Tag: ಕೋವಿಡ್ ಕೇರ್ ಸೆಂಟರ್

  • ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ – ಮಂಡ್ಯ ವಿದ್ಯಾರ್ಥಿಗಳ ವಿರೋಧ

    ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ – ಮಂಡ್ಯ ವಿದ್ಯಾರ್ಥಿಗಳ ವಿರೋಧ

    ಮಂಡ್ಯ: ಕೆರೆ ಅಂಗಳದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಸೆಂಟರ್ ತೆರೆಯಲು ಮುಂದಾದ ಕ್ರಮಕ್ಕೆ ಮಂಡ್ಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

    ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಮುಂದಿನ ತಿಂಗಳು ನಮಗೆ ಪರೀಕ್ಷೆ ಇದೆ. ಆದರೆ ಈಗ ಹಾಸ್ಟೆಲ್ ಬಿಟ್ಟು ಕೊಡುವಂತೆ ಹೇಳಿದ್ದಾರೆ. ಬೇರೆ ಹಾಸ್ಟೆಲ್‌ನಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅಲ್ಲಿಗೆ ನಮ್ಮನ್ನು ಕಳುಹಿಸುವುದರಿಂದ ನಮಗೆ ಓದಿಕೊಳ್ಳಲು ತೊಂದರೆಯಾಗುತ್ತದೆ ಎಂದು ಕಷ್ಟವನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿ ಹಿಜಬ್ ವಿವಾದ – NSUI ಭೇಟಿ ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿ

    ಇನ್ನೊಂದೆಡೆ ಸ್ಥಳೀಯರು ಇಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಿದರೆ ನಮಗೂ ತೊಂದರೆಯಾಗುತ್ತೆ, ನಮ್ಮನ್ನು ದಿನಗೂಲಿ ಕೆಲಸಕ್ಕೆ ಎಲ್ಲಿಯೂ ಕರೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಸಮಸ್ಯೆ ಹೇಳಲು ಫೋನ್ ಮಾಡಿದ್ದ ಮಹಿಳೆಗೆ ಅನಿಲ್ ಬೆನಕೆ ಅವಾಜ್

    ಪ್ರತಿಭಟನಾ ಸ್ಥಳಕ್ಕೆ ಹಿಂದುಳಿದ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಹರೀಶ್ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದ್ದಾರೆ. ಜಿಲ್ಲಾಧಿಕಾರಿ ಸೂಚನೆಯಂತೆ ವಿದ್ಯಾರ್ಥಿಗಳನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸುವುದಾಗಿ ತೀರ್ಮಾನಿಸಲಾಗಿದೆ. ಆದರೆ ಇಲ್ಲಿ ಕ್ವಾರಂಟೈನ್ ಕೇಂದ್ರ ಬೇಡ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದು, ಅಧಿಕಾರಿಗಳೊಂದಿಗೆ ತರಾಟೆ ನಡೆಸಿದ್ದಾರೆ.

  • ಕೋವಿಡ್ ಸೆಂಟರ್‌ನಿಂದ ಬಂದವನ ಬೈಕ್ ಸೀಜ್- ವ್ಯಕ್ತಿಯಿಂದ ಪೊಲೀಸರಿಗೇ ಕ್ಲಾಸ್!

    ಕೋವಿಡ್ ಸೆಂಟರ್‌ನಿಂದ ಬಂದವನ ಬೈಕ್ ಸೀಜ್- ವ್ಯಕ್ತಿಯಿಂದ ಪೊಲೀಸರಿಗೇ ಕ್ಲಾಸ್!

    ಮಂಡ್ಯ: ಕೋವಿಡ್ ಕೇರ್ ಸೆಂಟರ್‌ನಿಂದ ಬಂದ ವ್ಯಕ್ತಿಯೊಬ್ಬನ ಬೈಕ್ ಸೀಜ್ ಮಾಡಿದ್ದಾರೆ. ಈ ವೇಳೆ ಪೊಲೀಸರನ್ನೇ ವ್ಯಕ್ತಿ ತರಾಟೆಗೆ ತೆಗೆದುಕೊಂಡಿರುವ ಘಟನೆ ನಗರದ ಸಂಜಯ್ ಸರ್ಕಲ್‍ನಲ್ಲಿ ನಡೆದಿದೆ.

    ವ್ಯಕ್ತಿಯು ಕೋವಿಡ್ ಕೇರ್ ಸೆಂಟರ್‌ನಿಂದ ಬೈಕ್‍ನಲ್ಲಿ ತನ್ನ ತಂದೆಯನ್ನು ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಪೊಲೀಸರು ಬೈಕ್‍ನ್ನು ಅಡ್ಡಗಟ್ಟಿ ವೀಕೆಂಡ್ ಕರ್ಫ್ಯೂ ಇದ್ದರು ಯಾಕೆ ಹೊರಗಡೆ ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಆಗ ವ್ಯಕ್ತಿ, ಇಲ್ಲಾ ಸರ್ ನಮ್ಮ ತಂದೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದರು. ನಿನ್ನ ತಂದೆ ಹುಷಾರಾಗಿದ್ದಾರೆ ಡಿಸ್ಚಾರ್ಜ್ ಮಾಡಿಸಿಕೊಂಡು ಕರೆದುಕೊಂಡು ಹೋಗಬಹುದು ಅಂತಾ ಡಾಕ್ಟರ್ ಹೇಳಿದ್ದರು. ಅದಕ್ಕೆ ಅವರನ್ನು ಕರೆದುಕೊಂಡು ಹೋಗಲಿಕ್ಕೆ ಬಂದಿದ್ದೇನೆ ಎಂದು ಪೋಲಿಸರಿಗೆ ಉತ್ತರಿಸಿದ್ದಾನೆ. ಇದನ್ನೂ ಓದಿ:  ಮಿಸೆಸ್ ವರ್ಲ್ಡ್ 2022 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ನವ್ದೀಪ್ ಕೌರ್

    ಪೊಲೀಸರು, ವ್ಯಕ್ತಿಯ ಮೇಲೆ ಶಂಕೆಯನ್ನು ವ್ಯಕ್ತಪಡಿಸಿ ನಿಲ್ಲಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ವ್ಯಕ್ತಿಯು ಪೊಲೀಸರ ಮೇಲೆ ಗರಂ ಆಗಿದ್ದಾನೆ. ನಾವು ಹೋಗುತ್ತೇವೆ ಬಿಡಿ ಎಂದಿದ್ದಾರೆ. ಆದರೆ ಪೊಲೀಸರು ಇಲ್ಲ ನಿಂತುಕೊ ಅಂದಿದ್ದಕ್ಕೆ ವ್ಯಕ್ತಿಯು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ದೊಡ್ಡವರನ್ನು ಬಿಟ್ಟು ಬಿಡುತ್ತೀರಾ, ನಮ್ಮಂತ ಜನ ಸಾಮಾನ್ಯರನ್ನು ಹಿಡಿದುಕೊಳ್ಳುತ್ತೀರಾ ಎಂದು ಗರಂ ಆಗಿದ್ದಾನೆ. ಇದನ್ನೂ ಓದಿ: MPSC ಹುದ್ದೆ ಆಕಾಂಕ್ಷಿ ಅನುಮಾನಾಸ್ಪದ ರೀತಿಯಲ್ಲಿ ಕೊಠಡಿಯಲ್ಲಿ ಶವವಾಗಿ ಪತ್ತೆ

    POLICE JEEP

    ಈ ಹಿನ್ನೆಲೆ ಪೊಲೀಸರು ವ್ಯಕ್ತಿಯನ್ನು ಜೀಪ್‍ನಲ್ಲಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಕೋವಿಡ್ ಕೇರ್ ಸೆಂಟರ್‌ನಿಂದ ಬಂದ ತಂದೆಯನ್ನು ರಸ್ತೆಯಲ್ಲಿ ಬಿಟ್ಟು ಮಗನನ್ನು ಕರೆದುಕೊಂಡು ಹೋಗಿದ್ದಾರೆ.

  • ಮಂಡ್ಯ ಕೋವಿಡ್ ಕೇರ್ ಸೆಂಟರ್ ವಿಚಾರಕ್ಕೆ ಶಾಸಕ, ಸಚಿವರ ಮಧ್ಯೆ ಜಟಾಪಟಿ

    ಮಂಡ್ಯ ಕೋವಿಡ್ ಕೇರ್ ಸೆಂಟರ್ ವಿಚಾರಕ್ಕೆ ಶಾಸಕ, ಸಚಿವರ ಮಧ್ಯೆ ಜಟಾಪಟಿ

    ಮಂಡ್ಯ: ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಭೂತ ಸೌಕರ್ಯದ ವಿಚಾರಕ್ಕೆ ಸಂಬಂಧಿಸಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸಚಿವ ನಾರಾಯಣಗೌಡ ನಡುವೆ ಜಟಾಪಟಿ ನಡೆದಿದೆ.

    ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಕೊರೊನಾ ವಿಚಾರಕ್ಕೆ ಸಂಬಂಧಿಸಿ ಸಚಿವರ ವಿರುದ್ಧ ವಾಗ್ದಾಳಿ ನಡಸಿದ್ದರು. ಇದಕ್ಕೆ ತಿರಗೇಟು ನೀಡಿದ ಸಚಿವ ನಾರಾಯಣಗೌಡ ಅವರು, ಒಬ್ಬ ಶಾಸಕನಾಗಿ ಏನೇನು ಕೆಲಸ ಮಾಡಬೇಕು ಎಂದು ಟ್ರೈನಿಂಗ್ ತೆಗೆದುಕೊಳ್ಳಲಿ. ನಾನು 3 ಬಾರಿ ಗೆದ್ದಿದ್ದೀನಿ ಎಂದರೆ 15 ವರ್ಷದ ಅನುಭವ ಇದೆ. ಅನುಭವನೂ ಕೌಂಟ್ ಆಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಕೋವಿಡ್ ಹಣ ಲೂಟಿ ಮಾಡಿದರೇ ಅದಕ್ಕೆ ಸಾಕ್ಷಿ ಕೊಡಿ. ನನ್ನ ಬಗ್ಗೆ ಟೀಕೆ ಮಾಡಿದರೆ ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡಬೇಕಾಗುತ್ತದೆ. ನನ್ನ ಮೇಲೆ ಕೊಚ್ಚೆ ಹಾರಿಸಿದರೆ ನಿಮ್ಮ ಮೇಲಿನ ಆರೋಪದ ಬಗ್ಗೆ ಮಾತಾಡುತ್ತೇನೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಖಡಕ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಓಮಿಕ್ರಾನ್‌ ಹರಡುತ್ತೆ, ಬೂಸ್ಟರ್‌ನಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ: ICMR ವೈದ್ಯ

    ನಿನ್ನೆ ಸುದ್ದಿಗಾರರೊಂದಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ನಾರಾಯಣಗೌರ ಮನೆಯಲ್ಲಿ 50 ಮಂದಿ ಒಂದೇ ಬಾತ್ ರೂಂ ಬಳಸುತ್ತಾರಾ?. ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ವೈಫಲ್ಯ ಎದ್ದು ಕಾಣುತ್ತಿದೆ. ಸಚಿವ ನಾರಾಯಣ ಗೌಡರು 3 ಬಾರಿ ಶಾಸಕರಾಗಿದ್ದಾರೆ. ಆದರೆ ಅರ್ಹತೆ ಮೇಲೆ ಗೆಲ್ಲುವುದು ಬೇರೆ, ಅದೃಷ್ಟದ ಮೇಲೆ ರಾಜಕಾರಣ ಮಾಡೋದೇ ಬೇರೆಯಾಗಿದೆ. ಅವರು ಮೇಲ್ಮನೆಯಲ್ಲಿ ಸಚಿವರ ಯೋಗ್ಯತೆ ಹರಾಜು ಹಾಕಿದ್ದಾರೆ. ನಾರಾಯಣಗೌಡ ಮಂಡ್ಯ ಜಿಲ್ಲೆಯ ಮರ್ಯಾದೆ ತೆಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

  • ಕೋವಿಡ್ ಕೇರ್ ಸೆಂಟರ್‌ನಿಂದ ಹೋಗಲು ಹಿಂದೇಟು- ರೇಣುಕಾಚಾರ್ಯರನ್ನು ಬಿಗಿದಪ್ಪಿ ಕಣ್ಣೀರಿಟ್ಟ ಬಾಲಕಿ

    ಕೋವಿಡ್ ಕೇರ್ ಸೆಂಟರ್‌ನಿಂದ ಹೋಗಲು ಹಿಂದೇಟು- ರೇಣುಕಾಚಾರ್ಯರನ್ನು ಬಿಗಿದಪ್ಪಿ ಕಣ್ಣೀರಿಟ್ಟ ಬಾಲಕಿ

    ದಾವಣಗೆರೆ: ಹಲವರು ಕೋವಿಡ್ ಕೇರ್ ಸೆಂಟರ್ ಗೆ ತೆರಳಲು ಹಿಂದೇಟು ಹಾಕುತ್ತಾರೆ, ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿಯುತ್ತಾರೆ. ಆದರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಿಂದ ತೆರಳಲು ಬಾಲಕಿ ಹಿಂದೇಟು ಹಾಕುತ್ತಿದ್ದು, ಶಾಸಕ ರೇಣುಕಾಚಾರ್ಯರನ್ನು ಬಿಗಿದಪ್ಪಿ ಕಣ್ಣೀರಿಟ್ಟಿದ್ದಾರೆ.

    ಕೋವಿಡ್ ಶುರುವಾದಗಿನಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುತ್ತಿರುವ ರೇಣುಕಾಚಾರ್ಯ ಅವರು, ಕೋವಿಡ್ ಕೇರ್ ಸೆಂಟರ್‍ನ್ನು ಮನೆಯಂತೆ ಭಾವಿಸಿ, ಸೋಂಕಿತರ ಜೊತೆ ಕಾಲ ಕಳೆಯುತ್ತಿದ್ದಾರೆ. ಮಾತ್ರವಲ್ಲ ಗುಣಮಟ್ಟದ ಊಟ, ಮನರಂಜನೆ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿ. ಜನರ ಆರೈಕೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಕೊರೊನಾದಿಂದ ಗುಣಮುಖವಾದ ಬಾಲಕಿಯೊಬ್ಬಳು ರೇಣುಕಾಚಾರ್ಯ ರನ್ನು ಬಿಗಿದಪ್ಪಿ ಕಣ್ಣೀರಿಟ್ಟು, ಕೋವಿಡ್ ಕೇರ್ ಸೆಂಟರ್ ನಿಂದ ಹೊರ ಹೋಗಿದ್ದಾಳೆ.

    ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊರೊನಾದಿಂದ ಮುಖರಾದವರಿಗೆ ಹೂ ಮಳೆ ಸುರಿಸಿ ಬೀಳ್ಕೊಡಲಾಗುತ್ತಿದೆ. ಅದೇ ರೀತಿ ಶಾಸಕ ರೇಣುಕಾಚಾರ್ಯ ಕಾರ್ಯಕ್ರಮ ಏರ್ಪಡಿಸಿದ್ದರು. ಇಂದು ಕೊರೊನಾದಿಂದ ಗುಣಮುಖರಾಗಿ ಕೇರ್ ಸೆಂಟರ್ ನಿಂದ ಹೊರ ಹೋಗುತ್ತಿದ್ದ 32 ಜನರನ್ನು ಬೀಳ್ಕೊಡುವ ಸಂದರ್ಭದಲ್ಲಿ ಕೋವಿಡ್ ನಿಂದ ಗುಣಮುಖವಾದ ಬಾಲಕಿ ಶಾಸಕರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾಳೆ. ಅಲ್ಲದೆ ಬಾಲಕಿ ಕೇರ್ ಸೆಂಟರ್ ಬಿಟ್ಟು ಹೋಗಲು ಹಿಂದೇಟು ಹಾಕಿದ್ದಾಳೆ. ಬಳಿಕ ರೇಣುಕಾಚಾರ್ಯ ಅವರು ಬಾಲಕಿಗೆ ಸಮಾಧಾನ ಮಾಡಿ ಕಳುಹಿಸಿದ್ದಾರೆ. ಹಲವರು ಶಾಸಕರ ಕಾಲಿಗೆ ಬಿದ್ದು, ಅಭಿಮಾನ ಮೆರೆದಿದ್ದಾರೆ.

  • ಉಳುಮೆ ಮಾಡಿ, ಬೀಜ ಬಿತ್ತಿದ ರೇಣುಕಾಚಾರ್ಯ

    ಉಳುಮೆ ಮಾಡಿ, ಬೀಜ ಬಿತ್ತಿದ ರೇಣುಕಾಚಾರ್ಯ

    ದಾವಣಗೆರೆ: ಶಾಸಕ ರೇಣುಕಾಚಾರ್ಯ ಕೊರೊನಾ ಸಂಕಷ್ಟದ ಸಮಯದಲ್ಲಿ ಮಿಂಚಿನ ವೇಗದಲ್ಲಿ ಕೆಲಸ ಮಾಡುವ ಮೂಲಕ ಕ್ಷೇತ್ರದ ಜನತೆಯ ಮನ ಗೆದ್ದಿದ್ದಾರೆ. ಅದೇ ರೀತಿ ಇದೀಗ ಉಳುಮೆ ಮಾಡಿ, ಬೀಜ ಬಿತ್ತುವ ಮೂಲಕ ತಮ್ಮ ಅಭಿಮಾನಿಯನ್ನು ಸಂತಸಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿದ್ದ ರಂಗನಾಥ್ ಅವರು ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಹೊನ್ನಾಳಿಗೆ ಆಗಮಿಸಿ, ಬೇಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಬಿತ್ತನೆ ಕಾರ್ಯ ಮಾಡುತ್ತಿದ್ದರು, ಇವರು ಉಳುಮೆ ಮಾಡುತ್ತಿದ್ದ ಹೊಲದ ಬಳಿಯ ರಸ್ತೆಯಲ್ಲಿ ಸಾಗುತ್ತಿದ್ದ ಶಾಸಕ ಎಂ.ಪಿ.ರೇಣುಕಚಾರ್ಯ, ಜಮೀನಿಗೆ ಭೇಟಿ ನೀಡಿ ಅವರ ಅಪೇಕ್ಷೆಯಂತೆ ಜೊತೆಗೂಡಿ ಬೇಸಾಯ ಮಾಡಿ, ಬೀಜ ಬಿತ್ತುವ ಮೂಲಕ ಉತ್ಸಾಹ ತುಂಬಿದರು.

    ಶಾಸಕ ರೇಣುಕಾಚಾರ್ಯ ಮತ್ತೊಂದು ಮನಮುಟ್ಟುವ ಕೆಲಸ ಮಾಡಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತ ಮಕ್ಕಳ ಹುಟ್ಟುಹಬ್ಬ ಆಚರಿಸಿ ಮತ್ತೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಈಗಾಗಲೇ ಹಲವು ದಿನಗಳಿಂದ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ಸೋಂಕಿತರ ಸೇವೆ ಮಾಡುತ್ತಿರುವ ರೇಣುಕಾಚಾರ್ಯ, ಕೇರ್ ಸೆಂಟರ್ ನಲ್ಲಿದ್ದ ಇಬ್ಬರು ಬಾಲಕಿಯರ ಹುಟ್ಟುಹಬ್ಬ ಆಚರಿಸಿದ್ದಾರೆ. ತಂದೆ, ತಾಯಿ ಊರಲ್ಲಿದ್ದರಿಂದ ಮಕ್ಕಳ ಹುಟ್ಟುಹಬ್ಬ ಆಚರಿಸಿದ್ದಾರೆ. ಈ ಮೂಲಕ ಮಕ್ಕಳಿಗೆ ಯಾರೂ ಇಲ್ಲ ಎಂಬ ಕೊರಗನ್ನು ನೀಗಿಸಿದ್ದಾರೆ. ಬಾಲಕಿಯರಿಗೆ ಕೇಕ್ ತಿನ್ನಿಸಿ, ಹುಟ್ಟುಹಬ್ಬದ ಶುಭಕೋರಿದ್ದಾರೆ.

  • ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ದಾವಣಗೆರೆ: ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ಸೋಂಕಿತರ ಜೊತೆ ಕಾಲ ಕಳೆದಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಗ್ಯ ಸಚಿವರಾಗಬೇಕೆಂದು ಕೊರೊನಾ ಸೋಂಕಿತನೊಬ್ಬ ಪಟ್ಟು ಹಿಡಿದ ಘಟನೆ ದಾವಣಗೆರೆಯ ಹೊನ್ನಾಳಿ ಪಟ್ಟಣದ ಅರಬಗಟ್ಟೆ ಕೊವೀಡ್ ಕೇರ್ ಸೆಂಟರ್ ನಲ್ಲಿ ನಡೆದಿದೆ.

    ಹೊನ್ನಾಳಿ ತಾಲೂಕಿನಲ್ಲಿ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯರವರೇ ಆರೋಗ್ಯ ಸಚಿವರಾಗಬೇಕೆಂದು ಸೋಂಕಿತನೋರ್ವ ಪಟ್ಟು ಹಿಡಿದಿದ್ದಾನೆ. ಕೊರೊನಾ ಬಂದ ಸಂದರ್ಭದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ, ನಿಮ್ಮನ್ನು ಆರೋಗ್ಯ ಸಚಿವರನ್ನಾಗಿ ಮಾಡಿದರೆ ಇಡೀ ರಾಜ್ಯಕ್ಕೆ ಒಳ್ಳೆಯ ಸೇವೆ ಸಿಗುತ್ತದೆ ಎಂದು ಸೋಂಕಿತ ಅಭಿಪ್ರಯಾಪಟ್ಟಿದ್ದಾರೆ. ಇದನ್ನೂ ಓದಿ: ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ: ರೇಣುಕಾಚಾರ್ಯ

    ಕೋವಿಡ್ ಕೇರ್ ಸೆಂಟರ್‍ ನಲ್ಲಿ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾದವರನ್ನು ಬೀಳ್ಕೋಡುಗೆ ನೀಡಿದ ರೇಣುಕಾಚಾರ್ಯರವರಿಗೆ ಮನೆಗೆ ತೆರಳುವ ಮುನ್ನ ಮಹಿಳೆಯರು ಒಂದು ದಿನ ನೀವು ಕೋವಿಡ್ ಕೇರ್ ಸೆಂಟರ್ ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಆಗುತ್ತದೆ ಎಂದು ರೇಣುಕಾಚಾರ್ಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಗುಣಮುಖರಾದವರನ್ನು ತಮ್ಮ ಅಂಬ್ಯುಲೆನ್ಸ್ ನಲ್ಲೇ ಕಳುಹಿಸಿಕೊಟ್ಟ ರೇಣುಕಾಚಾರ್ಯರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೋವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಗುಣಮುಖರಾದವರು ಕಣ್ಣೀರು ಹಾಕುತ್ತಾ ಮನೆಯತ್ತ ತೆರಳಿದ ಪ್ರಸಂಗವೂ ನಡೆದಿದೆ.

  • ಕೊರೊನಾ ಇಳಿಮುಖ- ಧಾರವಾಡದಲ್ಲಿ 64 ಕೋವಿಡ್ ಕೇಂದ್ರ ಸ್ಥಗಿತ

    ಕೊರೊನಾ ಇಳಿಮುಖ- ಧಾರವಾಡದಲ್ಲಿ 64 ಕೋವಿಡ್ ಕೇಂದ್ರ ಸ್ಥಗಿತ

    ಹುಬ್ಬಳ್ಳಿ: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಮುಖವಾಗುತ್ತಿರುವುದರಿಂದ ಜಿಲ್ಲೆಯಲ್ಲಿನ 84 ಕೋವಿಡ್ ಕೇರ್ ಸೆಂಟರ್ ಪೈಕಿ 64 ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ.

    ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸಿತ್ತು. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಎಷ್ಟೋ ಜನರು ಅಸುನೀಗಿದ್ದರು. ಜೊತೆಗೆ ಹೋಮ್ ಐಸೋಲೇಷನ್‍ನಲ್ಲಿ ಇರುವವರಿಂದ ಸೋಂಕು ಹೆಚ್ಚಾಗಿ ಹರಡಿತ್ತು. ಇದನ್ನು ಮನಗಂಡು ಜಿಲ್ಲಾಡಳಿತ ಸೋಂಕಿತರನ್ನು ಹೋಮ್ ಐಸೋಲೇಶನ್ ಮಾಡದೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ತೆರೆಯಲಾಗಿತ್ತು.

    ಗ್ರಾಮೀಣ 10, ಹುಬ್ಬಳ್ಳಿ ಗ್ರಾಮೀಣ 14, ಕಲಘಟಗಿ 12, ಅಣ್ಣಿಗೇರಿ 8, ಕುಂದಗೋಳ 16, ನವಲಗುಂದ 8, ಅಳ್ನಾವರ 5 ಹೀಗೆ ಒಟ್ಟು 84 ಕೇಂದ್ರಗಳನ್ನು ತೆರೆಯಲಾಗಿತ್ತು. ಹೋಮ್ ಐಸೋಲೇಷನ್‍ನಲ್ಲಿದ್ದ ಕೆಲವರನ್ನು ಈ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಜೊತೆಗೆ ಮನೆಗಳಲ್ಲಿ ಪ್ರತ್ಯೇಕವಾಗಿ ವಾಸವಾಗಿರಲು ಅವಕಾಶ ಇಲ್ಲದ ಸೌಮ್ಯ ಲಕ್ಷಣಗಳಿರುವ ಸೋಂಕಿತರನ್ನು ಸಹ ದಾಖಲಿಸಲಾಗಿತ್ತು. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 2,011 ಸೋಂಕಿತರು ಕೋವಿಡ್ ಕೇರ್ ಸೆಂಟರ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    2,011 ಸೋಂಕಿತರ ಪೈಕಿ ಈ ವರೆಗೆ 1,940 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಉಳಿದವರು ಬರೀ 71 ಜನ ಮಾತ್ರ. ಅದರಲ್ಲೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಕೋವಿಡ್ ಕೇರ್ ಸೆಂಟರ್ ನಲ್ಲಿ ಅತಿ ಹೆಚ್ಚು ಎಂದರೆ 39 ಸೋಂಕಿತರಿದ್ದರೆ, 14 ಜನ ಧಾರವಾಡ ಗ್ರಾಮೀಣ ಭಾಗದಲ್ಲಿದ್ದಾರೆ. ಅಣ್ಣಿಗೇರಿ 8, ಕುಂದಗೋಳ 7, ನವಲಗುಂದದಲ್ಲಿ 3 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ 20 ಕೋವಿಡ್ ಕೇರ್ ಸೆಂಟರ್ ಬಿಟ್ಟು ಉಳಿದ 64ನ್ನು ಮುಚ್ಚಲಾಗಿದೆ. ಒಂದು ವೇಳೆ ಕೋವಿಡ್ ಕೇರ್ ಸೆಂಟರ್ ಮತ್ತೆ ಬೇಕೆನಿಸಿದರೆ ಪ್ರಾರಂಭಿಸಲಾಗುವುದು. ಆದರೆ ಸದ್ಯ ಇವುಗಳನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

  • ನಿಮ್ಮ ಮನೆಯಲ್ಲಿ ಅಕ್ಕ,ತಂಗಿಯರು ಇಲ್ವಾ?- ಶಾಂತನಗೌಡರ ವಿರುದ್ಧ ಮಹಿಳೆಯರು ಕಿಡಿ

    ನಿಮ್ಮ ಮನೆಯಲ್ಲಿ ಅಕ್ಕ,ತಂಗಿಯರು ಇಲ್ವಾ?- ಶಾಂತನಗೌಡರ ವಿರುದ್ಧ ಮಹಿಳೆಯರು ಕಿಡಿ

    ದಾವಣಗೆರೆ: ನಿಮ್ಮ ಮನೆಯಲ್ಲಿ ಅಕ್ಕ, ತಂಗಿಯರು ಇಲ್ವಾ ಎಂದು ಮಾಜಿ ಶಾಸಕ ಶಾಂತನಗೌಡರ ವಿರುದ್ಧ ದಾವಣಗೆರೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಮಹಿಳೆಯರು ಕಿಡಿಕಾರಿದ್ದಾರೆ.

    ಕೋವಿಡ್ ಕೇರ್ ಸೆಂಟರ್‍ನಲ್ಲಿರುವ ಶಾಸಕ ರೇಣುಕಾಚಾರ್ಯ ಅವರ ವಾಸ್ತವ್ಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ, ಮಾಜಿ ಶಾಸಕ ಶಾಂತನಗೌಡರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಹೊನ್ನಾಳಿಯ ಕಾಂಗ್ರೆಸ್ ಮಾಜಿ ಶಾಸಕ ಶಾಂತನಗೌಡ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ಹಣ್ಣುಗಳನ್ನು ನೀಡಲು ಕಾರ್ಯಕರ್ತರ ಜೊತೆ ಬರುತ್ತಿದ್ದಂತೆ ಮಹಿಳೆಯರು ಕ್ಷಮೆ ಯಾಚಿಸುವಂತೆ ಪಟ್ಟುಹಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಿಂದ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದು, ಆ ಸಂದರ್ಭದಲ್ಲಿ ಮಾಜಿ ಶಾಸಕ ಶಾಂತನಗೌಡ ಶಾಸಕ ರೇಣುಕಾಚಾರ್ಯ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ.

    “ರೇಣುಕಾಚಾರ್ಯ ಎಲ್ಲಿ ಮಲಗಿರ್ತಾನೆ ಯಾರ್ ಜೊತೆ ಮಲಗಿರ್ತಾನೆ ಎನ್ನುವುದು ಎಲ್ಲರಿಗೂ ಗೊತ್ತಿರುತ್ತದೆ. ತೆರೆದ ಬಾಗಿಲು ಎಂದು” ಎಂದು ವ್ಯಂಗ್ಯವಾಡಿದ್ದರು. ಅದಕ್ಕೆ ಇಂದು ಕೋವಿಡ್ ಕೇರ್ ಸೆಂಟರ್ ಗೆ ಬರುತ್ತಿದ್ದಂತೆ ಮಹಿಳೆಯರು ಶಾಂತನಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಗೆ ಅಕ್ಕ ತಂಗಿಯರು ಇಲ್ವಾ ಈ ರೀತಿಯಾಗಿ ಹೇಳಿಕೆ ಕೊಟ್ಟಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇದಕ್ಕೆ ಮಾಜಿ ಶಾಸಕ ಶಾಂತನಗೌಡ ನಾನು ಇಲ್ಲಿ ರಾಜಕೀಯ ಮಾಡಲು ಬಂದಿಲ್ಲ, ನಾನು ಹೇಳಿದ್ದು ಬೇರೆ, ಆದರೆ ಅದನ್ನು ನಿಮಗೆ ಅರ್ಥ ಮಾಡಿಸಿರುವುದೇ ಬೇರೆ ಏನಾದರೂ ಬೇಸರವಾಗಿದ್ದರೆ ಕ್ಷಮೆ ಇರಲಿ ಎಂದು ಮಹಿಳೆಯರ ಮುಂದೆ ಕ್ಷಮೆ ಕೇಳಿದರು. ಅಲ್ಲದೇ ಸೋಂಕಿತರಿಗೆ ಹಣ್ಣು ನೀಡಲು ಮುಂದಾದ ಮಾಜಿ ಶಾಸಕರಿಂದ ಸೋಂಕಿತರು ಹಣ್ಣು ಸ್ವೀಕರಿಸಲು ನಿರಾಕರಿಸಿದ್ದಾರೆ. ಜೊತೆಗೆ ಬಲವಂತವಾಗಿ ಮಾಜಿ ಶಾಸಕ ಶಾಂತನ ಗೌಡರವರು ಸೋಂಕಿತರಿಗೆ ಹಣ್ಣು ನೀಡಲು ಹೋದಾಗ ಹಣ್ಣುಗಳನ್ನು ಸ್ವೀಕರಿಸಲು ಮಹಿಳೆಯರು ಹಿಂದೇಟು ಹಾಕಿದರು. ಇದನ್ನೂ ಓದಿ:ಪಕ್ಷದಲ್ಲಿ ಯಾವುದೇ ಗೊಂದಲಗಳು ಬೇಡ: ಸಿ.ಟಿ ರವಿ

  • ವಿಷ ಕುಡಿತೀನಿ, ಕೋವಿಡ್ ಕೇರ್ ಸೆಂಟರ್‌ಗೆ ಮಾತ್ರ ಬರಲ್ಲ- ಸೋಂಕಿತನ ರಾದ್ಧಾಂತ

    ವಿಷ ಕುಡಿತೀನಿ, ಕೋವಿಡ್ ಕೇರ್ ಸೆಂಟರ್‌ಗೆ ಮಾತ್ರ ಬರಲ್ಲ- ಸೋಂಕಿತನ ರಾದ್ಧಾಂತ

    ದಾವಣಗೆರೆ: ಕೊರೊನಾ ಸೋಂಕಿತನೊಬ್ಬ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದಿದ್ದು, ಅರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಮುಂದೆ ವಿಷದ ಬಾಟಲ್ ಹಿಡಿದು ರಾದ್ಧಾಂತ ಮಾಡಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬಾನುವಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಇರುವವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಅದೇಶ ಮಾಡಿದ್ದಾರೆ. ಡಿಸಿ ಆದೇಶದಂತೆ ಬಾನುವಳ್ಳಿ ಪಿಡಿಒ ನಾಗರಾಜ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕಿತನನ್ನು ಕೋವಿಡ್ ಕೇರ್ ಸೆಂಟರ್ ಗೆ ಕರೆದೊಯ್ಯುಲು ಬಂದಿದ್ದಾರೆ. ಆದರೆ ವ್ಯಕ್ತಿ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದ್ದಾನೆ. ವಿಷ ಕೊಡಿ ಕುಡಿತೀನಿ, ನಾನು ಮಾತ್ರ ಕೋವಿಡ್ ಕೇರ್ ಸೆಂಟರ್ ಗೆ ಬರಲ್ಲ ಎಂದು ಮನೆಗೆ ಹೋಗಿ ವಿಷದ ಬಾಟಲ್ ತಂದು ಅಧಿಕಾರಿಗಳಿಗೆ ಅವಾಜ್ ಹಾಕಿದ್ದಾನೆ. ನೀವೇನಾದ್ರು ಕೋವಿಡ್ ಕೇರ್ ಸೆಂಟರ್ ಗೆ ಕರೆದೊಯ್ದರೆ ನಾನೇ ವಿಷ ಕುಡಿದು ಸತ್ತು ಹೋಗುತ್ತೇನೆ ಎಂದು ಅಧಿಕಾರಿಗಳಿಗೆ ಹೆದರಿಸಿದ್ದಾನೆ.

    ಸೋಂಕಿತನನ್ನು ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಲು ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಡುವಂತಾಯಿತು. ಕೊನೆಗೂ ಸೋಂಕಿತ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದು ಮನೆಯಲ್ಲೇ ಕೂತಿದ್ದಾನೆ. ಸೋಂಕಿತನ ಕುಟುಂಬದ ಐದು ಜನರಿಗೂ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಯಾರೂ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಅಧಿಕಾರಿಗಳ ಹಾಗೂ ಸಿಬ್ಬಂದಿ ಮನವಿಗೆ ಸ್ಪಂದಿಸದೆ, ಹಠ ಹಿಡಿದು ಕುಳಿತಿದ್ದಾರೆ. ಗ್ರಾಮದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯವರು ಹಲವು ಬಾರಿ ವಿಧವಿಧವಾದ ಕೇಳಿಕೊಂಡರೂ ಸೋಂಕಿತರು ಮಾತ್ರ ಕೊವೀಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದು ಕುಳಿತಿದ್ದಾರೆ.

  • ಕೋವಿಡ್ ಕೇರ್ ಸೆಂಟರ್‌ನಲ್ಲಿ ಕುಟುಂಬ- ಶಾರ್ಟ್ ಸಕ್ಯೂಟ್‍ನಿಂದ ಮನೆ ಬೆಂಕಿಗಾಹುತಿ

    ಕೋವಿಡ್ ಕೇರ್ ಸೆಂಟರ್‌ನಲ್ಲಿ ಕುಟುಂಬ- ಶಾರ್ಟ್ ಸಕ್ಯೂಟ್‍ನಿಂದ ಮನೆ ಬೆಂಕಿಗಾಹುತಿ

    ಮಂಡ್ಯ: ಕೊರೊನಾ ಸೋಂಕು ತಗುಲಿ ಇಡೀ ಕುಟುಂಬ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದರೆ, ಇತ್ತ ಶಾರ್ಟ್ ಸಕ್ರ್ಯೂಟ್‍ನಿಂದ ಕೊರೊನಾ ಸೋಂಕಿತ ಕುಟುಂಬದವರ ಮನೆಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಇಡೀ ಮನೆ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಜರುಗಿದೆ.

    ಲಕ್ಷ್ಮೀಸಾಗರ ಗ್ರಾಮದ ಪ್ರಕಾಶ್ ಅವರ ಮನೆ ಇಂದು ಶಾರ್ಟ್ ಸಕ್ರ್ಯೂಟ್‍ಗೆ ಭಸ್ಮವಾಗಿದೆ. ಪ್ರಕಾಶ್ ಮತ್ತು ಕುಟುಂಬದರಿಗೆ ಕೊರೊನಾ ಸೋಂಕು ತಗುಲಿದ ಕಾರಣ ಇಡೀ ಕುಟುಂಬ ಕೋವಿಡ್ ಕೇರ್ ಸೆಂಟರ್‍ನಲ್ಲಿ ಇತ್ತು. ಹೀಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಕೊರೊನಾ ಪಾಸಿಟಿವ್ ರೇಟ್ ಕುಗ್ಗಿಸಲು ಜಿಲ್ಲಾಡಳಿತ ಪ್ಲ್ಯಾನ್- ಹಳ್ಳಿ, ಹಳ್ಳಿಗೆ ಲಸಿಕೆ ಅಭಿಯಾನ

    ಇಂದು ಸಂಜೆಯ ವೇಳೆ ಶಾರ್ಟ್ ಸಕ್ರ್ಯೂಟ್ ಆಗಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಗೊತ್ತಾಗಿಲ್ಲ, ನಂತರ ಶಾರ್ಟ್ ಸಕ್ರ್ಯೂಟ್‍ನ ಕಿಡಿ ಬೆಂಕಿಯಾಗಿ ಇಡೀ ಮನೆಯನ್ನು ವ್ಯಾಪಿಸಿದೆ. ಮನೆಗೆ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಬಿದ್ದ ಕಾರಣ ಪಕ್ಕದ ಮನೆಗೂ ಬೆಂಕಿ ವ್ಯಾಪಿಸಿತು. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.