Tag: ಕೋವಿಡ್ ಆಸ್ಪತ್ರೆ

  • ವಾರಿಯರ್ಸ್‍ಗೂ ಒಕ್ಕರಿಸಿದ ಕೊರೊನಾ- ಮೂವರು ಸೋಂಕಿತರು ಕೊವೀಡ್ ಆಸ್ಪತ್ರೆಗೆ ದಾಖಲು

    ವಾರಿಯರ್ಸ್‍ಗೂ ಒಕ್ಕರಿಸಿದ ಕೊರೊನಾ- ಮೂವರು ಸೋಂಕಿತರು ಕೊವೀಡ್ ಆಸ್ಪತ್ರೆಗೆ ದಾಖಲು

    ಯಾದಗಿರಿ: ಮಾಹಾಮಾರಿ ಹರಡುವುದನ್ನು ತಡೆಗಟ್ಟುವ ಸಲುವಾಗಿ ಹಗಲಿರುಳು ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್ಸ್ ಗೂ ಇದೀಗ ಕೋವಿಡ್ 19 ಒಕ್ಕರಿಸಿದೆ.

    ಮಹಾರಾಷ್ಟ್ರ ವಲಸಿಗರಿಂದ ಈಗ ಅಂಗನವಾಡಿ ಸಹಾಯಕಿ ಸೇರಿ ಇಬ್ಬರು ಆಶಾ ಕಾರ್ಯಕರ್ತೆಯರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ನಿನ್ನೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮೂವರು ವಾರಿಯರ್ಸ್ ನಲ್ಲಿ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿತ್ತು. ಸದ್ಯ ಮೂವರು ಸೋಂಕಿತರನ್ನು ಕೊವೀಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಯಾದಗಿರಿ ನಗರದ ದುಖನವಾಡಿಯ ರೋಗಿ-7896 (34) ಅಂಗನವಾಡಿ ಸಹಾಯಕಿ, ಸುರಪುರನ ದಿವಳಗುಡ್ಡದ ರೋಗಿ-7894(38) ಆಶಾ ಕಾರ್ಯಕರ್ತೆ ಹಾಗೂ ಸುರಪುರ ತಾಲೂಕಿನ ಹೊಸಸಿದ್ದಾಪುರನ ರೋಗಿ-7895(36) ಆಶಾ ಕಾರ್ಯಕರ್ತೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ದುಖನವಾಡಿಯಲ್ಲಿ ಇಬ್ಬರಿಗೆ ಕೊರೊನಾ ಪತ್ತೆಯಾಗಿತ್ತು.

    ಸೋಂಕಿತರ ಜೊತೆ ಅಂಗನವಾಡಿ ಸಹಾಯಕಿ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಆಶಾ ಕಾರ್ಯಕರ್ತೆಯರಿಗೆ ಹೇಗೆ ಕೊರೊನಾ ವಕ್ಕರಿಸಿದೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಕಲೆ ಹಾಕುತ್ತಿದ್ದಾರೆ. ಮೂವರು ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕ ಹೊಂದಿದವರ ಬಗ್ಗೆ ಮಾಹಿತಿ ಹುಡುಕಾಡುತ್ತಿದ್ದಾರೆ. ಒಟ್ಟಿನಲ್ಲಿ ಮೂವರು ಕೊರೊನಾ ಸೈನಿಕರಿಗೆ ಕೊರೊನಾ ಪತ್ತೆ ಹಿನ್ನೆಲೆಯಲ್ಲಿ ಜಿಲ್ಲೆಯ ಕೊರೊನಾ ಸೈನಿಕರಿಗೆ ಆತಂಕ ಹೆಚ್ಚಾಗಿದೆ.

  • ಗಬ್ಬೆದ್ದು ನಾರುತ್ತಿದೆ ಯಾದಗಿರಿ ಕೋವಿಡ್ ಆಸ್ಪತ್ರೆ

    ಗಬ್ಬೆದ್ದು ನಾರುತ್ತಿದೆ ಯಾದಗಿರಿ ಕೋವಿಡ್ ಆಸ್ಪತ್ರೆ

    ಯಾದಗಿರಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಸುಸಜ್ಜಿತ ವ್ಯವಸ್ಥೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡುತ್ತಿದೆ. ಆದರೆ ಈ ಜಿಲ್ಲೆಯಲ್ಲಿ ಮಾತ್ರ ಇದ್ಯಾವುದೂ ಲೆಕ್ಕಕ್ಕೆ ಇಲ್ಲ. ಈ ಆಸ್ಪತ್ರೆಗೆ ಕೊರೊನಾ ಸೋಂಕಿತರು ಬಂದರೆ ಗುಣಮುಖರಾಗುವ ಬದಲು, ಇನ್ನೂ ಜಾಸ್ತಿ ಕೊರೊನಾ ಪ್ರಮಾಣವನ್ನು ಹೆಚ್ಚಿಸಿಕೊಳ್ಳೊದು ಪಕ್ಕಾ ಅನ್ನೋವಂತಿದೆ.

    ವಿಶ್ವದಲ್ಲಿ ತಾಂಡವಾಡುತ್ತಿರುವ ಕೊರೊನಾ ಎಂಬ ಮಹಾಮಾರಿಗೆ ಇಡೀ ಜನಜೀವನವೇ ತಲ್ಲಣಗೊಂಡಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದಕ್ಕೆ ಗಿರಿನಾಡು ಯಾದಗಿರಿಯೂ ಹೊರತಾಗಿಲ್ಲ. ಎಲ್ಲದರಲ್ಲೂ ಯಾದಗಿರಿ ಸದಾ ಹಿಂದುಳಿದ ಜಿಲ್ಲೆಯಾಗಿತ್ತು. ಆದರೆ ಕೊರೊನಾ ಸೋಂಕಿತರ ಪ್ರಕರಣದಲ್ಲಿ ಮಾತ್ರ ರಾಜ್ಯಕ್ಕೆ ಮೂರನೇ ಸ್ಥಾನ ಪಡೆಯುವ ಮೂಲಕ ಯಾದಗಿರಿ ಕೊರೊನಾ ಹಾಟ್‍ಸ್ಪಾಟ್ ಎನಿಸಿದೆ.

    ಇನ್ನು ಕೊರೊನಾ ರೋಗಿಗಳಿಗೆ ಸಂಜೀವಿನಿಯಾಗಿ ಸಿಕ್ಕಿರುವುದು ಕೋವಿಡ್ ಆಸ್ಪತ್ರೆಗಳು. ಆದರೆ ಯಾದಗಿರಿಯಲ್ಲಿ ಈ ಆಸ್ಪತ್ರೆಯ ಪರಿಸ್ಥಿತಿ ಹೇಗಿದೆ ಅಂದರೆ ಇಲ್ಲಿ ರೋಗ ಗುಣವಾಗುವ ಮಾತಿರಲಿ, ಜಾಸ್ತಿಯಾಗದಿದ್ದರೆ ಸಾಕು ಎಂದು ಜಿಲ್ಲೆಯ ಸೋಂಕಿತರು ಬೇಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ.

    ಎಲ್ಲೆಂದರಲ್ಲಿ ಬಿದ್ದಿರುವ ಮಾಸ್ಕ್ ಗಳು ಕಸದ ರಾಶಿಯಂತೆ ಕಾಣುತ್ತಿರುವ ಪಿಪಿಇ ಕಿಟ್‍ಗಳು ಇದು ಯಾದಗಿರಿಯಲ್ಲಿನ ಕೊವಿಡ್ ಆಸ್ಪತ್ರೆಗಳ ದುಸ್ಥಿತಿ. ಕೊರೊನಾದಿಂದ ಕಂಗಾಲಾಗಿರುವ ರೋಗಿಗಳ ಚಿಕಿತ್ಸೆಗಾಗಿ ಬಹುಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಲ್ಲಿ ಸದ್ಯ 300ಕ್ಕೂ ಅಧಿಕ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಆಸ್ಪತ್ರೆಯಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದ್ದು, ರೋಗ ಹರಡುವ ಭೀತಿ ಹೆಚ್ಚಾಗಿದೆ.

    ಕೋವಿಡ್ ಆಸ್ಪತ್ರೆಯಲ್ಲಿ ಎಲ್ಲಿಯೂ ಸಹ ಸ್ವಚ್ಛತೆ ಕಾಣುತ್ತಿಲ್ಲ. ಕಂಡ ಕಂಡಲ್ಲಿ ರೋಗಿಗಳು ಮತ್ತು ವೈದ್ಯರು ಬಳಸಿದ ಮಾಸ್ಕ್, ಪಿಪಿಇ ಕಿಟ್ ಬಿಸಾಡಲಾಗಿದೆ. ಪಾಸಿಟಿವ್ ರೋಗಿಗಳಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ರೋಗ ವಾಸಿಯಾಗುವುದಕ್ಕಿಂತ ಹರಡುವ ಸಾಧ್ಯತೆಯೆ ಹೆಚ್ಚಾಗಿ ಬಿಟ್ಟಿದೆ. ರೋಗಿಗಳು, ವೈದ್ಯರು, ನರ್ಸ್ ಗಳು ಉಪಯೋಗಿಸಿದ ಮಾಸ್ಕ್ ಆಸ್ಪತ್ರೆ ಕಾರಿಡಾರ್‍ನಲ್ಲಿ ಬಿದ್ದಿವೆ. ಇನ್ನೂ ಉಪಯೋಗವಾಗದ ಪಿಪಿಇ ಕಿಟ್ ರಾಶಿ ರಾಶಿ ಬಿದ್ದಿದ್ದು, ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

    ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅವಲೋಕನಾ ಅವಧಿಯಲ್ಲಿರುವ ಸೋಂಕಿತರು ಊಟಕ್ಕೆ ಪರಿತಪಿಸುವಂತಾಗಿದೆ. ಜಿಲ್ಲೆಯ ಬಂದಳ್ಳಿ ಸಮೀಪದ ಏಕಲವ್ಯ ವಸತಿ ಶಾಲೆ ಮತ್ತು ಬಿ ಗುಡಿಯಲ್ಲಿ ಸ್ಥಾಪಿಸಿರುವ ಕೋವಿಡ್ ಸೆಂಟರ್ ನಲ್ಲಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಊಟ ನೀಡುತ್ತಿಲ್ಲ ಮತ್ತು ಜಿಲ್ಲಾಡಳಿತ ಸೋಂಕಿತರ ಹೊಟ್ಟೆಗೆ ಅರ್ಧಂಬರ್ಧ ಊಟ ಹಾಕಿ ಕೈತೊಳೆದು ಕೊಳ್ಳುತ್ತಿದೆಂಬ ಗಂಭೀರ ಆರೋಪ ಕೇಳಿ ಬಿರುತ್ತಿವೆ. ಇದರ ನಡುವೆ ಸೋಂಕಿತರು ಮತ್ತು ಪ್ರಥಮ ಸಂಪರ್ಕ ವ್ಯಕ್ತಿಗಳು, ಕೋವಿಡ್ ಸೆಂಟರ್‍ನಲ್ಲಿ ಗದ್ದಲ ಶುರುಮಾಡಿದ್ದಾರೆ.

    ಒಟ್ಟಿನಲ್ಲಿ ಸೋಂಕಿತರನ್ನು ಶೀಘ್ರ ಗುಣಮುಖರನ್ನಾಗಿಸಿ ಮಹಾಮಾರಿ ಕೊರೊನಾ ಆರ್ಭಟಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಬೇಕಿತ್ತು. ಆದರೆ ಈಗ ಚಿಕಿತ್ಸೆ ನೀಡುವ ಸ್ಥಳವೇ ಸ್ವಚ್ಚತೆಯಿಲ್ಲದೇ ಆಸ್ಪತ್ರಗೆ ಅನಾರೋಗ್ಯ ಬಡಿದಿದೆ.

  • ರಾಯಚೂರಿನಲ್ಲಿ 375ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

    ರಾಯಚೂರಿನಲ್ಲಿ 375ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

    -ಆರು ಜನ ಕೋವಿಡ್ ಆಸ್ಪತ್ರೆ ಸಿಬ್ಬಂದಿಗೆ ತಗುಲಿದ ಸೋಂಕು

    ರಾಯಚೂರು: ಜಿಲ್ಲೆಯಲ್ಲಿ ಆರು ಜನ ಕೋವಿಡ್ ಆಸ್ಪತ್ರೆ ಸಿಬ್ಬಂದಿ ಸೇರಿ ಇಂದು 14 ಜನರಲ್ಲಿ ಕೊರೊನಾ ಪಾಸಿಟಿವ್ ಧೃಡವಾಗಿದೆ. ಈ ಮೂಲಕ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 375 ಕ್ಕೇರಿದೆ ಅಂತ ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶ ಕುಮಾರ ತಿಳಿಸಿದ್ದಾರೆ.

    ಕೊರೊನಾ ಪಾಸಿಟಿವ್ ಧೃಡವಾದ 60 ವರ್ಷದ ವೃದ್ಧ ಸಾವನ್ನಪ್ಪಿದ್ದು, ಕೊರೊನಾದಿಂದ ಅಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ. ಮೃತ ವ್ಯಕ್ತಿ ಹೃದಯ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಜೂನ್ 9 ರಂದು ಸಾವನ್ನಪ್ಪಿದ್ದಾನೆ. ವ್ಯಕ್ತಿ ಸಾವಿಗೆ ಕೊರೊನಾ ಸೋಂಕು ಹೊರತಾದ ಕಾರಣಗಳಿವೆ ಅಂತ ಹೇಳಿದ್ದಾರೆ.

    ಇಂದು ನಾಲ್ಕು ಜನ ಕೋವಿಡ್ ಆಸ್ಪತ್ರೆ ಓಪೆಕ್ ನ ಸ್ಟಾಫ್ ನರ್ಸ್ ಇಬ್ಬರು ಅಟೆಂಡರ್ ಗೆ ಪಾಸಿಟಿವ್ ಧೃಡವಾಗಿದೆ. ಸೋಂಕಿತ ರೋಗಿಗಳ ಸಂಪರ್ಕದಿಂದ ಜಿಲ್ಲೆಯ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಐದು ಜನ ಮಹಾರಾಷ್ಟ್ರದಿಂದ ಮರಳಿದವರು ಹಾಗೂ ಒಬ್ಬರು ತೀವ್ರ ಉಸಿರಾಟ ತೊಂದರೆ ಇರುವವರಿಗೆ ಪಾಸಿಟಿವ್ ಬಂದಿದೆ.

    6 ಜನ ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ. ಕೋವಿಡ್ ವಾರ್ಡ್ ನಲ್ಲಿ ಕರ್ತವ್ಯ ನಿರ್ವಹಿಸಿದ ನಂತರ ರಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಹಾಸ್ಪಿಟಲ್ ಸಿಬ್ಬಂದಿ ತುಂಬಾ ಜನರನ್ನ ಸಂಪರ್ಕಿಸಿದ್ದಾರೆ. ಇನ್ನೂ ಕೊರೊನಾ ಪಾಸಿಟಿವ್ ಬಂದವರು ಈವರೆಗೆ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಆದ್ರೆ ಇದುವರೆಗೆ ಎರಡು ಮಾತ್ರ ಕೋವಿಡ್ ಸಾವು ಅಂತ ಘೋಷಿಸಲಾಗಿದೆ.