Tag: ಕೋಲ್ಕತ್ತಾ ಹೈಕೋರ್ಟ್

  • ಪತ್ನಿಗೆ ತಿಂಗಳಿಗೆ 4 ಲಕ್ಷ ಕೊಡಿ: ಮೊಹಮ್ಮದ್‌ ಶಮಿಗೆ ಹೈಕೋರ್ಟ್‌ ಸೂಚನೆ

    ಪತ್ನಿಗೆ ತಿಂಗಳಿಗೆ 4 ಲಕ್ಷ ಕೊಡಿ: ಮೊಹಮ್ಮದ್‌ ಶಮಿಗೆ ಹೈಕೋರ್ಟ್‌ ಸೂಚನೆ

    ಕೋಲ್ಕತ್ತಾ: ಭಾರತದ ಕ್ರಿಕೆಟಿಗ ಮೊಹಮ್ಮದ್‌ ಶಮಿ (Mohammed Shami) ತನ್ನಿಂದ ದೂರವಾಗಿರುವ ಪತ್ನಿಗೆ ತಿಂಗಳಿಗೆ ನಾಲ್ಕು ಲಕ್ಷ ಜೀವನಾಂಶ ಕೊಡುವಂತೆ ಕೋಲ್ಕತ್ತಾ ಹೈಕೋರ್ಟ್‌ (Calcutta High Court) ಆದೇಶ ಹೊರಡಿಸಿದೆ.

    ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರಿದ್ದ ಪೀಠವು ಆದೇಶ ಹೊರಡಿಸಿದೆ. ಶಮಿ ಪತ್ನಿ ಜಹಾನ್ ವೈಯಕ್ತಿಕ ಜೀವನಾಂಶಕ್ಕಾಗಿ ತಿಂಗಳಿಗೆ 1.5 ಲಕ್ಷ ರೂಪಾಯಿ ಮತ್ತು ಅಪ್ರಾಪ್ತ ಮಗಳ ಆರೈಕೆ, ವೆಚ್ಚಗಳಿಗಾಗಿ 2.5 ಲಕ್ಷ ರೂಪಾಯಿಗಳನ್ನು ಪಾವತಿಸಬೇಕೆಂದು ನಿರ್ದೇಶಿಸಿದ್ದಾರೆ. ಇದನ್ನೂ ಓದಿ: ಶಮಿ ಮಗಳ ಹೋಳಿ ಆಚರಣೆ ಸರಿಯಲ್ಲ – ಇದು ಷರಿಯಾ ವಿರುದ್ಧ ಎಂದ ಜಮಾತ್ ಅಧ್ಯಕ್ಷ

    ಶಮಿ ತಿಂಗಳಿಗೆ 50,000 ರೂ. ಮತ್ತು ತಮ್ಮ ಮಗಳ ಖರ್ಚಿಗಾಗಿ ಹೆಚ್ಚುವರಿಯಾಗಿ 80,000 ರೂ.ಗಳನ್ನು ಪಾವತಿಸುವಂತೆ ಕೋಲ್ಕತ್ತಾದ ಅಲಿಪೋರ್ ನ್ಯಾಯಾಲಯವು 2018 ರಲ್ಲಿ ನೀಡಿದ್ದ ಆದೇಶದ ವಿರುದ್ಧ ಜಹಾನ್ ಮೇಲ್ಮನವಿ ಸಲ್ಲಿಸಿದ್ದರು. ಆ ಸಮಯದಲ್ಲಿ, ಜಹಾನ್ ತನಗೆ 7 ಲಕ್ಷ ರೂ. ಮತ್ತು ತನ್ನ ಮಗಳಿಗೆ 3 ಲಕ್ಷ ರೂ.ನಂತೆ ಒಟ್ಟು 10 ಲಕ್ಷ ರೂ. ಕೇಳಿದ್ದರು. ಆದರೆ, ಕೆಳಹಂತದ ನ್ಯಾಯಾಲಯವು ಅವರ ವಿನಂತಿಯನ್ನು ವಜಾಗೊಳಿಸಿತ್ತು.

    ಶಮಿ ಆರ್ಥಿಕ ಪರಿಸ್ಥಿತಿಯು ಹೆಚ್ಚಿನ ಜೀವನಾಂಶವನ್ನು ನೀಡಲು ಸಹಾಯ ಮಾಡುತ್ತದೆ ಎಂದು ಜಹಾನ್ ಕಾನೂನು ಸಲಹೆಗಾರರು ತಮ್ಮ ಮೇಲ್ಮನವಿಯಲ್ಲಿ ವಾದಿಸಿದ್ದರು. 2021 ರ ಹಣಕಾಸು ವರ್ಷದ ಅವರ ಆದಾಯ ತೆರಿಗೆ ರಿಟರ್ನ್ ಪ್ರಕಾರ, ಶಮಿ ಅವರ ವಾರ್ಷಿಕ ಆದಾಯ ಸುಮಾರು 7.19 ಕೋಟಿ ರೂ. ಅಂದರೆ, ತಿಂಗಳಿಗೆ ಸುಮಾರು 60 ಲಕ್ಷ ರೂ. ಆಗಿತ್ತು. ಜಹಾನ್ ತನ್ನ ಮಗಳ ಖರ್ಚು ಸೇರಿದಂತೆ ತನ್ನ ಒಟ್ಟು ಮಾಸಿಕ ಖರ್ಚು 6 ಲಕ್ಷ ರೂ. ಮೀರಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ರಂಜಾನ್ ವೇಳೆ ಎನರ್ಜಿ ಡ್ರಿಂಕ್ ಕುಡಿದಿದ್ದಕ್ಕೆ ಆಕ್ರೋಶ – ಶಮಿಯನ್ನು ಕ್ರಿಮಿನಲ್ ಎಂದ ಮುಸ್ಲಿಂ ಧರ್ಮಗುರು

    ಈ ವಿವರಗಳನ್ನು ಗಣನೆಗೆ ತೆಗೆದುಕೊಂಡು, ಹೈಕೋರ್ಟ್ ಜಹಾನ್ ಪರವಾಗಿ ತೀರ್ಪು ನೀಡಿದೆ. ನ್ಯಾಯಮೂರ್ತಿ ಮುಖರ್ಜಿ ಆದೇಶದಲ್ಲಿ, ನನ್ನ ಅಭಿಪ್ರಾಯದಲ್ಲಿ ಅರ್ಜಿದಾರರ ಸಂಖ್ಯೆ 1 (ಪತ್ನಿ) ಗೆ ತಿಂಗಳಿಗೆ 1,50,000 ರೂ. ಮತ್ತು ಅವರ ಮಗಳಿಗೆ 2,50,000 ರೂ. ಮೊತ್ತವನ್ನು ನೀಡುವುದು ನ್ಯಾಯಯುತ. ಇದು ಎರಡೂ ಅರ್ಜಿದಾರರಿಗೆ ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸುತ್ತದೆ ಎಂದು ತಿಳಿಸಿದ್ದಾರೆ.

    ಹಿಂದಿನ ತೀರ್ಪಿನ ಆಧಾರವನ್ನು ಹೈಕೋರ್ಟ್ ಪ್ರಶ್ನಿಸಿದ್ದು, ಅಲಿಪೋರ್ ನ್ಯಾಯಾಲಯವು ಯಾವ ಆಧಾರದ ಮೇಲೆ ಕಡಿಮೆ ಜೀವನಾಂಶ ಕೊಡುವಂತೆ ತೀರ್ಪು ನೀಡಿದೆ ಎಂಬುದು ಸ್ಪಷ್ಟವಾಗಿಲ್ಲ. ಶಮಿ ಗಳಿಕೆ ಚೆನ್ನಾಗಿಯೇ ಇದೆ. ಅವರ ಪತ್ನಿ ಜಹಾನ್ ಮರುಮದುವೆಯಾಗಿಲ್ಲ. ತನ್ನ ಮಗಳೊಂದಿಗೆ ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಹೀಗಾಗಿ, ಹಿಂದಿನ ತೀರ್ಪಿನಲ್ಲಿ ತಿದ್ದುಪಡಿ ಅಗತ್ಯವಿದೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

  • ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

    ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

    ಕೋಲ್ಕತ್ತಾ: ಇಲ್ಲಿನ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು (RG Kar Medical College) ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಕೇಂದ್ರ ತನಿಖಾ ದಳವು (CBI) ಕೋಲ್ಕತ್ತಾ ಹೈಕೋರ್ಟ್‌ಗೆ (Calcutta High Court) ವರದಿ ಸಲ್ಲಿಸಿದೆ.

    ಕೋಲ್ಕತ್ತಾದ ಹೈಕೋರ್ಟ್‌ನ ಏಕಸದಸ್ಯ ಪೀಠವು ಹಿಂದಿನ ವಿಚಾರಣೆಯ ಸಮಯದಲ್ಲಿ ಟ್ರೈನಿ ವೈದ್ಯೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆಯೇ ಎಂದು ಸ್ಪಷ್ಟಪಡಿಸಲು ಸಿಬಿಐಗೆ ತಿಳಿಸಿತ್ತು. ಈ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಕೋರ್ಟ್ ಈ ಹಿಂದೆಯೇ ಜೀವಾವಧಿ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: Myanmar Earthquake: ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪಕ್ಕೆ 60 ಸಾವು, 250 ಮಂದಿಗೆ ಗಾಯ

    ನ್ಯಾ. ತೀರ್ಥಂಕರ ಘೋಷ್ ಅವರು, ಅತ್ಯಾಚಾರ ಪ್ರಕರಣದಲ್ಲಿ ಒಬ್ಬರು ಅಥವಾ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ಮಾಡಲು ಸಿಬಿಐಗೆ ಸೂಚಿಸಿದ್ದರು. ಇದೀಗ ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸಿಬಿಐಯು, ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: Photo Gallary: ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಡೆಡ್ಲಿ ಭೂಕಂಪ – ಭೀಕರ ದೃಶ್ಯಗಳನ್ನು ಫೋಟೊಗಳಲ್ಲಿ ನೋಡಿ..

    ಮೃತ ವೈದ್ಯೆಯ ಪೋಷಕರು, ಸಿಬಿಐಯು ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿಲ್ಲ. ಸರಿಯಾಗಿ ತನಿಖೆ ಮಾಡಿದ್ದರೆ, ಇನ್ನೂ ಹಲವರ ಬಂಧನವಾಗಿ ಶಿಕ್ಷೆಯಾಗುತ್ತಿತ್ತು ಎಂದು ಆರೋಪಿಸಿದ್ದರು. ಇದನ್ನೂ ಓದಿ: ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್‌ ಕೇಸ್‌ ಬಗ್ಗೆ ಧನ್ವೀರ್ ಮಾತು

    2024 ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನ ನಾಲ್ಕನೇ ಮಹಡಿಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಅರೆಬೆತ್ತಲೆ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಸಂತ್ರಸ್ತೆ ಲೈಂಗಿಕ ದೌರ್ಜನ್ಯದಿಂದಾಗಿ ಬಾಹ್ಯ ಮತ್ತು ಆಂತರಿಕ ಗಾಯ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದಿತ್ತು.

  • ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿರೋದು ದೃಢ – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿರೋದು ದೃಢ – ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ಕೋಲ್ಕತ್ತಾ: ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Medical College and Hospital) ಕರ್ತವ್ಯನಿರತ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಸೋಮವಾರ ಮಧ್ಯಾಹ್ನ ಸೀಲ್ದಾಹ್‌ನಲ್ಲಿರುವ ಕೋಲ್ಕತ್ತಾದ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ದೋಷಾರೋಪ ಪಟ್ಟಿ (Chargesheet) ಸಲ್ಲಿಸಿದೆ. ವಿರಾಮದ ಸಮಯದಲ್ಲಿ ಟ್ರೈನಿ ವೈದ್ಯೆ ಆಸ್ಪತ್ರೆ ಸೆಮಿನಾರ್ ಕೊಠಡಿಯಲ್ಲಿ ವಿಶ್ರಾಂತಿಗೆ ಹೋದಾಗ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿಬಿಐ ಮೂಲಗಳ ಪ್ರಕಾರ, ಚಾರ್ಚ್ಶೀಟ್‌ನಲ್ಲಿ ಆರೋಪಿ ಸಂಜಯ್ ರಾಯ್ ಹೆಸರಿಸಿರುವ ಸುಮಾರು 200 ಜನರ ಹೇಳಿಕೆಗಳನ್ನ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಗ್ಯಾಂಗ್ ರೇಪ್ ಆಗಿರಬಹುದು ಎಂದು ಶಂಕಿಸಿ ಹೇಳಿಕೆ ನೀಡಿದ್ದಾರೆ ಎಂದು ಚಾರ್ಚ್ಶೀಟ್‌ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

    ಆಗಸ್ಟ್ 9ರಂದು ಟ್ರೈನಿ ವೈದ್ಯೆ ಹತ್ಯೆಗೀಡಾದ ನಂತರ ತನಿಖಾ ಹಂತದಲ್ಲಿ ಒಂದೊಂದೇ ಭಯಾನಕ ಸತ್ಯಗಳು ಬಯಲಾಗುತ್ತಾ ಹೋದವು. ಇದರಿಂದ ದೇಶವ್ಯಾಪಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರಿಂದ ಎಚ್ಚೆತ್ತ ಹೈಕೋರ್ಟ್ ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ತನಿಖೆ ವಹಿಸುವಂತೆ ಸೂಚಿಸಿತು. ಬಳಿಕ ಆರೋಪಿ ಹೇಳಿಕೆ ಆಧರಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಸಿಬಿಐ ಅಂದಿನ ಪ್ರಾಂಶುಪಾಲನಾಗಿದ್ದ ಸಂದೀಪ್ ಘೋಷ್ ಅವರನ್ನೂ ಬಂಧಿಸಿ ತನಿಖೆ ನಡೆಸಿತು.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಈ ಪ್ರಕರಣದ ತನಿಖೆ ಹೊಣೆ ಹೊತ್ತಿದ್ದ ಸಿಬಿಐ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಿದೆ.

  • Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!

    Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!

    36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ

    ನವದೆಹಲಿ/ಕೋಲ್ಕತ್ತಾ: ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ ಎಂದು ಸುಪ್ರೀಂ ಕೋರ್ಟ್‌ (Supreme Court)  ಗುರುವಾರ ಹೇಳಿದೆ.

    ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣದ ವಿಚಾರನೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DYChandrachud) ನೇತೃತ್ವದ ತ್ರಿಸದಸ್ಯ ಪೀಠ ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿತು. ಅಲ್ಲದೇ ಈ ಬಗ್ಗೆ ಕ್ರಮ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತು.

    ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲ ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10 ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ (Kolkata Doctor) ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಪೀಠ ತಾಕೀತು ಮಾಡಿದೆ. ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

    ಅಲ್ಲದೇ ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಕೋಲ್ಕತ್ತಾ ಪೊಲೀಸರ ತನಿಖೆಯಲ್ಲಿನ ವಿಳಂಬ ಮತ್ತು ಸ್ಪಷ್ಟ ಅಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿರುವುದು ಅತ್ಯಂತ ಗೊಂದಲದ ಸಂಗತಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

    ಮೋದಿಗೆ ದೀದಿ ಪತ್ರ:
    ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ. ಈ ಪತ್ರದ ಪ್ರತಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ದಿನ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು:
    ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರ ಮೇಲೆ ಪಾಲಿಗ್ರಾಫ್ ಪರೀಕ್ಷೆ (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ. ಏತನ್ಮಧ್ಯೆ ಪ್ರಕರಣವನ್ನು ತಿರುಚಲು ಮತ್ತು ಮುಚ್ಚಿಹಾಕಲು ಕೋಲ್ಕತ್ತಾ ಪೊಲೀಸರು ಪ್ರಯತ್ನಿಸಿದ್ದಾರೆ ಎಂದು ಸಿಬಿಐ ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಂದ ಮಾಹಿತಿ ಪಡೆಯಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿನ ಮಾಜಿ ಪ್ರಾಂಶುಪಾಲ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ಬಂಧಿಸಿ ಕಳೆದ ಒಂದು ವಾರದಿಂದ ವಿಚಾರಣೆ ನಡೆಸುತ್ತಿದೆ. ಆದರೆ ಅವರಿಂದ ಸರಿಯಾದ ಉತ್ತರ ಸಿಗದಿರುವ ಹಿನ್ನೆಲೆಯಲ್ಲಿ ಪಾಲಿಗ್ರಾಫ್ ಟೆಸ್ಟ್ ನಡೆಸಲು ಸುಪ್ರೀಂ ಕೋರ್ಟಿನ ಅನುಮತಿ ಕೋರಿದ್ದು ಕೋರ್ಟ್ ಅಸ್ತು ಎಂದಿದೆ.

  • Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Doctor Case) ಸಂಬಂಧ ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ಮುಂದುವರಿಸಿದೆ. ಘಟನೆ ಖಂಡಿಸಿ ಕಳೆದ ಕೆಲ ದಿನಗಳಿಂದ ನಡೆಸ್ತಿರುವ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ವೈದ್ಯರಿಗೆ ಸೂಚನೆ ನೀಡಿದೆ.

    ಬಿಜೆಪಿ, ಟಿಎಂಸಿಗೆ ಬುದ್ಧಿವಾದ
    ವಿಚಾರಣೆ ವೇಳೆ ಘಟನೆಗೆ ಸಂಬಂಧಿಸಿದಂತೆ ಟಿಎಂಸಿ (TMC) ಮತ್ತು ಬಿಜೆಪಿಗೆ (BJP( ಬುದ್ಧಿವಾದ ಹೇಳಿದ ನ್ಯಾಯಾಲಯ ಇತ್ತ ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿರುವುದನ್ನು ಟೀಕಿಸಿದೆ. ʻಮಮತಾ ಬ್ಯಾನರ್ಜಿ ಕಡೆಗೆ ಕೈತೋರುವವರ ಬೆರಳು ಕತ್ತರಿಸಲಾಗುವುದುʼ ಎಂಬ ಬಂಗಾಳ ಸಚಿವರೊಬ್ಬರ ಹೇಳಿಕೆಯನ್ನು ಸಿಬಿಐ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ ಪ್ರಸ್ತಾಪಿಸಿದರು.

    ಆಗ ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಗುಂಡು ಹಾರಿಸಲಾಗುವುದು ಅಂತ ಹೇಳಿರುವುದಾಗಿ ಕೋರ್ಟ್‌ ಗಮನಕ್ಕೆ ತಂದರು. ಆ ಸಂದರ್ಭದಲ್ಲಿ ನ್ಯಾಯಾಲಯ ಪರಿಸ್ಥಿತಿಯನ್ನು ರಾಜಕೀಯಗೊಳಿಸಬೇಡಿ ಕಾನೂನು ತನ್ನ ಹಾದಿಯನ್ನು ಕಂಡುಕೊಳ್ಳಲಿದೆ ಎಂಬುದಾಗಿ ತಿಳಿಸಿತು.

    ಕರ್ತವ್ಯ ಮಾಡುತ್ತಲೇ ಮುಷ್ಕರ ನಡೆಸ್ತಿರೋದಾಗಿ ವೈದ್ಯರ ಸಂಘ ತಿಳಿಸಿದೆ. ಇದೇ ವೇಳೆ ಯುವವೈದ್ಯೆಯ ಅತ್ಯಾಚಾರ ಪ್ರಕರಣದ ತನಿಖಾ ಪ್ರಗತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಸಿಬಿಐ (CBI) ಸಲ್ಲಿಸಿದೆ. ಅತ್ಯಾಚಾರ & ಹತ್ಯೆ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಅಪ್ಪ-ಅಪ್ಪನಿಗೂ ಸರಿಯಾದ ಮಾಹಿತಿ ನೀಡದೇ ದಾರಿ ತಪ್ಪಿಸುವ ಪ್ರಯತ್ನವೂ ಆಗಿತ್ತು. ಶವ ದಹನದ ಬಳಿಕವೇ ಎಫ್‌ಐಆರ್ (FIR) ನಮೂದಿಸಿದ್ರು. ಘಟನಾ ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನ ಧ್ವಂಸ ಮಾಡುವ ಪ್ರಯತ್ನಗಳು ನಡೆದಿವೆ ಎಂದು ಸಿಬಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ  ಓದಿ: ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ಘಟನೆ ನಡೆದ 5ನೇ ದಿನ ತಮ್ಮ ಕೈಗೆ ತನಿಖಾ ವರದಿಯನ್ನು ಪೊಲೀಸರು ಸಲ್ಲಿಸಿದ್ರು. ಅಷ್ಟರೊಳಗೆ ಸಾಕಷ್ಟು ವರದಿಗಳನ್ನು ಬದಲಾಯಿಸಿದ್ರು ಎಂದು ಸಾಲಿಸಿಟರ್ ಜನರೆಲ್ ಆರೋಪಿಸಿದರು. ಆದ್ರೆ ಪ್ರತಿಯೊಂದರ ವಿಡಿಯೋ ಚಿತ್ರೀಕರಣ ನಡೆದಿದೆ ಎಂದು ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ರು. ವೈದ್ಯರು ಒತ್ತಡ ತಂದಿದ್ದಕ್ಕೆ ವೀಡಿಯೋ ಚಿತ್ರೀಕರಣ ನಡೆದಿದೆ ಎಂದು ತುಷಾರ್ ಮೆಹ್ತಾ ಟಾಂಗ್ ಕೊಟ್ರು. ಈ ಮಧ್ಯೆಯೇ, ಯುವವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ. ಒಬ್ಬನೇ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದನ್ನೂ  ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

    ಕೋಲ್ಕತ್ತಾ ಪ್ರಕರಣ ಏನು?
    ಇದೇ ತಿಂಗಳ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಳಿಸಿಕೊಂಡ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇದನ್ನೂ  ಓದಿ: J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

  • ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ನವದೆಹಲಿ: ಕೋಲ್ಕತ್ತಾದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ (Kolkata Doctor Case) ಮೇಲೆ‌ ನಡೆದ ಅತ್ಯಾಚಾರ ಸಾಮೂಹಿಕ ಅತ್ಯಚಾರವಲ್ಲ. ಇದು ಓರ್ವ ವ್ಯಕ್ತಿಯಿಂದ ನಡೆದಿದೆ ಎಂದು ಸಿಬಿಐ (CBI) ಮೂಲಗಳು ಹೇಳಿವೆ.

    5 ದಿನಗಳ ಪ್ರಾಥಮಿಕ ತನಿಖೆಯಲ್ಲಿ ಈ ಮಾಹಿತಿ ಲಭ್ಯವಾಗಿದ್ದು ಆಸ್ಪತ್ರೆಯಲ್ಲಿದ್ದ ನಾಗರಿಕ ಸ್ವಯಂ ಸೇವಕ ಸಂಜೋಯ್ ರಾಯ್ ಎಂಬ ವ್ಯಕ್ತಿ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: Valmiki Scam | ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್‌ ಆತ್ಮಹತ್ಯೆ

    ನಾಗರಿಕ ಸ್ವಯಂ ಸೇವಕ ಸಂಜೋಯ್ ರಾಯ್ ಎಂಬಾತ ವೈದ್ಯರ ಮೇಲೆ ಅತ್ಯಾಚಾರ ಎಸಗಿ ಕೊಂದಿದ್ದಾನೆ ಎಂದು ವಿಧಿವಿಜ್ಞಾನ ವರದಿಯೂ ಸೂಚಿಸಿದೆ. ಒಬ್ಬ ವ್ಯಕ್ತಿಯ ಕೈವಾಡವನ್ನು ಡಿಎನ್‌ಎ ವರದಿಯೂ (DNA Report) ದೃಢಪಡಿಸಿದೆ. ವೈದ್ಯೆಯನ್ನು ಹತ್ಯೆಗೈದ ಕಟ್ಟಡಕ್ಕೆ ರಾಯ್ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನ ಸಿಬಿಐ ಪರಿಶೀಲಿಸಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ಭುಗಿಲೆದ್ದ ಹಿಂಸಾಚಾರ; 72 ಮಂದಿ ಅರೆಸ್ಟ್‌!

    ಕೌಟುಂಬಿಕ ದೌರ್ಜನ್ಯದ ಇತಿಹಾಸ ಹೊಂದಿರುವ ಮತ್ತು ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಪ್ರವೇಶವನ್ನು ಹೊಂದಿದ್ದ ರಾಯ್ ಅವರ ಬ್ಲೂಟೂತ್ ಹೆಡ್‌ಸೆಟ್ ಅಪರಾಧದ ಸ್ಥಳದಲ್ಲಿ ಪತ್ತೆಯಾದ ನಂತರ ಅವರನ್ನು ಬಂಧಿಸಲಾಯಿತು. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಕುರಿತು ಸಿಬಿಐ ತನಿಖೆಯನ್ನು ಇನ್ನೂ ಮುಕ್ತಾಯಗೊಳಿಸಿಲ್ಲ. ಅಂತಿಮ ಅಭಿಪ್ರಾಯ ಪಡೆಯಲು ಸ್ವತಂತ್ರ ತಜ್ಞರಿಗೆ ಫೊರೆನ್ಸಿಕ್ ವರದಿಯನ್ನು ಕಳುಹಿಸುವ ಸಾಧ್ಯತೆಯಿದೆ.

    ಈ ಹಿಂದೆ ಸಂತ್ರಸ್ಥೆಯ ಯೋನಿ ಸ್ವ್ಯಾಬ್ ಪರೀಕ್ಷೆಯಲ್ಲಿ 151 ಗ್ರಾಂ ದ್ರವ ಕಂಡು ಬಂದಿದ ಹಿನ್ನಲೆ ಸಾಮೂಹಿಕ ಅತ್ಯಾಚಾರ ನಡೆದಿರಬಹುದು ಎಂದು ವೈದ್ಯರು ಹೇಳಿದ್ದರು. ಸಂತ್ರಸ್ತೆಯ ಪೋಷಕರು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಇದೇ ಅಂಶವನ್ನು ಮುಖ್ಯವಾಗಿ ವಾದವನ್ನು ಮಂಡಿಸಿದ್ದರು. ಪ್ರಶಿಕ್ಷಣಾರ್ಥಿ ವೈದ್ಯರ ಮೇಲೆ ಉಂಟಾಗುವ ಗಾಯಗಳ ಸ್ವರೂಪವು ಒಬ್ಬ ವ್ಯಕ್ತಿಯ ಕೈಕೆಲಸವಾಗಿರಲು ಸಾಧ್ಯವಿಲ್ಲ ಎಂದು ಡಾ. ಸುವರ್ಣ ಗೋಸ್ವಾಮಿ ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: Bharat Bandh| ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು

  • 2010 ರಿಂದ ಬಂಗಾಳದಲ್ಲಿ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಹೈಕೋರ್ಟ್‌

    2010 ರಿಂದ ಬಂಗಾಳದಲ್ಲಿ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಹೈಕೋರ್ಟ್‌

    ಕೋಲ್ಕತ್ತಾ: 2010 ರಿಂದ ಪಶ್ಚಿಮ ಬಂಗಾಳದಲ್ಲಿ (West Bengal) ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (OBC) ಪ್ರಮಾಣಪತ್ರಗಳನ್ನು ಕೋಲ್ಕತ್ತಾ ಹೈಕೋರ್ಟ್‌ (Calcutta High Court) ವಜಾಗೊಳಿಸಿದೆ.

    ಒಬಿಸಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಂಥ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗವು, 1993 ರ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಆಧಾರದ ಮೇಲೆ OBC ಗಳ ಹೊಸ ಪಟ್ಟಿಯನ್ನು ತಯಾರಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಹೈಕೋರ್ಟ್ ಪೀಠವು 2010 ರ ನಂತರ ಸಿದ್ಧಪಡಿಸಲಾದ ಒಬಿಸಿ ಪಟ್ಟಿಯನ್ನು ‘ಅಕ್ರಮ’ ಎಂದು ಹೇಳಿದೆ.

    ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳು (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) (ಸೇವೆಗಳು ಮತ್ತು ಹುದ್ದೆಗಳಲ್ಲಿ ಖಾಲಿ ಹುದ್ದೆಗಳ ಮೀಸಲಾತಿ) ಕಾಯಿದೆ-2012 ಸೆಕ್ಷನ್ 2H, 5, 6 ಮತ್ತು ಸೆಕ್ಷನ್ 16 ಮತ್ತು ಶೆಡ್ಯೂಲ್ I ಮತ್ತು III ಅನ್ನು ‘ಅಸಂವಿಧಾನಿಕ’ ಎಂದು ಹೈಕೋರ್ಟ್ ತಳ್ಳಿಹಾಕಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

    2010 ರ ನಂತರ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗ ಆಯೋಗ) ಕಾಯಿದೆಯನ್ನು ಬೈಪಾಸ್ ಮಾಡಲಾಗಿದೆ ಎಂದು 2011 ರಲ್ಲಿ ಸಲ್ಲಿಸಿದ್ದ PILನಲ್ಲಿ ಆರೋಪಿಸಲಾಗಿತ್ತು. ವಾಸ್ತವವಾಗಿ ಹಿಂದುಳಿದ ವರ್ಗದವರಿಗೆ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ ಎನ್ನಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದೆ.

    ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದಿರುವ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿರುವ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

  • ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ವಿರುದ್ಧ ಕ್ರಮಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಚಾಟಿ

    ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ವಿರುದ್ಧ ಕ್ರಮಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಚಾಟಿ

    ಕೊಲ್ಕತ್ತಾ: ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ನಡೆಗೆ ಕೊಲ್ಕತ್ತಾ ಹೈಕೋರ್ಟ್ (Kolkata High Court) ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಮುಂದಿನ ಆದೇಶವರೆಗೂ ಟಿಎಂಸಿ ಸರ್ಕಾರದ ವಿರುದ್ಧ ಯಾವುದೇ ಅವಹೇಳನಕಾರಿ ಜಾಹೀರಾತು ಪ್ರಕಟಿಸದಂತೆ ಬಿಜೆಪಿಗೆ (BJP) ಕೋರ್ಟ್ ನಿರ್ಬಂಧ ಹೇರಿದೆ.

    ಮತದಾನದ ಹಿಂದಿನ ದಿನ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿ ತೃಣಮೂಲ ಕಾಂಗ್ರೆಸ್‌ (TMC) ಸರ್ಕಾರದ ವಿರುದ್ಧ ಬಿಜೆಪಿ ಅವಹೇನಕಾರಿ ಜಾಹೀರಾತು (BJP Advertisement) ಪ್ರಕಟಿಸಿತ್ತು. ಆದರೂ ಬಿಜೆಪಿ ವಿರುದ್ಧ ಕೈಗೊಳ್ಳದ ಚುನಾವಣಾ ಆಯೋಗದ (ECI) ವಿರುದ್ಧ ಟಿಎಂಸಿ, ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಬ್ಯಸಾಚಿ ಭಟ್ಟಚಾರ್ಯ ನೇತೃತ್ವದ ಏಕಸದಸ್ಯ ಪೀಠವು ಟಿಎಂಸಿ ಸಲ್ಲಿಸಿದ ದೂರುಗಳನ್ನು ಪರಿಹರಿಸಲು ಆಯೋಗ ತೀವ್ರವಾಗಿ ವಿಫಲವಾಗಿದೆ ಎಂದು ದೂರಿತು. ಇದನ್ನೂ ಓದಿ: ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಉಳಿಸಿಕೊಳ್ಳಲು ಸಹಕರಿಸಬೇಕು: ಸಿಎಂ ಮನವಿ

    ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ಚುನಾವಣೆಗಳು ಮುಗಿದ ನಂತರದ ದೂರುಗಳ ಪರಿಹಾರ ಕೋರಿ ನ್ಯಾಯಲಯಕ್ಕೆ ಬರುತ್ತಿವೆ ಎಂದು ಆಶ್ವರ್ಯ ವ್ಯಕ್ತಪಡಿಸಿದರು. ಚುನಾವಣೆ ಮತ್ತು ಮತದಾನದ ಹಿಂದಿನ ದಿನ ಬಿಜೆಪಿಯ ಜಾಹೀರಾತುಗಳು ಮಾದರಿ ನೀತಿ ಸಂಹಿತೆ, ಟಿಎಂಸಿಯ ಹಕ್ಕುಗಳು ಮತ್ತು ನಾಗರಿಕರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು. ಇದನ್ನೂ ಓದಿ: ಜೈಲಲ್ಲಿ ದೇವರಾಜೇಗೌಡ ಜೀವಕ್ಕೆ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ

    ಟಿಎಂಸಿ ವಿರುದ್ಧ ಮಾಡಲಾದ ಆರೋಪಗಳು ಮತ್ತು ಪ್ರಕಟಣೆಗಳು ಸಂಪೂರ್ಣ ಅವಹೇಳನಕಾರಿ ಮತ್ತು ಪ್ರತಿಸ್ಪರ್ಧಿಗಳನ್ನು ಅವಮಾನಿಸುವ ಮತ್ತು ವೈಯಕ್ತಿಕವಾಗಿ ದಾಳಿ ನಡೆಸುವ ಉದ್ದೇಶವನ್ನು ಹೊಂದಿವೆ. ಆದ್ದರಿಂದ, ಮುಕ್ತ, ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗಾಗಿ, ಮುಂದಿನ ಆದೇಶದವರೆಗೆ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಗೆ ನಿರ್ಬಂಧ ವಿಧಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ನಿಮ್ಮ ಡಿಜಿಟಲ್‌ ಆರೋಗ್ಯ ಹೇಗಿದೆ? – ಮಿತಿಮೀರಿದ ಎಐ ಬಳಕೆ ತಂದೊಡ್ಡುವ ಅಪಾಯಗಳೇನು? – ತಂತ್ರಜ್ಞರ ಕಳವಳ ಏನು?

  • ರಾಮನವಮಿ ಮೆರವಣಿಗೆ ದಿನ ಬಾಂಬ್‌ ಸ್ಫೋಟ – NIA ತನಿಖೆಗೆ ಆದೇಶ

    ರಾಮನವಮಿ ಮೆರವಣಿಗೆ ದಿನ ಬಾಂಬ್‌ ಸ್ಫೋಟ – NIA ತನಿಖೆಗೆ ಆದೇಶ

    ಕೋಲ್ಕತ್ತಾ: ರಾಮನವಮಿ ಮೆರವಣಿಗೆ (RamaNavami) ದಿನ ಬಾಂಬ್‌ ಸ್ಫೋಟಗೊಂಡ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ (Kolkata High Court) ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿ ಆದೇಶಿಸಿದೆ.

    ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದ ಘಟನೆಯ ತನಿಖೆಯನ್ನು ಸಿಬಿಐ (CBI) ಮತ್ತು ಎನ್‌ಐಎಯಿಂದ ನಡೆಸಬೇಕೆಂದು ಕೋರಿ ಎರಡು ಸಾರ್ವಜನಿಕ ಅರ್ಜಿ (PIL) ಸಲ್ಲಿಕೆಯಾಗಿತ್ತು. ಇದನ್ನೂ ಓದಿ: ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ನಿಧನ

    ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಬಾಂಬ್‌ ಸ್ಫೋಟದ ತನಿಖೆ ಎನ್‌ಐಎ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿ ತನಿಖೆ ನಡೆಸುವಂತೆ ಆದೇಶಿಸಿತು.

    ಕೋರ್ಟ್‌ ಮುಂದಿನ ವಿಚಾರಣೆಯನ್ನು ಮೇ 10ಕ್ಕೆ ಮುಂದೂಡಿದ್ದು ಈ ವೇಳೆ ಎನ್‌ಐಎ ತನಿಖೆಯ ವರದಿ ಸಲ್ಲಿಸಬೇಕೆಂದು ಸೂಚಿಸಿದೆ.

  • ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಸಹ ಬರಲ್ಲ: ದೀದಿ ಕೆಂಡ

    ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಸಹ ಬರಲ್ಲ: ದೀದಿ ಕೆಂಡ

    ಕೋಲ್ಕತ್ತಾ: ಶಿಕ್ಷಕರಿಂದ (Teachers) ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಾಗ್ದಾಳಿ ನಡೆಸಿದ್ದಾರೆ.

    ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ (West Bengal) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು.

    ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, 26,000 ಶಿಕ್ಷಕರನ್ನ ವಜಾಗೊಳಿಸಿದ್ದು, ಚುನಾವಣಾ ತಂತ್ರಗಾರಿಕೆಯ ಭಾಗ. ಪಶ್ಮಿಮ ಬಂಗಾಳದಲ್ಲಿ ಈ ಬಾರಿ ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದಲೂ ಬಿಜೆಪಿ, ಕಾಂಗ್ರೆಸ್‌, ಸಿಪಿಎಂ ಪಕ್ಷಗಳಿಗೆ ಒಂದೇ ಒಂದು ವೋಟು ಬೀಳಲ್ಲ. ಬಿಜೆಪಿ ನ್ಯಾಯಾಲಯವನ್ನು ಖರೀದಿಸಿದೆ. ಆದ್ರೆ ನನಗೆ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ವಿದೆ ಎಂದು ಹೇಳಿದ್ದಾರೆ.

    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೋರ್ಟ್‌, ಸಿಬಿಐ, ಎನ್‌ಐಎ, ಬಿಎಸ್‌ಎಫ್‌ ಸೇರಿದಂತೆ ಮೊದಲಾದ ತನಿಖಾ ಸಂಸ್ಥೆಗಳನ್ನು ತನ್ನ ಅಧೀನದಲ್ಲಿಟುಕೊಂಡಿದೆ. ಇದು ಬಹಳ ದಿನ ನಡೆಯಲ್ಲ ಎಂದು ಕಿಡಿ ಕಾರಿದ್ದಾರೆ.

    ಏನಿದು ಕೇಸ್‌?
    ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ (Calcutta High Court) ಇತ್ತೀಚೆಗಷ್ಟೇ ಆದೇಶಿಸಿತ್ತು. ಅಷ್ಟೇ ಅಲ್ಲ, ಈ ಮೂಲಕ ಮಾಡಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದ ಕೋರ್ಟ್‌ ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು (Teachers Recruitment) 4 ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದೂ ಹೇಳಿದೆ. ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಕೋರ್ಟ್‌ ವಹಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ (Mamata Banerjee Govt.) ದೊಡ್ಡ ಹಿನ್ನಡೆಯಾಗಿತ್ತು.

    ಶಿಕ್ಷಕರ ನೇಮಕಾತಿ ನಡೆದಿದ್ದು ಹೇಗೆ?
    ಈ ಹಿಂದೆ 24,640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು. ಆದ್ರೆ ಸರ್ಕಾರ 24,640 ಖಾಲಿ ಹುದ್ದೆಗಳಿಗೆ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿತ್ತು ಎಂದು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಆರೋಪಿಸಿದ್ದರು. ಈ ಅರ್ಜಿಯನ್ನು ಕೋರ್ಟ್‌ ವಿಚಾರಣೆ ನಡೆಸಿ, ನೇಮಕಾತಿಯನ್ನು ರದ್ದುಪಡಿಸಿತು.

    ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಭಾಗೀಯ ಪೀಠವನ್ನು ರಚಿಸಿದ್ದರು. 9, 10, 11, 12ನೇ ತರಗತಿಯ ಶಿಕ್ಷಕರು ಸಿ, ಡಿ ದರ್ಜೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದ 2016 ಎಎಲ್‌ಎಸ್‌ಟಿ ನೇಮಕಾತಿ ಬಗ್ಗೆ ನ್ಯಾಯಪೀಠ ಬಹಳಷ್ಟು ಅರ್ಜಿಗಳು ಮತ್ತು ಮನವಿಗಳನ್ನು ಆಲಿಸಿತ್ತು. ಸದ್ಯ ಕೋಲ್ಕತ್ತಾ ಕೋರ್ಟ್‌ ಆದೇಶ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

    2019ರ ಚುನಾವಣೆಯಲ್ಲಿ 42 ಸ್ಥಾನಗಳ ಬಲಾ-ಬಲಾಯಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.