ರದ ಪ್ರತಿಯನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ದಿನ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು:
ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರ ಮೇಲೆ ಪಾಲಿಗ್ರಾಫ್ ಪರೀಕ್ಷೆ (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ. ಏತನ್ಮಧ್ಯೆ ಪ್ರಕರಣವನ್ನು ತಿರುಚಲು ಮತ್ತು ಮುಚ್ಚಿಹಾಕಲು ಕೋಲ್ಕತ್ತಾ ಪೊಲೀಸರು ಪ್ರಯತ್ನಿಸಿದ್ದಾರೆ ಎಂದು ಸಿಬಿಐ ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!
ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಂದ ಮಾಹಿತಿ ಪಡೆಯಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿನ ಮಾಜಿ ಪ್ರಾಂಶುಪಾಲ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ಬಂಧಿಸಿ ಕಳೆದ ಒಂದು ವಾರದಿಂದ ವಿಚಾರಣೆ ನಡೆಸುತ್ತಿದೆ. ಆದರೆ ಅವರಿಂದ ಸರಿಯಾದ ಉತ್ತರ ಸಿಗದಿರುವ ಹಿನ್ನೆಲೆಯಲ್ಲಿ ಪಾಲಿಗ್ರಾಫ್ ಟೆಸ್ಟ್ ನಡೆಸಲು ಸುಪ್ರೀಂ ಕೋರ್ಟಿನ ಅನುಮತಿ ಕೋರಿದ್ದು ಕೋರ್ಟ್ ಅಸ್ತು ಎಂದಿದೆ.