Tag: ಕೋಲ್ಕತ್ತಾ ನೈಟ್ ರೈಡರ್ಸ್

  • ಐಪಿಎಲ್‌ನಲ್ಲಿ ತನ್ನ ನೆಚ್ಚಿನ ಪ್ರತಿಸ್ಪರ್ಧಿ ತಂಡವನ್ನು ರಿವೀಲ್ ಮಾಡಿದ ಕೊಹ್ಲಿ

    ಐಪಿಎಲ್‌ನಲ್ಲಿ ತನ್ನ ನೆಚ್ಚಿನ ಪ್ರತಿಸ್ಪರ್ಧಿ ತಂಡವನ್ನು ರಿವೀಲ್ ಮಾಡಿದ ಕೊಹ್ಲಿ

    ಮುಂಬೈ: ಭಾರತದ (India) ಸ್ಟಾರ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಪಿಎಲ್‌ನಲ್ಲಿ ತಮ್ಮ ನೆಚ್ಚಿನ ಪ್ರತಿಸ್ಪರ್ಧಿ ತಂಡ ಯಾವುದು ಎಂಬುವುದರ ಕುರಿತು ಇತ್ತೀಚಿಗೆ ಮಾತನಾಡಿದ್ದಾರೆ.

    ಇತ್ತೀಚಿಗೆ ಒಂದು ಸಂದರ್ಶನದಲ್ಲಿ ಮಾತನಾಡಿದ ಅವರು, 5 ಬಾರಿ ಐಪಿಎಲ್ ಟ್ರೋಫಿ ಗೆದ್ದ ತಂಡ ಮುಂಬೈ ಇಂಡಿಯನ್ಸ್ (Mumbai Indians) ಹಾಗೂ 3 ಬಾರಿ ಗೆದ್ದ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (Kolkatta Knight Riders) ತಂಡಗಳ ನಡುವೆ ನಿಮ್ಮ ನೆಚ್ಚಿನ ಪ್ರತಿಸ್ಪರ್ಧಿ ಯಾವುದು ಎಂದು ಕೇಳಿದಕ್ಕೆ ಪ್ರತಿಕ್ರಿಯಿಸಿ, ನನಗೆ ಕೆಕೆಆರ್ (KKR)  ನೆಚ್ಚಿನ ಪ್ರತಿಸ್ಪರ್ಧಿ ತಂಡ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿದ ಶ್ರುತಿ

    ಕಳೆದ ಭಾನುವಾರವಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) 16 ವರ್ಷಗಳನ್ನು ಪೂರೈಸಿದ ಕೊಹ್ಲಿಗೆ ಬಿಸಿಸಿಐ (BCCI)  ಕಾರ್ಯದಶಿ ಜಯ್ ಶಾ (Jay Shah) 16 ವರ್ಷದ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ 19 ವರ್ಷದ ಯುವಕ. ಇಂದು 16 ವರ್ಷಗಳನ್ನು ಪೂರೈಸಿದ್ದಾರೆ. ಇದು ನಿಜವಾದ ವೃತ್ತಿಜೀವನದ ಆರಂಭ ಹಾಗೂ ಪೂರೈಸಿದ ರಾಜನಿಗೆ ಅಭಿನಂದನೆಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಶುಭ ಹಾರೈಸಿದ್ದರು.

    ಭಾರತದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ 2008ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಶಕ್ತಿಶಾಲಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಭಾರತ ತಂಡವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಜೊತೆಗೆ ಹಲವಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ.ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್

    ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್  (Sachin Tendulkar) ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದು ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಕೊಹ್ಲಿ 2008ರಲ್ಲಿ ಆರ್‌ಸಿಬಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲಿಂದ ಇಲ್ಲಿಯವರೆಗೂ ಬೇರೆ ತಂಡಕ್ಕೆ ಹೋಗದೇ ನಿರಂತರವಾಗಿ ಆರ್‌ಸಿಬಿ (RCB) ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

  • ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಚೆನ್ನೈ: 2024ರ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಫೈನಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಸೋಲನುಭವಿಸಿತು. ತಂಡದ ಸೋಲಿನ ದುಃಖ ತಡೆಯಲಾರದೇ ಕಾವ್ಯ ಮಾರನ್‌ ಅವರು ಕಣ್ಣೀರಿಟ್ಟರು.

    ಚೆಪಕ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಗೆಲುವು ದಾಖಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಕಳಪೆ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನದಿಂದಾಗಿ ಪ್ಯಾಟ್‌ ಕಮಿನ್ಸ್‌ ನಾಯಕತ್ವದ ಎಸ್‌ಆರ್‌ಎಚ್‌ ಸೋಲೊಪ್ಪಿಕೊಂಡಿತು.‌ ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಹೈದರಾಬಾದ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಯಾವೊಬ್ಬ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಬ್ಯಾಟರ್‌ಗಳು ಒಬ್ಬೊಬ್ಬರಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನು ಕಂಡು ಫ್ರಾಂಚೈಸಿ ಮಾಲೀಕರಾದ ಕಾವ್ಯ ಮಾರನ್‌ ಸಪ್ಪೆ ಮೋರೆ ಹಾಕಿಕೊಂಡು ಕೂತಿದ್ದರು. ಪಂದ್ಯದ ಆರಂಭದಿಂದ ಕೊನೆ ವರೆಗೂ ಅವರ ಮುಖದಲ್ಲಿ ಬೇಸರ ಆವರಿಸಿತ್ತು.

    ಕೊನೆ ಕ್ಷಣದಲ್ಲಿ ಹೈದರಾಬಾದ್‌ ಸೋಲು ಖಚಿತವಾಗುತ್ತಿದ್ದಂತೆ ಕಾವ್ಯ ಮಾರನ್‌ ಅವರ ಮನದಲ್ಲಿದ್ದ ದುಃಖದ ಕಟ್ಟೆಯೊಡೆಯಿತು. ಎಷ್ಟೇ ಪ್ರಯತ್ನಿಸಿದರೂ ಅಳು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ಹರಿಯಿತು. ಈ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಂಡ ಸೋತರೂ ರನ್ನರ್‌ ಅಪ್‌ ವರೆಗೂ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಅಭಿನಂದಿಸಿದರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

    2024ರ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯ ಸಾಧಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇನ್ನೂ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

    2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್‌ ಗಂಭೀರ್‌ ಈ ಬಾರಿ ತಂಡದ ಕೋಚ್‌ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ. ಇದನ್ನೂ ಓದಿ: ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ಕರಗಿದ ಸನ್‌ ತಾಪ – 113ಕ್ಕೆ ಹೈದರಾಬಾದ್‌ ಆಲೌಟ್‌; ಕೋಲ್ಕತ್ತಾಗೆ 114 ರನ್‌ಗಳ ಗುರಿ!

  • ರಾಜಸ್ಥಾನಕ್ಕೆ ಹೀನಾಯ ಸೋಲು – 36 ರನ್‌ಗಳ ಜಯ, ಫೈನಲಿಗೆ ಹೈದರಾಬಾದ್‌

    ರಾಜಸ್ಥಾನಕ್ಕೆ ಹೀನಾಯ ಸೋಲು – 36 ರನ್‌ಗಳ ಜಯ, ಫೈನಲಿಗೆ ಹೈದರಾಬಾದ್‌

    ಚೆನ್ನೈ: ಅತ್ಯುತ್ತಮ ಬ್ಯಾಟಿಂಗ್‌, ಬೌಲಿಂಗ್‌, ಫೀಲ್ಡಿಂಗ್‌ನಿಂದಾಗಿ ಎರಡನೇ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನ ರಾಯಲ್ಸ್‌ (Rajasthan Royals) ವಿರುದ್ಧ 36 ರನ್‌ಗಳಿಂದ ಜಯ ಸಾಧಿಸಿದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ಮೂರನೇ ಬಾರಿ ಐಪಿಎಲ್‌ ಫೈನಲ್‌ (IPL Final) ಪ್ರವೇಶಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 9 ವಿಕೆಟ್‌ ನಷ್ಟಕ್ಕೆ 175 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 139 ರನ್‌ ಹೊಡೆದು ಸೋಲನ್ನು ಒಪ್ಪಿಕೊಂಡಿತು.

    ರಾಜಸ್ಥಾನ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ 42 ರನ್(‌ 21 ಎಸೆತ, 4 ಬೌಂಡರಿ, 3 ಸಿಕ್ಸರ್‌) ಧ್ರುವ್‌ ಜುರೇಲ್‌ ಔಟಾಗದೇ 56 ರನ್‌ (35 ಎಸೆತ, 7 ಬೌಂಡರಿ, 2 ಸಿಕ್ಸರ್‌) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು. ಶಹಬಾಜ್ ಅಹಮದ್ 3 ವಿಕೆಟ್‌, ಅಭಿಷೇಕ್‌ ಶರ್ಮಾ 2 ವಿಕೆಟ್‌ ಪಡೆದರು.

    ಹೈದರಾಬಾದ್‌ ಪರ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ 5 ಎಸೆತಗಳಲ್ಲಿ 12 ರನ್‌ ಸಿಡಿಸಿ ಔಟಾದರು. ಟ್ರಾವಿಸ್‌ ಹೆಡ್‌ 34 ರನ್‌(28 ಎಸೆತ, 3 ಬೌಂಡರಿ, 1 ಸಿಕ್ಸರ್‌) ಹೊಡೆದರೆ ರಾಹುಲ್‌ ತ್ರಿಪಾಠಿ 37 ರನ್‌(15 ಎಸೆತ, 5 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಔಟಾದರು. ವಿಕೆಟ್‌ ಉರುಳುತ್ತಿದ್ದರೂ ಹೆನ್ರಿಕ್ ಕ್ಲಾಸೆನ್ ಅವರು ಗಟ್ಟಿಯಾಗಿ ನಿಂತು 50 ರನ್‌ (34 ಎಸೆತ, 4 ಸಿಕ್ಸರ್)‌ ಸಿಡಿಸಿ ವಿಕೆಟ್‌ ಒಪ್ಪಿಸಿದರು.

    ಚೆನ್ನೈ ಸ್ಟೇಡಿಯಂನಲ್ಲಿ ಮೇ 26 ಭಾನುವಾರ ಫೈನಲ್‌ ಪಂದ್ಯ ನಡೆಯಲಿದ್ದು ಇಂದು ಜಯಗಳಿಸಿದ ಹೈದರಾಬಾದ್‌ ಮತ್ತು ಕೋಲ್ಕತ್ತಾ ಕಪ್‌ಗಾಗಿ ಹೋರಾಟ ನಡೆಸಲಿವೆ.

    ಮೊದಲ ಕ್ವಾಲಿಫೈಯರ್‌ನಲ್ಲಿ ಕೋಲ್ಕತ್ತಾ (Kolkata Knight Riders) ಮತ್ತು ಹೈದರಾಬಾದ್‌ ಸೆಣಸಾಡಿದ್ದವು. ಈ ಪಂದ್ಯವನ್ನು ಕೋಲ್ಕತ್ತಾ 8 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಹೈದರಾಬಾದ್‌ 159 ರನ್‌ಗಳಿಗೆ ಆಲೌಟ್‌ ಆಗಿತ್ತು. ಕೋಲ್ಕತ್ತಾ ಇನ್ನೂ 38 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆದು ಫೈನಲ್‌ ಪ್ರವೇಶಿಸಿತ್ತು.

  • 4ನೇ ಬಾರಿಗೆ ಫೈನಲ್‌ಗೆ – ಕೋಲ್ಕತ್ತಾ ಅಬ್ಬರಕ್ಕೆ ಮುಳುಗಿದ ಸನ್‌ ರೈಸರ್ಸ್‌

    4ನೇ ಬಾರಿಗೆ ಫೈನಲ್‌ಗೆ – ಕೋಲ್ಕತ್ತಾ ಅಬ್ಬರಕ್ಕೆ ಮುಳುಗಿದ ಸನ್‌ ರೈಸರ್ಸ್‌

    ಅಹಮದಾಬಾದ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ಮೊದಲ ಕ್ವಾಲಿಫೈಯರ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ8  ವಿಕೆಟ್‌ಗಳ ಭರ್ಜರಿ ಜಯಗಳಿಸಿ ನಾಲ್ಕನೇ ಬಾರಿ ಐಪಿಎಲ್ ಫೈನಲ್‌ (IPL Final) ಪ್ರವೇಶಿಸಿದೆ.

    ಗೆಲ್ಲಲು 160 ರನ್‌ಗಳ ಗುರಿಯನ್ನು ಪಡೆದ ಕೋಲ್ಕತ್ತಾ ಇನ್ನೂ 38 ಎಸೆತ ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆಯುವ ಮೂಲಕ ಜಯಗಳಿಸಿತು.‌ ಇಲ್ಲಿಯವರೆಗೆ 2012, 2014, 2021ರಲ್ಲಿ ಕೋಲ್ಕತ್ತಾ ಫೈನಲ್‌ ಪ್ರವೇಶಿಸಿತ್ತು. 2012 ಮತ್ತು 2014ರಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

    ಸುಲಭದ ಸವಾಲನ್ನು ಬೆನ್ನಟ್ಟಿದ ಕೋಲ್ಕತ್ತಾ ಆರಂಭಿಕ ಆಟಗಾರರು ಆರಂಭದಿಂದಲೇ ಆಕ್ರಮಣಕ್ಕೆ ಇಳಿದಿದ್ದರು. ಮೊದಲ ವಿಕೆಟಿಗೆ 20 ಎಸೆತಗಳಲ್ಲಿ 44 ರನ್‌ ಬಂದಿತ್ತು. ರಹಮಾನುಲ್ಲಾ ಗುರ್ಬಾಜ್ 23 ರನ್‌ (14 ಎಸೆತ, 2 ಬೌಂಡರಿ, 2 ಸಿಕ್ಸರ್)‌, ಸುನಿಲ್‌ ನರೈನ್‌ 21 ರನ್‌ (16 ಎಸೆತ, 4 ಬೌಂಡರಿ) ಹೊಡೆದು ಔಟಾದರು.

    ನಂತರ ಜೊತೆಯಾದ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ ಮುರಿಯದ 3ನೇ ವಿಕೆಟಿಗೆ 44 ಎಸೆತಗಳಲ್ಲಿ 97 ರನ್‌ ಜೊತೆಯಾಟವಾಡುವ ಮೂಲಕ ತಂಡಕ್ಕೆ ಜಯವನ್ನು ತಂದುಕೊಟ್ಟರು. ಶ್ರೇಯಸ್‌ ಅಯ್ಯರ್‌ 58 ರನ್‌ (24 ಎಸೆತ, 5 ಬೌಂಡರಿ, 4 ಸಿಕ್ಸರ್‌), ವೆಂಕಟೇಶ್‌ ಅಯ್ಯರ್‌ 51 ರನ್‌(28 ಎಸೆತ, 5 ಬೌಂಡರಿ, 4 ಸಿಕ್ಸರ್‌) ಸಿಡಿಸಿದರು.

    ಹೈದರಾಬಾದ್‌ ಬೌಲಿಂಗ್‌ ಕಳಪೆಯಾಗಿತ್ತು. ಉತ್ತಮ ಬೌಲಿಂಗ್‌ ಮಾಡುತ್ತಿದ್ದ ನಾಯಕ ಪ್ಯಾಟ್‌ ಕಮ್ಮಿನ್ಸ್‌ 3 ಓವರ್‌ ಎಸೆದು 38 ರನ್‌ ನೀಡಿದ್ದರು. ಅಷ್ಟೇ ಅಲ್ಲದೇ ಹಲವು ಕ್ಯಾಚ್‌ಗಳನ್ನು ಕೈಚೆಲ್ಲಿದ ಪರಿಣಾಮ ಹೈದರಾಬಾದ್‌ ಸೋಲನ್ನು ಅನುಭವಿಸಿತು.

    ಕಳಪೆ ಬ್ಯಾಟಿಂಗ್‌: ಟಾಸ್‌ ಗೆದ್ದ ಕೋಲ್ಕತ್ತಾ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಫೀಲ್ಡಿಂಗ್‌ ಆಯ್ಕೆ ಮಾಡಿದರು. ಈ ನಿರ್ಧಾರ ಮೊದಲ ಓವರ್‌ನಲ್ಲಿ ಫಲ ನೀಡಿತು. ಲೀಗ್‌ನಲ್ಲಿ ಅಬ್ಬರಿಸಿದ್ದ ಟ್ರಾವಿಸ್‌ ಹೆಡ್‌ ಅವರನ್ನು ಮಿಚೆಲ್‌ ಸ್ಟಾರ್ಕ್‌ ಶೂನ್ಯಕ್ಕೆ ಬೌಲ್ಡ್‌ ಮಾಡಿ ಆರಂಭಿಕ ಮುನ್ನಡೆ ತಂದುಕೊಟ್ಟರು. ಎರಡನೇ ಓವರ್‌ನಲ್ಲಿ ಸಿಕ್ಸರ್‌ ವೀರ ಅಭಿಷೇಕ್‌ ಶರ್ಮಾ 3 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. 39 ರನ್‌ಗಳಿಸುವಷ್ಟರಲ್ಲಿ ನಿತೀಶ್‌ ಕುಮಾರ್‌ ರೆಡ್ಡಿ ಸಹ ಔಟಾದರು.

    ಈ ಹಂತದಲ್ಲಿ ಜೊತೆಯಾದ ರಾಹುಲ್‌ ತ್ರಿಪಾಠಿ ಮತ್ತು ಕ್ಲಾಸೆನ್‌ 37 ಎಸೆತಗಳಲ್ಲಿ 62 ರನ್‌ ಜೊತೆಯಾಟವಾಡಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರು.

     

    ಸಿಕ್ಸ್‌ ಸಿಡಿಸಲು ಹೋಗಿ ಕ್ಲಾಸೆನ್‌ 32 ರನ್‌ (21 ಎಸೆತ, 3 ಬೌಂಡರಿ, 1 ಸಿಕ್ಸರ್‌), ರಾಹುಲ್‌ ತ್ರಿಪಾಠಿ 55 ರನ್‌ (35 ಎಸೆತ, 7 ಬೌಂಡರಿ, 1 ಸಿಕ್ಸರ್)‌ ಸಿಡಿಸಿ ರನೌಟ್‌ಗೆ ಬಲಿಯಾರು.

    ನಾಯಕ ಪ್ಯಾಟ್‌ ಕಮ್ಮಿನ್ಸ್‌ 30 ರನ್‌ (24 ಎಸೆತ, 2 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಜೊತೆಯಾಟ ನಡೆಯದ ಕಾರಣ ಅಂತಿಮವಾಗಿ 19.3 ಓವರ್‌ಗಳಲ್ಲಿ 159 ರನ್‌ಗಳಿಗೆ ಹೈದರಾಬಾದ್‌ ಆಲೌಟ್‌ ಆಯ್ತು. ಹೈದರಾಬಾದ್‌ 8 ಆಟಗಾರರು ಎರಡಂಕಿಯನ್ನು ದಾಟಲಿಲ್ಲ.  4 ಆಟಗಾರರು ಶೂನ್ಯಕ್ಕೆ ಔಟಾಗಿದ್ದರು.

  • ಮಳೆಗೆ ಪಂದ್ಯ ಬಲಿ – ಪ್ಲೇ ಆಫ್‌ ರೇಸ್‌ನಿಂದ ಗುಜರಾತ್‌ ಔಟ್‌

    ಮಳೆಗೆ ಪಂದ್ಯ ಬಲಿ – ಪ್ಲೇ ಆಫ್‌ ರೇಸ್‌ನಿಂದ ಗುಜರಾತ್‌ ಔಟ್‌

    ಅಹಮದಾಬಾದ್‌: ಗುಜರಾತ್‌ ಟೈಟಾನ್ಸ್‌ (Gujarat Titans) ಐಪಿಎಲ್‌ ಪ್ಲೇ ಆಫ್‌ ರೇಸ್‌ನಿಂದ ಹೊರ ಬಿದ್ದಿದೆ. ಗುಜರಾತ್‌ ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ಧದ ಪಂದ್ಯ ಭಾರೀ ಮಳೆಯಿಂದ ರದ್ದಾಗಿದೆ.

    ಪ್ಲೇ ಆಫ್‌ಗೆ ಹೋಗಲು ಇಂದಿನ ಪಂದ್ಯವನ್ನು ಗುಜರಾತ್‌ಗೆ ಗೆಲ್ಲಲೇ ಬೇಕಿತ್ತು. ಆದರೆ ಭಾರೀ ಮಳೆಯಿಂದ (Rain) ಒಂದು ಎಸೆತ ಕಾಣದೇ ಪಂದ್ಯ ರದ್ದಾದ ಪರಿಣಾಮ ಗುಜರಾತ್‌ ಕನಸು ಭಗ್ನಗೊಂಡಿದೆ.

    ಪಂದ್ಯ ರದ್ದಾದ ಪರಿಣಾಮ ಕೋಲ್ಕತ್ತಾ ಮತ್ತು ಗುಜರಾತ್‌ಗೆ ತಲಾ ಒಂದೊಂದು ಅಂಕವನ್ನು ಹಂಚಲಾಗಿದೆ. ಈಗಾಲೇ ಪ್ಲೇ ಆಫ್‌ ಪ್ರವೇಶಿಸಿರುವ ಕೋಲ್ಕತ್ತಾಗೆ ಒಟ್ಟು 19 ಅಂಕ ಸಂಪಾದಿಸಿದರೆ ಗುಜರಾತ್‌ 12 ಪಂದ್ಯಗಳಿಂದ ಒಟ್ಟು 11 ಅಂಕ ಸಂಪಾದಿಸಿದೆ.

     ಚೆನ್ನೈ ಮತ್ತು ಹೈದರಾಬಾದ್‌ ತಲಾ 14 ಅಂಕ ಗಳಿಸಿ ಪ್ಲೇ ಆಫ್‌ ರೇಸ್‌ನಲ್ಲಿದೆ. ಈ ಒಂದು ವೇಳೆ ಈ ಪಂದ್ಯವನ್ನು ಉತ್ತಮ ರನ್‌ ರೇಟ್‌ನೊಂದಿಗೆ ಗೆದ್ದಿದ್ದರೆ ಗುಜರಾತ್‌ಗೆ ಪ್ಲೇ ಆಫ್‌ ಪ್ರವೇಶಿಸುವ ಸಾಧ್ಯತೆ ಇತ್ತು. ಆದರೆ ಈ ಪಂದ್ಯದ ರದ್ದಾದ ಪರಿಣಾಮ 2022 ಚಾಂಪಿಯನ್‌, 2023ರ ದ್ವಿತೀಯ ಸ್ಥಾನಿ ಗುಜರಾತ್‌ ಐಪಿಎಲ್‌ ಪ್ಲೇ ಆಫ್‌ ರೇಸ್‌ನಿಂದ ಅಧಿಕೃತವಾಗಿ ಹೊರ ಬಿದ್ದಿದೆ.

  • KKR vs MI ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ – 5 ಓವರ್‌ಗಳ ಪಂದ್ಯ ನಡೆಸಲು ತಜ್ಞರ ಸಲಹೆ!

    KKR vs MI ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ – 5 ಓವರ್‌ಗಳ ಪಂದ್ಯ ನಡೆಸಲು ತಜ್ಞರ ಸಲಹೆ!

    ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ (Eden Gardens) ಆಯೋಜನೆಗೊಂಡಿರುವ ಮುಂಬೈ ಇಂಡಿಯನ್ಸ್‌ ಮತ್ತು ಕೋಲ್ಕತ್ತಾ ನೈಟ್‌ರೈಡರ್ಸ್‌ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ (Rain) ಅಡ್ಡಿಯಾಗಿದೆ.

    ಸುಮಾರು 40 ನಿಮಿಷಗಳ ಕಾಲ ಸುರಿದ ಭಾರೀ ಮಳೆಯಿಂದಾಗಿ ಮ್ಯಾಚ್‌ ತಡವಾಗಿ ಆರಂಭಿಸಲಾಗುತ್ತಿದೆ. 40 ನಿಮಿಷಗಳ ಬಳಿಕ ವರುಣ ಬಿಡುವು ನೀಡಿದ್ದು, ಸಿಬ್ಬಂದಿ ಮೈದಾನವನ್ನು ಹದಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಸದ್ಯ ಭಾರೀ ಮಳೆ ಹಿನ್ನೆಲೆಯಲ್ಲಿ ಮೈದಾನವನ್ನು (Cricket Field) ಹದಗೊಳಿಸಲು ಸಿಬ್ಬಂದಿ ಕನಿಷ್ಠ ಒಂದು ಗಂಟೆ ಸಮಯ ಕೇಳಿದ್ದಾರೆ. ಸುಮಾರು 8:45ರ ವೇಳೆ ಪಿಚ್‌ ಕ್ಯೂರೇಟರ್‌ಗಳೊಂದಿಗೆ ಅಂಪೈರ್‌ಗಳು ಮತ್ತು ತಂಡದ ನಾಯಕರು ಪಿಚ್‌ ಪರಿಶೀಲಿಸಲಿದ್ದಾರೆ. ಇದರಿಂದ 9:30ರ ನಂತರ ಪಂದ್ಯ ಆರಂಭಗೊಳ್ಳುವ ನಿರೀಕ್ಷೆಯಿದ್ದು, 20 ಓವರ್‌ಗಳ ಪಂದ್ಯ ನಡೆಯುವುದು ಅನುಮಾನವಾಗಿದೆ. ಒಂದು ವೇಳೆ 10 ಗಂಟೆಯ ನಂತರ ಪಂದ್ಯ ಆರಂಭಗೊಂಡರೆ 5 ಅಥವಾ 10 ಓವರ್‌ಗಳಿಗೆ ಪಂದ್ಯ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪ್ರಾಥಮಿಕ ಮೂಲಗಳ ಪ್ರಕಾರ ಮೈದಾನ ಹದಗೊಳಿಸಲು ಕನಿಷ್ಠ 75 ನಿಮಿಷಗಳು ಬೇಕಾಗುತ್ತದೆ. ಆದ್ದರಿಂದ 5 ಓವರ್‌ಗಳ ಪಂದ್ಯ ಆರಂಭಿಸುವುದು ಸೂಕ್ತ ಎಂದು ಕ್ರಿಕೆಟ್‌ ತಜ್ಞರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರಿಷಭ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ – ಪಂತ್‌ ಒಂದು ಪಂದ್ಯದಿಂದ ಅಮಾನತು!

    ಸದ್ಯ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪ್ಲೇ ಆಫ್‌ಗೆ ಅಧಿಕೃತ ಪ್ರವೇಶ ಪಡೆಯಲು ಇನ್ನೊಂದು ಪಂದ್ಯ ಗೆಲ್ಲಬೇಕಿದೆ. ಆದ್ರೆ 12ರಲ್ಲಿ ಕೇವಲ 4 ಪಂದ್ಯ ಗೆದ್ದಿರುವ ಮುಂಬೈ 9ನೇ ಸ್ಥಾನದಲ್ಲಿದೆ.

  • ಲಕ್ನೋ ವಿರುದ್ಧ ಕೆಕೆಆರ್‌ಗೆ 98 ರನ್‌ಗಳ ಭರ್ಜರಿ ಜಯ – ಪ್ಲೆ-ಆಫ್‌ಗೆ ಶ್ರೇಯಸ್‌ ಪಡೆ ಇನ್ನಷ್ಟು ಹತ್ತಿರ

    ಲಕ್ನೋ ವಿರುದ್ಧ ಕೆಕೆಆರ್‌ಗೆ 98 ರನ್‌ಗಳ ಭರ್ಜರಿ ಜಯ – ಪ್ಲೆ-ಆಫ್‌ಗೆ ಶ್ರೇಯಸ್‌ ಪಡೆ ಇನ್ನಷ್ಟು ಹತ್ತಿರ

    ಲಕ್ನೋ: ಸುನೀಲ್‌ ನರೇನ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್‌ 98 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಪ್ಲೇ-ಆಫ್‌ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

    ಭಾನುವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ತವರಿನಲ್ಲೇ ಲಕ್ನೋ ಸೋಲನುಭವಿಸಿತು. ಟಾಸ್‌ ಗೆದ್ದ ರಾಹುಲ್‌ ಪಡೆ ಫೀಲ್ಡಿಂಗ್‌ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 235 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ಲಕ್ನೋ 16.1 ಓವರ್‌ಗಳಲ್ಲಿ 137 ರನ್‌ಗಳಿಗೆ ಆಲೌಟ್‌ ಆಗಿ ಸೋತಿತು.

    ಲಕ್ನೋ ಪರ ಯಾವೊಬ್ಬ ಬ್ಯಾಟರ್‌ ಕೂಡ ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲರಾದರು. ನಾಯಕ ಕೆ.ಎಲ್‌.ರಾಹುಲ್‌ (25), ಮಾರ್ಕಸ್ ಸ್ಟೊಯಿನಿಸ್ (36), ಆಯುಷ್ ಬದೋನಿ (15), ಆಷ್ಟನ್ ಟರ್ನರ್ (16) ಗಳಿಸಿದರು. ಉಳಿದ ಬ್ಯಾಟರ್‌ಗಳು ಕೂಡ ಪಂದ್ಯದಲ್ಲಿ ನೀರಸ ಪ್ರದರ್ಶನ ತೋರಿದರು.

    ರಾಹುಲ್‌ ಪಡೆಯನ್ನು ಕಟ್ಟಿ ಹಾಕುವಲ್ಲಿ ಕೆಕೆಆರ್‌ ಬೌಲರ್‌ಗಳು ಯಶಸ್ವಿಯಾದರು. ಕೆಕೆಆರ್‌ ಪರ ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್‌ ಕಿತ್ತು ಮಿಂಚಿದರು. ಆಂಡ್ರೆ ರಸೆಲ್ 2, ಮಿಚೆಲ್ ಸ್ಟಾರ್ಕ್ ಹಾಗೂ ಸುನಿಲ್ ನರೇನ್‌ ತಲಾ 1 ವಿಕೆಟ್‌ ಕಿತ್ತರು.

    ಇದಕ್ಕೂ ಮೊದಲು ಕೆಕೆಆರ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿತು. ಆರಂಭಿಕರಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಮತ್ತು ಸುನೀಲ್‌ ನರೇನ್‌ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಹೊಡಿಬಡಿ ಆಟವಾಡಿದ ಜೋಡಿ 26 ಬಾಲ್‌ಗಳಿಗೆ 61 ರನ್‌ಗಳ ಜೊತೆಯಾಟವಾಡಿತು. ಸಾಲ್ಟ್‌ 14 ಬಾಲ್‌ಗೆ 32 ರನ್‌ ಗಳಿಸಿದರು.

    ನಂತರ ನರೇನ್‌ಗೆ ಆಂಗ್ಕ್ರಿಶ್ ರಘುವಂಶಿ (32) ಜೊತೆಯಾಗಿ ಉತ್ತಮ ರನ್‌ ಕಲೆಹಾಕಲು ಸಾಥ್‌ ನೀಡಿದರು. ಈ ಜೋಡಿ 46 ಬಾಲ್‌ಗೆ 79 ರನ್‌ಗಳ ಜೊತೆಯಾಟವಾಡಿತು.

    ನರೇನ್‌ ಬಿರುಸಿನ ಆಟ
    ಕೆಕೆಆರ್‌ ಪರ ಬಿರುಸಿನ ಆಟವಾಡಿದ ನರೇನ್‌ ಕೇವಲ 39 ಬಾಲ್‌ಗಳಿಗೆ 81 ರನ್‌ (6 ಫೋರ್‌, 7 ಸಿಕ್ಸರ್‌) ಚಚ್ಚಿದರು. ನಾಯಕ ಶ್ರೇಯರ್‌ ಐಯ್ಯರ್‌ 23, ರಮಣದೀಪ್ ಸಿಂಗ್ 25 ರನ್‌ಗಳಿಸಿ ತಂಡ ಸವಾಲಿನ ಮೊತ್ತ ಪೇರಿಸಲು ನೆರವಾದರು. ಇತ್ತ ಲಕ್ನೋ ಪರ ನವೀನ್-ಉಲ್-ಹಕ್ 3, ಯಶ್ ಠಾಕೂರ್, ರವಿ ಬಿಷ್ಣೋಯ್, ಯುದ್ಧವೀರ್ ಸಿಂಗ್ ತಲಾ 1 ವಿಕೆಟ್‌ ಕಿತ್ತರು.

  • ಮುಂಬೈ ವಿರುದ್ಧ 24 ರನ್‌ಗಳ ಜಯ – ಎರಡನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ

    ಮುಂಬೈ ವಿರುದ್ಧ 24 ರನ್‌ಗಳ ಜಯ – ಎರಡನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ

    ಮುಂಬೈ: ವೆಂಕಟೇಶ್‌ ಅಯ್ಯರ್‌, ಮೈಕಲ್‌ ಸ್ಟಾರ್ಕ್‌ ಅವರ ಅತ್ಯುತ್ತಮ ಆಟದಿಂದ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) 24 ರನ್‌ಗಳ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ 19.5 ಓವರ್‌ಗಳಲ್ಲಿ 169 ರನ್‌ ಗಳಿಗೆ ಆಲೌಟ್‌ ಆಯ್ತು. ಈ ಮೊತ್ತವನ್ನು ಬೆನ್ನಟ್ಟಿದ ಮುಂಬೈ 18.5 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್‌ ಆಯ್ತು. ಈ ಗೆಲುವಿನೊಂದಿಗೆ ಕೋಲ್ಕತ್ತಾ 14 ಅಂಕಗಳಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.

    ಮುಂಬೈ ಪರ ಸೂರ್ಯಕುಮಾರ್‌ ಯಾದವ್‌ (Surya Kumar Yadav) 56 ರನ್‌(35 ಎಸೆತ, 6 ಬೌಂಡರಿ, 2 ಸಿಕ್ಸರ್‌) ಟೀಮ್‌ ಡೇವಿಡ್‌ 24 ರನ್‌ (20 ಎಸೆತ, 1 ಬೌಂಡರಿ, 1 ಸಿಕ್ಸ್‌ ) ಹೊಡೆದು ಔಟಾದರು.

    ಕೋಲ್ಕತ್ತಾ ಪರ ಸ್ಟಾರ್ಕ್‌ 33 ರನ್‌ ನೀಡಿ 4 ವಿಕೆಟ್‌ ಪಡೆದರೆ ವರುಣ್‌ ಚಕ್ರವರ್ತಿ, ಸುನಿಲ್‌ ನರೈನ್‌, ರಸೆಲ್‌ ತಲಾ 2 ವಿಕೆಟ್‌ ಪಡೆದರು.  ಇದನ್ನೂ ಓದಿ: ಸುಬ್ರಹ್ಮಣ್ಯದಲ್ಲಿ ಸಿಡಿಲಿಗೆ ನವ ವಿವಾಹಿತ ಬಲಿ

    ಕೋಲ್ಕತ್ತಾ ಪರ ವೆಂಕಟೇಶ್‌ ಅಯ್ಯರ್‌ 70 ರನ್‌ (52 ಎಸೆತ, 6 ಬೌಂಡರಿ, 3 ಸಿಕ್ಸರ್‌), ಮನೀಷ್‌ ಪಾಂಡೆ 42 ರನ್‌(31 ಎಸೆತ, 2 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಔಟಾದರು.

  • ಡೆಲ್ಲಿ ವಿರುದ್ಧ ಆಲ್‌ರೌಂಡರ್‌ ಪ್ರದರ್ಶನ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

    ಡೆಲ್ಲಿ ವಿರುದ್ಧ ಆಲ್‌ರೌಂಡರ್‌ ಪ್ರದರ್ಶನ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

    ಕೋಲ್ಕತ್ತಾ: ಆರಂಭದಲ್ಲಿ ಬೌಲರ್‌ ನಂತರ ಬ್ಯಾಟರ್‌ಗಳ ಅತ್ಯುತ್ತಮ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 9 ವಿಕೆಟ್‌ ನಷ್ಟಕ್ಕೆ 153 ರನ್‌ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಡೆಲ್ಲಿ ಇನ್ನೂ 21 ಎಸೆತ ಬಾಕಿ ಇರುವಂತೆಯೇ 157 ರನ್‌ ಹೊಡೆದು ಜಯಗಳಿಸಿತು.

    ಕೋಲ್ಕತ್ತಾ ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ (Phil Salt) ಆರಂಭದಲ್ಲೇ ಅಬ್ಬರಿಸಲು ಆರಂಭಿಸಿದ್ದರು. 68 ರನ್‌(33 ಎಸೆತ, 7 ಬೌಂಡರಿ, 5 ಸಿಕ್ಸರ್‌) ಸಿಡಿಸಿ ಔಟಾದರು. ಕೊನೆಯಲ್ಲಿ ಮುರಿಯದ 4ನೇ ವಿಕೆಟಿಗೆ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ 43 ಎಸೆತಗಳಲ್ಲಿ 57 ರನ್‌ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಶ್ರೇಯಸ್‌ ಅಯ್ಯರ್‌ ಔಟಾಗದೇ 33 ರನ್‌(23 ಎಸೆತ, 3 ಬೌಂಡರಿ, 1 ಸಿಕ್ಸ್‌) ವೆಂಕಟೇಶ್‌ ಅಯ್ಯರ್ ಔಟಾಗದೇ 26 ರನ್‌(23‌ ಎಸೆತ, 2 ಬೌಂಡರಿ,1 ಸಿಕ್ಸ್‌) ಹೊಡೆದರು.  ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ – ಊಟಿ, ಕೊಡೈಕೆನಾಲ್‌ಗೆ ಹೋಗಬೇಕಾದ್ರೆ ಇ-ಪಾಸ್‌ ಕಡ್ಡಾಯ

    ಡೆಲ್ಲಿ ಪರ ನಾಯಕ ರಿಷಭ್‌ ಪಂತ್‌ 27 ರನ್ ಹೊಡೆದರೆ ಕೊನೆಯಲ್ಲಿ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಔಟಾಗದೇ 35 ರನ್‌ (26 ಎಸೆತ, 5 ಬೌಂಡರಿ, 1 ಸಿಕ್ಸರ್‌) ಸಿಡಿಸಿದ ಪರಿಣಾಮ ತಂಡ 150 ರನ್‌ಗಳ ಗಡಿಯನ್ನು ದಾಟಿತು.

    ಕೋಲ್ಕತ್ತಾ ಪರ ವರುಣ್‌ ಚಕ್ರವರ್ತಿ 16 ರನ್‌ ನೀಡಿ 3 ವಿಕೆಟ್‌ ಕಿತ್ತರೆ ವೈಭವ್‌ ಅರೋರಾ ಮತ್ತು ಹರ್ಷಿತ್‌ ರಾಣಾ ತಲಾ 2 ವಿಕೆಟ್‌ ಪಡೆದರು.

  • IPL 2024: ಲಕ್ನೋ ವಿರುದ್ಧ ಕೆಕೆಆರ್‌ಗೆ 8 ವಿಕೆಟ್‍ಗಳ ಜಯ

    IPL 2024: ಲಕ್ನೋ ವಿರುದ್ಧ ಕೆಕೆಆರ್‌ಗೆ 8 ವಿಕೆಟ್‍ಗಳ ಜಯ

    ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್‍ನಲ್ಲಿ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಮತ್ತು ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ನಡುವಿನ ಐಪಿಎಲ್ (IPL) ಪಂದ್ಯದಲ್ಲಿ ಕೋಲ್ಕತ್ತಾ ತಂಡ 8 ವಿಕೆಟ್‍ಗಳ ಜಯಗಳಿಸಿದೆ.

    ಲಕ್ನೋ ನೀಡಿದ 162 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ತಂಡ 15.4 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಭರ್ಜರಿ ಜಯಗಳಿಸಿದೆ.

    ಆರಂಭಿಕ ಆಟಗಾರ ಸುನಿಲ್ ನರೈನ್ ಅವರು 6 ಎಸೆತಗಳಲ್ಲಿ 6 ರನ್ ಗಳಿಸಿ ಔಟಾದರು. ಬಳಿಕ ಆರು ಎಸೆತಗಳಲ್ಲಿ ಏಳು 7 ಗಳಿಸಿ ರಘುವಂಶಿ ಔಟಾದರು. ಬಳಿಕ ಕಣಕ್ಕಿಳಿದ ಪಿಲ್ ಸಾಲ್ಟ್ 47 ಎಸೆತಗಳಿಗೆ 89 ಹಾಗೂ ಶ್ರೇಯಸ್ ಅಯ್ಯರ್ 38 ಎಸೆತಗಳಿಗೆ 38 ರನ್‍ಗಳನ್ನು ಕಲೆಹಾಕಿ ತಂಡವನ್ನು ಗೆಲುವಿನ ದಡ ತಲುಪಿಸಿದರು.

    ಟಾಸ್ ಗೆದ್ದು ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಬೀಸಿದ ಲಕ್ನೋ ಸೂಪರ್‌‌ ಜೈಂಟ್ಸ್ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್‍ಗೆ 161 ರನ್ ಕಲೆಹಾಕಿತ್ತು. ಲಕ್ನೋ ಪರ ನಿಕೋಲಸ್ ಪುರನ್ 32 ಎಸೆತಗಳಲ್ಲಿ ಎರಡು 4 ಹಾಗೂ ನಾಲ್ಕು 6 ನೆರವಿನಿಂದ ಗರಿಷ್ಠ 45 ರನ್ ಗಳಿಸಿದರೆ, ನಾಯಕ ಕೆಎಲ್ ರಾಹುಲ್ 27 ಎಸೆತಗಳಲ್ಲಿ 39 ರನ್ ಗಳಿಸಿದ್ದರು.

    5 ಎಸೆತಗಳಲ್ಲಿ ಎರಡು ಬೌಂಡರಿಗಳ ನೆರವಿನಿಂದ 10 ರನ್ ಗಳಿಸಿ ಮಾರ್ಕಸ್ ಸ್ಟೊಯಿನಿಸ್ ಔಟಾದರು. ಬಳಿಕ ಕ್ರೀಸ್‍ಗೆ ಬಂದ ನಿಕೋಲಸ್ 45 ರನ್‍ಗಳ ಕಲೆಹಾಕಿ ತಂಡದ ಮೊತ್ತ ಹೆಚ್ಚಿಸಿದರು. ದೀಪಕ್ ಹೂಡಾ ಹತ್ತು ಎಸೆತಗಳಿಗೆ 8 ರನ್ ಗಳಿಸಿ ಪೆವಿಲಿಯನ್‍ಗೆ ಮರಳಿದರು. ಆಯುಷ್ ಬಡೋನಿ 27 ಎಸೆತಗಳಲ್ಲಿ ಎರಡು ಫೋರ್ ಹಾಗೂ ಒಂದು ಸಿಕ್ಸ್ ನೆರವಿನಿಂದ 29 ರನ್ ಗಳಿಸಿದರು. ಕ್ವಿಂಟನ್ ಡಿ ಕಾಕ್ ಎಂಟು ಎಸೆತಗಳಲ್ಲಿ 10ರನ್ ಗಳಿಸಿ ಔಟಾದರು. ಅರ್ಷದ್ ಖಾನ್ ನಾಲ್ಕು ಎಸೆತಗಳಲ್ಲಿ ಕೇವಲ 5ರನ್ ಮಾತ್ರ ಗಳಿಸಿದರು.